Subscribe to Updates
Get the latest creative news from FooBar about art, design and business.
Author: roovari
ಮಂಗಳೂರು : ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯು ಎಂ.ಸಿ.ಸಿ. ಬ್ಯಾಂಕ್ ಲಿ. ಇದರ ಪ್ರಾಯೋಜಕತ್ವದಲ್ಲಿ ʼಕೊಂಕಣಿ ಸಾಹಿತ್ಯ ಸ್ಪರ್ಧೆʼ ಹೆಸರಿನಲ್ಲಿ ಕೊಂಕಣಿ ಕಾದಂಬರಿ ಹಾಗೂ ಕಿರು ನಾಟಕ ಬರೆಯುವ ಸ್ಪರ್ಧೆಯನ್ನು ಹಮ್ಮಿಕೊಂಡಿತ್ತು. ದೇಶದ ವಿವಿಧ ಕಡೆ ವಾಸವಿರುವ, ಕರ್ನಾಟಕ ಮೂಲದ ಕೊಂಕಣಿ ಜನರಿಗಾಗಿ ಈ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಕೊಂಕಣಿ ಕಾದಂಬರಿ ಸ್ಪರ್ಧೆಯಲ್ಲಿ 5 ಕಾದಂಬರಿಗಳು ಹಾಗೂ ಕೊಂಕಣಿ ಕಿರು ನಾಟಕ ಬರೆಯುವ ಸ್ಪರ್ಧೆಯಲ್ಲಿ 3 ಕಿರು ನಾಟಕಗಳು ಸ್ಪರ್ಧೆಗೆ ಬಂದಿದ್ದವು. ಕಿರು ನಾಟಕ ಸ್ಪರ್ಧೆಯಲ್ಲಿ ಒಂದು ನಾಟಕವು ಈಗಾಗಲೇ ಪ್ರದರ್ಶನಗೊಂಡಿದ್ದರಿಂದ ಆ ನಾಟಕವನ್ನು ತಡೆಹಿಡಿಯಲಾಗಿದೆ. ಸ್ಪರ್ಧಾ ವಿಜೇತರಿಗೆ ದಿನಾಂಕ 19 ಅಕ್ಟೋಬರ್ 2025ರಂದು ಬೆಳಿಗ್ಗೆ ಗಂಟೆ 10-30ಕ್ಕೆ ಹಂಪನ್ಕಟ್ಟೆಯ ಎಂ.ಸಿ.ಸಿ. ಬ್ಯಾಂಕ್ನ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಗುವುದು. ಕೊಂಕಣಿ ಕಾದಂಬರಿ ಸ್ಪರ್ಧಾ ವಿಜೇತರಿಗೆ ಪ್ರಥಮ ಬಹುಮಾನ ರೂ.25,000/-, ಸ್ಮರಣಿಕೆ ಹಾಗೂ ಪ್ರಮಾಣಪತ್ರ, ದ್ವಿತೀಯ ಬಹುಮಾನ ರೂ.15,000/- ಸ್ಮರಣಿಕೆ ಹಾಗೂ ಪ್ರಮಾಣಪತ್ರ, ತೃತೀಯ ಬಹುಮಾನ ರೂ.10,000/- ಸ್ಮರಣಿಕೆ ಹಾಗೂ ಪ್ರಮಾಣಪತ್ರವನ್ನು…
ಪುತ್ತೂರು : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಹಾಗೂ ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘ ಬೊಳುವಾರು ಪುತ್ತೂರು ಇದರ ವತಿಯಿಂದ ಶ್ರೀ ಶಕ್ತಿ ಆಂಜನೇಯ ಮಂತ್ರಾಲಯದ ನವರಾತ್ರಿ ಕಾರ್ಯಕ್ರಮದ ಅಂಗವಾಗಿ ದಿನಾಂಕ 29 ಸೆಪ್ಟೆಂಬರ್ 2025ರಂದು ಬೊಳುವಾರು ಶ್ರೀ ಸುಬ್ರಹ್ಮಣ್ಯ ನಗರದ ಮೈದಾನದಲ್ಲಿ ತಾಳಮದ್ದಳೆ ‘ಶ್ರೀ ಕೃಷ್ಣ ರಾಯಭಾರ’ ಎಂಬ ಆಖ್ಯಾನದೊಂದಿಗೆ ಜರಗಿತು. ಹಿಮ್ಮೇಳದಲ್ಲಿ ಭಾಗವತರಾಗಿ ಎಲ್.ಎನ್. ಭಟ್ ಬಟ್ಯಮೂಲೆ, ಕುಸುಮಾಕರ ಆಚಾರ್ಯ ಹಳೇನೇರಂಕಿ, ಆನಂದ ಸವಣೂರು, ರಾಮಕೃಷ್ಣ ಭಟ್ ಗುಂಡ್ಯಡ್ಕ ಹಾಗೂ ಚೆಂಡೆ, ಮದ್ದಲೆಗಳಲ್ಲಿ ಶಂಕರನಾರಾಯಣ ಭಟ್ ಬಟ್ಯಮೂಲೆ, ಅಚ್ಯುತ ಪಾಂಗಣ್ಣಾಯ, ಮಾಸ್ಟರ್ ಪರೀಕ್ಷಿತ್, ಕುಮಾರಿ ಶರಣ್ಯ ನೆತ್ತರಕೆರೆ, ಮಾಸ್ಟರ್ ಅನೀಶ್ ಕೃಷ್ಣ ಪುಣಚ, ಮಾಸ್ಟರ್ ಆದಿತ್ಯ ಕೃಷ್ಣ ಸಹಕರಿಸಿದರು. ಮುಮ್ಮೇಳದಲ್ಲಿ ಭಾಸ್ಕರ ಬಾರ್ಯ, ಭಾಸ್ಕರ ಶೆಟ್ಟಿ ಸಾಲ್ಮರ ಮತ್ತು ಸುಬ್ಬಪ್ಪ ಕೈಕಂಬ (ಶ್ರೀ ಕೃಷ್ಣ), ದುಗ್ಗಪ್ಪ ನಡುಗಲ್ಲು ಮತ್ತು ಪ್ರೇಮಲತಾ ರಾವ್ (ವಿದುರ), ಮಾಂಬಾಡಿ ವೇಣುಗೋಪಾಲ ಭಟ್ (ಧರ್ಮರಾಯ), ಗುಡ್ಡಪ್ಪ ಬಲ್ಯ (ಕೌರವ), ಕಿಶೋರಿ ದುಗ್ಗಪ್ಪ…
ಬಂಟ್ವಾಳ : ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದ ರಾಜಾಂಗಣದಲ್ಲಿ ದಿನಾಂಕ 27 ಸೆಪ್ಟೆಂಬರ್ 2025ರಂದು ಯಕ್ಷಕಲಾ ಪೊಳಲಿ ಇದರ 30ನೇ ವರ್ಷದ ಪ್ರಯುಕ್ತ ತ್ರಿಂಶತ್ ಸಂಭ್ರಮದ ‘ಪೊಳಲಿ ಯಕ್ಷೋತ್ಸವ’ವು ಪ್ರಶಸ್ತಿ ಪ್ರದಾನ, ಗೌರವಾರ್ಪಣೆ, ಸಮ್ಮಾನ, ಸಂಸ್ಮರಣೆ ಹಾಗೂ ಯಕ್ಷಗಾನ ಪ್ರದರ್ಶನದೊಂದಿಗೆ ನಡೆಯಿತು. ಪೊಳಲಿ ರಾಮಕೃಷ್ಣ ತಪೋವನದ ಸ್ವಾಮಿ ವಿವೇಕಚೈತನ್ಯಾನಂದಜಿ ಇವರು ಆಶೀರ್ವಚನ ನೀಡಿದರು. ಯಕ್ಷಕಲಾ ಪೋಷಕ, ಮಂಗಳೂರು ಕೆ.ಎಂ.ಸಿ. ಆಸ್ಪತ್ರೆಯ ಹೃದ್ರೋಗ ತಜ್ಞ ಡಾ. ಪದ್ಮನಾಭ ಕಾಮತ್ ಇವರಿಗೆ ‘ಪೊಳಲಿ ಯಕ್ಷೋತ್ಸವ ಪ್ರಶಸ್ತಿ’ ಪ್ರದಾನ ಮಾಡಲಾಯಿತು. ಹಿರಿಯ ಕಲಾವಿದರಾದ ಭಾಸ್ಕರ ರೈ ಕುಕ್ಕುವಳ್ಳಿ, ಮಾಂಬಾಡಿ ಸುಬ್ರಹ್ಮಣ್ಯ ಭಟ್, ಅಡೂರು ಲಕ್ಷ್ಮೀನಾರಾಯಣ ರಾವ್, ಕೊಳ್ತಿಗೆ ನಾರಾಯಣ ಗೌಡ, ಉಬರಡ್ಕ ಉಮೇಶ್ ಶೆಟ್ಟಿ, ಜಬ್ಬಾರ್ ಸಮೋ ಸಂಪಾಜೆ, ಡಾ. ವಸಂತಕುಮಾರ ಪೆರ್ಲ, ಶಿವರಾಮ ಪಣಂಬೂರು, ಗಿರೀಶ್ ಹೆಗ್ಡೆ ಪುತ್ತೂರು, ಜಗದಾಭಿರಾಮ ಸ್ವಾಮಿ ಪಡುಬಿದ್ರೆ, ನಾ. ಕಾರಂತ ಪೆರಾಜೆ, ನಗ್ರಿ ಮಹಾಬಲ ರೈ, ಮಹಾಬಲೇಶ್ವರ ಭಟ್ ಭಾಗಮಂಡಲ ಇವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು. ಮಂಗಳೂರಿನ…
ಮಂಗಳೂರು : ವಿಶ್ವ ಕೊಂಕಣಿ ಕೇಂದ್ರವು ‘ವರ್ಧನಿ’ ಮತ್ತು ‘ಸಾಧನಾ ಬಳಗ’ ಸಹಕಾರದೊಂದಿಗೆ ಆಯೋಜಿಸಿದ ‘ನಿನಾದ’ ಮೂರು ದಿವಸಗಳ ಉಚಿತ ಮಕ್ಕಳ ತರಬೇತಿ ಶಿಬಿರದ ಸಮಾರೋಪ ಸಮಾರಂಭವು ದಿನಾಂಕ 27 ಸೆಪ್ಟೆಂಬರ್ 2025ರಂದು ವಿಶ್ವಕೊಂಕಣಿ ಕೇಂದ್ರದಲ್ಲಿ ಜರುಗಿತು. ವಿಶ್ವ ಕೊಂಕಣಿ ಕೇಂದ್ರದ ಉಪಾಧ್ಯಕ್ಷ ಡಿ. ರಮೇಶ ನಾಯಕ್ ನೆರೆದ ಅತಿಥಿ ಗಣ್ಯರನ್ನು ಸ್ವಾಗತಿಸುತ್ತಾ “ಸಂಗೀತ, ನೃತ್ಯ, ಭಾವಗೀತೆ, ಭಕ್ತಿಗೀತೆ ಹಾಗೂ ವಿವಿಧ ಕೌಶಲ್ಯ ಕಲೆಗಳ ಅಭ್ಯಾಸದಿಂದ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಸಹಾಯಕವಾಗುದುದು. ಅಲ್ಲದೇ ಮಕ್ಕಳು ಶಿಬಿರದ ಉತ್ತಮ ಪ್ರಯೋಜನ ಪಡೆದು ಶಿಬಿರದಲ್ಲಿ ಕಲಿತ ವಿದ್ಯೆಯನ್ನು ಜೀವನದಲ್ಲಿ ಅಳವಡಿಸಬೇಕು” ಎಂದು ಕಿವಿಮಾತು ಹೇಳಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಎಸ್.ಡಿ.ಎಂ. ಕಾಲೇಜ್ ಆಫ್ ಬಿಸ್ನೆಸ್ ಮ್ಯಾನೇಜ್ ಮೆಂಟ್ ಪ್ರಾಂಶುಪಾಲರಾದ ಪ್ರೊ. ಅರುಣಾ ಕಾಮತ್ ರವರು ಶಿಬಿರಾರ್ಥಿಗಳನ್ನು ಉದ್ದೇಶಿಸಿ “ಈಗಿನ ತಂತ್ರಜ್ನಾನ ಯುಗದಲ್ಲಿ ಇಂತಹ ಚಟುವಟಿಕೆ ಆಧಾರಿತ ಶಿಬಿರವು ಮಕ್ಕಳಿಗೆ ಅತೀ ಅಗತ್ಯವಾಗಿದೆ. ಇದರಿಂದ ಮಕ್ಕಳ ಮನೋಸಾಮರ್ಥ್ಯ ಹೆಚ್ಚುವುದಲ್ಲದೇ ಮೊಬೈಲ್ ಬಳಕೆಯಿಂದ ದೂರವಿರಬಹುದೆಂದು ತಿಳಿಸುತ್ತಾ ಶಿಬಿರವನ್ನು…
ಬೆಂಗಳೂರು : ಬಿ.ಕೆ.ಎಫ್. ಪ್ರಸ್ತುತ ಪಡಿಸುವ 20ನೇ ‘ಧ್ವನಿ’ ಸಂಗೀತ ಕಾರ್ಯಕ್ರಮವನ್ನು ದಿನಾಂಕ 04 ಮತ್ತು 05 ಅಕ್ಟೋಬರ್ 2025ರಂದು ಬೆಂಗಳೂರು ಕೆ.ಆರ್. ರೋಡಿನಲ್ಲಿರುವ ಬೆಂಗಳೂರು ಗಾಯನ ಸಮಾಜದಲ್ಲಿ ಆಯೋಜಿಸಲಾಗಿದೆ. ಪಂಡಿತ್ ಮಲ್ಲಿಕಾರ್ಜುನ ಮನ್ಸೂರ್ ಹಿಂದೂಸ್ತಾನಿ ಸಂಗೀತ ಉತ್ಸವ -2025 ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ದಿನಾಂಕ 04 ಅಕ್ಟೋಬರ್ 2025ರಂದು ಸಂಜೆ 5-00 ಗಂಟೆಗೆ ವಿದುಷಿ ಆರತಿ ಅಂಕಲಿಕರ ಮತ್ತು ವಿದುಷಿ ಮಂಜೂಷ ಪಾಟೀಲ್ ಇವರ ಜುಗಲ್ ಬಂದಿ ಹಾಡುಗಾರಿಕೆಗೆ ಪಂಡಿತ್ ರವೀಂದ್ರ ಯವಾಗಲ್ ತಬಲಾ ಮತ್ತು ಪಂಡಿತ್ ವ್ಯಾಸಮೂರ್ತಿ ಕಟ್ಟಿ ಇವರು ಹಾರ್ಮೋನಿಯಂ ಸಾಥ್ ನೀಡಲಿದ್ದಾರೆ. ವಿದುಷಿ ಎನ್. ರಾಜಾಂ ಇವರಿಗೆ ‘ಬಿ.ಕೆ.ಎಫ್. ಪಂಡಿತ್ ಮಲ್ಲಿಕಾರ್ಜುನ ಮನ್ಸೂರ್ ಪ್ರಶಸ್ತಿಯನ್ನು ನೀಡಲಾಗುವುದು. 8-00 ಗಂಟೆಗೆ ವಿದುಷಿ ಎನ್. ರಾಜಾಂ, ವಿದುಷಿ ಸಂಗೀತ ಶಂಕರ್, ರಾಗಿಣಿ ಮತ್ತು ನಂದಿನಿ ಶಂಕರ್ ಇವರಿಂದ ‘ವಯೋಲಿನ್ ಟ್ರಿಯೋ’ಗೆ ಪಂಡಿತ್ ಶುಭ ಮಹಾರಾಜ್ ಮತ್ತು ಪಂಡಿತ್ ಅಭಿಷೇಕ್ ಮಿಶ್ರಾ ಇವರು ತಬಲಾದಲ್ಲಿ ಸಹಕರಿಸಲಿದ್ದಾರೆ. ದಿನಾಂಕ…
ಮಂಗಳೂರು : ಇದೇ ನವೆಂಬರ್ ತಿಂಗಳಿನಲ್ಲಿ 40ನೇ ವರ್ಷಕ್ಕೆ ಪಾದಾರ್ಪಣೆಗೈಯುತ್ತಿರುವ, ವಿಶ್ವದ ಪ್ರಮುಖ ಕೊಂಕಣಿ ಸಾಂಸ್ಕೃತಿಕ ಸಂಘಟನೆ ಮಾಂಡ್ ಸೊಭಾಣ್ ಇದರ ನೂತನ ಆಡಳಿತ ಸಮಿತಿ ಅಸ್ತಿತ್ವಕ್ಕೆ ಬಂದಿದೆ. ದಿನಾಂಕ 28 ಸೆಪ್ಟೆಂಬರ್ 2025ರಂದು ನಡೆದ ವಾರ್ಷಿಕ ಮಹಾಸಭೆಯಲ್ಲಿ ಆಯ್ಕೆಗೊಂಡ ಸದಸ್ಯರು ನಂತರ ಸಮಿತಿಯ ಪದಾಧಿಕಾರಿಗಳನ್ನು ಆಯ್ಕೆ ಮಾಡಿದರು. ಸಾಂಸ್ಕೃತಿಕ ಮುಖಂಡ, ಹಲವಾರು ಬೃಹತ್ ಕಾರ್ಯಕ್ರಮಗಳ ರೂವಾರಿ ಹಾಗೂ ಮಂಗಳೂರಿನ ಪ್ರಸಿದ್ಧ ಉದ್ಯಮಿ ಲುವಿಸ್ ಜೆ. ಪಿಂಟೊ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ. ಕಾರ್ಯದರ್ಶಿಯಾಗಿ ಕವಿ ರೊನಾಲ್ಡ್ ಕ್ರಾಸ್ತಾ ಮತ್ತು ಖಜಾಂಚಿಯಾಗಿ ಗಾಯಕ ಸುನಿಲ್ ಮೊಂತೆರೊ ಕಾರ್ಯ ನಿರ್ವಹಿಸಲಿದ್ದಾರೆ. ಇತರೆ ಪದಾಧಿಕಾರಿಗಳ ಹೆಸರುಗಳು ಇಂತಿವೆ: ಸಂಘಟಕ – ಸ್ಟ್ಯಾನಿ ಆಲ್ವಾರಿಸ್, ಉಪಾಧ್ಯಕ್ಷ -ನವೀನ್ ಲೋಬೊ, ಜತೆ ಕಾರ್ಯದರ್ಶಿ – ಕಿಶೋರ್ ಫೆರ್ನಾಂಡಿಸ್, ಸಾರ್ವಜನಿಕ ಸಂಪರ್ಕಾಧಿಕಾರಿ – ವಿಕ್ಟರ್ ಮತಾಯಸ್, ನಾಟಕ -ಅರುಣ್ ರಾಜ್ ರೊಡ್ರಿಗಸ್, ನಾಚ್ ಸೊಭಾಣ್ – ರಾಹುಲ್ ಪಿಂಟೊ, ಸುಮೇಳ್ – ರೈನಾ ಸಿಕ್ವೇರಾ ಹಾಗೂ ಸದಸ್ಯರಾಗಿ ಕೇರನ್ಮಾಡ್ತಾ, ಎಲ್ರೊನ್ ರೊಡ್ರಿಗಸ್,…
ಬೆಂಗಳೂರು : ಅನ್ವೇಷಣೆ ಸಾಂಸ್ಕೃತಿಕ ಅಕಾಡೆಮಿ (ರಿ) ಇದರ ವತಿಯಿಂದ ನೀಡುವ ‘ರಂಗಭೂಮಿ ರತ್ನ ರಾಜ್ಯೋತ್ಸವ ಪ್ರಶಸ್ತಿ’ಗೆ ಬಾಗಲಕೋಟೆಯ ಡಾ. ಮಹಂತೇಶ್ ಬಸಪ್ಪ ಇವರು ಆಯ್ಕೆಯಾಗಿದ್ದಾರೆ. ಇವರು ರಂಗಭೂಮಿ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ಘೋಷಿಸಿದೆ. ದಿನಾಂಕ 30 ನವೆಂಬರ್ 2025ರಂದು ಬೆಂಗಳೂರಿನ ನಯನ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.
ಮಂಗಳೂರು : ಬನ್ನಂಜೆ ಗೋವಿಂದಾಚಾರ್ಯ ಪ್ರತಿಷ್ಠಾನ (ರಿ.) ಬೆಂಗಳೂರು, ಶ್ರೀ ಕುಕ್ಕೆ ಸುಬ್ರಹ್ಮಣ್ಯ ಮಠ ಇದರ ಸಂಯುಕ್ತ ಆಶ್ರಯದಲ್ಲಿ ‘ವಿಶ್ವ ಬನ್ನಂಜೆ 90ರ ನಮನ’ ಸಮಾರಂಭವನ್ನು ದಿನಾಂಕ 04 ಅಕ್ಟೋಬರ್ 2025ರಂದು ಸಂಜೆ 4-30 ಗಂಟೆಗೆ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಮಠದಲ್ಲಿ ಹಮ್ಮಿಕೊಳ್ಳಲಾಗಿದೆ. ಬನ್ನಂಜೆ ಗೋವಿಂದಾಚಾರ್ಯ ಪ್ರತಿಷ್ಠಾನ ಇದರ ಅಧ್ಯಕ್ಷರಾದ ಮಲ್ಲೇಪುರಂ ಜಿ. ವೆಂಕಟೇಶ್ ಇವರಿಂದ ಪ್ರಸ್ತಾವನೆ ಮತ್ತು ಉಪನ್ಯಾಸಕ ಜಗದೀಶ ಶರ್ಮ ಸಂಪ ಮತ್ತು ಪ್ರಾಧ್ಯಾಪಕರಾದ ವಿದ್ವಾನ್ ಕೃಷ್ಣರಾಜ ಕುತ್ಪಾಡಿ ಇವರಿಂದ ಉಪನ್ಯಾಸ ನಡೆಯಲಿದೆ. ಶ್ರೀಮತಿ ಕವಿತಾ ಉಡುಪ ಮತ್ತು ಶ್ರೀಮತಿ ಸುಮಾ ಶಾಸ್ತ್ರಿಯರಿಂದ ಬನ್ನಂಜೆಯವರ ಹಾಡುಗಬ್ಬ ಹಾಗೂ ಸುಚೇಂದ್ರ ಪ್ರಸಾದ್ ಇವರ ನಿರ್ದೇಶನ ಮತ್ತು ಅಭಿನಯದಲ್ಲಿ ‘ನನ್ನ ಪಿತಾಮಹ’ ನಾಟಕ ಪ್ರದರ್ಶನಗೊಳ್ಳಲಿದೆ.
ಮಂಗಳೂರು : ಕೆ.ಎಸ್. ಉಪಾಧ್ಯಾಯ ಮೆಮೋರಿಯಲ್ ಟ್ರಸ್ಟ್ (ರಿ.) ಮತ್ತು ಸಂತ ಆಗ್ನೇಸ್ ಕಾಲೇಜು (ಸ್ವಾಯತ್ತ) ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಕೃತಿಗಳ ಲೋಕಾರ್ಪಣೆ ಸಮಾರಂಭವನ್ನು ದಿನಾಂಕ 03 ಅಕ್ಟೋಬರ್ 2025ರಂದು ಸಂಜೆ 4-00 ಗಂಟೆಗೆ ಮಂಗಳೂರು ಸಂತ ಆಗ್ನೇಸ್ ಕಾಲೇಜು ಕ್ಯಾಂಪಸ್ ‘ಅವಿಲಾ ಹಾಲ್’ನಲ್ಲಿ ಹಮ್ಮಿಕೊಳ್ಳಲಾಗಿದೆ. ಡಾ. ಲೀಲಾ ಉಪಾಧ್ಯಾಯ ಸಂಪಾದಿಸಿರುವ ಶ್ರೀ ಕೆ.ಎಸ್. ಉಪಾಧ್ಯಾಯ ಅವರ ಎರಡು ಕೃತಿಗಳು ಲೋಕಾರ್ಪಣೆಗೊಳ್ಳಲಿವೆ. ಈ ಸಮಾರಂಭದ ಅಧ್ಯಕ್ಷತೆಯನ್ನು ಸಂತ ಆಗ್ನೇಸ್ ಕಾಲೇಜಿನ ಪ್ರಾಂಶು ಪಾಲರಾದ ಸಿ.ಡಾ.ಎಂ. ವೆನಿಸ್ಸಾ ಎ.ಸಿ. ಇವರು ವಹಿಸಲಿದ್ದು, ಶಾರದಾ ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ ಡಾ. ಎಂ.ಬಿ. ಪುರಾಣಿಕ್ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ವಿದ್ವಾಂಸರು ಮತ್ತು ಖ್ಯಾತ ಯಕ್ಷಗಾನ ಅರ್ಥಧಾರಿ ಡಾ. ಎಂ. ಪ್ರಭಾಕರ ಜೋಶಿ ಮತ್ತು ಡಾ. ರಾಮಮೋಹನ್ ರಾವ್ ಇವರು ಕೃತಿ ಲೋಕಾರ್ಪಣೆ ಮಾಡಲಿದ್ದಾರೆ. ಹಿರಿಯ ವಕೀಲರು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸ್ಥಾಪಕಾಧ್ಯಕ್ಷರಾದ ಶ್ರೀ ಎ.ಎಸ್.ಎನ್. ಹೆಬ್ಬಾರ್, ಹಿರಿಯ ಯಕ್ಷಗಾನ ಕಲಾವಿದರು…
ಮಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಮುಖ್ಯ ಪತ್ರಿಕೆ ನೀಡುವ ಪ್ರತಿಷ್ಠಿತ ‘ದೇವನಾಂ ಪ್ರಿಯ ಪ್ರಿಯದರ್ಶಿನಿ ಅಶೋಕ’ ಪ್ರಶಸ್ತಿಗೆ ರಿಪೋರ್ಟರ್ ಕರ್ನಾಟಕದ ಪ್ರಧಾನ ಸಂಪಾದಕ ಮಂಗಳೂರಿನ ಅಶೋಕ್ ಕಲ್ಲಡ್ಕ ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ, ಜನವಾಹಿನಿ, ಕೆನರಾ ಟೈಮ್ಸ್ ಭಾಗದಲ್ಲಿ ಉಪ ಸಂಪಾದಕ, ವರದಿಗಾರನಾಗಿ ಕಾರ್ಯನಿರ್ವಹಿಸಿದ ಅಶೋಕ್ ಕಲ್ಲಡ್ಕ ಅವರು 4 ವರ್ಷಗಳಿಂದ ರಿಪೋರ್ಟರ್ ಕರ್ನಾಟಕ ಮೀಡಿಯಾ ನೆಟ್ ವರ್ಕ್ ಸಂಸ್ಥೆ ಸ್ವಾಮ್ಯ, ‘ರಿಪೋರ್ಟರ್ ಕರ್ನಾಟಕ’ ಎಂಬ ಡಿಜಿಟಲ್ ಮೀಡಿಯಾ ನಡೆಸಿಕೊಂಡು ಬರುತ್ತಿದ್ದಾರೆ. ಪತ್ರಿಕಾ ರಂಗದಲ್ಲಿ ಅಶೋಕ್ ಕಲ್ಲಡ್ಕ ಅವರ ಸಾಧನೆಯನ್ನು ಗುರುತಿಸಿ ಅವರಿಗೆ ಈ ವರ್ಷದ ದೇವನಾಂ ಪ್ರಿಯ ಪ್ರಿಯದರ್ಶಿನಿ ಅಶೋಕ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಅಶೋಕ್ ಕಲ್ಲಡ್ಕ ಅವರಿಗೆ ಕರ್ನಾಟಕ ಮಾಧ್ಯಮ ರತ್ನ ಪ್ರಶಸ್ತಿಯು ಲಭಿಸಿದೆ. ರಾಯಚೂರಿನ ಮಸ್ಕಿಯ ಮುರುಘ ರಾಜೇಂದ್ರ ಕಲ್ಯಾಣ ಮಂಟಪದಲ್ಲಿ ಸೆ. 28ರಂದು ವಿಶ್ವ ಪತ್ರಿಕಾ ದಿನಾಚರಣೆ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪತ್ರಕರ್ತರ ಧ್ವನಿಯ ರಾಜ್ಯಾಧ್ಯಕ್ಷ ಬಂಗ ಮಲ್ಲಿಕಾರ್ಜುನ, ಮಸ್ಕಿ ತಾಲೂಕು ಅಧ್ಯಕ್ಷ ವಿರೂಪಾಕ್ಷ…