Subscribe to Updates
Get the latest creative news from FooBar about art, design and business.
Author: roovari
ಮಂಗಳೂರು : ಶತಮಾನಗಳ ಹಿಂದೆ ಕನ್ನಡ ರಂಗಭೂಮಿ ಕಂಪನಿ ನಾಟಕಗಳಲ್ಲಿ ನೈಜ ಒಂಟೆ ಮತ್ತು ಆನೆಗಳನ್ನು ಬಳಸಿ ಮನರಂಜನೆ ನೀಡುವಷ್ಟು ಶ್ರೀಮಂತವಾಗಿತ್ತು. ಇಂದು ಸರಳ ತಂತ್ರಗಳನ್ನು ಬಳಸಿಕೊಂಡು ಪ್ರೇಕ್ಷಕರನ್ನು ತೊಡಗಿಸಿಕೊಳ್ಳಲು ನಾಟಕಗಳನ್ನು ಹೊಂದಿಸಲಾಗಿದೆ. ಆದರೆ ಈಗ ಕಲಾಭಿ(ರಿ ) ಸಂಸ್ಥೆ ಹಳೆಯ ಸಂಪ್ರದಾಯವನ್ನು ಪ್ರೇಕ್ಷಕರಿಗೆ ನೆನಪಿಸುವಲ್ಲಿ ಯಶಸ್ವಿಯಾಗಿದೆ. ಮಂಗಳೂರಿನಲ್ಲಿ ನಿಜವಾದ ಆನೆಗಳನ್ನು ವೇದಿಕೆಗೆ ತರುವಲ್ಲಿ ಕಲಾಭಿ ತಂಡ ಮತ್ತೆ ಯಶಸ್ಸು ಕಂಡಿದೆ . ಮಂಗಳೂರಿನ ಕುದ್ಮಲ್ ರಂಗರಾವ್ ಪುರಭವನದಲ್ಲಿ ದಿನಾಂಕ 09-06-2024 ರಂದು ನಡೆದ ಕಲಾಭಿ ರಂಗೋತ್ಸವದಲ್ಲಿ ಪ್ರಸಿದ್ಧ ರಂಗ ನಿರ್ದೇಶಕ ಶ್ರವಣ್ ಹೆಗ್ಗೋಡು ನಿರ್ದೇಶನದ “ಎ ಫ್ರೆಂಡ್ ಬಿಯೊಂಡ್ ದಿ ಫೆನ್ಸ್” ಎಂಬ ಅಪೂರ್ವ ನಾಟಕ ಕನ್ನಡ ರಂಗಭೂಮಿಯಲ್ಲಿ ಹೊಸ ಸಂಚಲನವನ್ನು ಮೂಡಿಸಿದೆ. ಜಪಾನ್ನ ಬುರ್ನಾಕು ಬೊಂಬೆ ಪ್ರದರ್ಶನ ತಂತ್ರವನ್ನು ಕಲಿತು ನುರಿತ ಕಲಾವಿದರನ್ನು ಒಳಗೊಂಡಂತೆ ಈ ನಾಟಕವು ತನ್ನ ಅತ್ಯುತ್ತಮ ವೇದಿಕೆ, ಅದ್ಭುತ ಸಂಗೀತ ಮತ್ತು ಅನೇಕ ವಿಶೇಷ ತಂತ್ರಗಳು ಮತ್ತು ವಿಶೇಷ ಬೆಳಕಿನಿಂದ ಅಪಾರ ಪ್ರೇಕ್ಷಕರನ್ನು ಆಕರ್ಷಿಸಿದೆ.…
ವಯನಾಡು : ಕರಾವಳಿಯ ಯುವ ನೃತ್ಯ ಕಲಾವಿದರಾದ ವಿದ್ವಾನ್ ಮಂಜುನಾಥ ಎನ್ ಪುತ್ತೂರು ಅವರು ನಿರ್ದೇಶಿಸಿ ನೃತ್ಯ ಸಂಯೋಜಿಸಿದ “ಶ್ರೀರಾಮ ಕಥಾಮೃತ” ಭರತನೃತ್ಯವನ್ನು ಕೇರಳದ ವಯನಾಡು ಜಿಲ್ಲೆಯ ನೃತ್ಯ ಕಲಾವಿದರ ಒಕ್ಕೂಟವು (AKDTO ) ದಿನಾಂಕ 08-06-2024 ರಂದುಪ್ರದರ್ಶಿಸಿದ್ದು, ಸುಮಾರು 18 ಹಿರಿಯ ನೃತ್ಯ ಗುರುಗಳು ಮತ್ತು ಕಿರಿಯ ನೃತ್ಯ ಶಿಕ್ಷಕರು ಈ ಪ್ರದರ್ಶನದಲ್ಲಿ ಭಾಗವಹಿಸಿದ್ದರು. ಪ್ರದರ್ಶನದ ಮೊದಲು ಗುರು ಪೂಜೆಯನ್ನು ನೆರವೇರಿಸಿ, ವಿದ್ವಾನ್ ಮಂಜುನಾಥ ಇವರನ್ನು ಗೌರವಿಸಲಾಯಿತು. 45 ನಿಮಿಷಗಳ ಈ ನೃತ್ಯಕ್ಕೆ ಕೋಲ್ಕತ್ತಾದ ನೃತ್ಯ ಕಲಾವಿದರಾದ ಶ್ರೀ ಎನ್. ದೇಬಾಶಿಷ್ ಅವರು ಪರಿಕಲ್ಪನೆ ಮತ್ತು ತಾಂತ್ರಿಕ ಅಂಶಗಳನ್ನು ನೀಡಿದ್ದಾರೆ.
ಬೆಂಗಳೂರು : ಸಾಹಿತ್ಯ ಕ್ಷೇತ್ರದ ಸಾಧನೆಗಾಗಿ 2023-2024ರ ಸಾಲಿನ ಪ್ರತಿಷ್ಠಿತ ಅಂತರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಸಾಹಿತಿ ಯೋಗೀಶ್ ಕಾಂಚನ್ ಬೈಕಂಪಾಡಿ ಆಯ್ಕೆಯಾಗಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 23-06-2024ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿದ್ದು, ರಾಜ್ಯದ ರಾಜ್ಯಪಾಲರು ವಿತರಣೆ ಮಾಡಲಿದ್ದಾರೆ. ಯೋಗೇಶ್ ಕಾಂಚನ್ ಬೈಕಂಪಾಡಿಯ ಮೀನಕಳಿಯದ ನಿವಾಸಿಯಾದ ಇವರೋರ್ವ ಹವ್ಯಾಸಿ ಯಕ್ಷಗಾನ ಕಲಾವಿದ. ತುಳುವಿನಲ್ಲಿ ‘ಮಣ್ಣ್ ದ ಮಗಳ್’, ‘ಸತ್ಯೋದ ಬಾಲೆಲ್’ ಮತ್ತು ಕೈಯಲ್ತ ಗುಳಿಗೆ’ ಹಾಗೂ ಕನ್ನಡದಲ್ಲಿ ‘ನಾಗ ಕನ್ನಿಕೆ’ ಎಂಬ ಯಕ್ಷಗಾನ ಪ್ರಸಂಗಗಳ ಕೃರ್ತ ಇವರಾಗಿದ್ದಾರೆ. ‘ಕಂಚಿಲ್’ (ತುಳು) ‘ವಾಸ್ತವತೆ’ ಮತ್ತು ‘ನಗ್ನ ಸತ್ಯ’ (ಕನ್ನಡ) ಇವು ಇವರ ಕವನ ಸಂಕಲನಗಳು. ‘ಚಿತ್ರಾಪುರೋತ ಸಿರಿದೇವಿ ಉಳ್ಳಾಲ್ದಿ’ (ತುಳು ನಾಟಕ), ‘ಪನ್ನಂಬರೋ’ (ತುಳು ಕಥಾ ಸಂಕಲನ) ಇವೆಲ್ಲಾ ಪ್ರಕಟಿತ ಕೃತಿಗಳು. ಅಪ್ರಕಟಿತ ಅನೇಕ ತುಳು, ಕನ್ನಡ ಕಾದಂಬರಿಗಳು, ಯಕ್ಷಗಾನ ಪ್ರಸಂಗಗಳಿವೆ. ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ತುಳು ಸಾಹಿತ್ಯ ಅಕಾಡಮಿ ಪ್ರಶಸ್ತಿ ಇವು ಸಾಹಿತ್ಯ ಕ್ಷೇತ್ರದಲ್ಲಿ ಇವರು ಮಾಡಿದ…
ಕಾರ್ಕಳ : ‘ಮುದ್ದಣ ಕಾವ್ಯ ಪ್ರಶಸ್ತಿ’ಯನ್ನು ನೀಡುತ್ತಾ ಬಂದಿರುವ ಕಾಂತಾವರ ಕನ್ನಡ ಸಂಘವು 2024ರ ಸಾಲಿನ ‘ಮುದ್ದಣ ಕಾವ್ಯ ಪ್ರಶಸ್ತಿ’ಗೆ ಮುದ್ರಣಕ್ಕೆ ಸಿದ್ಧವಾಗಿರುವ ಕವನ ಸಂಗ್ರಹದ ಹಸ್ತಪ್ರತಿಗಳನ್ನು ಆಹ್ವಾನಿಸುತ್ತಿದೆ. ಪ್ರಶಸ್ತಿಯು ರೂ.ಹತ್ತು ಸಾವಿರ ನಗದು, ಪ್ರಶಸ್ತಿ ಪತ್ರ ಮತ್ತು ಸನ್ಮಾನ ಒಳಗೊಂಡಿದೆ. ಆಸಕ್ತ ಕವಿಗಳು ದಿನಾಂಕ 15-09-2024ರೊಳಗೆ ಹಸ್ತಪ್ರತಿಗಳನ್ನು ಅಧ್ಯಕ್ಷರು ಕಾಂತಾವರ ಕನ್ನಡ ಸಂಘ, ಕಾರ್ಕಳ ತಾಲೂಕು, ಉಡುಪಿ ಜಿಲ್ಲೆ ಇವರಿಗೆ ಕಳುಹಿಸಬಹುದು.
ಉಜಿರೆ : ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕ ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಿ.ಯು. ವಸತಿ ಕಾಲೇಜು ಉಜಿರೆ ಇವುಗಳ ಆಶ್ರಯದಲ್ಲಿ ‘ಡಾ. ಟಿ.ಎನ್. ತುಳಪುಳೆ ನೆನಪು ದತ್ತಿ ಉಪನ್ಯಾಸ ಮತ್ತು ಸನ್ಮಾನ’ ಕಾರ್ಯಕ್ರಮವನ್ನು ದಿನಾಂಕ 13-06-2024ರಂದು ಅಪರಾಹ್ನ ಗಂಟೆ 3-00ಕ್ಕೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಿ.ಯು. ವಸತಿ ಕಾಲೇಜಿನಲ್ಲಿ ಆಯೋಜಿಸಲಾಗಿದೆ. ಉಜಿರೆಯ ಶ್ರೀ ಧ. ಮಂ. ಎಜ್ಯುಕೇಶನಲ್ ಸೊಸೈಟಿ (ರಿ) ಇದರ ಕಾರ್ಯದರ್ಶಿಗಳಾದ ಡಾ. ಎಸ್. ಸತೀಶ್ಚಂದ್ರ ಇವರು ಈ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಎಂ.ಪಿ. ಶ್ರೀನಾಥ್ ಇವರು ಅಧ್ಯಕ್ಷತೆ ವಹಿಸಲಿರುವರು. ‘ಸಾಹಿತ್ಯ ಪ್ರೇರಣೆ’ ಎಂಬ ವಿಷಯದ ಬಗ್ಗೆ ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ (ರಿ.) ಇದರ ಅಧ್ಯಕ್ಷರಾದ ಶ್ರೀ ಸಂಪತ್ ಟಿ. ಸುವರ್ಣ ಇವರು ಉಪನ್ಯಾಸ ನೀಡಲಿದ್ದಾರೆ. ಇದೇ ಸಂದರ್ಭದಲ್ಲಿ ಹಿರಿಯ ಪತ್ರಕರ್ತರಾದ ಶ್ರೀ ಶ್ರೀಕರ ಭಟ್ ಮರಾಠೆ ಮುಂಡಾಜೆ ಇವರನ್ನು ಸನ್ಮಾನಿಸಲಾಗುವುದು.
ಉಡುಪಿ : ಯಕ್ಷಗಾನ ಕಲಾರಂಗವು ಸಹೃದಯಿ ಕಲಾ ಪೋಷಕ ಮಟ್ಟಿ ಮುರಲೀಧರ ರಾವ್ ಮತ್ತು ಅರ್ಥಧಾರಿ ಪಂಡಿತ ಪೆರ್ಲ ಕೃಷ್ಣ ಭಟ್ ನೆನಪಿನಲ್ಲಿ ನೀಡುವ ‘ಯಕ್ಷಗಾನ ಕಲಾರಂಗ ಪ್ರಶಸ್ತಿ’ಗೆ ಅರ್ಥಧಾರಿ, ಹವ್ಯಾಸಿ ಕಲಾವಿದ, ಪ್ರಸಂಗಕರ್ತ, ಪ್ರವಚನಕಾರ ಸೇರಾಜೆ ಸೀತಾರಾಮ ಭಟ್ಟ ಹಾಗೂ ಅನುಕ್ರಮವಾಗಿ ಅರ್ಥಧಾರಿ, ಹವ್ಯಾಸಿ ವೇಷಧಾರಿ ಜಬ್ಬಾರ ಸಮೊ ಆಯ್ಕೆಯಾಗಿದ್ದಾರೆ. ದಿನಾಂಕ 23-06-2024ರ ಭಾನುವಾರದಂದು ಅಪರಾಹ್ನ 3-00 ಗಂಟೆಗೆ ಸಂಸ್ಥೆಯ ನೂತನ ಕಟ್ಟಡ ಇನ್ಫೋಸಿಸ್ ಫೌಂಡೇಶನ್ ಯಕ್ಷಗಾನ ಡೆವಲಪ್ಮೆಂಟ್, ಟ್ರೈನಿಂಗ್ ಅಂಡ್ ರಿಸರ್ಚ್ ಸೆಂಟರಿನಲ್ಲಿ ಪ್ರಶಸ್ತಿ ಪ್ರದಾನ ಮತ್ತು ತಾಳಮದ್ದಲೆ ಜರಗಲಿದೆ ಎಂಬುವುದಾಗಿ ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ತಿಳಿಸಿದ್ದಾರೆ. ಪ್ರಶಸ್ತಿಯು ರೂ.20,000/- ನಗದು ಪುರಸ್ಕಾರ ಮತ್ತು ಪ್ರಶಸ್ತಿ ಫಲಕಗಳನ್ನೊಳಗೊಂಡಿರುತ್ತದೆ.
ಉಡುಪಿ : ಯಕ್ಷ ರಂಗಾಯಣ ಕಾರ್ಕಳ ವತಿಯಿಂದ ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ‘ಅಭಿನಯ ಕಲೆಯಿಂದ ಕೌಶಲ್ಯ ಅಭಿವೃದ್ಧಿ’ ಒಂದು ದಿನದ ರಂಗ ತರಬೇತಿ ಶಿಬಿರವು ಉಡುಪಿಯ ಅಜ್ಜರಕಾಡು ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪಿ.ಜಿ.ಎ.ವಿ. ಸಭಾಂಗಣದಲ್ಲಿ ದಿನಾಂಕ 05-06-2024ರಂದು ನಡೆಯಿತು. ಈ ಶಿಬಿರದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಡಾ. ಜಿ. ಶಂಕರ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಭಾಸ್ಕರ್ ಶೆಟ್ಟಿ ಎಸ್. “ರಂಗ ಅಭಿನಯ, ಅಭಿನಯ ಕಲೆ, ರಂಗ ಕೌಶಲ್ಯಗಳಿಗೆ ನಿಕಟವಾದ ಸಂಬಂಧವಿದ್ದು, ಜಾಗತೀಕರಣ ಮತ್ತು ಜಾಗತೀಕರಣೋತ್ತರ ಸಂದರ್ಭ ಪ್ರಪಂಚದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಕೌಶಲ್ಯಗಳಿಗೆ ಪ್ರಾಶಸ್ತ್ಯ ಸಿಗುತ್ತಿದೆ. ಕಲಿಕೆ ನಿಂತ ನೀರಾಗಬಾರದು, ನಿರಂತರವಾಗಿದ್ದರೆ ಮಾತ್ರ ಕೌಶಲ್ಯವನ್ನು ಗಳಿಸಲು ಸಾಧ್ಯ. ನಮ್ಮ ಬದುಕಿನ ವಿವಿಧ ಸ್ತರಗಳಲ್ಲಿ ಅರ್ಥಗರ್ಭಿತ ಜೀವನ ಕಟ್ಟಿಕೊಳ್ಳಲು ರಂಗ ತರಬೇತಿ ಶಿಬಿರಗಳು ಉಪಯುಕ್ತವಾಗಿವೆ. ಅಂತಹ ಕೌಶಲ್ಯವನ್ನು ಬೆಳೆಸಿಕೊಂಡು ಸುಂದರ ಬದುಕು ಕಟ್ಟಿಕೊಳ್ಳಿ”…
ಕುಂದಾಪುರ : ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ ಐರೋಡಿ ಇವರ ವತಿಯಿಂದ ‘ನೆನಪಿನಂಗಳದಲ್ಲಿ ನಾವುಡರು ಧಾರೇಶ್ವರರ ನುಡಿನಮನ’ ಕಾರ್ಯಕ್ರಮವು ದಿನಾಂಕ 17-06-2024ರಂದು ಅಪರಾಹ್ನ 3-00 ಗಂಟೆಗೆ ಸಾಲಿಗ್ರಾಮದ ಗುಂಡ್ಮಿಯ ಸದಾನಂದ ರಂಗ ಮಂಟಪದಲ್ಲಿ ನಡೆಯಲಿದೆ. ಯಕ್ಷಗಾನ ಅಕಾಡೆಮಿ ಬೆಂಗಳೂರು ಇದರ ಅಧ್ಯಕ್ಷರಾದ ಡಾ. ತಾಲ್ಲೂರು ಶಿವರಾಮ್ ಶೆಟ್ಟಿ ಇವರು ದೀಪ ಪ್ರಜ್ವಲನೆ ಮಾಡಿ ಉದ್ಘಾಟಿಸಲಿರುವ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ ಇದರ ಅಧ್ಯಕ್ಷರಾದ ಆನಂದ ಸಿ. ಕುಂದರ್ ಇವರು ವಹಿಸಲಿರುವರು. ಇದೇ ಸಂದರ್ಭದಲ್ಲಿ ಮಲೆನಾಡಿನ ಕೋಗಿಲೆ ಪ್ರಸಿದ್ಧ ಬಡಗು ತಿಟ್ಟಿನ ಭಾಗವತರಾದ ಶಿವಶಂಕರ್ ಭಟ್ ಹರಿಹರಪುರ ಇವರನ್ನು ಸನ್ಮಾನಿಲಾಗುವುದು. ಪ್ರಸಂಗಕರ್ತರು ಹಾಗೂ ಸಾಹಿತಿಯಾದ ಡಾ. ಬಸವರಾಜ್ ಶೆಟ್ಟಿಗಾರ್ ಕೋಟೇಶ್ವರ ಇವರು ಅಭಿನಂದನಾ ನುಡಿಗಳನ್ನಾಡುವರು. ಶ್ರೀ ಮಹಿಷಮರ್ಧಿನೀ ಯಕ್ಷ ಕಲಾ ಪ್ರತಿಷ್ಠಾನದ ಕಲಾವಿದರಿಂದ ಅಜ್ಞಾತ ಕವಿ ವಿರಚಿತ ‘ಗದಾಯುದ್ಧ’ ಯಕ್ಷಗಾನ ತಾಳಮದ್ದಳೆ ನಡೆಯಲಿದೆ.
ಮಂಗಳೂರು. ಸಾಹಿತಿ, ವಿದ್ವಾನ್ ರಮಾನಾಥ ಕೋಟೆಕಾರು ಅಲ್ಪ ಕಾಲದ ಅಸೌಖ್ಯದಿಂದಾಗಿ ದಿನಾಂಕ 11-06-2024ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಇವರಿಗೆ 67ವರ್ಷ ವಯಸ್ಸಾಗಿತ್ತು. ಸೋಮೇಶ್ವರ ಕೊಲ್ಯದ ಬ್ರಹ್ಮಶ್ರೀ ನಾರಾಯಣ ಗುರು ಧ್ಯಾನ ಮಂದಿರದ ಮಾಜಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಇವರು ಬ್ರಹ್ಮಶ್ರೀ ನಾರಾಯಣ ಗುರು ಧರ್ಮಶಿಕ್ಷಣ ಕೇಂದ್ರದ ಮಾರ್ಗದರ್ಶಕರಾಗಿದ್ದರು. ಶ್ರೀ ಗೋಕರ್ಣನಾಥೇಶ್ವರ ಬ್ಯಾಂಕ್ ಇದರ ನಿರ್ದೇಶಕರಾಗಿ ಹಾಗೂ ಮಂಗಳೂರಿನ ಮಣ್ಣಗುಡ್ಡೆಯಲ್ಲಿರುವ ಶ್ರೀ ಸತ್ಯಸಾಯಿ ಸೇವಾ ಕೇಂದ್ರದಲ್ಲಿಯೂ ಸೇವೆ ಸಲ್ಲಿಸಿದ್ದರು. ಬಿಲ್ಲವ ಸಮಾಜ ಟ್ರಸ್ಟ್ ಇದರ ಟ್ರಸ್ಟಿಯಾಗಿ, ಜಾನಪದ ಸಂಶೋಧಕರಾಗಿ, ಪರಿಣಿತ ಹಾರ್ಮೋನಿಯಂ ವಾದಕರಾಗಿ, ಖಚಿತ ಜ್ಞಾನದ ಭಜನಾಪಟುವಾಗಿ, ಸಾಹಿತಿಯಾಗಿ, ಶಾಸ್ತ್ರೀಯ ಸಂಗೀತದಲ್ಲಿ ವಿದ್ವತ್ ಪದವಿ ಪಡೆದಿದ್ದರು. ಹಲವಾರು ಪುಸ್ತಕ ಗಳನ್ನು ರಚಿಸಿದ್ದ ಇವರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಟೆಕಾರ್ ಬೀರಿ ಇದರ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಮಂಗಳೂರಿನ ಹಂಪನ್ ಕಟ್ಟೆಯಲ್ಲಿ ದಶಕಗಳ ಕಾಲದ ಹಿಂದೆ ಸುದರ್ಶನ್ ಫ್ರೇಮ್ ವರ್ಕ್ಸ್ ಹಾಗೂ ಕೆಲವು ವರ್ಷಗಳ ಹಿಂದೆ ಕೊಡಿಯಲ್ ಬೈಲ್ ನಲ್ಲಿ…
ಮಂಗಳೂರು : ಆರ್ಟ್ ಕೆನರಾ ಟ್ರಸ್ಟ್ ಮಂಗಳೂರು, ಕವಿತಾ ಕುಟೀರ ಪೆರಡಾಲ ಮತ್ತು ಕಾಸರಗೋಡಿನ ಪೆರಡಾಲದ ನವಜೀವನ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿಗಳ ಸಹಯೋಗದಲ್ಲಿ ಖ್ಯಾತ ಸಾಹಿತಿ, ದಿವಂಗತ ನಾಡೋಜ ಕಯ್ಯಾರ ಕಿಞ್ಞಣ್ಣ ರೈ ಅವರ ಜನ್ಮ ದಿನಾಚರಣೆಯನ್ನು ದಿನಾಂಕ 08-06-2024ರಂದು ಕೊಡಿಯಾಲಗುತ್ತು ಕಲೆ ಮತ್ತು ಸಂಸ್ಕೃತಿ ಕೇಂದ್ರದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ನ್ಯಾಯವಾದಿ ಕಳ್ಳಿಗೆ ತಾರಾನಾಥ ಶೆಟ್ಟಿ, ನಿಟ್ಟೆ ಡೀಮ್ಡ್ ವಿಶ್ವವಿದ್ಯಾನಿಲಯದ ಮಾನವಿಕ ವಿಭಾಗದ ಮುಖ್ಯಸ್ಥೆ ಡಾ. ಸಾಯಿಗೀತಾ ಹೆಗ್ಡೆ, ಕವಿತಾ ಕುಟೀರದ ಅಧ್ಯಕ್ಷ ದುರ್ಗಾಪ್ರಸಾದ್ ರೈ, ಆರ್ಟ್ ಕೆನರಾ ಟ್ರಸ್ಟಿನ ಅಧ್ಯಕ್ಷ ಸುಭಾಸ್ಚಂದ್ರ ಬಸು, ನವಜೀವನ ಪ್ರೌಢಶಾಲೆಯ ದಿವಂಗತ ಕವಿಯ ಹಲವಾರು ವಿದ್ಯಾರ್ಥಿಗಳು ಮತ್ತಿತರರು ಉಪಸ್ಥಿತರಿದ್ದರು. ಕವಿ ಹಾಗೂ ಮಂಗಳೂರು ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿ ಎನ್. ಸುಬ್ರಾಯ ಭಟ್ ಅವರು ಕಾರ್ಯಕ್ರಮವನ್ನು ನಿರ್ವಹಿಸಿದರು. ಕಲಾವಿದ ಸೈಯದ್ ಆಸಿಫ್ ಅಲಿ ಅವರು ರಚಿಸಿದ ದಿವಂಗತ ಕವಿಯ ಆಯಿಲ್ ಆನ್ ಕ್ಯಾನ್ವಾಸ್ ಭಾವಚಿತ್ರವು ವೇದಿಕೆಯನ್ನು ಅಲಂಕರಿಸಿತು. ಕಯ್ಯಾರ ಕಿಞ್ಞಣ್ಣ ರೈ ಅವರ ಪುತ್ರ…