Subscribe to Updates
Get the latest creative news from FooBar about art, design and business.
Author: roovari
ಉಡುಪಿ: ಧರ್ಮಸ್ಥಳ ಕನ್ಯಾಡಿ ಶ್ರೀರಾಮ ಕ್ಷೇತ್ರದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಇವರ ಚಾತುರ್ಮಾಸ್ಯ ವ್ರತಾಚಾರಣೆಯ ಕಾರ್ಯಕ್ರಮದಲ್ಲಿ ಹಮ್ಮಿಕೊಂಡ ‘ಶ್ರೀರಾಮ ಕಾರುಣ್ಯ ಕಲಾಸಂಘ’ದ ದಶಮಾನೋತ್ಸವ ಕಾರ್ಯಕ್ರಮವು 08 ಆಗಸ್ಟ್ 2024ರಂದು ಭಟ್ಕಳದ ಕರಿಕಲ್ಲಿನ ಧ್ಯಾನ ಮಂದಿರದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಮಾತನಾಡಿ “ಯಕ್ಷಗಾನ ಪರಂಪರೆಯ ಉಳಿವು ಹಾಗೂ ಬೆಳವಣಿಗೆಗೆ ಧಾರ್ಮಿಕ ಸಂಸ್ಥೆಗಳ ಸಹಕಾರ ಅತ್ಯಗತ್ಯ. ಯಕ್ಷಗಾನ ಪ್ರದರ್ಶನಕ್ಕೆ ಸ್ವಾಮೀಜಿ ಅವಕಾಶ ನೀಡಿರುವುದಲ್ಲದೆ ಸಾಧಕ ಕಲಾವಿದರನ್ನು ಸನ್ಮಾನಿಸಿರುವುದು ಪ್ರಶಂಸನೀಯ. ಯಕ್ಷಗಾನ ಕಲೆಗೆ ಕೇವಲ ಕಲಾವಿದರು ಹಾಗೂ ಪ್ರೋತ್ಸಾಹಕರಿದ್ದರೆ ಸಾಲದು. ಕಲೆಯನ್ನು ಆಸ್ವಾದಿಸುವ ಮನಸ್ಸುಗಳು ಅಗತ್ಯ.” ಎಂದರು. ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಮಾತನಾಡಿ “ಬದುಕಿನಲ್ಲಿ ಆನಂದ ಹಾಗೂ ಸುಖ ಪ್ರಾಪ್ತಿಗೆ ಧರ್ಮ ಪಾಲಿಸಬೇಕು. ಚಾತುರ್ಮಾಸ್ಯದ 50 ದಿನಗಳಲ್ಲಿ 50 ಯಕ್ಷಗಾನ ಪ್ರದರ್ಶನ ಏರ್ಪಡಿಸುವ ಚಿಂತನೆ ನಡೆಸಿದ್ದೇವೆ.” ಎಂದರು. ಇದೇ ಸಂದರ್ಭದಲ್ಲಿ ಯಕ್ಷಗಾನ ಸಂಘಟಕ ಬಿ. ಜನಾರ್ದನ ಅಮ್ಮುಂಜೆ ಹಾಗೂ ಕಲಾವಿದ…
ಮಂಗಳೂರು : ಸನಾತನ ನಾಟ್ಯಾಲಯದ ವತಿಯಿಂದ ಸ್ವಾತಂತ್ರ್ಯೋತ್ಸವದ ಶುಭಾಶಯಗಳೊಂದಿಗೆ ಸನಾತನ ನಾಟ್ಯಾಲಯದ ನೃತ್ಯ ವಿದ್ಯಾರ್ಥಿಗಳು ಪ್ರಸ್ತುತ ಪಡಿಸುವ ಭರತನಾಟ್ಯ ವೈವಿಧ್ಯ ‘ಸನಾತನ ನೃತ್ಯೋತ್ಸವ’ ಕಾರ್ಯಕ್ರಮವು ದಿನಾಂಕ 17 ಆಗಸ್ಟ್ 2024ರಂದು ಸಂಜೆ ಗಂಟೆ 6-00ಕ್ಕೆ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ. ಶ್ರೀಮತಿ ರೇವತೀ ಸುನೀಲ್ ಇವರ ಗೌರವ ಉಪಸ್ಥಿತಿಯಲ್ಲಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ‘ಲಕ್ಷ್ಮೀಯೂ ಅವಳೇ ದುರ್ಗೆಯೂ ಅವಳೇ’ ಎಂಬ ವಿಷಯದ ಬಗ್ಗೆ ಕಾರ್ಕಳದ ಕುಮಾರಿ ಅಕ್ಷಯಾ ಗೋಖಲೆ ಇವರು ಮುಖ್ಯ ಭಾಷಣ ಮಾಡಲಿರುವರು. ಸಭಾ ಕಾರ್ಯಕ್ರಮದ ಬಳಿಕ ಸನಾತನ ನಾಟ್ಯಾಲಯದ ಕರ್ನಾಟಕ ಕಲಾಶ್ರೀ ವಿದುಷಿ ಶಾರದಾಮಣಿ ಶೇಖರ್ ಮತ್ತು ವಿದುಷಿ ಶೀಲತಾ ನಾಗರಾಜ್ ಇವರ ಶಿಷ್ಯೆಯರಿಂದ ಭರತನಾಟ್ಯ ಪ್ರದರ್ಶನ ಪ್ರಸ್ತುತಗೊಳ್ಳಲಿದೆ.
ಮೂಡುಬಿದಿರೆ : ‘ಯಕ್ಷ ಸಂಗಮ’ ಇದರ 25ನೇ ವರ್ಷದ ಯಕ್ಷಗಾನ, ತಾಳಮದ್ದಳೆ ಕೂಟ ಹಾಗೂ ಸನ್ಮಾನ ಕಾರ್ಯಕ್ರಮವು 10 ಆಗಸ್ಟ್ 2024ರಂದು ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ನಡೆಯಿತು. ಜೈನ ಮಠದ ಡಾ . ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕರ್ನಾಟಕ ಯಕ್ಷಗಾನ ಅಕಾಡಮಿಯ ಅಧ್ಯಕ್ಷರಾದ ಡಾ. ತಲ್ಲೂರು ಶಿವರಾಮ ಶೆಟ್ಟಿ ಮಾತನಾಡಿ “ಯಕ್ಷಗಾನ ಬೆಳವಣಿಗೆಯಲ್ಲಿ ಸಂಘ ಸಂಸ್ಥೆಗಳ ಕೊಡುಗೆ ಮಹತ್ತರವಾಗಿದೆ.” ಎಂದು ಹೇಳಿದರು. ಇದೇ ಸಂದರ್ಭದಲ್ಲಿ ತೆಂಕು ಬಡಗು ತಿಟ್ಟಿನ ಚಾರ್ಲಿ ಚಾಪ್ಲಿನ್ ಎಂದೇ ಖ್ಯಾತರಾದ ಪ್ರಸಿದ್ಧ ಹಾಸ್ಯಗಾರ ಸೀತಾರಾಮ ಕುಮಾರ್ ಕಟೀಲು ಅವರನ್ನು ಸನ್ಮಾನಿಸಲಾಯಿತು. ಮಾಜಿ ಸಚಿವ ಅಭಯಚಂದ್ರ ಜೈನ್ ಉಪಸ್ಥಿತರಿದ್ದರು. ಅಭಿನಂದನಾ ಭಾಷಣ ಮಾಡಿದ ಯಕ್ಷ ಸಂಗಮದ ಶಾಂತರಾಮ ಕುಡ್ವ “ತಮ್ಮ ನಿಜ ಜೀವನದಲ್ಲಿ ನೋವಿನ ಬೇಗುದಿಯಲ್ಲಿ ಸಿಲುಕಿದರೂ ಯಕ್ಷಗಾನ ಲೋಕದಲ್ಲಿ ಅದನ್ನೆಲ್ಲಾ ಮರೆತು ಪ್ರೇಕ್ಷಕರನ್ನು ಹಾಸ್ಯದ ಹೊನಲಿನಲ್ಲಿ ತೇಲಿಸಿಬಿಡುವ ಸೀತಾರಾಮ ಕುಮಾರರದ್ದು ಮೇರು ವ್ಯಕ್ತಿತ್ವ. ಯಕ್ಷಗಾನವನ್ನೇ ಉಸಿರಾನ್ನಾಗಿಸಿರುವ ಸೀತಾರಾಮರು ಗಾಡ್…
ಉಡುಪಿ : ತುಳುಕೂಟ ಉಡುಪಿ (ರಿ.) ಇದರ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಮತ್ತು ಅಖಿಲ ಭಾರತ ತುಳು ಒಕ್ಕೂಟ (ರಿ.) ಮಂಗಳೂರು ಇವುಗಳ ಸಹಯೋಗದೊಂದಿಗೆ 29ನೇ ವರ್ಷದ ‘ಪಣಿಯಾಡಿ ಕಾದಂಬರಿ ಪ್ರಶಸ್ತಿ’ ಪ್ರದಾನ ಕಾರ್ಯಕ್ರಮವನ್ನು ದಿನಾಂಕ 18 ಆಗಸ್ಟ್ 2024ರಂದು ಸಂಜೆ 4-00 ಗಂಟೆಗೆ ಉಡುಪಿಯ ಶಾರದಾ ಕಲ್ಯಾಣ ಮಂಟಪ ರಸ್ತೆಯಲ್ಲಿರುವ ಯಕ್ಷಗಾನ ಕಲಾ ರಂಗದ ಐ.ವೈ.ಸಿ. ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ತುಳುಕೂಟ ಉಡುಪಿ ಇದರ ಅಧ್ಯಕ್ಷರಾದ ಶ್ರೀ ಬಿ. ಜಯಕರ ಶೆಟ್ಟಿ ಇಂದ್ರಾಳಿ ಇವರು ವಹಿಸಲಿರುವರು. ಮಂಗಳೂರಿನ ಲೇಖಕಿ ಶ್ರೀಮತಿ ರೂಪಕಲಾ ಆಳ್ವ ಇವರ ‘ಪಮ್ಮಕ್ಕೆನ ಪೊರುಂಬಾಟ’ ಎಂಬ ಕೃತಿಗೆ ‘ಪಣಿಯಾಡಿ ಕಾದಂಬರಿ ಪ್ರಶಸ್ತಿ’ ಪ್ರದಾನ ಮಾಡಲಿದ್ದು, ಸಾಹಿತಿ ಶ್ರೀಮತಿ ಅಮಿತಾಂಜಲಿ ಲೇಖಕಿ ಮತ್ತು ಕೃತಿ ಪರಿಚಯ ಮಾಡಲಿರುವರು.
ಮಂಗಳೂರು : ಮಂಗಳೂರು ಸಂಸ್ಕೃತ ಸಂಘ ಹಾಗೂ ಕೆನರಾ ಪ್ರೌಢಶಾಲೆ ಉರ್ವ ಇದರ ಜಂಟಿ ಆಶ್ರಯದಲ್ಲಿ ದಿನಾಂಕ 31 ಆಗಸ್ಟ್ 2024 ಶನಿವಾರ ಮಧ್ಯಾಹ್ನ 2-00 ಗಂಟೆಯಿಂದ ಉರ್ವದ ಕೆನರಾ ಪ್ರೌಢಶಾಲೆಯ ಮಿಜಾರ್ ಗೋವಿಂದ ಪೈ ಸ್ಮಾರಕ ಸಭಾಂಗಣದಲ್ಲಿ ‘ಸಂಸ್ಕೃತೋತ್ಸವಃ’ ಕಾರ್ಯಕ್ರಮದಲ್ಲಿ ವಿವಿಧ ಸಂಸ್ಕೃತ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ. ಸಂಸ್ಕೃತೋತ್ಸವ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಡೊಂಗರಕೇರಿಯ ಕೆನರಾ ಪ್ರೌಢಾಶಾಲಾ ಸಮಿತಿಯ ಅಧಕ್ಷರಾದ ಶ್ರೀ ಡಿ. ವಾಸುದೇವ ಕಾಮತ್ ಇವರು ವಹಿಸಲಿದ್ದು, ಸುರತ್ಕಲ್ಲಿನ ಗೋವಿಂದದಾಸ ಪದವಿ ಮಹಾವಿದ್ಯಾಲಯದ ನಿವೃತ್ತ ಸಂಸ್ಕೃತ ಪ್ರಾಧ್ಯಾಪಕ ಶ್ರೀ ಎಸ್. ವಾಗೀಶ ಶಾಸ್ತ್ರಿಯವರು ಉದ್ಘಾಟನೆ ಮಾಡಿ ಪ್ರಧಾನ ಭಾಷಣವನ್ನು ಮಾಡಲಿದ್ದಾರೆ. ಅತಿಥಿಗಳಾಗಿ ಕೆನರಾ ಪ್ರೌಢಶಾಲಾ ಮತ್ತು ಪ್ರಾಥಮಿಕ ಶಾಲಾ ಮುಖ್ಯ ಅಧ್ಯಾಪಿಕೆಯರಾದ ಶ್ರೀಮತಿ ಇಂದುಮತಿ ಮತ್ತು ಶ್ರೀಮತಿ ಲಲನಾ ಜೆ. ಶೆಣೈಯವರು ಭಾಗವಹಿಸಲಿದ್ದಾರೆ. ಮಧ್ಯಾಹ್ನ ಗಂಟೆ 2-30ರಿಂದ ಮಂಗಳೂರು ತಾಲೂಕು ಮಟ್ಟದ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಸಂಸ್ಕೃತ ಸ್ತೋತ್ರ ಕಂಠಪಾಠ, ಸುಭಾಷಿತ ಕಂಠಪಾಠ, ಏಕಪಾತ್ರಾಭಿನಯ, ಸಮೂಹಗಾನ ಸ್ಪರ್ಧೆ, ಸಮೂಹ…
ಮಂಗಳೂರು : ರಕ್ಷಿತ್ ಶೆಟ್ಟಿ ಪಡ್ರೆ ಶಿಷ್ಯ ವೃಂದದ ಯಕ್ಷ ಸಿದ್ದಿಸಂಭ್ರಮ ‘ಸಿದ್ಧಿ ದಶಯಾನ’ ಕಾರ್ಯಕ್ರಮದ ಸಮಾರೋಪ ಸಮಾರಂಭವು 11 ಆಗಸ್ಟ್ 2024ರಂದು ಉರ್ವಸ್ಟೋರ್ ಇಲ್ಲಿನ ಡಾ. ಬಿ. ಆರ್. ಅಂಬೇಡ್ಕರ್ ಸಭಾಭವನದಲ್ಲಿ ನಡೆಯಿತು. ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ. ಎಂ. ಮೋಹನ್ ಆಳ್ವ ಮಾತನಾಡಿ “ಯಕ್ಷಗಾನ ಕಲೆಯು ಜಾಗತಿಕ ಮಟ್ಟದಲ್ಲಿ ವಿಸ್ತರಿಸುತ್ತಿರುವ ಶ್ರೇಷ್ಠ ಕಲೆಯಾಗಿದ್ದು ಇದನ್ನು ರಾಜ್ಯ ಕಲೆ ಎಂದು ಘೋಷಣೆ ಮಾಡಬೇಕು. ರಾಜ್ಯದ 22 ಜಿಲ್ಲೆಗಳಲ್ಲಿ ವಿವಿಧ ಪ್ರಕಾರಗಳಲ್ಲಿ ಪ್ರಮುಖವಾಗಿರುವ ಯಕ್ಷಗಾನ ರಾಜ್ಯದ ಕಲೆಯಾಗಬೇಕು. ಯಕ್ಷಗಾನ ಕ್ಷೇತ್ರದಲ್ಲಿ ಬದಲಾವಣೆ ಬಂದರೂ ಕಲೆಗೆ ಕೊನೆ ಇಲ್ಲ. ಪ್ರಸ್ತುತ ಶಿಕ್ಷಣದ ಜತೆ ಯಕ್ಷಗಾನ ಬೆಸೆದುಕೊಂಡಿರುವುದು ಯಕ್ಷಗಾನದ ಉಳಿವು ಹಾಗೂ ಬೆಳವಣಿಗೆಗೆ ಪೂರಕವಾಗಿದೆ.” ಎಂದರು. ಕಟೀಲು ದೇವಸ್ಥಾನದ ಆನುವಂಶಿಕ ಅರ್ಚಕ ಶ್ರೀಹರಿನಾರಾಯಣದಾಸ ಆಸ್ರಣ್ಣ ಮಾತನಾಡಿ “ಯಕ್ಷಗಾನದಿಂದ ಮಕ್ಕಳಿಗೆ ಪೌರಾಣಿಕ ಜ್ಞಾನ ಸಿಗುತ್ತದೆ. ಒಳಿತು ಕೆಡುಕುಗಳು ಹಾಗೂ ನ್ಯಾಯ ಅನ್ಯಾಯದ ಬಗ್ಗೆ ಅರಿವು ಮೂಡುತ್ತದೆ. ಇದು ಉತ್ತಮ…
ಕಾರ್ಕಳ : ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಆಯೋಜಿಸುವ ‘ಕ್ರಿಯೇಟಿವ್ ಸವಿಗಾನ’ ದೇಶಭಕ್ತಿ ಗೀತೆ ಮತ್ತು ಸದಭಿರುಚಿಯ ಗೀತಗಾಯನ ಕಾರ್ಯಕ್ರಮವು 15 ಆಗಸ್ಟ್ 2024ರಂದು ಕ್ರಿಯೇಟಿವ್ ಪ. ಪೂ. ಕಾಲೇಜಿನ ‘ಸಪ್ತಸ್ವರ ವೇದಿಕೆ’ಯಲ್ಲಿ ನಡೆಯಲಿದೆ. ಪೂರ್ವಾಹ್ನ ಘಂಟೆ 11.00ಕ್ಕೆ ಪ್ರಾರಂಭವಾಗುವ ಈ ಕಾರ್ಯಕ್ರಮವನ್ನು ಮಜಾಟಾಕೀಸ್ ಖ್ಯಾತಿಯ ಮೋಹನ್ ಕಾರ್ಕಳ ಮತ್ತು ತಂಡ ನಡೆಸಿಕೊಡಲಿದ್ದಾರೆ. ತಂಡದಲ್ಲಿ ಗಾಯಕರಾಗಿ ಪಲ್ಲವಿ ಪ್ರಭು, ಸಂದೇಶ್ ಬಾಬಣ್ಣ, ಮಹೇಶ್ ಆಚಾರ್ಯ ಭಾಗವಹಿಸಲಿದ್ದು ಇವರಿಗೆ ಕೊಳಲಿನಲ್ಲಿ ಲೋಕೇಶ್, ಕೀಬೋರ್ಡ್ ನಲ್ಲಿ ಮೋಹನ್ ಕಾರ್ಕಳ, ರಿದಮ್ ಪ್ಯಾಡ್ ನಲ್ಲಿ ಪ್ರತಾಪ್ ಹಾಗೂ ತಬಲಾದಲ್ಲಿ ಪ್ರಜ್ವಲ್ ಆಚಾರ್ಯ ಸಹಕರಿಸಲಿದ್ದಾರೆ.
‘ಕಪ್ಪೆಟ್ಟಜ್ಜನ ಮನೆಯ ಪಡ್ಡೆ ಕೋಣೆ’ ವೆಂಕಟಗಿರಿ ಕಡೇಕಾರ್ ಅವರ ಇತ್ತೀಚಿನ ಕಾದಂಬರಿ. ಈಗಾಗಲೇ ಅವರ ‘ಕೃಷ್ಣವೇಣಿ’ ಎಂಬ ಕಾದಂಬರಿ ಜನಪ್ರಿಯವಾಗಿದೆ. ಈ ಕಾದಂಬರಿಯಲ್ಲಿ ಅವರು ಉಡುಪಿಯ ಒಂದು ಸಂಪ್ರದಾಯ ಶರಣ ಶಿವಳ್ಳಿ ಬ್ರಾಹ್ಮಣ ಮನೆತನದ ನಾಲ್ಕು ತಲೆಮಾರುಗಳ ಜೀವನದ ಏಳು ಬೀಳುಗಳ ಸವಿವರ ಚಿತ್ರಣವನ್ನು ಕೊಡುತ್ತಾರೆ. ಜೊತೆಗೆ, ಲಾಗಾಯ್ತಿನಿಂದ ಅವರು ಆಚರಿಸಿಕೊಂಡು ಬಂದ ಸಂಪ್ರದಾಯಗಳು, ಪದ್ಧತಿಗಳು, ನಂಬಿಕೆಗಳು, ಜೀವನಕ್ರಮ ಮೊದಲಾದ ಸಾಂಸ್ಕೃತಿಕ ವಿವರಗಳೂ ಇಲ್ಲಿ ಸಿಗುತ್ತವೆ. ಮೊದಲನೆಯ ತಲೆಮಾರಿನ ವೆಂಕಟ್ರಮಣ-ವೆಂಕಟಲಕ್ಷ್ಮೀ ಬೇಸಾಯದ ಕೆಲಸ ಬೇಡವೆಂದು ಉಡುಪಿಯ ಅಷ್ಟ ಮಠಗಳ ಸ್ವಾಮೀಜಿಗಳ ಬಳಿ ಬಂದು ಅವರ ಕೃಪೆಯಿಂದ ಕೆಲಸ ಪಡೆದು ಉಡುಪಿಯಲ್ಲಿ ನೆಲೆಸುವುದರಿಂದ ಕಥೆ ಆರಂಭವಾಗುತ್ತದೆ. ಅವರ ಐದು ಮಂದಿ ಮಕ್ಕಳಲ್ಲಿ ಗೋವಿಂದ ಎಂಬುವನು ಚೆನ್ನಾಗಿ ಓದಿ ತನ್ನ ಸ್ವಂತ ಪರಿಶ್ರಮದಿಂದ ಮೇಲೆ ಬಂದು ಕಲೆಕ್ಟರ್ ಆಫೀಸಿನಲ್ಲಿ ಅಮಲ್ದಾರನಾಗುತ್ತಾನೆ. ಅಣ್ಣ ತಮ್ಮಂದಿರು ಎಲ್ಲರೂ ಕೂಡು ಕುಟುಂಬದಲ್ಲಿ ಆರಾಮವಾಗಿರುತ್ತಾರೆ. ಗೋವಿಂದನ ಹೆಂಡತಿ ತಾಯಿ ಇಲ್ಲದ ತವರಿನ ಕಾವೇರಿ. ಆಗಿನ ಕಾಲಮಾನಕ್ಕೆ ತಕ್ಕಂತೆ ಅವಳಿಗೆ ಮದುವೆಯಾದಾಗ…
ಮಡಿಕೇರಿ : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಸಂಪಾಜೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಜ್ಯೋತಿ ವಿದ್ಯಾ ಸಂಘ ಪೆರಾಜೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಪೆರಾಜೆಯ ಜ್ಯೋತಿ ಪ್ರೌಢಶಾಲೆಯ ಸಭಾಂಗಣದಲ್ಲಿ ದಿನಾಂಕ 10 ಆಗಸ್ಟ್ 2024ರಂದು ದಿ. ಗಂಗಾಧರ ಶೇಟ್ ಮತ್ತು ಸುಲೋಚನಾ ಬಾಯಿ ಸ್ಮಾರಕ ದತ್ತಿ ಕಾರ್ಯಕ್ರಮದ ಕೊಡಗಿನ ಸ್ವಾತಂತ್ರ್ಯ ಹೋರಾಟಗಾರರ ನೆನಪಿನ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಜಿಲ್ಲೆಯ ಹಿರಿಯ ಸಾಹಿತಿ ಕೊಡಗಿನ ಗೌರಮ್ಮ ಪ್ರಶಸ್ತಿ ಪುರಸ್ಕೃತೆ ಶ್ರೀಮತಿ ಸಹನಾ ಕಾಂತಬೈಲು ಇವರು ಉಪನ್ಯಾಸ ನೀಡಿ “ಭಾರತದ ಸ್ವಾತಂತ್ರ್ಯ ಹೋರಾಟ ಪ್ರಾರಂಭವಾದದ್ದು ಕೊಡಗು ಜಿಲ್ಲೆಯಿಂದ, 1937ರಲ್ಲಿ ನಡೆದ ಅಮರಸುಳ್ಯ ಹೋರಾಟವೇ ಭಾರತದ ಪ್ರಪ್ರಥಮ ಸ್ವಾತಂತ್ರ್ಯ ಹೋರಾಟ. ಆಗ ಸುಳ್ಯ ಪ್ರದೇಶವು ಕೊಡಗು ಜಿಲ್ಲೆಗೆ ಸೇರಿತ್ತು. 1957ರಲ್ಲಿ ನಡೆದ ಸಿಪಾಯಿ ದಂಗೆ ಭಾರತದ ಮೊದಲ ಸ್ವಾತಂತ್ರ ಹೋರಾಟ ಎಂದು ಇತಿಹಾಸ ನಿರ್ಮಿಸಲಾಗಿದೆ. ಆದರೆ ಅದಕ್ಕೂ 20 ವರ್ಷಗಳ…
ಕುಂದಾಪುರ : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕುಂದಾಪುರ ತಾಲೂಕು ಘಟಕ, ವಿಜಯ ಕರ್ನಾಟಕ ಸಂಯುಕ್ತ ಆಶ್ರಯದಲ್ಲಿ ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ, ಚಿನ್ಮಯಿ ಆಸ್ಪತ್ರೆ ಕುಂದಾಪುರ, ಯುವ ಮೆರಿಡಿಯನ್ ಸಮೂಹ ಸಂಸ್ಥೆ ಹಾಗೂ ನಕ್ಷತ್ರ ಜ್ಯುವೆಲ್ಸ್ ಕುಂದಾಪುರ ಇವರ ಸಹಕಾರದೊಂದಿಗೆ ‘ವಿಶ್ವ ಕುಂದಾಪ್ರ ಕನ್ನಡ ದಿನ ಸಂಭ್ರಮ’ ಕುಂದಗನ್ನಡ ಜಾಥಾವನ್ನು ದಿನಾಂಕ 16 ಆಗಸ್ಟ್ 2024ರಂದು ಬೆಳಗ್ಗೆ 9-30 ಗಂಟೆಗೆ ಕುಂದಾಪುರದ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ. ಕ.ಸಾ.ಪ. ಕುಂದಾಪುರ ತಾಲೂಕು ಘಟಕದ ಅಧ್ಯಕ್ಷರಾದ ಡಾ. ಉಮೇಶ್ ಪುತ್ರನ್ ಇವರ ಅಧ್ಯಕ್ಷತೆಯಲ್ಲಿ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಅಧ್ಯಕ್ಷರಾದ ಬಿ. ಎಂ. ಸುಕುಮಾರ ಶೆಟ್ಟಿ ಇವರು ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದಾರೆ. ಕ.ಸಾ.ಪ. ಉಡುಪಿ ಜಿಲ್ಲೆಯ ಅಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ ಇವರು ಆಶಯ ನುಡಿಗಳನ್ನಾಡಲಿದ್ದು, ಹಿರಿಯ ಮುತ್ಸದ್ಧಿ ಮಾಣಿಗೋಪಾಲ್ ಇವರು ಕುಂದಗನ್ನಡ ಜಾಥಾ ಉದ್ಘಾಟನೆ ಮಾಡಲಿದ್ದಾರೆ. ಚಿನ್ಮಯಿ…