Subscribe to Updates
Get the latest creative news from FooBar about art, design and business.
Author: roovari
ತೇರದಾಳ : ಸುನೀತಾ ಪುಸ್ತಕ ಪ್ರತಿಷ್ಠಾನ ವತಿಯಿಂದ ಪ್ರಥಮ ವರ್ಷದಿಂದ ಕೊಡಲಾಗುವ ಸಾಹಿತ್ಯ ಪುರಸ್ಕಾರಕ್ಕೆ ಕಥೆ, ಕವನ, ಕಾದಂಬರಿ, ನಾಟಕ, ಪ್ರಬಂಧ, ವಿಮರ್ಶೆ, ಪ್ರವಾಸ ಕಥನ, ಕಥನವಚನ, ಮಕ್ಕಳ ಕಥೆ, ಚುಟುಕು, ಹೈಕು, ಗಜಲ್ ಮುಂತಾದ ಸಾಹಿತ್ಯ ಕೃತಿಗಳನ್ನು ಆಹ್ವಾನಿಸಲಾಗಿದೆ. ಲೇಖಕರು 2022ರಿಂದ 2024ರ ಒಳಗಾಗಿ ಪ್ರಕಟಗೊಂಡಿರುವ ಕೃತಿಗಳ ಎರಡು ಪ್ರತಿಗಳನ್ನು ದಿನಾಂಕ 31-08-2024ರ ಒಳಗಾಗಿ ಈ ಕೆಳಗಿನ ವಿಳಾಸಕ್ಕೆ ಕಳುಹಿಸತಕ್ಕದ್ದು. ಪದ್ಮಸಾಗರ ರಾಮಪ್ಪ, ನಾಗನೂರ ಇಂಡಿಯನ್ ಆಯಿಲ್ ಪೆಟ್ರೋಲ್ ಪಂಪ್ ಎದುರಿಗೆ, ಅಲ್ಲಮಪ್ರಭು ನಗರ, ತೇರದಾಳ -587315, ಜಮಖಂಡಿ ತಾಲೂಕು, ಬಾಗಲಕೋಟ ಜಿಲ್ಲೆ. ಹೆಚ್ಚಿನ ಮಾಹಿತಿಗಾಗಿ 7892541482, 7899513108 ಸಂಪರ್ಕಿಸಲು ಕೋರಲಾಗಿದೆ.
ವಿಟ್ಲ : ಬಂಟ್ವಾಳ ತಾಲೂಕಿನ ವಿಟ್ಲದ ಚಂದಳಿಕೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಭಾಭವನದಲ್ಲಿ ಹಿರಿಯ ಕವಿ ಭಾಸ್ಕರ ಆಡ್ವಳ ಇವರ ‘ಜೀವಸತ್ವ’ ವಿನೂತನ ‘ಜ್ಞಾನದ ಕೆಕೆ’ (ಹೃದಯವಂತಿಕೆ, ಬುದ್ಧಿವಂತಿಕೆ) ಒಗಟಿನ ಸಂಕಲನವು ದಿನಾಂಕ 08-06-2024ರಂದು ಲೋಕಾರ್ಪಣೆಗೊಂಡಿತು. ಈ ಕಾರ್ಯಕ್ರಮದಲ್ಲಿ ಕೃತಿ ಬಿಡುಗಡೆ ಮಾಡಿದ ವ್ಯಂಗ್ಯಚಿತ್ರಕಾರ ವಿರಾಜ್ ಅಡೂರು ಇವರು ಮಾತನಾಡಿ “ಒಗಟುಗಳು ಬುದ್ಧಿಯನ್ನು ಮಸೆಯುತ್ತವೆ. ಒಗಟಿಗೆ ಉತ್ತರ ಶೋಧಿಸುವ ಕಾರಣ ಏಕಾಗ್ರತೆಯೂ ಬಲವಾಗುತ್ತದೆ. ಮಾತಿನ ಕಟ್ಟೆಗಳಲ್ಲಿ ನಮ್ಮ ಹಿರಿಯರು ಮನರಂಜನೆಗಳಿಗಾಗಿ ಒಗಟುಗಳನ್ನು ರಚಿಸಿ, ಸ್ಪರ್ಧಾತ್ಮಕ ಮನೋಭಾವದಲ್ಲಿ ಉತ್ತರ ಕಂಡುಕೊಳ್ಳುತ್ತಿದ್ದರು. ಒಗಟುಗಳು ಬುದ್ಧಿವಂತಿಕೆಯ ಜೀವಸತ್ವ” ಎಂದು ಹೇಳಿದರು. ಬಂಟ್ವಾಳ ಕನ್ನಡ ಸಾಹಿತ್ಯ ಪರಿಷತ್ತಿನ ಮಕ್ಕಳ ಕಲಾಲೋಕ ಅಧ್ಯಕ್ಷ ರಮೇಶ ಎಂ. ಬಾಯಾರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ಕೃತಿಕಾರರಾದ ಭಾಸ್ಕರ ಆಡ್ವಳ ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖ್ಯ ಶಿಕ್ಷಕ ವಿಶ್ವನಾಥ ಗೌಡ ಕುಳಾಲು ಸ್ವಾಗತಿಸಿ, ಶಿಕ್ಷಕ ವೆಂಕಟೇಶ್ವರ ಭಟ್ ವಂದಿಸಿ, ಶಿಕ್ಷಕಿ ರೇಶ್ಮಾ ಲೂಯಿಸ್ ನಿರೂಪಿಸಿದರು. ಈ ಕಾರ್ಯಕ್ರಮದಲ್ಲಿ ನಡೆದ ಒಗಟಿಗೆ ಉತ್ತರ ನೀಡುವ…
ಮೂಡುಬಿದಿರೆ : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡುಬಿದಿರೆ ಮತ್ತು ಆಳ್ವಾಸ್ ರಂಗ ಅಧ್ಯಯನ ಕೇಂದ್ರ ಇವುಗಳ ಆಶ್ರಯದಲ್ಲಿ ಮೈಸೂರಿನ ರಂಗಾಯಣ ಅಭಿನಯಿಸುವ ಸಿ. ಬಸವ ಲಿಂಗಯ್ಯ ಇವರ ಪರಿಕಲ್ಪನೆ, ಸಂಗೀತ ಮತ್ತು ನಿರ್ದೇಶನದಲ್ಲಿ ‘ಗೋರ್ ಮಾಟಿ’ (ನನ್ನ ಜನ) ವಿಶೇಷ ಕನ್ನಡ ನಾಟಕದ ಎರಡು ಪ್ರದರ್ಶನಗಳನ್ನು ದಿನಾಂಕ 12-06-2024 ಮತ್ತು 13-06-2024ರಂದು ಮೂಡುಬಿದಿರೆಯ ಸ್ಕೌಟ್ ಗೈಡ್ ಕನ್ನಡ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಇದು ಬರಿ ನಾಟಕವಲ್ಲ ಬಂಜಾರ ಜನಾಂಗದ ಕಲೆ, ಸಂಸ್ಕೃತಿ, ಬದುಕು ಬವಣೆಗಳ ಸಂಕಥನ. ಕಾಲಚಕ್ರದಲ್ಲಿ ಸಿಲುಕಿ ನುಜ್ಜುಗುಜ್ಜಾದ ಅನೇಕ ಜನ ಸಮುದಾಯಗಳಲ್ಲಿ ಬಂಜಾರ ಜನಾ೦ಗವೂ ಒಂದು. ‘ಗೋರ್ಮಾಟಿ’ ಅ೦ದರೆ ನಮ್ಮವರು ಎಂಬರ್ಥದಲ್ಲಿ ಬಳಸಲಾಗಿದ್ದು ಭಾರತದ ಮೂಲ ನಿವಾಸಿಗಳಲ್ಲಿ ವರ್ಣರಂಜಿತ ಸ೦ಸ್ಕೃತಿಯನ್ನು ಹೊಂದಿರುವ ಒ೦ದು ಜನ ಸಮುದಾಯ. ಇಡೀ ದೇಶದ ಅನೇಕ ರಾಜ್ಯಗಳಲ್ಲಿ ವಿವಿಧ ಜಾತಿ ಸ್ವರೂಪದಲ್ಲಿ ಹರಿದು ಹಂಚಿಹೋಗಿರುವ ಬಂಜಾರರ ಜೀವನದ ಕತೆಯೇ ಈ ‘ಗೋರ್ಮಾಟಿ’. ವೃತ್ತಿಪರ ಕಲಾವಿದರ ಪರಿಪಕ್ವ ಅಭಿನಯ, ಹಾಡು, ಕುಣಿತ, ವಿಶೇಷ ವಸ್ತ್ರವಿನ್ಯಾಸ, ರಂಗ ಪರಿಕರಗಳಿಂದ…
ತೆಕ್ಕಟ್ಟೆ: ಕೊಮೆ-ಕೊರವಡಿ ವಿವಿಧೋದ್ದೇಶ ಸಹಕಾರಿ ಸಂಘದ ತೆಕ್ಕಟ್ಟೆಯ ಶಾಖೆಯ ಉದ್ಘಾಟನಾ ಕಾರ್ಯಕ್ರಮದ ಅಂಗವಾಗಿ ಯಶಸ್ವೀ ಕಲಾವೃಂದ ಕೊಮೆಯ ‘ಸಿನ್ಸ್ 1999 ಶ್ವೇತಯಾನ – 33’ ಕಾರ್ಯಕ್ರಮದಡಿಯಲ್ಲಿ ‘ಯಕ್ಷ ಗಾನ ವೈಭವ’ ಕಾರ್ಯಕ್ರಮವು ದಿನಾಂಕ 07-06-2024 ರಂದು ನಡೆಯಿತು. ಕಾರ್ಯಕ್ರಮದಲ್ಲಿ ಗೌರವ ಸ್ವೀಕರಿಸಿ ಮಾತನಾಡಿದ ಭಾಗವತ ಜನ್ಸಾಲೆ ರಾಘವೇಂದ್ರ ಆಚಾರ್ಯ “ಅವಕಾಶಗಳಿಗಾಗಿ ಕಾಯವುದು ತರವಲ್ಲ. ಅವಕಾಶಗಳನ್ನು ನಾವು ಕಂಡುಕೊಳ್ಳಬೇಕು. ತೆಕ್ಕಟ್ಟೆ ಯಕ್ಷಗಾನ ಕೇಂದ್ರವು ಇತ್ತೀಚೆಗೆ ಅನೇಕ ಕಲಾವಿದರನ್ನು ಹುಟ್ಟು ಹಾಕುತ್ತಿರುವ ಸಂಸ್ಥೆ. ಮಕ್ಕಳಲ್ಲಿ ಕಲಾಭಿರುಚಿ ಮೂಡಿಸಿ, ಸಾಂಸ್ಕೃತಿಕ ಲೋಕಕ್ಕೆ ಕೊಡುಗೆಯಾಗುವ ಭವಿಷ್ಯದ ಕುಡಿಗೆ ಸಂಸ್ಕಾರ ನೀಡುವ ಕಾರ್ಯವನ್ನು ನಿರಂತರ ಮಾಡುತ್ತಿರುವ ಯಶಸ್ವಿ ಸಂಸ್ಥೆಯನ್ನು ಶ್ಲಾಘಿಸಲೇಬೇಕು.” ಎಂದು ನುಡಿದರು. ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಶೇಖರ ಕಾಂಚನ್ ಮಾತನಾಡಿ “ದೇಶದಾದ್ಯಂತ ಹೆಸರಾಗಿರುವ ನಮ್ಮೂರ ಸಂಸ್ಥೆಯನ್ನು ಸ್ಥಳೀಯ ಸಂಸ್ಥೆಗಳು ಗುರುತಿಸಬೇಕಾದದ್ದು ನಮ್ಮೆಲ್ಲರ ಆದ್ಯ ಕರ್ತವ್ಯ. ಸಾಂಸ್ಕೃತಿಕ ವಲಯಕ್ಕೆ ಅಪಾರ ಕೊಡುಗೆ ನೀಡುತ್ತಾ ಜನಾನುರಾಗಿಯಾಗಿ ಬೆಳೆದು, ಇಪ್ಪತ್ತೈದರ ವರ್ಷಾಚರಣೆ ನಡೆಸಿಕೊಳ್ಳುತ್ತಿರುವಾಗ ಕಲಾಭಿಮಾನಿಗಳು ಪ್ರೋತ್ಸಾಹಿಸಬೇಕು. ಸಂಸ್ಥೆಯನ್ನು ಪ್ರೋತ್ಸಾಹಿಸಿದರೆ ನಮ್ಮೂರ…
ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಪೇತ್ರಿಯ ದಿ. ವೆಂಕಟೇಶ್ ಮರಕಾಲ ಹಾಗೂ ಗಿರಿಜಾ ದಂಪತಿಗಳ ಮಗನಾಗಿ 14.03.1991ರಂದು ರಾಘವೇಂದ್ರ ಪೇತ್ರಿ ಅವರ ಜನನ. 10ನೇ ತರಗತಿವರೆಗೆ ಇವರ ವಿದ್ಯಾಭ್ಯಾಸ. ಯಕ್ಷಗಾನದ ಪ್ರಾಥಮಿಕ ಶಿಕ್ಷಣವನ್ನು ಮಂಜುನಾಥ ಪ್ರಭು, ರಾಧಾಕೃಷ್ಣ ನಾಯ್ಕ್ ಬಳಿ ಕಲಿತು ನಂತರ ಮಂದಾರ್ತಿ ಕೇಂದ್ರದಲ್ಲಿ ಗುರುಗಳಾದ ಹಾರಾಡಿ ರಮೇಶ್ ಗಾಣಿಗ ಇವರಲ್ಲಿ ಹೆಚ್ಚಿನ ವಿದ್ಯೆ ಹೆಜ್ಜೆ ಕಲಿತರು. ಯಕ್ಷಗಾನ ಕ್ಷೇತ್ರಕ್ಕೆ ಬರಲು ಪ್ರೇರಣೆ ಅಂತ ಯಾರಿಲ್ಲ. ಶಾಲಾ ದಿನಗಳಲ್ಲಿ ಒಂದೆರಡು ವೇಷ ಮಾಡಿದ ಇವರು, ಮೇಳಗಳ ಆಟ ನೋಡಿ ನಾನು ಕಲಾವಿದ ಆಗಬೇಕೆಂದು 10ನೇ ತರಗತಿ ನಂತರ ಮಂದಾರ್ತಿ ಕೇಂದ್ರ ಸೇರಿ ಯಕ್ಷಗಾನವನ್ನು ಕಲಿತರು. ನೆಚ್ಚಿನ ಪ್ರಸಂಗಗಳು:- ದೇವಿ ಮಹಾತ್ಮೆ, ಹಿರಣ್ಯಾಕ್ಷ ಕಾಳಗ, ರಾವಣ ವಧೆ, ವಾಲಿ ಸುಗ್ರೀವ, ಭೀಷ್ಮ ವಿಜಯ, ಕಾರ್ತವೀರ್ಯ, ಗದಾಯುದ್ಧ, ಕನಕಾಂಗಿ ಕಲ್ಯಾಣ, ರತಿ ಕಲ್ಯಾಣ, ಸೀತಾ ಪರಿತ್ಯಾಗ ಇತ್ಯಾದಿ. ನೆಚ್ಚಿನ ವೇಷಗಳು:- ಮಹಿಷ, ವೀರಭದ್ರ, ಹಿರಣ್ಯಾಕ್ಷ, ದುಶ್ಯಾಸನ, ವಾಲಿ, ಸುಗ್ರೀವ, ಸಾಲ್ವ, ಕೌಂಡ್ಲಿಕ, ರಕ್ತಚಂಗ,…
ಮಂಗಳೂರು : ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಳ್ಳಾಲ ತಾಲೂಕು ಘಟಕ, ಕರಾವಳಿ ಸಂಗೀತ ಕಲಾವಿದರ ಒಕ್ಕೂಟ (ರಿ.) ದ.ಕ. ಉಡುಪಿ ಜಿಲ್ಲೆ ಮತ್ತು ಶಾರದಾ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್, ದೇವಿನಗರ, ತಲಪಾಡಿ ಇವರ ಸಂಯುಕ್ತ ಸಹಯೋಗದಲ್ಲಿ ‘ಭಾವಯಾನ’ ಕನ್ನಡ ಗೀತ-ಸಂಗೀತ ಕಾರ್ಯಾಗಾರವನ್ನು ದಿನಾಂಕ 13-06-2024ರಂದು ಬೆಳಿಗ್ಗೆ ಗಂಟೆ 9-00ರಿಂದ ಶಾರದಾ ವಿದ್ಯಾನಿಕೇತನ ಡೇ-ಬೋರ್ಡಿಂಗ್ ವಿಭಾಗದ ಸರಸ್ವತಿ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. ಶಾರದಾ ಸಮೂಹ ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ ಡಾ. ಎಂ.ಬಿ. ಪುರಾಣಿಕ್ ಇವರು ಈ ಕಾರ್ಯಾಗಾರದ ಉದ್ಘಾಟನೆ ಮಾಡಲಿದ್ದು, ದ.ಕ. ಜಿಲ್ಲಾ ಕ.ಸಾ.ಪ. ಉಳ್ಳಾಲ ತಾಲೂಕು ಇದರ ಅಧ್ಯಕ್ಷರಾದ ಡಾ. ಧನಂಜಯ ಕುಂಬ್ಳೆ ಇವರು ಅಧ್ಯಕ್ಷತೆ ವಹಿಸಲಿರುವರು. ಮಂಗಳೂರು ಸ್ಮಾರ್ಟ್ ಸಿಟಿಯ ಜನರಲ್ ಮ್ಯಾನೇಜರ್ ಶ್ರೀ ಕೆ.ಎಸ್. ಅರುಣ್ ಪ್ರಭ, ಕರ್ನಾಟಕ ಅರಣ್ಯ ಇಲಾಖೆಯ ನಿವೃತ್ತ ಅಧಿಕಾರಿ ಶ್ರೀ ಕೆರೆಮನೆ ನರಸಿಂಹ ಹೆಗಡೆ, ಕರಾವಳಿ ಸಂಗೀತ ಕಲಾವಿದರ ಒಕ್ಕೂಟ (ರಿ) ಅಧ್ಯಕ್ಷರಾದ ಶ್ರೀ ದೀಪಕ್ರಾಜ್ ಉಳ್ಳಾಲ್ ಮತ್ತು ಶಾರದಾ ವಿದ್ಯಾನಿಕೇತನದ…
ದುಬೈ : ಯಕ್ಷಗಾನ ಅಭ್ಯಾಸ ಕೇಂದ್ರ ದುಬೈ ಯು.ಎ.ಇ. ವತಿಯಿಂದ ದುಬೈ ಯಕ್ಷೋತ್ಸವವು ದಿನಾಂಕ 09-06-2024ರಂದು ಮಧ್ಯಾಹ್ನ 2-00 ಗಂಟೆಯಿಂದ ದುಬೈನ ಕರಮ ಶೇಖ್ ರಷೀದ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಯಕ್ಷಗಾನ ಅಭ್ಯಾಸ ಕೇಂದ್ರದ ಯು.ಎ.ಇ.ಯ ಬಾಲ-ಯುವ ಮತ್ತು ಪರಿಣತ-ಪ್ರೌಢ ಕಲಾವಿದರಿಂದ ‘ದಾಶರಥಿ ದರ್ಶನ’ ಪೌರಾಣಿಕ ಕನ್ನಡ ಪ್ರಸಂಗದ ಯಕ್ಷಗಾನ ಪ್ರದರ್ಶನಗೊಳ್ಳಲಿದೆ. ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಅವರ ಗಾನಸಾರಥ್ಯ, ಯುವ ಭಾಗವತರಾದ ಭವ್ಯಶ್ರೀ ಹರೀಶ ಕುಲ್ಕುಂದ ಮತ್ತು ಕೃಷ್ಣಪ್ರಸಾದ್ ರಾವ್ ಸುರತ್ಕಲ್ ಇವರ ಭಾಗವತಿಕೆಯಲ್ಲಿ ಪ್ರಸಂಗ ಮೂಡಿಬರಲಿದೆ. ಹಿಮ್ಮೇಳದಲ್ಲಿ ಸವಿನಯ ನೆಲ್ಲಿತೀರ್ಥ, ಮಯೂರ ನಾಯ್ಗ, ಪುತ್ತಿಗೆ ವೆಂಕಟೇಶ ಶಾಸ್ತ್ರಿ ಮತ್ತು ಭವಾನಿ ಶಂಕರ ಶರ್ಮ ಭಾಗವಹಿಸುವರು. ಚಕ್ರತಾಳದಲ್ಲಿ ಮಾಸ್ಟರ್ ಭವ್ಯಶ್ರೀ ಅವರ ಪುತ್ರ ಅಗಸ್ತ್ಯ ಕುಲ್ಕುಂದ ಕಾಣಿಸಿಕೊಳ್ಳಲಿದ್ದು, ಜತೆಗೆ ಸ್ಥಳೀಯ ಕಲಾವಿದರು ಹಿಮ್ಮೇಳದಲ್ಲಿ ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಪ್ರಧಾನ ಸಂಚಾಲಕ ಶಶಿಧರ ಶೆಟ್ಟಿ ಬರೋಡ ಮತ್ತು ಯು.ಎ.ಇ.ಯ ಗಣ್ಯರ ಸಮ್ಮುಖದಲ್ಲಿ ಈ ಬಾರಿಯ ‘ಯಕ್ಷಶ್ರೀ ರಕ್ಷಾ ಗೌರವ…
ಸುಂಟಿಕೊಪ್ಪ : ನಾಕೂರು ಶಿರಂಗಾಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಂಜಿಕೆರೆ ಸಮುದಾಯ ಭವನದಲ್ಲಿ ತಲಕಾವೇರಿ ಜ್ಞಾನವಿಕಾಸ ತಂಡದ ವತಿಯಿಂದ ಬೀದಿ ನಾಟಕದ ಮೂಲಕ ಸಾಮಾಜಿಕ ಅರಿವು ಮೂಡಿಸುವ ಕಾರ್ಯಕ್ರಮವು ದಿನಾಂಕ 02-06-2024ರಂದು ನಡೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಕಾನ್ಬೈಲ್ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ತಲಾಕಾವೇರಿ ಜ್ಞಾನವಿಕಾಸ ತಂಡದಿಂದ ವೈಯಕ್ತಿಕ ಆರೋಗ್ಯದ ಬಗ್ಗೆ ಕಾಳಜಿ, ಅಪ್ರಾಪ್ತ ವಯಸ್ಕ ಮಕ್ಕಳಿಗೆ ವಿವಾಹ ನಡೆಸುವುದರಿಂದ ಮುಂದಾಗುವ ದುಷ್ಪಾರಿಣಾಮ, ತಮ್ಮ ಸುತ್ತ ಮುತ್ತಲಿನ ಪರಿಸರ ಸ್ವಚ್ಛತೆ, ಪ್ಲಾಸ್ಟಿಕ್ ಬಳಕೆಯಿಂದ ಪರಿಸರದ ಮೇಲೆ ಆಗುತ್ತಿರುವ ಹಾನಿ ಹಾಗೂ ತಮ್ಮ ಸುತ್ತಮುತ್ತಲಿನಲ್ಲಿ ಹಸಿರು ಪರಿಸರವನ್ನು ಸಂರಕ್ಷಿಸುವ ವಿಚಾರದ ಕುರಿತು ಬೀದಿನಾಟಕದ ಮೂಲಕ ಅರಿವು ಮೂಡಿಸಲಾಯಿತು. ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಕಾರ್ಯದರ್ಶಿ ಚಂದ್ರಶೇಖರ್ ಉದ್ಘಾಟಿಸಿದರು. ವೇದಿಕೆಯಲ್ಲಿ ಕಾನ್ಬೈಲ್ ಸರಕಾರಿ ಪ್ರೌಢಶಾಲೆಯ ಶಿಕ್ಷಕರಾದ ಮೂರ್ತಿ, ಗ್ರಾಮ ಪಂಚಾಯತ್ ಸದಸ್ಯೆ ಪ್ರೇಮಾ, ಜ್ಞಾನವಿಕಾಸ ಕೇಂದ್ರ ಸಮನ್ವಯ ಅಧಿಕಾರಿ ಮಾಲಿನಿ, ಒಕ್ಕೂಟದ ಅಧ್ಯಕ್ಷೆ ಖತೀಜ, ಸೇವಾ ಪ್ರತಿನಿಧಿ ಯಶೋಧ ಬಸವರಾಜ್ ಉಪಸ್ಥಿತರಿದ್ದರು. ಪ್ರೌಢಶಾಲೆಯ…
ಮಂಗಳೂರು : ಜರ್ನಿ ಥೇಟರ್ ಗ್ರೂಪ್ (ರಿ.) ಮತ್ತು ಮಾಂಡ್ ಸೊಭಾಣ್ ಕಲಾಂಗಣ್ ಶಕ್ತಿನಗರ ಇವುಗಳ ಆಶ್ರಯದಲ್ಲಿ ‘ಕ್ರಾಸ್ ಫೇಡ್’ ಮೂರು ದಿವಸಗಳ ಬೆಳಕಿನ ವಿನ್ಯಾಸದ ಕಾರ್ಯಾಗಾರವನ್ನು ದಿನಾಂಕ 25-06-2024ರಿಂದ 27-06-2024ರವರೆಗೆ ಮಂಗಳೂರಿನ ಶಕ್ತಿನಗರದ ಕಲಾಂಗಣ್ ಇಲ್ಲಿ ಆಯೋಜಿಸಲಾಗಿದೆ. ರಂಗಾಯಣದ ಕೃಷ್ಣಕುಮಾರ್ ನಾರ್ಣಕಜೆ ಮತ್ತು ನೀನಾಸಂನ ಮಧುಸೂದನ್ ಇವರುಗಳು ಈ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿರುವರು. ಹೆಚ್ಚಿನ ಮಾಹಿತಿ ಹಾಗೂ ನೋಂದಾವಣೆಗಾಗಿ 9380412518 ಸಂಪರ್ಕಿಸಿರಿ.
ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಮಾಸ್ತಿ ವೆಂಕಟೇಶ ಅಯ್ಯಂಗಾರರ 133ನೆಯ ಜನ್ಮದಿನೋತ್ಸವ ಕಾರ್ಯಕ್ರಮವು ದಿನಾಂಕ 06-06-2024ರಂದು ನಡೆಯಿತು. ಈ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿಯವರು ಮಾತನಾಡಿ “ಉತ್ತಮ ಆಡಳಿತಗಾರರಾಗಿದ್ದ ಮಾಸ್ತಿ ವೆಂಕಟೇಶ ಅಯ್ಯಂಗಾರ್ ಕನ್ನಡ ಸಾಹಿತ್ಯ ಪರಿಷತ್ತನ್ನು ಬೆಳೆಸಿದರು, ಜೀವನ ಪತ್ರಿಕೆಯನ್ನು ನಡೆಸಿದರು. ಬರಹಗಾರರಿಗೆ ಬೆಂಬಲವಾಗಿ, ಪುಸ್ತಕ ಪ್ರಕಾಶನಕ್ಕೆ ಸಹಾಯ ಮಾಡಿದ್ದರಿಂದ ಕನ್ನಡ ಸಾಹಿತ್ಯ ಬಹುಮುಖಿಯಾಗಿ ಬೆಳೆಯುವುದು ಸಾಧ್ಯವಾಯಿತು. ಕರ್ಣಾಟಕ ಸಾಹಿತ್ಯ ಪರಿಷತ್ತು ಸ್ಥಾಪನೆಯಾಗಬೇಕು ಎಂದು ಸೂಚಿಸಿದವರಲ್ಲಿ ಮಾಸ್ತಿಯವರೂ ಪ್ರಮುಖರು. 1943ರಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಉಪಾಧ್ಯಕ್ಷರಾದ ಮಾಸ್ತಿಯವರ ಮುಖ್ಯವಾದ ಕೊಡುಗೆ ಕನ್ನಡ ಸಾಹಿತ್ಯ ಪರಿಷತ್ತಿನ ವಿಕೇಂದ್ರೀಕರಣ. ಅವರ ಕಾಲದಲ್ಲಿ ಸದಸ್ಯರ ಸಂಖ್ಯೆ 2,500ಕ್ಕೆ ಏರಿತು. ಮಹಿಳಾ ಶಾಖೆ ಕೂಡ ಆರಂಭವಾಯಿತು. ‘ಕನ್ನಡ ಸರಸ್ವತಿ ಹಳ್ಳಿಗೆ ಬಂದಳು’ ಎನ್ನುವ ಯೋಜನೆಯಡಿ ಹಳ್ಳಿ-ಹಳ್ಳಿಗಳಲ್ಲಿಯೂ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕ್ರಮಗಳು ನಡೆದವು. ಮಾಸ್ತಿಯವರು ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯ ಕಲಾಪಗಳಿಗೆ ಎಷ್ಟೇ ದೂರ ಪ್ರಯಾಣ ಮಾಡಿದರೂ…