Subscribe to Updates
Get the latest creative news from FooBar about art, design and business.
Author: roovari
ಮಂಗಳೂರು : ಖ್ಯಾತ ತುಳು ರಂಗಭೂಮಿ ನಟ ಅಶೋಕ್ ಶೆಟ್ಟಿ ಅಂಗ್ಲಮೊಗರು 13 ಆಗಸ್ಟ್ 2024ರ ಸೋಮವಾರ ಬೆಳಿಗ್ಗೆ ನಿಧನರಾದರು ಅವರಿಗೆ 53ವರ್ಷ ವಯಸ್ಸಾಗಿತ್ತು. ಅಂಬ್ಲಮೊಗರುವಿನ ಮನೆಯಲ್ಲಿ ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ಮೃತಪಟ್ಟಿದ್ದಾರೆ. ವೃತ್ತಿಪರ ಕಲಾವಿದರಾದ ಅಶೋಕ್ ಇವರು ವಿಜಯ ಕುಮಾರ್ ಕೊಡಿಯಾಲ್ ಬೈಲ್ ಸಾರಥ್ಯದ ಕಲಾಸಂಗಮ ನಾಟಕ ತಂಡದಲ್ಲಿ ಸುದೀರ್ಘ ಕಾಲ ಕಲಾ ಸೇವೆ ಸಲ್ಲಿಸಿದ್ದರು. ನಾಟಕ, ಸಿನೆಮಾ, ಧಾರವಾಹಿಗಳಲ್ಲಿ ನಟಿಸಿದ್ದ ಅವರು ಅನೇಕ ನಾಟಕಗಳನ್ನೂ ರಚಿಸಿದ್ದರು. ಇವರು ಒರಿಯರ್ದೊರಿ ಅಸಲ್ ತುಳು ಸಿನಿಮಾದಲ್ಲಿ ನಿರ್ವಹಿಸಿದ ತೆಂಗಿನ ಕಾಯಿ ಕೀಳುವ ನಾಥುವಿನ ಪಾತ್ರ ಅಪಾರ ಜನಮನ್ನಣೆ ಗಳಿಸಿತ್ತು. ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಅಪಾರ ಬಂಧು, ಮಿತ್ರರನ್ನು ಅಗಲಿದ್ದಾರೆ.
ಬೆಂಗಳೂರು : ಕರ್ನಾಟಕ ಸರ್ಕಾರವು ರಾಜ್ಯದ ಆರು ರಂಗಾಯಣಗಳಿಗೆ ನಿರ್ದೇಶಕರನ್ನು ನೇಮಕ ಮಾಡಿದೆ. ನಿರ್ದೇಶಕರಾಗಿ ಆಯ್ಕೆಯಾದವರ ಪಟ್ಟಿಯನ್ನು 12 ಆಗಸ್ಟ್ 2024 ರಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಬಿಡುಗಡೆಗೊಳಿಸುವ ಮೂಲಕ ರಾಜ್ಯದ ರಂಗಭೂಮಿ ಚಟುವಟಿಕೆಗಳಿಗೆ ದೊಡ್ಡ ಮಟ್ಟದಲ್ಲಿ ಚಾಲನೆ ನೀಡಿದ್ದಾರೆ. ಮೈಸೂರು ರಂಗಾಯಣದ ನಿರ್ದೇಶಕರಾಗಿ ಶ್ರೀ ಸತೀಶ್ ತಿಪಟೂರು, ಧಾರವಾಡ ರಂಗಾಯಣದ ನಿರ್ದೇಶಕರಾಗಿ ಶ್ರೀ ರಾಜು ತಾಳಿಕೋಟೆ, ಶಿವಮೊಗ್ಗ ರಂಗಾಯಣದ ನಿರ್ದೇಶಕರಾಗಿ ಶ್ರೀ ಪ್ರಸನ್ನ ಡಿ ಸಾಗರ, ಕಲಬುರ್ಗಿ ರಂಗಾಯಣದ ನಿರ್ದೇಶಕರಾಗಿ ಡಾ. ಸುಜಾತ ಜಂಗಮ ಶೆಟ್ಟಿ, ವೃತ್ತಿ ರಂಗಭೂಮಿ ರಂಗಾಯಣ ದಾವಣಗೆರೆಗೆ ನಿರ್ದೇಶಕರಾಗಿ ಶ್ರೀ ಮಲ್ಲಿಕಾರ್ಜುನ ಕಡಕೋಳ ಹಾಗೂ ಯಕ್ಷರಂಗಾಯಣ ಕಾರ್ಕಳದ ನಿರ್ದೇಶಕರಾಗಿ ಶ್ರೀ ವೆಂಕಟರಮಣ ಐತಾಳ ಇವರನ್ನು ನೇಮಕ ಮಾಡಲಾಗಿದೆ ಎಂದು ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ. ಈ ಸಂಬಂಧ ಅಧಿಕೃತ ಸರ್ಕಾರಿ ಆದೇಶವನ್ನು ಹೊರಡಿಸಲಾಗಿದ್ದು, ನಿರ್ದೇಶಕರು ಅಧಿಕಾರ ವಹಿಸಿಕೊಂಡ ಕೂಡಲೇ ರಂಗಾಯಣಗಳ ಕಾರ್ಯ ಚಟುವಟಿಕೆಗಳನ್ನು ವೇಗಗತಿಯಲ್ಲಿ…
ಪುತ್ತೂರು : ರಾಮಕೃಷ್ಣ ಮಿಷನ್ ಮಂಗಳಾದೇವಿ ಮಂಗಳೂರು ಮತ್ತು ಮಂಗಳೂರು ವಿಶ್ವವಿದ್ಯಾನಿಲಯ ಸ್ವಾಮಿ ವಿವೇಕಾನಂದ ಅಧ್ಯಯನ ಕೇಂದ್ರ ಮಂಗಳಗಂಗೋತ್ರಿ ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ಪುತ್ತೂರಿನ ನೆಹರು ನಗರ, ವಿವೇಕಾನಂದ ಆವರಣದಲ್ಲಿರುವ ವಿವೇಕಾನಂದ ಪದವಿಪೂರ್ವ ವಿದ್ಯಾಲಯ ಇದರ ಸಹಯೋಗದೊಂದಿಗೆ ‘ವಿವೇಕ ಜಾಗೃತಿ’ ಎಂಬ ಶೀರ್ಷಿಕೆಯೊಂದಿಗೆ ಉಪನ್ಯಾಸ ಕಾರ್ಯಕ್ರಮವು ದಿನಾಂಕ 14 ಆಗಸ್ಟ್ 2024ರಂದು ಮಧ್ಯಾಹ್ನ 2-00 ಗಂಟೆಗೆ ಪುತ್ತೂರಿನ ವಿವೇಕಾನಂದ ಪದವಿಪೂರ್ವ ವಿದ್ಯಾಲಯದ ವೈದೇಹಿ ಸಭಾಂಗಣದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಮೈಸೂರಿನ ರಾಮಕೃಷ್ಣ ನೈತಿಕ ಮತ್ತು ಆಧ್ಯಾತ್ಮಿಕ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಾದ ಸ್ವಾಮಿ ಮಹಾಮೇಧಾನಂದಜಿ ಇವರು ಭಾಗವಹಿಸಿ “ನನ್ನ ಏಳಿಗೆಗೆ ನಾನೇ ಶಿಲ್ಪಿ” ಎಂಬ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘ ಇದರ ಆಡಳಿತ ಮಂಡಳಿಯ ಉಪಾಧ್ಯಕ್ಷರಾದ ಶ್ರೀ ಸತೀಶ್ ರಾವ್ ವಹಿಸಲಿದ್ದು, ಕಾರ್ಯಕ್ರಮದಲ್ಲಿ ನಿವೃತ್ತ ಯೋಧರಾದ ಬೆಳ್ಳಾಲ ಗೋಪಿನಾಥ್ ರಾವ್, ವಿವೇಕಾನಂದ ಪದವಿಪೂರ್ವ ವಿದ್ಯಾಲಯದ ಆಡಳಿತ ಮಂಡಳಿಯ ಅಧ್ಯಕ್ಷರಾದ ರವೀಂದ್ರ…
ಪುತ್ತೂರು : ಸಾಹಿತ್ಯ ಕೂಟ ಮಂಗಳೂರು ಇವರ ಆಶ್ರಯದಲ್ಲಿ ಪುತ್ತೂರಿನ ಬಾಲ್ನಾಡಿನ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ದಿನಾಂಕ 11 ಆಗಸ್ಟ್ 2024ರಂದು ‘ಸಾಹಿತ್ಯ ಕಲರವ’ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಖ್ಯಾತ ಕವಿ, ಲೇಖಕ ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಇವರು ‘ಕಾವ್ಯ ಒಂದು ರಸಾನುಭವ’ ಎನ್ನುವ ವಿಷಯದ ಕುರಿತು ಉಪನ್ಯಾಸ ನೀಡಿದರು. “ಕಾವ್ಯದ ಶಕ್ತಿ ಕವಿಯಲ್ಲಿ ಅಡಕವಾಗಿರುತ್ತದೆ. ಅದು ಆತನ ಕವಿತ್ವವನ್ನು ಪ್ರಕಟಗೊಳಿಸುತ್ತದೆ. ವಿದ್ಯಾರ್ಥಿಗಳು ಬರೆಯುವ ಕಡೆ ಹೆಚ್ಚಿನ ಗಮನ ವಹಿಸಬೇಕು. ಅದುವೇ ಒಂದು ವಿಶೇಷವಾದ ರಸಾನುಭವ” ಎಂದು ಹೇಳಿದರು. ಹವ್ಯಾಸಿ ಬರಹಗಾರ ಮತ್ತು ಎಸ್.ವಿ.ಎಸ್. ಕಾಲೇಜಿನ ಪ್ರಾಧ್ಯಾಪಕ ಕಿಟ್ಟು ರಾಮಕುಂಜ ‘ಮಕ್ಕಳಲ್ಲಿ ಸಾಹಿತ್ಯ ಅಭಿರುಚಿ ಏಕಿರಬೇಕು’ ಎನ್ನುವ ವಿಷಯದ ಕುರಿತು ಉಪನ್ಯಾಸ ನೀಡುತ್ತಾ, “ಸಾಹಿತ್ಯಾಸಕ್ತಿ ವಿದ್ಯಾರ್ಥಿಗಳಲ್ಲಿ ಹೆಚ್ಚು ಜ್ಞಾನ ಪಡೆಯುವುದಕ್ಕೆ ಸಹಕಾರಿಯಾಗುತ್ತದೆ. ಜ್ಞಾನಾರ್ಜನೆಗೆ ಸಾಹಿತ್ಯವೇ ಒಂದು ಪ್ರಬಲವಾದ ಶಕ್ತಿ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಸಾಹಿತ್ಯ ಸೃಜನೆಯತ್ತ ಮನಸ್ಸು ಮಾಡಬೇಕು. ಇಂತಹ ಕಾರ್ಯಕ್ರಮದ ಮುಖಾಂತರ…
ತೆಕ್ಕಟ್ಟೆ : ಶ್ರೀ ಸಿದ್ಧಿವಿನಾಯಕ ಕ್ಯಾಶೂ ಇಂಡಸ್ಟ್ರೀಸ್ ಕೆದೂರು ಪ್ರಾಯೋಜನೆಯಲ್ಲಿ ಯಶಸ್ವೀ ಕಲಾವೃಂದ ಕೊಮೆ ತೆಕ್ಕಟ್ಟೆ ಸಂಯೋಜನೆಯಲ್ಲಿ ದಿನಾಂಕ 10 ಆಗಸ್ಟ್ 2024ರಂದು ತೆಕ್ಕಟ್ಟೆ ಹಯಗ್ರೀವದಲ್ಲಿ ಕುಂದಾಪುರ ಕನ್ನಡ ದಿನಾಚರಣೆ ಕಾರ್ಯಕ್ರಮವು ನಡೆಯಿತು. ಈ ಕಾರ್ಯಕ್ರಮದಲ್ಲಿ ಕುಂದಗನ್ನಡ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿದ ಕುಂದಗನ್ನಡದ ಹಿರಿಯ ಸಾಹಿತಿ, ವಕೀಲ ಎ.ಎಸ್.ಎನ್. ಹೆಬ್ಬಾರ್ “ಕುಂದಗನ್ನಡದ ಸೊಗಡನ್ನು ದೇಶ ವಿದೇಶಗಳೂ ಕೊಂಡಾಡಿದೆ. ಸೆಕಿ ಗೆಮಿತ್, ಎದಿ ಹೊಯಿಲ್, ಹಾಸತ್ ಹೊದಿತ್ ಹೀಗೆ ಕುಂದಗನ್ನಡ ಸಹಸ್ರ ಸಹಸ್ರ ಶಬ್ದವು ಕುಂದಗನ್ನಡದಲ್ಲಿ ಹಾಸಿ ಹೋಗಿದೆ. ಆಷಾಡದಲ್ಲಿ ಕುಂದಾಪುರ ಕನ್ನಡ ದಿನವನ್ನಾಗಿ ನಿಗದಿಸಿ, ದೇಶ ವಿದೇಶದಲ್ಲಿ ಆಚರಿಸುವ ಹಾಗೆ ಸಂಘಟಕರನ್ನು ಹುರಿದುಂಬಿಸಿದವರು ವಸಂತ ಗಿಳಿಯಾರ್. ಇದಕ್ಕೆ ಕುಂದಗನ್ನಡ ಸಾಹಿತ್ಯವನ್ನು ಯಕ್ಷಗಾನದಲ್ಲಿ ಛಂದೋಬದ್ಧವಾಗಿ ಯಕ್ಷಗಾನ ಪ್ರಸಂಗವನ್ನು ರಚಿಸುವುದು ಸಾಧಾರಣ ವಿಷಯವಲ್ಲ. ಪ್ರಸಾದ್ ಮೊಗೆಬೆಟ್ಟು ಈ ಪ್ರಸಂಗವನ್ನು ರಚಿಸಿ ಕುಂದಗನ್ನಡದ ಜೊತೆಗೆ ಬೆರೆತು ಹೋದರು. ಅವರನ್ನು ಎಂದೂ ಕುಂದಗನ್ನಡದ ಅಭಿಮಾನಿಗಳು ಮರೆಯಲಾರರು” ಎಂದು ಹೇಳಿದರು. ಮುಖ್ಯ ಅತಿಥಿ ಜನ ಸೇವಾ ಟ್ರಸ್ಟಿನ ವಸಂತ್…
ಉಡುಪಿ : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕದಿಂದ ಗ್ರಂಥ ಪಾಲಕರ ದಿನಾಚರಣೆ ಕಾರ್ಯಕ್ರಮವು 12 ಆಗಸ್ಟ್ 2024ರ ಸೋಮವಾರದಂದು ಉಡುಪಿಯ ಅಜ್ಜರಕಾಡಿನ ಕೇಂದ್ರ ಗ್ರಂಥಾಲಯದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಗ್ರಂಥಾಲಯ ಅಧಿಕಾರಿ ನಳಿನಿ ಜಿ. ಐ. ಹಾಗೂ ಜಿಲ್ಲಾ ಕೇಂದ್ರ ಗ್ರಂಥಾಲಯದ ಪ್ರಥಮ ದರ್ಜೆ ಸಹಾಯಕಿ ಪ್ರೇಮಾ ಎಂ. ಇವರನ್ನು ಕ. ಸಾ. ಪ. ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್. ಪಿ. ಅವರು ಗೌರವಿಸಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಕಾಪು ತಾಲೂಕು ಘಟಕದ ಅಧ್ಯಕ್ಷ ಪುಂಡಲೀಕ ಮರಾಠೆ, ಜಿಲ್ಲಾ ಕ. ಸಾ. ಪ. ಸಹಕಾರ್ಯದರ್ಶಿ ಮೋಹನ್ ಉಡುಪ ಹಂದಾಡಿ, ಉಡುಪಿ ತಾಲೂಕು ಘಟಕದ ಗೌರವ ಕಾರ್ಯದರ್ಶಿಗಳಾದ ಜನಾರ್ದನ್ ಕೊಡವೂರು, ರಂಜಿನಿ ವಸಂತ್ ಸದಸ್ಯರಾದ ವಸಂತ್, ಮನೆಯೇ ಗ್ರಂಥಾಲಯದ ಸಂಚಾಲಕರಾದ ರಾಘವೇಂದ್ರ ಪ್ರಭು ಕರ್ವಾಲು ಮತ್ತು ಇತರರು ಉಪಸ್ಥಿತರಿದ್ದರು.
ಮೈಸೂರು : ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ ಉಡುಪಿ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್, ಮಹಾತ್ಮಾಗಾಂಧಿ ಮೆಮೋರಿಯಲ್ ಕಾಲೇಜು ಉಡುಪಿ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮೈಸೂರು, ಕನ್ನಡ ಸಾಹಿತ್ಯ ಕಲಾಕೂಟ ಮೈಸೂರು ಇದರ ಸಹಯೋಗದಲ್ಲಿ ಶ್ರೀಮತಿ ಟಿ. ವಿಮಲಾ ವಿ. ಪೈ ಪ್ರಾಯೋಜಿತ ‘ರಾಷ್ಟ್ರಕವಿ ಗೋವಿಂದ ಪೈ ಪ್ರಶಸ್ತಿ’ ಪ್ರದಾನ ಕಾರ್ಯಕ್ರಮವು ದಿನಾಂಕ 14 ಆಗಸ್ಟ್ 2024ರಂದು ಮೈಸೂರಿನ ತ್ಯಾಗರಾಜ ರಸ್ತೆಯಲ್ಲಿರುವ ಜಿಲ್ಲಾಪತ್ರಕರ್ತರ ಭವನದಲ್ಲಿ ನಡೆಯಲಿದೆ. 2023ನೇ ಸಾಲಿನ ‘ರಾಷ್ಟ್ರಕವಿ ಗೋವಿಂದ ಪೈ ಪ್ರಶಸ್ತಿ’ಯನ್ನು ಪುರಾತತ್ತ್ವ ಶಾಸ್ತ್ರಜ್ಞ ಪ್ರೊ. ಎ.ವಿ. ನರಸಿಂಹಮೂರ್ತಿ ಇವರಿಗೆ ಪ್ರದಾನ ಮಾಡಲಾಗುವುದು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂ.ಜಿ.ಎಂ. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಲಕ್ಷ್ಮೀ ನಾರಾಯಣ ಕಾರಂತ ವಹಿಸಲಿದ್ದು, ಹಿರಿಯ ಲೇಖಕರು ಹಾಗೂ ವಿಮರ್ಶಕರಾದ ಶ್ರೀ ಬೆಳಗೋಡು ರಮೇಶ್ ಭಟ್ ಪ್ರಶಸ್ತಿ ಪುರಸ್ಕೃತರ ಕುರಿತು ಅಭಿನಂದನಾ ಭಾಷಣ ಮಾಡಲಿರುವರು. ವೇದಿಕೆಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀ ಮಡ್ಡೀಕೆರೆ ಗೋಪಾಲ್ ಮತ್ತು…
ಪೂರ್ಣ ಸಂಸ್ಕೃತಿ ಆಚಾರ ವಿಚಾರಗಳು ಮರೆಯಾಗುತ್ತಿರುವ ಕಾಲಘಟ್ಟದಲ್ಲಿ ಇಂದಿಗೂ ತಮ್ಮ ಪೂರ್ವಿಕರು ಆಚರಿಸಿಕೊಂಡು ಬಂದಂತಹ ಸಂಪ್ರದಾಯವನ್ನು ಜತನದಿಂದ ಕಾಪಿಟ್ಟು ಮುಂದುವರೆಸಿಕೊಂಡು ಹೋಗುತ್ತಿರುವುದಕ್ಕೆ ಕೊಡಗಿನ ಮೂಲನಿವಾಸಿ ಜನಾಂಗಗಳಲ್ಲಿ ಒಂದಾದ ನರಿಯಂದಡ ಗ್ರಾಮದಲ್ಲಿರುವ ಅರಮನೆಪಾಲೆ ಜನಾಂಗದವರು ಆಚರಿಸಿಕೊಂಡು ಬರುತ್ತಿರುವ ‘ಆಟಿ ಕಳಂಜ’ (ಕಕ್ಕತಜ್ಜಿ) ಆಚರಣೆಯೇ ಸಾಕ್ಷಿಯಾಗಿದೆ. ಮುಂಗಾರಿನ ಮಳೆಯ ಆಷಾಢ ತಿಂಗಳಿನಲ್ಲಿ ಕೊಡಗಿನಲ್ಲಿ ಆಟಿ ಹಬ್ಬವನ್ನು ವಿಶಿಷ್ಟವಾಗಿ ಆಚರಿಸಿಕೊಂಡು ಬರಲಾಗುತ್ತಿದೆ. ಈ ಆಟಿ (ಕಕ್ಕಡ) 18. ಮುಗಿದ ಬಳಿಕ ಆಚರಿಸುವ ಒಂದು ವೈಶಿಷ್ಟ್ಯಪೂರ್ಣ ಆಚರಣೆಯೇ ‘ಆಟಿ ಕಳಂಜ’ ಇದು ಕೊಡಗಿನ ಮೂಲ ನಿವಾಸಿ ಜನಾಂಗಗಳಲ್ಲಿ ಒಂದಾಗಿರುವ ಅರಮನೆ ಪಾಲೆ ಜನಾಂಗದವರು ಮಾತ್ರ ಆಚರಿಸಿಕೊಂಡು ಬರುತ್ತಿರುವುದು ಹಾಗೂ ಜಿಲ್ಲೆಯಲ್ಲಿ ಏಕೈಕ ಆಚರಣೆಯಾಗಿರುವುದು ವಿಶೇಷ! ಆಟಿ 18. ಆಚರಣೆ ಕಳೆದ ಬಳಿಕ ಆಟಿ ಕಳಂಜ ಎನ್ನುವ ವಿಶಿಷ್ಟ ಆಚರಣೆ ಪಾಲಿಸುತ್ತಾರೆ. ಲಯಬದ್ದ ವಾದ್ಯದ ಶಬ್ದಕ್ಕೆ ಪ್ರಾಸಬದ್ಧವಾಗಿ ಹಾಡು ಹೇಳುತ್ತಾ ಸಾಗುವ ತಂಡದಲ್ಲಿ ಅಜ್ಜಿ ವಿಶಿಷ್ಟ ವೇಷಭೂಷಣಗಳೊಂದಿಗೆ ನೆಕ್ಕಿ (ಗಾಳಿ) ಸೊಪ್ಪು ಎಂದು ಕರೆಯಲಾಗುವ ಒಂದು ಬಗೆಯ ಸೊಪ್ಪಿನ…
ಮಂಜೇಶ್ವರ : ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕ, ಕಾಸರಗೋಡು ಜಿಲ್ಲಾ ಕನ್ನಡ ಲೇಖಕರ ಸಂಘ, ಶಂಪಾ ಪ್ರತಿಷ್ಠಾನ ಬೆಂಗಳೂರು, ವಿಕಾಸ ಮೀಯಪದವು ಇವರ ಸಂಯುಕ್ತಾಶ್ರಯದಲ್ಲಿ ಮೀಯಪದವು ಶ್ರೀ ವಿದ್ಯಾವರ್ಧಕ ಪ್ರೌಢ ಶಾಲೆಯ ನಾರಾಯಣೀಯಂ ರಂಗಮಂದಿರದಲ್ಲಿ ಕಾಸರಗೋಡು ಜಿಲ್ಲೆಯ ವಿವಿಧ ಕನ್ನಡಪರ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ‘ಡಾ. ನಾ. ಮೊಗಸಾಲೆ ಪೌರಾಭಿನಂದನೆ ಹಾಗೂ ಸಾಹಿತ್ಯ ಸಮೀಕ್ಷೆ’ ಕಾರ್ಯಕ್ರಮವನ್ನು ದಿನಾಂಕ 10-08-2024ರಂದು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕ ವಿಠಲ ಶೆಟ್ಟಿ ಬೇಲಾಡಿ ಇವರು ಮಾತನಾಡಿ “ಕಾಸರಗೋಡಿನ ಕೋಳ್ಯೂರಿನಲ್ಲಿ ಜನಿಸಿ ಕುಗ್ರಾಮದಂತಿದ್ದ ಕಾಂತಾವರದಲ್ಲಿ ನೆಲಸಿ, ಕಾಂತಾವರ ಕನ್ನಡ ಸಂಘ, ಅಲ್ಲಮ ಪ್ರಭು ಪೀಠ ಸ್ಥಾಪಿಸಿ, ಆರು ದಶಕಗಳ ಕಾಲ ವೈದ್ಯಕೀಯ, ಸಾಹಿತ್ಯ, ಸಾಂಸ್ಕೃತಿಕ ರಂಗಗಳಲ್ಲಿ ಅಮೋಘ ಸೇವೆ ಸಲ್ಲಿಸಿ ಕಾಂತಾವರದ ಕೀರ್ತಿಯನ್ನು ಕನ್ನಡ ನಾಡಿನಾದ್ಯಂತ ಪಸರಿಸಿದವರು ಡಾ. ನಾ. ಮೊಗಸಾಲೆ. 25 ಕಾದಂಬರಿಗಳು, 15 ಕವನಸಂಕಲನಗಳು, 6 ಕಥಾಸಂಕಲನಗಳು ಸೇರಿದಂತೆ ಐವತ್ತಕ್ಕೂ ಅಧಿಕ ಮಹತ್ವಪೂರ್ಣ…
ಕಾಸರಗೋಡು : ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನ ಶ್ರೀ ಎಡನೀರು ಮಠದ ಪರಮ ಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಗಳವರ ನಾಲ್ಕನೇ ವರ್ಷದ ಚಾತುರ್ಮಾಸ್ಯ ವ್ರತಾಚರಣೆ ಸಂದರ್ಭದಲ್ಲಿ ನಡೆಯುತ್ತಿರುವ ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ದಿನಾಂಕ 14 ಆಗಸ್ಟ್ 2024ರಂದು ಸಂಜೆ 6-00 ಗಂಟೆಗೆ ದೂರದರ್ಶನ ಕಲಾವಿದೆ ವಿದುಷಿ ಅಯನಾ ಪೆರ್ಲ ಇವರ ಶಾಸ್ತ್ರೀಯ ಭರತನಾಟ್ಯ ಕಾರ್ಯಕ್ರಮವನ್ನು ಎಡನೀರು ಮಠದ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ದೆಹಲಿ, ಚೆನ್ನೈ, ಕೊಲ್ಕೊತ್ತಾ, ಹೈದರಾಬಾದ್, ಬೆಂಗಳೂರು ಮುಂತಾದೆಡೆಗಳಲ್ಲಿ ಹಲವು ರಾಷ್ಟ್ರೀಯ ಮಟ್ಟದ ಕಾರ್ಯಕ್ರಮಗಳಲ್ಲಿ ಭಾಗವಹಿಸಿರುವ ವಿದುಷಿ ಅಯನಾ ಪೆರ್ಲ ಸ್ವತಃ ನೃತ್ಯ ಸಂಯೋಜಕಿಯೂ ಆಗಿದ್ದಾರೆ.