Subscribe to Updates
Get the latest creative news from FooBar about art, design and business.
Author: roovari
‘ಗಾಡ್ is not ರೀಚಬಲ್’ ಯುವ ಕಥೆಗಾರ ರವೀಂದ್ರ ಮುದ್ದಿಯವರ ಮೊದಲ ಕಾದಂಬರಿ. ತನ್ನ ವಿಶಿಷ್ಟ ಶೀರ್ಷಿಕೆಯಿಂದಲೇ ಗಮನ ಸೆಳೆಯುವ ಇದು ಒಂದು ಭಿನ್ನ ಅನುಭವ ನೀಡುವ ಕಾದಂಬರಿ. ನೇರ ನಿರೂಪಣೆಯ, ಸರಳ ಶೈಲಿಯ, ಎಲ್ಲಿಯೂ ಕೆಳಗಿಡಬೇಕೆಂದು ಅನ್ನಿಸದೆ ಒಂದೇ ಓಟಕ್ಕೆ ಓದಿಸಿಕೊಂಡು ಹೋಗುವ ಇದು ಮೇಲ್ನೋಟಕ್ಕೆ ಒಂದು ಜನಪ್ರಿಯ ಥ್ರಿಲ್ಲರ್ ಎಂದು ಫಕ್ಕನೆ ಅನ್ನಿಸಿದರೂ ಓದಿ ಮುಗಿಸಿದ ನಂತರ ಮರೆತು ಹೋಗುವಂಥ ಕಾದಂಬರಿಯಲ್ಲ, ಬದಲಾಗಿ ಮನಸ್ಸಿನ ಮೂಲೆಗಳಲ್ಲಿ ತಂಗಿ ನಿಂತು ಕಾಡುವ ಗುಣ ಇದಕ್ಕಿದೆ ಅನ್ನುವ ಭಾವನೆ ಹುಟ್ಟಿಸುತ್ತದೆ. ದೇವರು ಅನ್ನುವ ಅಮೂರ್ತ ಪರಿಕಲ್ಪನೆಯು ಮನುಷ್ಯನ ನಂಬಿಕೆಯ ಪದರಗಳಲ್ಲಿ ಬೇರುಬಿಟ್ಟು ಅವನನ್ನು ಅಲುಗಾಡಿಸುವ ಕೆಲಸವನ್ನು ಹೇಗೆ ಮಾಡುತ್ತದೆ ಅನ್ನುವುದಕ್ಕೆ ಕಾದಂಬರಿಯ ಹಲವು ಕಥಾಪಾತ್ರಗಳು ಸಾಕ್ಷಿಯಾಗುತ್ತವೆ. ಮನುಷ್ಯರ ನಡುವಣ ಪ್ರೀತಿ ಹಾಗೂ ಸ್ನೇಹ ಸಂಬಂಧಗಳೇ ದೇವರೆಂಬ ನಂಬಿಕೆ ಮನಸ್ಸಿನಲ್ಲಿ ಬೇರೂರುವಂತಾದರೆ ಆ ದೇವರನ್ನು ಮುಟ್ಟುವುದು ತಡವಾದರೂ ಅಸಾದ್ಯವಾದ ಕಾರ್ಯವೇನಲ್ಲ. ಕಥಾನಾಯಕ ಗೌತಮ್ ಆರಂಭದಲ್ಲಿ ತಾನು ತನ್ನ ಸರ್ವಸ್ವವನ್ನೂ ಕಳೆದುಕೊಂಡು ಬಿಟ್ಟೆ ಎಂಬ…
ಮಂಗಳೂರು : ಜಾಗೃತಿ ಟ್ರಸ್ಟ್ (ರಿ.) ಬೆಂಗಳೂರು ಇದರ ವತಿಯಿಂದ ಬಿ.ಎಸ್. ಮಂಜುನಾಥ್ ಇವರ ಪುಸ್ತಕ ಬಿಡುಗಡೆ, ಕವಿಗೋಷ್ಠಿ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭವನ್ನು ದಿನಾಂಕ 23 ನವೆಂಬರ್ 2025ರಂದು ಬೆಳಗ್ಗೆ 10-00 ಗಂಟೆಗೆ ಮಂಗಳೂರಿನ ಕಿನ್ನಿಗೋಳಿ ಯುಗಪುರುಷ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಸಭಾ ಕಾರ್ಯಕ್ರಮದ ಬಳಿಕ ಗಡಿನಾಡ ಸಾಂಸ್ಕೃತಿಕ ಕಲಾ ವೇದಿಕೆ (ರಿ.) ಕಾಸರಗೋಡು ಇದರ ಕಲಾವಿದರಿಂದ ‘ಸಾಂಸ್ಕೃತಿಕ ಕಲಾ ವೈಭವ’ ಪ್ರಸ್ತುತಗೊಳ್ಳಲಿದೆ.
ಉಡುಪಿ : ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ.) ಉಡುಪಿ ಹಾಗೂ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಉಡುಪಿ ಶಾಖೆ ಇವರ ವತಿಯಿಂದ ಸಾಹಿತಿ ಮೇಟಿ ಮುದಿಯಪ್ಪ ನೆನಪಿನ ‘ಮಲಬಾರ್ ವಿಶ್ವಸಾಹಿತ್ಯ ಪುರಸ್ಕಾರ 2025’ ಪ್ರದಾನ ಸಮಾರಂಭವನ್ನು ದಿನಾಂಕ 22 ನವೆಂಬರ್ 2025ರಂದು ಸಂಜೆ 3-30 ಗಂಟೆಗೆ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಹಿರಿಯ ಸಾಹಿತಿ ಡಾ. ಮಾಧವಿ ಭಂಡಾರಿ ಇವರು ಸಭಾಧ್ಯಕ್ಷತೆ ವಹಿಸಲಿದ್ದು, ಉಡುಪಿ ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ರೀಮತಿ ಪೂರ್ಣಿಮಾ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಚನ್ನಪ್ಪ ಅಂಗಡಿ ‘ಸಮಗ್ರ ಸಾಹಿತ್ಯ’, ಡಾ. ನಿಕೇತನ ‘ಸಂಶೋಧನೆ ವಿಮರ್ಶೆ’, ಮುದಲ್ ವಿಜಯ್ ‘ಕಾವ್ಯ’ ಇವರಿಗೆ ‘ಮಲಬಾರ್ ವಿಶ್ವಸಾಹಿತ್ಯ ಪುರಸ್ಕಾರ 2025’ ಪ್ರದಾನ ಮಾಡಲಾಗುವುದು. ಚನ್ನಪ್ಪ ಅಂಗಡಿ : ಹಾನಗಲ್ ತಾಲೂಕಿನ ಬಮ್ಮನಹಳ್ಳಿಯಲ್ಲಿ ಹುಟ್ಟಿದ ಚನ್ನಪ್ಪ ಅಂಗಡಿಯವರು ಪ್ರಸ್ತುತ ಧಾರವಾಡದಲ್ಲಿ ಕೃಷಿ ಇಲಾಖೆಯಲ್ಲಿ ಸಹಾಯಕ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿರುವರು. ಇವರು ಸುಮಾರು 12…
ಬೆಂಗಳೂರು : ಪಿ.ಪಿ.ಎಚ್. ಕನ್ನಡ ಸಂಘ ಪ್ರೆಸ್ಟೀಜ್ ಪ್ರಿಮ್ ರೋಸ್ ಹಿಲ್ಸ್ ಇವರ ವತಿಯಿಂದ ಶ್ರೀ ವೀರಾಂಜನೇಯ ಯಕ್ಷ ಮಿತ್ರ ಮಂಡಳಿ, ಬಂಗಾರಮಕ್ಕಿ ಮೊಗೆಹಳ್ಳ ಹೊನ್ನಾವರ (ಉ.ಕ.) ಪದ್ಮ ಶ್ರೀ ಪ್ರಶಸ್ತಿ ಪುರಸ್ಕೃತ ಚಿಟ್ಟಾಣಿ ರಾಮಚಂದ್ರ ಹೆಗಡೆ ಬಳಗ ಪ್ರಸ್ತುತ ಪಡಿಸುತ್ತಿರುವ ‘ಕಾರ್ತವೀರ್ಯಾರ್ಜುನ’ ಯಕ್ಷಗಾನ ಪ್ರದರ್ಶನವನ್ನು ದಿನಾಂಕ 22 ನವೆಂಬರ್ 2025ರಂದು ಸಂಜೆ 5-30 ಗಂಟೆಗೆ ಬೆಂಗಳೂರಿನ ಪ್ರೆಸ್ಟೀಜ್ ಪ್ರಿಮ್ ರೋಸ್ ಹಿಲ್ಸ್ ನಲ್ಲಿ ಹಮ್ಮಿಕೊಳ್ಳಲಾಗಿದೆ. ಹಿಮ್ಮೇಳದಲ್ಲಿ ಭಾಗವತರು ಗಾನಕೋಗಿಲೆ ಶ್ರೀ ಶಂಕರ ಭಟ್ಟ ಬ್ರಹ್ಮೂರು, ಮದ್ದಲೆಯಲ್ಲಿ ಮದ್ದಲೆ ಮಾಂತ್ರಿಕ ಶ್ರೀ ಸುನೀಲ್ ಭಂಡಾರಿ ಕಡತೋಕ ಮತ್ತು ಚಂಡೆಯಲ್ಲಿ ಶ್ರೀ ಗಜಾನನ ಹೆಗಡೆ ಸಾಂತೂರು ಹಾಗೂ ಮುಮ್ಮೇಳದಲ್ಲಿ ‘ಕಾರ್ತವೀರ್ಯ’ ಯಕ್ಷರಂಗದ ಮೇರು ಕಲಾವಿದರಾದ ಯಕ್ಷ ದಿಗ್ಗಜ ಅಭಿನಯ ಚತುರ ಶ್ರೀ ಸುಬ್ರಹ್ಮಣ್ಯ ಹೆಗಡೆ ಚಿಟ್ಟಾಣಿ, ‘ರಾವಣ’ ಶ್ರೀ ಪ್ರಶಾಂತ ವರ್ಧನ ಮೂರೂರು, ‘ವಿಭೀಷಣ’ ಶ್ರೀ ಹವ್ಯಕ ಮಂಜು, ‘ಪ್ರಹಸ್ತ’ ಶ್ರೀ ರಾಮಕೃಷ್ಣ ಭಟ್ಟ, ‘ದೂತ’ ಹಾಸ್ಯ ಚಕ್ರವರ್ತಿ ಶ್ರೀ ನಾಗೇಂದ್ರ ಭಟ್ಟ,…
ಮಂಗಳೂರು : ‘ಯಕ್ಷಾಂಗಣ ಮಂಗಳೂರು, ಯಕ್ಷಗಾನ ಚಿಂತನ ಮಂಥನ ಮತ್ತು ಪ್ರದರ್ಶನ ವೇದಿಕೆ ವತಿಯಿಂದ ಮಂಗಳೂರು ವಿಶ್ವವಿದ್ಯಾನಿಲಯ ಡಾ. ದಯಾನಂದ ಪೈ, ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರ ಹಾಗೂ ಕರ್ನಾಟಕ ಯಕ್ಷಭಾರತಿ ಪುತ್ತೂರು ಇವರ ಸಹಯೋಗದಲ್ಲಿ ಕನ್ನಡ ರಾಜ್ಯೋತ್ಸವ ಕಲಾ ಸಂಭ್ರಮವಾಗಿ ನಡೆಸಲ್ಪಡುವ ಹದಿಮೂರನೇ ವರ್ಷದ ನುಡಿಹಬ್ಬ ‘ಯಕ್ಷಗಾನ ತಾಳಮದ್ದಳೆ ಸಪ್ತಾಹ – 2025’ ತ್ರಯೋದಶ ಸರಣಿಯು ದಿನಾಂಕ 23ರಿಂದ 29 ನವೆಂಬರ್ 2025ರವರೆಗೆ ಮಂಗಳೂರಿನ ಹಂಪನಕಟ್ಟೆ ವಿಶ್ವವಿದ್ಯಾನಿಲಯ ಕಾಲೇಜು ರವೀಂದ್ರ ಕಲಾಭವನದಲ್ಲಿ ಜರಗಲಿದೆ. ‘ಸಂಘಟನಾ ಪರ್ವ’ ಎಂಬ ಹೆಸರಿನಲ್ಲಿ ಜಿಲ್ಲೆಯ ವಿವಿಧ ಯಕ್ಷಗಾನ ಸಂಘಗಳ ಸಹಕಾರದಿಂದ ಈ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಸರಣಿ ತಾಳಮದ್ದಳೆ : ದಿನಾಂಕ 23 ನವೆಂಬರ 2025ರಿಂದ ಕ್ರಮವಾಗಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸಹಯೋಗದಲ್ಲಿ ‘ಮಿತ್ತ ಲೋಕೆದ ಪೆತ್ತ’ ತುಳು ತಾಳಮದ್ದಳೆ ಮತ್ತು ಶ್ರೀ ಸುಬ್ರಹ್ಮಣ್ಯ ಸ್ವಾಮಿ ಯಕ್ಷಗಾನ- ಸಂಘ ಸೂಡ ಕಾರ್ಕಳ ಇವರಿಂದ ‘ನಚಿಕೇತ’, ಶ್ರೀ ಮಹಾಲಿಂಗೇಶ್ವರ ಯಕ್ಷಗಾನ ಕಲಾಸಂಘ ಬೆಟ್ಟಂಪಾಡಿ ಇವರಿಂದ…
ಕುಂದಾಪುರ : ಕೋಟ ಶಿವರಾಮ ಕಾರಂತ ಮಕ್ಕಳ ಸಾಹಿತ್ಯ ವೇದಿಕೆ, ಸಾಲಿಗ್ರಾಮ ಮತ್ತು ವಿದ್ಯಾಚೇತನ ಪ್ರಕಾಶನ, ಸಿಂದಗಿ, ವಿಜಯಪುರ ಹಾಗೂ ಶ್ರೀ ಸಿದ್ದಿವಿನಾಯಕ ವಸತಿ ಶಾಲೆ, ಹಟ್ಟಿಅಂಗಡಿ ಇವರ ಜಂಟಿ ಆಶ್ರಯದಲ್ಲಿ ದಿನಾಂಕ 28 ನವೆಂಬರ್ 2025ರಂದು ಶ್ರೀ ಸಿದ್ದಿವಿನಾಯಕ ವಸತಿ ಶಾಲೆ, ಹಟ್ಟಿಅಂಗಡಿಯಲ್ಲಿ ನಡೆಯುವ ರಾಜ್ಯಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಟ್ಟಿಅಂಗಡಿ ಶ್ರೀ ಸಿದ್ದಿವಿನಾಯಕ ವಸತಿ ಶಾಲೆಯ ರಿಷಿಕಾ ದೇವಾಡಿಗ ಬೈಂದೂರು ಇವರು ಆಯ್ಕೆಯಾಗಿದ್ದಾರೆ. ರಿಷಿಕಾ ದೇವಾಡಿಗ ಇವರು ಈಗಾಗಲೇ ರಾಜ್ಯಮಟ್ಟದ ಭಾಷಣ, ಕವನ ರಚನೆ, ಕವನ ವಾಚನ, ರಸಪ್ರಶ್ನೆ, ಏಕಪಾತ್ರಾಭಿನಯದಲ್ಲಿ ಭಾಗವಹಿಸಿ ಅಪಾರ ಜನಮನ್ನಣೆ ಹೊಂದಿರುವ ಹಲವಾರು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿರುತ್ತಾಳೆ. ಅಲ್ಲದೇ ಇವಳು ‘ಮೊದಲ ಹೆಜ್ಜೆ’ ಎಂಬ ಕಥಾ ಸಂಕಲನದ ಪುಸ್ತಕವನ್ನು ಬರೆದಿದ್ದು, ಓದಿನ ಜೊತೆಗೆ ಕಲೆ ಸಾಹಿತ್ಯದ ಬಗ್ಗೆ ಅಪಾರ ಆಸಕ್ತಿ ಹೊಂದಿದ್ದಾರೆ. ಇವಳಿಗೆ ಕಳೆದ ವರ್ಷ ಡಾ. ಶಿವರಾಮ ಕಾರಂತ ಬಾಲ ಪುರಸ್ಕಾರ ಪ್ರಶಸ್ತಿ ಸಹ ಲಭಿಸಿದೆ. ಈಕೆ ಶಾಲೆಯ ಉಪಪ್ರಾಂಶುಪಾಲ ರಾಮ ದೇವಾಡಿಗ…
ಯು.ಎ.ಇ. : ರಾಕ್ ಕರ್ನಾಟಕ ಸಂಘ ಯು.ಎ.ಇ. ಇದರ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ‘ಮನರಂಜನೆಯ ಮಹಾ ಸಂಗಮ’ ಕಾರ್ಯಕ್ರಮವನ್ನು ದಿನಾಂಕ 22 ನವೆಂಬರ್ 2025ರಂದು ಸಂಜೆ 3-00 ಗಂಟೆಗೆ ಯು.ಎ.ಇ. ಇಲ್ಲಿನ ಇಂಡಿಯನ್ ಅಸೋಸಿಯೇಷನ್ ಹಾಲ್ ನಲ್ಲಿ ಹಮ್ಮಿಕೊಳ್ಳಲಾಗಿದೆ. ಝೀ ಕನ್ನಡ ಸರಿಗಮಪ ಖ್ಯಾತಿಯ ಕಂಬದ ರಂಗಯ್ಯ ಇವರಿಂದ ‘ಸಂಗೀತ ಗಾನಾಮೃತ’, ಸಿನೆಮಾ – ಟಿವಿ ಹಾಸ್ಯ ನಟ ಮಿಮಿಕ್ರಿ ಗೋಪಿ ಇವರಿಂದ ‘ಕಾಮಿಡಿ ದರ್ಬಾರ್’ ಮತ್ತು ಅಂತರಾಷ್ಟ್ರೀಯ ಜಾದೂಗಾರ ಕುದ್ರೋಳಿ ಗಣೇಶ್ ಇವರಿಂದ ‘ಜಾದೂ ಕಮಾಲ್’ ಪ್ರದರ್ಶನಗೊಳ್ಳಲಿದೆ.
ಮಂಗಳೂರು : ಸಾರ್ವಜನಿಕ ಗ್ರಂಥಾಲಯ ಇಲಾಖೆ ಹಾಗೂ ನಗರ ಕೇಂದ್ರ ಗ್ರಂಥಾಲಯ ಮಂಗಳೂರು ಇದರ ವತಿಯಿಂದ ಹೊಸಬೆಟ್ಟು ಶಾಖಾ ಗ್ರಂಥಾಲಯದಲ್ಲಿ ಗ್ರಂಥಾಲಯ ಸಪ್ತಾಹದ ಅಂಗವಾಗಿ ವಿದ್ಯಾರ್ಥಿಗಳಿಗೆ ಮತ್ತು ಓದುಗರಿಗೆ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಯಿತು. ದಿನಾಂಕ 16 ನವೆಂಬರ್ 2025ರಂದು ನಡೆದ ಸಮಾರೋಪ ಸಮಾರಂಭದಲ್ಲಿ ನಿರೂಪಕ ಮತ್ತು ಹೆಚ್.ಪಿ.ಸಿ.ಎಲ್.ನ ನಿವೃತ್ತ ಹಿರಿಯ ಪ್ರಬಂಧಕ ಪ್ರಕಾಶ್ ಮಾತನಾಡಿ “ಪುಸ್ತಕ ವಾಚನದ ಅಭಿರುಚಿಯನ್ನು ಮರು ರೂಡಿಸಿಕೊಳ್ಳುವ ಮೂಲಕ ಜ್ಞಾನದಾಹಿಗಳಾಗಬೇಕು” ಎಂದರು. ಗೋವಿಂದ ದಾಸ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಕೃಷ್ಣಮೂರ್ತಿ ಮಾತನಾಡಿ “ಡಿಜಿಟಲ್ ಯುಗದಲ್ಲಿ ಪುಸ್ತಕ ಹಾಗೂ ಪತ್ರಿಕೆಗಳ ಪ್ರಸ್ತುತತೆಯನ್ನು ಓದುಗ ವರ್ಗ ಅರಿತುಕೊಳ್ಳಬೇಕು. ಗ್ರಂಥಾಲಯ ಪಿತಾಮಹರೆಂದು ಪ್ರಖ್ಯಾತರಾಗಿರುವ ಎಸ್.ಆರ್. ರಂಗನಾಥನ್ ಅವರ ಗ್ರಂಥಾಲಯದ ಪಂಚಸೂತ್ರಗಳು ಇಂದಿಗೂ ಪ್ರಸ್ತುತವಾಗಿದೆ” ಎಂದರು. ರಿಜೇಂಟ್ ಪಾರ್ಕ್ ಅಸೋಸಿಯೇಷನ್ನಿನ ಅಧ್ಯಕ್ಷ ವೈ.ಎಂ. ದೇವದಾಸ್ “ಗ್ರಂಥಾಲಯದ ಸೌಲಭ್ಯಗಳನ್ನು ಎಲ್ಲರೂ ಪಡೆದುಕೊಂಡಾಗ ಸುಂದರ ಸಮಾಜದ ನಿರ್ಮಾಣ ಸಾಧ್ಯ” ಎಂದರು. ಓದುಗ ಬಳಗದ ವಿನ್ಸಟ್ ಪಿಂಟೋ ಅವರು ಮಾತನಾಡಿ “ಗ್ರಂಥಾಲಯದ ಸುಸಜ್ಜಿತ ವಿಸ್ತರಣೆಗೆ ಸರ್ವರ ಸಹಾಯ…
ಪ್ರೊ. ಎಚ್.ಎಂ. ಶಂಕರನಾರಾಯಣ ರಾವ್ ಇವರು ಕನ್ನಡ ನಾಡಿನ ಶ್ರೇಷ್ಠ ಸಾಹಿತಿಗಳಲ್ಲಿ ಒಬ್ಬರು. ಪ್ರಕಾಶಕರಾಗಿ, ಪ್ರಾಧ್ಯಾಪಕರಾಗಿ ಅಪೂರ್ವ ಸೇವೆ ಸಲ್ಲಿಸಿದ ಖ್ಯಾತರು. ‘ಕನ್ನಡ ಕವಿಕಾವ್ಯ ಮಾಲೆ’ ಅಥವಾ ‘ಶಾರದಾ ಮಂದಿರ ಪ್ರಕಾಶನ’ ಸಂಸ್ಥೆಯನ್ನು ಸ್ಥಾಪಿಸಿ, ಪುಸ್ತಕ ಪ್ರಕಟಣೆ ಎಂಬ ವಿಚಾರವನ್ನು ಊಹಿಸಿಕೊಳ್ಳಲೂ ಸಾಧ್ಯವಿಲ್ಲದ ಸಮಯದಲ್ಲಿ 400ಕ್ಕೂ ಹೆಚ್ಚು ಪ್ರಸಿದ್ಧ ಸಾಹಿತಿಗಳ ಕೃತಿಗಳನ್ನು ಪ್ರಕಟಿಸಿದ ಧೀಮಂತರು. ದಾವಣಗೆರೆಯ ಜಿಲ್ಲೆಯ ಹರಿಹರೇಶ್ವರ ದೇವಾಲಯದ ಅರ್ಚಕರಾದ ಮಲ್ಲಾರಿ ಭಟ್ಟ ಮತ್ತು ಭೀಮಕ್ಕ ದಂಪತಿಗಳ ಸುಪುತ್ರರಾಗಿ 21 ನವಂಬರ್ 1913ರಂದು ದಾವಣಗೆರೆಯಲ್ಲಿ ಜನಿಸಿದರು. ಕೊಟ್ಟೂರಿನಲ್ಲಿ ಪ್ರೌಢ ಶಿಕ್ಷಣದವರೆಗಿನ ವಿದ್ಯಾಭ್ಯಾಸವನ್ನು ಪೂರೈಸಿದ ನಂತರ ಉನ್ನತ ಶಿಕ್ಷಣಕ್ಕೆ ಮೈಸೂರಿನ ಮಹಾರಾಜ ಕಾಲೇಜಿಗೆ ಸೇರಿದರು. ಪ್ರೊ. ಟಿ.ಎಸ್. ವೆಂಕಣ್ಣಯ್ಯ, ಡಾಕ್ಟರ್ ಶ್ರೀಕಂಠ ಶಾಸ್ತ್ರಿ, ತೀ.ನಂ.ಶ್ರೀ., ಡಿ.ಎಲ್.ಎನ್. ಮುಂತಾದವರು ಇವರ ಗುರುಗಳಾಗಿದ್ದರು. ಆರ್ಥಿಕವಾಗಿ ಕಷ್ಟದಲ್ಲಿದ್ದ ಶಂಕರನಾರಾಯಣರಿಗೆ ಇವರೆಲ್ಲರ ಕೃಪೆಯಿಂದ ಊಟ ಮತ್ತು ವಸತಿಯ ಸಮಸ್ಯೆ ಬಗ್ಗೆ ಹರಿಯಿತು. ಎಂ.ಎ. ಪದವೀಧರರಾದ ಮೇಲೆ ಶಂಕರನಾರಾಯಣ ರಾಯರು ಮೈಸೂರಿನ ಬನುಮಯ್ಯ ಹೈಸ್ಕೂಲ್ನಲ್ಲಿ ಶಿಕ್ಷಕ ವೃತ್ತಿಗೆ ಸೇರಿದರು.…
ಮಂಗಳೂರು : ಕಲಾಸೂರ್ಯ ನೃತ್ಯಾಲಯ ಮಂಗಳೂರು ಆಯೋಜಿಸುತ್ತಿರುವ ‘ಕಲಾಭವ’ ಮಾಸಿಕ ನೃತ್ಯ ಸರಣಿ-04ರ ಕಾರ್ಯಕ್ರಮವು ದಿನಾಂಕ 09 ನವೆಂಬರ್ 2025ರಂದು ಮಂಗಳೂರಿನ ಸುಬ್ರಹ್ಮಣ್ಯ ಸದನದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಮಂಗಳೂರಿನ ಕಲಾಸೂರ್ಯ ನೃತ್ಯಾಲಯದ ನೃತ್ಯಗುರು ವಿದುಷಿ ಶ್ರೀಮತಿ ಸೌಜನ್ಯ ವಿ. ಪಡುವೆಟ್ನಾಯ ಇವರ ಶಿಷ್ಯೆ ಕುಮಾರಿ ಸುಹಾನಿ ಭಂಡಾರಿ ಇವರ ಮೊದಲ ಏಕವ್ಯಕ್ತಿ ಭರತನಾಟ್ಯ ಪ್ರಸ್ತುತಿ ಕಲಾಸಕ್ತರ ಮನಸೂರೆಗೊಂಡಿತು. ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಡಾ. ನಿರೀಕ್ಷಾ ಶೆಟ್ಟಿ ಇವರು “ಇಂದಿನ ಯುವ ಪೀಳಿಗೆ ತಮ್ಮ ಕಲಿಕೆಯ ಜೊತೆಗೆ ಇಂತಹ ಕಲೆಗಳ ಮೇಲೆ ಆಸಕ್ತಿ ಹೆಚ್ಚಿಸಿಕೊಳ್ಳಬೇಕು. ಎಲ್ಲವನ್ನು ಒಟ್ಟಾಗಿ ಸಮದೂಗಿಸಲು ಕಲಿಯಬೇಕು” ಎಂದು ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು. ಕುಮಾರಿ ಶ್ರೇಯ ಭಾಪಟ್ ಇವರ ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡ ಕಾರ್ಯಕ್ರಮದಲ್ಲಿ ಮಾಸ್ಟರ್ ಶ್ಯಾಮ್ ಪಡುವೆಟ್ನಾಯ ಇವರ ಓಂಕಾರನಾದ, ಸೌಜನ್ಯ ಪಡುವೆಟ್ನಾಯ ಇವರ ಶಂಖನಾದ, ಕುಮಾರಿ ಸ್ಮಿತಾ ಇವರ ಪಂಚಾಂಗ ಪಠಣ, ಕುಮಾರಿ ದಶ್ಮಿತ ಇವರಿಂದ ಭರತನಾಟ್ಯದಲ್ಲಿ ಮಾರ್ಗ ಪದ್ಧತಿ ವಿಷಯ ಮಂಡನೆ ಹೆಚ್ಚಿನ ಮೆರುಗು ನೀಡಿತು.…