Subscribe to Updates
Get the latest creative news from FooBar about art, design and business.
Author: roovari
ಉಡುಪಿ : ರಾಗ ಧನ ಸಂಸ್ಥೆ ಉಡುಪಿ (ರಿ.) ಇದರ ಆಶ್ರಯದಲ್ಲಿ ಸಂಗೀತ ಕಾರ್ಯಕ್ರಮವು ದಿನಾಂಕ 12 ಅಕ್ಟೋಬರ್ 2025 ಆದಿತ್ಯವಾರದಂದು ಉಡುಪಿಯ ಎಂ.ಜಿ.ಎಂ. ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ. ಸಂಜೆ 4-00 ಗಂಟೆಗೆ ಕುಮಾರಿ ಧನಶ್ರೀ ಶಬರಾಯ ಇವರ ವಯೋಲಿನ್ ಸೋಲೋ ವಾದನಕ್ಕೆ ಮೃದಂಗದಲ್ಲಿ ಮೈಸೂರಿನ ಶ್ರೀ ಶುಭಾಂಗ್ ಬಿ.ಯಸ್. ಇವರು ಹಾಗೂ ಗಂಟೆ 5-30ಕ್ಕೆ ಶ್ರೀಮತಿ ಪೂಜಾ ಉಡುಪ ಇವರ ಹಾಡುಗಾರಿಕೆ ವಯೊಲಿನ್ ನಲ್ಲಿ ಉಡುಪಿಯ ಶ್ರೀಮತಿ ಶರ್ಮಿಳಾ ರಾವ್ ಮತ್ತು ಮೃದಂಗದಲ್ಲಿ ಮೈಸೂರಿನ ಶುಭಾಂಗ್ ಬಿ.ಯಸ್. ಇವರು ಸಹಕರಿಸಲಿದ್ದಾರೆ.
ಮಂಗಳೂರು : ಮಧುರತರಂಗ (ರಿ.) ಮಂಗಳೂರು ದಕ್ಷಿಣ ಕನ್ನಡ ಇವರ ವತಿಯಿಂದ ವಜ್ರ ಮಹೋತ್ಸವದ ಅಂಗವಾಗಿ ‘ಶ್ರೀ ಸಿದ್ಧಿವೃದ್ಧಿ ಸ್ವರಮಾಧುರ್ಯ’ ಸಂಗೀತ ಗಾಯನ ಸ್ಪರ್ಧೆಯನ್ನು ದಿನಾಂಕ 22 ನವೆಂಬರ್ 2025ರಂದು ಬೆಳಿಗ್ಗೆ 9-00 ಗಂಟೆಗೆ ಪಾಂಡೇಶ್ವರದಲ್ಲಿರುವ ಶ್ರೀ ಮುನೀಶ್ವರ ಮಹಾಗಣಪತಿ ದೇವಸ್ಥಾನದ ಸಭಾಗೃಹದಲ್ಲಿ ಆಯೋಜಿಸಲಾಗಿದೆ. ಷಷ್ಠಿ ಪೂರ್ತಿ 60 ತುಂಬಿದ ಹಿರಿಯ ಸಂಗೀತ ಆಸಕ್ತಿಯುಳ್ಳ ಕಲಾಪ್ರೇಮಿಗಳು ಸಂಗೀತ ಶಿಕ್ಷಕ, ಗಾಯಕ ಸಂಗೀತ ನಿರ್ದೇಶಕ ಆಚಾರ್ಯ ಜಗದೀಶ್ ಶಿವಪುರರವರು ರಚಿಸಿರುವ 150 ಗೀತೆಗಳಲ್ಲಿ ವಿಭಿನ್ನ 10 ಗೀತೆಗಳಲ್ಲಿ ತಮಗೆ ಇಷ್ಟವಾದ 2 ಗೀತೆಗಳನ್ನು ಆಯ್ಕೆ ಮಾಡಿ ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ವಿಜೇತರಿಗೆ ನಗದು ಬಹುಮಾನದೊಂದಿಗೆ ಪ್ರಮಾಣಪತ್ರ ಹಾಗೂ ಫಲಕ ನೀಡಲಾಗುವುದು. ಉಡುಪಿಯ ಉದ್ಯಮಿ ಕೆ.ಬಿ. ಜಗದೀಶ್ ಇವರ ಗೌರವ ಅಧ್ಯಕ್ಷತೆಯಲ್ಲಿ ಪ್ರಾರಂಭವಾಗುವ ಈ ಕಾರ್ಯಕ್ರಮದಲ್ಲಿ ಸಿಂಡಿಕೇಟ್ ಬ್ಯಾಂಕಿನ ನಿವೃತ್ತ ಅಧಿಕಾರಿ ಶ್ರೀಮತಿ ಸುಗುಣ ಕಾಮತ್ ಇವರು ದೀಪ ಪ್ರಜ್ವಲನೆ ಮಾಡಲಿದ್ದಾರೆ. ಸಂಜೆ 4-30 ಗಂಟೆಗೆ ನಡೆಯುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಎಸ್.ಪಿ. ಹರಿದಾಸ್…
ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ಕಾಟಿಪಳ್ಳ ಶ್ರೀ ಮಹಾಗಣಪತಿ ಮಹಿಳಾ ಯಕ್ಷಗಾನ ಸಂಘದ ವತಿಯಿಂದ ವೃತ್ತಿಪರ ಯಕ್ಷಗಾನ ಮೇಳದ ಪ್ರಥಮ ಮಹಿಳಾ ಭಾಗವತರಾದ ದಿವಂಗತ ಲೀಲಾವತಿ ಬೈಪಾಡಿತ್ತಾಯ ಅವರ ನೆನೆಪಿನಲ್ಲಿ ಸಂಸ್ಮರಣಾ ಗೋಷ್ಠಿ ಹಾಗೂ ಅವರ ಶಿಷ್ಯ ವೃಂದದ ಮಹಿಳಾ ಕಲಾವಿದರಿಂದ ತುಳು ಯಕ್ಷಗಾನ ಪ್ರದರ್ಶನವನ್ನು ದಿನಾಂಕ 12 ಅಕ್ಟೋಬರ್ 2025ರಂದು ಅಪರಾಹ್ನ 2-30ಕ್ಕೆ ಉರ್ವಸ್ಟೋರಿನ ತುಳು ಭವನದ ಸಿರಿಚಾವಡಿಯಲ್ಲಿ ನಡೆಯಲಿದೆ. ಹಿರಿಯ ಯಕ್ಷಗಾನ ವಿದ್ವಾಂಸರಾದ ಡಾ. ಎಂ. ಪ್ರಭಾಕರ ಜೋಶಿ ಇವರು ಸಂಸ್ಮರಣಾ ಉಪನ್ಯಾಸ ನೀಡಲಿದ್ದು, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ತಾರಾನಾಥ ಗಟ್ಟಿ ಕಾಪಿಕಾಡ್ ಇವರು ಈ ಸಮಾರಂಭದ ಅಧ್ಯಕ್ಷತೆ ವಹಿಸುವರು. ಉರ್ವಸ್ಟೋರ್ ಶ್ರೀ ಮಹಾಗಣಪತಿ ದೇವಸ್ಥಾನದ ಅಧ್ಯಕ್ಷ ಎಸ್. ಸುರೇಂದ್ರ ರಾವ್, ಮಾಜಿ ಮೇಯರ್ ಶಶಿಧರ ಹೆಗ್ಡೆ, ಯಕ್ಷಗಾನ ಗುರುಗಳು ಹಾಗೂ ಲೀಲಾವತಿಯವರ ಪತಿ ಹರಿನಾರಾಯಣ ಬೈಪಾಡಿತ್ತಾಯ, ಲೀಲಾವತಿಯವರ ಪುತ್ರ ಅವಿನಾಶ್ ಬೈಪಾಡಿತ್ತಾಯ ಉಪಸ್ಥಿತರಿರುವರು. ಲೀಲಾವತಿಯವರ ಶಿಷ್ಯ ನಾದಾ ಮಣಿನಾಲ್ಕೂರು ಇವರು…
ಪುತ್ತೂರು : ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘ ಬೊಳುವಾರು ಪುತ್ತೂರು ಇದರ ವತಿಯಿಂದ ದಿನಾಂಕ 10 ಅಕ್ಟೋಬರ್ 2025ರಂದು ಪರ್ಲಡ್ಕದ ಬಾಲವನ ಬಯಲು ರಂಗಮಂದಿರದಲ್ಲಿ ಕಾರಂತರ 124ನೇ ಜನ್ಮದಿನೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದ ಬಾಬ್ತು ‘ಶ್ರೀರಾಮ ನಿರ್ಯಾಣ’ ಪ್ರಸಂಗದ ತಾಳಮದ್ದಳೆ ನಡೆಯಿತು. ಹಿಮ್ಮೇಳದಲ್ಲಿ ತೆಂಕಬೈಲು ಮುರಳಿಕೃಷ್ಣ ಶಾಸ್ತ್ರೀ, ಆನಂದ ಸವಣೂರು, ಪದ್ಯಾಣ ಜಯರಾಮ ಭಟ್, ಮುರಳಿಧರ ಕಲ್ಲೂರಾಯ, ತಾರನಾಥ ಸವಣೂರು ಸಹಕರಿಸಿದರು. ಮುಮ್ಮೇಳದಲ್ಲಿ ಶುಭಾ ಅಡಿಗ (ಶ್ರೀ ರಾಮ), ಕಿಶೋರಿ ದುಗ್ಗಪ್ಪ ನಡುಗಲ್ಲು (ಲಕ್ಷ್ಮಣ), ಶುಭಾ ಗಣೇಶ್ (ಕಾಲಪುರುಷ), ಹರಿಣಾಕ್ಷಿ ಜೆ. ಶೆಟ್ಟಿ (ದೂರ್ವಾಸ) ಸಹಕರಿಸಿದರು. ನಿರ್ದೇಶಕ ಭಾಸ್ಕರ್ ಬಾರ್ಯ ಸ್ವಾಗತಿಸಿ, ರಮೇಶ್ ಉಳಯ ವಂದಿಸಿದರು. ನೀನಾಸಂ ಹೆಗ್ಗೋಡು ಇದರ ನಿವೃತ್ತ ಪ್ರಾಧ್ಯಾಪಕರಾದ ಬಿ.ಆರ್. ವೆಂಕಟರಮಣ ಐತಾಳ್ ಕಲಾವಿದರನ್ನು ಗೌರವಿಸಿ, ಜಗನ್ನಾಥ ಅರಿಯಡ್ಕ ಸಹಕರಿಸಿದರು.
ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀಕೃಷ್ಣರಾಜ ಪರಿಷತ್ತಿನ ಮಂದಿರದಲ್ಲಿ ಏರ್ಪಾಟಾಗಿದ್ದ ವಿವಿಧ ದತ್ತಿ ಪುರಸ್ಕಾರಗಳ ಪ್ರದಾನ ಕಾರ್ಯಕ್ರಮವು ದಿನಾಂಕ 10 ಅಕ್ಟೋಬರ್ 2025ರಂದು ನಡೆಯಿತು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ “ಕನ್ನಡ ಶಾಲೆಗಳನ್ನು ಉಳಿಸಬೇಕು ಮತ್ತು ಕನ್ನಡ ಅಕ್ಷರ ಭಾಷೆಯಾಗಬೇಕು ಎನ್ನುವ ಎರಡು ಕನಸುಗಳನ್ನು ಹೊತ್ತು ನಾನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನಕ್ಕೆ ಬಂದೆ. ಆದರೆ ಎರಡೂ ಕನಸೇ ಆಗಿ ಬಿಡುವ ಆತಂಕ ಕಾಡುತ್ತಿದೆ. ಆದರೆ ಕನ್ನಡ ಮತ್ತು ಕನ್ನಡಿಗರಿಗೆ ಸೂಕ್ತ ಸ್ಥಾನಮಾನ ದೊರಕಿಸಲು ಕನ್ನಡ ಸಾಹಿತ್ಯ ಪರಿಷತ್ತು ಬದ್ದವಾಗಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಹಿರಿಯ ಬರಹಗಾರರಾದ ಡಾ. ಕೆ. ಶಿವರಾಮ ಕಾರಂತ ಮತ್ತು ಸಾಲಿ ರಾಮಚಂದ್ರ ರಾಯರ ಜನ್ಮ ದಿನೋತ್ಸವವನ್ನು ಆಚರಿಸಲಾಯಿತು. ತಾವು ದೂರದರ್ಶನದ ನಿರ್ದೇಶಕರಾಗಿದ್ದಾಗ ಸದಾನಂದ ಸುವರ್ಣ ಇವರು ಶಿವರಾಮ ಕಾರಂತರ ಕುರಿತು ರೂಪಿಸಿದ್ದ ಸಾಕ್ಷ್ಯ ಚಿತ್ರಕ್ಕೆ ಪ್ರಾಯೋಜಕರು ದೊರಕದೆ ತಾವು ವೈಯಕ್ತಿಕ ನೆಲೆಯಲ್ಲಿ ಸಹಾಯ…
ಸರಿಗಮ ಭಾರತಿ ಪರ್ಕಳದ ಸಭಾಂಗಣದಲ್ಲಿ ದಿನಾಂಕ 02 ಅಕ್ಟೋಬರ್ 2025 ವಿದ್ಯಾದಶಮಿ ದಿನದಂದು ದಿನಪೂರ್ತಿ ಸಂಗೀತ ಕಚೇರಿಗಳು, ಭರತನಾಟ್ಯ, ಗೌರವ ಸನ್ಮಾನ ಅಚ್ಚುಕಟ್ಟಾಗಿ ನಡೆದದ್ದು ಮಾತ್ರವಲ್ಲದೆ, ಆಯಾಯ ಕಾರ್ಯಕ್ರಮಕ್ಕೆ ಕಲಾಸಕ್ತ ಬಂಧುಗಳು ಭಾಗಿಯಾಗಿ ಸಂಯೋಜಕರ ಆಥಿತ್ಯವನ್ನು ಸ್ವೀಕರಿಸಿದ್ದು ನಿಜಕ್ಕೂ ಒಂದು ವಿಶೇಷವಾದ ಅನುಭೂತಿಯನ್ನು ನೀಡಿತು. ಸರಿಗಮ ಭಾರತಿಯ ನಿರ್ದೇಶಕರಾದ ಡಾ. ಉದಯ ಶಂಕರ್ ಹಾಗೂ ವಿದುಷಿ ಉಮಾಶಂಕರಿಯವರ ಈ ಕಲಾಕೈಂಕರ್ಯದಲ್ಲಿ ಕೈಜೋಡಿಸಿದ ಕಲಾಮನಸ್ಸುಗಳಿಗೆ ತಲೆಬಾಗಲೇಬೇಕು. ಬೆಳಿಗ್ಗೆ 7-40ರಿಂದ ಪಂಡಿತ್ ರವಿಕಿರಣ್ ಮಣಿಪಾಲ ಇವರು ಬಸಂತ್ ಮುಖಾರಿ ರಾಗವನ್ನು ವಿಳಂಬಿತ್ ಖ್ಯಾಲ್ ನಲ್ಲಿ ವಿದ್ವತ್ಪೂರ್ಣವಾಗಿ ಹಾಡಿ ನೆರೆದಿದ್ದ ಶ್ರೋತೃಗಳನ್ನು ಸೆರೆಹಿಡಿದರು. ಇವರು ಅದ್ಭುತ ಶಾರೀರವನ್ನು ದುಡಿಸಿಕೊಂಡ ಪರಿ ಅನನ್ಯ. ಇವರೇ ರಚಿಸಿದ ‘ಸಬ್ ಜಗ್ ಲಾಗೇ ಅಪಾರೇ ತುಮ್ ಬಿನ್ ಗುರುದೇವ’, ಮುಂದೆ ‘ಮಾ ಸರಸ್ವತೀ ಪ್ರಭುರೇ’ ಎಂಬ ಪ್ರಸ್ತುತಿಗಳನ್ನು ಹಾಡಿ ನೆರೆದ ರಸಿಕರ ಪ್ರಶಂಸಗೆ ಪಾತ್ರರಾದರು. ತಬಲಾದಲ್ಲಿ ಭಾರವಿ ದೇರಾಜೆಯವರು ಅತ್ಯುತ್ತಮವಾಗಿ ಸಾತ್ ನೀಡಿ ಕಲಾವಿದರನ್ನು ಪ್ರೋತ್ಸಾಹಿಸಿದರು. ಹಾರ್ಮೋನಿಯಂನಲ್ಲಿ ಶಶಿಕಿರಣ್ ರವರು…
ಬೆಂಗಳೂರು : ಪಾಲನೇತ್ರ ಅಭಿನಂದನಾ ಸಮಿತಿ ಬೆಂಗಳೂರು ಇವರ ವತಿಯಿಂದ ಕನ್ನಡಪರ ಚಿಂತಕ, ಹೋರಾಟಗಾರ, ಸಾಮಾಜಿಕ, ಸಾಂಸ್ಕೃತಿಕ ಸಂಘಟಕ ಪಾಲನೇತ್ರ ಇವರಿಗೆ ‘ಅಭಿನಂದನೆ’ ಮತ್ತು ‘ಕನ್ನಡ ಜಂಗಮ’ ಗ್ರಂಥ ಲೋಕಾರ್ಪಣೆ ಸಮಾರಂಭವನ್ನು ದಿನಾಂಕ 15 ಅಕ್ಟೋಬರ್ 2025ರಂದು ಸಂಜೆ 4-00 ಗಂಟೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಸಮಾರಂಭದ ಅಧ್ಯಕ್ಷತೆಯನ್ನು ಪೂಜ್ಯಶ್ರೀ ಸಿದ್ಧಲಿಂಗ ಸ್ವಾಮಿಗಳು ವಹಿಸಲಿದ್ದು, ಮಾನ್ಯ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವರಾದ ವಿ. ಸೋಮಣ್ಣ ಇವರು ಗ್ರಂಥ ಲೋಕಾರ್ಪಣೆ ಮಾಡಲಿರುವರು. ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಡಾ. ಸಿ. ಸೋಮಶೇಖರ್ ಇವರು ಅಭಿನಂದನಾ ನುಡಿಗಳನ್ನಾಡಲಿದ್ದು, ಕನ್ನಡಪರ ಚಿಂತಕ, ಹೋರಾಟಗಾರರಾದ ಪಾಲನೇತ್ರ ಇವರನ್ನು ಅಭಿನಂದಿಸಲಾಗುವುದು. ಇದೇ ಸಂದರ್ಭದಲ್ಲಿ ಕನ್ನಡ ಹೋರಾಟಗಾರರಿಗೆ ಗೌರವಾರ್ಪಣೆ ಮತ್ತು ‘ಬಾರಿಸು ಕನ್ನಡ ಡಿಂಡಿಮವ’ ಖ್ಯಾತ ಗಾಯಕರಿಂದ ಗಾನಗೌರವ ಪ್ರಸ್ತುತಗೊಳ್ಳಲಿದೆ.
ಮಧೂರು : ಉಳಿಯ ದನ್ವಂತರಿ ಯಕ್ಷಗಾನ ಕಲಾಸಂಘ ಮಧೂರು ಇದರ ವಾರದ ಕೂಟ ಉಳಿಯ ಮನೆಯ ಸುಧಾ ಮಂದಿರದಲ್ಲಿ ದಿನಾಂಕ 5 ಅಕ್ಟೋಬರ್ 2025 ಭಾನುವಾರದಂದು ‘ವೀರಮಣಿ ಕಾಳಗ’ ಎಂಬ ಪ್ರಸಂಗದ ತಾಳಮದ್ದಳೆ ನಡೆಯಿತು. ಹಿಮ್ಮೇಳದಲ್ಲಿ ಭಾಗವತರು ಶ್ರೀ ವಾಸುದೇವ ಕಲ್ಲೂರಾಯ ಮಧೂರು ಮತ್ತು ಶ್ರೀ ರವಿಶಂಕರ ಮಧೂರು ಹಾಗೂ ಮದ್ದಳೆಯಲ್ಲಿ ಮುರಳಿ ಮಾಧವ ಮಧೂರು ಇವರುಗಳು ಸಹಕರಿಸಿದರು. ಮುಮ್ಮೇಳದಲ್ಲಿ ಬ್ರಹ್ಮಶ್ರೀ ಉಳಿಯತಾಯ ವಿಷ್ಣು ಆಸ್ರ, ಶ್ರೀ ಗೋಪಾಲ ಅಡಿಗಳು ಕೂಡ್ಲ, ಶ್ರೀ ಮಯೂರ ಆಸ್ರ ಉಳಿಯ, ಶ್ರೀಮತಿ ರಕ್ಷಾ ರಾಮ್ ಕಿಶೋರ ಆಸ್ರ, ಶ್ರೀಮತಿ ಧನ್ಯಮುರಳಿ ಕೃಷ್ಣ ಆಸ್ರ, ಶ್ರೀ ನರಸಿಂಹ ಬಲ್ಲಾಳ್, ಶ್ರೀ ಜಯರಾಮ ದೇವಾಸ್ಯ, ಶ್ರೀ ವಿಷ್ಣು ಭಟ್, ಸರಸ್ವತಿ ಗೋಪಾಲ ಅಡಿಗ ಕೂಡ್ಲು ಇವರುಗಳು ಸಹಕರಿಸಿದರು.
ಮಂಗಳೂರು : ಸನಾತನ ನಾಟ್ಯಾಲಯ ಪ್ರಸ್ತುತ ಪಡಿಸುವ ಗುರು ಶಾರದಾಮಣಿ ಶೇಖರ್ ಮತ್ತು ವಿದುಷಿ ಶ್ರೀಲತಾ ನಾಗರಾಜ್ ಇವರ ಶಿಷ್ಯೆ ವಿದುಷಿ ಸಿಂಚನಾ ಎಸ್. ಕುಲಾಲ್ ಇವರ ‘ಭರತನಾಟ್ಯ ರಂಗಪ್ರವೇಶ’ವು ದಿನಾಂಕ 12 ಅಕ್ಟೋಬರ್ 2025ರಂದು ಸಂಜೆ 5-00ಕ್ಕೆ ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ. ಕರ್ನಾಟಕ ಕಲಾತಿಲಕ ನಾಟ್ಯಾಚಾರ್ಯ ಶ್ರೀ ಉಳ್ಳಾಲ್ ಮೋಹನ್ ಕುಮಾರ್ ಇವರಿಂದ ದೇವತಾ ದೀಪ ಪ್ರಜ್ವಲನೆಯೊಂದಿಗೆ ಪ್ರಾರಂಭವಾಗುವ ಈ ಕಾರ್ಯಕ್ರಮದಲ್ಲಿ ಆಳ್ವಾಸ್ ನ ಡಾ. ಮೋಹನ್ ಆಳ್ವ ಮತ್ತು ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ತಾರಾನಾಥ್ ಗಟ್ಟಿ ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಭರತನಾಟ್ಯ ಕಾರ್ಯಕ್ರಮಕ್ಕೆ ನಟುವಾಂಗಂನಲ್ಲಿ ಗುರು ಶಾರದಾಮಣಿ ಶೇಖರ್, ಹಾಡುಗಾರಿಕೆಯಲ್ಲಿ ವಿನೀತ್ ಪುರವಂಕರ, ಮೃದಂಗದಲ್ಲಿ ರಾಜನ್ ಪಯ್ಯನೂರ್ ಮತ್ತು ಕೊಳಲು ನಿತೀಶ್ ಅಮ್ಮಣ್ಣಯ್ಯ ಇವರುಗಳು ಸಹಕರಿಸಲಿದ್ದಾರೆ.
ಮಂಗಳೂರು : ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿ (ರಿ.) ಪುತ್ತೂರು ಸಂಸ್ಥೆಯ 30ನೇ ವರ್ಷದ ಸಂಭ್ರಮಾಚರಣೆಯ ಪ್ರಯುಕ್ತ ‘ಮೂಕಾಂಬಿಕಾ ಮೂವತ್ತರ ಮಾರ್ದನಿ’ ಶೀರ್ಷಿಕೆಯಲ್ಲಿ ಮಂಗಳೂರಿನ ಕಲಾಸೂರ್ಯ ನೃತ್ಯಾಲಯ ಪ್ರಸ್ತುತ ಪಡಿಸುವ ‘ಕಲಾಭವ -03’ ಪ್ರಸ್ತುತಿಯನ್ನು ದಿನಾಂಕ 12 ಅಕ್ಟೋಬರ್ 2025ರಂದು ಸಂಜೆ 5-30 ಗಂಟೆಗೆ ಮಂಗಳೂರಿನ ಜೈಲ್ ರೋಡ್, ಮೊದಲನೇ ಮಹಡಿ ಸುಬ್ರಹ್ಮಣ್ಯ ಸದನದಲ್ಲಿ ಹಮ್ಮಿಕೊಳ್ಳಲಾಗಿದೆ. ವಕೀಲರಾದ ಪ್ರವೀಣ್ ಕುಮಾರ್ ಅದ್ಯಾಪಾಡಿ ಇವರು ಅಭ್ಯಾಗತರಾಗಿ ಭಾಗವಹಿಸಲಿದ್ದು, ವಿದ್ವಾನ್ ಬಿ. ದೀಪಕ್ ಕುಮಾರ್ ಪುತ್ತೂರು ಇವರ ಶಿಷ್ಯೆ ವಿಭಾಶ್ರೀ ವಿ. ಗೌಡ ಇವರು ನೃತ್ಯ ಪ್ರದರ್ಶನ ನೀಡಲಿದ್ದಾರೆ.