Author: roovari

ಮಡಿಕೇರಿ : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸೋಮವಾರಪೇಟೆ ತಾಲೂಕಿನ 9ನೇ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯು ಐಗೂರು ಗ್ರಾಮದ ಪ್ರಾಥಮಿಕ ವ್ಯವಸಾಯ ಸೇವಾ ಸಹಕಾರ ಸಂಘದ ಸಭಾಂಗಣದಲ್ಲಿ ದಿನಾಂಕ 01 ಡಿಸೆಂಬರ್ 2025ರಂದು ಜಿಲ್ಲಾಧ್ಯಕ್ಷ ಎಂ.ಪಿ. ಕೇಶವ ಕಾಮತ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಪ್ರಾರಂಭದಲ್ಲಿ ಸೋಮವಾರಪೇಟೆ ಕಸಬಾ ಹೋಬಳಿ ಐಗೂರು ಕೇಂದ್ರದಲ್ಲಿ ಊರಿನ ಜನರ, ಸಂಘ-ಸಂಸ್ಥೆಗಳ, ಪಂಚಾಯಿತಿ ಸದಸ್ಯರ ಸಹಕಾರದೊಂದಿಗೆ ತಾಲೂಕು ಸಮ್ಮೇಳನ ನಡೆಸಲು ಅನುಮತಿ ಪಡೆಯಲಾಯಿತು. ವೇದಿಕೆಯಲ್ಲಿ ಉಪಸ್ಥಿತರಿದ್ದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್ ಪ್ರಾಸ್ತಾವಿಕವಾಗಿ ಮಾತನಾಡುತ್ತಾ ಸಮ್ಮೇಳನದ ರೂಪುರೇಷೆ, ಸ್ವಾಗತ ಸಮಿತಿಯ ಮತ್ತು ಉಪ ಸಮಿತಿಗಳ ವಿವರ ನೀಡಿದರು. ಸಮ್ಮೇಳನವು ಬೆಳಗಿನ ಜಾವ ಎಂಟು ಗಂಟೆಗೆ ರಾಷ್ಟ್ರಧ್ವಜ ಮತ್ತು ಕನ್ನಡ ಧ್ವಜದ ಆರೋಹಣದೊಂದಿಗೆ ಪ್ರಾರಂಭವಾಗಿ ಸಮ್ಮೇಳನ ಅಧ್ಯಕ್ಷರ ಮೆರವಣಿಗೆ, ಉದ್ಘಾಟನಾ ಸಮಾರಂಭ, ಗೀತ ಗಾಯನ ಕಾರ್ಯಕ್ರಮ, ಕವಿಗೋಷ್ಠಿ, ವಿಚಾರಗೋಷ್ಠಿ, ಬಹಿರಂಗ ಅಧಿವೇಶನ, ತಾಲೂಕಿನ ಸಾಧಕರಿಗೆ ಸನ್ಮಾನ, ಸ್ಥಳೀಯ…

Read More

ಬ್ರಹ್ಮಾವರ : ಯಕ್ಷಶಿಕ್ಷಣ ಮಹಾಭಿಯಾನದ ಅಂಗವಾಗಿ ಬ್ರಹ್ಮಾವರದಲ್ಲಿ ಕಿಶೋರ ಯಕ್ಷಗಾನ ಸಂಭ್ರಮದ ಸಮಾರೋಪ ಸಮಾರಂಭ ದಿನಾಂಕ 01 ಡಿಸೆಂಬರ್ 2025ರಂದು ನಡೆಯಿತು. ಈ ಸಮಾರಂಭದಲ್ಲಿ ಪ್ರಮಾಣ ಪತ್ರ ವಿತರಿಸಿದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮಾತನಾಡುತ್ತಾ “ಯಕ್ಷಗಾನ ಸರ್ವಾಂಗ ಸುಂದರ ಕಲೆ. ಆಹಾರ್ಯ, ಆಂಗಿಕ, ವಾಚಿಕ, ಸಾತ್ವಿಕ ಈ ನಾಲ್ಕೂ ಅಂಶಗಳೂ ಪೂರ್ಣ ಪ್ರಮಾಣದಲ್ಲಿ ವಿಕಾಸ ಹೊಂದಿರುವ ಏಕೈಕ ಕಲಾಪ್ರಕಾರ ಯಕ್ಷಗಾನ. ಹಿಂದೆ ಶಾಲೆಗೇ ಹೋಗದ ಕಲಾವಿದರು ಸಮಾಜ ತಿದ್ದುವ ಕೆಲಸವನ್ನು ಪರಿಣಾಮಕಾರಿಯಾಗಿ ಮಾಡಿದ್ದಾರೆ” ಎಂದು ಹೇಳಿದರು. ಯಕ್ಷ ಶಿಕ್ಷಣ ಟ್ರಸ್ಟಿನ ಸ್ಥಾಪಕಾಧ್ಯಕ್ಷ ಕೆ. ರಘುಪತಿ ಭಟ್ ಪ್ರೌಢ ಶಾಲೆಯಲ್ಲಿ ಯಕ್ಷಶಿಕ್ಷಣ ಆರಂಭಿಸಲು ಕಾರಣವಾದ ಸಂಗತಿ ಅದರ ಪ್ರಯೋಜನ ವಿವರಿಸಿ ಈ ಅಭಿಯಾನದ ಯಶಸ್ಸಿನಲ್ಲಿ ಉಡುಪಿಯ ಯಕ್ಷಗಾನ ಕಲಾರಂಗದ ಕೊಡುಗೆ ಅಗಾಧವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳಾದ ಮಹೇಶ್ವರೀ, ಲಾಸ್ಯ, ದಿಗ್ಗಜ್ ಡಿ. ಶೆಟ್ಟಿ, ನವ್ಯಾ ಹಾವಂಜೆ, ತನುಶ್ರೀ ಯಕ್ಷಶಿಕ್ಷಣದಿಂದ ತಮಗಾದ ಧನಾನತ್ಮಕ ಪ್ರಯೋಜನ ಮತ್ತು ಸ್ಮರಣೀಯ ಅನುಭವ ಹಂಚಿಕೊಂಡರು. ಪ್ರಸಾಧನ…

Read More

ಮಂಚಿ : ನೃತ್ಯ ಪರಂಪರೆಯನ್ನು ಶುದ್ಧ ಶಾಸ್ತ್ರೀಯ ಚೌಕಟ್ಟಿನಲ್ಲಿ ಭವಿಷ್ಯದ ಯುವ ಕಲಾವಿದರಿಗೆ ಪರಿಚಯಿಸುವ ನಿಟ್ಟಿನಲ್ಲಿ ಪುತ್ತೂರಿನ ಶ್ರೀಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯಿಂದ ಪ್ರೇರಿತಗೊಂಡು, ಅದರ ಅಂಗ ಸಂಸ್ಥೆಯಾದ ವಸುಧಾರಾ ಕಲಾಕೇಂದ್ರ ಬೋಳಂತೂರು ಮಂಚಿ ಇವರು ಆಯೋಜಿಸಿದ ನೃತ್ಯಸರಣಿ ಮಾಲಿಕೆ ‘ಕಲಾಧಾರಾ’. ಇದರ 3ನೇ ಪ್ರಸ್ತುತಿ ದಿನಾಂಕ 30 ನವೆಂಬರ್ 2025ರ ಭಾನುವಾರ ಲಯನ್ಸ್ ಕ್ಲಬ್ ಕೊಳ್ನಾಡು ಸಾಲೆತ್ತೂರು ಹಾಗೂ ಲಯನ್ಸ್ ಸೇವಾ ಟ್ರಸ್ಟ್ (ರಿ) ಮಂಚಿ ಇವರ ಸಹಯೋಗದಲ್ಲಿ ಲಯನ್ಸ್ ಸೇವಾ ಮಂದಿರ ಮಂಚಿ ಇಲ್ಲಿ ನಡೆಯಿತು. ಕುಮಾರಿ ಸಿಂಚನ ಇವರ ಓಂಕಾರ – ಶಂಖನಾದಗಳ ಮೂಲಕ ವಾತಾವರಣ ಶುದ್ಧವಾಗಿಸಿದ ಬಳಿಕ ಕುಮಾರಿಯರಾದ ಆದ್ಯ ಹಾಗೂ ನಿಹಾರಿಕಾ ಎಸ್. ಪಾಲನ್ ಪ್ರಾರ್ಥಿಸಿದರು. ಕುಮಾರಿ ಭೂಮಿಕಾ ನಿತ್ಯ ಪಂಚಾಂಗ ವಾಚಿಸಿದ ನಂತರ ಕುಮಾರಿ ಯಜ್ಞ ಸುಭಾಷಿತ ನುಡಿದರು. ಕಾರ್ಯಕ್ರಮದ ಅಭ್ಯಾಗತರಾಗಿ ಆಗಮಿಸಿದ ಲ| ಸದಾನಂದ ಉಪಾಧ್ಯಾಯ ಎಂ.ಜೆ.ಎಫ್. ಇವರನ್ನು ಕುಮಾರಿ ಮಾನ್ಯ ಪರಿಚಯಿಸಿದರು. ಅಭ್ಯಾಗತರು ದೀಪ ಪ್ರಜ್ವಲನೆಗೈದು ನೃತ್ಯ ಪ್ರದರ್ಶನಕ್ಕೆ ವಿದ್ಯುಕ್ತ ಚಾಲನೆ…

Read More

ಮೈಸೂರು : ನಟನ ರಂಗಶಾಲೆಯ ವತಿಯಿಂದ ಡಿಸೆಂಬರ್ ತಿಂಗಳ ವಾರಾಂತ್ಯ ರಂಗ ಪ್ರದರ್ಶನಗಳನ್ನು ದಿನಾಂಕ 06, 07, 13, 14, 21 ಮತ್ತು 28 ಡಿಸೆಂಬರ್ 2025ರಂದು ಮೈಸೂರಿನ ರಾಮಕೃಷ್ಣ ನಗರ, ನಟನ ರಂಗಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. ದಿನಾಂಕ 06 ಡಿಸೆಂಬರ್ 2025ರಂದು ಸಂಜೆ 6-30 ಗಂಟೆಗೆ ಬೆಂಗಳೂರಿನ ಕಲಾ ಗಂಗೋತ್ರಿ ತಂಡದವರಿಂದ ಡಾ. ಬಿ.ವಿ. ರಾಜಾರಾಂ ಇವರ ನಿರ್ದೇಶನದಲ್ಲಿ ‘ಮತ್ತೆ ಮುಖ್ಯಮಂತ್ರಿ’, ದಿನಾಂಕ 07 ಡಿಸೆಂಬರ್ 2025ರಂದು ಮಧ್ಯಾಹ್ನ 03-00 ಮತ್ತು ಸಂಜೆ 6-30 ಗಂಟೆಗೆ ವಿ. ಬಾಲಕೃಷ್ಣನ್ ಇವರ ರಚನೆ ಮತ್ತು ನಿರ್ದೇಶನದಲ್ಲಿ ಚೆನ್ನೈಯ ಥಿಯೇಟರ್ ನಿಶಾ ತಂಡದವರಿಂದ ‘ದಿ ಗ್ರೇವ್ ಆಫ್ ದಾರಾಶಿಕೊ’ ಇಂಗ್ಲೀಷ್ ನಾಟಕ, ದಿನಾಂಕ 13 ಡಿಸೆಂಬರ್ 2025ರಂದು ಸಂಜೆ 6-30 ಗಂಟೆಗೆ ಬೆಂಗಳೂರಿನ ರಂಗ ಸಂಪದ ತಂಡದ ಚಿದಂಬರ ರಾವ್ ಜಂಬೆ ಇವರ ನಿರ್ದೇಶನದಲ್ಲಿ ‘ಶರ್ಮಿಷ್ಠೆ’, ದಿನಾಂಕ 14 ಡಿಸೆಂಬರ್ 2025ರಂದು ಮಧ್ಯಾಹ್ನ 03-00 ಮತ್ತು ಸಂಜೆ 6-30 ಗಂಟೆಗೆ ಬೆಂಗಳೂರಿನ ವಾಸ್ಪ್ ತಂಡದವರಿಂದ…

Read More

ಉಡುಪಿ : ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ ಉಡುಪಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ಯಕ್ಷಗಾನ ಕಲಾರಂಗ (ರಿ.) ಉಡುಪಿ ಮತ್ತು ಯಕ್ಷಶಿಕ್ಷಣ ಟ್ರಸ್ಟ್ (ರಿ.) ಉಡುಪಿ ಇವರ ವತಿಯಿಂದ ದಿನಾಂಕ 02ರಿಂದ 18 ಡಿಸೆಂಬರ್ 2025ರವರೆಗೆ ಉಡುಪಿಯ 25 ಪ್ರೌಢಶಾಲೆಗಳ ವಿದ್ಯಾರ್ಥಿಗಳಿಂದ ಪ್ರದರ್ಶನಗೊಳ್ಳಲಿರುವ ‘ಕಿಶೋರ ಯಕ್ಷಗಾನ ಸಂಭ್ರಮ – 2025’ವನ್ನು ದಿನಾಂಕ 02 ಡಿಸೆಂಬರ್ 2025ರಂದು ಅಪರಾಹ್ನ 3-00 ಗಂಟೆಗೆ ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಉದ್ಘಾಟನೆಗೊಳ್ಳಲಿದೆ. ಉಡುಪಿಯ ಪರ್ಯಾಯ ಶ್ರೀಪುತ್ತಿಗೆ ಮಠದ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಈ ಸಮಾರಂಭವನ್ನು ಉದ್ಘಾಟನೆ ಮಾಡಲಿದ್ದು, ಉಡುಪಿ ಶಾಸಕರಾದ ಯಶ್ ಪಾಲ್ ಎ. ಸುವರ್ಣ ಇವರು ಅಧ್ಯಕ್ಷತೆ ವಹಿಸಲಿದ್ದಾರೆ. ಉಡುಪಿಯ ಪರ್ಯಾಯ ಶ್ರೀಪುತ್ತಿಗೆ ಮಠದ ಶ್ರೀ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಅನುಗ್ರಹ ಸಂದೇಶ ನೀಡಲಿದ್ದು, ಅಂಬಲಪಾಡಿ ದೇವಸ್ಥಾನದ ಧರ್ಮದರ್ಶಿಗಳು ಡಾ. ನಿ. ಬೀ ವಿಜಯ ಬಲ್ಲಾಳ ಇವರು ಶುಭಾಶಂಸನೆಗೈಯ್ಯಲಿದ್ದಾರೆ. ದಿನಾಂಕ 02 ಡಿಸೆಂಬರ್ 2025ರಂದು ಉಡುಪಿಯ ವಿದ್ಯೋದಯ ಪಬ್ಲಿಕ್…

Read More

ಪುತ್ತೂರು : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಪುತ್ತೂರು ಇದರ ವಾರ್ಷಿಕೋತ್ಸವ ‘ಶ್ರೀ ಆಂಜನೇಯ -57’ರ ಆಮಂತ್ರಣ ಪತ್ರಿಕೆಯನ್ನು ದಿನಾಂಕ 01 ಡಿಸೆಂಬರ್ 2025ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಶ್ರೀ ಈಶ್ವರ ಭಟ್ ಪಂಜಿಗುಡ್ಢೆ ಬಿಡುಗಡೆ ಮಾಡಿ ಸಮಾರಂಭದ ಯಶಸ್ಸಿಗೆ ಶುಭ ಹಾರೈಸಿ, ಸಂಘವು ದೇವಳದ ವತಿಯಿಂದ ಅಪೇಕ್ಷಿಸಿದ ಸಕಲ ಸಹಕಾರವನ್ನು ನೀಡುವುದಾಗಿ ಭರವಸೆ ನೀಡಿದರು. ಆಮಂತ್ರಣ ಪತ್ರಿಕೆ ಬಿಡುಗಡೆಗೆ ಮುನ್ನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭ ಗುಡಿಯ ಮುಂದೆ ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಆಂಜನೇಯ ಉಭಯ ಸಂಘದ ಸದಸ್ಯರು ಉಪಸ್ಥಿತರಿದ್ದರು. ಆ ಬಳಿಕ ಸಂಘದ ವತಿಯಿಂದ ತಾಳಮದ್ದಳೆ ‘ಪಂಚವಟಿ’ ಪ್ರಸಂಗದೊಂದಿಗೆ ನಡೆಯಿತು. ಹಿಮ್ಮೇಳದಲ್ಲಿ ಯಲ್.ಯನ್. ಭಟ್ ಬಟ್ಯಮೂಲೆ, ನಿತೀಶ್ ಎಂಕಣ್ಣಮೂಲೆ, ಮುರಳೀಧರ ಕಲ್ಲೂರಾಯ, ಅಚ್ಯುತ ಪಾಂಗಣ್ಣಾಯ, ಸಮರ್ಥ ವಿಷ್ಣು ಅನೀಶ್ ಕೃಷ್ಣ ಪುಣಚ ಸಹಕರಿಸಿದರು. ಮುಮ್ಮೇಳದಲ್ಲಿ ಶ್ರೀ ರಾಮ (ಗುಂಡ್ಯಡ್ಕ ಈಶ್ವರ ಭಟ್), ಮುನಿಗಳು (ಭಾಸ್ಕರ ಬಾರ್ಯ), ಲಕ್ಷ್ಮಣ (ದುಗ್ಗಪ್ಪ ನಡುಗಲ್ಲು),…

Read More

ಬೆಳಗಾವಿ : ಸಂಸ್ಕೃತಿ ಸಚಿವಾಲಯ ನವ ದೆಹಲಿ ಭಾರತ ಸರ್ಕಾರ, ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಬೆಂಗಳೂರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಳಗಾವಿ ಮತ್ತು ರಂಗ ಆರಾಧನಾ ಸಾಂಸ್ಕೃತಿಕ ಸಂಘಟನೆ (ರಿ.) ಸವದತ್ತಿ ಇವರ ಆಶ್ರಯದಲ್ಲಿ ‘ರಂಗ ತರಬೇತಿ ಶಿಬಿರ’ವನ್ನು ದಿನಾಂಕ 01 ಡಿಸೆಂಬರ್ 2025ರಿಂದ 24 ಜನವರಿ 2026ರವರೆಗೆ ಪ್ರತಿದಿನ ಸಂಜೆ 7-00 ಗಂಟೆಗೆ ಸವದತ್ತಿ ಭಗೀರಥ ಸರ್ಕಲ್ ನಾಟಕ ಮನೆಯಲ್ಲಿ ಆಯೋಜಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಶಿವಾನಂದ ತಾರಿಹಾಳ 9449795232 ಮತ್ತು ಶ್ರೀನಿವಾಸ ಗದಗ 9945808391 ಸಂಖ್ಯೆಯನ್ನು ಸಂಪರ್ಕಿಸಿರಿ.

Read More

ಬೆಂಗಳೂರು : ಕಲಾವಿಲಾಸಿ ಪ್ರಸ್ತುತ ಪಡಿಸುವ ‘ಎಷ್ಟು ಕಾಡತಾವ ಕಬ್ಬಕ್ಕೀ’ ನಾಟಕ ಪ್ರದರ್ಶನವನ್ನು ದಿನಾಂಕ 03 ಡಿಸೆಂಬರ್ 2025ರಂದು ಸಂಜೆ 7-30 ಗಂಟೆಗೆ ಬೆಂಗಳೂರಿನ ಜೆ.ಸಿ. ನಗರದ ರಂಗಶಂಕರದಲ್ಲಿ ಹಮ್ಮಿಕೊಳ್ಳಲಾಗಿದೆ. ಬಸವರಾಜ ಎಮ್ಟಿಯವರ ರಂಗ ಪರಿಕಲ್ಪನೆ ಮತ್ತು ನಿರ್ದೇಶನದಲ್ಲಿ ಪ್ರಸ್ತುತಗೊಳ್ಳುವ ಈ ನಾಟಕದಲ್ಲಿ ಬೆಳಗಾವಿ ಭಾಗದ ಗ್ರಾಮೀಣ ಪರಿಸರದ ಗಾಢ ಅನುಭವಗಳನ್ನು ಕೊಡುವಂತಹ, ರಾಘವೇಂದ್ರ ಪಾಟೀಲರ ಕೆಲವು ಕತೆಗಳನ್ನು ರಂಗದ ಮೇಲೆ ತರಲಾಗಿದೆ.

Read More

ಸಿದ್ಧಾಪುರ : ಶ್ರೀ ಸಿದ್ಧಿವಿನಾಯಕ ಯಕ್ಷಗಾನ ಸಂಘ ಕೊಳಗಿ-ಶಿರಳಗಿ ಹಾಗೂ ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ಎಂ.ಎಂ. ಹೆಗಡೆ ವಿರಚಿತ ‘ಲವ ಕುಶ’ ಯಕ್ಷಗಾನ ಪ್ರದರ್ಶನವನ್ನು 30ನೇ ವರ್ಷದ ಮೂಲೆಗದ್ದೆ ಭೂತಪ್ಪನ ಕಟ್ಟೆ ಕಾರ್ತಿಕೋತ್ಸವದ ನಿಮಿತ್ತ ದಿನಾಂಕ 02 ಡಿಸೆಂಬರ್ 2025ರಂದು ರಾತ್ರಿ 9-00 ಗಂಟೆಗೆ ಮೂಲೆಗದ್ದೆ ಭೂತಪ್ಪನ ಕಟ್ಟೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಹಿಮ್ಮೇಳದಲ್ಲಿ ಕೇಶವ ಹೆಗಡೆ ಕೊಳಗಿ ಭಾಗವತರು, ಮದ್ದಲೆಯಲ್ಲಿ ಶಂಕರ ಭಾಗವತ ಯಲ್ಲಾಪುರ ಮತ್ತು ಚಂಡೆ ವಿಘ್ನೇಶ್ವರ ಗೌಡ ಕೆಸರಕೊಪ್ಪ ಮತ್ತು ಮುಮ್ಮೇಳದಲ್ಲಿ ತಿಮ್ಮಪ್ಪ ಹೆಗಡೆ ಶಿರಳಗಿ, ಅಶೋಕ ಭಟ್ ಸಿದ್ಧಾಪುರ, ವಸಂತ ಹೆಗಡೆ ಕೊಳಗಿ, ಕು. ತುಳಸಿ ಹೆಗಡೆ ಬೆಟ್ಟಕೊಪ್ಪ, ಕು. ಮೈತ್ರಿ ಸಂಪೇಸರ ಮತ್ತು ಅವಿನಾಶ ಹೆಗಡೆ ಕೊಪ್ಪ ಇವರುಗಳು ಸಹಕರಿಸಲಿದ್ದಾರೆ.

Read More

ಕಾರ್ಕಳ : ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕೊಡಮಾಡಲ್ಪಡುವ ಕುಕ್ಕುಂದೂರು ಗಣಿತ ನಗರದ ಪದ್ಮ ಗೋಪಾಲ ಎಜುಕೇಶನ್ ಟ್ರಸ್ಟ್ ಇದರ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿ ಇವರ ಪ್ರಾಯೋಜಕತ್ವದಲ್ಲಿ ನೀಡಲಾಗುವ ದಿ. ಪ್ರೊ. ಎನ್. ರಾಮಚಂದ್ರ ಸ್ಮರಣೆಯ ಉಡುಪಿ ಜಿಲ್ಲೆಯ ‘ಉತ್ತಮ ಯುವ ಸಾಹಿತಿ ಪ್ರಶಸ್ತಿ’ ಹಾಗೂ ದಿ. ಗೋಪಾಲ ಭಂಡಾರಿ ಇವರ ಸ್ಮರಣಾರ್ಥ ಕನ್ನಡ ಕಾಯಕದಲ್ಲಿ ತೊಡಿಸಿಕೊಂಡ ಉತ್ತಮ ಸಂಘ ಸಂಸ್ಥೆಗೆ ನೀಡುವ ಪ್ರಶಸ್ತಿಗೆ ಅರ್ಹದಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪ್ರಶಸ್ತಿಯು ಹತ್ತು ಸಾವಿರ ರೂಪಾಯಿ ನಗದು ಹಾಗೂ ಶಾಶ್ವತ ಫಲಕವನ್ನು ಒಳಗೊಂಡಿದೆ. ಸಂಪೂರ್ಣ ಮಾಹಿತಿಯನ್ನು ಒಳಗೊಂಡ ಅರ್ಜಿಯನ್ನು ದೇವದಾಸ್ ಕೆರೆಮನೆ, ಗೌರವ ಕಾರ್ಯದರ್ಶಿಗಳು, ಕನ್ನಡ ಸಾಹಿತ್ಯ ಪರಿಷತ್ತು ಕಾರ್ಕಳ, ಕೇರಾಫ್ ‘ವಂದ್ಯುಕ್ತ’ ನಿಸರ್ಗನಗರ, ಶ್ಯಾಮಲಾ ಕಾಂಪೌಂಡ್, ಮಿಯ್ಯಾರು, ಮುಡಾರು, ಬಜಗೋಳಿ ಅಂಚೆ, ಕಾರ್ಕಳ -574122 ದೂರವಾಣಿ : 91 6360686393 ಈ ವಿಳಾಸಕ್ಕೆ ದಿನಾಂಕ 10 ಡಿಸೆಂಬರ್ 2025ರ ಒಳಗೆ ತಲುಪುವಂತೆ ಕಳುಹಿಸಿಕೊಡಬೇಕೆಂದು ಕನ್ನಡ ಸಾಹಿತ್ಯ ಪರಿಷತ್ತು ಕಾರ್ಕಳ…

Read More