Author: roovari

ಮೇಲುಕೋಟೆ : ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರು ಮತ್ತು ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಶಾಲೆ ಮೇಲುಕೋಟೆ ಇವರ ವತಿಯಿಂದ ದೃಶ್ಯ ಟ್ರಸ್ಟ್ (ರಿ.) ಮೇಲುಕೋಟೆ ಇವರ ಸಹಯೋಗದೊಂದಿಗೆ ರಂಗ ತರಬೇತಿ ಕಾರ್ಯಾಗಾರ ಉದ್ಘಾಟನಾ ಸಮಾರಂಭವನ್ನು ದಿನಾಂಕ 14 ನವೆಂಬರ್ 2025ರಂದು ಬೆಳಿಗ್ಗೆ 10-00 ಗಂಟೆಗೆ ಮೇಲುಕೋಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ.

Read More

ಬೆಂಗಳೂರು : ಶುಭದ ಚಾರಿಟಬಲ್ ಟ್ರಸ್ಟ್, ಅಕ್ಷಯ ಸೇವಾ ಫೌಂಡೇಶನ್, ರಂಗಮಂಡಲ ಮತ್ತು ಸ್ನೇಹ ಸೇವಾ ಫೌಂಡೇಶನ್ ಇವುಗಳ ಸಹಯೋಗದಲ್ಲಿ ಕನ್ನಡ ರಾಜ್ಯೋತ್ಸವದ ಶುಭ ಸಮಾರಂಭದಲ್ಲಿ ಶ್ರೀ ಪಾಲನೇತ್ರರಿಗೆ ಅಭಿನಂದನೆ ಮತ್ತು ವಿಚಾರ ಸಂಕಿರಣ ಕಾರ್ಯಕ್ರಮವನ್ನು ದಿನಾಂಕ 16 ನವೆಂಬರ್ 2025ರಂದು ಬೆಳಿಗ್ಗೆ 11-00 ಗಂಟೆಗೆ ಬೆಂಗಳೂರಿನ ಸಿವಗಂಗ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. ಶರಣ ಸಾಹಿತ್ಯ ಪರಿಷತ್ತು ಇದರ ಅಧ್ಯಕ್ಷರಾದ ಡಾ. ಸಿ. ಸೋಮಶೇಖರ್ ಇವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಪುರುಷೋತ್ತಮ ಬಿಳಿಮಲೆ ಇವರು ಉದ್ಘಾಟನೆ ಮಾಡಿ ಕನ್ನಡ ಚಳವಳಿಗಾರ ಶ್ರೀ ಪಾಲನೇತ್ರರಿಗೆ ಅಭಿನಂದನಾ ನುಡಿಗಳನ್ನಾಡಲಿದ್ದಾರೆ. ಇದೇ ಸಂದರ್ಭದಲ್ಲಿ ಗಾನ ಸಿದ್ಧಗಂಗಾ ಕಲ್ಚರಲ್ ಟ್ರಸ್ಟ್ ಇದರ ಶ್ರೀಮತಿ ಗೀತಾ ಭತ್ತದ್ ತಂಡದವರಿಂದ ಕನ್ನಡ ಗೀತ ಗಾಯನ ಪ್ರಸ್ತುತಗೊಳ್ಳಲಿದೆ. ವಿಚಾರ ಸಂಕಿರಣದಲ್ಲಿ ‘ಗಾಯತ್ರಿ ನಗರ, ಶ್ರೀರಾಂಪುರ, ಪ್ರಕಾಶನಗರ, ಪರಿಸರದ ಕನ್ನಡ ಚಳವಳಿ’ ಎಂಬ ವಿಷಯದ ಬಗ್ಗೆ ಮಾಜಿ ಮಹಾ ಪೌರ ಜೆ. ಹುಚ್ಚಪ್ಪ, ‘ನಾಡಪ್ರಭು ಕೆಂಪೇಗೌಡರು…

Read More

ಬೆಂಗಳೂರು : ವೀರಕಪುತ್ರ ಶ್ರೀನಿವಾಸ ಸಾರಥ್ಯದಲ್ಲಿ ವೀರಲೋಕ ಇದರ ಆಶ್ರಯದಲ್ಲಿ ‘ಪುಸ್ತಕ ಸಂತೆ -3’ ಕಾರ್ಯಕ್ರಮವು ದಿನಾಂಕ 14, 15 ಮತ್ತು 16 ನವೆಂಬರ್ 2025ರಂದು ಬೆಳಿಗ್ಗೆ ಗಂಟೆ 10-00ರಿಂದ ಬೆಂಗಳೂರಿನ ಜಯನಗರ ಶಾಲಿನಿ ಗ್ರೌಂಡ್ ಚಂದ್ರಗುಪ್ತ ಮೌರ್ಯ ಮೈದಾನದಲ್ಲಿ ನಡೆಯಲಿದೆ. ಈ ಬಾರಿಯ ಕಾರ್ಯಕ್ರಮದಲ್ಲಿ 100ಕ್ಕೂ ಹೆಚ್ಚು ಮಳಿಗೆಗಳಲ್ಲಿ ಹೊಸ ತಲೆಮಾರಿನ ಲೇಖಕರುಗಳ ಜೊತೆಗೆ ಜನಪ್ರಿಯ ಲೇಖಕರ, ಸಾಹಿತಿಗಳ ಪುಸ್ತಕಗಳ ಜೊತೆಗೆ ಹಳೆಯ ತಲೆಮಾರಿನ ಅಪರೂಪದ ಕೃತಿಗಳು ಸೇರಿದಂತೆ ಲಕ್ಷಾಂತರ ಪುಸ್ತಕಗಳು ಓದುಗರನ್ನು ಸ್ವಾಗತಿಸಲು ವೇದಿಕೆಗಳು ಸಜ್ಜಾಗುತ್ತಿವೆ. 300ಕ್ಕೂ ಹೆಚ್ಚು ಜನಪ್ರಿಯ ಲೇಖಕರು, ಸಾಹಿತಿಗಳು ಈ ಮೂರು ದಿನದ ಸಂತೆಯಲ್ಲಿ ಭಾಗವಹಿಸುತ್ತಿದ್ದಾರೆ. ಅಲ್ಲದೆ, ಈ ಸಂತೆಯಲ್ಲಿ ಮಕ್ಕಳಿಗಾಗಿಯೇ ವಿಶೇಷ ಆಟದ ಸಂತೆ, ಹಾರ್ಟ್ ಅಂಡ್ ಕ್ರಾಫ್ಟ್ ಚಟುವಟಿಕೆಗಳು, ನಾಟಕ, ಯಕ್ಷಗಾನ, ಸಂಗೀತ ಇತ್ಯಾದಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಜೊತೆಗೆ ನೆಚ್ಚಿನ ಲೇಖಕನ ಜೊತೆಗೆ ಮೆಚ್ಚಿದ ಓದುಗನ ಮುಖಾಮುಖಿಯ ಅಪರೂಪದ ‘ಓಲೇ : ಓದುಗ – ಲೇಖಕ’ನಲ್ಲಿ ನೂರಕ್ಕೂ ಹೆಚ್ಚು ಓದುಗರು ತಮ್ಮ…

Read More

ಬೆಂಗಳೂರು : ಕರ್ನಾಟಕ ನಾಟಕ ಅಕಾಡೆಮಿ ಕರ್ನಾಟಕ ಸರ್ಕಾರ ಮತ್ತು ರಾಷ್ಟ್ರೀಯ ನಾಟಕ ಶಾಲೆ ಬೆಂಗಳೂರು ಕೇಂದ್ರ ಇವರ ಸಹಯೋಗದೊಂದಿಗೆ ‘ತಿಂಗಳ ನಾಟಕ ಸಂಭ್ರಮ’ದ ಪ್ರಯುಕ್ತ ನಾಟಕ ಪ್ರದರ್ಶನವನ್ನು ದಿನಾಂಕ 15 ನವೆಂಬರ್ 2025ರಂದು ಸಂಜೆ 6-30 ಗಂಟೆಗೆ ಬೆಂಗಳೂರಿನ ಮಲ್ಲತ್ತಹಳ್ಳಿಯ ಕಲಾಗ್ರಾಮದ ಸಮುಚ್ಚಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. 10ನೇ ಆವೃತ್ತಿಯ ವಿದ್ಯಾರ್ಥಿಗಳು ಪ್ರಯೋಗಿಸುವ ತಿಂಗಳ ನಾಟಕ ‘ಪಂಚವಟಿ’ ಯಕ್ಷಗಾನ ಪ್ರಸಂಗ ಗುರು ಬನ್ನಂಜೆ ಸಂಜೀವ ಸುವರ್ಣ ಇವರ ಪರಿಕಲ್ಪನೆ ಮತ್ತು ನಿರ್ದೇಶನದಲ್ಲಿ ಪ್ರದರ್ಶನಗೊಳ್ಳಲಿದೆ.

Read More

ಸುರತ್ಕಲ್ : ರಂಗಚಾವಡಿ ಮಂಗಳೂರು ಸಾಂಸ್ಕೃತಿಕ ಸಾಂಸ್ಕೃತಿಕ ಸಂಘಟನೆ ಮತ್ತು ಸುಭಾಷಿತನಗರ ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ನಡೆದ ರಂಗಚಾವಡಿ ರಜತ ಸಂಭ್ರಮ ಮತ್ತು ರಂಗು ರಂಗಿನ ರಂಗೋತ್ಸವ ಕಾರ್ಯಕ್ರಮ ಸುರತ್ಕಲ್ ಬಂಟರ ಭವನದಲ್ಲಿ ದಿನ್ನಕ 09 ನವೆಂಬರ್ 2025ರಂದು ಜರಗಿತು. ಕಾರ್ಯಕ್ರಮವನ್ನು ಮಂಬೈ ವಿ.ಕೆ. ಸಮೂಹ ಸಂಸ್ಥೆಯ ಚೆಯರ್ ಮ್ಮಾನ್ ಮಧ್ಯಗುತ್ತು ಕರುಣಾಕರ ಎಂ. ಶೆಟ್ಟಿ, ಬಂಟರ ಯಾನೆ ನಾಡವರ ಮಾತೃಸಂಘದ ಅಧ್ಯಕ್ಷರಾದ ಕೆ. ಅಜಿತ್ ಕುಮಾರ್ ರೈ ಮಾಲಾಡಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಇವರು ಉದ್ಘಾಟಿಸಿದರು. ಅಜಿತ್ ಕುಮಾರ್ ರೈ ಮಾಲಾಡಿ ಮಾತನಾಡಿ “ರಂಗಚಾವಡಿ ಸಂಸ್ಥೆ ಕಲಾವಿದರನ್ನು ಪ್ರೋತ್ಸಾಹಿಸುತ್ತಾ ಬಂದಿರುವ ಸಂಸ್ಥೆ. ಅನೇಕ ಕಲಾವಿದರನ್ನು ಗುರುತಿಸಿ ನಾಡಿಗೆ ಪರಿಚಯಿಸಿದ ಕೀರ್ತಿ ರಂಗಚಾವಡಿ ಸಂಸ್ಥೆಗೆ ಸಲ್ಲುತ್ತದೆ. ಮುಂದಿನ ದಿನಗಳಲ್ಲಿ ರಂಗಚಾವಡಿ ಅಕಾಡೆಮಿಯನ್ನಾಗಿ ರಚಿಸಿ ಒಳ್ಳೆಯ ಕೆಲಸ ಕಾರ್ಯಗಳನ್ನು ಮಾಡುವಂತಾಗಲಿ” ಎಂದು ಶುಭ ಹಾರೈಸಿದರು. ಸಮಾರಂಭದಲ್ಲಿ ಕುಸೇಲ್ದರಸೆ ನವೀನ್…

Read More

ತುಮಕೂರು : ರಾಷ್ಟ್ರಪ್ರಶಸ್ತಿ ಪುರಸ್ಕೃತ ಮಕ್ಕಳ ಸಂಸ್ಥೆ ‘ರಂಗಕಹಳೆ’ ಬೆಂಗಳೂರು ಇದರ ವತಿಯಿಂದ ಶ್ರೀ ಅಟಲ್ ಬಿಹಾರಿ ವಾಜಪೇಯಿಯವರ ಜನ್ಮ ಶತಮನೋತ್ಸವದ ಪ್ರಯುಕ್ತ ‘ಮಕ್ಕಳ ರಂಗ ಉತ್ಸವ’ವನ್ನು ದಿನಾಂಕ 15 ನವೆಂಬರ್ 2025ರಂದು ಬೆಳಗ್ಗೆ 10-30 ಗಂಟೆಗೆ ತುಮಕೂರಿನ ಡಾ. ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದೆ. ಭರತನಾಟ್ಯ, ಜನಪದ ಗೀತೆ, ಡೊಳ್ಳು ಕುಣಿತ, ಯಕ್ಷಗಾನ ಮತ್ತು ಜನಪದದ ಸಮೂಹ ನೃತ್ಯ, ಆರ್.ಕೆ. ಫಿಲಂ ಸ್ಟೂಡಿಯೋಸ್ ಇವರಿಂದ ಶ್ರೀ ಅಟಲ್ ಬಿಹಾರಿ ವಾಜಪೇಯಿರವರ ಜೀವನಾಧಾರಿತ ‘ಸಾಕ್ಷ್ಯಚಿತ್ರ’, ಸಿ. ಲಕ್ಷ್ಮಣ ಇವರ ನಿರ್ದೇಶನದ ಕಲಾತ್ಮಕ ಚಲನಚಿತ್ರ ‘ಕಾರಣಿಕ ಶಿಶು’ ಪ್ರದರ್ಶನ, ಗುರು ಸಾಗರ್ ಟಿ.ಎಸ್. ಇವರ ನಿರ್ದೇಶನದಲ್ಲಿ ಶ್ರೀ ಸಾಯಿ ರಾಮನ್ ನೃತ್ಯ ಕೇಂದ್ರದವರಿಂದ ‘ನೃತ್ಯ ದರ್ಶನ’, ಬೆಂಗಳೂರಿನ ಗೌರಿಶಂಕರ ಅಕಾಡೆಮಿ ಫಾರ್ ಕಲ್ಚರ್ ಅಂಡ್ ಸ್ಪೋರ್ಟ್ಸ್ ಟ್ರಸ್ಟ್ ಇವರಿಂದ ಸಿ. ಲಕ್ಷ್ಮಣ ಇವರ ನಿರ್ದೇಶನದಲ್ಲಿ ‘ಬೊಮ್ಮನಹಳ್ಳಿಯ ಕಿಂದರಿ ಜೋಗಿ’ ಹಾಗೂ ಬೆಂಗಳೂರಿನ ಪೂಜಾ ಮತ್ತು ತಂಡದವರಿಂದ ಓಹಿಲೇಶ ಲಕ್ಷ್ಮಣ ಇವರ ನಿರ್ದೇಶನದಲ್ಲಿ ‘ಮೋಡಣ್ಣನ…

Read More

ಬೆಂಗಳೂರು : ಶ್ರೀ ಪೇಜಾವರ ಮಠ ವಿದ್ಯಾಪೀಠ ಬೆಂಗಳೂರು ಆಯೋಜನೆಯಲ್ಲಿ ನೀರ್ಮಾಣ್ ಯಕ್ಷಬಳಗ (ರಿ.) ಅರ್ಪಿಸುವ ತಿಂಗಳ ತಿರುಳು ಸರಣಿಯ 37ನೇ ಯಕ್ಷಗಾನ ತಾಳಮದ್ದಲೆ ಕಾರ್ಯಕ್ರಮವನ್ನು ದಿನಾಂಕ 15 ನವೆಂಬರ್ 2025ರಂದು ಸಂಜೆ 7-30 ಗಂಟೆಗೆ ಬೆಂಗಳೂರು ವಿದ್ಯಾಪೀಠದ ಶ್ರೀ ಪೇಜಾವರ ಮಠದಲ್ಲಿ ಹಮ್ಮಿಕೊಳ್ಳಲಾಗಿದೆ. ಕವಿ ಯಕ್ಷಋಷಿ ಹೊಸ್ತೋಟ ಮಂಜುನಾಥ ಭಾಗವತರು ವಿರಚಿತ ‘ಗೋವರ್ಧನ ಗಿರಿಪೂಜೆ’ ಯಕ್ಷಗಾನ ತಾಳಮದ್ದಲೆಯ ಹಿಮ್ಮೇಳದಲ್ಲಿ ಬಾಲಕೃಷ್ಣ ಹಿಳ್ಳೋಡಿ ಭಾಗವತರು, ಚಿನ್ಮಯ ಅಂಬಾರಗೊಡ್ಲು ಮದ್ದಲೆ ಮತ್ತು ಮಿತ್ರ ಮಧ್ಯಸ್ಥ ಚೆಂಡೆಯಲ್ಲಿ ಹಾಗೂ ಮುಮ್ಮೇಳದಲ್ಲಿ ರವಿ ಐತುಮನೆ, ಚಂದನ್ ಕಲಾಹಂಸ, ಸಮರ್ಥ ಬೆಂಕಟವಳ್ಳಿ, ಕುಮಾರಿ ಸಿರಿ ಹಳ್ಳದಾಚೆ, ರಾಘವೇಂದ್ರ ಹೆಗಡೆ ವಾಜಗೋಡು ಮತ್ತು ಮನೋಜ್ ಭಟ್ ಏಳಗದ್ದೆ ಸಹಕರಿಸಲಿದ್ದಾರೆ.

Read More

ಪಡುಬಿದ್ರಿ : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕಾಪು ತಾಲೂಕು ಘಟಕ ಇದರ ವತಿಯಿಂದ ಕಾಪು ತಾಲೂಕು 7ನೇ ಕನ್ನಡ ಸಾಹಿತ್ಯ ಸಮ್ಮೇಳನ -2025 ‘ಪರಿಕ್ರಮ’ ಕನ್ನಡ ಕಥಾ ಸಾಹಿತ್ಯದ ಚಿಂತನ-ಮಂಥನ ಕಾರ್ಯಕ್ರಮವು ಖ್ಯಾತ ಕಥೆಗಾರ, ಹಿರಿಯ ಸಾಹಿತಿ, ಸಾಮಾಜಿಕ ಕಾರ್ಯಕರ್ತ ಫಕೀರ್ ಮುಹಮ್ಮದ್ ಕಟ್ಟಾಡಿ ಇವರ ಸರ್ವಾಧ್ಯಕ್ಷತೆಯಲ್ಲಿ ದಿನಾಂಕ 15 ನವೆಂಬರ್ 2025ರಂದು ಹೆಜಮಾಡಿ ಬಿಲ್ಲವರ ಸಂಘದ ಸಭಾಭವನದಲ್ಲಿ ಜರಗಲಿದೆ. ಬೆಳಿಗ್ಗೆ ಗಂಟೆ 8-00ಕ್ಕೆ ಸಮ್ಮೇಳನಾಧ್ಯಕ್ಷರನ್ನು ಸ್ವಾಗತಿಸಿ, ಕನ್ನಡ ಮಾತೆ ಭುವನೇಶ್ವರೀ ದೇವಿಯ ಶೋಭಾಯಾತ್ರೆಗೆ ಚಾಲನೆ ದೊರೆಯಲಿದೆ. ಬಳಿಕ ಹೆಜಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ರೇಷ್ಮಾ ಎ. ಮೆಂಡನ್ ರಾಷ್ಟ್ರ ಧ್ವಜಾರೋಹಣಗೈಯಲಿದ್ದಾರೆ. ಕಾಪು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಬಿ. ಪುಂಡಲೀಕ ಮರಾಠೆ ಕನ್ನಡ ಸಾಹಿತ್ಯ ಪರಿಷತ್ತಿನ ಧ್ವಜಾರೋಹಣ ಮಾಡಲಿದ್ದಾರೆ. ಕಾಪುವಿನ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಇವರು ಸಮ್ಮೇಳನವನ್ನು ಉದ್ಘಾಟಿಸಲಿದ್ದು ಕ.ಸಾ.ಪ. ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಆಶಯ ನುಡಿಗಳನ್ನಾಡಲಿದ್ದಾರೆ. ನಿಕಟಪೂರ್ವ ಸಮ್ಮೇಳನಾಧ್ಯಕ್ಷ ಪಾಂಗಾಳ ಬಾಬು…

Read More

Mumbai : In the city that never sleeps – where the hum of traffic meets the rhythm of dreams – Mumbai witnessed an evening of divine resonance and cultural splendour as Arunodaya Kala Niketan, the city’s eminent 66-year-old institution, celebrated its Suvarna Mahotsavam on 2nd November 2025, a festival of music and dance paying homage to its illustrious founder, Vidwan Guru M. N. Suvarna Ji. The grand event was curated by Dr. Guru Meenakshi Shriyan, Artistic Director of Arunodaya Kala Niketan, who continues the glorious legacy of her father with devotion and artistic excellence. The festival commenced with a musical…

Read More

ಮೂಡುಬಿದಿರೆ : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮೂಡುಬಿದಿರೆ ಹೋಬಳಿ ಘಟಕ ಇವರ ವತಿಯಿಂದ ‘ಸಂಸ್ಕೃತಿ ಚಿಂತನ ಸಮಾರಂಭ’ವನ್ನು ದಿನಾಂಕ 16 ನವೆಂಬರ್ 2025ರಂದು ಪೂರ್ವಾಹ್ನ 10-30 ಗಂಟೆಗೆ ಮೂಡುಬಿದಿರೆ ಕಲ್ಲಬೆಟ್ಟು ಮುರಾರ್ಜಿ ದೇಸಾಯಿ ವಸತಿ ಪ್ರೌಢ ಶಾಲೆಯಲ್ಲಿ ಆಯೋಜಿಸಲಾಗಿದೆ. ಈ ಸಮಾರಂಭದ ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ತು ಮೂಡುಬಿದಿರೆ ಹೋಬಳಿ ಘಟಕದ ಅಧ್ಯಕ್ಷರಾದ ಡಾ. ರಾಮಕೃಷ್ಣ ಶಿರೂರು ಇವರು ವಹಿಸಲಿದ್ದು, ಕನ್ನಡ ಸಾಹಿತ್ಯ ಪರಿಷತ್ತು ಮೂಡಬಿದಿರೆ ತಾಲೂಕು ಅಧ್ಯಕ್ಷರಾದ ವೇಣುಗೋಪಾಲ ಶೆಟ್ಟಿ ಇವರು ಶುಭ ನುಡಿಗಳನ್ನಾಡಲಿದ್ದಾರೆ. ‘ಮಾನವ ಜನ್ಮ – ಮಾನವ ಧರ್ಮ’ ಎಂಬ ವಿಷಯದ ಬಗ್ಗೆ ಕಡಂದಲೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಪ್ರೌಢ ಶಾಲೆಯ ಪ್ರಧಾನ ಅಧ್ಯಾಪಕರಾದ ದಿನಕರ ಕುಂಭಾಶಿ ಇವರು ಉಪನ್ಯಾಸ ನೀಡಲಿದ್ದಾರೆ.

Read More