Author: roovari

ಧಾರವಾಡ : ಡಾ. ದ.ರಾ. ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ (ರಿ.) ಧಾರವಾಡ ಇದರ ವತಿಯಿಂದ ವಿಶೇಷ ಉಪನ್ಯಾಸ ಹಾಗೂ ಸಂಗೀತ-ನೃತ್ಯ ಕಾರ್ಯಕ್ರಮವನ್ನು ದಿನಾಂಕ 05 ಅಕ್ಟೋಬರ್ 2025ರಂದು ಸಂಜೆ 5-00 ಗಂಟೆಗೆ ಧಾರವಾಡ ಸಾಧನಕೇರಿಯ ಡಾ. ದ.ರಾ. ಬೇಂದ್ರೆ ಭವನದಲ್ಲಿ ಆಯೋಜಿಲಾಗಿದೆ. ಡಾ. ದ.ರಾ. ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಇದರ ಅಧ್ಯಕ್ಷರಾದ ಡಾ. ಸರಜೂ ಕಾಟ್ಕರ್ ಇವರು ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದು, ಧಾರವಾಡದ ಸಾಹಿತಿ ಡಾ. ಕೃಷ್ಣ ಕಟ್ಟಿ ಇವರು ‘ಬೇಂದ್ರೆಯವರ ಕಾವ್ಯದಲ್ಲಿ ಮಾತೃಕೆಯರು’ ಎಂಬ ವಿಷಯದ ಬಗ್ಗೆ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಧಾರವಾಡದ ನಾದಸುರಭಿ ಸಾಂಸ್ಕೃತಿಕ ಅಕಾಡೆಮಿಯ ಡಾ. ಜ್ಯೋತಿಲಕ್ಷ್ಮೀ ಕೂಡ್ಲಿಗಿ ಮತ್ತು ವೃಂದದವರಿಂದ ಭಾವಗೀತೆ ಗಾಯನ, ಧಾರವಾಡದ ಭರತ ನೃತ್ಯ ಅಕಾಡೆಮಿ ಕಲಾತಂಡದ ವಿದ್ವಾನ್ ರಾಜೇಂದ್ರ ಎನ್. ಟೊಣಪಿ ಮತ್ತು ತಂಡದವರಿಂದ ಡಾ. ದ.ರಾ. ಬೇಂದ್ರೆಯವರ ಗೀತೆಗಳಿಗೆ ನೃತ್ಯ ಪ್ರಸ್ತುತಗೊಳ್ಳಲಿದೆ.

Read More

ಮೂಡುಬಿದಿರೆ : ಹಿರಿಯ ಯಕ್ಷಗಾನ ಕಲಾವಿದ ಹಾಗೂ ಕಾಷ್ಠ ಶಿಲ್ಪಿ ಬೋಳ ದುಗ್ಗಪ್ಪ ಆಚಾರ್ಯ ದಿನಾಂಕ 01 ಅಕ್ಟೋಬರ್ 2025ರ ಬುಧವಾರ ಬೆಳುವಾಯಿಯ ಅಂತಬೆಟ್ಟುವಿನಲ್ಲಿರುವ ಸಂಬಂಧಿಕರ ಮನೆಯಲ್ಲಿ ನಿಧನರಾದರು. ಇವರಿಗೆ 72 ವರ್ಷ ವಯಸ್ಸಾಗಿತ್ತು. ಮೂಲತಃ ಕಾರ್ಕಳ ತಾಲೂಕಿನ ಬೋಳದವರಾದ ಇವರು ಕೆಲ ಸಮಯದಿಂದ ತಮ್ಮ ಸಂಬಂಧಿ, ಪತ್ರಕರ್ತ ಬಿ. ಸೀತಾರಾಮ ಆಚಾರ್ಯ ಅವರ ಮನೆಯಲ್ಲಿ ವಾಸವಾಗಿದ್ದರು. ಶ್ರೀಯುತರು ಕೇವಲ ಯಕ್ಷಗಾನ ಕಲಾವಿದರಾಗಷ್ಟೇ ಅಲ್ಲದೆ, ಕ್ಲಿಷ್ಟಕರವಾದ ಮರದ ಮೇಲ್ಲಾವಣಿ ಕೆತ್ತನೆಗಳ ಕಾಷ್ಠ ಶಿಲ್ಪಿಯಾಗಿಯೂ ಪ್ರಸಿದ್ಧರಾಗಿದ್ದರು. ಯಕ್ಷಗಾನದಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಇವರು, ತಾಳಮದ್ದಲೆಯಲ್ಲಿ ಅರ್ಥಧಾರಿಯಾಗಿಯೂ ಜನಪ್ರಿಯರಾಗಿದ್ದರು. ಹಲವಾರು ಪ್ರಸಂಗಗಳನ್ನು ರಚಿಸಿರುವ ಇವರು ಯಕ್ಷಗುರುವಾಗಿ ಮುಂಡ್ಕೂರು, ಸಚ್ಚೇರಿಪೇಟೆ, ವಂಜಾರಕಟ್ಟೆ, ಮೂಡುಬಿದಿರೆ ಸೇರಿದಂತೆ ಹಲವೆಡೆ ಅಪಾರ ವಿದ್ಯಾರ್ಥಿಗಳಿಗೆ ಉಚಿತವಾಗಿ ಯಕ್ಷ ಶಿಕ್ಷಣವನ್ನು ನೀಡಿದ್ದಾರೆ. ಮುಂಡ್ಕೂರು ದುರ್ಗಾಪರಮೇಶ್ವರಿ ಯಕ್ಷಗಾನ ಮೇಳದ ಖಾಯಂ ಕಲಾವಿದರಾಗಿಯೂ ಇವರು ಸೇವೆ ಸಲ್ಲಿಸಿದ್ದರು. ಇವರ ಸೇವೆಗಾಗಿ ಕಿನ್ನಿಗೋಳಿ ಯುಗಪುರುಷ ಸಹಿತ ಹಲವಾರು ಸಂಘ ಸಂಸ್ಥೆಗಳು ಸನ್ಮಾನಿಸಿ ಗೌರವಿಸಿವೆ.

Read More

ಮೈಸೂರು : ಜನಮನ ಸಾಂಸ್ಕೃತಿಕ ಸಂಘಟನೆ ಮೈಸೂರು ಪ್ರಸ್ತುತ ಪಡಿಸುವ ಪಿ. ಲಂಕೇಶರ ಕಥೆಯಾಧಾರಿತ ‘ಕಲ್ಲು ಕರಗುವ ಸಮಯ’ ನಾಟಕ ಪ್ರದರ್ಶನವನ್ನು ದಿನಾಂಕ 05 ಅಕ್ಟೋಬರ್ 2025ರಂದು ಸಂಜೆ 6-30 ಗಂಟೆಗೆ ಮೈಸೂರು ರಾಮಕೃಷ್ಣ ನಗರದ ರಮಾಗೋವಿಂದ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. ಪ್ರಗತಿಪರ ಚಿಂತಕರಾದ ಡಾ. ಸಬೀಹಾ ಭೂಮಿಗೌಡ ಮತ್ತು ಭೂಮಿಗೌಡರವರು ನಾಟಕಕ್ಕೆ ಚಾಲನೆ ನೀಡಲಿದ್ದು, ಕೆ.ಆರ್. ಸುಮತಿ ಇವರು ರಂಗರೂಪ, ವಿನ್ಯಾಸ ಮತ್ತು ನಿರ್ದೇಶನ ಮಾಡಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ 94489 71900 ಮತ್ತು 99457 80989 ಸಂಖ್ಯೆಯನ್ನು ಸಂಪರ್ಕಿಸಿರಿ.

Read More

ಮಂಗಳೂರು : ಕುದ್ರೋಳಿಯಲ್ಲಿ ದಿನಾಂಕ 01 ಅಕ್ಟೋಬರ್ 2025ರಂದು ಮಂಗಳೂರು ದಸರಾ ಮಹೋತ್ಸವದ ಸಂದರ್ಭದಲ್ಲಿ ಏರ್ಪಡಿಸಿದ್ದ ಕನ್ನಡ ಹಾಗೂ ತುಳು ಭಾಷೆಯ ದಸರಾ ಕವನ ಸ್ಪರ್ಧೆಯಲ್ಲಿ ಕನ್ನಡ ವಿಭಾಗದಲ್ಲಿ ದ್ವಿತೀಯ ಸ್ಥಾನ ವಿಜೇತರಾದ ಡಾ. ಸುರೇಶ ನೆಗಳಗುಳಿಯವರನ್ನು ಶಾಲು ಫಲ ಪುಷ್ಪ ನೆನಪಿನ ಕಾಣಿಕೆ ಸಹಿತವಾಗಿ ಗೌರವಿಸಲಾಯಿತು. ಇದೇ ವೇಳೆ ತುಳು ಕವನ ಪ್ರಥಮ ಸ್ಥಾನ ವಿಜೇತ ಚೇತನ ವರ್ಕಾಡಿಯವರನ್ನು ಗೌರವಿಸಲಾಯಿತು.

Read More

ಉಡುಪಿ : ಪರ್ಕಳದ ಸರಿಗಮ ಭಾರತಿ ಸಂಗೀತ ವಿದ್ಯಾಲಯ (ರಿ.) ಇದರ ವತಿಯಿಂದ ‘ವಿದ್ಯಾದಶಮಿ ಸಂಗೀತೋತ್ಸವ -2025’ವನ್ನು ದಿನಾಂಕ 02 ಅಕ್ಟೋಬರ್ 2025ರಂದು ಕುಕ್ಕುದಕಟ್ಟೆಯಲ್ಲಿರುವ ಸರಿಗಮ ಭಾರತಿ ಸಭಾಂಗಣದಲ್ಲಿ ನಡೆಯಿತು. ಈ ಉತ್ಸವವನ್ನು ಉದ್ಘಾಟಿಸಿ ಮಾತನಾಡಿದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ “ಪ್ರಕೃತಿಯಲ್ಲಿ ಮತ್ತು ಕಲಾ ಪ್ರಕಾರಗಳಲ್ಲಿ ನಮ್ಮ ಹಿರಿಯರು ಭಗವಂತನ ಅನುಸಂಧಾನ ಕಂಡುಕೊಂಡರು. ಕಳೆದ 25 ವರ್ಷಗಳಿಂದ ಈ ಪರಂಪರೆಯಲ್ಲಿ ಸರಿಗಮ ಭಾರತಿ ಸಂಸ್ಥೆ ಸಾಗಿ ಬಂದಿದೆ. ಸನಾತನ ಮೌಲ್ಯಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎನ್ನುವ ಈ ಸಂಸ್ಥೆಯ ಕಾಳಜಿಗೆ ಬಹಳಷ್ಟು ಮಂದಿ ಸ್ಪಂದಿಸಿ ಕೈಜೋಡಿಸಿದ್ದಾರೆ ಎನ್ನುವುದು ಸಂತೋಷದ ಸಂಗತಿ. ವಿಜಯದಶಮಿಯ ಈ ಸಂದರ್ಭ ಇದೊಂದು ಆನಂದದ ಕ್ಷಣ. ಇಂದಿನ ಒತ್ತಡದ ಬದುಕಿನ ಮಧ್ಯೆ ಎಲ್ಲರದ್ದು ಆನಂದದ ಹುಡುಕಾಟ. ಯಾವುದೇ ಕಾರ್ಯಕ್ರಮ ನಡೆಯಲಿ ಇದರಿಂದ ನನಗೆ ಲಾಭ ಏನಿದೆ ಎನ್ನುವ ಪ್ರಶ್ನೆ ನಮ್ಮನ್ನೆಲ್ಲ ಕಾಡುವುದು ಸಹಜ. ಆದರೆ ಅದನ್ನು ಮೀರಿ ಈ ಕಾರ್ಯಕ್ರಮದಲ್ಲಿ ನನ್ನ ಪಾತ್ರವೇನಿದೆ, ನಾನು ಮಾಡಬೇಕಾದ ಕೆಲಸ ಏನಿದೆ ಎನ್ನುವ…

Read More

ನಾರಾವಿ : ನವರಾತ್ರಿಯ ಪ್ರಯುಕ್ತ ದಿನಾಂಕ 28 ಸೆಪ್ಟೆಂಬರ್ 2025ರಂದು ನಾರಾವಿಯ ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿ ಮಧೂರು ಮೋಹನ ಕಲ್ಲೂರಾಯ ಇವರಿಂದ ‘ಪುರಂದರದಾಸರು’ ಎಂಬ ಹರಿಕಥಾ ಕಾಲಕ್ಷೇಪವು ನಡೆಯಿತು. ವಿಶಾಖ ಆಚಾರ್ಯ ತಬ್ಲದಲ್ಲಿ ಸಹಕರಿಸಿದರು. ಸಹಗಾಯನದಲ್ಲಿ ಶ್ರೀಮತಿ ಸುವರ್ಣ ಕುಮಾರಿ, ಸುಮಂಗಲ ಕುಂಟಿನಿ, ವಿದ್ಯಾ ನಾರಾವಿ ಪಾಲ್ಗೊಂಡರು.

Read More

ಉಡುಪಿ : ಕನ್ನಡದ ಮೊದಲ ಮಹಾಕಾವ್ಯ ರಾಮಾಯಣದ ಕರ್ತೃ, ಪೌರಾಣಿಕ ಕವಿ, ಆದಿ ಕವಿ ಮಹರ್ಷಿ ವಾಲ್ಮೀಕಿ ಜಯಂತಿ ದಿನಾಂಕ 07 ಅಕ್ಟೋಬರ್ 2025ರಂದು ಆಚರಿಸುತ್ತೇವೆ. ಸರ್ಕಾರವೂ ಕೂಡಾ ಸಕಲ ಗೌರವಗಳೊಂದಿಗೆ ರಾಜ್ಯದ ಎಲ್ಲಾ ಜಿಲ್ಲಾ ಮಟ್ಟದ ಕಚೇರಿಗಳಲ್ಲಿ ಮಹರ್ಷಿ ವಾಲ್ಮೀಕಿ ಅವರ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸುತ್ತದೆ. ಮಹರ್ಷಿ ವಾಲ್ಮೀಕಿಯವರು ನಮ್ಮ ಹಿಂದೂ ಸಮಾಜಕ್ಕೆ ಭಕ್ತಿ ಭಾವನಾತ್ಮಕ ಗ್ರಂಥವಾದ ರಾಮಾಯಣವನ್ನು ನಮಗೆ ಕೊಟ್ಟವರು, ರತ್ನಾಕರನೆಂಬ ಒಬ್ಬ ಬೇಡ, ಕ್ರೂರ ವ್ಯಕ್ತಿ ಮಹರ್ಷಿ ವಾಲ್ಮೀಕಿಯಾಗಿ ಪರಿವರ್ತಿತಗೊಂಡ ಅಧ್ಬುತ ಕಥೆ ತಿಳಿದಿರುವಂತದ್ದು, ಹಿಂದೂಗಳಾದ ನಾವೆಲ್ಲ ಮಹರ್ಷಿ ವಾಲ್ಮೀಕಿ ಇವರನ್ನು ಭಕ್ತಿಯಿಂದ ಪೂಜಿಸಬೇಕು, ಆರಾಧಿಸಬೇಕು. ಮಹರ್ಷಿ ವಾಲ್ಮೀಕಿ ಜಯಂತಿಯ ಅಂಗವಾಗಿ ಕಳೆದ ಎರಡು ವರ್ಷಗಳಿಂದ ಉಡುಪಿ ಜಿಲ್ಲೆಯಲ್ಲಿ ಮಹರ್ಷಿ ವಾಲ್ಮೀಕಿ ಸಂಘದ ವತಿಯಿಂದ ಕಾರ್ಯಕ್ರಮವನ್ನು ಆಯೋಜಿಸಿ ಆಚರಿಸುತ್ತಿದ್ದೇವೆ. ಕಾರ್ಯಕ್ರಮದ ಉದ್ಘಾಟಕರಾಗಿ ಮಾನ್ಯ ಶಾಸಕರಾದ ಯಶ್ ಪಾಲ್ ಸುವರ್ಣ ಇವರು ಆಗಮಿಸಲಿದ್ದು, ಕನ್ನಡ ನಾಡು – ನುಡಿ ಸಂಸ್ಕೃತಿ, ಸಾಹಿತ್ಯ ಮತ್ತು ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸಾಧನೆ ಮಾಡಿರುವ…

Read More

ಧಾರವಾಡ : ಹಾವೇರಿಯ ಶ್ರೀ ಅಂಗರಾಜ ಸೊಟ್ಟಪ್ಪನವರ ಇವರ ‘ಅರ್ಧ ಮೊಳ ಹೂವು’ ಮತ್ತು ದಾವಣಗೆರೆಯ ಶ್ರೀ ರೇವಣಸಿದ್ದಪ್ಪ ಜಿ.ಆರ್್. ಇವರ ‘ಭವದ ಕಣ್ಣು’ ಕವನ ಸಂಕಲನಗಳ ಹಸ್ತಪ್ರತಿಗಳಿಗೆ ಬಿ.ಸಿ. ರಾಮಚಂದ್ರ ಶರ್ಮ ಜನ್ಮ ಶತಮಾನೋತ್ಸವ ಕಾವ್ಯ ಪ್ರಶಸ್ತಿ ದೊರೆತಿದೆ. ಈ ಪ್ರಶಸ್ತಿಯು ತಲಾ ರೂ.10,000/- ನಗದು, ಪ್ರಶಸ್ತಿ ಫಲಕ ಮತ್ತು ಸನ್ಮಾನ ಒಳಗೊಂಡಿರುತ್ತದೆ. ಈ ಪ್ರಶಸ್ತಿಗಾಗಿ ಒಟ್ಟು ಐವತ್ತೇಳು ಕವನಸಂಕಲನಗಳ ಹಸ್ತಪ್ರತಿಗಳು ಬಂದಿದ್ದವು. ಅಂತಿಮ ಸುತ್ತಿನಲ್ಲಿ ಐದು ಕವನಸಂಕಲನಗಳಿದ್ದವು. ಈ ಐದು ಹಸ್ತಪ್ರತಿಗಳಲ್ಲಿ ಕವಿತೆಗಳ ಗುಣಮಟ್ಟವನ್ನು ಮಾತ್ರ ಆಯ್ಕೆಯ ಏಕೈಕ ಮಾನದಂಡವನ್ನಾಗಿಟ್ಟುಕೊಂಡು ಅತ್ಯುತ್ತಮವಾದ ಎರಡು ಕವನಸಂಕಲನಗಳಿಗೆ ಪ್ರಶಸ್ತಿ ನೀಡಲಾಗಿದೆಯೆಂದು ತೀರ್ಪುಗಾರರಾದ ಡಾ. ಸುಭಾಷ್ ಪಟ್ಟಾಜೆ ಕಾಸರಗೋಡು ಮತ್ತು ಕುಮಾರಿ ಭವ್ಯ ಭಟ್ ಮಡಿಕೇರಿ ತಿಳಿಸಿದ್ದಾರೆ. ಪ್ರಶಸ್ತಿ ಪುರಸ್ಕೃತರಾದ ಶ್ರೀ ಲಿಂಗರಾಜ ಸೊಟ್ಟಪ್ಪನವರ ಮತ್ತು ಶ್ರೀ ರೇವಣಸಿದ್ದಪ್ಪ ಇವರಿಗೆ ಸಾಹಿತ್ಯ ಗಂಗಾ ಮುಖ್ಯಸ್ಥರಾದ ಯುವ ವಿಮರ್ಶಕ ಶ್ರೀ ವಿಕಾಸ ಹೊಸಮನಿ ಮತ್ತು ಸಂಚಾಲಕರಾದ ಯುವ ಲೇಖಕ ಡಾ. ಸುಭಾಷ್ ಪಟ್ಟಾಜೆ ಅಭಿನಂದನೆ…

Read More

ಹುಬ್ಬಳ್ಳಿ : 2025ನೇ ಸಾಲಿನ ವಿಭಾ ಸಾಹಿತ್ಯ ಪ್ರಶಸ್ತಿಗೆ ಸಂತೆಬೆನ್ನೂರು ಫೈಜ್ನಟ್ರಾಜ್‌ ಇವರ ‘ಮಡಿಲ ಕೂಸಿಗೆ ಮಣ್ಣಿನ ಸೆರಗು’ ಎಂಬ ಕವನ ಸಂಕಲನದ ಹಸ್ತಪ್ರತಿ ಆಯ್ಕೆಯಾಗಿದೆ. ಪ್ರಶಸ್ತಿ ರೂ.10,000/- ನಗದು ಮತ್ತು ಪ್ರಶಸ್ತಿ ಫಲಕ ಒಳಗೊಂಡಿದೆ. ವಿಮರ್ಶಕರಾದ ಸಿರಾಜ್ ಅಹಮದ್ ಮತ್ತು ವಿಜಯಾ ಗುತ್ತಲ ಇವರು ತೀರ್ಪುಗಾರರಾಗಿದ್ದರು. ದಾವಣಗೆರೆ ಜಿಲ್ಲೆ ಸಂತೆಬೆನ್ನೂರಿನ ಫೈಜ್ನಟ್ರಾಜ್‌ ಇವರು ಡಯಟ್ ಕಾಲೇಜಿನಲ್ಲಿ ಉಪನ್ಯಾಸಕರಾಗಿದ್ದು, ಕರ್ನಾಟಕ ಸಾಹಿತ್ಯ ಅಕಾಡೆಮಿ ಸೇರಿ ಹಲವು ಪ್ರಶಸ್ತಿಗಳು ಸಂದಿವೆ ಎಂದು ವಿಭಾ ಸಾಹಿತ್ಯ ಪ್ರಶಸ್ತಿಯ ಸಂಚಾಲಕಿ ಸುನಂದಾ ಪ್ರಕಾಶ ಕಡಮೆ ತಿಳಿಸಿದ್ದಾರೆ.

Read More

ಮಂಗಳೂರು : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ- 2025ರ ಅಂಗವಾಗಿ ರಂಗ ಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ಮಂಗಳೂರು ಸಹಯೋಗದಲ್ಲಿ ದಿನಾಂಕ 23 ಸೆಪ್ಟೆಂಬರ್ 2025ರಂದು 2ನೇ ವರ್ಷದ ಬಹುಭಾಷಾ ಮತ್ತು ತುಳು ಕವಿಗೋಷ್ಠಿಗಳನ್ನು ಹಮ್ಮಿಕೊಳ್ಳಲಾಗಿತ್ತು. ಕವಿಗೋಷ್ಠಿಯನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಪುರುಷೋತ್ತಮ ಬಿಳಿಮಲೆ ಇವರು ಉದ್ಘಾಟಿಸಿ “ಭಾರತ ಹಲವು ಭಾಷೆಗಳ ರಂಗೋಲಿ. ಎಲ್ಲಾ ಭಾಷೆಗಳ ಉದ್ದೇಶ ಮನುಕುಲದ ಉದ್ದಾರ. ಇಲ್ಲಿ ಯಾವುದೇ ಭಾಷೆಯನ್ನು ಸಾಯಲು ಬಿಡಬಾರದು. ಕೆಲವು ಭಾಷೆಗಳು ಪತನಮುಖಿಯಾಗಿವೆ. ಇಂತಹ ಬಿಕ್ಕಟ್ಟಿನ ಸನ್ನಿವೇಶದಲ್ಲಿ ಬಹುಭಾಷಾ ಕವಿಗೋಷ್ಠಿ ಪೂರಕ. ಕವಿಗಳು ಹೊಸಲೋಕವನ್ನು ಭಾಷೆಯಲ್ಲಿ ಸೃಷ್ಟಿಸುತ್ತಾರೆ. ಆದರೆ ಭಾಷೆಯನ್ನು ಮುರಿದು ಕಟ್ಟುವ ಚೈತನ್ಯ ಕವಿಗಳಿಗೆ ಬೇಕು” ಎಂದರು. ಪದ್ಮರಾಜ್ ಆರ್. ಪೂಜಾರಿ ಮಾತನಾಡಿ “ದಸರಾ ಎನ್ನುವುದು ಕೇವಲ ಧಾರ್ಮಿಕತೆಗೆ ಸೀಮಿತವಾಗಿರದೆ ಕಲೆ, ಸಾಹಿತ್ಯದ ಹಬ್ಬವೂ ಇರಬೇಕು ಎಂಬ ದೃಷ್ಟಿಯಿಂದ ಬಹುಭಾಷಾ ಕವಿಗೋಷ್ಠಿಯನ್ನು ಕಳೆದೆರಡು ವರ್ಷದಿಂದ ಹಮ್ಮಿಕೊಳ್ಳಲಾಗುತ್ತಿದೆ” ಎಂದರು. ಆಯ್ದ ಕವನಗಳ ಕವನ ಸಂಕಲನವನ್ನು ಕುದ್ರೋಳಿ ಕ್ಷೇತ್ರಾಡಳಿತ ಮಂಡಳಿ…

Read More