Author: roovari

ಕಾಸರಗೋಡು : ಕೇರಳ ರಾಜ್ಯ-ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಕೇಂದ್ರ ಸಮಿತಿ, ದಕ್ಷಿಣ ಕನ್ನಡ ಜಿಲ್ಲಾ ಘಟಕ ಮತ್ತು ಕನ್ನಡ ಭವನ ದಕ್ಷಿಣ ಕನ್ನಡ ಜಿಲ್ಲಾ ಘಟಕ ಸಂಯುಕ್ತ ಆಶ್ರಯದಲ್ಲಿ ‘ಮನೆ ಮನೆ -ಕನ್ನಡ ಜಾಗೃತಿ ಅಭಿಯಾನ’ದ ದ್ವಿತೀಯ ಕಾರ್ಯಕ್ರಮವು ದಿನಾಂಕ 27 ಜುಲೈ 2025ರಂದು ದ.ಕ. ಜಿಲ್ಲಾ ಅಧ್ಯಕ್ಷರಾದ ಸಾಹಿತಿ ಡಾ. ಗೋವಿಂದ ಭಟ್ ಕೊಳ್ಚಪ್ಪೆ ಇವರ ಮಂಗಳೂರಿನ ನಿವಾಸದಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದ ಕನ್ನಡ ಭವನ ಮತ್ತು ಕೇರಳ ರಾಜ್ಯ-ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಸ್ಥಾಪಕ ಸಂಚಾಲಕರಾದ ಡಾ. ವಾಮನ್ ರಾವ್ ಬೇಕಲ್ ಇವರು ಮಾತನಾಡಿ “ಕನ್ನಡ ಭಾಷೆ, ಸಾಹಿತ್ಯ, ಕನ್ನಡ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಕನ್ನಡದ ಕಟ್ಟಾಳುಗಳನ್ನು ಪರಸ್ಪರ ಜೋಡಿಸುವುದೇ ‘ಮನೆ ಮನೆ -ಕನ್ನಡ ಜಾಗೃತಿ ಅಭಿಯಾನ’ದ ಪ್ರಧಾನ ಉದ್ದೇಶ. ಕನ್ನಡ ಮನಸುಗಳು ಒಂದಾಗಬೇಕು. ಕನ್ನಡ ಪ್ರಜ್ಞೆ ಹೊಸ ತಲೆಮಾರಿನಲ್ಲಿ ಬೇರೂರಿಸುವ ಪ್ರಯತ್ನಕ್ಕೆ, ಕವಿಗಳು, ಸಾಹಿತಿಗಳು, ಕಲಾವಿದರು, ಸಂಘಟಕರು ಒಂದಾಗಿ ಸೇರಿ ಚರ್ಚಿಸುವ ವೇದಿಕೆ…

Read More

ಬಂಟ್ವಾಳ : ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಸಹಯೋಗದಲ್ಲಿ ವಿಶ್ವಭಾರತಿ ಯಕ್ಷ ಸಂಜೀವಿನಿ ಟ್ರಸ್ಟ್ ಮುಡಿಪು ವತಿಯಿಂದ ಸುಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ಯಕ್ಷಗಾನ ತಾಳಮದ್ದಳೆ ಹಾಗೂ ಹಿರಿಯ ಭಾಗವತರಾದ ದಿವಂಗತ ಕುಬಣೂರು ಶ್ರೀಧರ ರಾವ್ ಸ್ಮರಣೆ ಕಾರ್ಯಕ್ರಮ ಬಿ.ಸಿ.ರೊಡಿನ ತುಳು ಶಿವಳ್ಳಿ ಸಭಾಭವನದಲ್ಲಿ ದಿನಾಂಕ 27 ಜುಲೈ 2025ರಂದು ನಡೆಯಿತು. ತುಳು ಶಿವಳ್ಳಿ ಸೇವಾ ಟ್ರಸ್ಟ್ ಬಂಟ್ವಾಳ ಸಹಯೋಗದೊಂದಿಗೆ ಒಂಭತ್ತು ದಿನಗಳ ಕಾಲ ನಡೆದ ಭಾರತ ದರ್ಶನ ಸರಣಿ ತಾಳಮದ್ದಳೆಯ ಸಮಾರೋಪವೂ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ “ಯಕ್ಷಗಾನ ಕಲೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ವಿಶ್ವಭಾರತಿ ನಡೆಸುತ್ತಿರುವ ಪ್ರಯತ್ನಗಳು ಶ್ಲಾಘಿನೀಯ. ಹಿರಿಯ ಯಕ್ಷಗಾನ ಕಲಾವಿದ ಜಬ್ಬಾರ್ ಸಮೋ ಸಂಪಾಜೆ ಇವರು ಕುಬಣೂರು ಶ್ರೀಧರ ರಾವ್ ಅವರ ಸಂಸ್ಮರಣೆಯನ್ನು ನೆರವೇರಿಸಿದರು. ಕರ್ನಾಟಕ ಯಕ್ಷಗಾನ ಅಕಾಡೆಮಿ ಸದಸ್ಯ ಕೃಷ್ಣಪ್ಪ ಕಿನ್ಯ, ಮಾಜಿ ಸದಸ್ಯ ಭಾಸ್ಕರ ರೈ ಕುಕ್ಕುವಳ್ಳಿ, ಸಚಿಪಮಾಗಣೆ ತಂತ್ರಿ ಎಂ. ಸುಬ್ರಹ್ಮಣ್ಯ ಭಟ್, ವೈದ್ಯರಾದ ಡಾ.…

Read More

ಸುಳ್ಯ : ಸಂತಕವಿ ಕನಕದಾನ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ವತಿಯಿಂದ ಕನಕದಾಸರ ಕುರಿತು ‘ಕನಕ ಕಾವ್ಯ ವೈಭವ’ ಎಂಬ ನಂಗೀತ-ನೃತ್ಯ ರೂಪಕ, ಕನಕದಾಸರ ಕುರಿತು ಉಪನ್ಯಾಸ, ಗಮಕ ವಾಚನ-ವ್ಯಾಖ್ಯಾನ ಒಳಗೊಂಡಂತೆ ಒಂದು ದಿನದ ‘ಕನಕ ಉತ್ಸವ’ ಕಾರ್ಯಕ್ರಮವು ಗೋವಾದಲ್ಲಿ ದಿನಾಂಕ 24 ಆಗಸ್ಟ್ 2025ರಂದು ಗೋವಾದ ಹೊಟೇಲ್ ಝಡ್ ಸ್ವೇರ್ ನಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಕನಕದಾಸರ ಕುರಿತು ಉಪನ್ಯಾಸ ನೀಡಲು ಕರ್ನಾಟಕದಿಂದ ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕರು ಹಾಗೂ ವ್ಯಕ್ತಿತ್ವ ವಿಕಸನ ತರಬೇತುದಾರರೂ ಆದ ಡಾ. ಅನುರಾಧಾ ಕುರುಂಜಿಯವರು ಆಯ್ಕೆಯಾಗಿದ್ದಾರೆ. ವ್ಯಕ್ತಿತ್ವ ವಿಕಸನ ತರಬೇತುದಾರರಾಗಿ ಸುಮಾರು 2500ಕ್ಕೂ ಮಿಕ್ಕಿ ತರಬೇತಿ, ಉಪನ್ಯಾಸಗಳನ್ನು ನೀಡಿದುದಲ್ಲದೇ ಹಲವು ಅಂತಾರಾಷ್ಟ್ರೀಯ, ರಾಷ್ಟ್ರೀಯ, ರಾಜ್ಯ ಮಟ್ಟದ ವಿಚಾರ ಸಂಕಿರಣಗಳಲ್ಲಿ ಪ್ರಬಂಧ ಮಂಡಿಸಿರುವ ಡಾ. ಅನುರಾಧಾ ಕುರುಂಜಿಯವರು ಪದ್ಮಯ್ಯ ಗೌಡ ಕುರುಂಜಿ ಹಾಗೂ ಸೀತಮ್ಮ ಕುರುಂಜಿ ದಂಪತಿಗಳ ಪುತ್ರಿ ಹಾಗೂ ಕೆವಿಜಿ ಪಾಲಿಟೆಕ್ನಿಕ್ ಶಿಕ್ಷಕ ಚಂದ್ರಶೇಖರ ಬಿಳಿನೆಲೆಯವರ ಪತ್ನಿಯಾಗಿದ್ದಾರೆ.

Read More

ಬೆಂಗಳೂರು : ಸಂಜೋಗ್ ಬಾನ್ಸುರಿ ಮಹಾವಿದ್ಯಾಲಯ ಪ್ರಸ್ತುತ ಪಡಿಸುವ ‘ಗುರುವಂದನಾ 2025’ ಕಾರ್ಯಕ್ರಮವನ್ನು ದಿನಾಂಕ 02 ಆಗಸ್ಟ್ 2025ರಂದು ಸಂಜೆ 3-00 ಗಂಟೆಗೆ ಬೆಂಗಳೂರು ಮಲ್ಲೇಶ್ವರಂನಲ್ಲಿರುವ ಚೌಡಯ್ಯ ಮೆಮೋರಿಯಲ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಹಾಡುಗಾರಿಕೆ ಮತ್ತು ಬಾನ್ಸುರಿ ಜುಗಲ್ಬಂದಿಯಲ್ಲಿ ಶಾದಜ್ ಗಾಡ್ಖಿಂಡಿ ಬಾನ್ಸುರಿ, ಅನಿರುದ್ಧ ಐತಾಳ್ ಹಾಡುಗಾರಿಕೆ, ರೂಪಕ್ ಕಲ್ಲೂರ್ಕರ್ ತಬಲಾ ಮತ್ತು ಪ್ರಸಾದ್ ಕಾಮತ್ ಹಾರ್ಮೋನಿಯಂನಲ್ಲಿ ಹಾಗೂ ವಿಶಿಷ್ಟ ಹಿಂದೂಸ್ತಾನಿ ಮತ್ತು ಕರ್ನಾಟಿಕ್ ಕೊಳಲು ಜುಗಲ್ಬಂದಿಯಲ್ಲಿ ಡಾ. ಪಂಡಿತ್ ಪ್ರವೀಣ್ ಗಾಡ್ಖಿಂಡಿ ಇವರಿಂದ ಬಾನ್ಸುರಿ, ವಿದ್ವಾನ್ ಶಶಾಂಕ್ ಸುಬ್ರಮಣ್ಯಂ ಕರ್ನಾಟಿಕ್ ಕೊಳಲು, ವಿದ್ವಾನ್ ತುಮಕೂರು ಬಿ. ರವಿಶಂಕರ್ ಇವರು ಮೃದಂಗ ಮತ್ತು ವಿದ್ವಾನ್ ಕಿರಣ್ ಗಾಡ್ಖಿಂಡಿ ತಬಲಾದಲ್ಲಿ ಸಹಕರಿಸಲಿದ್ದಾರೆ.

Read More

ಬೆಳ್ತಂಗಡಿ : ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.) ಉಜಿರೆ ಹಾಗೂ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ (ರಿ.) ಬೆಳ್ತಂಗಡಿ ಹಾಗೂ ರೋಟರಿ ಕ್ಲಬ್ ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ‘ಯಕ್ಷಾವತರಣ – 6’ ಯಕ್ಷಸಾಂಗತ್ಯ ತಾಳಮದ್ದಳೆ ಸಪ್ತಾಹ, ಸಾಂಸ್ಥಿಕ ನೇತಾರ ಯು. ವಿಜಯ ರಾಘವ ಪಡ್ವೆಟ್ನಾಯ ಸಂಸ್ಮರಣೆ, ಯಕ್ಷಧ್ರುವ ಪಟ್ಲ ಗಾನಯಾನ ರಜತಪರ್ವ ಕಾರ್ಯಕ್ರಮಗಳನ್ನು ದಿನಾಂಕ 04 ಆಗಸ್ಟ್ 2025ರಿಂದ 10 ಆಗಸ್ಟ್ 2025ರವರೆಗೆ ಬೆಳ್ತಂಗಡಿಯ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮವನ್ನು ಯು. ಶರತ್ ಕೃಷ್ಣ ಪಡ್ವೆಟ್ನಾಯ ಇವರು ಉದ್ಘಾಟಿಸಲಿದ್ದು, ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪ ಸಿಂಹ ಸಾಯಕ್ ಹಾಗೂ ನ್ಯಾಯವಾದಿ ಬಿ.ಕೆ. ಧನಂಜಯ ರಾವ್ ಉಪಸ್ಥಿತರಿರುತ್ತಾರೆ. ಈ ತಾಳಮದ್ದಳೆ ಸಪ್ತಾಹದಲ್ಲಿ ಪ್ರತಿದಿನ ವಿಭಿನ್ನ ಪ್ರಸಂಗಗಳು ಹಾಗೂ ಪ್ರಸಿದ್ಧ ಕಲಾವಿದರು ಭಾಗವಹಿಸಿ ಕಲಾತ್ಮಕ ಪ್ರದರ್ಶನ ನೀಡಲಿದ್ದಾರೆ. ದಿನಾಂಕ 04 ಆಗಸ್ಟ್ 2025ರಂದು ‘ವಿಭೀಷಣ ನೀತಿ’, ದಿನಾಂಕ 05 ಆಗಸ್ಟ್ 2025ರಂದು ‘ಕರ್ಣಪರ್ವ’,…

Read More

ಉಡುಪಿ : ಶ್ರೀ ಮಹಾಲಿಂಗೇಶ್ವರ ಯಕ್ಷಗಾನ ಕಲಾ ಮಂಡಳಿ ಮಾರ್ಪಲ್ಲಿ ಇವರ 40ರ ಸರಣಿ ಕಾರ್ಯಕ್ರಮ ಅಂಗವಾಗಿ ದಿನಾಂಕ 27 ಜುಲೈ 2025 ಭಾನುವಾರದಂದು ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಮುಚ್ಚುಲ್ ಕೋಡು ಕುಕ್ಕಿಕಟ್ಟೆ ಇಲ್ಲಿ ‘ಶ್ರೀ ರಾಮ ದರ್ಶನ’ ಎಂಬ ಪ್ರಸಂಗದ ತಾಳಮದ್ದಲೆ ನಡೆಯಿತು. ಹಿಮ್ಮೇಳದಲ್ಲಿ ಭಾಗವತರು ಶ್ರೀ ಗೋಪಾಲ ಗಾಣಿಗ ಹೆರ0ಜಾಲು, ಚೆಂಡೆ ಮತ್ತು ಮದ್ದಲೆಯಲ್ಲಿ ಅಜಿತ್ ಕುಮಾರ್, ರತ್ನಾಕರ್ ಶೆಣೈ ಹಾಗೂ ಮುಮ್ಮೇಳದಲ್ಲಿ ರುಕ್ಮಾ0ಗದನಾಗಿ ಶ್ರೀಯುತ ರವಿರಾಜ್ ಪನಿಯಾಳ, ಮೋಹಿನಿಯಾಗಿ ಶ್ರೀಯುತ ಶಶಿಕಾಂತ ಶೆಟ್ಟಿ, ವಿಂದ್ಯಾವಳಿಯಾಗಿ ಶ್ರೀಯುತ ಸತೀಶ್ ನಾಯಕ್ ಬೆಳಂಜೆ, ವಿಷ್ಣು ಶ್ರೀಯುತ ಪಶುಪತಿ ಶಾಸ್ತ್ರಿ, ಧರ್ಮಂಗದ ಶ್ರೀಯುತ ಪ್ರಸಾದ್ ಭಟ್ಕಳ ಮುಂತಾದ ಸುಪ್ರಸಿದ್ಧ ಕಲಾವಿದರು ಭಾಗವಹಿಸಿದ್ದರು.

Read More

ಮೈಸೂರು : ಶ್ರೀ ನಟರಾಜ ಪ್ರತಿಷ್ಠಾನ ಮತ್ತು ವಾತ್ಸಲ್ಸ ಶಿಕ್ಷಣ ಮಹಾವಿದ್ಯಾಲಯ ಇದರ ವತಿಯಿಂದ ಡಾ. ಯಶೋಧರ ಕೆ. ವಿರಚಿತ ‘ವಿಚಾರಧಾರೆ’ ಪುಸ್ತಕ ಬಿಡುಗಡೆ ಸಮಾರಂಭವನ್ನು ದಿನಾಂಕ 02 ಆಗಸ್ಟ್ 2025ರಂದು ಬೆಳಿಗ್ಗೆ 11-00 ಗಂಟೆಗೆ ನಟರಾಜ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಶ್ರೀ ನಟರಾಜ ಪ್ರತಿಷ್ಠಾನದ ವಿಶೇಷಾಧಿಕಾರಿಗಳಾದ ಡಾ. ಎಸ್. ಶಿವರಾಜಪ್ಪ ಇವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಸಮಾರಂಭದಲ್ಲಿ ಮಾನ್ಯ ಕುಲಪತಿಗಳಾದ ಪ್ರೊ. ಎನ್.ಕೆ. ಲೋಕನಾಥ್ ಇವರು ಗ್ರಂಥ ಬಿಡುಗಡೆ ಮಾಡಲಿದ್ದಾರೆ. ನಿವೃತ್ತ ಪ್ರಾಂಶುಪಾಲರಾದ ಸಿ.ಜಿ. ವೆಂಕಟರಮಣ ಶೆಟ್ಟಿ ಮತ್ತು ಅಧ್ಯಾಪಕರಾದ ಶ್ರೀಮತಿ ಮಾಧುರಿ ಶ್ರೀರಾಮ್ ಇವರುಗಳು ಕೃತಿ ಕುರಿತು ಮಾತನಾಡಲಿದ್ದಾರೆ.

Read More

ಮಲ್ಪೆ : ಯಕ್ಷಶಿಕ್ಷಣ ಟ್ರಸ್ಟ್ (ರಿ.) ಉಡುಪಿ ಇದರ ವತಿಯಿಂದ ಮಲ್ಪೆಯ ಸರಕಾರಿ ಪದವಿ ಪೂರ್ವ ಕಾಲೇಜು, ಪ್ರೌಢಶಾಲಾ ವಿಭಾಗ ವಿದ್ಯಾರ್ಥಿಗಳಿಗೆ ದಿನಾಂಕ 28 ಜುಲೈ 2025ರಂದು ಯಕ್ಷಶಿಕ್ಷಣ ತರಬೇತಿಯು ಉದ್ಘಾಟನೆಗೊಂಡಿತು. ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಹಿರಿಯ ಶಿಕ್ಷಕರಾದ ಶ್ರೀ ಸತೀಶ್ ಭಟ್ ಇವರು ವಹಿಸಿದ್ದರು. ಯಕ್ಷಶಿಕ್ಷಣ ಟ್ರಸ್ಟಿನ ಕಾರ್ಯದರ್ಶಿ ಶ್ರೀ ಮುರಲಿ ಕಡೆಕಾರ್ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಕಳೆದ ಮಾರ್ಚ್ ತಿಂಗಳಲ್ಲಿ ಯಕ್ಷಶಿಕ್ಷಣ ಟ್ರಸ್ಟ್ ವತಿಯಿಂದ ಒಂದು ವಾರ ನಡೆದ ಸನಿವಾಸ ಶಿಬಿರದಲ್ಲಿ ಭಾಗವಹಿಸಿದ ಶಾಲೆಯ ವಿದ್ಯಾರ್ಥಿಗಳು ಸ್ವತಃ ಮುಖವರ್ಣಿಕೆಯನ್ನು ಮಾಡಿಕೊಂಡು ಕುಣಿದು ಬಾಲಗೋಪಾಲ ಪ್ರದರ್ಶನಗೈದರು. ಕಾರ್ಯಕ್ರಮದಲ್ಲಿ ಶಾಲಾ ಹಳೆವಿದ್ಯಾರ್ಥಿ ಸಂಘದ ಕೋಶಾಧಿಕಾರಿ ಶ್ರೀಧರ್ ಕೋಟ್ಯಾನ್, ಯಕ್ಷಗಾನ ಗುರುಗಳಾದ ಶ್ರೀ ಕೇಶವ ರಾವ್ ಬಡನಿಡಿಯೂರು ಹಾಗೂ ಯಕ್ಷಗಾನದ ಮಾರ್ಗದರ್ಶಕ ಶಿಕ್ಷಕಿಯಾದ ಶ್ರೀಮತಿ ವಾಣಿಶ್ರೀ ಉಪಸ್ಥಿತರಿದ್ದರು. ಯಕ್ಷ ಶಿಕ್ಷಣದ ವಿದ್ಯಾರ್ಥಿಗಳಿಂದ ಕಾರ್ಯಕ್ರಮದ ನಿರೂಪಣೆ, ಸ್ವಾಗತ ಹಾಗೂ ಧನ್ಯವಾದ ಕಾರ್ಯಕ್ರಮ ನೆರವೇರಿತು.

Read More

ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನ ಧ್ಯೇಯೋದ್ದೇಶ ಮತ್ತು ಎಲ್ಲರನ್ನೂ ಒಳಗೊಳ್ಳುವ ಸಮುಷ್ಟಿ ಪ್ರಜ್ಞೆಯ ಹಿನ್ನೆಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಕಾರ್ಯಕಾರಿ ಸಮಿತಿಯ ಅಲ್ಪ ಸಂಖ್ಯಾತರ ಪ್ರತಿನಿಧಿಯಾಗಿ ಜೈನ ಸಮುದಾಯಕ್ಕೆ ಸೇರಿದ ಗುಡಿಬಂಡೆ ಅನುರಾಧ ಆನಂದ್ ಇವರನ್ನು ಕನ್ನಡ ಸಾಹಿತ್ಯ ಪರಿಷತ್ತಿನ ನಿಬಂಧನೆ 9 (3)ರಲ್ಲಿ ಮಾನ್ಯ ಅಧ್ಯಕ್ಷರಿಗೆ ದತ್ತವಾಗಿರುವ ಅಧಿಕಾರದನ್ವಯ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ನಾಮ ನಿರ್ದೇಶನ ಮಾಡಿದ್ದಾರೆ. ಶ್ರೀಮತಿ ಗುಡಿಬಂಡೆ ಅನುರಾಧ ಆನಂದ್ ಇವರು ಎರಡು ಬಾರಿ ಗುಡಿಬಂಡೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು, ಸ್ವತ: ಬರಹಗಾರರಾಗಿ ತಮ್ಮದೇ ಆದ ಛಾಪನ್ನು ಮೂಡಿಸಿದ್ದಾರೆ. ಅವರ ಕನ್ನಡ ಪ್ರೇಮ ಮತ್ತು ನಾಡಿನ ಕುರಿತು ಅಭಿಮಾನ ಕನ್ನಡ ಸಾಹಿತ್ಯ ಪರಿಷತ್ತಿಗೆ ಇನ್ನಷ್ಟು ಕ್ರಿಯಾತ್ಮಕತೆಯನ್ನು ತರಲಿದೆ.

Read More

ಬೆಂಗಳೂರು : ಸಮತ್ವ ಫೌಂಡೇಷನ್ (ರಿ.) ಇದರ ವತಿಯಿಂದ ಸಮತ್ವ ವಾರ್ಷಿಕೋತ್ಸವವನ್ನು ದಿನಾಂಕ 03 ಆಗಸ್ಟ್ 2025ರಂದು ಬೆಂಗಳೂರು ಗಿರಿನಗರದ ಸಂಸ್ಕೃತ ಭಾರತಿ ಅಕ್ಷರಂ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಸಂಜೆ 4-00 ಗಂಟೆಗೆ ನಡೆಯುವ ಜೂನಿಯರ್ ಕಾನ್ಸರ್ಟ್ ನಲ್ಲಿ ಕುಮಾರಿ ಪ್ರಣವಿ ಗುರುಪ್ರಸನ್ನ, ಅಚ್ಯುತ್ ಎಂ. ಆತ್ರೇಯ, ವಿದ್ವಾನ್ ನಾಗೇಂದ್ರ ಪ್ರಸಾದ್ ಎಸ್.ಪಿ. ಮತ್ತು ಪ್ರಣವ್ ಎಸ್. ಬಾಲಕೃಷ್ಣ ಇವರುಗಳು ಕಾರ್ಯಕ್ರಮ ನೀಡಲಿದ್ದಾರೆ. 6-00 ಗಂಟೆಯಿಂದ ವಿದ್ವಾನ್ ರಮಣ ಬಾಲಚಂದ್ರನ್, ವಿದ್ವಾನ್ ಅರ್ಜುನ್ ಕುಮಾರ್ ಮತ್ತು ವಿದ್ವಾನ್ ವಾಜ್ಹಪಳ್ಳಿ ಆರ್. ಕೃಷ್ಣಕುಮಾರ್ ಇವರುಗಳು ಸಂಗೀತ ಕಛೇರಿ ನಡೆಸಿಕೊಡಲಿದ್ದಾರೆ.

Read More