Subscribe to Updates
Get the latest creative news from FooBar about art, design and business.
Author: roovari
ಮಂಗಳೂರು : ಬಹು ಓದುಗ ಬಳಗ ಮಂಗಳೂರು ಮತ್ತು ಆಕೃತಿ ಪ್ರಕಾಶನ ಮಂಗಳೂರು ಆಶ್ರಯದಲ್ಲಿ ದಿನಾಂಕ 15 ಜನವರಿ 2026ರಂದು ಶ್ರೀ ನಂದನೇಶ್ವರ ದೇವಸ್ಥಾನದ ರಜತಾಂಗಣದಲ್ಲಿ ಎನ್.ಎಂ.ಪಿ.ಟಿ. ಹೈಸ್ಕೂಲ್ನ ಮುಖ್ಯ ಶಿಕ್ಷಕ ಸುಬ್ರಹ್ಮಣ್ಯ ಎನ್. ಇವರ ‘ಹನಿಯಾಗಲೇ ಚಿಮ್ಮೊಳಗೆ’ ಕವನ ಸಂಕಲನವು ಲೋಕಾರ್ಪಣೆಗೊಂಡಿತು. ಚೇಳ್ಯಾರು ಸರಕಾರಿ ಪದವಿ ಪೂರ್ವ ಕಾಲೇಜು ಪ್ರಿನ್ಸಿಪಾಲ್ ಸಾಹಿತಿ ಡಾ. ಜ್ಯೋತಿ ಚೇಳ್ಯಾರು ಇವರು ಕೃತಿ ಬಿಡುಗಡೆಗೊಳಿಸಿದರು. ಯಕ್ಷಗಾನ ಕಲಾ ಮಂಡಳಿ ನವ ಮಂಗಳೂರು ಇದರ ಅಧ್ಯಕ್ಷರಾದ ಕೆ. ಸದಾಶಿವ ಶೆಟ್ಟಿ ಇವರು ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಾಹಿತಿ ರಘು ಇಡ್ಕಿದು ಮಾತನಾಡಿದರು. ಕಾಸರಗೋಡು ಸರಕಾರಿ ಕಾಲೇಜು ಸಹಾಯಕ ಪ್ರಾಧ್ಯಾಪಕಿ ಡಾ. ಆಶಾಲತಾ ಚೇವಾರ್ ಪುಸ್ತಕ ವಿಮರ್ಶೆ ನಡೆಸಿದರು. ಎನ್.ಎಂ.ಪಿ.ಟಿ. ಕಾರ್ಯದರ್ಶಿ ಜಿಜು ಥಾಮಸ್, ದೇವಸ್ಥಾನದ ಕಾಯನಿರ್ವಹಣಾಧಿಕಾರಿ ಶ್ರೀಧರ್ ಎಸ್.ಪಿ., ಪ್ರಕಾಶಕ ಆಕೃತಿ ಆಶಯ ಬಳಗದ ನಾಗೇಶ್ ಕಲ್ಲೂರು, ಬಹು ಓದುಗ ಬಳಗದ ಸಂಚಾಲಕ ಓಬನಾಥ ಸಾಲೆತ್ತೂರು ಉಪಸ್ಥಿತರಿದ್ದರು. ಕೃತಿಕಾರ ಸುಬ್ರಹ್ಮಣ್ಯ ಎನ್. ಮಾತನಾಡಿ, “ಇದು…
ಮಡಿಕೇರಿ : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ 2025ನೇ ವರ್ಷದ ಅಕಾಡೆಮಿ ಗೌರವ ಪ್ರಶಸ್ತಿಗೆ ಅರೆಭಾಷೆ ಸಂಸ್ಕೃತಿ, ಸಾಹಿತ್ಯ, ಕಲೆ ಮತ್ತು ಅಧ್ಯಯನ ಮುಂತಾದ ಕ್ಷೇತ್ರದಲ್ಲಿ ಅನನ್ಯ ಸೇವೆ ಸಲ್ಲಿಸಿದ ಪ್ರಮುಖರಿಂದ ಅರ್ಜಿ ಆಹ್ವಾನಿಸಿದ್ದು, ತಲಾ ಒಬ್ಬರಂತೆ ಮೂವರು ಸಾಧಕರನ್ನು ಅಕಾಡೆಮಿ ಗೌರವ ಪ್ರಶಸ್ತಿ 2025ಕ್ಕೆ ಆಯ್ಕೆ ಮಾಡಲಾಗುವುದು. ಅರ್ಜಿಗಳನ್ನು ಸ್ವತ: ಸಾಧಕರು ಸಲ್ಲಿಸುವುದು ಅಥವಾ ಅವರ ಅಭಿಮಾನಿಗಳು ಶಿಫಾರಸ್ಸು ಮಾಡಿ ಅರ್ಜಿಯನ್ನು ಸಲ್ಲಿಸಬಹುದು. ಇವರು ಸಲ್ಲಿಸಿರುವ ಸೇವೆ ಮತ್ತು ಸಾಧನೆ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಅರ್ಜಿಯ ಜೊತೆಗೆ ಅಕಾಡೆಮಿಗೆ ಒದಗಿಸುವುದು. ಈ ಸಂಬಂಧ ನಿಗದಿತ ಅರ್ಜಿ ನಮೂನೆಯನ್ನು ಅಕಾಡೆಮಿ ಕಚೇರಿಯಿಂದ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯನ್ನು ಇತ್ತೀಚಿನ ಭಾವಚಿತ್ರದೊಂದಿಗೆ ಅಂಚೆ ಮೂಲಕ ಅಥವಾ ಖುದ್ದಾಗಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು 31 ಜನವರಿ 2026 ಕೊನೆಯ ದಿನವಾಗಿದೆ. ಪ್ರಶಸ್ತಿಗೆ ಅರ್ಜಿ ಸಲ್ಲಿಸುವವರು ಲಕೋಟೆಯ ಮೇಲೆ ‘ಗೌರವ ಪ್ರಶಸ್ತಿ 2025’ ಎಂದು ಬರೆದು ಅರ್ಜಿ ವಿವರಗಳನ್ನು ಅಧ್ಯಕ್ಷರು/ರಿಜಿಸ್ಟ್ರಾರ್, ಕರ್ನಾಟಕ…
ಉಡುಪಿ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಯೋಗದೊಂದಿಗೆ ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ.) ಉಡುಪಿ ಪ್ರತಿವರ್ಷ ನಡೆಸುವ ‘ಸಂಸ್ಕೃತಿ ಉತ್ಸವ 2026’ವನ್ನು ದಿನಾಂಕ 24, 25 ಮತ್ತು 26 ಜನವರಿ 2026ರಂದು ಸಂಜೆ ಗಂಟೆ 5-15ಕ್ಕೆ ಉಡುಪಿಯ ಯಕ್ಷಗಾನ ಕಲಾರಂಗದ ಐ.ವೈ.ಸಿ. ಹವಾ ನಿಯಂತ್ರಿತ ಸಭಾಂಗಣದಲ್ಲಿ ನಡೆಯಲಿದೆ. ದಿನಾಂಕ 24 ಜನವರಿ 2026ರಂದು ನಡೆಯುವ ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ರೀಮತಿ ಪೂರ್ಣಿಮಾ ಇವರು ವಹಿಸಲಿದ್ದು, ಡಾ. ಶಿವರಾಂ ಕಾರಂತ ಟ್ರಸ್ಟ್ ಇದರ ಅಧ್ಯಕ್ಷರಾದ ಡಾ. ಗಣನಾಥ ಎಕ್ಕಾರು ಇವರು ಉದ್ಘಾಟನೆ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ರಂಗ ನಿರ್ದೇಶಕರಾದ ಎಸ್.ಎನ್. ಸೇತುರಾಂ ಇವರಿಗೆ ಶ್ರೀ ರಾಘವೇಂದ್ರ ಚಾರಿಟೇಬಲ್ ಟ್ರಸ್ಟ್ (ರಿ.) ಹೆಬ್ರಿ ಪ್ರಾಯೋಜಿತ ‘ಶಾರದಾ ಕೃಷ್ಣ ಪುರಸ್ಕಾರ -2026’ ಪ್ರದಾನ ಮಾಡಲಾಗುವುದು. ಸಭಾ ಕಾರ್ಯಕ್ರಮದ ಬಳಿಕ ಎಸ್.ಎನ್. ಸೇತುರಾಂ ಇವರ ರಚನೆ ಮತ್ತು ನಿರ್ದೇಶನದಲ್ಲಿ ಅನನ್ಯ ನಾಟಕ ತಂಡ ಅಭಿನಯಿಸುವ ‘ತಳಿ’…
ಮಂಗಳೂರು : ಸಂಗೀತ ಭಾರತಿ ಪ್ರತಿಷ್ಠಾನದಿಂದ ಮಂಗಳೂರಿನ ಪುರಭವನದಲ್ಲಿ ‘ಲಯ ಲಾವಣ್ಯ’ ಭಾರತೀಯ ತಾಳ ವಾದ್ಯಗಳ ವಿಶೇಷ ಕಾರ್ಯಕ್ರಮ ದಿನಾಂಕ 18 ಜನವರಿ 2026ರಂದು ನಡೆಯಿತು. ಖ್ಯಾತ ಮೃದಂಗ ವಿದ್ವಾಂಸ ಆನೂರು ಆನಂತಕೃಷ್ಣ ಶರ್ಮಾ ಇವರ ಪರಿಕಲ್ಪನೆ ಹಾಗೂ ನಿರ್ದೇಶನದಲ್ಲಿ 11 ಮಂದಿ ಯುವ ಕಲಾವಿದರ ತಂಡದೊಂದಿಗೆ ಕಾರ್ಯಕ್ರಮ ಮೂಡಿಬಂತು. ಅವರು ಮೃದಂಗ, ಉಡುಕ್ಕೆ ದಮ್ಮಡಿ ಹಾಗೂ ಕರಟ ವಾದ್ಯಗಳ ಮೂಲಕ ಕಾರ್ಯಕ್ರಮಕ್ಕೆ ಲಯಾತ್ಮಕ ನೇತೃತ್ವ ನೀಡಿದರು. ಕರ್ನಾಟಕ ಶಾಸ್ತ್ರೀಯ, ಹಿಂದೂಸ್ತಾನಿ, ಜಾಜ್ ಹಾಗೂ ಪಾಶ್ಚಾತ್ಯ ಸಂಗೀತ ಶೈಲಿಗಳ ಸಮನ್ವಯದಲ್ಲಿ ಮೂಡಿಬಂದ ಲಯ ಲಾವಣ್ಯ ಕಾರ್ಯಕ್ರಮಕ್ಕೆ ಮೃದಂಗ, ಖಂಜಿರಿ, ಮೋರ್ಚಿಂಗ್, ಡೋಲು, ತಬ್ಲಾ ಸೇರಿದಂತೆ ನಾನಾ ಪರ್ಕಶನ್ ವಾದ್ಯಗಳ ಸಾಥ್ ಸುಂದರ ಸಂಗೀತ ಸಂಭ್ರಮಕ್ಕೆ ಮುನ್ನುಡಿ ಬರೆಯಿತು. ಕೊಳಲಿನಲ್ಲಿ ವಿದ್ವಾನ್ ರಾಜಕಮಲ್, ವಯೋಲಿನ್ ನಲ್ಲಿ ವಿದ್ವಾನ್ ಕೆ.ಜೆ. ದಿಲೀಪ್, ಖಂಜರಿ ಮತ್ತು ಫೋಮ್ ಡ್ರಮ್ನಲ್ಲಿ ಸುನಾದ್ ಆನೂರು, ಮೃದಂಗ, ಮದ್ದಳೆ ಹಾಗೂ ಶ್ರೀಖೋಲ್ನಲ್ಲಿ ನಾಗೇಂದ್ರ ಪ್ರಸಾದ್, ಫಟಂನಲ್ಲಿ ಫಣೀಂದ್ರ, ಮೋಚಿಂರ್ಗ್ನಲ್ಲಿ ಚಿದಾನಂದ,…
ಬೆಂಗಳೂರು : ಬೆಂಗಳೂರಿನಲ್ಲಿ ನೃತ್ಯ ಚಟುವಟಿಕೆಗಳು ಪ್ರತಿದಿನ ನಡೆಯುತ್ತಲೇ ಇರುತ್ತವೆ. ಪ್ರತಿನಿತ್ಯ ಹಲವಾರು ನೃತ್ಯಶಾಲೆಗಳು- ಕಲಾವಿದರು ಒಂದಲ್ಲ ಒಂದುಕಡೆ ನೃತ್ಯ ಪ್ರದರ್ಶನ ನೀಡುತ್ತಲೇ ಇರುತ್ತಾರೆ. ಕೇವಲ ವೇದಿಕೆಯ ಮೇಲೆ ನೃತ್ಯ ಪ್ರದರ್ಶನವೊಂದೇ ನೃತ್ಯಕಲಾವಿದರ ಗುರಿಯಾಗಬಾರದು. ಪ್ರದರ್ಶನಕ್ಕೆ ಅಗತ್ಯವಾದ ಉತ್ತಮ ಶಿಕ್ಷಣ -ಅಭ್ಯಾಸವಷ್ಟೇ ಆಗದೇ, ಜ್ಞಾನಾರ್ಜನೆಯ ಸಮಗ್ರ ಬೆಳವಣಿಗೆಯ ಕಡೆ ಆದ್ಯ ಗಮನ ನೀಡಬೇಕಾದ್ದು ಅವಶ್ಯ ಎಂಬುದನ್ನು ಮನಗಾಣಿಸುವುದು ‘ಸಾಧನ ಸಂಗಮ’ದ ಹಲವಾರು ನೃತ್ಯೋತ್ಸವಗಳು. ಈ ನಿಟ್ಟಿನಲ್ಲಿ ಕಳೆದ ಎರಡೂವರೆ ದಶಕಗಳಿಂದ ಸಾಧನ ಸಂಗಮ, ಕಾಲ ಕಾಲಕ್ಕೆ ಹೊಸ ಚಿಂತನೆಗಳು, ಪ್ರಯೋಗ-ಪ್ರಯತ್ನಗಳಿಂದ ನೂತನ ಕಾರ್ಯ ಚಟುವಟಿಕೆಗಳನ್ನು ಹಮ್ಮಿಕೊಂಡು ಬರುತ್ತಿದೆ. ಬಸವೇಶ್ವರ ನಗರದಲ್ಲಿರುವ ಈ ಖ್ಯಾತ ನೃತ್ಯ ಸಂಸ್ಥೆ ‘ಸಾಧನ ಸಂಗಮ’ದ ಹಿಂದಿನ ಧೀ ಶಕ್ತಿ, ಅನುಭವ ಭಂಡಾರ ಖ್ಯಾತ ನೃತ್ಯಜ್ಞೆ ವಿದುಷಿ ಜ್ಯೋತಿ ಪಟ್ಟಾಭಿ ರಾಮ್ ಅವರದು. ಅವರದು ಸಮಗ್ರ ದೃಷ್ಟಿ, ಅಂತಸ್ಸತ್ವ ಬೆಳೆಸುವ ಸುತ್ಯಾರ್ಹ ಪ್ರಯತ್ನ. ಪುಟ್ಟ ಮಕ್ಕಳ ನೃತ್ಯ ಸಾಮರ್ಥ್ಯವನ್ನು ಬೆಳೆಸುವ ದೃಷ್ಟಿಯಿಂದ ವೇದಿಕೆ ಒದಗಿಸಿ, ಅನೇಕ ಬಗೆಯಲ್ಲಿ ಅವರ…
ಮಂಗಳೂರು : ಮಣಿ ಕೃಷ್ಣಸ್ವಾಮಿ ಅಕಾಡೆಮಿ ವತಿಯಿಂದ ಪ್ರಸ್ತುತ ಪಡಿಸುವ ಗಾಯನ ಸಂಗೀತ ಕಾರ್ಯಾಗಾರವು ದಿನಾಂಕ 24, 25, 31 ಜನವರಿ ಮತ್ತು 01 ಫೆಬ್ರುವರಿ 2026ರಂದು (ಶನಿವಾರ ಮತ್ತು ಭಾನುವಾರ) ಸಂಜೆ 8-00 ಗಂಟೆಯಿಂದ 9-15ರವೆರೆಗೆ ಆನ್ ಲೈನ್ ನಲ್ಲಿ ನಡೆಯಲಿದೆ. ಸಂಗೀತ ಕಲಾ ಆಚಾರ್ಯ ವಿದುಷಿ ಪ್ರಾರ್ಥನಾ ಸಾಯಿ ನರಸಿಂಹನ್ ಇವರು ಕಾರ್ಯಾಗಾರವನ್ನು ನಡೆಸಿಕೊಡಲಿದ್ದು, ವಿವಿಧ ಸಂಯೋಜಕರ ತಮಿಳು ಕೃತಿಗಳನ್ನು ಕಲಿಸಲಾಗುವುದು. ನೋಂದಾವಣೆ ಮತ್ತು ಹೆಚ್ಚಿನ ಮಾಹಿತಿಗಾಗಿ 74119 16098 ಸಂಖ್ಯೆಯನ್ನು ಸಂಪರ್ಕಿಸಿರಿ.
ಸವದತ್ತಿ : ಕೇಂದ್ರ ಸಂಸ್ಕೃತಿ ಸಚಿವಾಲಯ ನವ ದೆಹಲಿ ಭಾರತ ಸರ್ಕಾರ, ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಬೆಂಗಳೂರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಳಗಾವಿ ಇವರ ಸಹಯೋಗದಲ್ಲಿ ರಂಗ ಆರಾಧನಾ ಸಾಂಸ್ಕೃತಿಕ ಸಂಘಟನೆ (ರಿ.) ಸವದತ್ತಿ ಇವರು ಪ್ರಸ್ತುತ ಪಡಿಸುವ ‘ಪರಸಗಡ ನಾಟಕೋತ್ಸವ 2026’ವನ್ನು ದಿನಾಂಕ 24 ಜನವರಿ 2026ರಿಂದ 02 ಫೆಬ್ರುವರಿ 2026ರವರೆಗೆ ಸಂಜೆ 7-00 ಗಂಟೆಗೆ ಸವದತ್ತಿ ಕೋಟೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ದಿನಾಂಕ 24 ಜನವರಿ 2026ರಂದು ಝಕೀರ ನದಾಫ ಇವರ ರಚನೆ ಮತ್ತು ನಿರ್ದೇಶನದಲ್ಲಿ ಸವದತ್ತಿಯ ರಂಗ ಆರಾಧನಾ ಸಾಂಸ್ಕೃತಿಕ ಸಂಘಟನೆ (ರಿ.) ತಂಡದವರಿಂದ ‘ಬಿರುಕು’, ದಿನಾಂಕ 25 ಜನವರಿ 2026ರಂದು ಝಕೀರ ನದಾಫ ಇವರ ರಚನೆ ಮತ್ತು ನಿರ್ದೇಶನದಲ್ಲಿ ಸವದತ್ತಿಯ ರಂಗ ಆರಾಧನಾ ಸಾಂಸ್ಕೃತಿಕ ಸಂಘಟನೆ (ರಿ.) ತಂಡದವರಿಂದ ‘ಮಾಂತ ಮಲ್ಲಯ್ಯ’, ದಿನಾಂಕ 26 ಜನವರಿ 2026ರಂದು ಡಾ. ಪ್ರಕಾಶ ಗರುಡ ಇವರ ರಂಗ ರೂಪ ಮತ್ತು ನಿರ್ದೇಶನದಲ್ಲಿ ಧಾರವಾಡದ ರಂಗಾಯಣ ತಂಡದವರಿಂದ ‘ಕಂದಗಲ್ಲರಿಗೆ…
ಬೆಂಗಳೂರು : ಬೆಂಗಳೂರು ಹಬ್ಬ 2026’ರ ಭಾಗವಾಗಿ ಕಲಾವಿಲಾಸಿ ತಂಡದ ಕಲಾವಿದರು ಪ್ರಸ್ತುತ ಪಡಿಸುವ ಪಿ. ಲಂಕೇಶ್ ಅವರ ‘ಕ್ರಾಂತಿ ಬಂತು # ಕ್ರಾಂತಿ’ ನಾಟಕ ಪ್ರದರ್ಶನವನ್ನು ದಿನಾಂಕ 20 ಜನವರಿ 2026ರಂದು ಸಂಜೆ 7-00 ಗಂಟೆಗೆ ಬೆಂಗಳೂರು ಜಯನಗರದ ಯುವಕ ಸಂಘದಲ್ಲಿ ಆಯೋಜಿಸಲಾಗಿದೆ. ಯುವ ನಿರ್ದೇಶಕ ಅಭಿಷೇಕ ಚಕ್ರಣ್ಣವರ ನಿರ್ದೇಶಿಸುತ್ತಿರುವ ನಾಟಕವನ್ನು ಹಿರಿಯ ರಂಗಕರ್ಮಿ ಮಹಾದೇವ ಹಡಪದ ಇವರು ವಿನ್ಯಾಸ ಮಾಡಿದ್ದಾರೆ. ನಾಟಕದ ಅವಧಿ 110 ನಿಮಿಷಗಳು. ಹೆಚ್ಚಿನ ಮಾಹಿತಿಗೆ 9739398819 ಸಂಖ್ಯೆಗೆ ಕರೆ ಅಥವಾ ವಾಟ್ಸಪ್ ಮಾಡಬಹುದು. ‘ಕ್ರಾಂತಿ ಬಂತು # ಕ್ರಾಂತಿ’ ನಾಟಕವನ್ನು ಸಾಹಿತಿ ಪಿ. ಲಂಕೇಶ್ ಅವರ ‘ಕ್ರಾಂತಿ ಬಂತು ಕ್ರಾಂತಿ’ ನಾಟಕದ ಪಠ್ಯವನ್ನು ಪ್ರಸ್ತುತಕ್ಕೆ ಅಳವಡಿಸಿಕೊಂಡು ಕಟ್ಟಲಾಗಿದೆ. ಈ ನಾಟಕವು ಮೊದಲ ಬಾರಿಗೆ ಪ್ರಕಟವಾಗಿದ್ದು 1971ರಲ್ಲಿ. ಸಾಮಾಜಿಕ ಮತ್ತು ರಾಜಕೀಯ ಪರಿಸ್ಥಿತಿಗಳಲ್ಲಿ ಅಂದಿಗೂ – ಇಂದಿಗೂ ಸಾಕಷ್ಟು ಬದಲಾವಣೆಗಳು ಕಂಡುಬಂದರೂ, ಆ ಬದಲಾದ ಪರಿಸ್ಥಿತಿಗಳು ತಮ್ಮ ಮೂಲ ಸ್ವರೂಪವನ್ನು ಹಾಗೆಯೇ ಉಳಿಸಿಕೊಂಡಿರುವುದು ನೋವಿನ ಸಂಗತಿ.…
ವಿಜಯಪುರ : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವಿಜಯಪುರ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವಿಜಯಪುರ ಇವರ ಸಹಯೋಗದಲ್ಲಿ ವಿಜಯಪುರ ತಾಲೂಕು 8ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ದಿನಾಂಕ 20 ಮತ್ತು 21 ಜನವರಿ 2026ರಂದು ಹಿಟ್ಟಿನಹಳ್ಳಿ ಶ್ರೀ ಶಿವಮೂರ್ತಿ ಸ್ವಾಮಿ ಚರಂತಿಮಠ ಪ್ರೌಢ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ ಸೋಮಲಿಂಗ ಗೆಣ್ಣೂರ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.
ಸುಮಾರು ಐದು ದಶಕದ ಸಾಹಿತ್ಯ ಹಾದಿಯಲ್ಲಿ ಮಾಲತಿ ಪಟ್ಟಣಶೆಟ್ಟಿಯವರದ್ದು ಸಹಜ ನಡಿಗೆ. ನದಿ ತನ್ನ ತೆಕ್ಕೆಗೆ ಸಿಕ್ಕಿದ್ದನ್ನು ಸೆಳೆದುಕೊಂಡು ಹರಿಯುವಂತೆ ಇವರ ಕಾವ್ಯವು ಕಾಲದ ಸ್ಪಂದನೆಗೆ ಹೊಂದಿಕೆಯಾಗುವ ವಿಚಾರಗಳನ್ನು ತಮ್ಮ ಕಾವ್ಯದಲ್ಲಿ ಅಳವಡಿಸಿಕೊಂಡು ಮುನ್ನಡೆದಿದ್ದಾರೆ. ‘ಬಾಳೆಂಬ ವ್ರತ’ (2018) ಸಂಕಲನದಲ್ಲಿ ವ್ಯಷ್ಟಿಗಿಂತ ಸಮಷ್ಟಿಯ ಕಡೆ ಗಮನವಿದೆ. ಮೊದಲ ಸಂಕಲನದಲ್ಲಿ ವೈಯಕ್ತಿಕ ನೋವೇ ಕೇಂದ್ರವಾಗಿದ್ದರೆ ನಂತರದ ಕೃತಿಗಳಲ್ಲಿ ವೈಯಕ್ತಿಕ ನೋವಿನ ಮೂಲಕ ಸಾಮಾಜಿಕತೆಯತ್ತ ಮುಖ ಮಾಡಿದ ಕವನಗಳಿವೆ. ಆದರೆ ಇಲ್ಲಿ ವೈಯಕ್ತಿಕ ತವಕ ತಲ್ಲಣಗಳಿಗಿಂತ ಹೆಚ್ಚಾಗಿ ಸಮಾಜದ ಜ್ವಲಂತ ವಿದ್ಯಮಾನಗಳಿಗೆ ಮುಖಾಮುಖಿಯಾಗುವ ತುಡಿತವಿದೆ. ಕವಿತೆಗಳನ್ನು ಬರೆಯದೆ ಮನೆಯ ಹಿತ್ತಿಲು ಮೂಲೆಯಲ್ಲೊಂದು ಸಸಿ ನೆಟ್ಟು ನೀರೆರೆದು ಕಣ್ಣಿಟ್ಟು ಬೆಳೆಸಿದ್ದರೆ ನೂರು ಗರಿ ಬಿಚ್ಚಿದ ನವಿಲಂತೆ ಕಣ್ಣ ತುಂಬುವ ಹಚ್ಚನೆ ಮರವಾಗಿ ಕುಣಿಯುತ್ತಿತ್ತು ಸಾರ್ಥಕತೆಯ ಕಣ್ಣೀರು ತುಂಬುತ್ತಿತ್ತು (ಹೃದಯವಂತಿಕೆ, ಪುಟ 1) ಪುಟ್ಟ ಸೇವೆಗೆ ಬೆಟ್ಟದಂಥ ಸಾರ್ಥಕತೆ! ಇಲ್ಲಿ ಜೀವಪರ ನಿಲುವು ಪ್ರಾಯೊಗಿಕ ರೂಪವನ್ನು ತಾಳಬೇಕಾದ ಅಗತ್ಯವನ್ನು ಕಾಣುತ್ತೇವೆ. ಕುಳಿತುಕೊಂಡು ಬರೆಯುವುದು, ಸಾಮಾಜಿಕ ಕಳಕಳಿಯನ್ನು ಮರೆಯುವುದು…