Subscribe to Updates
Get the latest creative news from FooBar about art, design and business.
Author: roovari
ಸುಳ್ಯ : ಭಾರತ್ ಸ್ಕೌಡ್ಸ್ ಮತ್ತು ಗೈಡ್ಸ್ ಕರ್ನಾಟಕ, ಕೊಡಗು ಜಿಲ್ಲಾ ಸಂಸ್ಥೆಯು ಸರಕಾರಿ ಪದವಿಪೂರ್ವ ಕಾಲೇಜು ಮಡಿಕೇರಿ ಇಲ್ಲಿ ನಡೆಸಿದ ಮೈಸೂರು ವಿಭಾಗೀಯ ಮಟ್ಟದ, ರೋವರ್ ರೇಂಜರ್ಸ್ ವಿಭಾಗದ ಗೀತಗಾಯನ ಸಮೂಹ ಸ್ಪರ್ಧೆಯಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜನ್ನು ಪ್ರತಿನಿಧಿಸಿದ ಸುಳ್ಯ ರಂಗಮನೆಯ ಮನುಜ ನೇಹಿಗನ ತಂಡವು ಪ್ರಥಮ ಬಹುಮಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತದೆ. ಅದಕ್ಕೂ ಮೊದಲು ಮೂಡುಬಿದಿರೆ ಕನ್ನಡ ಭವನದಲ್ಲಿ ನಡೆದ ತಾಲೂಕು ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದು, ನಂತರ ಮಂಗಳೂರು ಪಿಲಿಕುಳದಲ್ಲಿ ನಡೆದ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲೂ ಪ್ರಥಮ ಬಹುಮಾನ ಪಡೆದು ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದರು. ದಿನಾಂಕ 13 ಜನವರಿ 2025ರಂದು ರಾಜ್ಯಮಟ್ಟದ ಸ್ಪರ್ಧೆಯು ಬಳ್ಳಾರಿಯಲ್ಲಿ ನಡೆಯಲಿದೆ. ಇದಲ್ಲದೆ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಕರ್ನಾಟಕ ಸರಕಾರ ಇವರು ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನಲ್ಲಿ ನಡೆಸಿದ ಮೈಸೂರು ವಿಭಾಗ ಮಟ್ಟದ ಪದವಿ ಪೂರ್ವ ವಿದ್ಯಾರ್ಥಿಗಳ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಜಾನಪದ ಸ್ಪರ್ಧೆಯ ವೈಯ್ಯಕ್ತಿಕ ವಿಭಾಗದಲ್ಲಿ ದ್ವಿತೀಯ…
ಬೆಂಗಳೂರು : ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ರಂಗಾಯಣ ಶಿವಮೊಗ್ಗ ಮತ್ತು ಕರ್ಣಾಟಕ ನಾಟಕ ಅಕಾಡೆಮಿ ಬೆಂಗಳೂರು ಇವರ ಸಹಕಾರದೊಂದಿಗೆ ರಂಗಾಯಣ ಶಿವಮೊಗ್ಗದ ರೆಪರ್ಟರಿ ಕಲಾವಿದರು ಅಭಿನಯಿಸುವ ‘ನಮ್ಮೊಳಗೊಬ್ಬ ಗಾಂಧಿ’ ನಾಟಕ ಪ್ರದರ್ಶನವನ್ನು ದಿನಾಂಕ 16 ಡಿಸೆಂಬರ್ 2025ರಂದು ಸಂಜೆ 6-30 ಗಂಟೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದೆ. ಡಾ. ಡಿ.ಎಸ್. ಚೌಗಲೆ ಇವರು ರಚಿಸಿರುವ ಈ ನಾಟಕವನ್ನು ಚಿದಂಬರ ರಾವ್ ಜಂಬೆ ಇವರು ವಿನ್ಯಾಸ ಮತ್ತು ನಿರ್ದೇಶನ ಮಾಡಿರುತ್ತಾರೆ.
ಧಾರವಾಡ : ಗದಗ, 4ನೇ ಕ್ರಾಸ್, ಪಂಚಾಕ್ಷರಿ ನಗರದಲ್ಲಿರುವ ಕಲಾ ವಿಕಾಸ ಪರಿಷತ್ (ರಿ.) ಮತ್ತು ಶ್ರೀ ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಸಮಿತಿ ಇದರ ಸಂಯುಕ್ತ ಆಶ್ರಯದಲ್ಲಿ ಕಲಾ ವಿಕಾಸ ಪರಿಷತ್ ನ 25 ನೆಯ ಕನ್ನಡ ರಾಜ್ಯೋತ್ಸವ ‘ನಾಡ ದೇವಿಗೆ ನಮನ’ ಕಾರ್ಯಕ್ರಮವನ್ನು ದಿನಾಂಕ 14 ಡಿಸೆಂಬರ್ 2025ರಂದು ಬೆಳಿಗ್ಗೆ 10-00 ಗಂಟೆಗೆ ಗದಗದ ಶ್ರೀ ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಭವನದಲ್ಲಿ ಆಯೋಜಿಸಲಾಗಿದೆ. ಪ್ರಶಸ್ತಿ ಪ್ರದಾನ, ಸಂಗೀತ ಮತ್ತು ನೃತ್ಯ ನಮನ ಕಾರ್ಯಕ್ರಮ ನಡೆಯಲಿದೆ. ಕಲಾ ವಿಕಾಸ ಪರಿಷತ್ ರಜತ ಮಹೋತ್ಸವ ಸಮಿತಿಯ ಅಧ್ಯಕ್ಷರಾದ ವಿ.ಕೆ. ಗುರುಮಠ ಇವರ ಅಧ್ಯಕ್ಷತೆಯಲ್ಲಿ ಕಲಾಪೋಷಕರಾದ ಸದಾಶಿವಯ್ಯ ಎಸ್. ಮದರಿಮಠ ಇವರು ಈ ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ. ಗದಗ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಅಧ್ಯಕ್ಷರಾದ ವಿವೇಕಾನಂದ ಗೌಡ ಪಾಟೀಲ ಇವರು ‘ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ’ ಎಂಬ ವಿಷಯದ ಬಗ್ಗೆ ಉಪನ್ಯಾಸ ನೀಡಲಿದ್ದಾರೆ. ಇದೇ ಸಂದರ್ಭದಲ್ಲಿ ಸಾಧಕರನ್ನು ಸನ್ಮಾನಿಸಲಾಗುವುದು ಹಾಗೂ ವಿವಿಧ ಕ್ಷೇತ್ರದ…
ಮಂಗಳೂರು : ತುಳು ಕೂಟ ಕುಡ್ಲ ಮತ್ತು ಸರಯೂ ಬಾಲ ಯಕ್ಷವೃಂದ ಕೋಡಿಕಲ್ ಇವರ ವತಿಯಿಂದ ನಡೆಯುತ್ತಿರುವ ಮರೋಳಿ ಬಿ. ದಾಮೋದರ ನಿಸರ್ಗ ಸಂಸ್ಮರಣೆ-ತುಳು ತಾಳಮದ್ದಳೆ ಸಪ್ತಾಹದ ಆರನೇ ದಿನದ ಕಾರ್ಯಕ್ರಮ ದಿನಾಂಕ 12 ಡಿಸೆಂಬರ್ 2025ರಂದು ಮಂಗಳೂರಿನ ಕಂಕನಾಡಿ ಗರೋಡಿ ದೇವಿ ಬೈದೆತಿ ಬಾವಡಿಯಲ್ಲಿ ನಡೆಯಿತು. ಈ ಸಪ್ತಾಹದಲ್ಲಿ ಭಾಗವಹಿಸಿದ ವಿ.ಹಿಂ.ಪ.ನಲ್ಲಿ ರಾಜ್ಯದ ಉನ್ನತ ಹುದ್ದೆ ಹೊಂದಿರುವ, ಹಿಂದೂ ನಾಯಕ ಶರಣ್ ಪಂಪ್ ವೆಲ್ “ನಮ್ಮದು ಬಲು ಸನಾತನವಾದ ಸಂಸ್ಕೃತಿ. ಇದನ್ನು ಆಧರಿಸಿ ಹಿರಿಯರು ರಾಷ್ಟ್ರ ಕಟ್ಟಿದರು, ನಮಗೆ ಉತ್ತಮ ಪಥ ದರ್ಶಿಸಿದರು. ಹಾಗಾಗಿ ನಾವು ಹಿರಿಯರನ್ನು ಮರೆಯಲಾಗದು. ಅಂತೆಯೇ, ತುಳು ಭಾಷೆಯ ಏಳ್ಗೆಗಾಗಿ ತನ್ನ ಕೊನೆ ಉಸಿರಿನ ತನಕವೂ ಸೇವೆ ಮಾಡುತ್ತಾ ಬಂದು, ತಾನು ಅಧ್ಯಕ್ಷ ಪದವಿಯಲ್ಲಿರುತ್ತಾ ಆ ಲೋಕವನ್ನು ಕಂಡ ಮಹಾನ್ ಚೇತನ ನಿಸರ್ಗರು. ಸಂಘದ ಮಾನ್ಯ ಸಂಘ ಚಾಲಕರಾಗಿಯೂ ಜವಾಬ್ದಾರಿ ನಿರ್ವಹಿಸಿದವರು. ಗರಡಿಯ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ದುಡಿದವರ ಸಂಸ್ಮರಣೆ ಆಗುತ್ತಿರುವುದು ಅತ್ಯಂತ ಶ್ಲಾಘನೀಯು” ಎಂದು ಹೇಳಿದರು.…
ಮಂಗಳೂರು : ಕೊಂಕಣಿ ಸಾಹಿತ್ಯ ಅಕಾಡೆಮಿಯ 2025ನೇ ಸಾಲಿನ ಪುಸ್ತಕ ಪುರಸ್ಕಾರಕ್ಕೆ ಶ್ರೀಮತಿ ಫೆಲ್ಸಿ ಲೋಬೊರವರ ಕೊಂಕಣಿ ಕವನ ಸಂಕಲನ ‘ಪಾಲ್ವಾ ಪೊಂತ್’ ಕೃತಿ ಆಯ್ಕೆಯಾಗಿದೆ. ದಿನಾಂಕ 11 ಜನವರಿ 2026ರಂದು ಸಂತ ಎಲೋಷಿಯಸ್ ಮಹಾವಿದ್ಯಾಲಯದ ಪೀಸ್ ಪಾರ್ಕ್ ನಲ್ಲಿ ನಡೆಯುವ ‘ಕವಿತಾ ಫೆಸ್ತ್’ ಸಮಾರಂಭದಲ್ಲಿ ಬಹುಮಾನ ವಿತರಣೆಯಾಗಲಿರುವುದು. ಮಂಗಳೂರು ದೇರೆಬೈಲಿನ ಶ್ರೀಮತಿ ಫೆಲ್ಸಿ ಲೋಬೊ ಇವರು ಮಂಗಳೂರು ಸಂತ ಎಲೋಶಿಯಸ್ ಪ್ರೌಢಶಾಲೆಯ ಶಿಕ್ಷಕಿ, ಲೇಖಕಿ, ಕವಯಿತ್ರಿ. ಇವರ ಮೂರು ಕೃತಿಗಳು ಲೋಕಾರ್ಪಣೆಗೊಂಡಿದ್ದು, ಹಲವು ಕವಿಗೋಷ್ಠಿ, ಸಾಹಿತ್ಯ ಕಮ್ಮಟಗಳಲ್ಲಿ ಭಾಗವಹಿಸಿದ ಅನುಭವ ಇವರದು. ಕನ್ನಡ, ತುಳು, ಕೊಂಕಣಿ ಭಾಷೆಗಳಲ್ಲಿ ಬರೆಯುವ ಇವರ ಹಲವು ರೇಡಿಯೋ ಕಾರ್ಯಕ್ರಮಗಳಲ್ಲಿ ಭಾಷಣ, ಕವಿತಾ ವಾಚನ ಪ್ರಸಾರಗೊಂಡಿದೆ. ಸ್ತ್ರೀ ಸಂವೇದಿತ ಸಾಹಿತ್ಯ ಇವರ ಆಸಕ್ತಿ. ಕೊಂಕಣಿ ಭಾಷೆಯಲ್ಲಿ ಪ್ರಕಟವಾಗುವ ಹಲವು ಪತ್ರಿಕೆಗಳಲ್ಲಿ ಇವರ ಸಾಹಿತ್ಯ ಕೃಷಿ ನಿರಂತರವಾಗಿ ಹದಿನೈದು ವರ್ಷಗಳನ್ನು ಮಿಕ್ಕಿ ನಡೆಯುತ್ತ ಬಂದಿದೆ. ವಿದ್ಯಾರ್ಥಿಗಳಲ್ಲೂ ಸಾಹಿತ್ಯದ ಒಲವು ಮೂಡಿಸಲು, ಅವರನ್ನು ವಿವಿಧ ಸ್ಪರ್ಧೆಗಳಿಗೆ ಸಿದ್ಧಗೊಳಿಸುವುದರೊಂದಿಗೆ, ಶಾಲಾ…
ಮಂಗಳೂರು : ಜಲ್ಲಿಗುಡ್ಡೆಯ ಸ್ವಸ್ತಿಕ್ ಕಲಾ ಕೇಂದ್ರದಿಂದ 2025-26ನೇ ಸಾಲಿನ ಪ್ರತಿಷ್ಠಿತ ‘ಬಾಬು ಕುಡ್ತಡ್ಕ ಪ್ರಶಸ್ತಿ’ಯನ್ನು ಹಿರಿಯ ಯಕ್ಷಗಾನ ಕಲಾವಿದ ಪುತ್ತಿಗೆ ಕುಮಾರ ಗೌಡರಿಗೆ ಪ್ರದಾನ ಮಾಡಲಾಯಿತು. ಶ್ರೀ ರಾಮಕೃಷ್ಣ ಮಿಷನ್ ಮಂಗಳೂರು ಮತ್ತು ಪುಟ್ಟಣ್ಣ ಕುಲಾಲ್ ಪ್ರತಿಷ್ಠಾನದ ಸಹಯೋಗದಲ್ಲಿ ದಿನಾಂಕ 07 ಡಿಸೆಂಬರ್ 2025ರಂದು ಮಂಗಳಾದೇವಿಯ ರಾಮಕೃಷ್ಣಮಠದ ವಿವೇಕಾನಂದ ಸಭಾಂಗಣದಲ್ಲಿ ಈ ಕಾರ್ಯಕ್ರಮ ನಡೆಯಿತು. ಪ್ರಶಸ್ತಿ ಸ್ವೀಕರಿಸಿ ಕುಮಾರ ಗೌಡರು “ಯಕ್ಷರಂಗದ ಧೀಮಂತ ಪ್ರತಿಭೆ ಕುಡ್ತಡ್ಕ ಬಾಬಣ್ಣನ ಹೆಸರಿನಲ್ಲಿ ಪ್ರಶಸ್ತಿ ಬಂದಿರುವುದು ಸಂತೋಷ ತಂದಿದೆ. ಬಾಬಣ್ಣ ಮತ್ತು ನಾನು ಅಣ್ಣ ತಮ್ಮಂದಿರ ಹಾಗೆ ಆತ್ಮೀಯತೆಯಿಂದ ಯಕ್ಷರಂಗದ ಮೇಲೆ ಸೇವೆ ಸಲ್ಲಿಸಿದ್ದೇವೆ” ಎಂದು ಸ್ಮರಿಸಿದರು. ಇದೇ ವೇಳೆ ಬಾಬು ಕುಡ್ತಡ್ಕ ಇವರ ಕಿರಿಯ ಪುತ್ರ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ‘ಸುಬೇದಾರ್’ ರಾಘವೇಂದ್ರ ಕುಡ್ತಡ್ಕ ಇವರನ್ನು ಸನ್ಮಾನಿಸಲಾಯಿತು. ಕಲಾಕೇಂದ್ರದ ಅಧ್ಯಕ್ಷೆ ಲಲಿತಾ ಗೌಡ ಅಧ್ಯಕ್ಷತೆ ವಹಿಸಿದ್ದರು. ಶ್ರೀ ರಾಮಕೃಷ್ಣ ಮಠದ ಬಾಲಕಾಶ್ರಮದ ನಿರ್ವಾಹಕ ಸ್ವಾಮಿ ಯುಗೇಶಾನಂದ, ಪುಟ್ಟಣ್ಣ ಕುಲಾಲ್ ಪ್ರತಿಷ್ಠಾನದ ಅಧ್ಯಕ್ಷ…
ಮೊದಲ ಕವನ ಸಂಕಲನ ‘ಬಾ ಪರೀಕ್ಷೆಗೆ’ ಪ್ರಕಟವಾದ ಆರು ವರ್ಷಗಳ ಬಳಿಕ ಮಾಲತಿ ಪಟ್ಟಣಶೆಟ್ಟಿಯವರು ಹೊರತಂದ ‘ಗರಿಗೆದರಿ’ ಅವರ ಬರವಣಿಗೆಯಲ್ಲಿ ಆದ ಬದಲಾವಣೆಗಳು ಮತ್ತು ಸುಧಾರಣೆಗಳತ್ತ ಬೆಳಕು ಚೆಲ್ಲುತ್ತದೆ. ಸಂಕಲನದ ಶೀರ್ಷಿಕೆಯೇ ಬದಲಾವಣೆಯ ದ್ಯೋತಕವಾಗಿದೆ. ವೈಯಕ್ತಿಕ ನೋವುಗಳಿಗೆ ಸೀಮಿತವಾಗಿದ್ದ ಕವಿತೆಗಳು ಸಂಕುಚಿತತೆಯಿಂದ ಬಿಡಿಸಿಕೊಂಡು ಹಾರಲು ಗರಿ ಕೆದರುವ ಶ್ರಮಕ್ಕೆ ಸಂಕೇತವಾಗಿ ಕೃತಿಯನ್ನು ಪರಿಭಾವಿಸಿಕೊಳ್ಳಬಹುದು. ‘ಬಾ ಪರೀಕ್ಷೆಗೆ’ಯಲ್ಲಿದ್ದ ಹೆಣ್ಣಿನ ಪ್ರಾಮಾಣಿಕ ಒಳನೋಟ, ಸ್ವಾಭಿಮಾನ, ಸ್ವಾತಂತ್ರ್ಯದ ಬಯಕೆ ಇಲ್ಲೂ ಮುಂದುವರಿದಿದ್ದು, ಬವಣೆಯ ನಿರೂಪಣೆಗಷ್ಟೇ ಸೀಮಿತವಾಗದೆ ಅದನ್ನು ಎದುರಿಸುವ ದಿಟ್ಟತನ, ಮಾತಿನ ಕಟುತ್ವವು ಮಿದುತನಕ್ಕೆ ಒಳಗಾದ ಬಗೆಯನ್ನು ಕಾಣಲು ಸಾಧ್ಯವಿದೆ. ಮನಸ್ಸನ್ನು ಮುತ್ತುವ ಬಯಕೆಗಳನ್ನು ತಾಳಲಾರದೆ ಆರ್ತವಾಗುವ ಇಲ್ಲವೇ ಅವುಗಳನ್ನು ಹೊರತಳ್ಳಲು ಯತ್ನಿಸುವ ಮನೋಭಾವವನ್ನು ಅರಗಿಸಿಕೊಂಡು ಹೇಳು ನೀನು ನನ್ನ ನೀ ಯಾರಾಗಬೇಕು ಏಕಾಗಿ ಬೇಕು ನೂರು ಕಳವಳದ ನನ್ನ ಇಳೆಗುಂಟ ಕಳಕಳಿಸಿ ತಳಮಳಿಸಿ ಬಳ್ಳಿಯಾದವ ಬೆಂದ ಹೂವಿಗೆ ನೆರಳಾದವ ಬೆರಳಾದವ ಕರುಳಾದವ ಉಮ್ಮಳಕೆ ಳಾದವ ಬಿಕ್ಕಳಿಕೆಗೆ (ತಾರೆ, ಪುಟ 2) ಎಂದು ಪ್ರೀತಿಯಿಂದ ಪ್ರಶ್ನಿಸುತ್ತಾರೆ.…
ಚಿಕ್ಕಮಗಳೂರು : ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯು ಕರ್ನಾಟಕ ಸರ್ಕಾರದಿಂದ ಸ್ಥಾಪಿಸಲ್ಪಟ್ಟ ಸ್ವಾಯತ್ತ ಸಂಸ್ಥೆಯಾಗಿದ್ದು, ಕೊಂಕಣಿ ಭಾಷೆ, ಸಾಹಿತ್ಯ, ಸಂಸ್ಕೃತಿ, ಕಲೆಯ ಬೆಳವಣಿಗಾಗಿ ನಿರಂತರ ಶ್ರಮಿಸುತ್ತಿದೆ. ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡು, ಕೊಂಕಣಿಯ ಬಗ್ಗೆ ಜನರಿಗೆ ತಿಳಿಸಿಕೊಡುತ್ತಾ ಬಂದಿದೆ. ಕೊಂಕಣಿ ಭಾಷಾ ಸಮುದಾಯದ ಜನರನ್ನು ಒಗ್ಗೂಡಿಸುವ ಸಲುವಾಗಿ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯು ಕಥೊಲಿಕ್ ಕೊಂಕಣಿ ರಾಕಣ್ ಸಂಚಾಲನ ಇವರ ಸಹಯೋಗದಲ್ಲಿ ಚಿಕ್ಕಮಗಳೂರಿನ ಕುವೆಂಪು ಕಲಾಮಂದಿರದಲ್ಲಿ ದಿನಾಂಕ 14 ಡಿಸೆಂಬರ್ 2025ರಂದು ‘ಕೊಂಕಣಿ ಕಲೋತ್ಸವ-2025’ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಈ ಕಾರ್ಯಕ್ರಮವು ಬೆಳಿಗ್ಗೆ 9-00 ಗಂಟೆಯಿಂದ ರಾತ್ರಿ 9-00 ಗಂಟೆಯವರೆಗೆ ನಡೆಯಲಿರುವುದು. ಬೆಳಿಗ್ಗೆ 9-00 ಗಂಟೆಗೆ ಚಿಕ್ಕಮಗಳೂರು ಹಾಗೂ ಹಾಸನ ಪರಿಸರದವರಿಗೆ ವಿವಿಧ ವಿನೋದಾವಳಿ ಸ್ಪರ್ಧೆಗಳು ನಡೆಯಲಿರುವುದು. ಸ್ಪರ್ಧೆಯ ವಿಜೇತರಿಗೆ ಪ್ರಥಮ ಬಹುಮಾನ ನಗದು ರೂ.15,000/-, ದ್ವಿತೀಯ ಬಹುಮಾನ ನಗದು ರೂ.10,000/-, ತೃತೀಯ ಬಹುಮಾನ ನಗದು ರೂ.5,000/- ಪುರಸ್ಕಾರದೊಂದಿಗೆ ಟ್ರೋಫಿ ಹಾಗೂ ಪ್ರಮಾಣಪತ್ರ ವಿತರಿಸಲಾಗುವುದು. ಜೊತೆಗೆ, ಅತ್ಯುತ್ತಮ ಕಾರ್ಯಕ್ರಮ ನಿರೂಪಕರಿಗೆ ಪ್ರಥಮ, ದ್ವಿತೀಯ, ತೃತೀಯ…
ಮೈಸೂರು : ರಂಗಸಂಪದ ಬೆಂಗಳೂರು ಇದರ ಸುವರ್ಣ ಸಂಭ್ರಮದ ಪ್ರಯುಕ್ತ ಪ್ರಸ್ತುತ ಪಡಿಸುವ ನಾಟಕ ಪ್ರದರ್ಶನವನ್ನು ದಿನಾಂಕ 13 ಮತ್ತು 14 ಡಿಸೆಂಬರ್ 2025ರಂದು ಮೈಸೂರಿನ ನಟನ ರಂಗಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. ದಿನಾಂಕ 13 ಡಿಸೆಂಬರ್ 2025ರಂದು ಸಂಜೆ 6-30 ಗಂಟೆಗೆ ಬೇಲೂರು ರಘುನಂದನ್ ರಚಿಸಿರುವ ಚಿದಂಬರರಾವ್ ಜಂಬೆ ವಿನ್ಯಾಸ ಮತ್ತು ನಿರ್ದೇಶನದಲ್ಲಿ ಉಮಾಶ್ರೀ ಅಭಿನಯಿಸುವ ‘ಶರ್ಮಿಷ್ಠೆ’ ನಾಟಕದ 25ನೇ ಪ್ರದರ್ಶನ ನಡೆಯಲಿದೆ. ದಿನಾಂಕ 14 ಡಿಸೆಂಬರ್ 2025ರಂದು ಮಧ್ಯಾಹ್ನ 3-00 ಮತ್ತು ಸಂಜೆ 6-30 ಗಂಟೆಗೆ ವಿನಯ್ ಶಾಸ್ತ್ರಿ ನಿರ್ದೇಶನದಲ್ಲಿ ‘ನೀ ನಾನಾದ್ರೆ ನಾ ನೀನೇನಾ’ ಕನ್ನಡ ಹಾಸ್ಯ ನಾಟಕ ಪ್ರದರ್ಶನಗೊಳ್ಳಲಿದೆ.
ಬೆಂಗಳೂರು : ದೃಶ್ಯ (ರಿ.) ರಂಗತಂಡ ಪ್ರಯೋಗಿಸುತ್ತಿರುವ ದಾಕ್ಷಾಯಿಣಿ ಭಟ್ ಎ. ಇವರ ರಂಗರೂಪ, ವಿನ್ಯಾಸ ಮತ್ತು ನಿರ್ದೇಶನದಲ್ಲಿ ‘ರಕ್ತ ಧ್ವಜ’ ನಾಟಕ ಪ್ರದರ್ಶನವನ್ನು ದಿನಾಂಕ 14 ಡಿಸೆಂಬರ್ 2025ರಂದು ಸಂಜೆ 7-00 ಗಂಟೆಗೆ ಬೆಂಗಳೂರಿನ ಮಲ್ಲತ್ತಹಳ್ಳಿ ಕಲಾಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ನಾಟಕವು ಬಸವರಾಜ್ ಕಟ್ಟೀಮನಿಯವರ ‘ರಕ್ತ ಧ್ವಜ’ ಕತೆ ಹಾಗೂ ಆರ್. ಬಸವರಾಜ್ ರ ‘ಈಸೂರಿನ ಚಿರಂಜೀವಿಗಳು’ ಕಾದಂಬರಿ ಆಧಾರಿತ ಕಥೆಯಾಗಿದೆ.