Author: roovari

ಉಡುಪಿ : ಶ್ರೀ ರಾಘವೇಂದ್ರ ಚಾರಿಟೇಬಲ್ ಟ್ರಸ್ಟ್ (ರಿ.) ಹೆಬ್ರಿ ಪ್ರಾಯೋಜಿತ, ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ನೀಡುವ ‘ಶಾರದಾ ಕೃಷ್ಣ’ ಪ್ರಶಸ್ತಿ -2026ಕ್ಕೆ ಈ ಬಾರಿ ಬೆಂಗಳೂರಿನ ಕನ್ನಡ ಕಿರುತೆರೆ ನಟ, ರಂಗನಿರ್ದೇಶಕ, ನಟ, ವಾಗ್ಮಿ ಎಸ್.ಎನ್. ಸೇತುರಾಮ್ ಇವರು ಆಯ್ಕೆಯಾಗಿದ್ದಾರೆ. ಇದೇ ಬರುವ ಜನವರಿ ತಿಂಗಳಲ್ಲಿ ನಡೆಯುವ ಸಂಸ್ಕೃತಿ ಉತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿ ಪತ್ರ, ಫಲಕ ಹಾಗೂ ರೂಪಾಯಿ 50,000 ನಗದಿನೊಂದಿಗೆ ಗೌರವಿಸಲಾಗುವುದು. ಎಸ್.ಎನ್. ಸೇತುರಾಮ್ ಇವರು ದಿನಾಂಕ 23 ಜನವರಿ 1953ರಂದು ಹುಟ್ಟಿದ್ದು, 1973ರಿಂದ ಅಂಚೆ ಇಲಾಖೆ, 1976ರಲ್ಲಿ ಆದಾಯ ತೆರಿಗೆ ಇಲಾಖೆಯಲ್ಲಿ ಇನ್ಸ್ ಪೆಕ್ಟರ್ ಆಗಿ ಸೇರಿದರು ಮತ್ತು 2007ರಲ್ಲಿ ಆದಾಯ ತೆರಿಗೆ ಉಪ ಆಯುಕ್ತರಾಗಿ ಸ್ವಯಂಪ್ರೇರಿತವಾಗಿ ನಿವೃತ್ತರಾದರು. ಅಂದಿನಿಂದ ತೆರಿಗೆ ಸಲಹಾ ವೃತ್ತಿಯನ್ನು ಮುಂದುವರೆಸಿದ್ದಾರೆ. ಇಲಾಖೆಯಲ್ಲಿದ್ದಾಗ ಏಳು ವರ್ಷಗಳ ಕಾಲ ತನಿಖಾ ವಿಭಾಗದಲ್ಲಿ ಮತ್ತು 6 ವರ್ಷಗಳಿಗೂ ಹೆಚ್ಚು ಕಾಲ ತರಬೇತಿ ಸಂಸ್ಥೆಯಲ್ಲಿ ಅಧ್ಯಾಪಕ ಸದಸ್ಯರಾಗಿ ಕೆಲಸ ಮಾಡಿದರು. ರಂಗ…

Read More

ಕಾರ್ಕಳ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಯಕ್ಷ ರಂಗಾಯಣ ಕಾರ್ಕಳ ಇವರ ಸಹಯೋಗದಲ್ಲಿ ಕಾರ್ಕಳ ಯಕ್ಷ ರಂಗಾಯಣ ರೆಪರ್ಟರಿ ಕಲಾವಿದರು ಪ್ರಸ್ತುತ ಪಡಿಸುವ ‘ಸೋಮಿಯ ಸೌಭಾಗ್ಯ’ ಗೀತ ನಾಟಕ ಪ್ರದರ್ಶನ ದಿನಾಂಕ 03 ಡಿಸೆಂಬರ್ 2025ರಂದು ಸಂಜೆ 6-30 ಗಂಟೆಗೆ ಕಾರ್ಕಳದ ಶ್ರೀ ಭುವನೇಂದ್ರ ಕಾಲೇಜಿನ ಎಸ್. ಆರ್. ಹಾಲ್ ನಲ್ಲಿ ಹಮ್ಮಿಕೊಳ್ಳಲಾಗಿದೆ. ಡಾ. ಕೆ. ಶಿವರಾಮ ಕಾರಂತ ಇವರ ರಚನೆಯ ಈ ನಾಟಕವನ್ನು ಗಣೇಶ್ ಮಂದಾರ್ತಿ ಇವರು ನಿರ್ದೇಶನ ಮಾಡಿದ್ದಾರೆ.

Read More

ಯುವ ಲೇಖಕ ವಿಕಾಸ ಹೊಸಮನಿಯವರ ಮೂರನೇ ವಿಮರ್ಶಾ ಕೃತಿ ‘ಜೀವ ಸಂವಾದ’. ಗಾಳಿ ಹೆಜ್ಜೆ ಹಿಡಿದ ಸುಗಂಧ, ವೀತರಾಗ ಎಂಬ ವಿಮರ್ಶಾ ಕೃತಿಗಳ ಮೂಲಕ ಸಾಹಿತ್ಯಲೋಕದಲ್ಲಿ ಗುರುತಿಸಿಕೊಂಡಿರುವ ಲೇಖಕರು ಈ ದೀರ್ಘ ಸಮೀಕ್ಷಾ ಪ್ರಬಂಧದಲ್ಲಿ ಕಳೆದ ಐವತ್ತು ವರ್ಷಗಳ (1973 – 2023) ಕನ್ನಡ ಕಾದಂಬರಿ ಪ್ರಕಾರದ ಬೆಳವಣಿಗೆಯ ಕುರಿತು ಪರಿಚಯಾತ್ಮಕ ವಿಮರ್ಶೆಯನ್ನು ನೀಡಿದ್ದಾರೆ. ವಿದ್ಯಾರ್ಥಿಗಳು ಮತ್ತು ಸಾಮಾನ್ಯ ಓದುಗರನ್ನು ದೃಷ್ಟಿಯಲ್ಲಿಟ್ಟುಕೊಂಡು ಸಿದ್ಧಪಡಿಸಿದ ಈ ಪುಟ್ಟ ಪುಸ್ತಕದ ಮೂಲಕ ಸೃಜನಶೀಲತೆ ಮತ್ತು ವಿಮರ್ಶೆಯ ನಡುವೆ ಜೀವಂತ ಸಂವಾದ ಸಾಧ್ಯವಾಗಬೇಕೆಂಬ ಉದ್ದೇಶವು ವ್ಯಕ್ತವಾಗುತ್ತದೆ. ಕನ್ನಡದಲ್ಲಿ ಕಾದಂಬರಿಯು ಅತ್ಯಂತ ಹುಲುಸಾಗಿ ಬೆಳೆದ ಸಾಹಿತ್ಯ ಪ್ರಕಾರವಾಗಿದೆ. ಕಾಲಕ್ಕೆ ತಕ್ಕಂತೆ ಬದಲಾಗುತ್ತಾ ಅದು ತನ್ನ ಜೀವಂತಿಕೆಯನ್ನು ಉಳಿಸಿಕೊಂಡಿದೆ. ಅದರ ಬೆಳವಣಿಗೆಯನ್ನು ಸ್ಥೂಲವಾಗಿ ನವೋದಯ, ಪ್ರಗತಿಶೀಲ, ನವ್ಯ, ದಲಿತ ಬಂಡಾಯ ಯುಗಗಳೆಂದು ಗುರುತಿಸಲಾಗುತ್ತದೆ. ಆಧುನಿಕ ಕನ್ನಡ ಸಾಹಿತ್ಯದ ಬೆಳವಣಿಗೆಯ ಈ ಹಂತಗಳನ್ನು ಕಾಲಕ್ರಮದಲ್ಲಿ ಒಂದು ಮುಗಿದ ನಂತರ ಇನ್ನೊಂದು ಆರಂಭವಾಯಿತು ಎನ್ನಲಾಗುತ್ತಿದ್ದರೂ ಅವುಗಳೆಲ್ಲ ಏಕಕಾಲದಲ್ಲಿ ಅಸ್ತಿತ್ವದಲ್ಲಿರುವುದನ್ನು ಅಲ್ಲಗೆಳೆಯುವಂತಿಲ್ಲ. ಈಗ…

Read More

ಮಂಗಳೂರು : ಸನಾತನ ನಾಟ್ಯಾಲಯದ ವತಿಯಿಂದ ನೃತ್ಯಗುರು ವಿದುಷಿ ಶಾರದಾಮಣಿ ಶೇಖರ್‌ ಇವರಿಗೆ ಗುರುನಮನ ಮಾಡುವ ‘ವಂದೇ ಗುರುಪರಂಪರಾಮ್‌’ ಎಂಬ ಕಾರ್ಯಕ್ರಮವು ದಿನಾಂಕ 29 ನವೆಂಬರ್ 2025ರಂದು ಮಂಗಳೂರಿನ ಕುದ್ಮುಲ್‌ ರಂಗರಾವ್‌ ಪುರಭವನದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಸನಾತನ ನಾಟ್ಯಾಲಯದ ನಿರ್ದೇಶಕರಾದ ಚಂದ್ರಶೇಖರ ಶೆಟ್ಟಿ “ಭರತನಾಟ್ಯ ಕಲಿಕೆಯು ಮಕ್ಕಳ ವ್ಯಕ್ತಿತ್ವವನ್ನು ತಿದ್ದುವುದಕ್ಕೆ ಸಹಾಯ ಮಾಡುತ್ತದೆ. ಡಿಜಿಟಲ್‌ ಯುಗದಲ್ಲಿ ಇಂತಹ ಕಲಾಪ್ರಕಾರಗಳ ಕಲಿಕೆ ಮಕ್ಕಳಿಗೆ ಅತ್ಯಗತ್ಯವಾಗಿದೆ. ಇದು ಕಲೆಯನ್ನು ಕಲಿಯುವ ಜೊತೆಗೆ ಗುರುಹಿರಿಯರನ್ನು ಗೌರವಿಸುವ ಸಂಪ್ರದಾಯವನ್ನೂ ಬೋಧಿಸುತ್ತದೆ” ಎಂದು ಹೇಳಿದರು. ಶಾರದಾಮಣಿ ಶೇಖರ್‌ ಇವರ ಬಳಿ ಶಿಷ್ಯಂದಿರಾಗಿ ನೃತ್ಯ ಕಲಿತು ರಾಜ್ಯದ ಮತ್ತು ದೇಶದ ವಿವಿಧೆಡೆಗಳಲ್ಲಿ ನೃತ್ಯ ತರಗತಿಗಳನ್ನು ನಡೆಸುತ್ತಿರುವ ನೃತ್ಯಗುರುಗಳು ಈ ಸಂದರ್ಭದಲ್ಲಿ ಭರತನಾಟ್ಯ ನೃತ್ಯ ಪ್ರದರ್ಶನ ನೀಡಿದಲ್ಲದೆ, ಗುರುಪರಂಪರೆಯಲ್ಲಿ ಕಲಿತ ಪರಿಣಾಮವಾಗಿ ತಮ್ಮ ವ್ಯಕ್ತಿತ್ವವು ಅರಳಿದ ಬಗೆಯನ್ನು ವಿವರಿಸಿದರು. ಕಾರ್ಯಕ್ರಮವನ್ನು ವಿದುಷಿ ಶಾರದಾಮಣಿ ಶೇಖರ್‌ ದೀಪ ಬೆಳಗಿಸಿ ಉದ್ಘಾಟಿಸಿದರು. ನೃತ್ಯ ಗುರುಗಳಾದ ಸುಮಂಗಲಾ ರತ್ನಾಕರ್‌, ಭಾರತೀ ಸುರೇಶ್‌, ಶ್ರೀಲತಾ…

Read More

ಉಡುಪಿ : ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ ಉಡುಪಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ಯಕ್ಷಗಾನ ಕಲಾರಂಗ (ರಿ.) ಉಡುಪಿ ಮತ್ತು ಯಕ್ಷಶಿಕ್ಷಣ ಟ್ರಸ್ಟ್ (ರಿ.) ಉಡುಪಿ ಇವರ ವತಿಯಿಂದ ಉಡುಪಿ ಆಸುಪಾಸಿನ 25 ಪ್ರೌಢಶಾಲೆಗಳ ವಿದ್ಯಾರ್ಥಿಗಳಿಂದ ಪ್ರದರ್ಶನಗೊಳ್ಳಲಿರುವ ‘ಕಿಶೋರ ಯಕ್ಷಗಾನ ಸಂಭ್ರಮ – 2025’ವು ದಿನಾಂಕ 02 ಡಿಸೆಂಬರ್ 2025ರಂದು ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಉದ್ಘಾಟನೆಗೊಂಡಿತು. ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಜ್ಯೋತಿ ಬೆಳಗಿಸಿ, ಉದ್ಘಾಟಿಸಿ, ತಮ್ಮ ಅನುಗ್ರಹ ಸಂದೇಶದಲ್ಲಿ “ಯಕ್ಷಗಾನ ನಮ್ಮ ಸಂಸ್ಕೃತಿಯನ್ನು, ಪುರಾಣಜ್ಞಾನವನ್ನು ಮುಂದಿನ ತಲೆಮಾರಿಗೆ ವರ್ಗಾಯಿಸುವ ಅಪೂರ್ವವಾದ ಕಲಾಪ್ರಕಾರವಾಗಿದೆ. ಮುಂದಿನ ವರ್ಷಗಳಲ್ಲಿ ಉಡುಪಿ ಶ್ರೀಕೃಷ್ಣ ಮಠದಲ್ಲಿ ನಿರಂತರ ಅನ್ನದಾನದಂತೆ ಯಕ್ಷಗಾನ ಪ್ರದರ್ಶನಕ್ಕೂ ಅವಕಾಶ ಕಲ್ಪಿಸಿ, ಈ ಕಲೆಯ ಆಸರೆಗೆ ಅನುವು ಮಾಡಿಕೊಡಲಾಗುವುದು. ಎಲ್ಲಾ ಮಠ ಮಂದಿರಗಳು ಇದನ್ನು ಬದ್ಧತೆಯಿಂದ ಮಾಡಬೇಕಾಗಿದೆ” ಎಂದರು. ಕಿರಿಯ ಶ್ರೀಗಳಾದ ಶ್ರೀ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಸಾನಿಧ್ಯ ವಹಿಸಿದ್ದರು. ಅಂಬಲಪಾಡಿ ದೇವಳದ…

Read More

ಮಂಗಳೂರು : ತುಳು ಕೂಟ (ರಿ.) ಕುಡ್ಲ ಮತ್ತು ಸರಯೂ ಬಾಲ ಯಕ್ಷ ವೃಂದ ಕೋಡಿಕಲ್ ಇವರ ವತಿಯಿಂದ ಮರೋಳಿ ಬಿ. ದಾಮೋದರ ನಿಸರ್ಗ ಸಂಸ್ಮರಣೆ-ತುಳು ತಾಳಮದ್ದಳೆ ಸಪ್ತಾಹವನ್ನು ದಿನಾಂಕ 07ರಿಂದ 13 ಡಿಸೆಂಬರ್ 2025ರವರೆಗೆ ಪ್ರತಿದಿನ ಸಂಜೆ 5-00 ಗಂಟೆಗೆ ಮಂಗಳೂರಿನ ಕಂಕನಾಡಿ ಗರೋಡಿ ಶ್ರೀ ಬ್ರಹ್ಮಬೈದರ್ಕಳ ಕ್ಷೇತ್ರದಲ್ಲಿ ನಡೆಯಲಿದೆ. ದಿನಾಂಕ 07 ಡಿಸೆಂಬರ್ 2025ರಂದು ಗರೋಡಿ ಕ್ಷೇತ್ರ ಅಧ್ಯಕ್ಷ ಚಿತ್ತರಂಜನ್ ಗರೋಡಿ ಇವರು ಸಪ್ತಾಹವನ್ನು ಉದ್ಘಾಟಿಸಲಿದ್ದು, ಗುರುಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪದ್ಮನಾಭ ಬಿ. ಕೋಟ್ಯಾನ್ ಪೆಲತ್ತಡಿ ಅತಿಥಿಯಾಗಿ ಭಾಗವಹಿಸುವರು. ದಿನಾಂಕ 13 ಡಿಸೆಂಬರ್ 2025ರಂದು ಸಮಾರೋಪ ಸಮಾರಂಭದಲ್ಲಿ ದಾಮೋದರ ನಿಸರ್ಗ ಇವರ ಒಡನಾಡಿ ಜೆ.ಎ. ಶೆಟ್ಟಿ ಇವರನ್ನು ಸನ್ಮಾನಿಸಲಾಗುವುದು. ತುಳುಕೂಟ ಅಧ್ಯಕ್ಷೆ ಹೇಮಾ ದಾಮೋದರ ನಿಸರ್ಗ, ಬಿ.ಎಸ್‌.ಎನ್‌.ಎಲ್. ನಿವೃತ್ತ ಅಧಿಕಾರಿ ನಾರಾಯಣ ಬಿ.ಡಿ. ಅತಿಥಿಯಾಗಿ ಪಾಲ್ಗೊಳ್ಳುವರು. ದಿನಾಂಕ 07 ಡಿಸೆಂಬರ್ 2025ರಂದು ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಪುತ್ತೂರು ಇವರಿಂದ ‘ಪಗರಿದ ಸಂಕ’, ದಿನಾಂಕ…

Read More

ಮಂಗಳೂರು : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ದಿನಾಂಕ 14 ಡಿಸೆಂಬರ್ 2025ರಂದು ಗುರುಪುರ ಕೈಕಂಬದ ಮೇಘಾ ಪ್ಲಾಝಾ ಸಭಾಂಗಣದಲ್ಲಿ ಹಮ್ಮಿಕೊಂಡಿರುವ ‘ಮಂಗಳೂರು ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನ’ದ ಅಂಗವಾಗಿ ಪದವಿಪೂರ್ವ ವಿದ್ಯಾರ್ಥಿಗಳಿಗೆ ಭಾಷಾಂತರ ಸ್ಪರ್ಧೆ (ಕನ್ನಡದಿಂದ ಬ್ಯಾರಿಗೆ ಅಥವಾ ಬ್ಯಾರಿಯಿಂದ ಕನ್ನಡಕ್ಕೆ) ಮತ್ತು ಪದವಿ ವಿದ್ಯಾರ್ಥಿಗ-ಳಿಗೆ ವಿಷಯಾಧಾರಿತ ಭಾಷಣ ಸ್ಪರ್ಧೆ ಏರ್ಪಡಿಸಿದೆ. ಸ್ಪರ್ಧೆಯ ವಿಜೇತರಿಗೆ ಕ್ರಮವಾಗಿ ರೂ.3000/-, ರೂ.2,000 ಮತ್ತು ರೂ.1,000 ಮೊದಲ ಮೂರು ನಗದು ಬಹುಮಾನ ನಿಗದಿಪಡಿಸಲಾಗಿದೆ. ಭಾಗವಹಿಸುವ ಎಲ್ಲರಿಗೂ ಅಕಾಡೆಮಿ ವತಿಯಿಂದ ಪ್ರಮಾಣ ಪತ್ರ ನೀಡಲಾಗುವುದು. ಸ್ಪರ್ಧೆಯು ದಿನಾಂಕ 13 ಡಿಸೆಂಬರ್ 2025ರಂದು ಮಧ್ಯಾಹ್ನ 3-00 ಗಂಟೆಗೆ ಸೂರಲ್ಪಾಡಿ ಮಸೀದಿ ಬಳಿಯ ಅಲ್ ಖೈರ್ ಅಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಲಿದೆ. ಭಾಷಾಂತರಕ್ಕೆ 150 ಪದಗಳ ಬರಹಕ್ಕೆ 30 ನಿಮಿಷ ಕಾಲಾವಕಾಶ ನೀಡಲಾಗುವುದು. ಭಾಷಣಕ್ಕೆ ನೀಡಲಾಗುವ ವಿಷಯಗಳನ್ನು ಆಯ್ಕೆ ಮಾಡಿ, ತಯಾರಿಗೆ 30 ನಿಮಿಷ ಮತ್ತು ಭಾಷಣಕ್ಕೆ 5 ನಿಮಿಷ ಕಾಲಾವಕಾಶ ನೀಡಲಾಗುವುದು. ಹೆಚ್ಚಿನ ಮಾಹಿತಿ ಮತ್ತು ಹೆಸರು…

Read More

ಮಡಿಕೇರಿ : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸೋಮವಾರಪೇಟೆ ತಾಲೂಕಿನ 9ನೇ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯು ಐಗೂರು ಗ್ರಾಮದ ಪ್ರಾಥಮಿಕ ವ್ಯವಸಾಯ ಸೇವಾ ಸಹಕಾರ ಸಂಘದ ಸಭಾಂಗಣದಲ್ಲಿ ದಿನಾಂಕ 01 ಡಿಸೆಂಬರ್ 2025ರಂದು ಜಿಲ್ಲಾಧ್ಯಕ್ಷ ಎಂ.ಪಿ. ಕೇಶವ ಕಾಮತ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಪ್ರಾರಂಭದಲ್ಲಿ ಸೋಮವಾರಪೇಟೆ ಕಸಬಾ ಹೋಬಳಿ ಐಗೂರು ಕೇಂದ್ರದಲ್ಲಿ ಊರಿನ ಜನರ, ಸಂಘ-ಸಂಸ್ಥೆಗಳ, ಪಂಚಾಯಿತಿ ಸದಸ್ಯರ ಸಹಕಾರದೊಂದಿಗೆ ತಾಲೂಕು ಸಮ್ಮೇಳನ ನಡೆಸಲು ಅನುಮತಿ ಪಡೆಯಲಾಯಿತು. ವೇದಿಕೆಯಲ್ಲಿ ಉಪಸ್ಥಿತರಿದ್ದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್ ಪ್ರಾಸ್ತಾವಿಕವಾಗಿ ಮಾತನಾಡುತ್ತಾ ಸಮ್ಮೇಳನದ ರೂಪುರೇಷೆ, ಸ್ವಾಗತ ಸಮಿತಿಯ ಮತ್ತು ಉಪ ಸಮಿತಿಗಳ ವಿವರ ನೀಡಿದರು. ಸಮ್ಮೇಳನವು ಬೆಳಗಿನ ಜಾವ ಎಂಟು ಗಂಟೆಗೆ ರಾಷ್ಟ್ರಧ್ವಜ ಮತ್ತು ಕನ್ನಡ ಧ್ವಜದ ಆರೋಹಣದೊಂದಿಗೆ ಪ್ರಾರಂಭವಾಗಿ ಸಮ್ಮೇಳನ ಅಧ್ಯಕ್ಷರ ಮೆರವಣಿಗೆ, ಉದ್ಘಾಟನಾ ಸಮಾರಂಭ, ಗೀತ ಗಾಯನ ಕಾರ್ಯಕ್ರಮ, ಕವಿಗೋಷ್ಠಿ, ವಿಚಾರಗೋಷ್ಠಿ, ಬಹಿರಂಗ ಅಧಿವೇಶನ, ತಾಲೂಕಿನ ಸಾಧಕರಿಗೆ ಸನ್ಮಾನ, ಸ್ಥಳೀಯ…

Read More

ಬ್ರಹ್ಮಾವರ : ಯಕ್ಷಶಿಕ್ಷಣ ಮಹಾಭಿಯಾನದ ಅಂಗವಾಗಿ ಬ್ರಹ್ಮಾವರದಲ್ಲಿ ಕಿಶೋರ ಯಕ್ಷಗಾನ ಸಂಭ್ರಮದ ಸಮಾರೋಪ ಸಮಾರಂಭ ದಿನಾಂಕ 01 ಡಿಸೆಂಬರ್ 2025ರಂದು ನಡೆಯಿತು. ಈ ಸಮಾರಂಭದಲ್ಲಿ ಪ್ರಮಾಣ ಪತ್ರ ವಿತರಿಸಿದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮಾತನಾಡುತ್ತಾ “ಯಕ್ಷಗಾನ ಸರ್ವಾಂಗ ಸುಂದರ ಕಲೆ. ಆಹಾರ್ಯ, ಆಂಗಿಕ, ವಾಚಿಕ, ಸಾತ್ವಿಕ ಈ ನಾಲ್ಕೂ ಅಂಶಗಳೂ ಪೂರ್ಣ ಪ್ರಮಾಣದಲ್ಲಿ ವಿಕಾಸ ಹೊಂದಿರುವ ಏಕೈಕ ಕಲಾಪ್ರಕಾರ ಯಕ್ಷಗಾನ. ಹಿಂದೆ ಶಾಲೆಗೇ ಹೋಗದ ಕಲಾವಿದರು ಸಮಾಜ ತಿದ್ದುವ ಕೆಲಸವನ್ನು ಪರಿಣಾಮಕಾರಿಯಾಗಿ ಮಾಡಿದ್ದಾರೆ” ಎಂದು ಹೇಳಿದರು. ಯಕ್ಷ ಶಿಕ್ಷಣ ಟ್ರಸ್ಟಿನ ಸ್ಥಾಪಕಾಧ್ಯಕ್ಷ ಕೆ. ರಘುಪತಿ ಭಟ್ ಪ್ರೌಢ ಶಾಲೆಯಲ್ಲಿ ಯಕ್ಷಶಿಕ್ಷಣ ಆರಂಭಿಸಲು ಕಾರಣವಾದ ಸಂಗತಿ ಅದರ ಪ್ರಯೋಜನ ವಿವರಿಸಿ ಈ ಅಭಿಯಾನದ ಯಶಸ್ಸಿನಲ್ಲಿ ಉಡುಪಿಯ ಯಕ್ಷಗಾನ ಕಲಾರಂಗದ ಕೊಡುಗೆ ಅಗಾಧವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳಾದ ಮಹೇಶ್ವರೀ, ಲಾಸ್ಯ, ದಿಗ್ಗಜ್ ಡಿ. ಶೆಟ್ಟಿ, ನವ್ಯಾ ಹಾವಂಜೆ, ತನುಶ್ರೀ ಯಕ್ಷಶಿಕ್ಷಣದಿಂದ ತಮಗಾದ ಧನಾನತ್ಮಕ ಪ್ರಯೋಜನ ಮತ್ತು ಸ್ಮರಣೀಯ ಅನುಭವ ಹಂಚಿಕೊಂಡರು. ಪ್ರಸಾಧನ…

Read More

ಮಂಚಿ : ನೃತ್ಯ ಪರಂಪರೆಯನ್ನು ಶುದ್ಧ ಶಾಸ್ತ್ರೀಯ ಚೌಕಟ್ಟಿನಲ್ಲಿ ಭವಿಷ್ಯದ ಯುವ ಕಲಾವಿದರಿಗೆ ಪರಿಚಯಿಸುವ ನಿಟ್ಟಿನಲ್ಲಿ ಪುತ್ತೂರಿನ ಶ್ರೀಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯಿಂದ ಪ್ರೇರಿತಗೊಂಡು, ಅದರ ಅಂಗ ಸಂಸ್ಥೆಯಾದ ವಸುಧಾರಾ ಕಲಾಕೇಂದ್ರ ಬೋಳಂತೂರು ಮಂಚಿ ಇವರು ಆಯೋಜಿಸಿದ ನೃತ್ಯಸರಣಿ ಮಾಲಿಕೆ ‘ಕಲಾಧಾರಾ’. ಇದರ 3ನೇ ಪ್ರಸ್ತುತಿ ದಿನಾಂಕ 30 ನವೆಂಬರ್ 2025ರ ಭಾನುವಾರ ಲಯನ್ಸ್ ಕ್ಲಬ್ ಕೊಳ್ನಾಡು ಸಾಲೆತ್ತೂರು ಹಾಗೂ ಲಯನ್ಸ್ ಸೇವಾ ಟ್ರಸ್ಟ್ (ರಿ) ಮಂಚಿ ಇವರ ಸಹಯೋಗದಲ್ಲಿ ಲಯನ್ಸ್ ಸೇವಾ ಮಂದಿರ ಮಂಚಿ ಇಲ್ಲಿ ನಡೆಯಿತು. ಕುಮಾರಿ ಸಿಂಚನ ಇವರ ಓಂಕಾರ – ಶಂಖನಾದಗಳ ಮೂಲಕ ವಾತಾವರಣ ಶುದ್ಧವಾಗಿಸಿದ ಬಳಿಕ ಕುಮಾರಿಯರಾದ ಆದ್ಯ ಹಾಗೂ ನಿಹಾರಿಕಾ ಎಸ್. ಪಾಲನ್ ಪ್ರಾರ್ಥಿಸಿದರು. ಕುಮಾರಿ ಭೂಮಿಕಾ ನಿತ್ಯ ಪಂಚಾಂಗ ವಾಚಿಸಿದ ನಂತರ ಕುಮಾರಿ ಯಜ್ಞ ಸುಭಾಷಿತ ನುಡಿದರು. ಕಾರ್ಯಕ್ರಮದ ಅಭ್ಯಾಗತರಾಗಿ ಆಗಮಿಸಿದ ಲ| ಸದಾನಂದ ಉಪಾಧ್ಯಾಯ ಎಂ.ಜೆ.ಎಫ್. ಇವರನ್ನು ಕುಮಾರಿ ಮಾನ್ಯ ಪರಿಚಯಿಸಿದರು. ಅಭ್ಯಾಗತರು ದೀಪ ಪ್ರಜ್ವಲನೆಗೈದು ನೃತ್ಯ ಪ್ರದರ್ಶನಕ್ಕೆ ವಿದ್ಯುಕ್ತ ಚಾಲನೆ…

Read More