Author: roovari

ಸುಳ್ಯ : ಸುಳ್ಯ ಹಳೆಗೇಟಿನಲ್ಲಿರುವ ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರದ ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ದಿನಾಂಕ 27 ಮತ್ತು 28 ಡಿಸೆಂಬರ್ 2025ರಂದು ರಂಗಮನೆ ಅಡಿಟೋರಿಯಂನಲ್ಲಿ ನೀನಾಸಂ ತಿರುಗಾಟದ ನಾಟಕಗಳ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ದಿನಾಂಕ 27 ಡಿಸೆಂಬರ್ 2025ರ ಶನಿವಾರದಂದು ಲೇಖಕಿ ಬಾನು ಮುಷ್ತಾಕ್ ರವರ ಕತೆಯಾಧಾರಿಸಿ ಡಾ. ಎಂ. ಗಣೇಶ್ ನಿರ್ದೇಶಿಸಿದ ‘ಹೃದಯದ ತೀರ್ಪು’ ಎಂಬ ನಾಟಕ ಪ್ರದರ್ಶನಗೊಳ್ಳಲಿದೆ. ದಿನಾಂಕ 27 ಡಿಸೆಂಬರ್ 2025ರ ಭಾನುವಾರದಂದು ಮಲೆಯಾಳ ಮೂಲ ಜಿ. ಶಂಕರ್ ಪಿಳ್ಳೈ ರಚಿಸಿದ, ಡಾ. ನಾ. ದಾಮೋದರ ಶೆಟ್ಟಿ ಕನ್ನಡಕ್ಕೆ ಅನುವಾದಿಸಿ, ಶಂಕರ್ ವೆಂಕಟೇಶ್ವರ್ ನಿರ್ದೇಶಿಸಿದ ‘ಅವತರಣಮ್ ಭ್ರಾಂತಾಲಯಮ್’ ಎಂಬ ನಾಟಕ ಪ್ರದರ್ಶನಗೊಳ್ಳಲಿದೆ. ಯಾವುದೇ ಸಭಾ ಕಾರ್ಯಕ್ರಮ ಇರುವುದಿಲ್ಲ. ಪ್ರತಿದಿನ ಸಂಜೆ ಗಂಟೆ 6-45ಕ್ಕೆ ಸರಿಯಾಗಿ ಆರಂಭವಾಗಲಿರುವ ನಾಟಕಕ್ಕೆ ಪ್ರವೇಶ ಉಚಿತವಾಗಿದ್ದು ಹತ್ತು ನಿಮಿಷ ಮೊದಲೇ ಬರಬೇಕೆಂದು ರಂಗಮನೆಯ ಅಧ್ಯಕ್ಷರಾದ ಡಾಜೀವನ್ ರಾಂ ಸುಳ್ಯ ತಿಳಿಸಿದ್ದಾರೆ. ಎರಡೂ ವಿಭಿನ್ನ ನಾಟಕಗಳು ರಾಜ್ಯಾದ್ಯಂತ ಸಾಕಷ್ಟು ಸುದ್ದಿ…

Read More

ಪುತ್ತೂರು : ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು, ದ.ಕ. ಜಿಲ್ಲಾಡಳಿತ ವತಿಯಿಂದ, ನೃತ್ಯೋಪಾಸನಾ ಕಲಾ ಅಕಾಡೆಮಿ ಪುತ್ತೂರು ಇದರ ಸಹಯೋಗದಲ್ಲಿ ದಿನಾಂಕ 20 ಡಿಸೆಂಬರ್ 2025ರಂದು ಗಡಿ-ಸಂಸ್ಕೃತಿ ಉತ್ಸವದ ಅಂಗವಾಗಿ ‘ಕಲಾರ್ಣವ-2025’ ಭಾವ-ರಾಗ-ತಾಳ ಕಾರ್ಯಕ್ರಮವು ಶ್ರೀ ಮಹಾಲಿಂಗೇಶ್ವರ ದೇವಳದ ದೇವರಮಾರು ಗದ್ದೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಶಾಸಕ ಅಶೋಕ್ ರೈ ಇವರು ಉದ್ಘಾಟಿಸಿ “ಕರ್ನಾಟಕದ ಎರಡನೇ ಹೆಚ್ಚುವರಿ ಭಾಷೆಯನ್ನಾಗಿ ತುಳುವನ್ನು ಘೋಷಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡಲಾಗುತ್ತಿದೆ. ಆಂಧ್ರಪ್ರದೇಶದಲ್ಲಿ 2ನೇ ಭಾಷಾ ಪ್ರಕ್ರಿಯೆ ಮಾಡಲಾದ ವಿಧಾನವನ್ನು ಅಧ್ಯಯನ ಮಾಡಲು ಪರಿಣಿತರ ತಂಡ ಕಳುಹಿಸಲಾಗಿದ್ದು, ಕೊನೆಯ ಹಂತದಲ್ಲಿದೆ. ಗಡಿನಾಡಿನ ತುಳು ಭಾಷೆಗೆ ಮಾನ್ಯತೆ ದೊರಕಿಸುವಲ್ಲಿ ಸರಕಾರದ ಮಟ್ಟದಲ್ಲಿ ಗಡಿ ಅಭಿವೃದ್ಧಿ ಪ್ರಾಧಿಕಾರವೂ ಸಹಕರಿಸಬೇಕು” ಎಂದು ಮನವಿ ಮಾಡಿದರು. ಎಡನೀರು ಮಠದ ಶ್ರೀ ಸಚ್ಚಿದಾನಂದ ಸ್ವಾಮೀಜಿ ಆಶೀರ್ವಚನ ನೀಡಿ, “ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಗಳು ನಿಂತ ನೀರಾಗದೆ ನಿರಂತರ ಚಲನೆಯಿರಬೇಕು. ಇದಕ್ಕೆ ಸೂಕ್ತ ರೀತಿಯ ಪ್ರೋತ್ಸಾಹ ಸಿಗಬೇಕು. ಗಡಿ ಪ್ರದೇಶದಲ್ಲಿ ಕನ್ನಡವನ್ನು ಬೆಳೆಸಿ, ಉಳಿಸುವ ಕೆಲಸವನ್ನು…

Read More

ಉಡುಪಿ : ಶ್ರೀ ನಟರಾಜ ನೃತ್ಯನಿಕೇತನ ಚಿತ್ರಪಾಡಿ ಸಾಲಿಗ್ರಾಮ ಉಡುಪಿ ಪ್ರಸ್ತುತ ಪಡಿಸುವ ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ ಐರೋಡಿ ಸಹಯೋಗದೊಂದಿಗೆ 32ನೇ ವಾರ್ಷಿಕೋತ್ಸವ ‘ನೃತ್ಯೋಲ್ಲಾಸ 2025’ ಕಾರ್ಯಕ್ರಮವನ್ನು ದಿನಾಂಕ 25 ಡಿಸೆಂಬರ್ 2025ರಂದು ಸಂಜೆ 5-00 ಗಂಟೆಗೆ ಸಾಲಿಗ್ರಾಮ ಗುಂಡ್ಮಿಯ ಸದಾನಂದ ರಂಗಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ. ಶ್ರೀ ರಾಜೇಂದ್ರ ಎಸ್. ನಾಯಕ ಇವರು ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ರಾಜಶೇಖರ ಹೆಬ್ಬಾರ್ ಇವರು ದೀಪ ಪ್ರಜ್ವಲನೆ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ಸಾಧಕ ಪ್ರಶಸ್ತಿ ಪುರಸ್ಕಾರ ಮತ್ತು ಸಾಧಕ ಸಿರಿ ಪುರಸ್ಕಾರ ಪ್ರದಾನ ಹಾಗೂ ಸಂಸ್ಥೆಯ ವಿದ್ಯಾರ್ಥಿಗಳು ನೂಪುರದ ನಿನಾದಗಳ ಸರಮಾಲೆಯೊಂದಿಗೆ ಹೆಜ್ಜೆಗಳನ್ನಿಡಲಿದ್ದಾರೆ.

Read More

ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು 2024 ಹಾಗೂ 2025ನೇ ಸಾಲಿನ ಪುಸ್ತಕ ಬಹುಮಾನಕ್ಕೆ ಅರ್ಜಿಯನ್ನು ಆಹ್ವಾನಿಸಿದೆ. ಅರ್ಜಿಯನ್ನು ಲೇಖಕರು ಅಥವಾ ಪ್ರಕಾಶಕರು ಸಲ್ಲಿಸಬಹುದಾಗಿದೆ. 01 ಜನವರಿ 2024ರಿಂದ 31 ಡಿಸೆಂಬರ್ 2024ರವರೆಗೆ ಹಾಗೂ 01 ಜನವರಿ 2025ರಿಂದ 31 ಡಿಸೆಂಬರ್ 2025ರ ಅವಧಿಯಲ್ಲಿ ಪ್ರಕಟಗೊಂಡ ಎರಡು ವರ್ಷಗಳ ಪ್ರತ್ಯೇಕ ಸಾಲಿನ ಪುಸ್ತಕಗಳನ್ನು ಪುಸ್ತಕ ಬಹುಮಾನಕ್ಕೆ ಪರಿಗಣಿಸಲಾಗುತ್ತದೆ. ತುಳು ಕವನ ಸಂಕಲನ, ತುಳು ಕಥಾ ಸಂಕಲನ, ತುಳು ಕಾದಂಬರಿ, ತುಳು ಕಾವ್ಯ, ತುಳು ನಾಟಕ, ತುಳುವಿನ ಬಗ್ಗೆ ಅಧ್ಯಯನ ಗ್ರಂಥ ಹಾಗೂ ತುಳುವಿನಿಂದ ಇತರ ಭಾಷೆಗೆ ಹಾಗೂ ಇತರ ಭಾಷೆಯಿಂದ ತುಳುವಿಗೆ ಭಾಷಾಂತರಿತ ಕೃತಿಗಳನ್ನು ಪುಸ್ತಕ ಬಹುಮಾನಕ್ಕೆ ಆಹ್ವಾನಿಸಲಾಗಿದೆ. ಪುಸ್ತಕ ಬಹುಮಾನಕ್ಕೆ ಅರ್ಜಿ ಸಲ್ಲಿಸುವವರು ಲಕೋಟೆಯ ಮೇಲೆ ತುಳು ಅಕಾಡೆಮಿ ಪುಸ್ತಕ ಬಹುಮಾನ ಯೋಜನೆ 2024-25 ಎಂದು ಬರೆದು ರಿಜಿಸ್ಟ್ರಾರ್, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ತುಳು ಭವನ, ಪೋಸ್ಟ್ ಅಶೋಕನಗರ, ಉರ್ವಸ್ಟೋರ್, ಮಂಗಳೂರು – 575006 ಈ ವಿಳಾಸಕ್ಕೆ…

Read More

ಮಂಗಳೂರು : ಡಾ. ಶೇಣಿ ಗೋಪಾಲಕೃಷ್ಣ ಭಟ್ ಚಾರಿಟೇಬಲ್ ಟ್ರಸ್ಟ್ ನೀಡುವ 2025ರ ಸಾಲಿನ ಶೇಣಿ ಪ್ರಶಸ್ತಿಗೆ ಹಿರಿಯ ತಾಳಮದ್ದಳೆ ಅರ್ಥದಾರಿ, ಪ್ರವಚನಕಾರ ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿ ಆಯ್ಕೆಯಾಗಿದ್ದಾರೆ ಎಂದು ಟ್ರಸ್ಟ್ ಅಧ್ಯಕ್ಷ ಕೂಡ್ಲು ಮಹಾಬಲ ಶೆಟ್ಟಿ ತಿಳಿಸಿದ್ದಾರೆ. ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿ ಬಂಟ್ವಾಳ ತಾಲೂಕಿನ ಮೂಡಂಬೈಲಿನ ಹೆಸರಾಂತ ಚಕ್ರಕೋಡಿ ಮನೆತನದಲ್ಲಿ 1936ರಲ್ಲಿ ಜನಿಸಿದರು. ಕೈಕೆಯಿ, ಅಂಬೆ, ದೌಪದಿ, ತಾರೆ, ಸೀತೆ, ಮಂಡೋದರಿ, ಕಯಾದು ಮೊದಲಾದ ಸ್ತ್ರೀಪಾತ್ರಗಳಿಂದ ಪ್ರಸಿದ್ದರಾಗಿದ್ದಾರೆ. ಟ್ರಸ್ಟ್ ವತಿಯಿಂದ ಉರ್ವಸ್ಟೋರ್ ಶ್ರೀ ಮಹಾಗಣಪತಿ ದೇವಸ್ಥಾನದ ಸಹಯೋಗದಲ್ಲಿ ದಿನಾಂಕ 25 ಡಿಸೆಂಬರ್ 2025ರಂದು ಸಂಜೆ 5-00 ಗಂಟೆಗೆ ಉರ್ವಸ್ಟೋರ್ ಶ್ರೀ ಮಹಾಗಣಪತಿ ದೇವಸ್ಥಾನದ ಆವರಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಯು ರೂ.30,000/- ನಗದು ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ. ಉರ್ವಸ್ಟೋರ್ ಶ್ರೀ ಮಹಾಗಣಪತಿ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಸುರೇಂದ್ರ ರಾವ್ ದೀಪ ಪ್ರಜ್ವಲನೆ ಮಾಡಲಿದ್ದು, ಶೇಣಿ ಗೋಪಾಲಕೃಷ್ಣಭಟ್ ಚಾರಿಟೆಬಲ್ ಟ್ರಸ್ಟ್ ಗೌರವಾಧ್ಯಕ್ಷ ಡಾ. ಹರಿಕೃಷ್ಣ ಪುನರೂರು…

Read More

ಕಾಸರಗೋಡು : ಕಾಸರಗೋಡಿನ ಬದಿಯಡ್ಕ ಬಳಿಯ ವೀಣಾವಾದಿನಿ ಸಂಗೀತ ಹಾಗೂ ವೈದಿಕ – ತಾಂತ್ರಿಕ ವಿದ್ಯಾಪೀಠದ ವಾರ್ಷಿಕೋತ್ಸವ ‘ವೇದ ನಾದ ಯೋಗ ತರಂಗಿಣಿ’ ಸಾಂಸ್ಕೃತಿಕ ವೈಭವವು ದಿನಾಂಕ 25ರಿಂದ 28 ಡಿಸೆಂಬರ್ 2025ರವರೆಗೆ ವೈದಿಕ, ತಾಂತ್ರಿಕ, ಯೋಗ, ಸಂಗೀತ, ನೃತ್ಯ ಮುಂತಾದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಬಳ್ಳಪದವು ನಾರಾಯಣೀಯಂ ಆವರಣದಲ್ಲಿ ನಡೆಯಲಿದೆ. ದಿನಾಂಕ 25 ಡಿಸೆಂಬರ್ 2025ರಂದು ಬೆಳಗ್ಗೆ 5-00 ಗಂಟೆಗೆ ಮಹಾಗಣಪತಿ ಹೋಮ, ಲಕ್ಷಾರ್ಚನೆ, ಚಕ್ರಾಬ್ಬಪೂಜೆ ಮತ್ತು ಸಂಜೆ 6-30ಕ್ಕೆ ನವಗ್ರಹಪೂಜೆ ಹಾಗೂ ಪೂಜೆಯ ಜೊತೆ ವೀಣಾವಾದಿನಿಯ ವಿದ್ಯಾರ್ಥಿ ಕಲಾವಿದರಿಂದ ನವಗ್ರಹ ಕೃತಿಗಳ ಹಾಡುಗಾರಿಕೆ ಇರುತ್ತದೆ. ದಿನಾಂಕ 26 ಡಿಸೆಂಬರ್ 2025ರಂದು ಬೆಳಗ್ಗೆ ಗಂಟೆ 9-30ಕ್ಕೆ ಎಡನೀರು ಮಠಾಧೀಶರಾದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಇವರ ಉಪಸ್ಥಿತಿಯಲ್ಲಿ ಉದ್ಘಾಟನಾ ಕಾರ್ಯಕ್ರಮ ಜರಗಲಿದೆ. ಬಳಿಕ ವಿವಿಧ ವಾದ್ಯವಾದನಗಳ ಸಾಂಗತ್ಯದಲ್ಲಿ, ‘ಸಮನ್ವಯ’ ಎಂಬ ವಿಶೇಷ ಕಾರ್ಯಕ್ರಮ ಜರಗಲಿದ್ದು, ಮಹಾಶ್ರೀಚಕ್ರ ನವಾವರಣ ಪೂಜೆ, ತತ್ಸಂಬಂ ನವಾವರಣ ಕೃತಿಗಳ ಆಲಾಪನೆ, ವಿದ್ವಾನ್ ಯೋಗೀಶ ಶರ್ಮಾ ಬಳ್ಳಪದವು…

Read More

ಪುತ್ತೂರು : ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಉಳಿವು–ಬೆಳವಣಿಗೆಗೆ ನಿರಂತರವಾಗಿ ಶ್ರಮಿಸುತ್ತಿರುವ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕದ ವತಿಯಿಂದ ಪುತ್ತೂರಿನ ಪ್ರತಿಷ್ಠಿತ ಜಿ.ಎಲ್. ವನ್ ಮಾಲ್ ಮತ್ತು ರೋಟರಿ ಕ್ಲಬ್ ಪುತ್ತೂರು ಯುವ ಇವರ ಸಹಯೋಗದೊಂದಿಗೆ ಚಿತ್ರಕಲಾ ಸ್ಪರ್ಧೆಯನ್ನು ದಿನಾಂಕ 28 ಡಿಸೆಂಬರ್ 2025ರಂದು ಪುತ್ತೂರಿನ ಜಿ.ಎಲ್. ವನ್ ಮಾಲ್ ಪ್ರಥಮ ಮಹಡಿಯಲ್ಲಿ ಆಯೋಜಿಸಲಾಗಿದೆ. ಸಾಹಿತ್ಯವು ಪದಗಳ ಮೂಲಕ ಭಾವನೆಗಳನ್ನು ಮೂಡಿಸಿದರೆ, ಚಿತ್ರಕಲೆ ಬಣ್ಣ ಮತ್ತು ರೇಖೆಗಳ ಮೂಲಕ ಅದೇ ಭಾವನೆಗಳಿಗೆ ದೃಶ್ಯ ರೂಪ ನೀಡುತ್ತದೆ. ಈ ಎರಡು ಕಲಾರೂಪಗಳ ಸಮನ್ವಯದಿಂದ ಸಂಪೂರ್ಣ ಅಭಿವ್ಯಕ್ತಿ ಸಾಧ್ಯವಾಗುತ್ತದೆ. ಸಾಹಿತ್ಯದಲ್ಲಿ ಮೂಡಿಬರುವ ಕಲ್ಪನೆಗಳು, ಕಥೆಗಳು, ಪ್ರಕೃತಿ, ಜನಜೀವನ, ಸಂಸ್ಕೃತಿ ಮತ್ತು ಮೌಲ್ಯಗಳು ಚಿತ್ರಕಲೆಯ ಮೂಲಕ ಕಣ್ಣಿಗೆ ಕಾಣುವ ರೂಪ ಪಡೆಯುತ್ತವೆ. ಈ ಹಿನ್ನೆಲೆಯಲ್ಲೇ ವಿದ್ಯಾರ್ಥಿಗಳನ್ನು ಹಾಗೂ ಯುವಜನತೆಯನ್ನು ಸಾಹಿತ್ಯ ಮತ್ತು ಕಲೆಯ ಕಡೆಗೆ ಆಕರ್ಷಿಸುವ ಉದ್ದೇಶದಿಂದ ಈ ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಲಾಗಿದೆ.

Read More

ಶಿವಮೊಗ್ಗ : ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ (ರಿ.) ಬೆಂಗಳೂರು, ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ಜಿಲ್ಲಾ ಘಟಕ ಶಿವಮೊಗ್ಗ ಇವರ ಆಶ್ರಯದಲ್ಲಿ ‘ಅಖಿಲ ಕರ್ನಾಟಕ ಐದನೆಯ ಕವಿಕಾವ್ಯ ಸಮ್ಮೇಳನ’ವು ದಿನಾಂಕ 21 ಡಿಸೆಂಬರ್ 2025ರಂದು ಕುವೆಂಪು ವಿಶ್ವವಿದ್ಯಾನಿಲಯದ ಶಂಕರಘಟ್ಟದ ಬಸವ ಸಭಾ ಭವನದಲ್ಲಿ ನಡೆಯಿತು. ಈ ಕಾರ್ಯಕ್ರಮದ ಸರ್ವಾಧ್ಯಕ್ಷತೆ ವಹಿಸಿ ಮಾತನಾಡಿದ ಕುವೆಂಪು ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ರಾಜೇಂದ್ರ ಚೆನ್ನಿ “ಮನುಷ್ಯ ಮೂಲತ: ಶಾಂತಿ ಪ್ರಿಯ. ತನ್ನ ಬಾಳಿನ ಶಾಂತಿಗಾಗಿ ಆತ ಕಲೆ ಸಾಹಿತ್ಯ ಸಂಗೀತದಂತಹ ಅನೇಕ ವಿದ್ಯೆಗಳನ್ನು ಕಲಿಯುತ್ತಾನೆ. ಧಾರವಾಡದಲ್ಲಿ ಸಂಗೀತಕ್ಕೆ ಎಷ್ಟೊಂದು ಮಹತ್ವವನ್ನು ಕೊಡುತ್ತಾರೆ ಎಂದರೆ ಅಲ್ಲಿನ ಪ್ರತಿ ಒಂದು ವಿದ್ಯುತ್ ಕಂಬವು ಸುಮ್ಮನೆ ತಟ್ಟಿದರೆ ಹಿಂದೂಸ್ತಾನಿ ರಾಗ ಹೇಳುತ್ತದೆ. ಅದೇ ರೀತಿ ಶಿವಮೊಗ್ಗದಲ್ಲಿ ಒಂದು ಮರಕ್ಕೆ ಒರಗಿದರೆ ಆ ಮರ ಒಂದು ಕವನವನ್ನು ಹೇಳುತ್ತದೆ ಎಂಬ ಮಾತಿದೆ. ಮನುಷ್ಯ ಕಾವ್ಯವನ್ನು ಮೊದಲು ಬರೆದ ಗದ್ಯಕ್ಕಿಂತ ಮೊದಲು ಪದ್ಯ ಉದಯಿಸಿತು. ಈ ದೇಶದ ಭಾಷೆಗಳಲ್ಲೀ ಕನ್ನಡ ಕೂಡ…

Read More

ಧಾರವಾಡ : ಧಾರವಾಡದ ಸಾಹಿತ್ಯಿಕ ಸಂಘಟನೆ ಅನ್ವೇಷಣ ಕೂಟವು ದಿನಾಂಕ 22 ಡಿಸೆಂಬರ್ 2025ರಂದು ಸಾಧನಕೇರಿಯ ‘ಚೈತ್ರ’ದ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ‘ಆನಂದಕಂದರ ಐತಿಹಾಸಿಕ ಕಾದಂಬರಿಗಳು’ ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮವು ನಡೆಯಿತು. ಈ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಖ್ಯಾತ ವಿಮರ್ಶಕ, ಚಿಂತಕ ಡಾ. ಶ್ಯಾಮಸುಂದರ ಬಿದರಕುಂದಿಯವರು “ಆನಂದಕಂದರ (ದಿ. ಡಾ. ಬೆಟಗೇರಿ ಕೃಷ್ಣಶರ್ಮರ) ಐತಿಹಾಸಿಕ ಕಾದಂಬರಿ ತ್ರಿವಳಿಗಳು ವಿಜಯನಗರ ಸಾಮ್ರಾಜ್ಯದ 14ನೇ ಶತಮಾನದ ಮೂರು ತಲೆಮಾರಿನ ಕಥಾನಕವನ್ನು ನಮ್ಮಿಂದಿನ ರಾಜಕೀಯ-ಧಾರ್ಮಿಕ ಆಗುಹೋಗುಗಳನ್ನೇ ನೆನಪಿಸುವುದರ ಜೊತೆಗೆ ನಮ್ಮಿಂದಿನ ಇತಿಹಾಸದ ಪಾಠಗಳನ್ನು ಕಲಿಸುವಂತಿವೆ. ಕೃಷ್ಣಶರ್ಮರ ಸಮಕಾಲೀನ ಇತಿಹಾಸ ಪ್ರಜ್ಞೆಯಿಂದ ಒಡಮೂಡಿದ ಮಲ್ಲಿಕಾರ್ಜುನ, ರಾಜಯೋಗಿ ಮತ್ತು ಅಶಾಂತಿ ಪರ್ವ ಈ ಮೂರು ಐತಿಹಾಸಿಕ ಕಾದಂಬರಿಗಳು ಅಸಾಧಾರಣ ಜ್ಞಾನವನ್ನು, ಸೂಕ್ಷ್ಮ ಸಂವೇದನೆಗಳನ್ನು ಓದುಗರಲ್ಲಿ ಹುಟ್ಟಿಸುತ್ತವೆ. ಇವುಗಳನ್ನು ಪುನ: ಪ್ರಕಟಿಸುವ ಮೂಲಕ ಓದುಗರಲ್ಲಿ ಸದಭಿರುಚಿಯನ್ನು ಬೆಳೆಸಬೇಕಾಗಿದೆ” ಎಂದು ಸೂಚಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಇನ್ನೋರ್ವ ಹಿರಿಯ ಚಿಂತಕ ಪ್ರೊ. ಹರ್ಷ ಡಂಬಳ ಅವರು ಮಾತನಾಡಿ “ನಿಜವಾಗಿಯೂ ಕವಿಭೂಷಣರಾಗಿದ್ದ,…

Read More

ಉಡುಪಿ : ಉಡುಪಿ ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನ ವಿದ್ಯಾರ್ಥಿಗಳ ಕಲಾತಂಡವು ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ.) ಉಡುಪಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ, ಸಾರ್ವಜನಿಕ ಅರಿವು ಮತ್ತು ಮಹಿಳಾ ದೌರ್ಜನ್ಯ ವಿರೋಧಿ ಸಮಿತಿ, ಕರ್ನಾಟಕ ರಾಜ್ಯ ಹೆರಿಗೆ ಮತ್ತು ಸ್ತ್ರೀ ಆರೋಗ್ಯ ತಜ್ಞರ ಸಂಘ, ಹೆರಿಗೆ ಮತ್ತು ಸ್ತ್ರೀ ಆರೋಗ್ಯ ತಜ್ಞರ ಸಂಘ ಮಣಿಪಾಲ, ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿ ಮಹಿಳಾ ವೇದಿಕೆ, ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿ, ಜೆ.ಸಿ.ಐ. ಉಡುಪಿ ಸಿಟಿ ಸಹಯೋಗದಲ್ಲಿ ಉಡುಪಿ ಜಿಲ್ಲೆಯ 30 ಕಡೆ ಯಶಸ್ವಿಯಾಗಿ ಪ್ರದರ್ಶಿಸಿದ ತಾಯಿ ಮತ್ತು ಮಕ್ಕಳ ಆರೋಗ್ಯ, ಕ್ಷಯ ರೋಗ ಮತ್ತು ಮಾನಸಿಕ ಖಿನ್ನತೆ ಕುರಿತಾದ ಮಾಹಿತಿ ನೀಡುವ ಬೀದಿನಾಟಕವು ದಿನಾಂಕ 23 ಡಿಸೆಂಬರ್ 2025ರಂದು ಉಡುಪಿಯ ಹಳೆ ಸರ್ಕಾರಿ ಬಸ್ ನಿಲ್ದಾಣದ ಬಳಿ ಪ್ರದರ್ಶಿಸಲ್ಪಟ್ಟು ಸಮಾಪನಗೊಂಡಿತು. ಈ ಸಂದರ್ಭದಲ್ಲಿ…

Read More