Author: roovari

ಸುರತ್ಕಲ್ : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ಬಿಲ್ಲವ ಸಮಾಜ ಸೇವಾ ಸಂಘ (ರಿ.) ಇಡ್ಯಾ ಸುರತ್ಕಲ್ ಇವರ ವತಿಯಿಂದ ಮನು ಇಡ್ಯಾ ಇವರ ‘ಗಂಧದ ಕೊರಡ್’ ಮತ್ತು ‘ತಾಂಗ್ ನಿರೆಲ್’ ಎರಡು ನಾಟಕಗಳ ಪುಸ್ತಕ ಬಿಡುಗಡೆ ಮತ್ತು ಚಾವಡಿ ತಮ್ಮನ ಕಾರ್ಯಕ್ರಮವನ್ನು ದಿನಾಂಕ 13 ನವೆಂಬರ್ 2025ರಂದು ಸಂಜೆ 4-00 ಗಂಟೆಗೆ ಸುರತ್ಕಲ್ ಇಡ್ಯಾ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ತಾರಾನಾಥ ಗಟ್ಟಿ ಕಾಪಿಕಾಡ್ ಇವರು ವಹಿಸಲಿದ್ದು, ವಿಜಯ ಕರ್ನಾಟಕದ ನಿವೃತ್ತ ಸ್ಥಾನೀಯ ಸಂಪಾದಕರಾದ ಯು.ಕೆ. ಕುಮಾರನಾಥ ಇವರು ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಹಿರಿಯ ರಂಗ ನಟಿ ಗೀತಾ ಸುರತ್ಕಲ್ ಇವರು ಚಾವಡಿ ತಮ್ಮನದ ಅಭಿನಂದನಾ ಮಾತುಗಳನ್ನಾಡಲಿದ್ದು, ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಶ್ರೀಮತಿ ಯಮುನಾ ಶೇಖರ್, ಕನ್ನಡ ಸಾಹಿತ್ಯ ಪರಿಷತ್ ಸುರತ್ಕಲ್ ಹೋಬಳಿ ಘಟಕದ ಅಧ್ಯಕ್ಷರಾದ ಶ್ರೀಮತಿ ಗುಣವತಿ ರಮೇಶ್ ಮತ್ತು ಸಿಂಗಾರ…

Read More

ಮಂಗಳೂರು : ಯಕ್ಷಾಂಗಣ ಮಂಗಳೂರು ಯಕ್ಷಗಾನ ಚಿಂತನ – ಮಂಥನ ಮತ್ತು ಪ್ರದರ್ಶನ ವೇದಿಕೆ ವತಿಯಿಂದ ಯಕ್ಷಗಾನ ಕಲಾಪೋಷಕರಿಗಾಗಿ ನೀಡುವ ‘ಯಕ್ಷಾಂಗಣ ರಾಜ್ಯೋತ್ಸವ ಪುರಸ್ಕಾರ’ಕ್ಕೆ ಈ ಬಾರಿ ಹಿರಿಯ ಸ್ವರ್ಣೋದ್ಯಮಿ ಎಂ. ರವೀಂದ್ರ ಶೇಟ್ ಆಯ್ಕೆಯಾಗಿದ್ದಾರೆ. ಯಕ್ಷಗಾನ ಆಟ ಕೂಟಗಳಲ್ಲಿ ವಿಶಿಷ್ಟ ಸಾಧನೆ ಮಾಡಿದ ಹಿರಿಯ ಕಲಾವಿದರಿಗೆ ನೀಡುವ ‘ಯಕ್ಷಾಂಗಣ ಗೌರವ ಪ್ರಶಸ್ತಿ’ಯನ್ನು ಹಿರಿ ತಲೆಮಾರಿನ ವೇಷಧಾರಿ ಬೋಳಾರ ಸುಬ್ಬಯ್ಯ ಶೆಟ್ಟಿ ಇವರಿಗೆ ನೀಡಲಾಗುವುದು ಎಂದು ಯಕ್ಷಾಂಗಣದ ಕಾರ್ಯಾಧ್ಯಕ್ಷ ಭಾಸ್ಕರ ರೈ ಕುಕ್ಕುವಳ್ಳಿ ಹೇಳಿದ್ದಾರೆ. ದಿನಾಂಕ 23 ನವೆಂಬರ್ 2025ರಂದು ಮಂಗಳೂರು ವಿ.ವಿ.ಯ ರವೀಂದ್ರ ಕಲಾ ಭವನದಲ್ಲಿ ಜರಗುವ ಯಕ್ಷಗಾನ ತಾಳಮದ್ದಳೆ ಸಪ್ತಾಹದ ಉದ್ಘಾಟನಾ ಸಮಾರಂಭದಲ್ಲಿ ‘ಯಕ್ಷಾಂಗಣ ರಾಜ್ಯೋತ್ಸವ ಪುರಸ್ಕಾರ’ ಮತ್ತು ದಿನಾಂಕ 29 ನವೆಂಬರ್ 2025ರಂದು ನಡೆಯುವ ಸಮಾರೋಪ ಸಮಾರಂಭದಲ್ಲಿ ‘ಯಕ್ಷಾಂಗಣ ಗೌರವ ಪ್ರಶಸ್ತಿ’ಯನ್ನು ಪ್ರದಾನಿಸಲಾಗುವುದು. ಎಂ. ರವೀಂದ್ರ ಶೇಟ್ : ಚಿನ್ನಾಭರಣಗಳ ವ್ಯಾಪಾರದಲ್ಲಿ ದಂತಕಥೆಯಾಗಿರುವ ದಿ. ಸುಬ್ರಾಯ ಲಕ್ಷ್ಮಣ ಶೇಟ್ (ಎಸ್.ಎಲ್. ಶೇಟ್ ) 1947ರಲ್ಲಿ ಸ್ಥಾಪಿಸಿದ ‘ಎಸ್.ಎಲ್.…

Read More

ಬೆಂಗಳೂರು : ಶತಮಾನೋತ್ಸವ ಆಚರಿಸುತ್ತಿರುವ ಶ್ರೀ ಸಿದ್ಧಿವಿನಾಯಕ ದುರ್ಗಾಂಬಾ ಯಕ್ಷಗಾನ ಮಿತ್ರಮಂಡಳಿ ಹುಕ್ಲಮಕ್ಕಿ ಮೇಳದ ಅಪರೂಪದ ‘ಶಬರಾರ್ಜುನ’ ಯಕ್ಷಗಾನ ಪ್ರದರ್ಶನವು ದಿನಾಂಕ 08 ನವೆಂಬರ್ 2025ರಂದು ಬೆಂಗಳೂರಿನ ಕವಿಪ್ರನಿನಿ ಲೆಕ್ಕಾಧಿಕಾರಿಗಳ ಸಂಘದಲ್ಲಿ ಜರುಗಿತು. ಈ ಕಾರ್ಯಕ್ರಮವನ್ನು ಡಾಕ್ಟರ್ ಬಿ.ಡಿ. ಪಟೇಲ್, ಜಿ. ಮೃತ್ಯುಂಜಯ, ಶ್ರೀಮತಿ ಮಾಲತಿ ಹೆಗಡೆ ಇವರೊಂದಿಗೆ ಉದ್ಘಾಟಿಸಿದ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕು ಹುಕ್ಲಮಕ್ಕಿ ಮೇಳದ ಮ್ಯಾನೇಜರ್, ಪ್ರಸಿದ್ಧ ಚಾರ್ಟರ್ಡ್ ಅಕೌಂಟೆಂಟ್ ಗೋಪಾಲಕೃಷ್ಣ ಹೆಗಡೆ ಇವರು ಮಾತನಾಡಿ “ಬಾಲಕರ, ಮಹಿಳೆಯರ ಸಹಿತ ಪ್ರದರ್ಶನಗೊಳ್ಳುವ ಎಲ್ಲ ಯಕ್ಷಗಾನ ತಾಳಮದ್ದಳೆಗಳಲ್ಲಿ ಕನ್ನಡವನ್ನು ಮಾತ್ರ ಬಳಸುತ್ತಿದ್ದು, ಈ ಕ್ಷೇತ್ರ, ಕನ್ನಡ ನಾಡು, ನುಡಿಯನ್ನು ಉಳಿಸಿ ಬೆಳೆಸುವಲ್ಲಿ ಮಹತ್ತರ ಪಾತ್ರವನ್ನು ವಹಿಸುತ್ತಿವೆ. ಸಂಪರ್ಕ, ಸಕಲ ಸೌಲಭ್ಯಗಳಿಂದ ದೂರದ ಬೆಟ್ಟ-ಗುಡ್ಡಗಳ ನಡುವೆ ಇರುವ ಹಳ್ಳಿಯೊಂದರಲ್ಲಿ ಸ್ಥಾಪಿತವಾಗಿ, ಕಷ್ಟ ನಷ್ಟ ಎದುರಿಸಿಯೂ ಶತಮಾನೋತ್ಸವ ಆಚರಿಸುತ್ತಿರುವುದು ಹೆಮ್ಮೆಯ ವಿಷಯ. ಕುವೆಂಪು ಅವರಿಂದ 1924ರಲ್ಲಿ ಭಾರತ ಜನನಿಯ ತನುಜಾತೆ ನಾಡಗೀತೆ ರಚಿತವಾದರೆ, ಮಾರನೆಯ ವರ್ಷ 1925ರಲ್ಲಿ ನಮ್ಮ ಹುಕ್ಲಮಕ್ಕಿ…

Read More

ಸುಳ್ಯ : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿಯನ್ನು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಇವರು ದಿನಾಂಕ 08 ನವೆಂಬರ್ 2025ರಂದು ಸುಳ್ಯದಲ್ಲಿ ಘೋಷಿಸಿದರು. 2024ನೇ ಸಾಲಿನ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿದ್ದು, ಪ್ರಶಸ್ತಿಯು 50 ಸಾವಿರ ನಗದು ಹಾಗೂ ಫಲಕವನ್ನು ಹೊಂದಿದ್ದು, ವಿಶೇಷವಾಗಿ ಈ ಬಾರಿ ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆಗೆ ‘ಅಪ್ಪ’ ಎಂಬ ಅರೆಭಾಷೆ ನಾಟಕ ಪ್ರದರ್ಶನಗೊಳ್ಳಲಿದೆ. ಪ್ರಶಸ್ತಿ ಆಯ್ಕೆಯು ಆಯ್ಕೆ ಸಮಿತಿ ಆಯ್ಕೆ ಬಯಸಿ ಅರ್ಜಿ ಸಲ್ಲಿಸಿದವರ ಅರೆಭಾಷೆ ಕೊಡುಗೆಯನ್ನು ಗಮನಿಸಿ ರಾಷ್ಟ್ರ ಶಿಕ್ಷಕ ಪ್ರಶಸ್ತಿ ವಿಜೇತ ಹಾಗೂ ಅರೆಭಾಷೆ ನಿಘಂಟು ರಚನೆಕಾರ ಕೆ.ಆರ್. ಗಂಗಾಧರ, ಕೊಡಗು ದಕ್ಷಿಣ ಕನ್ನಡ ಒಕ್ಕಲಿಗರ ಯಾನೆ ಗೌಡ ಸಮಾಜ ಇದರ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ಕೆ.ಎಸ್.ಎಫ್.ಸಿ. ಸೇವೆ ಸಲ್ಲಿಸುವ ಸಂದರ್ಭದಲ್ಲಿ ರಾಜ್ಯಾದ್ಯಂತ ಅರೆಭಾಷಿಕರನ್ನು ಸಂಘಟಿಸುವಲ್ಲಿ ಶ್ರಮ…

Read More

ಬೆಳಗಾವಿ : ಬೆಟಗೇರಿ ಕೃಷ್ಣಶರ್ಮ ಸ್ಮಾರಕ ಟ್ರಸ್ಟ್ ಇದರ ವತಿಯಿಂದ ನೀಡುವ ಹಿರಿಯ ಮತ್ತು ಯುವ ಸಾಹಿತಿಗಳಿಗೆ 2023, 2024 ಮತ್ತು 2025ನೇ ಸಾಲಿನ ವಾರ್ಷಿಕ ಕಥೆ, ಕಾವ್ಯ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಬೆಳಗಾವಿಯಲ್ಲಿ ದಿನಾಂಕ 11 ನವೆಂಬರ್ 2025ರಂದು ಬೆಳಿಗ್ಗೆ ಗಂಟೆ 11-00ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಪ್ರಶಸ್ತಿ ಪ್ರದಾನ ಮಾಡುವರು. ‘ಕವಿ ಎಚ್.ಎಸ್. ಶಿವಪ್ರಕಾಶ ಇವರನ್ನು 2023ನೇ ಸಾಲಿನ ಕಾವ್ಯ ಪ್ರಶಸ್ತಿ, ಚಿಂತಕ ಮತ್ತು ಪತ್ರಕರ್ತ ಜಿ. ರಾಮಕೃಷ್ಣ ಇವರನ್ನು 2024ನೇ ಸಾಲಿನ ವೈಚಾರಿಕ ಮತ್ತು ಪತ್ರಿಕೋದ್ಯಮ ಪ್ರಶಸ್ತಿ, ಕಥೆಗಾರ್ತಿ ಬಿ.ಟಿ. ಜಾಹ್ನವಿ ಇವರನ್ನು 2025ನೇ ಸಾಲಿನ ಕಥಾ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿಗಳು ತಲಾ ರೂ. ಐವತ್ತು ಸಾವಿರ ಒಳಗೊಂಡಿವೆ ಎಂದು ಟ್ರಸ್ಟ್ ಅಧ್ಯಕ್ಷೆ ವಿನಯಾ ಒಕ್ಕುಂದ ಇಲ್ಲಿ ತಿಳಿಸಿದರು. ‘ಯುವ ಸಾಹಿತ್ಯ ಪುರಸ್ಕಾರ’ಕ್ಕೆ ಮೂವರು ಆಯ್ಕೆ ಆಗಿದ್ದಾರೆ. ಶಿವಮೊಗ್ಗದ ಕೆ. ಅಕ್ಷತಾ (2023), ಮಂಗಳೂರಿನ ವಿಲ್ಸನ್ ಕಟೀಲ್ (2024) ಮತ್ತು…

Read More

ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ಮಂಗಳೂರು ತಾಲೂಕು ಮಹಿಳಾ ಮಂಡಳಿಗಳ ಒಕ್ಕೂಟ ಸಹಭಾಗಿತ್ವದಲ್ಲಿ ತುಳು ಭವನದಲ್ಲಿ ದಿನಾಂಕ 08 ನವೆಂಬರ್ 2025ರಂದು ಆಯೋಜಿಸಿದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರೊಂದಿಗೆ ಮಾತುಕತೆ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಭಿನಂದನೆ ಸಲ್ಲಿಸಿ ಮಾತನಾಡಿದ ಜಾನಪದ ವಿದ್ವಾಂಸ, ಡಾ. ಶಿವರಾಮ ಕಾರಂತ ಟ್ರಸ್ಟಿನ ನಿರ್ದೇಶಕ ಡಾ. ಗಣನಾಥ ಶೆಟ್ಟಿ ಎಕ್ಕಾರು “ಜಾನಪದ ಕಲಾವಿದರು ಯಾವುದೇ ಪ್ರತಿಫಲ ಬಯಸದೆ ಸೇವಾ ನಿರತರಾಗಿರುತ್ತಾರೆ. ತುಳುನಾಡಿನ ಇಬ್ಬರು ಹಿರಿಯ ಕಲಾವಿದರಾದ ಸಿಂಧೂ ಗುಜರನ್, ಉಮೇಶ್ ಪಂಬದ ಗಂಧಕಾಡು ಇವರನ್ನು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಮೂಲಕ ಗುರುತಿಸಿದ ರಾಜ್ಯ ಸರ್ಕಾರದ ನಡೆ ಶ್ಲಾಘನೀಯ. ದೈವಾರಧನೆಯೂ ತುಳು ನಾಡಿನ ಆರಾಧನಾ ಶಕ್ತಿಯ ಮೂಲ ಸೆಲೆಯಾಗಿದ್ದು, ಉಮೇಶ್ ಪಂಬದ ಅವರಂತ ನೂರಾರು ದೈವಾರಾಧಕರು ಶತಮಾನಗಳಿಂದ ಪರಂಪರೆ ಉಳಿಸಿ ಬೆಳೆಸಿಕೊಂಡು ಬಂದಿದ್ದಾರೆ. ಇವತ್ತು ತುಳುನಾಡಿನ ಭೂತಾರಾಧನೆ ಪಡೆದಿರುವ ಜನಪ್ರಿಯತೆ ಹಿಂದೆ ಶತಮಾನಗಳ ಶ್ರದ್ಧೆ, ಬದ್ಧತೆಯ ಫಲ ಇದೆ.” ಎಂದು ಹೇಳಿದರು.…

Read More

ಮೈಸೂರು : ಪರಿವರ್ತನ ರಂಗ ಸಮಾಜ ಇದರ ವತಿಯಿಂದ ಆಯೋಜಿಸಿದ್ದ ‘ರಂಗವಿಮರ್ಶೆ ಸದ್ಯದ ಸ್ಥಿತಿ ಸಾಧ್ಯತೆ’ ಎಂಬ ವಿಷಯದ ಬಗ್ಗೆ ಸಂವಾದ ಕಾರ್ಯಕ್ರಮವು ಮೈಸೂರಿನ ಕೃಷ್ಣಮೂರ್ತಿಪುರಂನ ನಮನ ಕಲಾವೇದಿಕೆಯಲ್ಲಿ ದಿನಾಂಕ 08 ನವೆಂಬರ್ 2025ರಂದು ನಡೆಯಿತು. ಈ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ವಿಮರ್ಶಕ ಶಶಿಕಾಂತ ಯಡಹಳ್ಳಿ “ವಿಮರ್ಶೆ ಮತ್ತು ಚರ್ಚೆ ಇಲ್ಲದೆ ನಾಟಕಗಳು ಜೀವಂತವಾಗಿರುವುದಿಲ್ಲ. ನಾಟಕ ಪ್ರಯೋಗದ ಪರಿಪೂರ್ಣತೆ ಅರಿಯಲು ವಿಮರ್ಶೆ ಅತ್ಯಗತ್ಯವಾಗಿದೆ. ಆದರೆ ವಿಮರ್ಶಕರ ಸ್ಥಿತಿ ಶೋಚನೀಯವಾಗಿದೆ. ನಾಟಕ ವಿಮರ್ಶಕರಿಗೆ ಇಂದಿನ ದಿನಗಳಲ್ಲಿ ಯಾವುದೇ ಮೌಲ್ಯವಿಲ್ಲ. ವಿಮರ್ಶಕರನ್ನು ಮುಟ್ಟಿಸಿಕೊಳ್ಳದವರ ರೀತಿಯಲ್ಲಿ ಕಾಣುತ್ತಿದ್ದಾರೆ. ಇದರಿಂದ ವಿಮರ್ಶಕರಿಗೆ ಪೀಕಲಾಟ ಆಗುತ್ತಿದೆ. ನಾಟಕಗಳಲ್ಲಿ ಟಿಆರ್‌ಪಿ ಸಿಗುವುದಿಲ್ಲ ಎಂಬ ಕಾರಣಕ್ಕೆ ಮಾಧ್ಯಮಗಳು ಕೂಡ ಮುಖ ತಿರುಗಿಸಿವೆ. ರಂಗಭೂಮಿ ಹರಿಯುವ ನದಿ ಇದ್ದಾಗೆ. ಎಷ್ಟೇ ಕಟ್ಟೆ ಕಟ್ಟಿದರು ಹರಿಯುವ ದಿಕ್ಕನ್ನು ಬದಲಿಸಿಕೊಂಡು ಮುಂದುವರಿಯುತ್ತವೆ. ಇದೇ ರೀತಿ ವಿಮರ್ಶೆ ಕೂಡ ಸಾಗಬೇಕಿದೆ” ಎಂದು ಹೇಳಿದರು. ಕುಸುಮ ಆಯರಹಳ್ಳಿ ಮಾತನಾಡಿ, “ವಿಮರ್ಶೆಯೆಂಬುದು ಹೊಗಳು ಭಟ್ಟರ ಆಶ್ರಯತಾಣವಾಗಿದೆ. ಪೂರ್ವಾಗ್ರಹ ಪೀಡಿತವಾಗಿ…

Read More

ಮಂಗಳೂರು : ದಿ ಇನ್ಸ್ಟಿ ಟ್ಯೂಶನ್ ಆಫ್ ಇಂಜಿನಿಯರ್ಸ್ (ಇಂಡಿಯಾ) ಮತ್ತು ಇನ್ಸ್ಟಿ ಟ್ಯೂಶನ್ ಆಫ್ ವ್ಯಾಲೂವರ್ಸ್ ಮತ್ತು ಕೊಡಗು ದಕ್ಷಿಣ ಕನ್ನಡ ಮತ್ತು ಉಡುಪಿ ಇಂಜಿನಿಯರ್ಸ್ ಅಸೋಸಿಯೇಷನ್ ಇವರ ವತಿಯಿಂದ ಕನ್ನಡ ರಾಜ್ಯೋತ್ಸವದ ಬಗ್ಗೆ ಆಯೋಜಿಸಿದ ಉಪನ್ಯಾಸ ಕಾರ್ಯಕ್ರಮವನ್ನು ದಿನಾಂಕ 11 ನವೆಂಬರ್ 2025ರಂದು ಸಂಜೆ ಗಂಟೆ 5-45ಕ್ಕೆ ಮಂಗಳೂರಿನ ಬಂಟ್ಸ್ ಹಾಸ್ಟಲ್ ರಸ್ತೆಯಲ್ಲಿರುವ ಹೊಟೇಲ್ ವುಡ್ ಲ್ಯಾಂಡ್ಸ್ ಇಲ್ಲಿ ಹಮ್ಮಿಕೊಳ್ಳಲಾಗಿದೆ. ಕಲ್ಲಚ್ಚು ಪ್ರಕಾಶನದ ಪ್ರಕಾಶಕರು ಸಾಹಿತಿ ಮಹೇಶ ಆರ್. ನಾಯಕ್ ಇವರು ‘ಕನ್ನಡದ ಬಳಕೆ ಒಂದು ನೋಟ ಎಂಬ ವಿಷಯದ ಬಗ್ಗೆ ಉಪನ್ಯಾಸ ನೀಡಲಿದ್ದಾರೆ.

Read More

ಕೋಝಿಕ್ಕೋಡು : ಕೋಝಿಕ್ಕೋಡಿನ ಗೋಕುಲ ಗ್ರ್ಯಾಂಡ್ ನಲ್ಲಿ ದಿನಾಂಕ 08 ನವೆಂಬರ್ 2025ರಂದು ವರ್ಲ್ಡ್ ಮಲೆಯಾಳಿ ಕೌನ್ಸಿಲ್ ಏರ್ಪಡಿಸಿದ ಸಮಾರಂಭದಲ್ಲಿ ಕನ್ನಡ-ಮಲೆಯಾಳಗಳ ನಡುವೆ 38 ಮಹತ್ವದ ಕೃತಿಗಳನ್ನು ಅನುವಾದಿಸಿದ ಡಾ. ಪಾರ್ವತಿ ಜಿ. ಐತಾಳ್ ಇವರಿಗೆ ‘ಮಲೆಯಾಳ ಮಿತ್ರ’ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರಶಸ್ತಿ ಪ್ರದಾನ ಮಾಡಿದ ಕೇರಳ ವಿಧಾನಸಭೆಯ ಕೋಝಿಕ್ಕೋಡು ಶಾಸಕರಾದ ತೋಟತ್ತಿಲ್ ರವೀಂದ್ರನ್ ಮಾತನಾಡಿ “ಯಾವುದೇ ಭಾಷೆಯ ಸಾಹಿತ್ಯವು ಬೆಳೆಯಬೇಕಾದರೆ ಇತರ ಭಾಷೆಗಳ ಸಾಹಿತ್ಯದೊಂದಿಗೆ ಸಂಪರ್ಕ ಬೆಳೆಸುವುದು ಅತ್ಯಗತ್ಯ. ಒಂದು ಭಾಷೆಗೆ ಹೊಸ ಗಾಳಿ-ಹೊಸ ಬೆಳಕುಗಳನ್ನು ಕೊಡಲು ಸಾಧ್ಯವಾಗುವುದು ಅನುವಾದದ ಮೂಲಕ ಮಾತ್ರ. ಇಂಥ ಭಾಷಾ ಸೌಹಾರ್ದವನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಜಗತ್ತಿನಾದ್ಯಂತ 600 ಶಾಖೆಗಳಿರುವ ಮಲೆಯಾಳಿ ಕೌನ್ಸಿಲ್ ಅತ್ಯಂತ ಶ್ಲಾಘನೀಯವಾದ ಕೆಲಸ ಮಾಡುತ್ತಿದೆ” ಎಂದು ಹೇಳಿದರು. ವೇದಿಕೆಯಲ್ಲಿ ವರ್ಲ್ಡ್ ಮಲೆಯಾಳಿ ಕೌನ್ಸಿಲ್‌ನ ಇಂಡಿಯಾ ರೀಜನಲ್‌ ಚೇರ್ ಮನ್ ಮೋಹನ್ ಬಿ. ನಾಯರ್, ಪ್ರೆಸಿಡೆಂಟ್ ಪದ್ಮ ಕುಮಾರ್, ಕಾರ್ಯದರ್ಶಿ ರಾಮಚಂದ್ರನ್ ಪೇರಂಬ್ರಾ, ಉಪಾಧ್ಯಕ್ಷೆ ಸಂಜಿತಾ ಕಮಾಲ್, ವಿಜಯಚಂದ್ರನ್ ಮತ್ತು ಆತಿಥೇಯರಾದ…

Read More

ಮಂಗಳೂರು : ಎಸ್.ವಿ.ಪಿ. ಕನ್ನಡ ಅಧ್ಯಯನ ಸಂಸ್ಥೆಯ ಹಿರಿಯ ವಿದ್ಯಾರ್ಥಿ, ಅಧ್ಯಾಪಕ, ಸಿಬಂದಿಗಳ ಒಕ್ಕೂಟ ಗಿಳಿವಿಂಡು (ರಿ ) ಇದರ ವತಿಯಿಂದ ಮಂಗಳ ಗಂಗೋತ್ರಿಯ ಮಂಗಳ ಸಭಾಂಗಣದಲ್ಲಿ ದಿನಾಂಕ 09 ನವೆಂಬರ್ 2025ರಂದು ಆಯೋಜಿಸಿದ್ದ ಗಿಳಿವಿಂಡು ನಾಲ್ಕನೇ ಮಹಾ ಸಮಾವೇಶ ನಡೆಯಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪಂಪ ಪ್ರಶಸ್ತಿ ಪುರಸ್ಕೃತರು ಮತ್ತು ವಿಶ್ರಾಂತ ಕುಲಪತಿ ಪ್ರೊ. ಬಿ.ಎ. ವಿವೇಕ ರೈ “ಕನ್ನಡ ನಮ್ಮ ಭಾವ ವಿನಿಮಯದ ಭಾಷೆಯಾಗಿದೆ. ನಮ್ಮ ಸಹಜ ಜ್ಞಾನ ಪರಂಪರೆಯನ್ನು ಉಳಿಸಿಕೊಂಡು ಆಧುನಿಕ ಕೃತಕ ಜ್ಞಾನ ತಂತ್ರ ಜ್ಞಾನಗಳನ್ನು ಬಳಸಿಕೊಳ್ಳಬೇಕಾಗಿದೆ. ನಾವು ಸಂಘಟಿತರಾಗಿ ಕಾರ್ಯನಿರ್ವಹಿಸಿದಾಗ ಕನ್ನಡ ಇನ್ನಷ್ಟು ಬಲಿಷ್ಠವಾಗಲು ಸಾಧ್ಯ. 1968ರಲ್ಲಿ ಮೈಸೂರು ವಿಶ್ವ ವಿದ್ಯಾನಿಲಯದ ಸ್ನಾತಕೋತ್ತರ ಕೇಂದ್ರವಾಗಿ ಪ್ರೊ. ಎಸ್.ವಿ. ಪರಮೇಶ್ವರ ಭಟ್ಟ ಇವರ ನಿರ್ದೇಶಕತ್ವದಲ್ಲಿ ಪ್ರಾರಂಭಗೊಂಡ ಕನ್ನಡ ವಿಭಾಗ ಇಂದು ವಿಶಾಲವಾಗಿ ಬೆಳೆದಿದ್ದು ಕನ್ನಡವನ್ನು ಕಟ್ಟುವ ಕಾಯಕದಲ್ಲಿ ತನ್ನನ್ನು ತೊಡಗಿಸಿಕೊಂಡಿದೆ. ನಿಸ್ವಾರ್ಥ ಸೇವೆಯ ಮನೋಭಾವದಿಂದ ಗ್ರಾಮೀಣ ಪ್ರದೇಶಗಳಲ್ಲಿ ಶಿಕ್ಷಣ ಪ್ರಸಾರ ಮಾಡಿದ ಕನ್ನಡ ಅನುದಾನಿತ…

Read More