Author: roovari

ಮಂಗಳೂರು : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಮಂಗಳೂರು ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನವನ್ನು ದಿನಾಂಕ 04 ಜನವರಿ 2026ರಂದು ಬೆಳಗ್ಗೆ 9-00 ಗಂಟೆಗೆ ಗುರುಪುರ ಕೈಕಂಬದ ಮೇಘಾ ಪ್ಲಾಝಾ ಸಭಾಂಗಣದಲ್ಲಿ ನಡೆಯಲಿದೆ. ಬೆಳಿಗ್ಗೆ ಗಂಟೆ 9-30ಕ್ಕೆ ಗುರುಪುರ ಕೈಕಂಬದ ಸಬೀಲುಲ್ ಹುದಾ ಅಲ್‌ಬಿರ್ರ್ ಶಾಲಾ ಆವರಣದಿಂದ ಪ್ರಾರಂಭವಾಗುವ ಮೆರವಣಿಗೆಯನ್ನು ಸಮ್ಮೇಳನ ಸ್ವಾಗತ ಸಮಿತಿಯ ಗೌರವಾಧ್ಯಕ್ಷ ಎಂ.ಎಚ್. ಮೊಹಿದಿನ್ ಅಡ್ಡೂರು ಉದ್ಘಾಟಿಸುವರು. ಗಂಟೆ 10-15ಕ್ಕೆ ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್ ಸಮ್ಮೇಳನ ಉದ್ಘಾಟಿಸಲಿದ್ದು, ಸಾಹಿತಿ ಅಬ್ದುಲ್ ರಹಿಮಾನ್ ಕುತ್ತೆತ್ತೂರು ಸಮ್ಮೇಳನದ ಅಧ್ಯಕ್ಷತೆ ವಹಿಸುವರು. ವಿವಿಧ ಅಕಾಡೆಮಿಗಳ ಅಧ್ಯಕ್ಷರು ಭಾಗವಹಿಸುವರು. ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮರ್ ಯು.ಎಚ್. ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಶಮೀಮಾ ಕುತ್ತಾರ್ ಇವರ ‘ಪಡಿಞ್ಞಾರ್ರೋ ಪೂ’ (ಕಥಾ ಸಂಕಲನ), ಹಸೀನ ಮಲ್ನಾಡ್ ಇವರ ‘ಮಿನ್ನಾಂಪುಲು’ (ಹನಿಗವನ ಸಂಕಲನ), ಎನ್.ಎಂ. ಹನೀಫ್ ನಂದರಬೆಟ್ಟು ಇವರ ‘ಸಂಪುಕಾತ್’ (ಕವನ ಸಂಕಲನ). ಬಶೀರ್…

Read More

ಪುಟ್ಟಮಕ್ಕಳಿಗೆ ಸೂಕ್ತ ನಾಟ್ಯಶಿಕ್ಷಣ ನೀಡಿ ಅವರನ್ನು ರಂಗದ ಮೇಲೆ ಉತ್ತಮವಾಗಿ ಪ್ರದರ್ಶನ ನೀಡುವಂತೆ ಸುಸಜ್ಜಿತಗೊಳಿಸುವುದು ಸುಲಭದ ಕೆಲಸವಲ್ಲ. ಅಂಥ ಸ್ತುತ್ಯಾರ್ಹ ತರಬೇತಿ ನೀಡಿ, ತಮ್ಮ ಸುಮನೋಹರ ನೃತ್ಯ ಸಂಯೋಜನೆಯಲ್ಲಿ ಉದಯೋನ್ಮುಖ ಕಲಾವಿದರನ್ನು ಕಲಾಶಿಲ್ಪವಾಗಿಸಿ ಜನಮಾನಸವನ್ನು ಗೆಲ್ಲುವಂಥ ಒಂದು ಸುಂದರ ನೃತ್ಯಪ್ರದರ್ಶನವನ್ನು ನೀಡಿ ಯಶಸ್ವಿಯಾದವರು ಹೆಸರಾಂತ ಉತ್ತಮ ನೃತ್ಯಗುರು ಹಾಗೂ ಮುಖ್ಯವಾಗಿ ಕಲಾವಿದೆಯಾಗಿ ಖ್ಯಾತರಾಗಿರುವ ವಿದುಷಿ ಎ. ಕುಸುಮಾ. ‘ನರ್ತನ ಶ್ರುತಿ’ – ಶೀರ್ಷಿಕೆಯಲ್ಲಿ ‘ಶರ್ವಾಣಿ ನಾಟ್ಯ ಕಲಾಕೂಟ ಅಕಾಡೆಮಿ ಆಫ್ ಆರ್ಟ್ಸ್’ ದಿನಾಂಕ 31 ಡಿಸೆಂಬರ್ 2025ರಂದು ನಯನ ರಂಗಮಂದಿರದಲ್ಲಿ ಶಾಲೆಯ ದಶಮಾನೋತ್ಸವವನ್ನು ಅತ್ಯಂತ ಅಚ್ಚುಕಟ್ಟಾಗಿ ಆಯೋಜಿಸಿದ್ದು ಮೆಚ್ಚುಗೆ ಪಡೆಯಿತು. ವಿದುಷಿ ಕುಸುಮಾ ಇವರ ನೇತೃತ್ವದಲ್ಲಿ ನೃತ್ಯ ಪ್ರಸ್ತುತಿಗಳು ಜನರಂಜಿಸಿ ಕಣ್ಮನಕ್ಕೆ ಆನಂದವನ್ನು ನೀಡಿದವು. ಉದಯೋನ್ಮುಖ ಪುಟ್ಟ ಕಲಾವಿದೆಯರ ಅಂಗಶುದ್ಧತೆ, ಪರಿಶ್ರಮ ಮತ್ತು ಬದ್ಧತೆಯ ನೃತ್ಯಾಭ್ಯಾಸ ಎದ್ದು ಕಂಡಿತು. ಪುಷ್ಪಾಂಜಲಿಯೊಂದಿಗೆ ನೃತ್ತ ನಮನಗಳ ಮೂಲಕ ಪ್ರಥಮ ವಂದನೆ ಹಾಗೂ ಕೃತಜ್ಞತೆ ಸಲ್ಲಿಸಿ, ಮುಂದೆ ಹಲವಾರು ದೈವೀಕ ಕೃತಿಗಳನ್ನು ಬಹು ಸೊಗಸಾಗಿ ನಿರೂಪಿಸಿದರು.…

Read More

ಮೂಡುಬಿದಿರೆ : ಕನ್ನಡ ಸಂಘ ಕಾಂತಾವರದ ಐವತ್ತರ ಸಂಭ್ರಮದ ದ್ವಿತೀಯ ಕಾರ್ಯಕ್ರಮದ ಅಂಗವಾಗಿ ದಿನಾಂಕ 28 ಡಿಸೆಂಬರ್ 2025ರಂದು ಕಾಂತಾವರ ಕನ್ನಡ ಭವನದಲ್ಲಿ ನಾಡಿನ ಎಂಟು ಮಂದಿ ಸಾಧಕರಿಗೆ ದತ್ತಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಹಿರಿಯ ಸಾಹಿತಿ ಮೋಹನ ಕುಂಟಾರ್ ಕಾಸರಗೋಡು “ನಮ್ಮ ಭಾಷೆ, ಸಂಸ್ಕೃತಿ ಉಳಿವಿಗೆ ಕನ್ನಡ ಪರ ಕೆಲಸಗಳು ನಿರಂತರವಾಗಿ ನಡೆಯುತ್ತಿರಬೇಕು. ಆದರೆ ಇತ್ತೀಚಿನ ದಿನಗಳಲ್ಲಿ ಇಂತಹ ಚಟುವಟಿಕೆಗಳು ಕುಂಠಿತವಾಗುತ್ತಿರುವುದು ಖೇದಕರ ಸಂಗತಿ. ಆದರೆ ಡಾ. ನಾ. ಮೊಗಸಾಲೆಯವರು ಕಾಂತಾವರ ಎಂಬ ಸಣ್ಣ ಹಳ್ಳಿಯಲ್ಲಿ ಕನ್ನಡ ಸಂಘವನ್ನು ಕಟ್ಟಿ ವಿಶಿಷ್ಟ ಕಾರ್ಯಕ್ರಮಗಳ ಮೂಲಕ ಕನ್ನಡದ ಕಂಪನ್ನು ನಾಡಿನ ಉದ್ದಕ್ಕು ಪಸರಿಸುತ್ತಿರುವುದು ಶ್ಲಾಘನಾರ್ಹ” ಎಂದು ಹೇಳಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ ಧರ್ಮದರ್ಶಿ ಹರಿಕೃಷ್ಣ ಪುನರೂರು “ಕಾಂತಾವರದಲ್ಲಿ ಕನ್ನಡ ಸಂಘವನ್ನು ಕಟ್ಟಿ ಬೆಳೆಸಿದ ಡಾ. ಮೊಗಸಾಲೆಯವರು ಜನರಲ್ಲಿ ಕನ್ನಡ ಪುಸ್ತಕದ ಪ್ರೀತಿ, ಓದುವ ಹವ್ಯಾಸವನ್ನು ಬೆಳೆಸಿ ಲೇಖಕರು, ಸಾಹಿತಿಗಳಿಗೆ ಪ್ರೋತ್ಸಾಹವನ್ನು ನೀಡುತ್ತಾ ಬಂದಿದ್ದಾರೆ” ಎಂದರು. ಮೊಗಸಾಲೆ…

Read More

ಕುಂದಾಪುರ : ಸಂಗೀತ ಭಾರತಿ ಟ್ರಸ್ಟ್ ಮತ್ತು ಕುಂದಾಪುರ ಭಂಡಾರ್‌ ಕರ್ಸ್ ಕಾಲೇಜಿನ ಸಹಯೋಗದಲ್ಲಿ ಆಯೋಜಿಸಿದ ‘ಶಿಶಿರ ಸಂಗೀತ ಮಹೋತ್ಸವ’ವು ದಿನಾಂಕ 28 ಡಿಸೆಂಬರ್ 2025ರಂದು ಕಾಲೇಜಿನ ರಂಗ ಅಧ್ಯಯನ ಕೇಂದ್ರದಲ್ಲಿ ನಡೆಯಿತು. ದಿ. ಎ. ವೈಕುಂಠ ಹೆಬ್ಬಾರ್ ಹಾಗೂ ದಿ. ಅವಿನಾಶ್ ಹೆಬ್ಬಾರ್ ಸ್ಮರಣಾರ್ಥ ಏರ್ಪಡಿಸಿದ ಈ ಕಾರ್ಯಕ್ರಮವನ್ನು ಖ್ಯಾತ ಗಾಯಕರಾದ ಓಂಕಾರ್ ಹವಾಲ್ದಾರ್ ಮತ್ತು ಮಾನಸಿ ಶಾಸ್ತ್ರಿ ಬೆಂಗಳೂರು ದೀಪ ಬೆಳಗಿಸಿ ಉದ್ಘಾಟಿಸಿದರು. ಸಂಗೀತ ಭಾರತಿ ಟ್ರಸ್ಟ್ ಅಧ್ಯಕ್ಷ ಕೆ. ಶ್ರೀಧರ ಕಾಮತ್, ಭಂಡಾರ್‌ ಕರ್ಸ್ ಕಾಲೇಜು ವಿಶ್ವಸ್ಥ ಮಂಡಳಿಯ ಉಪಾಧ್ಯಕ್ಷ ಕೆ. ಶಾಂತಾರಾಮ ಪ್ರಭು, ಸಂಗೀತ ಭಾರತಿ ಟ್ರಸ್ಟಿನ ಕಾರ್ಯದರ್ಶಿ ನಾರಾಯಣ ಕೆ., ಟ್ರಸ್ಟಿಗಳಾದ ಕೆ. ಸೀತಾರಾಮ ನಕ್ಕತ್ತಾಯ, ಡಾ. ಎಚ್.ಆರ್. ಹೆಬ್ಬಾರ್, ಡಾ. ಆದರ್ಶ ಹೆಬ್ಬಾರ್, ಸುಪ್ರಸನ್ನ ನಕ್ಕತ್ತಾಯ, ರೇಖಾ ಕಾರಂತ್ ಉಪಸ್ಥಿತರಿದ್ದರು. ಕಲಾವಿದರಾದ ಸಿತಾರ್ ವಾದಕ ಅರ್ಜುನ್ ಆನಂದ ಬೆಂಗಳೂರು, ತಬಲಾ ಕಲಾವಿದರಾದ ಸಾಗರ್‌ಭರತ್ ರಾಜ್ ಬೆಂಗಳೂರು, ವಿಘ್ನೇಶ್ ಕಾಮತ್‌ ಕೋಟೇಶ್ವರ, ಹಾರ್ಮೋನಿಯಮ್ ಕಲಾವಿದ…

Read More

ಉಡುಪಿ : ಉಡುಪಿಯ ರಂಜನಿ ಮೆಮೋರಿಯಲ್ ಟ್ರಸ್ಟ್, ಸೈ ಆರ್ಟ್ ಸರ್ವಿಸಸ್ ಅಮೇರಿಕ, ಮಣಿ ಕೃಷ್ಣಸ್ವಾಮಿ ಅಕಾಡೆಮಿ, ರಾಗಧನ ಉಡುಪಿ, ಸರಿಗಮ ಭಾರತಿ ಸಂಗೀತ ಶಾಲೆ ಪರ್ಕಳ ಇವುಗಳ ಸಂಯುಕ್ತ ಆಶ್ರಯದಲ್ಲಿ ಸಂಗೀತದ ಶ್ರೇಷ್ಠ ವಾಗ್ಗೇಯಕಾರರಾದ ಊತ್ತುಕ್ಕಾಡು ವೆಂಕಟಕವಿ ಆರಾಧನೋತ್ಸವನ್ನು ದಿನಾಂಕ 04 ಜನವರಿ 2025ರಂದು ಉಡುಪಿಯ ಯಕ್ಷಗಾನ ಕಲಾರಂಗದ ಐ.ವೈ.ಸಿ. ಸಭಾಂಗಣದಲ್ಲಿ ಆಯೋಜಿಸಿದೆ. ಅಪರಾಹ್ನ ಗಂಟೆ 1-00ರಿಂದ ರಾತ್ರಿ 8-00ಗಂಟೆಯವೆರೆಗೆ ಊತ್ತುಕ್ಕಾಡು ವೆಂಕಟಕವಿ ಆರಾಧನೋತ್ಸವವನ್ನು ವೈಶಿಷ್ಟ್ಯ ಪೂರ್ಣವಾಗಿ ಆಚರಿಸಲಾಗುವುದು ಎಂದು ರಂಜನಿ ಮೆಮೋರಿಯಲ್ ಟ್ರಸ್ಟಿನ ಅಧ್ಯಕ್ಷ ಪ್ರೊ. ವಿ .ಅರವಿಂದ ಹೆಬ್ಬಾ‌ರ್ ತಿಳಿಸಿದ್ದಾರೆ. ಊತ್ತುಕ್ಕಾಡು ವೆಂಕಟಕವಿ ಇವರ ಕೃತಿಗಳನ್ನು ಜನಪ್ರಿಯಗೊಳಿಸುವ ಯೋಜನೆಯನ್ನು ಅವಿರತವಾಗಿ ನಾಡಿನ ವಿವಿದೆಡೆ ಆಯೋಜಿಸಿಕೊಂಡು ಬರುತ್ತಿರುವ ಸಂಗೀತ ಸಾಮ್ರಾಟ್ ಚಿತ್ರವೀಣಾ ಎನ್. ರವಿಕಿರಣ್ ಇವರ ಮಾರ್ಗದರ್ಶನದಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಮೊದಲಿಗೆ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ 21 ಯುವ ಕಲಾವಿದರು ಮತ್ತು ಅಮೇರಿಕಾದಲ್ಲಿ ನೆಲೆಸಿರುವ 8 ಮಂದಿ ಯುವ ಕಲಾವಿದರು ಉತ್ತುಕ್ಕಾಡು ವೆಂಕಟಕವಿ ಇವರ…

Read More

ಧಾರವಾಡ : ಗಿರಡ್ಡಿ ಗೋವಿಂದರಾಜ ಫೌಂಡೇಶನ್ ಧಾರವಾಡ ಮತ್ತು ‘ಭಾರತೀಯ ಸಾಹಿತ್ಯ ನಿರ್ಮಾಪಕರು ಮಾಲಿಕೆ’ ಕೇಂದ್ರ ಸಾಹಿತ್ಯ ಅಕಾಡೆಮಿ ನವದೆಹಲಿ ಇದರ ವತಿಯಿಂದ ‘ಗಿರಡ್ಡಿ ಗೋವಿಂದರಾಜ’ ಇಂಗ್ಲೀಷ್ ಆವೃತ್ತಿಯ ಪುಸ್ತಕ ಬಿಡುಗಡೆ ಸಮಾರಂಭವನ್ನು ದಿನಾಂಕ 04 ಜನವರಿ 2026ರಂದು ಸಂಜೆ 5-30 ಗಂಟೆಗೆ ಧಾರವಾಡ ಕರ್ನಾಟಕ ವಿದ್ಯಾವರ್ಧಕ ಸಂಘದ ಆರ್ಟ್ ಗ್ಯಾಲರಿಯಲ್ಲಿ ಹಮ್ಮಿಕೊಳ್ಳಲಾಗಿದೆ. ಧಾರವಾಡದ ಖ್ಯಾತ ಸಾಹಿತಿ ಡಾ. ವೀಣಾ ಶಾಂತೇಶ್ವರ ಇವರು ಪುಸ್ತಕ ಬಿಡುಗಡೆ ಮಾಡಲಿದ್ದು, ನವದೆಹಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಕನ್ನಡ ಸಲಹಾ ಮಂಡಳಿ ಸದಸ್ಯರಾದ ಚೆನ್ನಪ್ಪ ಅಂಗಡಿ ಇವರು ಪುಸ್ತಕ ಪರಿಚಯ ಮಾಡಲಿದ್ದಾರೆ. ಗಿರಡ್ಡಿ ಗೋವಿಂದರಾಜ ಫೌಂಡೇಶನ್ ಇದರ ಅಧ್ಯಕ್ಷರಾದ ಪ್ರೊ. ಮಲ್ಲಿಕಾರ್ಜುನ ಹಿರೇಮಠ ಇವರು ಅಧ್ಯಕ್ಷತೆ ವಹಿಸಲಿದ್ದು, ಮಾನ್ಯ ಕುಲಪತಿಗಳಾದ ಡಾ. ಶಿವಾನಂದ ಕೆಳಗಿನಮನಿ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

Read More

ಸುರತ್ಕಲ್ : ಶ್ರೀ ದುರ್ಗಾಂಬಾ ಮಹಿಳಾ ಯಕ್ಷಗಾನ ಮಂಡಳಿ ತಡಂಬೈಲ್ ಸುರತ್ಕಲ್ ಇದರ ‘ದಶಮಾನ ವರ್ಷ ಸಂಭ್ರಮಾಚರಣೆ’ಯ ಸಮಾರೋಪ ಸಮಾರಂಭ ಹಾಗೂ ಸಮ್ಮಾನ ಕಾರ್ಯಕ್ರಮವು ದಿನಾಂಕ 31 ಡಿಸೆಂಬರ್ 2025ರಂದು ಇಡ್ಯಾ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನೆರವೇರಿತು. ಚಿತ್ರಾಪುರ ಶ್ರೀ ವಿದ್ಯೇಂದ್ರ ತೀರ್ಥ ಸ್ವಾಮೀಜಿ ಇವರು ಆಶೀರ್ವಚನ ನೀಡಿ, “ಶ್ರೀ ದುರ್ಗಾಂಬಾ ಮಹಿಳಾ ಯಕ್ಷಗಾನ ಮಂಡಳಿಯು ಹತ್ತು ವರ್ಷಗಳನ್ನು ಯಶಸ್ವಿಯಾಗಿ ಪೂರೈಸುವ ಮೂಲಕ ಪರಿಪೂರ್ಣ ತಂಡವಾಗಿ ಬೆಳೆದು ನಿಂತಿದೆ. ಯಕ್ಷ ಗುರು ವಾಸುದೇವ ರಾವ್ ಹಾಗೂ ಅವರ ತಂಡ ಸಾಧನೆಯ ಮೇರು ಶಿಖರವನ್ನು ತಲುಪಿದೆ. ಇಳಿ ವಯಸ್ಸಿನಲ್ಲೂ ಯಕ್ಷಕಲಾ ಸೇವೆಯನ್ನ ಮಾಡುತ್ತಾ ಬರುತ್ತಿರುವುದು ಶ್ಲಾಘನೀಯ” ಎಂದರು. ತಂಡದ ಸ್ಥಾಪಕ ಸದಸ್ಯೆ ಅನು ರಾಘವೇಂದ್ರ ರಾವ್, ಯಕ್ಷಗಾನ ಕಲಾಪೋಷಕರಾದ ಶಕುಂತಲಾ ರಮಾನಂದ ಭಟ್ ಇವರನ್ನು ಕಲಾ ಕ್ಷೇತ್ರಕ್ಕೆ ನೀಡಿದ ಸೇವೆಗಾಗಿ ಸಮ್ಮಾನಿಸಲಾಯಿತು. ಯಕ್ಷ ಗುರು ಎಸ್. ವಾಸುದೇವ ರಾವ್, ಮಂಡಳಿಯ ಅಧ್ಯಕ್ಷೆ ಸುಲೋಚನಾ ವಿ. ರಾವ್ ಇವರಿಗೆ ಮಂಡಳಿಯ ಸದಸ್ಯರು ಗುರುವಂದನೆ ಸಲ್ಲಿಸಿದರು.…

Read More

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಘಟಕ ಮತ್ತು ಮಂಗಳೂರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಮಹಾವಿದ್ಯಾಲಯ ಇದರ ಜಂಟಿ ಆಶ್ರಯದಲ್ಲಿ ಜಯಲಕ್ಷ್ಮೀ ಎಸ್. ಜೋಕಟ್ಟೆಯವರ ‘ಕವಿತೆಗಳು’ ಕವನ ಸಂಕಲನ ಬಿಡುಗಡೆ ಕಾರ್ಯಕ್ರಮವನ್ನು ದಿನಾಂಕ 03 ಜನವರಿ 2026ರಂದು ಸಂಜೆ 4-00 ಗಂಟೆಗೆ ಮಂಗಳೂರಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಮಹಾವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನಿಕಟ ಪೂರ್ವ ಅಧ್ಯಕ್ಷರಾದ ಪ್ರದೀಪ್ ಕುಮಾರ ಕಲ್ಕೂರ ಇವರು ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಡಾ. ಎಂ.ಪಿ. ಶ್ರೀನಾಥ ಇವರು ಕೃತಿ ಬಿಡುಗಡೆ ಮಾಡಲಿದ್ದಾರೆ. ಹಿರಿಯ ಸಾಹಿತಿ ಡಾ. ಮೀನಾಕ್ಷಿ ರಾಮಚಂದ್ರ ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಹಿರಿಯ ಪತ್ರಕರ್ತರಾದ ಶ್ರೀನಿವಾಸ ಜೋಕಟ್ಟೆ ಇವರು ಸಂಪಾದಕರ ಮಾತುಗಳನ್ನಾಡಲಿದ್ದಾರೆ.

Read More

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಮಂಗಳೂರು ಉತ್ತರ ವಲಯ ಸಮೂಹ ಸಂಪನ್ಮೂಲ ಕೇಂದ್ರ ಅಂಗರಗುಂಡಿ ಕ್ಲಸ್ಟರ್ ಸಹಯೋಗದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಳಾಯಿ ಫಿಶರೀಶ್ ನಲ್ಲಿ ದಿನಾಂಕ 31 ಡಿಸೆಂಬರ್ 2025ರಂದು ಎಫ್.ಎಲ್.ಎನ್. ಕಲಿಕಾ ಹಬ್ಬವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಳಾಯಿ ಫಿಶರೀಶ್ ನ ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಹಾಗೂ ಗೋವಿಂದ ದಾಸ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ. ಕೃಷ್ಣ ಮೂರ್ತಿ ಪಿ. “ಪ್ರತಿಯೊಬ್ಬ ವಿದ್ಯಾರ್ಥಿಗೂ ಬಲವಾದ ಶೈಕ್ಷಣಿಕ ಅಡಿಪಾಯವನ್ನು ಪ್ರಾಥಮಿಕ ಶಿಕ್ಷಣದ ಸಂದರ್ಭದಲ್ಲಿ ರೂಪಿಸಿ ಕೊಡಬೇಕು. ಬರವಣಿಗೆ, ಓದುವಿಕೆ ಮತ್ತು ಗಣಿತದ ಅರಿವಿನ ಸಾಮರ್ಥ್ಯವನ್ನು ವಿದ್ಯಾರ್ಥಿ ಪಡೆದುಕೊಳ್ಳುವ ಅವಕಾಶ ನೀಡಬೇಕು. ಪ್ರತಿಯೊಬ್ಬ ವಿದ್ಯಾರ್ಥಿಯೂ ಪ್ರತಿಭಾವಂತರಾಗಿದ್ದು ಅವರ ಪ್ರತಿಭೆಯ ಪ್ರಕಾಶನಕ್ಕೆ ಅವಕಾಶ ಲಭ್ಯವಾಗಬೇಕು. ಅಕ್ಕರೆಯಿಂದ ಕಲಿಯುವ ವಾತಾವರಣ ಸರಕಾರಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ…

Read More

ಶಿವಮೊಗ್ಗ : ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ (ರಿ.) ಶಿವಮೊಗ್ಗ ಮತ್ತು ಫ್ರೆಂಡ್ಸ್ ಸೆಂಟರ್ ಶಿವಮೊಗ್ಗ ಇದರ ವತಿಯಿಂದ 245ನೇ ‘ಸಾಹಿತ್ಯ ಹುಣ್ಣಿಮೆ’ ಮನೆ ಮನೆ ಸಾಹಿತ್ಯ ಸಂಭ್ರಮ ಹಾಡು, ಹಾಸ್ಯ, ಕಥೆ, ಕವನ, ಹನಿಗವನ, ವಿಚಾರಗಳ ತಿಂಗಳ ಕಾರ್ಯಕ್ರಮವನ್ನು ದಿನಾಂಕ 03 ಜನವರಿ 2026ರಂದು ಸಂಜೆ 6-00 ಗಂಟೆಗೆ ಶಿವಮೊಗ್ಗದ ಗೋಪಾಲಗೌಡ ಬಡಾವಣೆಯ ಫ್ರೆಂಡ್ಸ್ ಸೆಂಟರ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮಲೆನಾಡು ಅಭಿವೃದ್ಧಿ ಮಂಡಲಿಯ ಅಧ್ಯಕ್ಷರಾದ ಡಾ. ಆರ್.ಎಂ. ಮಂಜುನಾಥ ಗೌಡರು ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದು, ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆಯ ಅಧ್ಯಕ್ಷರಾದ ಡಿ. ಮಂಜುನಾಥ ಇವರು ಅಧ್ಯಕ್ಷತೆ ವಹಿಸಲಿದ್ದಾರೆ. ಶ್ರೀಮತಿ ಮಹಾದೇವಿ, ಶ್ರೀಮತಿ ನಳಿನಾಕ್ಷಿ, ನೀಲಪ್ಪ ಇವರಿಂದ ಹಾಡು, ಹಾಸ್ಯ ಕಲಾವಿದ ಉಮೇಶ್ ಗೌಡ ಇವರಿಂದ ಹಾಸ್ಯ, ಡಾ. ಕೆ.ಜಿ. ವೆಂಕಟೇಶ್ ಇವರಿಂದ ಕಥೆ, ಸೂರ್ಯಪ್ರಕಾಶ್ ಡಿ.ಎಚ್., ಶ್ರೀಮತಿ ಬಿ.ಟಿ. ಅಂಬಿಕಾ, ಡಾ. ಅನುಪಮಾ ವೈ.ಜೆ., ಎಂ. ನವೀನ್ ಕುಮಾರ್ ಮತ್ತು ಡಿ. ಗಣೇಶ್ ಇವರಿಂದ…

Read More