Author: roovari

ಮಂಗಳೂರು : ಅಮೃತ ಪ್ರಕಾಶ ಪತ್ರಿಕೆ ಹಾಗೂ ಬಲ್ಮಠ ಸರಕಾರಿ ಪದವಿಪೂರ್ವ ಬಾಲಕಿಯರ ಕಾಲೇಜು ಇವರ ಸಹಯೋಗದಲ್ಲಿ 116ನೇಯ ಸಾಹಿತ್ಯ ಅಭಿರುಚಿ ಕಾರ್ಯಕ್ರಮವು ದಿನಾಂಕ 30 ಡಿಸೆಂಬರ್ 2025ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಪ್ರಾಂಶುಪಾಲರಾದ ಶ್ರೀಮತಿ ವನಿತಾ ದೇವಾಡಿಗ ಇವರು ವಹಿಸಿದ್ದು, ಮುಖ್ಯ ಸಂಪನ್ಮೂಲ ಅತಿಥಿಯಾಗಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಪುಷ್ಪರಾಜ್ ಬಿ.ಎನ್. ಹಾಗೂ ನಿವೃತ್ತ ಪ್ರಾಂಶುಪಾಲರಾದ ಪ್ರೊ. ಕೃಷ್ಣಮೂರ್ತಿ ಹಾಗೂ ಕರಾವಳಿ ಲೇಖಕಿಯರ ವಾಚಕಿಯರ ಸಂಘದ ಅಧ್ಯಕ್ಷರಾದ ಶ್ರೀಮತಿ ಶಕುಂತಳ ಶೆಟ್ಟಿ ಉಪಸ್ಥಿತರಿದ್ದರು. ನಿವೃತ್ತ ಶಿಕ್ಷಕಿ ಲೇಖಕಿ ಸುಧಾ ನಾಗೇಶ್ ಕಾರ್ಯಕ್ರಮ ನಿರೂಪಿಸಿ, ಅಮೃತ ಪ್ರಕಾಶ ಪತ್ರಿಕೆ ವ್ಯವಸ್ಥಾಪಕ ಸಂಪಾದಕಿ ಡಾ. ಮಾಲತಿ ಶೆಟ್ಟಿ ಮಾಣೂರು ಸ್ವಾಗತಿಸಿ, ಕನ್ನಡ ಉಪನ್ಯಾಸಕಿ ಯಶೋಧರವರು ವಂದಿಸಿದರು.

Read More

ಉಡುಪಿ : ರಂಗಭೂಮಿ ಉಡುಪಿ ವತಿಯಿಂದ ‘ರಂಗಭೂಮಿ ರಂಗಶಿಕ್ಷಣ ಮಕ್ಕಳ ನಾಟಕೋತ್ಸವ’ ಕಾರ್ಯಕ್ರಮವು ದಿನಾಂಕ 29 ಡಿಸೆಂಬರ್ 2025ರಂದು ಉಡುಪಿ ಎಂ.ಜಿ.ಎಂ. ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಉದ್ಘಾಟನೆಗೊಂಡಿತು. ಈ ವರ್ಷದ ‘ರಂಗಭೂಮಿ ರಂಗಶಿಕ್ಷಣ’ ಅಭಿಯಾನದಲ್ಲಿ ಉಡುಪಿ ನಗರದ ಆಯ್ದ 11 ಪ್ರೌಢಶಾಲೆಗಳ 250ಕ್ಕೂ ಅಧಿಕ ಮಕ್ಕಳ ಭಾಗವಹಿಸುವಿಕೆಯಲ್ಲಿ 11 ಹೆಸರಾಂತ ನಿರ್ದೇಶಕರಿಂದ ತಯಾರಾದ 11 ಕಿರು ನಾಟಕಗಳು ಪ್ರದರ್ಶನಗೊಳ್ಳಲಿದೆ. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ರಂಗಭೂಮಿ ಉಡುಪಿ ಅಧ್ಯಕ್ಷರು ಹಾಗೂ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ “ಮಕ್ಕಳಲ್ಲಿ ರಂಗ ಪ್ರಜ್ಞೆ ಬೆಳೆಸುವ ಮೂಲಕ ನೈತಿಕ ಮೌಲ್ಯಗಳ ತಳಹದಿಯಲ್ಲಿ ಉತ್ತಮ ಸಮಾಜ ನಿರ್ಮಾಣ ಸಾಧ್ಯ ರಂಗ ಶಿಕ್ಷಣದಿಂದ ಮಕ್ಕಳಲ್ಲಿ ಮನೋವಿಕಾಸ, ಎಲ್ಲರ ಮುಂದೆ ಮಾತನಾಡುವ ಧೈರ್ಯ, ಭಾಷಾ ಜ್ಞಾನ ಜೊತೆಗೆ ಬದುಕನ್ನು ಎದುರಿಸುವ ಜೀವನ ಮೌಲ್ಯಗಳ ಪಾಠ ದೊರೆಯುತ್ತದೆ. ಮುಂದೆ ಅವರು ಕಲಾವಿದರಾಗುತ್ತಾರೋ ಬಿಡುತ್ತಾರೋ ಅವರಿಗೆ ಬಿಟ್ಟ ವಿಷಯ. ಆದರೆ ಒಂದು ಸುಸಂಸ್ಕೃತ ಸಮಾಜ…

Read More

ಬದಿಯಡ್ಕ : ಕಾಸರಗೋಡಿನ ಬದಿಯಡ್ಕ ಬಳಿಯ ವೀಣಾವಾದಿನಿ ಸಂಗೀತ ವೈದಿಕ ತಾಂತ್ರಿಕ ವಿದ್ಯಾಪೀಠದ ನಾಲ್ಕು ದಿವಸಗಳ ವಾರ್ಷಿಕೋತ್ಸವದ ಶುಭ ಸಮಾರಂಭವು ದಿನಾಂಕ 25 ಡಿಸೆಂಬರ್ 2025ರಂದು ಜರಗಿತು. ಬೆಳಗ್ಗೆ ಬ್ರಹ್ಮಶ್ರೀ ಅನಂತ ಭಟ್ ಚೂರಿಕ್ಕೋಡು ಇವರಿಂದ ಶ್ರೀ ಮಹಾಗಣಪತಿ ಹೋಮ, ಬ್ರಹ್ಮಶ್ರೀ ರಾಧೇಶ್ಯಾಮ್ ಪರಂಬರ ಇವರಿಂದ ಲಕ್ಷಾರ್ಚನೆ ಸೇವೆ, ಬ್ರಹ್ಮಶ್ರೀ ಬಾಲಕೃಷ್ಣ ಭಟ್ ಇವರಿಂದ ಚಕ್ರಾಬ್ಜ ಪೂಜೆ ಹಾಗೂ ಬ್ರಹ್ಮಶ್ರೀ ಮುಲ್ಲಪಳ್ಳಿ ಕೃಷ್ಣನ್ ನಂಬೂದಿರಿ ಇವರಿಂದ ನವಗ್ರಹ ಪೂಜೆ ಮುಂತಾದ ವೈದಿಕ ಕಾರ್ಯಕ್ರಮಗಳು ಬಹಳ ವಿಜೃಂಭಣೆಯಿಂದ ನೆರವೇರಿತು. ನವಗ್ರಹ ಪೂಜಾ ವಿಧಿಯ ಸಂದರ್ಭದಲ್ಲಿ ವೀಣಾವಾದಿನಿಯ ಸಂಸ್ಥಾಪಕರೂ ಗುರುಗಳೂ ಆದ ವಿದ್ವಾನ್ ಯೋಗೀಶ್ ಶರ್ಮ ಬಳ್ಳಪದವು ಮತ್ತು ಶಿಷ್ಯವೃಂದದವರಿಂದ ನವಗ್ರಹ ಕೃತಿಗಳ ಆಲಾಪನೆಯು ವಿಶೇಷ ಆಕರ್ಷಣೆಯಾಗಿತ್ತು. ಹಾಡುಗಾರಿಕೆಗೆ ವಯಲಿನ್ ನಲ್ಲಿ ಕುಮಾರಿ ಧನಶ್ರೀ ಶಬರಾಯ ಹಾಗೂ ಮೃದಂಗದಲ್ಲಿ ಚೇರ್ತಲ ಕೃಷ್ಣ ಕುಮಾರ್ ಸಹಕರಿಸಿದರು. ವಾರ್ಷಿಕೋತ್ಸವದ ಎರಡನೆಯ ದಿನದ ಕಾರ್ಯಕ್ರಮವು ದಿನಾಂಕ 26 ಡಿಸೆಂಬರ್ 2025ರಂದು ಪೂರ್ವಾಹ್ನ ಘಂಟೆ 6-30ಕ್ಕೆ ಮಹಾಗಣಪತಿ ಹೋಮದೊಂದಿಗೆ ಪ್ರಾರಂಭಗೊಂಡು…

Read More

ಅಮ್ಮ ನಿನ್ನ ನೆನಪೆ ನನ್ನ ಬಾಳಿಗೊಂದು ಶಕ್ತಿ ಮರೆಯಲೆಂತು ಉಣಿಸಿ ಉಳಿಸಿ ಕೊಟ್ಟು ಹೋದ ಪ್ರೀತಿ ||ಪ.|| ಅಂಕೆಯಿರದೆ ಕಟ್ಟಿಕೊಂಡೆ ಕಣ್ಣತುಂಬ ಕನಸು ಶಂಕೆಯಿರದೆ ನೋಡಿಕೊಂಡೆ ಆಗಲೆಂದು ನನಸು| ಮೌನದಲ್ಲೆ ಪುಳಕಗೊಂಡೆ ಕಂಡು ಮಡಿಲ ಸೊಗಸು ಬಿಂಕದಿಂದ ಹೇಳಿಕೊಂಡೆ ಅದುವೆ ನನ್ನ ಕೂಸು ||೧|| ಕಲಿಸಿ ರೀತಿ-ನೀತಿ, ಮಿತಿಯು ಮೀರದಂತೆ ದಾಟಿ ತಿಳಿಸಿ, ಬೆಳೆಸಿ, ಒಲವ ಆಳ ರಾಗ-ಭಾವ ಮೀಟಿ | ಮಾತಿಗಿಂತ ದುಡಿದೆ ಹೆಚ್ಚು ದಣಿವರಿಯದ ಮೇಟಿ ತ್ಯಾಗ, ಸಹನೆ, ಕರುಣೆಯೊಡಲು ನಿನಗೆ ನೀನೆ ಸಾಟಿ ||೨|| ಅಪ್ಪಿ ನಾನು ಮುದದಿ ನೀನು ಹಾಕಿ ಕೊಟ್ಟ ದಾರಿ ಭಯದ ಮನದಿ ಎಲ್ಲಿ ಗುರಿಯು ತಪ್ಪಬಹುದೊ ಜಾರಿ | ಗುಡುಗೊ, ಮಳೆಯೊ ಬಿಡದೆ ನಡೆದೆ, ತಿರುಗಲಿಲ್ಲ ಹೆದರಿ ಜತನದಿಂದ ಕಾಯ್ದೆ ಬದುಕು ಹೋಗದಂತೆ ಸೋರಿ ||೩|| – ರೂಪಕಲಾ ಆಳ್ವ

Read More

ಬೆಂಗಳೂರು : ಜಂಗಮ ಕಲೆಕ್ಟಿವ್ ಪ್ರಸ್ತುತ ಪಡಿಸುವ ‘ಪಂಚಮ ಪದ’ ನಾಟಕ ಪ್ರದರ್ಶನವನ್ನು ದಿನಾಂಕ 02 ಜನವರಿ 2025ರಂದು ಸಂಜೆ ಗಂಟೆ 7-30ಕ್ಕೆ ಬೆಂಗಳೂರು ವಿಶ್ವವಿದ್ಯಾಲಯ ಜ್ಞಾನಭಾರತಿ ವೆಂಕಟಗಿರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಚಂದ್ರಶೇಖರ್ ಕೆ. ಇವರ ನಿರ್ದೇಶನದಲ್ಲಿ ಹೋರಾಟದ ಹಾಡುಗಳು ಮತ್ತು ಕಥನ ಪ್ರಸ್ತುತಿ. ಕರ್ನಾಟಕದಲ್ಲಿ ಹೋರಾಟದ ಹಾಡುಗಳ ದೊಡ್ಡ ಪರಂಪರೆಯೇ ಇದೆ. ಆ ಹಾಡುಗಳೊಂದಿಗೆ ಇಲ್ಲಿನ ಹಲವು ಜನ ಸಮುದಾಯಗಳ ಸಂಸ್ಕೃತಿ, ಬದುಕು, ಬವಣೆ, ಚಳುವಳಿಯ ನೆನಪುಗಳು ಬೆಸೆದುಕೊಂಡಿವೆ. ಇಂತಹ ಹತ್ತಾರು ಹಾಡುಗಳ ಹುಟ್ಟಿನ ಸುತ್ತಲಿನ ಕಥನಗಳನ್ನು ನಾವು ಬಗೆಯುತ್ತಾ ಹೋದಂತೆ ಈ ನೆಲದ ಸಾಂಸ್ಕೃತಿಕ ಇತಿಹಾಸದ ಭಿನ್ನ ಮಗ್ಗುಲುಗಳು ತೆರೆದುಕೊಳ್ಳುತ್ತವೆ. ಪ್ರಸ್ತುತ ಪ್ರಯೋಗ ಹಾಡು, ನೆನಪು, ಮರೆತ ಇತಿಹಾಸವನ್ನು ವಿಶಿಷ್ಟ ನೇಯ್ಗೆಯಲ್ಲಿ ಬೆಸೆದು ಕಟ್ಟಿರುವ ಸಂಗೀತ ಪ್ರಯೋಗ. ಇದು ಹೀಗೆ ಮುಂದೆ ಆಗಲಿರುವ ಹಲವು ಪ್ರಯೋಗಗಳ ಸರಣಿಯ ಆರಂಭ ಬಿಂದು.

Read More

ಮಂಗಳೂರು : ಬ್ಯಾರಿ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ, ಕವಿ ಅಬ್ದುಲ್ ರಹಿಮಾನ್ ಕುತ್ತೆತ್ತೂರು ಆಯ್ಕೆಯಾಗಿದ್ದಾರೆ. ಅಕಾಡೆಮಿಯ ಸರ್ವ ಸದಸ್ಯರ ಸಭೆ ಮತ್ತು ಸಮ್ಮೇಳನ ಸ್ವಾಗತ ಸಮಿತಿ ಸಭೆಯಲ್ಲಿ ಸರ್ವಾನುಮತದಿಂದ ಈ ಆಯ್ಕೆ ನಡೆದಿದೆ ಎಂದು ಬ್ಯಾರಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ಉಮರ್ ಯು.ಎಚ್. ತಿಳಿಸಿದ್ದಾರೆ. ಅಬ್ದುಲ್ ರಹಿಮಾನ್ ಕುತ್ತೆತ್ತೂರು ಅವರ, ಸರ್ವಜ್ಞನ ವಚನಗಳ ಭಾಷಾಂತರವನ್ನೊಳಗೊಂಡ ‘ಜೀಯಸೆಲೆ’ ಬ್ಯಾರಿ ಕವನ ಸಂಕಲನ, ‘ಬ್ಯಾರಿ ಪಂಚತಂತ್ರ’ (ಪಂಚತಂತ್ರ ಕತೆಗಳ ಅನುವಾದ ಗ್ರಂಥ) ಮತ್ತು ‘ಸಾಧನೆಡೊ ಸರದಾರ ಅಭಿವೃದ್ಧಿರೊ ಕಿನಾವುಗಾರ ಸರ್. ಎಂ. ವಿಶ್ವೇಶ್ವರಯ್ಯ’ ಬ್ಯಾರಿ ಕೃತಿಗಳನ್ನು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಪ್ರಕಟಿಸಿದೆ. ಕಾದಂಬರಿಗಾರ ನಿಯಾಝ್ ಪಡೀಲ್ ಅವರ ‘ಯತೀಮ್’ ಕನ್ನಡ ಕಾದಂಬರಿಯನ್ನು ಇವರು ಬ್ಯಾರಿ ಭಾಷೆಗೆ ಅನುವಾದಿಸಿದ್ದು ಇತ್ತೀಚೆಗೆ ಬಿಡುಗಡೆಗೊಂಡಿದೆ. ಕನಕದಾಸರ ಮುಂಡಿಗೆ ಮತ್ತು ಕೀರ್ತನೆಗಳನ್ನು ಕನ್ನಡದಿಂದ ಬ್ಯಾರಿಗೆ ಅನುವಾದಿಸಿದ್ದು, ಪ್ರಕಟಣೆಯ ಹಂತದಲ್ಲಿದೆ. ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ಹೊರತಂದ ಬ್ಯಾರಿ-ಕನ್ನಡ-ಇಂಗ್ಲೀಷ್ ನಿಘಂಟನ ಸಹಸಂಪಾದಕರಾಗಿ, ಬ್ಯಾರಿ-ಇಂಗ್ಲೀಷ್-ಕನ್ನಡ-ಹಿಂದಿ ಪದಕೋಶದ ಬ್ಯಾರಿ ಪದಗಳ…

Read More

ರಾಯಚೂರು : ಸಾಹಿತ್ಯ, ಶೈಕ್ಷಣಿಕ, ಸಾಮಾಜಿಕ, ಸಾಂಸ್ಕೃತಿಕ ಸಂಸ್ಥೆ ‘ಮಹಿಳಾ ಪರಿಷತ್’ ಇದರ ಉದ್ಘಾಟನಾ ಕಾರ್ಯಕ್ರಮ, ಪದಗ್ರಹಣ, ಸಾಹಿತ್ಯ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭವನ್ನು ದಿನಾಂಕ 04 ಜನವರಿ 2026ರಂದು ರಾಯಚೂರು ಕನ್ನಡ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಮುಂಜಾನೆ 10-00 ಗಂಟೆಗೆ ಸಂಸ್ಥಾಪಕ ಅಧ್ಯಕ್ಷರಾದ ಡಾ. ಸರ್ವಮಂಗಳ ಸಂಕ್ರಿ ಇವರ ಅಧ್ಯಕ್ಷತೆಯಲ್ಲಿ ಹಿರಿಯ ಸಾಹಿತಿ ಡಾ. ಜಯಲಕ್ಷ್ಮಿ ಮಂಗಳಮೂರ್ತಿ ಇವರು ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರದ ಸಾಧಕರಿಗೆ ‘ಕಾಯಕ ವಿಭೂಷಣ ಪ್ರಶಸ್ತಿ’ ಪ್ರದಾನ ಮಾಡಿ ಸನ್ಮಾನಿಸಲಾಗುವುದು. 2-30 ಗಂಟೆಗೆ ನಡೆಯಲಿರುವ ಕವಿಗೋಷ್ಠಿಯ ಅಧ್ಯಕ್ಷತೆಯನ್ನು ಸಾಹಿತಿ ಡಾ. ರಾಜಶ್ರೀ ಕಲ್ಲುರ್ಕರ್ ಇವರು ವಹಿಸಲಿದ್ದು, ಹಿರಿಯ ಸಾಹಿತಿ ವೀರ ಹನುಮನ ಉದ್ಘಾಟನೆ ಮಾಡಲಿದ್ದಾರೆ. ಸಾಹಿತಿ ವೆಂಕಟೇಶ ಬಾಗಲವಾಡ ಇವರು ಆಶಯ ನುಡಿಗಳನ್ನಾಡಲಿದ್ದು, ದಾವಣಗೆರೆ ಅಕ್ಕ ಮಹಾದೇವಿ ಭಜನಾ ಮಂಡಳಿಯ ಶ್ರೀಮತಿ ಮಹಾದೇವಿ ಹೆಚ್., ಶ್ರೀಮತಿ ಎಂ. ಗೀತಾ ಮತ್ತು ಶ್ರೀಮತಿ ಭಾಮಾ ಇವರ ಗಾಯನ ಪ್ರಸ್ತುತಗೊಳ್ಳಲಿದೆ.

Read More

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾಡಳಿತ ವತಿಯಿಂದ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆಯುತ್ತಿರುವ ಜಿಲ್ಲಾ ಕರಾವಳಿ ಉತ್ಸವ – 2025 ಅಂಗವಾಗಿ ದಿನಾಂಕ 21 ಡಿಸೆಂಬರ್ 2025ರಂದು ದಕ್ಷಿಣೋತ್ತರ ಕನ್ನಡ ಜಿಲ್ಲೆಗಳ ಪ್ರಸಿದ್ಧ ಕಲಾವಿದರಿಂದ ಯಕ್ಷಗಾನ ತಾಳಮದ್ದಳೆ ಜರಗಿತು. ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ನೇತೃತ್ವದ ಆಕಾಶವಾಣಿ ಮತ್ತು ದೂರದರ್ಶನ ಖ್ಯಾತಿಯ ಕರ್ನಾಟಕ ಯಕ್ಷ ಭಾರತಿ ಪುತ್ತೂರು ತಂಡವು ಕರಾವಳಿ ಉತ್ಸವದ ವಸ್ತು ಪ್ರದರ್ಶನ ವೇದಿಕೆಯಲ್ಲಿ ‘ವೀರಮಣಿ ಕಾಳಗ’ ಪ್ರಸಂಗವನ್ನು ಪ್ರಸ್ತುತಪಡಿಸಿತು. ಯಕ್ಷಗಾನ ರಂಗದ ಪ್ರಮುಖ ಅರ್ಥಧಾರಿಗಳಾದ ಡಾ. ಎಂ. ಪ್ರಭಾಕರ ಜೋಶಿ, ಭಾಸ್ಕರ ರೈ ಕುಕ್ಕುವಳ್ಳಿ, ಜಬ್ಬಾರ್ ಸಮೋ ಸಂಪಾಜೆ ಮತ್ತು ಪ್ರಸಾದ ಪೂಜಾರಿ ಭಟ್ಕಳ ವಿವಿಧ ಪಾತ್ರಗಳನ್ನು ನಿರ್ವಹಿಸಿದರು. ಭಾಗವತ ಹರೀಶ ಶೆಟ್ಟಿ ಸೂಡ ಇವರ ಹಾಡುಗಾರಿಕೆಗೆ ವಿಕಾಸ್ ರಾವ್ ಕೆರೆಕಾಡ್, ಶ್ರೀಶ ರಾವ್ ನಿಡ್ಲೆ ಮತ್ತು ಕೀರ್ತನ್ ಹಿಮ್ಮೇಳದಲ್ಲಿ ಸಹಕರಿಸಿದರು. ಜಿಲ್ಲಾಡಳಿತದ ಪರವಾಗಿ ದ.ಕ. ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಜಯಲಕ್ಷ್ಮಿ ರಾಯಕೋಡ ಇವರು ಕರ್ನಾಟಕ…

Read More

ಬೆಂಗಳೂರು : ಕರ್ನಾಟಕ ಜಾನಪದ ಅಕಾಡೆಮಿಯು 2025ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರಕಟಿಸಿದ್ದು, ತುಮಕೂರಿನ ಜಾನಪದ ವಿದ್ವಾಂಸರಾದ ಡಾ. ಚಿಕ್ಕಣ್ಣ ಯಣ್ಣೆಕಟ್ಟೆ ಇವರು ‘ಡಾ. ಜೀ.ಶಂ.ಪ. ತಜ್ಞ ಪ್ರಶಸ್ತಿ’ ಹಾಗೂ ಕಲಬುರಗಿಯ ಡಾ. ಎಚ್.ಟಿ. ಪೋತೆ ಇವರು ‘ಡಾ. ಬಿ.ಎಸ್. ಗದ್ದಗಿಮಠ ತಜ್ಞ ಪ್ರಶಸ್ತಿ’ಗೆ ಆಯ್ಕೆಯಾಗಿದ್ದಾರೆ. ಅಕಾಡೆಮಿ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್ ಹಾಗೂ ರಿಜಿಸ್ಟ್ರಾರ್ ಎನ್. ನಮ್ರತಾ ಇವರು ಪ್ರಶಸ್ತಿಗೆ ಆಯ್ಕೆಯಾದವರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ‘ಜಾನಪದ ತಜ್ಞ ಪ್ರಶಸ್ತಿ’ಯು ತಲಾ ರೂ.50,000/- ನಗದು ಒಳಗೊಂಡಿದೆ. ‘ವಾರ್ಷಿಕ ಗೌರವ ಪ್ರಶಸ್ತಿ’ಗೆ 31 ಜಿಲ್ಲೆಗಳಿಂದ 30 ಕಲಾವಿದರನ್ನು ಆಯ್ಕೆ ಮಾಡಲಾಗಿದ್ದು, ಈ ಪ್ರಶಸ್ತಿಯು ತಲಾ ರೂ.25,000/- ನಗದು ಒಳಗೊಂಡಿದೆ. ಪ್ರಶಸ್ತಿ ಮೊತ್ತದ ಜತೆಗೆ ಸ್ಮರಣಿಕೆ, ಶಾಲು, ಹಾರ, ಫಲತಾಂಬೂಲ ನೀಡಿ ಗೌರವಿಸಲಾಗುವುದು. ಗೌರವ ಪ್ರಶಸ್ತಿಗೆ ಬೆಂಗಳೂರಿನ ಸಿದ್ದರಾಜು (ನೀಲಗಾರರ ಪದ ಮತ್ತು ತಂಬೂರಿ ಪದ), ಬೆಂಗಳೂರು ಗ್ರಾಮಾಂತರದ ಬಚ್ಚಮ್ಮ (ಸೋಬಾನೆ ಪದ, ತತ್ವಪದ, ಸಂಪ್ರದಾಯ ಪದ), ರಾಮನಗರದ ಬಿ. ಸಿದ್ದರಾಜಯ್ಯ (ಜಾನಪದ ಗಾಯನ),…

Read More

ಮಂಗಳೂರು : ಶರಧಿ ಪ್ರತಿಷ್ಠಾನ (ರಿ.) ಮಂಗಳೂರು ಆಯೋಜಿಸುವ ‘ಕಲಾಪರ್ಬ’ ಚಿತ್ರ ಶಿಲ್ಪ ಸಾಂಸ್ಕೃತಿಕ ಮೇಳದಲ್ಲಿ ‘ಮಕ್ಕಳಿಗಾಗಿ ಚಿತ್ರಕಲಾ ಸ್ಪರ್ಧೆ’ಯನ್ನು ದಿನಾಂಕ 10 ಜನವರಿ 2026ರಂದು ಮಧ್ಯಾಹ್ನ 3-30ರಿಂದ 5-30ರವರೆಗೆ ಮಂಗಳೂರಿನ ಕದ್ರಿ ಪಾರ್ಕಿನಲ್ಲಿ ಹಮ್ಮಿಕೊಳ್ಳಲಾಗಿದೆ. 2ರಿಂದ 4ನೇ ತರಗತಿ, 5ರಿಂದ 7ನೇ ತರಗತಿ, 8ರಿಂದ 10ನೇ ತರಗತಿ ಹಾಗೂ ಕಾಲೇಜು ವಿಭಾಗ ಈ ಚಿತ್ರ ಕಲಾ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಸ್ಪರ್ಧಾಳುಗಳಿಗೆ ಪ್ರಥಮ, ದ್ವಿತೀಯ, ತೃತೀಯ ಬಹುಮಾನದ ಜೊತೆ ಭಾಗವಹಿಸಿದ ಎಲ್ಲಾ ಸ್ಪರ್ಧಾಳುಗಳಿಗೂ ಅಭಿನಂದನಾ ಪತ್ರ ಮತ್ತು ಪದಕ ನೀಡಲಾಗುವುದು. ಸ್ಪರ್ಧೆಯ ವಿಷಯ : 2ರಿಂದ 4ನೇ ತರಗತಿ : ಸೂರ್ಯೋದಯ, 5ರಿಂದ 7ನೇ ತರಗತಿ : ವನ್ಯಜೀವಿ, 8ರಿಂದ 10ನೇ ತರಗತಿ : ಪ್ರಕೃತಿ / ಸಂಸ್ಕೃತಿ, ಕಾಲೇಜು ವಿಭಾಗ : ತುಳುನಾಡಿನ / ಪದ್ಧತಿ ಭಾಗವಹಿಸಲಿರುವ ವಿದ್ಯಾರ್ಥಿಗಳು ಮಧ್ಯಾಹ್ನ ಗಂಟೆ 2-30ಕ್ಕೆ ಹಾಜರಿರಬೇಕು. ಶಾಲಾ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ತರಬೇಕು. ಡ್ರಾಯಿಂಗ್ ಶೀಟನ್ನು ನೀಡಲಾಗುವುದು ಉಳಿದ ಪರಿಕರಗಳನ್ನು ಸ್ಪರ್ಧಾಳುಗಳೇ…

Read More