Author: roovari

ಶಿವಮೊಗ್ಗ : ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ (ರಿ.) ಶಿವಮೊಗ್ಗ ಮತ್ತು ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ ಸಮಿತಿ ಇದರ ವತಿಯಿಂದ 244ನೇ ‘ಸಾಹಿತ್ಯ ಹುಣ್ಣಿಮೆ’ ಹಾಡು ಹಾಸ್ಯ ಕಥೆ ಕವನ ಹನಿಗವನ ವಿಚಾರ ತಿಂಗಳ ಕಾರ್ಯಕ್ರಮವನ್ನು ದಿನಾಂಕ 20 ಡಿಸೆಂಬರ್ 2025ರಂದು ಸಂಜೆ 6-30 ಗಂಟೆಗೆ ಶಿವಮೊಗ್ಗದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ ಸಮಿತಿಯ ಅಧ್ಯಕ್ಷರಾದ ಉಂಬ್ಳೇಬೈಲು ಮೋಹನ್ ಇವರು ಉದ್ಘಾಟನೆ ಮಾಡಲಿದ್ದು, ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆಯ ಅಧ್ಯಕ್ಷರಾದ ಡಿ. ಮಂಜುನಾಥ ಇವರು ಅಧ್ಯಕ್ಷತೆ ವಹಿಸಲಿದ್ದಾರೆ. ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಭಜನಾ ಮಂಡಳಿಯವರಿಂದ ಭಜನೆ, ಶಿವಮೊಗ್ಗ ಕದಂಬ ಕರೋಕೆ ಗಾಯನ ತಂಡದವರಿಂದ ಹಾಡು, ಮೇಗರವಳ್ಳಿ ರಮೇಶ್, ಶ್ರೀನಿವಾಸ ಮತ್ತು ಶುಭ ಇವರಿಂದ ಕವನ ವಾಚನ, ಹು.ವ. ಸತೀಶ ಮತ್ತು ಶ್ರೀಮತಿ ಗಾಯತ್ರಿ ಇವರಿಂದ ಹನಿಗವನ ಹಾಗೂ ಕುಮಾರಿ ಸ್ಪಂದನಾ ಚರಂತಿಮಠ ಇವರಿಂದ ಕಥೆ ಪ್ರಸ್ತುತಗೊಳ್ಳಲಿದೆ.

Read More

ಮಂಗಳೂರು : ಅರೆಹೊಳೆ ಪ್ರತಿಷ್ಠಾನ, ನಂದಗೋಕುಲ, ಅಸ್ತಿತ್ವ (ರಿ.) ಮಂಗಳೂರು, ರಂಗಸಂಗಾತಿ ಮಂಗಳೂರು, ಕೆನರಾ ಕಲ್ಚರ್ ಅಕಾಡೆಮಿ ಮತ್ತು ರೂವಾರಿ. ಕಾಂ ಇವರ ಸಹಕಾರದೊಂದಿಗೆ ಆಯೋಜಿಸುತ್ತಿರುವ ‘ನೀನಾಸಂ ತಿರುಗಾಟ ನಾಟಕೋತ್ಸವ 2025’ವು ದಿನಾಂಕ 23 ಮತ್ತು 24 ಡಿಸೆಂಬರ್ 2025ರಂದು ಪ್ರತಿದಿನ ಸಂಜೆ ಗಂಟೆ 6-45ಕ್ಕೆ ಮಂಗಳೂರಿನ ಕೆನರಾ ಪದವಿಪೂರ್ವ ಕಾಲೇಜಿನ ಬಯಲು ರಂಗಮಂಟಪದಲ್ಲಿ ನಡೆಯಲಿದೆ. ದಿನಾಂಕ 23 ಡಿಸೆಂಬರ್ 2025ರಂದು ಖ್ಯಾತ ಲೇಖಕಿ ಬಾನು ಮುಷ್ತಾಕ್ ಇವರ ಕತೆಯಾಧಾರಿಸಿ ಡಾ. ಎಂ. ಗಣೇಶ್ ನಿರ್ದೇಶಿಸಿದ ‘ಹೃದಯದ ತೀರ್ಪು’ ಎಂಬ ನಾಟಕ ಪ್ರದರ್ಶನಗೊಳ್ಳಲಿದೆ. ದಿನಾಂಕ 24 ಡಿಸೆಂಬರ್ 2025ರಂದು ಮಲೆಯಾಳ ಮೂಲ ಜಿ. ಶಂಕರ್ ಪಿಳ್ಳೈ ರಚಿಸಿದ, ಡಾ. ನಾ. ದಾಮೋದರ ಶೆಟ್ಟಿ ಕನ್ನಡಕ್ಕೆ ಅನುವಾದಿಸಿ, ಶಂಕರ್ ವೆಂಕಟೇಶ್ವರ್ ನಿರ್ದೇಶಿಸಿದ ‘ಅವತರಣಮ್ ಭ್ರಾಂತಾಲಯಂ’ ಎಂಬ ನಾಟಕ ಪ್ರದರ್ಶನಗೊಳ್ಳಲಿದೆ. ಎರಡೂ ವಿಭಿನ್ನ ನಾಟಕಗಳು ರಾಜ್ಯಾದ್ಯಂತ ಸಾಕಷ್ಟು ಸುದ್ದಿ ಮಾಡಿದ ರಂಗಪ್ರಯೋಗಗಳು. ‘ಹೃದಯದ ತೀರ್ಪು’ ನಾಟಕದಲ್ಲಿ ಒಂದು ಸಾಂಸಾರಿಕ ವೃತ್ತಾಂತವೇ ಚಿತ್ರಿತವಾಗಿದೆ. ಮುಖ್ಯವಾಗಿ ತಾಯಿ,…

Read More

ಮಡಿಕೇರಿ : ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯಿಂದ ಕವಿಗಳಿಂದ ಕೊಡವ ಕವನ ಆಹ್ವಾನಿಸಿದೆ. ಸುಮಾರು 50 ಕವಿಗಳ ಒಂದೊಂದು ಕವನಗಳನ್ನು ಸೇರಿಸಿ ಹೊರತರಲು ಉದ್ದೇಶಿಸಿರುವ ಕೊಡವ ಕವನ ಸಂಕಲನಕ್ಕೆ ಸ್ವರಚಿತ ಕವನಗಳನ್ನು ಕಳುಹಿಸಲು ಬಯಸುವ ಕವಿಗಳು ತಮ್ಮ ಭಾವಚಿತ್ರದೊಂದಿಗೆ ದಿನಾಂಕ 31 ಡಿಸೆಂಬರ್ 2025ರೊಳಗೆ ನೋಂದಣಿ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ, ಜೂನಿಯರ್ ಕಾಲೇಜು ರಸ್ತೆ, ಮ್ಯಾನ್ಸ್ ಕಾಂಪೌಂಡ್ ಹತ್ತಿರ, ಸ್ಕೌಟ್ಸ್ ಮತ್ತು ಗೈಡ್ಸ್ ಭವನ, ಮಡಿಕೇರಿ ಈ ವಿಳಾಸಕ್ಕೆ ಕಳುಹಿಸುವುದು. ಕವಿಗಳು ಕಡ್ಡಾಯವಾಗಿ ಒಂದೊಂದು ಕವನಗಳನ್ನು ಮಾತ್ರ ಕಳುಹಿಸತಕ್ಕದ್ದು, ಒಂದಕ್ಕಿಂತ ಹೆಚ್ಚಿನ ಕವನಗಳನ್ನು ಕಳುಹಿಸಿದರೆ ಆಯ್ಕೆಗೆ ಪರಿಗಣಿಸುವುದಿಲ್ಲ. ಕವನವು ಯಾವುದೇ ಕಾರಣಕ್ಕೆ 20 ಗೆರೆ ಮೀರಬಾರದು. ಅಂತೆಯೇ ಪ್ರತೀ ಗೆರೆಗಳಲ್ಲಿ ಐದಕ್ಕಿಂತ ಹೆಚ್ಚಿನ ಶಬ್ದಗಳಿರುವಂತಿಲ್ಲ. ನಾಡು, ನುಡಿ, ಪರಿಸರ, ಪರಿಸ್ಥಿತಿ, ಸಂಸ್ಕೃತಿಗೆ ಸಂಬಂಧಪಟ್ಟ ಕವನಗಳಿಗೆ ಆದ್ಯತೆ ನೀಡುವುದು ಉತ್ತಮ ಎಂದು ಅಕಾಡೆಮಿಯ ಅಧ್ಯಕ್ಷರಾದ ಅಜ್ಜಿನಿಕಂಡ ಸಿ. ಮಹೇಶ್ ನಾಚಯ್ಯನವರು ತಿಳಿಸಿದ್ದಾರೆ. ಆಯ್ಕೆಯಾಗುವ ಕವನಗಳಿಗೆ ಪ್ರೋತ್ಸಾಹಧನ ನೀಡಲಾಗುವುದು. ಹೆಚ್ಚಿನ ಮಾಹಿತಿಗೆ ಕಚೇರಿ…

Read More

ಕಡಬ : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ನೇತ್ರಾವತಿ ತುಳು ಕೂಟ ರಾಮಕುಂಜ (ರಿ.) ಮತ್ತು ತೆಗ್ ರ್ ತುಳುಕೂಟ ನೂಜಿಬಾಳ್ತಿಲ (ರಿ.) ಇವರ ಸಹಯೋಗದಲ್ಲಿ ‘ಕಡಬ ತಾಲೂಕು ಪ್ರಥಮ ತುಳು ಸಮ್ಮೇಳನ’ವನ್ನು ದಿನಾಂಕ 20 ಮತ್ತು 21 ಡಿಸೆಂಬರ್ 2025ರಂದು ಕುಟ್ರುಪ್ಪಾಡಿ ಗ್ರಾಮದ ಕೇಪು ಶ್ರೀ ಮಹಾಗಣಪತಿ ಲಕ್ಷ್ಮೀ ಜನಾರ್ದನ ಆಂಜನೇಯ ದೇವಸ್ಥಾನದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ದಿನಾಂಕ 20 ಡಿಸೆಂಬರ್ 2025ರಂದು ಸಂಜೆ 4-00 ಗಂಟೆಗೆ ‘ತುಳುವಪ್ಪೆನ ನೇರೋಣಿಗೆ’ ಉದ್ಘಾಟನೆ ನಡೆಯಲಿದೆ. ದಿನಾಂಕ 21 ಡಿಸೆಂಬರ್ 2025ರಂದು ಬೆಳಗ್ಗೆ 9-00 ಗಂಟೆಗೆ ರಾಷ್ಟ್ರ ಧ್ವಜ, ನಾಡ ಧ್ವಜ ಮತ್ತು ತುಳು ಧ್ವಜಾರೋಹಣ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಯಾದ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆ ಇವರಿಂದ ಸಮ್ಮೇಳನ ಉದ್ಘಾಟನೆಗೊಳ್ಳಲಿದೆ. ಸೇಸಪ್ಪ ರೈ ರಾಮಕುಂಜ ಇವರು ಸಮ್ಮೇಳನಾಧ್ಯಕ್ಷತೆ ವಹಿಸಲಿದ್ದು, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ತಾರಾನಾಥ ಗಟ್ಟಿ ಕಾಪಿಕಾಡ್ ಇವರು ದೀಪ ಪ್ರಜ್ವಲನೆ ಮಾಡಲಿದ್ದಾರೆ. 11-00 ಗಂಟೆಗೆ ಜನಪದ…

Read More

ಮಂಗಳೂರು : ಕರಾವಳಿ ಲೇಖಕಿಯರ – ವಾಚಕಿಯರ ಸಂಘ (ಅವಿಭಜಿತ ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲೆ )ವು ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಗಳ ಲೇಖಕಿಯರಿಗಾಗಿ ಸಾಹಿತ್ಯ ಸ್ಪರ್ಧೆಗಳನ್ನು ನಡೆಸುತ್ತಿದೆ. ಸಣ್ಣ ಕಥೆಗಳ ಸಂಕಲನ – 2025 : ಜನವರಿಯಿಂದ ಡಿಸೆಂಬರ್ ತಿಂಗಳ ಕೊನೆಯೊಳಗೆ ಪ್ರಕಟಿತ ಸಣ್ಣ ಕಥಾಸಂಕಲನಕ್ಕೆ ಬಹುಮಾನ. ಪ್ರಾಯೋಜಕರು : ಯಶೋದಾ ಜೆನ್ನಿ ಸ್ಮೃತಿ ಸಂಚಯ ಹಿರಿಯಡ್ಕ ಹಾಗೂ ಏಕಾಂಕ ನಾಟಕ ರಚನೆ ಹಸ್ತಪ್ರತಿ ಸ್ಪರ್ಧೆ. ಏಕಾಂಕ ನಾಟಕ ರಚನಾ ಹಸ್ತಪ್ರತಿ ಸ್ಪರ್ಧೆ : ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಗಳ ಲೇಖಕಿಯರಿಂದ ರಚಿತ ಸುಮಾರು ಒಂದು ಗಂಟೆ ಅವಧಿಯಲ್ಲಿ ಅಭಿನಯಿಸಬಹುದಾದ ಚಾರಿತ್ರಿಕ, ಸಾಮಾಜಿಕ ಅಥವಾ ಪೌರಾಣಿಕ ನಾಟಕದ ಹಸ್ತಪ್ರತಿ. ಅತ್ಯುತ್ತಮ ನಾಟಕ ಕೃತಿಗೆ ಬಹುಮಾನ ಪ್ರಾಯೋಜಕರು : ಸಂದೀಪ ಸಾಹಿತ್ಯ ಪ್ರಕಾಶನ, ಆತ್ರಾಡಿ, ಉಡುಪಿ -567107. ಸ್ಪರ್ಧಿಗಳು ತಮ್ಮ ಕಥೆಗಳ ತಲಾ ಮೂರು ಪ್ರತಿಗಳನ್ನು ದಿನಾಂಕ 15 ಜನವರಿ 2026ರ ಮೊದಲು ತಲುಪುವಂತೆ ಈ ಕೆಳಗಿನ…

Read More

ಬೆಂಗಳೂರು : ಖ್ಯಾತ ‘ಶ್ರದ್ಧಾ ಡ್ಯಾನ್ಸ್ ಸೆಂಟರ್’ ನೃತ್ಯ ಸಂಸ್ಥೆಯ ಬದ್ಧತೆಯ ನೃತ್ಯಗುರು ಮತ್ತು ಉತ್ತಮ ನೃತ್ಯಪಟುವೆಂದು ಹೆಸರಾದ ವಿದುಷಿ ಶಮಾ ಕೃಷ್ಣ ಇವರ ನುರಿತ ಗರಡಿಯಲ್ಲಿ ರೂಪುಗೊಂಡಿರುವ ಕಲಾಶಿಲ್ಪ ಕುಮಾರಿ ವಿದಿತಾ ಎನ್. ಕಳೆದ 6 ವರ್ಷಗಳಿಂದ ಅತ್ಯಾಸಕ್ತಿಯಿಂದ ಭರತನಾಟ್ಯ ಕಲಿಯುತ್ತಿರುವ ವಿದಿತಾ ಬೆಂಗಳೂರಿನ ಶ್ರೀ ನವೀನ್ ಮತ್ತು ಪುಷ್ಪಾ ದಂಪತಿಗಳ ಸುಪುತ್ರಿ. ಎಂಟನೆಯ ತರಗತಿಯಲ್ಲಿ ಓದುತ್ತಿರುವ ಹದಿಮೂರು ವರ್ಷದ ಈ ಬಾಲಪ್ರತಿಭೆ ಕರ್ನಾಟಕ ಶಾಸ್ತ್ರೀಯ ಸಂಗೀತವನ್ನು ಕಲಿಯುತ್ತ, ಈಗಾಗಲೇ ಕರ್ನಾಟಕ ಸರ್ಕಾರದ ‘ಜ್ಯೂನಿಯರ್’ ನೃತ್ಯಪರೀಕ್ಷೆಯನ್ನು ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಯಾಗಿದ್ದಾಳೆ. ವಯಸ್ಸಿಗೆ ಮೀರಿದ ಪ್ರತಿಭಾನ್ವಿತಳಾದ ವಿದಿತಾ ನಾಟ್ಯಶಾಸ್ತ್ರದ 108 ‘ಕರಣ’ಗಳನ್ನು ಕಲಿಯುತ್ತಿರುವುದು ನಿಜಕ್ಕೂ ಇವಳ ಅಗ್ಗಳಿಕೆ. ನಾಡಿನಾದ್ಯಂತ ಅನೇಕ ಪ್ರತಿಷ್ಠಿತ ನೃತ್ಯೋತ್ಸವಗಳಲ್ಲಿ, ದೇವಾಲಯಗಳಲ್ಲಿ ನರ್ತಿಸಿರುವ ಇವಳು, ಪಾಶಾತ್ಯ, ಫ್ರೀ ಸ್ಟೈಲ್ ಮತ್ತು ಇನ್ನಿತರ ನೃತ್ಯ ಪ್ರಕಾರಗಳಲ್ಲೂ ಪರಿಶ್ರಮಿಸುತ್ತಿದ್ದಾಳೆ. ಜೀ ಕನ್ನಡ ವಾಹಿನಿಯ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ಮತ್ತು ತೆಲುಗು ಈ ಟಿವಿಯ ‘ಧೀ’ ಡ್ಯಾನ್ಸ್ ಷೋ ನಲ್ಲಿ ಭಾಗವಹಿಸಿರುವ ವಿದಿತಾ,…

Read More

ಬೆಂಗಳೂರು : ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ‘ಭಾಗವತರು’ ಸಾಂಸ್ಕೃತಿಕ ಸಂಘಟನೆ ಇದರ ವತಿಯಿಂದ ಸಾಹಿತ್ಯ ಲೋಕದಲ್ಲಿ ಹೆಚ್.ಎಸ್. ಶಿವಪ್ರಕಾಶ್ ರಾಷ್ಟ್ರ ಮಟ್ಟದ ವಿಚಾರ ಸಂಕಿರಣ, ಗಾಯನ, ಪುಸ್ತಕ ಬಿಡುಗಡೆ ಮತ್ತು ರಂಗ ಗೌರವ ಕಾರ್ಯಕ್ರಮವನ್ನು ದಿನಾಂಕ 21 ಡಿಸೆಂಬರ್ 2025ರಂದು ಬೆಂಗಳೂರಿನ ಜೆ.ಸಿ. ರಸ್ತೆಯಲ್ಲಿರುವ ಕನ್ನಡ ಭವನದ ನಯನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ 10-00 ಗಂಟೆಗೆ ಪ್ರಯೋಗ ರಂಗ ತಂಡದವರಿಂದ ಗಾಯನ ಪ್ರಸ್ತುತಿ, 10-30ಕ್ಕೆ ಹಿರಿಯ ಕವಿ ಅನ್ವರ್ ಆಲಿ ಇವರು ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದು, ಹಿರಿಯ ಸಾಹಿತಿ ಪ್ರೊ. ಎಸ್.ಜಿ. ಸಿದ್ಧರಾಮಯ್ಯ ಇವರು ಅಧ್ಯಕ್ಷತೆ ವಹಿಸಲಿದ್ದಾರೆ. ಮಧ್ಯಾಹ್ನ 12-30 ಗಂಟೆಗೆ ನಡೆಯುವ ಗೋಷ್ಠಿ 1ರಲ್ಲಿ ‘ಹೆಚ್.ಎಸ್. ಶಿವಪ್ರಕಾಶ್ – ಬದುಕು ಬರಹ’ದ ಬಗ್ಗೆ ಕವಿ ಸಿರಾಜ್ ಅಹಮ್ಮದ್ ‘ಕಾವ್ಯ’, ಸಂಸ್ಕೃತಿ ಚಿಂತಕರಾದ ಡಾ. ಎಂ.ಎಸ್. ಆಶಾದೇವಿ ‘ಗದ್ಯ’ ಮತ್ತು ಗೋಷ್ಠಿ 2ರಲ್ಲಿ ರಂಗ ನಿರ್ದೇಶಕರಾದ ನಟರಾಜ ಹೊನ್ನವಳ್ಳಿ ಇವರು ‘ನಾಟಕಗಳು’, ಹಿರಿಯ ಸಾಹಿತಿ ಡಾ. ತಾರಿಣಿ…

Read More

ಬೆಂಗಳೂರು : ನಾಟಕ ಬೆಂಗ್ಳೂರ್ -26ರ ರಂಗಸಂಭ್ರಮದ ಪ್ರಯುಕ್ತ ‘ಅನೇಕ ಬೆಂಗಳೂರು’ ಅಭಿನಯಿಸುವ ‘ಲೈಟ್ಸ್ ಆಫ್’ ನಾಟಕ ಪ್ರದರ್ಶನವನ್ನು ದಿನಾಂಕ 19 ಡಿಸೆಂಬರ್ 2025ರಂದು ಸಂಜೆ 7-00 ಗಂಟೆಗೆ ಬೆಂಗಳೂರಿನ ಮಲ್ಲತ್ತಹಳ್ಳಿ ಕಲಾಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದೆ. ಪೀಟರ್ ಷಾಫರ್ ಇವರ ಈ ನಾಟಕವನ್ನು ಸುರೇಶ್ ಆನಗಳ್ಳಿಯವರು ಕನ್ನಡ ರೂಪ ವಿನ್ಯಾಸ ಮತ್ತು ನಿರ್ದೇಶನ ಮಾಡಿರುತ್ತಾರೆ. ಶಮಂತ್ ಹತ್ವಾರ್, ಮುರುಳಿ ಪೂರ್ವಿಕ್, ರಿತಿ ಶೆಟ್ಟಿ, ಸಿಂಧೂ ಹಂದೆ, ಪ್ರವೀಣ್ ಬಂಗೇರ್, ಪವನ್ ಜಿ.ಎನ್., ಗೃಹಿತ, ರಕ್ಷಿತ್ ಹೆಚ್.ವಿ. ರಂಗದ ಮೇಲೆ ಅಭಿನಯಿಸಲಿದ್ದಾರೆ.

Read More

ಉಡುಪಿ : 47ನೆಯ ‘ವಾದಿರಾಜ ಕನಕದಾಸ ಸಂಗೀತೋತ್ಸವ’ ಕಾರ್ಯಕ್ರಮವು ದಿನಾಂಕ 28 ಡಿಸೆಂಬರ್ 2025ರಂದು ಉಡುಪಿಯ ಎಂ.ಜಿ.ಎಂ. ಕಾಲೇಜಿನ ಗೀತಾಂಜಲಿ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ವಾದಿರಾಜ ಕನಕದಾಸ ಸಂಗೀತೋತ್ಸವ ಸಮಿತಿ, ಕನಕದಾಸ ಅಧ್ಯಯನ ಸಂಶೋಧನ ಪೀಠ ಉಡುಪಿ, ಮಣಿಪಾಲ ಅಕಾಡೆಮಿ ಆಫ್ ಹೈಯರ್‌ ಎಜ್ಯುಕೇಶನ್, ಎಂ.ಜಿ.ಎಂ. ಕಾಲೇಜು ಉಡುಪಿ, ಸರಿಗಮ ಭಾರತಿ ಸಂಗೀತ ವಿದ್ಯಾಲಯ (ರಿ) ಪರ್ಕಳ ಸಂಸ್ಥೆಗಳು ಸಂಘಟಿಸಿವೆ. ಸಂಗೀತೋತ್ಸವದ ಪ್ರಯುಕ್ತ ಪ್ರಾಥಮಿಕ, ಪ್ರೌಢ, ಕಾಲೇಜು, ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗಾಗಿ ವಾದಿರಾಜ-ಕನಕ ಗಾಯನ ಸ್ಪರ್ಧೆಯನ್ನು ದಿನಾಂಕ 27 ಡಿಸೆಂಬರ್ 2025ರಂದು ಬೆಳಿಗ್ಗೆ 9-00 ಗಂಟೆಗೆ ಸರಿಯಾಗಿ ಎಂ.ಜಿ.ಎಂ. ಕಾಲೇಜಿನ ಆವರಣದಲ್ಲಿರುವ ರವೀಂದ್ರ ಮಂಟಪದಲ್ಲಿ ನಡೆಸಲಾಗುವುದು. ಸ್ಪರ್ಧಾಳುಗಳು ವಾದಿರಾಜರ ಮತ್ತು ಕನಕದಾಸರ ಎರಡೆರಡು ಕೀರ್ತನೆಗಳನ್ನು ಅಭ್ಯಸಿಸಿದ್ದು, ತೀರ್ಪುಗಾರರು ಕೇಳುವ ಕೀರ್ತನೆಯನ್ನು ಹಾಡಲು ಶಕ್ತರಿರಬೇಕು. ಭಾಗವಹಿಸಲು ಇಚ್ಛಿಸುವವರು ತಮ್ಮ ಹೆಸರನ್ನು ಆಡಳಿತಾಧಿಕಾರಿಗಳು, ಕನಕದಾಸ ಅಧ್ಯಯನ ಸಂಶೋಧನ ಪೀಠ, ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ,…

Read More

ಮೂಡಬಿದಿರೆ : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಧವಳತ್ರಯ ಜೈನಕಾಶಿ ಟ್ರಸ್ಟ್ (ರಿ.) ಶ್ರೀ ಜೈನಮಠ ಮೂಡಬಿದಿರೆ ಮತ್ತು ನಾದನೂಪುರ ಯಕ್ಷೋತ್ಥಾನ ಟ್ರಸ್ಟ್ ವಂಡಾರು ಇವರ ಆಶ್ರಯದಲ್ಲಿ ದಿನಾಂಕ 16 ಡಿಸೆಂಬರ್ 2025ರಂದು ಮೂಡಬಿದಿರೆ ಜೈನಮಠದಲ್ಲಿ ಜರಗಿದ ‘ತುಳು ನಾಡು – ನುಡಿಗೆ ಜೈನರ ಕೊಡುಗೆ’ ವಿಚಾರ ಸಂಕಿರಣದ ಅಂಗವಾಗಿ ‘ಮಹಾತ್ಮ’ ನೂತನ ಪ್ರಸಂಗದ ತುಳು ತಾಳಮದ್ದಳೆ ಜರಗಿತು. ಜೈನ ಧರ್ಮದ 16ನೇ ತೀರ್ಥಂಕರ ಶಾಂತಿನಾಥ ಸ್ವಾಮಿಯ ಪ್ರಥಮ ಭವಾಂಕವನ್ನು ಆಧರಿಸಿ ನಾದ ನೂಪುರ ಯಕ್ಷೋತ್ಥಾನ ಟ್ರಸ್ಟ್ ಕಾರ್ಯದರ್ಶಿ ಮತ್ತು ಯುವ ಪ್ರಸಂಗಕರ್ತೆ ಶುಭಾಶಯ ಇವರು ಬರೆದ ‘ಮಹಾತ್ಮ’ ಪ್ರಸಂಗದ ಮೊದಲ ಪ್ರಯೋಗದಲ್ಲಿ ಜಿಲ್ಲೆಯ ಪ್ರಸಿದ್ಧ ಯಕ್ಷಗಾನ ಕಲಾವಿದರು ಭಾಗವಹಿಸಿದರು. ಹೆಸರಾಂತ ತಾಳಮದ್ದಳೆ ಅರ್ಥಧಾರಿಗಳಾದ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ (ಸತ್ಯಕ – ವಿದ್ಯಾಧರ), ಎಂ.ಕೆ. ರಮೇಶಾಚಾರ್ಯ (ಸತ್ಯಭಾಮೆ), ಡಾ. ತಾರಾನಾಥ ವರ್ಕಾಡಿ (ಧರಣೀಜಟ), ರಾಧಾಕೃಷ್ಣ ಕಲ್ಚಾರ್ (ಕಪಿಲ), ಸದಾಶಿವ ಆಳ್ವ ತಲಪಾಡಿ (ಶ್ರೀಷೇಣ ರಾಜ) ಮತ್ತು ಡಾ. ಶ್ರುತಕೀರ್ತಿ ರಾಜ್…

Read More