Author: roovari

ಧಾರವಾಡ : ಗಿರಡ್ಡಿ ಗೋವಿಂದರಾಜ ಫೌಂಡೇಶನ್ ಧಾರವಾಡ ಮತ್ತು ‘ಭಾರತೀಯ ಸಾಹಿತ್ಯ ನಿರ್ಮಾಪಕರು ಮಾಲಿಕೆ’ ಕೇಂದ್ರ ಸಾಹಿತ್ಯ ಅಕಾಡೆಮಿ ನವದೆಹಲಿ ಇದರ ವತಿಯಿಂದ ‘ಗಿರಡ್ಡಿ ಗೋವಿಂದರಾಜ’ ಇಂಗ್ಲೀಷ್ ಆವೃತ್ತಿಯ ಪುಸ್ತಕ ಬಿಡುಗಡೆ ಸಮಾರಂಭವನ್ನು ದಿನಾಂಕ 04 ಜನವರಿ 2026ರಂದು ಸಂಜೆ 5-30 ಗಂಟೆಗೆ ಧಾರವಾಡ ಕರ್ನಾಟಕ ವಿದ್ಯಾವರ್ಧಕ ಸಂಘದ ಆರ್ಟ್ ಗ್ಯಾಲರಿಯಲ್ಲಿ ಹಮ್ಮಿಕೊಳ್ಳಲಾಗಿದೆ. ಧಾರವಾಡದ ಖ್ಯಾತ ಸಾಹಿತಿ ಡಾ. ವೀಣಾ ಶಾಂತೇಶ್ವರ ಇವರು ಪುಸ್ತಕ ಬಿಡುಗಡೆ ಮಾಡಲಿದ್ದು, ನವದೆಹಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಕನ್ನಡ ಸಲಹಾ ಮಂಡಳಿ ಸದಸ್ಯರಾದ ಚೆನ್ನಪ್ಪ ಅಂಗಡಿ ಇವರು ಪುಸ್ತಕ ಪರಿಚಯ ಮಾಡಲಿದ್ದಾರೆ. ಗಿರಡ್ಡಿ ಗೋವಿಂದರಾಜ ಫೌಂಡೇಶನ್ ಇದರ ಅಧ್ಯಕ್ಷರಾದ ಪ್ರೊ. ಮಲ್ಲಿಕಾರ್ಜುನ ಹಿರೇಮಠ ಇವರು ಅಧ್ಯಕ್ಷತೆ ವಹಿಸಲಿದ್ದು, ಮಾನ್ಯ ಕುಲಪತಿಗಳಾದ ಡಾ. ಶಿವಾನಂದ ಕೆಳಗಿನಮನಿ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

Read More

ಸುರತ್ಕಲ್ : ಶ್ರೀ ದುರ್ಗಾಂಬಾ ಮಹಿಳಾ ಯಕ್ಷಗಾನ ಮಂಡಳಿ ತಡಂಬೈಲ್ ಸುರತ್ಕಲ್ ಇದರ ‘ದಶಮಾನ ವರ್ಷ ಸಂಭ್ರಮಾಚರಣೆ’ಯ ಸಮಾರೋಪ ಸಮಾರಂಭ ಹಾಗೂ ಸಮ್ಮಾನ ಕಾರ್ಯಕ್ರಮವು ದಿನಾಂಕ 31 ಡಿಸೆಂಬರ್ 2025ರಂದು ಇಡ್ಯಾ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನೆರವೇರಿತು. ಚಿತ್ರಾಪುರ ಶ್ರೀ ವಿದ್ಯೇಂದ್ರ ತೀರ್ಥ ಸ್ವಾಮೀಜಿ ಇವರು ಆಶೀರ್ವಚನ ನೀಡಿ, “ಶ್ರೀ ದುರ್ಗಾಂಬಾ ಮಹಿಳಾ ಯಕ್ಷಗಾನ ಮಂಡಳಿಯು ಹತ್ತು ವರ್ಷಗಳನ್ನು ಯಶಸ್ವಿಯಾಗಿ ಪೂರೈಸುವ ಮೂಲಕ ಪರಿಪೂರ್ಣ ತಂಡವಾಗಿ ಬೆಳೆದು ನಿಂತಿದೆ. ಯಕ್ಷ ಗುರು ವಾಸುದೇವ ರಾವ್ ಹಾಗೂ ಅವರ ತಂಡ ಸಾಧನೆಯ ಮೇರು ಶಿಖರವನ್ನು ತಲುಪಿದೆ. ಇಳಿ ವಯಸ್ಸಿನಲ್ಲೂ ಯಕ್ಷಕಲಾ ಸೇವೆಯನ್ನ ಮಾಡುತ್ತಾ ಬರುತ್ತಿರುವುದು ಶ್ಲಾಘನೀಯ” ಎಂದರು. ತಂಡದ ಸ್ಥಾಪಕ ಸದಸ್ಯೆ ಅನು ರಾಘವೇಂದ್ರ ರಾವ್, ಯಕ್ಷಗಾನ ಕಲಾಪೋಷಕರಾದ ಶಕುಂತಲಾ ರಮಾನಂದ ಭಟ್ ಇವರನ್ನು ಕಲಾ ಕ್ಷೇತ್ರಕ್ಕೆ ನೀಡಿದ ಸೇವೆಗಾಗಿ ಸಮ್ಮಾನಿಸಲಾಯಿತು. ಯಕ್ಷ ಗುರು ಎಸ್. ವಾಸುದೇವ ರಾವ್, ಮಂಡಳಿಯ ಅಧ್ಯಕ್ಷೆ ಸುಲೋಚನಾ ವಿ. ರಾವ್ ಇವರಿಗೆ ಮಂಡಳಿಯ ಸದಸ್ಯರು ಗುರುವಂದನೆ ಸಲ್ಲಿಸಿದರು.…

Read More

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಘಟಕ ಮತ್ತು ಮಂಗಳೂರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಮಹಾವಿದ್ಯಾಲಯ ಇದರ ಜಂಟಿ ಆಶ್ರಯದಲ್ಲಿ ಜಯಲಕ್ಷ್ಮೀ ಎಸ್. ಜೋಕಟ್ಟೆಯವರ ‘ಕವಿತೆಗಳು’ ಕವನ ಸಂಕಲನ ಬಿಡುಗಡೆ ಕಾರ್ಯಕ್ರಮವನ್ನು ದಿನಾಂಕ 03 ಜನವರಿ 2026ರಂದು ಸಂಜೆ 4-00 ಗಂಟೆಗೆ ಮಂಗಳೂರಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಮಹಾವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನಿಕಟ ಪೂರ್ವ ಅಧ್ಯಕ್ಷರಾದ ಪ್ರದೀಪ್ ಕುಮಾರ ಕಲ್ಕೂರ ಇವರು ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಡಾ. ಎಂ.ಪಿ. ಶ್ರೀನಾಥ ಇವರು ಕೃತಿ ಬಿಡುಗಡೆ ಮಾಡಲಿದ್ದಾರೆ. ಹಿರಿಯ ಸಾಹಿತಿ ಡಾ. ಮೀನಾಕ್ಷಿ ರಾಮಚಂದ್ರ ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಹಿರಿಯ ಪತ್ರಕರ್ತರಾದ ಶ್ರೀನಿವಾಸ ಜೋಕಟ್ಟೆ ಇವರು ಸಂಪಾದಕರ ಮಾತುಗಳನ್ನಾಡಲಿದ್ದಾರೆ.

Read More

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಮಂಗಳೂರು ಉತ್ತರ ವಲಯ ಸಮೂಹ ಸಂಪನ್ಮೂಲ ಕೇಂದ್ರ ಅಂಗರಗುಂಡಿ ಕ್ಲಸ್ಟರ್ ಸಹಯೋಗದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಳಾಯಿ ಫಿಶರೀಶ್ ನಲ್ಲಿ ದಿನಾಂಕ 31 ಡಿಸೆಂಬರ್ 2025ರಂದು ಎಫ್.ಎಲ್.ಎನ್. ಕಲಿಕಾ ಹಬ್ಬವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಳಾಯಿ ಫಿಶರೀಶ್ ನ ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಹಾಗೂ ಗೋವಿಂದ ದಾಸ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ. ಕೃಷ್ಣ ಮೂರ್ತಿ ಪಿ. “ಪ್ರತಿಯೊಬ್ಬ ವಿದ್ಯಾರ್ಥಿಗೂ ಬಲವಾದ ಶೈಕ್ಷಣಿಕ ಅಡಿಪಾಯವನ್ನು ಪ್ರಾಥಮಿಕ ಶಿಕ್ಷಣದ ಸಂದರ್ಭದಲ್ಲಿ ರೂಪಿಸಿ ಕೊಡಬೇಕು. ಬರವಣಿಗೆ, ಓದುವಿಕೆ ಮತ್ತು ಗಣಿತದ ಅರಿವಿನ ಸಾಮರ್ಥ್ಯವನ್ನು ವಿದ್ಯಾರ್ಥಿ ಪಡೆದುಕೊಳ್ಳುವ ಅವಕಾಶ ನೀಡಬೇಕು. ಪ್ರತಿಯೊಬ್ಬ ವಿದ್ಯಾರ್ಥಿಯೂ ಪ್ರತಿಭಾವಂತರಾಗಿದ್ದು ಅವರ ಪ್ರತಿಭೆಯ ಪ್ರಕಾಶನಕ್ಕೆ ಅವಕಾಶ ಲಭ್ಯವಾಗಬೇಕು. ಅಕ್ಕರೆಯಿಂದ ಕಲಿಯುವ ವಾತಾವರಣ ಸರಕಾರಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ…

Read More

ಶಿವಮೊಗ್ಗ : ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ (ರಿ.) ಶಿವಮೊಗ್ಗ ಮತ್ತು ಫ್ರೆಂಡ್ಸ್ ಸೆಂಟರ್ ಶಿವಮೊಗ್ಗ ಇದರ ವತಿಯಿಂದ 245ನೇ ‘ಸಾಹಿತ್ಯ ಹುಣ್ಣಿಮೆ’ ಮನೆ ಮನೆ ಸಾಹಿತ್ಯ ಸಂಭ್ರಮ ಹಾಡು, ಹಾಸ್ಯ, ಕಥೆ, ಕವನ, ಹನಿಗವನ, ವಿಚಾರಗಳ ತಿಂಗಳ ಕಾರ್ಯಕ್ರಮವನ್ನು ದಿನಾಂಕ 03 ಜನವರಿ 2026ರಂದು ಸಂಜೆ 6-00 ಗಂಟೆಗೆ ಶಿವಮೊಗ್ಗದ ಗೋಪಾಲಗೌಡ ಬಡಾವಣೆಯ ಫ್ರೆಂಡ್ಸ್ ಸೆಂಟರ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮಲೆನಾಡು ಅಭಿವೃದ್ಧಿ ಮಂಡಲಿಯ ಅಧ್ಯಕ್ಷರಾದ ಡಾ. ಆರ್.ಎಂ. ಮಂಜುನಾಥ ಗೌಡರು ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದು, ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆಯ ಅಧ್ಯಕ್ಷರಾದ ಡಿ. ಮಂಜುನಾಥ ಇವರು ಅಧ್ಯಕ್ಷತೆ ವಹಿಸಲಿದ್ದಾರೆ. ಶ್ರೀಮತಿ ಮಹಾದೇವಿ, ಶ್ರೀಮತಿ ನಳಿನಾಕ್ಷಿ, ನೀಲಪ್ಪ ಇವರಿಂದ ಹಾಡು, ಹಾಸ್ಯ ಕಲಾವಿದ ಉಮೇಶ್ ಗೌಡ ಇವರಿಂದ ಹಾಸ್ಯ, ಡಾ. ಕೆ.ಜಿ. ವೆಂಕಟೇಶ್ ಇವರಿಂದ ಕಥೆ, ಸೂರ್ಯಪ್ರಕಾಶ್ ಡಿ.ಎಚ್., ಶ್ರೀಮತಿ ಬಿ.ಟಿ. ಅಂಬಿಕಾ, ಡಾ. ಅನುಪಮಾ ವೈ.ಜೆ., ಎಂ. ನವೀನ್ ಕುಮಾರ್ ಮತ್ತು ಡಿ. ಗಣೇಶ್ ಇವರಿಂದ…

Read More

ಧಾರವಾಡ : ಮನೋಹರ ಗ್ರಂಥ ಮಾಲಾ ಇದರ ವತಿಯಿಂದ ಶ್ರೀನಿವಾಸ ವಾಡಪ್ಪಿ ಇವರ ‘ಮಿಗಿಲಹುದು ಭುವಿಯಬಣ್ಣ’ ಲಲಿತ ಪ್ರಬಂಧಗಳ ಸಂಕಲನ ಕೃತಿಯು ದಿನಾಂಕ 28 ಡಿಸೆಂಬರ್ 2025ರಂದು ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ರಾ. ಹ. ದೇಶಪಾಂಡೆ ಸಭಾಭವನದಲ್ಲಿ ಲೋಕಾರ್ಪಣೆಗೊಂಡಿತು. ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಪುಸ್ತಕ ಕುರಿತು ಡಾ. ಕೃಷ್ಣ ಕಟ್ಟಿ ಮಾತನಾಡಿದ “ಕಥೆ, ಕವನ ಅಥವಾ ವಿಮರ್ಶೆಯಂತೆ ಲಲಿತ ಪ್ರಬಂಧಗಳು ಗಂಭೀರವಾಗಿರದೆ ವೈಯಕ್ತಿಕ ಅನುಭವ, ಹಾಸ್ಯ, ವಿಡಂಬನೆ ಮತ್ತು ತತ್ವಗಳ ಮಿಶ್ರಣದೊಂದಿಗೆ ಲಲಿತ ಪ್ರಬಂಧಗಳು ಶ್ರೀನಿವಾಸ ವಾಡಪ್ಪಿಯವರಿಂದ ರಚಿತಗೊಂಡಿವೆ. ಈ ಪ್ರಬಂಧ ಸಂಕಲನದಲ್ಲಿ 15 ಲೇಖನಗಳಿಗೆ. ಈ ಪ್ರಬಂಧಗಳು ವೈಯಕ್ತಿಕ ಸ್ಪರ್ಶ, ಅನೌಪಚಾರಿಕತೆ, ಹಾಸ್ಯ ಮತ್ತು ವಿಡಂಬನೆ, ಮನೋಲಹರಿಯು ಈ ಪ್ರಬಂಧಗಳಲ್ಲಿವೆ. ಸಂಸ್ಕೃತಿ, ಇತಿಹಾಸ ಮತ್ತು ಮಾನವ ಭಾವನೆಗಳನ್ನು ಈ ಪ್ರಬಂಧಗಳು ಪ್ರತಿಬಿಂಬಿಸುತ್ತವೆ. ಸಮಾಜದ ಮೌಲ್ಯಗಳನ್ನು ತೋರಿಸುತ್ತವೆ. ಇವು ಕೇವಲ ಸೌಂದರ್ಯದ ಪ್ರಬಂಧಗಳಲ್ಲದೆ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ವಿಷಯ ಮತ್ತು ಘಟನೆಗಳು ಇದರಲ್ಲಿವೆ. ಸೃಜನಾತ್ಮಕ ಹಾಗೂ ಸಾಮಾಜಿಕ ಸಂಹವನಕ್ಕೆ ಇವು…

Read More

ಮಣಿಪಾಲ : ಹೆಜ್ಜೆ ಗೆಜ್ಜೆ ಫೌಂಡೇಶನ್ (ರಿ.) ಉಡುಪಿ-ಮಣಿಪಾಲ್ ಇದರ ವತಿಯಿಂದ ‘ಪುರಂದರ ಗಾನ ನರ್ತನ’ ಶ್ರೀ ಪುರಂದರ ದಾಸರ ರಚನೆಗಳಿಗೆ ಏಕವ್ಯಕ್ತಿ ಗಾನ ನೃತ್ಯಾರ್ಪಣೆ ಕಾರ್ಯಕ್ರಮವು ದಿನಾಂಕ 03 ಜನವರಿ 2026ರಂದು ಬೆಳಗ್ಗೆ 8-30 ಗಂಟೆಗೆ ಉಡುಪಿಯ ಎಂ.ಜಿ.ಎಂ. ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ. ಭರತನಾಟ್ಯ ಕಲಾವಿದೆ ವಿದುಷಿ ದೀಕ್ಷಾ ರಾಮಕೃಷ್ಣ ಇವರು ನೃತ್ಯ ಪ್ರಸ್ತುತಿ ನೀಡಲಿದ್ದು, ವಿದ್ವಾನ್ ಸತೀಶ್ ಭಟ್ ಹೆಗ್ಗಾರ್ ಮತ್ತು ವಿದ್ವಾನ್ ಶಶಿಕಿರಣ್ ಹಾರ್ಮೋನಿಯಂನಲ್ಲಿ ಹಾಗೂ ಉಡುಪಿಯ ವಿದ್ವಾನ್ ಮಾಧವಾಚಾರ್ ಮತ್ತು ವಿದುಷಿ ವಿಜೇತಾ ಹೆಗಡೆ ತಬಲದಲ್ಲಿ ಸಹಕರಿಸಲಿದ್ದಾರೆ. ಸಂಜೆ 5-00 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, 6-00 ಗಂಟೆಗೆ ವಿದುಷಿ ದೀಕ್ಷಾ ರಾಮಕೃಷ್ಣ ಮತ್ತು ಹೆಜ್ಜೆ ಗೆಜ್ಜೆ ವಿದ್ಯಾರ್ಥಿಗಳಿಂದ ನೃತ್ಯ ಕಾರ್ಯಕ್ರಮ ನಡೆಯಲಿದೆ.

Read More

ಕೋಣಾಜೆ : ಮಂಗಳೂರು ವಿಶ್ವವಿದ್ಯಾನಿಲಯ, ನೆಹರೂ ಚಿಂತನ ಕೇಂದ್ರ, ಎಸ್.ವಿ.ಪಿ. ಕನ್ನಡ ಅಧ್ಯಯನ ಸಂಸ್ಥೆ ಹಾಗೂ ಗಿಳಿವಿಂಡು ಒಕ್ಕೂಟ ಇದರ ವತಿಯಿಂದ ಕುವೆಂಪು ಜನ್ಮದಿನ ಪ್ರಯುಕ್ತ ವಿಶ್ವಮಾನವ ದಿನಾಚರಣೆ ಹಾಗೂ ವಿಶ್ವಮಾನವತೆ ಮತ್ತು ಪ್ರಜಾಸತ್ತಾತ್ಮಕತೆ ಎಂಬ ವಿಷಯದಲ್ಲಿ ವಿಚಾರಸಂಕಿರಣವು ದಿನಾಂಕ 29 ಡಿಸೆಂಬರ್ 2025ರಂದು ಮಂಗಳೂರು ವಿಶ್ವವಿದ್ಯಾನಿಲಯದ ಪ್ರೊ. ವಿವೇಕ್ ರೈ ವಿಚಾರ ವೇದಿಕೆಯಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಂಗಳೂರು ವಿವಿ ಕುಲಪತಿ ಪ್ರೊ. ಪಿ.ಎಲ್. ಧರ್ಮ “ಸಾಹಿತ್ಯ ರಚನೆಯ ಮೂಲಕ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಕುವೆಂಪು ಸ್ವಾತಂತ್ರ್ಯಪೂರ್ವ ಕಾಲದ ಮೌಲ್ಯಗಳು ಮತ್ತು ಸ್ವಾತಂತ್ಯೋತ್ತರ ಭಾರತದ ದುರಂತವನ್ನು ಸೂಕ್ಷ್ಮವಾಗಿ ಗ್ರಹಿಸಿದವರು” ಎಂದು ಹೇಳಿದರು. ಪ್ರಾಧ್ಯಾಪಕ ಡಾ. ನರೇಂದ್ರ ರೈ ದೇರ್ಲ ಅವರು “ಕುವೆಂಪು ಏಕಮಯ ಭಾರತದ ಬದಲು ವೈವಿಧ್ಯಮಯ ಭಾರತದ ಕನಸು ಕಂಡವರು. ಅವರು ಕಂಡ ಭಾರತದಲ್ಲಿ ವಿಜ್ಞಾನದ ಮೋಹವನ್ನು ಮೀರುವ ಗುಣ. ಪ್ರಕೃತಿಯ ಜತೆಗಿನ ಆಧ್ಯಾತ್ಮಿಕ ಅನುಭೂತಿ ಗುಣವಿದೆ. ವಿಜ್ಞಾನ ಬೆಳೆದಂತೆ ಮನುಷ್ಯ ಭ್ರಮನಿರಸನಕ್ಕೊಳಗಾಗುತ್ತಾನೆ. ಬೆರಗನ್ನು ಅನುಭವಿಸುವ ಮನಸನ್ನು…

Read More

ಉಳ್ಳಾಲ : ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ವತಿಯಿಂದ ದಿನಾಂಕ 14 ಫೆಬ್ರವರಿ 2026ರಂದು ಜರಗುವ ವೀರರಾಣಿ ಅಬ್ಬಕ್ಕ ಉತ್ಸವದಲ್ಲಿ ಓರ್ವ ಮಹಿಳಾ ಸಾಧಕರಿಗೆ ‘ವೀರರಾಣಿ ಅಬ್ಬಕ್ಕ ಪ್ರಶಸ್ತಿ’ ಮತ್ತು ಓರ್ವ ಮಹಿಳಾ ಸಾಧಕರಿಗೆ ‘ವೀರರಾಣಿ ಅಬ್ಬಕ್ಕ ಪುರಸ್ಕಾರ’ಗಳನ್ನು ನೀಡಲು ನಿರ್ಧರಿಸಲಾಗಿದೆ. ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ವತಿಯಿಂದ ನೀಡಲಾಗುವ ಈ ಪ್ರಶಸ್ತಿಗಳು ನಗದು ಮತ್ತು ಪ್ರಶಸ್ತಿ ಫಲಕಗಳನ್ನು ಒಳಗೊಂಡಿರುತ್ತದೆ. ವೀರರಾಣಿ ಅಬ್ಬಕ್ಕ ಪ್ರಶಸ್ತಿ : ತುಳುನಾಡಿನಲ್ಲಿ ಹುಟ್ಟಿ ಸಾಹಿತ್ಯ, ಸಂಸ್ಕೃತಿ ಮತ್ತು ಸಂಶೋಧನಾ ವಿಭಾಗಗಳಲ್ಲಿ ಗಣನೀಯ ಸಾಧನೆ ಮಾಡಿದ ಓರ್ವ ಮಹಿಳೆಗೆ ಈ ಪ್ರಶಸ್ತಿ ಮೀಸಲಾಗಿದೆ. ನಾಡು, ನುಡಿ ಹಾಗೂ ಪರಂಪರೆಗೆ ನೀಡಿದ ಮಹತ್ವದ ಸೇವೆಯನ್ನು ಇಲ್ಲಿ ಗಮನಿಸಲಾಗುವುದು. ವೀರರಾಣಿ ಅಬ್ಬಕ್ಕ ಪುರಸ್ಕಾರ : ತುಳು ಸಂಸ್ಕೃತಿಯ ಹಿನ್ನೆಲೆಯೊಂದಿಗೆ ಕಲೆ, ಕ್ರೀಡೆ, ಸಮಾಜಸೇವೆ ಇತ್ಯಾದಿ ಕ್ಷೇತ್ರಗಳಲ್ಲಿ ಮಹತ್ವದ ಸಾಧನೆ ಮಾಡಿದ ಮಹಿಳೆಯೋರ್ವರಿಗೆ ಅಬ್ಬಕ್ಕ ಪುರಸ್ಕಾರ ನೀಡಲು ಉದ್ದೇಶಿಸಲಾಗಿದೆ. ಚಲನಚಿತ್ರ, ನಾಟಕ, ಲಲಿತ ಕಲೆಗಳು, ಕ್ರೀಡಾರಂಗ, ನಾಟಿವೈದ್ಯ, ಜಾನಪದ…

Read More

ಮಂಗಳೂರು : ಕನ್ನಡ ಭವನ ದಕ್ಷಿಣ ಕನ್ನಡ ಘಟಕದ ವತಿಯಿಂದ ವಿದ್ಯಾರ್ಥಿಗಳಿಗೆ ‘ಏಕದಿನ ಸಾಹಿತ್ಯ ಅಭಿಯಾನ’ ಕನ್ನಡದ ನಡಿಗೆ ಶಾಲೆಯ ಕಡೆಗೆ ಪೆರ್ಮುದೆ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಕೋಡಿಕೆರೆ ಕುಳಾಯಿ ಇಲ್ಲಿ ದಿನಾಂಕ 01 ಜನವರಿ 2026ರಂದು ನಡೆಯಿತು. ಶಿಕ್ಷಕಿ ಹಾಗೂ ಕನ್ನಡ ಭವನ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷರಾದ ಶ್ರೀಮತಿ ರೇಖಾ ಸುದೇಶ್ ರಾವ್ ಕನ್ನಡ ಶಾಲನ್ನು ಹೊದಿಸಿ ಅತಿಥಿ ಅಭ್ಯಾಗತರನ್ನು ಸ್ವಾಗತಗೈದರು. ಶಾಲಾ ಸಂಚಾಲಕರಾದ ಶ್ರೀಯುತ ರಮೇಶ್ ರಾವ್ ಕಾರ್ಯಕ್ರಮ ದೀಪ ಪ್ರಜ್ವಲನೆಗೈದು ಉದ್ಘಾಟಿಸಿದರು. ಕಾರ್ಯಾಧ್ಯಕ್ಷ ಶ್ರೀ ಉಮೇಶ್ ರಾವ್ ಕುಂಬ್ಳೆ ಪ್ರಸ್ತಾಪಿಸಿದರು. ಶಾಲಾ ಮುಖ್ಯ ಶಿಕ್ಷಕರಾದ ಶ್ರೀಮತಿ ಕ್ಷಮಾ ಗೌರಿ ಕಾರ್ಯಕ್ರಮದ ಸಭಾಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿಗಳಿಂದ ಮಕ್ಕಳ ಕವನ ವಾಚನ ನೆರವೇರಿತು ಹಾಗೂ ಪೆರ್ಮುದೆ ಶಾಲಾ ವಿಶ್ರಾಂತ ಶಿಕ್ಷಕಿ ಶ್ರೀಮತಿ ಕೃಷ್ಣವೇಣಿ ರಸ ಪ್ರಶ್ನೆ ಕಾರ್ಯಕ್ರಮ ನೆರವೇರಿಸಿದರು. ಸುಮಾರು 20ರಷ್ಟು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಶಾಲಾ ಮುಖ್ಯ ಶಿಕ್ಷಕಿ ಕ್ಷಮಾ ಗೌರಿ ಕಾರ್ಯಕ್ರಮದ ಸಭಾಧ್ಯಕ್ಷತೆ ವಹಿಸಿದ್ದರು.…

Read More