Subscribe to Updates
Get the latest creative news from FooBar about art, design and business.
Author: roovari
ಮಡಿಕೇರಿ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಸರ್ಕಾರದ ಯೋಜನೆ ಹಾಗೂ ಸಾಧನೆ ಕುರಿತು ಬೀದಿ ನಾಟಕ ಹಾಗೂ ಜಾನಪದ ಸಂಗೀತ ಕಾರ್ಯಕ್ರಮ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಉದ್ದೇಶಿಸಲಾಗಿದ್ದು, ಇದಕ್ಕಾಗಿ ಬೀದಿನಾಟಕ, ಜಾನಪದ ಸಂಗೀತ ಕಲಾ ತಂಡ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 19 ಜುಲೈ 2025 ಕೊನೆಯ ದಿನಾಂಕವಾಗಿದೆ. ಜಿಲ್ಲೆಯಿಂದ 3 ಬೀದಿನಾಟಕ ಹಾಗೂ 3 ಜಾನಪದ ಸಂಗೀತ ಕಲಾ ತಂಡ ಆಯ್ಕೆ ಮಾಡಲಾಗುವುದು. ಪ್ರತಿ ಬೀದಿನಾಟಕ ತಂಡದಲ್ಲಿ 8 ಜನ ಕಲಾವಿದರಿದ್ದು, ಅದರಲ್ಲಿ ಕಡ್ಡಾಯವಾಗಿ ಇಬ್ಬರು ಮಹಿಳೆಯರು ಹಾಗೂ ಒಬ್ಬರು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಕ್ಕೆ ಸೇರಿದ ಕಲಾವಿದರು ಇರಬೇಕು. ಪ್ರತಿ ಜಾನಪದ ಸಂಗೀತ ಕಲಾ ತಂಡದಲ್ಲಿ 3 ಜನ ಕಲಾವಿದರಿದ್ದು, ಅದರಲ್ಲಿ ಕಡ್ಡಾಯವಾಗಿ ಒಬ್ಬರು ಮಹಿಳೆಯರು ಹಾಗೂ ಒಬ್ಬರು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಕ್ಕೆ ಸೇರಿದ ಕಲಾವಿದರಿರಬೇಕು. ಈ ಹಿಂದೆ ಸರ್ಕಾರದ ವಿವಿಧ ಇಲಾಖೆಗಳ ಬೀದಿ ನಾಟಕ ಹಾಗೂ ಜಾನಪದ…
ಕಟೀಲು : ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವತಿಯಿಂದ ನಡೆಯುವ ಇಪತ್ತೊಂದನೇ ವರ್ಷದ ತಾಳಮದ್ದಳೆ ಸಪ್ತಾಹ ‘ಪಾಂಡವಾನಾಂ ಧನಂಜಯಃ’ ಇದರ ಉದ್ಘಾಟನಾ ಸಮಾರಂಭವು ದಿನಾಂಕ 07 ಜುಲೈ 2025ರ ಸೋಮವಾರದಂದು ಕಟೀಲಿನ ಸರಸ್ವತಿ ಸದನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಕಟೀಲು ದೇವಳದ ಅರ್ಚಕ ವೆಂಕಟರಮಣ ಆಸ್ರಣ್ಣ ಮಾತನಾಡಿ “ಕಟೀಲು ತಾಳಮದ್ದಳೆ ಸಪ್ತಾಹ ಪ್ರತಿ ವರ್ಷ ನಡೆಯುತ್ತಿದ್ದು, ಕಲಾಭಿಮಾನಿಗಳು ಹಾಗೂ ಭಕ್ತರು ಸಹಕಾರ ನೀಡುತ್ತ ಕಲೆಯನ್ನು ಪ್ರೋತ್ಸಾಹಿಸುತ್ತಿರುವುದು ಅಭಿನಂದನೀಯ” ಎಂದು ಹೇಳಿದರು. ಕಟೀಲು ದೇವಳದ ಅರ್ಚಕರಾದ ಅನಂತಪದ್ಮನಾಭ ಆಸ್ರಣ್ಣ, ಕಮಲಾದೇವಿಪ್ರಸಾದ ಆಸ್ರಣ್ಣ, ಈಶ್ವರ್ ಕಟೀಲು, ಲೋಕಯ್ಯ ಸಾಲಿಯಾನ್, ಯಕ್ಷಗಾನ ಕಲಾಪೋಷಕ ಪದ್ಮನಾಭ ಕಟೀಲು, ವಾಸುದೇವ ಆಚಾರ್ಯ ಕಿನ್ನಿಗೋಳಿ, ದಿನೇಶ್ ಶೆಟ್ಟಿ ಅಜಾರ್, ತಿಮ್ಮಪ್ಪ ಕೋಟ್ಯಾನ್, ಆದರ್ಶ್ ಶೆಟ್ಟಿ ಎಕ್ಕಾರು, ಕಿನ್ನಿಗೋಳಿ ರಾಮಮಂದಿರದ ರಾಜೇಶ್ ನಾಯಕ್, ಯಕ್ಷಧರ್ಮಬೋಧಿನೀ ಟ್ರಸ್ಟ್ ಇದರ ರವಿರಾಜ್ ಆಚಾರ್ಯ ಬಜಪೆ, ಪ್ರಭಾಕರ್ ರಾವ್ ದೊಡ್ಡಯ್ಯ ಮೂಲ್ಯ ಉಪಸ್ಥಿತರಿದ್ದರು. ವಾಸುದೇವ ಶಣೈ ನಿರೂಪಿಸಿದರು. ನಂತರ ಖ್ಯಾತ ಕಲಾವಿದರಿಂದ ಶರಸೇತು ಯತಿಪೂಜೆ ತಾಳಮದ್ದಳೆ…
ಮಹಾನ್ ವಿದ್ವಾಂಸ, ಶಿಕ್ಷಣ ತಜ್ಞ, ಸಾಹಿತಿ, ಶಿಕ್ಷಕ, ಪ್ರೊಫೆಸರ್ ಸೇತುರಾಮ ರಾಘವೇಂದ್ರ ಮಳಗಿಯವರು ಎಸ್. ಆರ್. ಮಳಗಿ ಎಂದೇ ಪ್ರಸಿದ್ಧರು. ಶಿಕ್ಷಕರಾಗಿದ್ದರೂ ಶಾಲೆಯ ಪಾಠಕ್ಕೆ ಮಾತ್ರ ಸೀಮಿತವಾಗಿರದೆ, ವಿದ್ಯಾರ್ಥಿಗಳನ್ನು ಬುದ್ದಿ ಹೇಳಿ, ತಿದ್ದಿ, ಯೋಗ್ಯ ಪ್ರಜೆಗಳನ್ನಾಗಿ ಮಾಡುವುದರೊಂದಿಗೆ ಕನ್ನಡ ನಾಡು – ನುಡಿಗಾಗಿ ಶ್ರಮಿಸಿದ ಇವರು ಜನಸಾಮಾನ್ಯರ ಪ್ರೀತಿ ಗೌರವಕ್ಕೆ ಪಾತ್ರರಾಗಿ ಖ್ಯಾತರಾಗಿದ್ದಾರೆ. ಕನ್ನಡ ಸಾಹಿತ್ಯ ಲೋಕವನ್ನು ಶ್ರೀಮಂತಗೊಳಿಸಿ, ಗಿರೀಶ್ ಕಾರ್ನಾಡ್ , ಚಂದ್ರಶೇಖರ ಪಾಟೀಲ, ಚನ್ನವೀರ ಕಣವಿ, ಸಿದ್ದಲಿಂಗ ಪಟ್ಟಣಶೆಟ್ಟಿ, ಪಾಟೀಲ ಪುಟ್ಟಪ್ಪ, ಸು. ರಂ. ಎಕ್ಕುಂಡಿ, ಬರಗೂರು ರಾಮಚಂದ್ರಪ್ಪ, ಗಿರಡ್ಡಿ ಗೋವಿಂದರಾಜ ಮುಂತಾದ ಅಪೂರ್ವ ಶಿಷ್ಯ ವೃಂದವನ್ನು ನಾಡಿಗೆ ನೀಡಿದವರು ಮಳಗಿಯವರು. ಈ ಶಿಷ್ಯ ಸಂತತಿಯಲ್ಲಿ ಅನೇಕರು ಪ್ರಸಿದ್ಧ ಅಧ್ಯಾಪಕರಾಗಿ ಹೆಸರುವಾಸಿಯಾಗಿದ್ದಾರೆ. ಆದ್ದರಿಂದಲೇ “ಮೇಷ್ಟ್ರುಗಳ ಮೇಷ್ಟ್ರು” ಎಂಬ ವಿಶೇಷಣ ಮಳಗಿಯವರಿಗೆ ಚೆನ್ನಾಗಿ ಒಪ್ಪುತ್ತದೆ. ಆಚಾರ್ಯ ಮನೆತನದ ಮೊಳಗಿಯವರು ಬಿಜಾಪುರ ಜಿಲ್ಲೆಯ, ಬಾದಾಮಿ ತಾಲೂಕಿನ, ಖ್ಯಾಡ ಗ್ರಾಮದಲ್ಲಿ 8 ಜುಲೈ 1910 ರಂದು ಜನಿಸಿದರು. ಹೊಳೆ ಆಲೂರು, ಗದಗ, ಧಾರವಾಡದಲ್ಲಿ…
ಮಂಗಳೂರು : ಭರತಾಂಜಲಿ (ರಿ) ಕೊಟ್ಟಾರ ಮಂಗಳೂರು ಇದರ ಕಿಂಕಿಣಿ ತ್ರಿoಶತ್ ಸಂಭ್ರಮದಲ್ಲಿ ಆಯೋಜಿಸಿದ ‘ನೃತ್ಯಾಮೃತಂ 2೦25’ ಕಾರ್ಯಕ್ರಮ ದಿನಾಂಕ 06 ಜುಲೈ 2025ರಂದು ಮಂಗಳೂರಿನ ಪುರಭವನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಆಶೀರ್ವಾಚನ ನೀಡಿದ ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನ ಶ್ರೀ ಎಡನೀರು ಮಠದ ಯತಿವರೇಣ್ಯರಾದ ಶ್ರೀ ಶ್ರೀ ಸಚ್ಚಿದಾನಂದ ಭಾರತಿ ಶ್ರೀಪಾದಂಗಳವರು “ಬಾಲ್ಯದಲ್ಲಿ ಮಕ್ಕಳಲ್ಲಿ ಕಲಾಭಿವೃದ್ಧಿ ಬೆಳೆಸಬೇಕು ಅದು ಹೆಮ್ಮರವಾಗಿ ಬೆಳೆದು ಬಾಳಿಗೆ, ಕುಟುಂಬಕ್ಕೆ ಹಾಗೂ ಸಮಾಜಕ್ಕೆ ದಾರಿದೀಪವಾಗಬಲ್ಲದು. ಋಷಿಮುನಿಗಳು ಧಾರ್ಮಿಕ ಮಹತ್ವಗಳ ಜೊತೆಗೆ ಮನುಷ್ಯನ ಮಾನಸಿಕ ಅಭಿವೃದ್ಧಿಗೆ ಕೊಟ್ಟಂತಹ ದೊಡ್ಡ ಕೊಡುಗೆ ಈ ನೃತ್ಯ ಕಲೆ, ಭರತಾಂಜಲಿ ಸಂಸ್ಥೆಯು ಕಳೆದ 30 ವರ್ಷಗಳಲ್ಲಿ ಸಮಾಜಮುಖಿ ಚಿಂತನೆಗಳೊಂದಿಗೆ ಕಲಾ ಸೇವೆ ಮಾಡುತ್ತಿರುವುದು ಅಭಿನಂದನೀಯ” ಎಂದು ಹರಸಿದರು. ನಟರಾಜನಿಗೆ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದ ನಾಟ್ಯಾಚಾರ್ಯ ಉಳ್ಳಾಲ ಮೋಹನ ಕುಮಾರ್ ಮಾತನಾಡಿ “ಶಾಸ್ತ್ರೀಯ ಚೌಕಟ್ಟನ್ನು ಸರಳಗೊಳಿಸದೆ ಅದರೊಳಗೆ ಹೊಸತನವನ್ನು ಅಳವಡಿಸಿ ಕೊಂಡಾಗ ಪರಂಪರೆ ಉಳಿಯಲು ಸಾಧ್ಯ ಈ ನಿಟ್ಟಿನಲ್ಲಿ ಭರತಾಂಜಲಿಯ ತನ್ನ ಶಿಷ್ಯರಾದ…
ದಾವಣಗೆರೆ : ಮಾನವ ಬಂಧುತ್ವ ವೇದಿಕೆ ಕರ್ನಾಟಕ ಹಾಗೂ ಕಲಾ ಬಂಧುತ್ವ ವೇದಿಕೆ ದಾವಣಗೆರೆಯ ಸಹಯೋಗದಲ್ಲಿ ಜಿಲ್ಲೆಯಾದ್ಯಂತ ನಡೆಯಲಿರುವ ಬೀದಿ ನಾಟಕ ಹಾಗೂ ಜನಪದ ಹಾಡುಗಳ ಪ್ರದರ್ಶನ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ದಿನಾಂಕ 07 ಜುಲೈ 2025ರಂದು ದಾವಣಗೆರೆ ನಗರದ ಜಯದೇವ ವೃತ್ತದಲ್ಲಿ ಬೆಳಿಗ್ಗೆ ಘಂಟೆ 10:00ಕ್ಕೆ ನಡೆಯಿತು. ದಾವಣಗೆರೆ ನಗರದ ಜಯದೇವ ವೃತ್ತದಲ್ಲಿ ಹಮ್ಮಿಕೊಂಡಿದ್ದ ಬೀದಿ ನಾಟಕ ಹಾಗೂ ಜನಪದ ಗೀತೆಗಳ ಗೀತೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿದ ನಿವೃತ್ತ ಡಿ. ವೈ. ಎಸ್. ಪಿ. ರವಿ ನಾರಾಯಣ್ ಮಾತನಾಡಿ “ಕಲಾತಂಡಗಳು ಉತ್ತಮ ಪ್ರದರ್ಶನ ನೀಡಲಿ. ಇದರಿಂದ ಸಮಾಜದ ಸಕಾರಾತ್ಮಕ ಬೆಳವಣಿಗೆಗೆ ಉತ್ತಮ ಸಂದೇಶ ನೀಡಲು ಸಹಕಾರಿಯಾಗಲಿದೆ” ಎಂದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಮಾನವ ಬಂಧುತ್ವ ವೇದಿಕೆಯ ರಾಜ್ಯ ಸಂಚಾಲಕರಾದ ರಾಮಚಂದ್ರಪ್ಪ ಮಾತನಾಡಿ “ಮಾನವ ಬಂಧು ವೇದಿಕೆಯಿಂದ ಪ್ರತಿ ಜಿಲ್ಲೆಗೊಂದರಂತೆ ಜಿಲ್ಲೆಯ ಬೇರೆ ಭಾಗಗಳಲ್ಲಿ ಬೀದಿ ನಾಟಕ ಮತ್ತು ಜನಪದ ಗೀತೆಗಳ ಪ್ರದರ್ಶನ ನೀಡಲು ಕಲಾಬಂಧುತ್ವ ವೇದಿಕೆಯ ಆಶ್ರಯದಲ್ಲಿ ತರಬೇತಿ ಶಿಬಿರ ಆಯೋಜಿಸಲಾಗಿದ್ದು,…
ಬೆಂಗಳೂರು: ಬುದ್ಧ ಬಸವ ಗಾಂಧಿ ಸಾಂಸ್ಕೃ ತಿಕ ಟ್ರಸ್ಟ್ ಹಾಗೂ ಜೇನುಗೂಡು ಕಲಾ ಬಳಗವು ಜಂಟಿಯಾಗಿ ಆಯೋಜಿಸಿದ ಸಾಹಿತಿ ಚಿನ್ನು ಪ್ರಕಾಶ್ ಶ್ರೀರಾಮನಹಳ್ಳಿ ಬರೆದ ‘ದ ಕಂಪ್ಯಾರಿಟಿವ್ ಸ್ಟಡಿ ಆಫ್ ಡ್ರಮಾಟಿಕ್ ಥಿಯರೀಸ್ ಇನ್ ಟಿ. ಎಸ್ ಎಲಿಯಟ್ಸ್ ಪ್ಲೇಸ್’ ಕೃತಿಯ ಲೋಕರ್ಪಣಾ ಸಮಾರಂಭವು ದಿನಾಂಕ 06 ಜುಲೈ 2025ರ ಭಾನುವಾರದಂದು ಬೆಂಗಳೂರಿನ ಶೇಷಾದ್ರಿಪುರ ಶಿಕ್ಷಣ ದತ್ತಿ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಕೃತಿ ಲೋಕಾರ್ಪಣೆಗೊಳಿಸಿದ ಶೇಷಾದ್ರಿಪುರ ಶಿಕ್ಷಣ ದತ್ತಿ ಗೌರವ ಪ್ರಧಾನ ಕಾರ್ಯದರ್ಶಿ ಡಾ.ವೂಡೇ ಪಿ. ಕೃಷ್ಣ ಮಾತನಾಡಿ “ಕುವೆಂಪು ಸಾರಿದ ಸರ್ವ ಜನಾಂಗದ ಶಾಂತಿಯ ತೋಟದ ಚಿಂತನೆ ಮತ್ತು ಪುಸ್ತಕವನ್ನು ಓದುವ ಹವ್ಯಾಸವು ಯುವ ಪೀಳಿಗೆಯಲ್ಲಿ ಬರಬೇಕು. ಪ್ರಸ್ತುತ ಅಧ್ಯಾಪಕರು ಪಾಠ ಬಿಟ್ಟು ಇತರ ಪುಸ್ತಕವನ್ನು ಓದುವವರ ಸಂಖ್ಯೆ ಕಡಿಮೆಯಾಗಿದೆ. ಆದರಿಂದ ಮುಂದಿನ ದಿನಗಳಲ್ಲಿ ಅಧ್ಯಾಪಕರು ಬೋಧನೆಯೊಂದಿಗೆ ಪುಸ್ತಕ ಓದುವ ಬಗ್ಗೆ ಆಸಕ್ತಿ ತೋರಬೇಕು” ಎಂದು ಹೇಳಿದರು. ಕನ್ನಡ ಪುಸ್ತಕ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಬಂಜಗೆರೆ ಜಯಪ್ರಕಾಶ್ ಮಾತನಾಡಿ “ನಾಟಕಕಾರ…
ಪುತ್ತೂರು : ಬಹುವಚನಂ ಇದರ ವತಿಯಿಂದ ಶಾಸ್ತ್ರೀಯ ಸಂಗೀತ ಕಛೇರಿ ಕಾರ್ಯಕ್ರಮವನ್ನು ದಿನಾಂಕ 13 ಜುಲೈ 2025ರಂದು ಸಂಜೆ 4-30 ಗಂಟೆಗೆ ಪುತ್ತೂರಿನ ದರ್ಬೆ ವಿದ್ಯಾನಗರದ ಪದ್ಮಿನೀ ಸಭಾಭವನದಲ್ಲಿ ಆಯೋಜಿಸಿಲಾಗಿದೆ. ಶ್ರೀಮತಿ ನಂದಿನಿ ವಿನಾಯಕ್ ಇವರ ಹಾಡುಗಾರಿಕೆಗೆ ತನ್ಮಯೀ ಉಪ್ಪಂಗಳ ಇವರು ವಯಲಿನ್ ಮತ್ತು ವಿದ್ವಾನ್ ಪನ್ನಗ ಶರ್ಮ ಮೃದಂಗಂನಲ್ಲಿ ಸಹಕರಿಸಲಿದ್ದಾರೆ.
ಮಂಗಳೂರು : ‘ಸಾಹಿತ್ಯ ಬದುಕಿನ ಅವಿಭಾಜ್ಯ ಅಂಗ. ಒಳ್ಳೆಯ ಬದುಕನ್ನು ರೂಪಿಸುವುದರಲ್ಲಿ ಸಾಹಿತ್ಯದ ಪಾತ್ರ ಅತ್ಯಂತ ಮಹತ್ವಪೂರ್ಣವಾದುದು. ಪ್ರತಿಯೊಬ್ಬರೂ ಓದಲೇಬೇಕಾದ ಪುಸ್ತಕಗಳೆರಡನ್ನು ಇಂದು ಅವಲೋಕಿಸಿ, ಅದರೊಳಗಿನ ಹೂರಣಗಳನ್ನು ಸಹೃದಯರಿಗೆ ತಲಪಿಸುವ ಕೆಲಸವನ್ನು ಈ ಕೃತಿ ಅವಲೋಕನ ಕಾರ್ಯಕ್ರಮದಲ್ಲಿ ಅವಲೋಕನಕಾರರು ಮಾಡುತ್ತಿದ್ದಾರೆ. ಇದು ಅತ್ಯಂತ ಅಗತ್ಯವಾದ ಮತ್ತು ಅಭಿನಂದನೀಯ ಕಾರ್ಯಕ್ರಮ’ ಎಂದು ಶಾರದಾ ಶಿಕ್ಷಣ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಡಾ. ಎಂ. ಬಿ. ಪುರಾಣಿಕರು ಹೇಳಿದರು. ಅವರು ಕನ್ನಡ ಸಾಹಿತ್ಯ ಪರಿಷತ್ತು, ಮಂಗಳೂರು ತಾಲೂಕು ಘಟಕ ಹಾಗೂ ನೆಲ್ಲಿಕಾರು ಜಿನದತ್ತ ಶೆಟ್ಟಿ ವಸಂತಮ್ಮ ಪ್ರತಿಷ್ಠಾನದ ಸಹಯೋಗದಲ್ಲಿ ದಿನಾಂಕ 05 ಜುಲೈ 2025ರಂದು ಮಂಗಳೂರಿನ ಶಾರದಾ ವಿದ್ಯಾಲಯದಲ್ಲಿ ನಡೆದ ‘ಕೃತಿ ಅವಲೋಕನ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಶ್ರೀ ಗಣೇಶ ಪ್ರಸಾದ ಜೀ ಯವರ ‘ಕಾಂತೆ ಕವಿತೆ’ ಕವನಗಳ ಗುಚ್ಛದ ಬಗ್ಗೆ ಖ್ಯಾತ ಹಾಸ್ಯ ಲೇಖಕಿ ಪ್ರೊ. ಭುವನೇಶ್ವರಿ ಹೆಗಡೆಯವರು ಅವಲೋಕನ ಗೈಯುತ್ತಾ, ಕಾಂತೆಯನ್ನು ವಸ್ತುವನ್ನಾಗಿಸಿ ಬದುಕಿನ ಆಂತರಿಕ ದರ್ಶನಗಳನ್ನು ಗಣೇಶ ಪ್ರಸಾದ ಜೀಯವರು ಮಾಡಿಸಿದ್ದಾರೆ.…
ಉಡುಪಿ : ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ ಉಡುಪಿ ಮತ್ತು ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ ಇವರ ಜಂಟಿ ಆಶ್ರಯದಲ್ಲಿ ‘ಪೊಳಲಿ ಶೀನಪ್ಪ ಹೆಗ್ಗಡೆ ಮತ್ತು ಎಸ್.ಆರ್. ಹೆಗ್ದೆ ಪ್ರಶಸ್ತಿ’ ಪ್ರದಾನ ಸಮಾರಂಭವನ್ನು ದಿನಾಂಕ 12 ಜುಲೈ 2025ರಂದು ಬೆಳಿಗ್ಗೆ 10-30 ಗಂಟೆಗೆ ಉಡುಪಿಯ ಎಂ.ಜಿ.ಎಂ. ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಸಮಾರಂಭದ ಅಧ್ಯಕ್ಷತೆಯನ್ನು ಎಂ.ಜಿ.ಎಂ. ಪದವಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ವನಿತಾ ಮಯ್ಯ ಇವರು ವಹಿಸಲಿದ್ದು, ಟಿ. ಮೋಹನದಾಸ ಪೈ ಕೌಶಲ್ಯ ಅಭಿವೃದ್ಧಿ ಕೇಂದ್ರದ ನಿರ್ದೇಶಕರಾದ ಟಿ. ರಂಗ ಪೈ ಇವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಇತಿಹಾಸ ತಜ್ಞರಾದ ಡಾ. ಮಾಲತಿ ಕೃಷ್ಣಮೂರ್ತಿ ಇವರಿಗೆ ‘ಪೊಳಲಿ ಶೀನಪ್ಪ ಹೆಗ್ಗಡೆ ಮತ್ತು ಎಸ್.ಆರ್. ಹೆಗ್ದೆ ಪ್ರಶಸ್ತಿ’ ಪ್ರದಾನ ಮಾಡಲಾಗುವುದು. ಪುರಾತತ್ವ ತಜ್ಞರಾದ ಡಾ. ಪುಂಡಿಕಾಯಿ ಗಣಪಯ್ಯ ಭಟ್ ಇವರು ‘ಮೌಖಿಕ ಪರಂಪರೆ ಮತ್ತು ತುಳುವ ಇತಿಹಾಸ’ ಎಂಬ ವಿಷಯದ ಬಗ್ಗೆ ವಿಶೇಷ ಉಪನ್ಯಾಸ ನೀಡಲಿದ್ದಾರೆ.
ಮಧೂರು : ಉಳಿಯ ದನ್ವ0ತರೀ ಯಕ್ಷಗಾನ ಕಲಾಸಂಘ ಮಧೂರು ಇದರ ವಾರದ ಕೂಟ ಉಳಿಯ ಮನೆಯ ಸುಧಾ ಮಂದಿರದಲ್ಲಿ ದಿನಾಂಕ 06 ಜುಲೈ 2025ರಂದು ‘ಭೀಷ್ಮ ಪ್ರತಿಜ್ಞೆ’ ಎಂಬ ಆಖ್ಯಾನದೊಂದಿಗೆ ತಾಳಮದ್ದಳೆ ನಡೆಯಿತು. ಹಿಮ್ಮೇಳದಲ್ಲಿ ಭಾಗವತರಾಗಿ ಶ್ರೀ ವಾಸುದೇವ ಕಲ್ಲೂರಾಯ ಮಧೂರು ಹಾಗೂ ಮದ್ದಲೆಗಳಲ್ಲಿ ಮುರಳಿ ಮಾಧವ ಮಧೂರು ಸಹಕರಿಸಿದರು. ಮುಮ್ಮೇಳದಲ್ಲಿ ದೇವವೃತ : ಭ್ರಹ್ಮಶ್ರೀ ಉಳಿಯತಾಯ ವಿಷ್ಣು ಆಸ್ರ, ಶಾಂತನು : ನರಸಿಂಹ ಬಲ್ಲಾಳ್, ಸತ್ಯವತಿ : ಶ್ರೀ ಮಯೂರ ಆಸ್ರ ಉಳಿಯ, ಕಂದರ ರಾಜ 1 : ಗೋಪಾಲ ಅಡಿಗ ಕೂಡಲು, ಕಂದರ ರಾಜ 2 : ಶ್ರೀಮತಿ ರಕ್ಷಾ ರಾಮ ಕಿಶೋರ ಆಸ್ರ ಸಹಕರಿಸಿದರು.