Subscribe to Updates
Get the latest creative news from FooBar about art, design and business.
Author: roovari
ಮಂಗಳೂರು: ಮಂಗಳೂರಿನ ಗಾಂಧಿನಗರದ ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನಲ್ಲಿ ನೂತನವಾಗಿ ಆರಂಭವಾದ ‘ಸಿರಿ ಚಾವಡಿ’ ತುಳುಕೂಟದ ಉದ್ಘಾಟನಾ ಸಮಾರಂಭವು ದಿನಾಂಕ 21 ಮಾರ್ಚ್ 2025 ರಂದು ನಡೆಯಿತು. ಕಾರ್ಯಕ್ರಮವನ್ನು ತೆಂಗಿನ ಕೊಂಬು ಅರಳಿಸುವ ಮೂಲಕ ಸಾಂಪ್ರದಾಯಿಕವಾಗಿ ಉದ್ಘಾಟಿಸಿದ ತುಳು – ಕನ್ನಡ ಸಾಹಿತಿ, ಕರ್ನಾಟಕ ಯಕ್ಷಗಾನ ಮತ್ತು ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಮಾತನಾಡಿ “ನಮ್ಮ ಕಣ್ಣಿಂದ ಮರೆಯಾಗುತ್ತಿರುವ ತುಳು ಪರಿಸರ, ಜನಪದ ಸಂಸ್ಕೃತಿ, ಇತಿಹಾಸದ ಕುರುಹುಗಳು, ಆಚಾರ ವಿಚಾರ, ಕಟ್ಟು – ಕಟ್ಟಳೆಗಳು ಉಳಿಯಬೇಕಾದರೆ ಯುವಜನರು ಅದರಲ್ಲಿ ಆಸಕ್ತಿ ತೋರಬೇಕು. ಶಾಲಾ ಕಾಲೇಜುಗಳಲ್ಲಿ ತುಳು ಕಾರ್ಯಕ್ರಮಗಳಿಗೆ ಹೆಚ್ಚಿನ ಅವಕಾಶ ಸಿಕ್ಕಿದಾಗ ಅದು ಸಾಧ್ಯ. ತುಳುವನ್ನು ತಲೆಮಾರಿಗೆ ತಲುಪಿಸುವಲ್ಲಿ ಉತ್ಸಾಹೀ ಯುವಕ ಯುವತಿಯರು ಶ್ರಮಿಸಬೇಕಾಗಿದೆ. ತುಳು ಸಮೃದ್ಧವಾದ ಭಾಷೆ. ಅಗಾಧವಾದ ಜನಪದ ಸಾಹಿತ್ಯ, ಮೌಖಿಕ ಕಾವ್ಯ, ಸಂಧಿ – ಪಾಡ್ದನ, ಗಾದೆ – ಒಗಟುಗಳ ಕಣಜವಾಗಿರುವ ತುಳು ಭಾಷೆಯಲ್ಲಿ ಇತ್ತೀಚೆಗೆ ಸಾಕಷ್ಟು ಕೃತಿಗಳು ಹಾಗೂ ಸಂಶೋಧನಾತ್ಮಕ…
ಬೆಳಗಾವಿ : ರಂಗಸಂಪದ (ರಿ.) ಬೆಳಗಾವಿ ಇದರ ವತಿಯಿಂದ ‘ವಿಶ್ವರಂಗಭೂಮಿ ದಿನಾಚರಣೆ 2025’ಯ ಪ್ರಯುಕ್ತ ‘ರಂಗಸಖ 2025’ ಪ್ರಶಸ್ತಿ ಪ್ರದಾನ ಮತ್ತು ನಾಟಕ ಪ್ರದರ್ಶನವನ್ನು ದಿನಾಂಕ 27 ಮತ್ತು 29 ಮಾರ್ಚ್ 2025ರಂದು ಬೆಳಗಾವಿಯ ಲೋಕಮಾನ್ಯ ರಂಗ ಮಂದಿರದಲ್ಲಿ ಆಯೋಜಿಸಲಾಗಿದೆ. ದಿನಾಂಕ 27 ಮಾರ್ಚ್ 2025ರಂದು ಸಂಜೆ 5-30 ಗಂಟೆಗೆ ಅನನ್ಯ ತಂಡ ಬೆಂಗಳೂರು ಇವರಿಂದ ಎಸ್.ಎನ್. ಸೇತುರಾಮ ಇವರ ನಿರ್ದೇಶನದಲ್ಲಿ ‘ತಳಿ’ ನಾಟಕ ಪ್ರದರ್ಶನ ನಡೆಯಲಿದೆ. ದಿನಾಂಕ 29 ಮಾರ್ಚ್ 2025ರಂದು ಸಂಜೆ 6-30 ಗಂಟೆಗೆ ಬೆಳಗಾವಿಯ ಶ್ರೀ ರಂಗಸಂಪದ ತಂಡದವರಿಂದ ಡಾ. ಅರವಿಂದ ಕುಲಕರ್ಣಿ ಇವರ ನಿರ್ದೇಶನದಲ್ಲಿ ‘ಗೆಳೆಯ ನೀನು ಹಳೆಯ ನಾನು’ ನಾಟಕ ಪ್ರಸ್ತುತಗೊಳ್ಳಲಿದೆ.
ಮಂಗಳೂರು : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು ನಗರ ಘಟಕದ ‘ಷಷ್ಠಮ ಸಂಭ್ರಮ’ವನ್ನು ದಿನಾಂಕ 28 ಮಾರ್ಚ್ 2025ರಂದು ಸಂಜೆ 3-30 ಗಂಟೆಗೆ ಮಂಗಳೂರು ಪುರಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಜೆಪ್ಪು ಅರೆಕೆರೆಬೈಲ್ ಅಂಬಾ ಮಹೇಶ್ವರಿ ಭಜನಾ ಮಂಡಳಿ ಇದರ ಅಧ್ಯಕ್ಷರಾದ ಸೀತಾರಾಮ್ ಎ. ಇವರ ಅಧ್ಯಕ್ಷತೆಯಲ್ಲಿ ಕುಡ್ಲ ಅರ್ಥ್ ಮೂವರ್ಸ್ ಅಸೋಸಿಯೇಶನ್ ಇದರ ಅಧ್ಯಕ್ಷರಾದ ಜಯಶೀಲ ಅಡ್ಯಂತಾಯ ಇವರು ಈ ಕಾರ್ಯಕ್ರಮವನ್ನು ಜ್ಯೋತಿ ಪ್ರಜ್ವಲನೆ ಮಾಡಿ ಉದ್ಘಾಟಿಸಲಿದ್ದಾರೆ. ಹಿರಿಯ ಯಕ್ಷಗಾನ ಕಲಾವಿದ ಪುತ್ತೂರು ದೇವರಾಜ ಹೆಗ್ಡೆ ಇವರಿಗೆ ‘ಯಕ್ಷಧ್ರುವ ಸಾಧನಾ’ ಪ್ರಶಸ್ತಿ ಪ್ರಧಾನ, ಹಿರಿಯ ರಂಗ ಕಲಾವಿದ ಶೇಖರ್ ಶೆಟ್ಟಿ ಹೊಯಿಗೆಬೈಲು ಇವರಿಗೆ ವಿಶೇಷ ಆರ್ಥಿಕ ನೆರವು ಹಾಗೂ ಪೂರ್ಣೇಶ್ ಆಚಾರ್ಯ ಮತ್ತು ರವಿ ಶೆಟ್ಟಿ ಕುಂಬ್ಳೆ ಇವರುಗಳಿಗೆ ಗೌರವ ಸಹಾಯಧನದೊಂದಿಗೆ ಸನ್ಮಾನ ಮಾಡಲಾಗುವುದು. 3-45 ಗಂಟೆಗೆ ಯಕ್ಷ ಹಾಸ್ಯ ವೈಭವ, 4-30 ಗಂಟೆಗೆ ಕಾವು ಶ್ರೀ ಪಂಚಲಿಂಗೇಶ್ವರ ಮಹಿಳಾ ಯಕ್ಷವೃಂದದವರಿಂದ ‘ಶಿವನಂದಿ’ ನೃತ್ಯರೂಪಕ ಮತ್ತು 6-00 ಗಂಟೆಗೆ ಶ್ರೀಲಲಿತೆ…
24.03.1952 ರಂದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸರಪಾಡಿಯ ಕೇಶವ ಕಾರಂತ ಹಾಗೂ ದಯಾವತಿ ಕಾರಂತ್ ಇವರ ಮಗನಾಗಿ ಸರಪಾಡಿ ಶಂಕರನಾರಾಯಣ ಕಾರಂತ್ ಅವರ ಜನನ. ಪಿಯುಸಿ ವರೆಗೆ ವಿದ್ಯಾಭ್ಯಾಸ. 1974ರಲ್ಲಿ ಧರ್ಮಸ್ಥಳ ಯಕ್ಷಗಾನ ಲಲಿತ ಕಲಾ ಕೇಂದ್ರದಲ್ಲಿ ಗುರುಗಳಾದ ಧರ್ಮಸ್ಥಳ ರಾಘವೇಂದ್ರ ತೋಳ್ಪಡಿತ್ತಾಯ ಹಾಗೂ ಸಂಗೀತ ಅಭ್ಯಾಸವನ್ನು ಕೊಕ್ಕಡ ಸುಬ್ರಾಯ ಆಚಾರ್ಯರಿಂದ ಕಲಿತು ಮುಂದೆ ಬಡಗಿನ ಭಾಗವತಿಕೆಯನ್ನು ನಾರಣಪ್ಪ ಉಪ್ಪೂರರಿಂದ ಅಭ್ಯಾಸ ಮಾಡಿದರು. ತಂದೆ ಯಕ್ಷಗಾನ ಮೃದಂಗ ವಾದಕರು ಹಾಗೂ ಯಕ್ಷಗಾನದಲ್ಲಿ ಹಾಸ್ಯಗಾರ ವೇಷ ಮಾಡುತ್ತಿದ್ದರು. ಭಜನೆಯಲ್ಲಿ ಸೊಗಸಾಗಿ ಹಾಡುತ್ತಿದ್ದರು. ತಾಯಿ, ಅಜ್ಜಿ ಭಜನೆ ಹಾಡು ಶೋಭಾನೆ ಹಾಡು ಹಾಡುತ್ತಿದ್ದರು. ಕೆಲವು ಬಂಧುಗಳು ಧರ್ಮಸ್ಥಳಕ್ಕೆ ಹೋಗಿ ಭಾಗವತಿಕೆ ಕಲಿಯಲು ಪ್ರೇರಣೆ. ರಂಗಕ್ಕೆ ಹೋಗುವ ಮೊದಲು ಕಲಾವಿದರ ಜೊತೆ ಕೂತು ಚರ್ಚಿಸಿ ಹೋಗುತ್ತೇನೆ ಎಂದು ಹೇಳುತ್ತಾರೆ ಕಾರಂತರು. ಯಕ್ಷಗಾನದ ಇಂದಿನ ಸ್ಥಿತಿ ಗತಿ ಹಾಗೂ ಪ್ರೇಕ್ಷಕರ ಬಗ್ಗೆ ಅಭಿಪ್ರಾಯ ಕಾಲಕ್ಕೆ ಸರಿಯಾಗಿ ಯಕ್ಷಗಾನದಲ್ಲಿ ಬದಲಾವಣೆ ಆಗುತ್ತಾ ಇದೆ. ಕ್ಯಾನ್ಸರಿನಂತೆ ಬೆಳೆದಾಗ ವಿಮರ್ಶಕರು…
ಕಿನ್ನಿಗೋಳಿ : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮುಲ್ಕಿ ತಾಲೂಕು ಘಟಕ ಹಾಗೂ ಎಸ್.ಆರ್. ಹೆಗ್ಡೆ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ಸಾಹಿತಿ ಸಂಶೋಧಕಿ ಡಾ. ಇಂದಿರಾ ಹೆಗ್ಗಡೆ ಜೊತೆ ಮಾತು–ಕತೆ ಕಾರ್ಯಕ್ರಮವನ್ನು ದಿನಾಂಕ 30 ಮಾರ್ಚ್ 2025ರಂದು ಸಂಜೆ ಗಂಟೆ 3-55ಕ್ಕೆ ಕಿನ್ನಿಗೋಳಿಯ ಎಳತ್ತೂರು ಗುತ್ತಿನಲ್ಲಿ ಆಯೋಜಿಸಲಾಗಿದೆ. ಗುತ್ತಿನಾರ್ ಬಾಲಕೃಷ್ಣ ಯಾನೆ ಶಂಕರ ರೈ ಇವರ ಗೌರವ ಉಪಸ್ಥಿತಿಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಸಾಹಿತಿ ಜನಪದ ವಿದ್ವಾಂಸ ಕೆ. ಎಲ್. ಕುಂಡಂತಾಯ ಮತ್ತು ಮೂಡಬಿದ್ರೆ ತಾಲೂಕು ಕ.ಸಾ.ಪ.ದ ಕಾರ್ಯದರ್ಶಿ ಡಾ. ಸುಧಾರಾಣಿ ಇವರಿಂದ ಡಾ. ಇಂದಿರಾ ಹೆಗ್ಗಡೆ ಜೊತೆ ಮಾತುಕತೆ ನಡೆಯಲಿದೆ. ಲಾವಣ್ಯ ಶೆಟ್ಟಿಯವರಿಂದ ಡಾ. ಇಂದಿರಾ ಹೆಗ್ಗಡೆಯವರ ಕವನಗಳ ಗಾಯನ ಪ್ರಸ್ತುತಗೊಳ್ಳಲಿದೆ.
ಮುದ್ರಾಡಿ: ನಮ ತುಳುವೆರ್ ಕಲಾ ಸಂಘಟನೆ (ರಿ.) ನಾಟ್ಕದೂರು, ಮುದ್ರಾಡಿ ಯೋಜಿಸುವ 11ನೇ ವರ್ಷದ ‘ಮುದ್ರಾಡಿ ರಾಷ್ಟ್ರೀಯ ರಂಗೋತ್ಸವ’ ಕಾರ್ಯಕ್ರಮವು ದಿನಾಂಕ 03 ಏಪ್ರಿಲ್ 2025 ರಿಂದ 07 ಏಪ್ರಿಲ್ 2025ರ ವರೆಗೆ ಮುದ್ರಾಡಿಯ ಬಿ.ವಿ. ಕಾರಂತ ಬಯಲು ರಂಗಸ್ಥಳದಲ್ಲಿ ನಡೆಯಲಿದೆ. ದಿನಾಂಕ 03 ಏಪ್ರಿಲ್ 2025ರಂದು ತೆಲುಗು ನಾಟಕ ‘ಮಾಯಾ ಬಜಾರ್’ ಪ್ರದರ್ಶನಗೊಳ್ಳಲಿದ್ದು, ದಿನಾಂಕ 04 ಏಪ್ರಿಲ್ 2025ಕ್ಕೆ ತೆಲುಗು ನಾಟಕ ‘ಪಾತಾಳ ಭೈರವಿ’ ಪ್ರದರ್ಶನಗೊಳ್ಳಲಿದೆ. ದಿನಾಂಕ 05 ಏಪ್ರಿಲ್ 2025ರಂದು ಕನ್ನಡದ ‘ಅಂಬೆ’ ನಾಟಕ ಪ್ರದರ್ಶನಗೊಳ್ಳಲಿದ್ದು, ದಿನಾಂಕ 06 ಏಪ್ರಿಲ್ 2025ರಂದು ತೆಲುಗು ನಾಟಕ ‘ಲವಕುಶ’ ಹಾಗೂ ದಿನಾಂಕ 07 ಏಪ್ರಿಲ್ 2025ರಂದು ತೆಲುಗು ನಾಟಕ ಭಕ್ತ ಪ್ರಹ್ಲಾದ ಪ್ರದರ್ಶನಗೊಳ್ಳಲಿದೆ ಎಂದು ನಮ ತುಳುವೆರ್ ಕಲಾ ಸಂಘಟನೆಯ ಅಧ್ಯಕ್ಷರಾದ ಶ್ರೀ ಸುಕುಮಾರ್ ಮೋಹನ್ ತಿಳಿಸಿದ್ದಾರೆ.
ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನ 2023ನೇ ಸಾಲಿನಸಾಲಿನ ‘ಜಿ.ಪಿ. ರಾಜರತ್ನಂ ಸಂಸ್ಮರಣ ದತ್ತಿ ಪ್ರಶಸ್ತಿ’ಗೆ ಪುತ್ತೂರು ಉಪತಹಶೀಲ್ದಾರ್ ಸುಲೋಚನಾ ಪಿ. ಕೆ. ಇವರ ‘ಸತ್ಯದರ್ಶನ’ ಪುಸ್ತಕವು ಆಯ್ಕೆಯಾಗಿದ್ದು, ಈ ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 21 ಮಾರ್ಚ್ 2025ರ ಶುಕ್ರವಾರದಂದು ಪರಿಷತ್ತಿನ ‘ಶ್ರೀಕೃಷ್ಣರಾಜ ಪರಿಷತ್ತಿನ ಮಂದಿರದಲ್ಲಿ’ ನಡೆಯಿತು. 2023 ಜನವರಿಯಿಂದ 2023 ಡಿಸೆಂಬರ್ ಒಳಗೆ ಪ್ರಕಟವಾದ ವಿವಿಧ ಕೃತಿಗಳನ್ನು ಒಟ್ಟು 52 ದತ್ತಿಗಳ 57 ಪ್ರಶಸ್ತಿಗಳಿಗೆ ಬರಹಗಾರರಿಂದ ಆಹ್ವಾನಿಸಲಾಗಿತ್ತು. 2024ನೇ ಸೆಪ್ಟೆಂಬರ್ 25 ಮತ್ತು 26ರಂದು ಕನ್ನಡ ಸಾಹಿತ್ಯ ಪರಿಷತ್ತಿನ ಮಾನ್ಯ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಇವರ ಅಧ್ಯಕ್ಷತೆಯಲ್ಲಿ ಎರಡೂ ದಿನಗಳು ನಡೆದ ಆಯ್ಕೆ ಸಮಿತಿ ಸಭೆಯಲ್ಲಿ ವಿಷಯ ತಜ್ಞರನ್ನೊಳಗೊಂಡ ಸಮಿತಿಯು 2023ನೇ ಸಾಲಿನ ವಿವಿಧ ದತ್ತಿ ಪ್ರಶಸ್ತಿಗೆ ಪುಸ್ತಕಗಳನ್ನು ಆಯ್ಕೆ ಮಾಡಿದ್ದು, ಇದರಲ್ಲಿ ಸುಲೋಚನಾ ಅವರ ‘ಸತ್ಯದರ್ಶನ’ ಕೃತಿಯು ‘ಜಿ.ಪಿ. ರಾಜರತ್ನಂ ಸಂಸ್ಕರಣ ದತ್ತಿ’ ಪ್ರಶಸ್ತಿಗೆ ಆಯ್ಕೆಯಾಗಿತ್ತು.
ಉಡುಪಿ: ಮಾಹೆ ವಿ.ವಿ. ಇಲ್ಲಿನ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದಿಂದ ಗೋವಿಂದ ಪೈ ಸಂಶೋಧನ ಸಂಪುಟ ಭಾಗ-2ರ ಅನಾವರಣ ಹಾಗೂ ರಾಷ್ಟ್ರಕವಿ ಗೋವಿಂದ ಪೈ ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 23 ಮಾರ್ಚ್ 2025ರ ಭಾನುವಾರ ಬೆಳಗ್ಗೆ 10 ಗಂಟೆಗೆ ಎಂ. ಜಿ. ಎಂ. ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ. ಕೇಂದ್ರದ ಸಲಹ ಸಮಿತಿಯ ಅಧ್ಯಕ್ಷರಾದ ಡಾ. ಬಿ. ಎ. ವಿವೇಕ್ ರೈ ಇವರು ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಯಮದಲ್ಲಿ ಗ್ರಂಥವನ್ನು ಮಾಹೆ ಸಹ ಕುಲಾಧಿಪತಿಗಳಾದ ಡಾ. ಎಚ್.ಎಸ್. ಬಲ್ಲಾಳ್ ಅನಾವರಣಗೊಳಿಸಲಿದ್ದು, ಕುಲಪತಿ ಲೆ. ಜ. ಡಾ. ಎಂ. ಡಿ. ವೆಂಕಟೇಶ್, ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಮತ್ತಿತರರು ಭಾಗವಹಿಸುವರು. ಇದರೊಂದಿಗೆ 2024ನೇ ಸಾಲಿನ ಗೋವಿಂದ ಪೈ ಪ್ರಶಸ್ತಿಯನ್ನು ಹಿರಿಯ ವಿದ್ವಾಂಸ ಡಾ. ಹಂ.ಪ. ನಾಗರಾಜಯ್ಯ ಅವರಿಗೆ ಪ್ರದಾನ ಮಾಡಲಾಗುವುದು. ವಿಶ್ರಾಂತ ಪ್ರಾಧ್ಯಾಪಕರಾದ ಡಾ. ತಾಳ್ತಜೆ ವಸಂತ ಕುಮಾರ್ ಅಭಿನಂದನ ಭಾಷಣ ಮಾಡಲಿರುವರು. ಎಂದು ಕೇಂದ್ರದ ಆಡಳಿತಾಧಿಕಾರಿ ಡಾ.…
ಕಟೀಲು : ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ವತಿಯಿಂದ ಶ್ರೀ ದುರ್ಗಾ ಮಕ್ಕಳ ಮೇಳ ಕಟೀಲು ಹಾಗೂ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಹಯೋಗದಲ್ಲಿ ಹಮ್ಮಿಕೊಂಡ ಎರಡು ದಿನಗಳ ಯಕ್ಷಗಾನ ತಾಳಮದ್ದಲೆ ಕಮ್ಮಟದ ಉದ್ಘಾಟನಾ ಸಮಾರಂಭವು ದಿನಾಂಕ 18 ಮಾರ್ಚ್ 2025ರ ಮಂಗಳವಾರದಂದು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳದ ಪ್ರಥಮ ದರ್ಜೆ ಕಾಲೇಜಿನ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾದ ಡಾ.ತಲ್ಲೂರು ಶಿವರಾಮ ಶೆಟ್ಟಿ ಮಾತನಾಡಿ “ಕಟೀಲು ಕ್ಷೇತ್ರದಲ್ಲಿ ಇವತ್ತು 6 ಯಕ್ಷಗಾನ ಮೇಳಗಳಿವೆ. ಆರು ಮೇಳಗಳಿಗೂ ಪ್ರತಿರಾತ್ರಿ ಯಕ್ಷಗಾನ ಕಾರ್ಯಕ್ರಮವಿದೆ. ಅಲ್ಲದೆ ಹಲವಾರು ವರ್ಷಗಳವರೆಗೆ ಯಕ್ಷಗಾನ ಕಾರ್ಯಕ್ರಮ ನಿಗದಿಯಾಗಿದೆ. ಇದು ದುರ್ಗಾ ಮಾತೆಯ ಲೀಲಿಯೂ ಹೌದು, ಯಕ್ಷಗಾನದ ಶಕ್ತಿಯೂ ಹೌದು. ಯಕ್ಷಗಾನದ ಬೆಳವಣಿಗೆಗೆ ಕಟೀಲು ಕ್ಷೇತ್ರದ ಕೊಡುಗೆ ಶ್ಲಾಘನೀಯ. ಯಕ್ಷಗಾನ ನಮ್ಮ ಮಣ್ಣಿನ ಕಲೆ. ಇದು ಅನ್ಯ ಕಲಾಪ್ರಕಾರಗಳ ಹಾಗೆ ಅಲ್ಲ. ಇಲ್ಲಿ ಅಭಿನಯ, ನೃತ್ಯ, ಮಾತು , ಹಾಡು, ವೇಷಭೂಷಣ, ಬಣ್ಣಗಾರಿಕೆ ಹೀಗೆ…
ಕಾಸರಗೋಡು : ಸಾಮಾಜಿಕ ಸಾಂಸ್ಕೃತಿಕ ಸಂಸ್ಥೆ ರಂಗಚಿನ್ನಾರಿ ಕಾಸರಗೋಡು (ರಿ.) ಮತ್ತು ‘ಸ್ವರ ಚಿನ್ನಾರಿ’ (ಸಂಗೀತ ಘಟಕ) ಪ್ರಸ್ತುತ ಪಡಿಸುವ ಪ್ರತಿಭಾನ್ವಿತ ಕರೋಕೆ ಗಾಯಕರ ಸಮ್ಮಿಲನ ‘ಅಂತರ್ಧ್ವನಿ -2’ ಸಂಗೀತ ಕಾರ್ಯಕ್ರಮವನ್ನು ದಿನಾಂಕ 23 ಮಾರ್ಚ್ 2025ರಂದು ಮಧ್ಯಾಹ್ನ 2-30 ಗಂಟೆಗೆ ಕಾಸರಗೋಡಿನ ಕರೆಂದಕ್ಕಾಡು ಪದ್ಮಗಿರಿ ಕಲಾ ಕುಟೀರದಲ್ಲಿ ಹಮ್ಮಿಕೊಳ್ಳಲಾಗಿದೆ. ರಂಗಚಿನ್ನಾರಿ ಚಿನ್ನಾರಿ ಇದರ ನಿರ್ದೇಶಕರಾದ ಕೆ. ಸತೀಶ್ಚಂದ್ರ ಭಂಡಾರಿ ಇವರ ಅಧ್ಯಕ್ಷತೆಯಲ್ಲಿ ಖ್ಯಾತ ಚಲನಚಿತ್ರ ನಟ ಹಾಗೂ ರಂಗನಟರಾದ ಕೆ.ಎಸ್. ಶ್ರೀಧರ್ ಇವರು ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿರುವರು. ಚಲನಚಿತ್ರ ನಿರ್ಮಾಪಕರಾದ ಟಿ.ಎ. ಶ್ರೀನಿವಾಸ್ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ಸ್ವರ ಚಿನ್ನಾರಿ ಸಹಕಾರ್ಯದರ್ಶಿಯಾದ ಪ್ರತಿಜ್ಞಾ ಕಣ್ಕಲ್ ಕಾರ್ಯಕ್ರಮ ನಿರ್ವಹಣೆ ಮಾಡಲಿದ್ದಾರೆ.