Author: roovari

ಬೆಂಗಳೂರು : ಸುಂದರ ಪ್ರಕಾಶನ ಇದರ ವತಿಯಿಂದ ‘ಗೌರಿ ಸುಂದರ್ ವಾರ್ಷಿಕ ಪ್ರಶಸ್ತಿ’ ಪ್ರದಾನ ಹಾಗೂ ಪುಸ್ತಕ ಲೋಕಾರ್ಪಣೆ ಸಮಾರಂಭವನ್ನು ದಿನಾಂಕ 11 ಮೇ 2025ರಂದು ಬೆಳಗ್ಗೆ 11-00 ಗಂಟೆಗೆ ಬೆಂಗಳೂರು ಬಸವನಗುಡಿ ಬಿ.ಪಿ. ವಾಡಿಯ ರಸ್ತೆಯಲ್ಲಿರುವ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್ ಇಲ್ಲಿ ಆಯೋಜಿಸಲಾಗಿದೆ. 2025ರ ‘ಗೌರಿ ಸುಂದರ್ ವಾರ್ಷಿಕ ಪ್ರಶಸ್ತಿ’ಯನ್ನು ನಟಿ ನಿರ್ದೇಶಕಿ ಪ್ರಾಧ್ಯಾಪಕಿ ಡಾ. ಸುಷ್ಮಾ ಎಸ್.ವಿ. ಇವರಿಗೆ ಪ್ರದಾನ ಮಾಡಲಾಗುವುದು. ಇದೇ ಸಂದರ್ಭದಲ್ಲಿ ಲೇಖಕ ಮಂ.ಆ. ವೆಂಕಟೇಶ್ ಇವರ ‘ಕರ್ನಾಟಕ ರಾಜ್ಯ ರಮಾರಮಣರು’ ಕರ್ನಾಟಕ ರಾಜ್ಯವನ್ನಾಳಿದವರು : ಒಂದು ನೆನಪು ಎಂಬ ಕೃತಿ ಲೋಕಾರ್ಪಣೆಗೊಳ್ಳಲಿದೆ. ಕವಿ ಬಿ.ಆರ್. ಲಕ್ಷ್ಮಣ ರಾವ್, ರಂಗಕರ್ಮಿ ಗುಂಡಣ್ಣ ಮತ್ತು ಸಾಹಿತಿ ಎಚ್. ಗೋಪಾಲಕೃಷ್ಣ ಇವರುಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಸಭಾ ಕಾರ್ಯಕ್ರಮದ ಬಳಿಕ ಡಾ. ಸುಷ್ಮಾ ಎಸ್.ವಿ. ಇವರ ಪರಿಕಲ್ಪನೆ, ವಿನ್ಯಾಸ ಮತ್ತು ನಿರ್ದೇಶನದಲ್ಲಿ ವಿಜಯನಗರ ಬಿಂಬ ಮತ್ತು ಪಿ.ಇ.ಎಸ್. ವಿಶ್ವವಿದ್ಯಾಲಯದ ಶಿಷ್ಯ ವೃಂದದಿಂದ ರಂಗ ಕವನ ಪ್ರಾಯೋಗಿಕ…

Read More

ಮೂಡುಬಿದಿರೆ : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕ.ಸಾ.ಪ ಮೂಡುಬಿದಿರೆ ತಾಲೂಕು ಘಟಕ ಹಾಗೂ ಆಳ್ವಾಸ್ ಶಿಕ್ಷಣ ಮಹಾವಿದ್ಯಾಲಯ ಮೂಡುಬಿದಿರೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆಯನ್ನು ದಿನಾಂಕ 05 ಮೇ 2025ರಂದು ಆಳ್ವಾಸ್‌ನ ಶಿವರಾಮ ಕಾರಂತ ಸಭಾಂಗಣದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ನಿವೃತ್ತ ಪ್ರಾಧ್ಯಾಪಕ ಎಸ್.ಪಿ. ಅಜಿತ್ ಪ್ರಸಾದ್, “ಇಂದಿನ ಯುವಪೀಳಿಗೆಗೆ ಪ್ರಾಚೀನ ಕನ್ನಡ ಸಾಹಿತ್ಯವನ್ನು ತಲುಪಿಸುವ ಕಾರ್ಯವನ್ನು ನಾವು ಮಾಡಬೇಕು. ನಾವು ಆಡುವ ಮಾತುಗಳು ಎದುರಿನವರಿಗೆ ಸಹ್ಯವಾಗಿರಬೇಕು. ಕಲಿಸುವ ಶಿಕ್ಷಕರಿಗೆ ಕನ್ನಡದ ಮೇಲೆ ಪ್ರೀತಿ ಇಲ್ಲದೆ ಹೋದರೆ, ಮಕ್ಕಳಲ್ಲಿ ಕನ್ನಡದ ಮೇಲೆ ಪ್ರೀತಿ ಮೂಡಲು ಸಾಧ್ಯವಿಲ್ಲ. ನಾಡು ಅರ್ಥವನ್ನ ಪಡೆದುಕೊಳ್ಳಬೇಕಾದರೆ ನುಡಿ ಗಟ್ಟಿಯಾಗಿರಬೇಕು, ನಾಡನ್ನ ಬಿಟ್ಟು ನುಡಿಯಿಲ್ಲ, ನುಡಿಯನ್ನ ಬಿಟ್ಟು ನಾಡಿಲ್ಲ. ಇಂದು ಕನ್ನಡ ತನ್ನ ಅಸ್ತಿತ್ವವನ್ನ ಕಳೆದುಕೊಳ್ಳುತ್ತಾ ಬರುತ್ತಿದೆ, ಇದಕ್ಕೆ ನಾವೇ ಕಾರಣ. ಕನ್ನಡ ನಮ್ಮ ಹೃದಯದ ಭಾಷೆ. ನಾವು ಯಾವಾಗ ನಮ್ಮ ಮಾತೃಭಾಷೆ ಸಂಪರ್ಕವನ್ನು ಕಳೆದುಕೊಳ್ಳುತ್ತೇವೆ, ಮಾತನಾಡಲು ಯಾವಾಗ…

Read More

ಧಾರವಾಡ : ಜಿ.ಬಿ. ಜೋಶಿ ಮೆಮೋರಿಯಲ್ ಟ್ರಸ್ಟ್ (ರಿ.) ಧಾರವಾಡ ಮತ್ತು ಡಾ. ಜಿ.ಎಸ್. ಆಮೂರ ಜನ್ಮ ಶತಮಾನೋತ್ಸವ ಸಮಿತಿ ಹಾಗೂ ಡಾ. ಅಣ್ಣಾಜಿರಾವ ಸಿರೂರ ರಂಗಮಂದಿರ ಪ್ರತಿಷ್ಠಾನ ಧಾರವಾಡ ಇವರ ಸಂಯುಕ್ತ ಆಶ್ರಯದಲ್ಲಿ ‘ಡಾ. ಜಿ.ಎಸ್. ಆಮೂರ ಜನ್ಮಶತಮಾನೋತ್ಸವ ಸಮರೋಪ ಸಮಾರಂಭವನ್ನು ಧಾರವಾಡದ ಕರ್ನಾಟಕ ಕಾಲೇಜ್ ಆವರಣ ಸೃಜನಾ ಡಾ. ಅಣ್ಣಾಜಿರಾವ ಸಿರೂರ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಸಮಾರಂಭದ ಉದ್ಘಾಟನೆಯನ್ನು ಲಕ್ಷ್ಮೀಶ ತೋಳ್ಪಾಡಿ ಇವರು ಮಾಡಲಿದ್ದು, ಇದೇ ಸಂದರ್ಭದಲ್ಲಿ ‘ಜಿ.ಎಸ್. ಆಮೂರ ಅವರ ಸಮಗ್ರ ಬೇಂದ್ರೆ ವಿಮರ್ಶೆ’ ಮತ್ತು ‘ಬೆಳಕಿನ ಬೆಳೆ’ ಎಂಬ ಕೃತಿಗಳು ಬಿಡುಗಡೆಗೊಳ್ಳಲಿದೆ. ಮಧ್ಯಾಹ್ನ 12-30 ಗಂಟೆಗೆ ನಡೆಯುವ ಗೋಷ್ಠಿ 01ರಲ್ಲಿ ಗಣೇಶ ದೇವಿ ಮಟ್ಟಿ ಮಾಜುನಾಥ ಹಿರೇಮಠ ಭಾಗವಹಿಸಲಿರುವರು. ಗೋಷ್ಠಿ 02ರಲ್ಲಿ ‘ಜಿ.ಎಸ್. ಆಮೂರ ಮತ್ತು ಕನ್ನಡ ಸಾಹಿತ್ಯ ವಿಮರ್ಶೆ’ ಎಂಬ ವಿಷಯದ ಸಂವಾದವನ್ನು ಗೀತಾ ವಸಂತ, ಶ್ರೀಧರ ಬಳಗಾರ ಮತ್ತು ಶ್ಯಾಮಸುಂದರ ಬಿದರಕುಂದಿ ಇವರು ನಡೆಸಿಕೊಡಲಿದ್ದಾರೆ. ಗೋಷ್ಠಿ 03ರಲ್ಲಿ ‘ಜಿ.ಎಸ್. ಆಮೂರ ಬಾಂಧವ್ಯ’ ಎಂಬ…

Read More

ಏಕವ್ಯಕ್ತಿಯಲ್ಲಿ ಬಹು ಚಹರೆಗಳನ್ನು ಬಿಂಬಿಸುವ ಕಲಾಪ್ರೌಢಿಮೆಯ ಸೃಜನಶೀಲ ಪ್ರಯತ್ನ ಬೆಂಗಳೂರಿನ ‘ರಂಗ ಸಂಪದ’ ಕರ್ನಾಟಕದ ರಂಗಭೂಮಿಯನ್ನು ಕಳೆದ ಐದು ದಶಕಗಳಿಂದ ಶ್ರೀಮಂತಗೊಳಿಸುತ್ತಿರುವ ಒಂದು ರಂಗತಂಡ. ಭೌತಿಕವಾಗಿ ಕನ್ನಡ ರಂಗಭೂಮಿಯ ಸಮೃದ್ಧ ಬೆಳವಣಿಗೆ ಮತ್ತು ಕಲಾ ವಿಸ್ತರಣೆಗೆ ಅಪಾರ ಕೊಡುಗೆ ಸಲ್ಲಿಸಿರುವುದೇ ಅಲ್ಲದೆ, ನೂರಾರು ಕಲಾವಿದರನ್ನು ಪೋಷಿಸಿ, ಬೆಳೆಸಿ ಕನ್ನಡ ರಂಗಭೂಮಿಯ ಸೃಜನಶೀಲ ಬೆಳವಣಿಗೆಗೆ ಅಹರ್ನಿಶಿ ದುಡಿಯುತ್ತಿರುವ ಒಂದು ತಂಡ ‘ರಂಗಸಂಪದ’. ಈ ಐದು ದಶಕಗಳಲ್ಲಿ ಹಲವು ವಿಶಿಷ್ಟ ನಾಟಕಗಳನ್ನು ಪ್ರಸ್ತುತಪಡಿಸುವ ಮೂಲಕ, ಹೊಸ ರಂಗಪ್ರಯೋಗಗಳಿಗೆ ಸದಾ ತೆರೆದ ಬಾಗಿಲಾಗಿರುವ ರಂಗಸಂಪದ ಈ ಬಾರಿ, ಭಾರತದ ಪೌರಾಣಿಕ ಜಗತ್ತಿನ ಅಪೂರ್ವ ಕಥನ ‘ಯಯಾತಿ’ಯನ್ನು ಸಂಧಿಸಿದ್ದು, ಈ ಕಥನದಲ್ಲಿ ವಿಶಿಷ್ಟ ಪಾತ್ರಧಾರಿಯಾಗಿ ಓದುಗರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿಯುವ ‘ಶರ್ಮಿಷ್ಠೆ’ಯನ್ನು ರಂಗದ ಮೇಲೆ ತರಲಾಗಿದೆ. ಯಶಸ್ವಿಯಾಗಿ ಎಂದು ಹೇಳಬೇಕಿಲ್ಲ. ಈ ಪ್ರಯೋಗದ ವೈಶಿಷ್ಟ್ಯ ಇರುವುದು ‘ಶರ್ಮಿಷ್ಠೆ’ಯ ಕಥನವನ್ನು ಏಕವ್ಯಕ್ತಿ ನಾಟಕದ ಮೂಲಕ ರಂಗದ ಮೇಲೆ ತಂದಿರುವುದು. ಸಾಮಾನ್ಯವಾಗಿ ರಂಗಭೂಮಿಯಲ್ಲೂ ಸಹ ಸಾಂಪ್ರದಾಯಿಕ ಮನಸುಗಳು ಮತ್ತು ಸಮಕಾಲೀನ…

Read More

ಪುತ್ತೂರು : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಪುತ್ತೂರು ಇದರ ತಿಂಗಳ ಸರಣಿ ತಾಳಮದ್ದಳೆಯು ದಿನಾಂಕ 05 ಮೇ 2025ರಂದು ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ರಾಜಗೋಪುರದಲ್ಲಿ ‘ಮಾಗಧ ವಧೆ’ ಎಂಬ ಆಖ್ಯಾನದೊಂದಿಗೆ ನಡೆಯಿತು. ಹಿಮ್ಮೇಳದಲ್ಲಿ ಯಲ್.ಯನ್. ಭಟ್ ಬಟ್ಯಮೂಲೆ, ಪದ್ಯಾಣ ಶಂಕರನಾರಾಯಣ ಭಟ್, ಮಾಸ್ಟರ್ ಪರೀಕ್ಷಿತ್, ಕುಮಾರಿ ಶರಣ್ಯ ನೆತ್ತರಕೆರೆ, ಮಾಸ್ಟರ್ ಅವಿನಾಶ್ ಕೃಷ್ಣ ಪುಣಚ ಸಹಕರಿಸಿದರು. ಮುಮ್ಮೇಳದಲ್ಲಿ ಗುಂಡ್ಯಡ್ಕ ಈಶ್ವರ ಭಟ್ (ಮಾಗಧ), ಭಾಸ್ಕರ ಬಾರ್ಯ (ಧರ್ಮರಾಯ), ಗುಡ್ಡಪ್ಪ ಬಲ್ಯ (ಶ್ರೀ ಕೃಷ್ಣ), ಹರಿಣಾಕ್ಷಿ ಜೆ. ಶೆಟ್ಟಿ (ಭೀಮ) ಸಹಕರಿಸಿದರು. ಅಧ್ಯಕ್ಷ ಭಾಸ್ಕರ ಬಾರ್ಯ ಸ್ವಾಗತಿಸಿ, ವಂದಿಸಿದರು.

Read More

ಮಡಿಕೇರಿ : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಮಹಿಳಾ ಸಾಹಿತಿಗಳಿಗೆ ಮೀಸಲಾಗಿ ಇಟ್ಟಿರುವ ದತ್ತಿ ‘ಶ್ರೀಮತಿ ವಿಜಯ ವಿಷ್ಣುಭಟ್ ದತ್ತಿ ಪ್ರಶಸ್ತಿ’ಗೆ ಜಿಲ್ಲೆಯ ಹಿರಿಯ ಸಾಹಿತಿಗಳಾದ ಶ್ರೀಮತಿ ಸ್ಮಿತಾ ಅಮೃತರಾಜ್ ಸಂಪಾಜೆಯವರು ರಚಿಸಿದ ಕಥಾ ಸಂಕಲನ ‘ಹಾಯ್ ಮೆಟಾಯ್’ ಕೃತಿಯು ಪುರಸ್ಕೃತಗೊಂಡಿದೆ. ಜಿಲ್ಲೆಯ ಹಿರಿಯ ಸಾಹಿತಿಗಳಾದ ಶ್ರೀಮತಿ ವಿಜಯ ವಿಷ್ಣುಭಟ್ ಇವರು‌ ಸ್ಥಾಪಿಸಿರುವ ಈ ದತ್ತಿಯ ಮೊದಲ ಪ್ರಶಸ್ತಿ ಇದಾಗಿದ್ದು, ಈ ದತ್ತಿ ಪ್ರಶಸ್ತಿಯ ಆಯ್ಕೆಗಾಗಿ ಜಿಲ್ಲೆಯ ಬರಹಗಾರರ ಕೃತಿಗಳನ್ನು ಆಹ್ವಾನಿಸಿದಾಗ ಹತ್ತು ಸಾಹಿತಿಗಳು ತಮ್ಮ ಕೃತಿಗಳನ್ನು ಪ್ರಸ್ತುತಪಡಿಸಿದ್ದರು. ಜಿಲ್ಲೆಯ ಹಿರಿಯ ಮೂರು ಸಾಹಿತಿಗಳು ಪ್ರತ್ಯೇಕವಾಗಿ ಈ ಪುಸ್ತಕಗಳನ್ನು ಪರಿಶೀಲಿಸಿ ನೀಡಿದ ಅಂಕಗಳನ್ನು ಜಿಲ್ಲಾ ಸಮಿತಿ ಒಟ್ಟುಗೂಡಿಸಿ ಹತ್ತು ಜನ ಲೇಖಕರಲ್ಲಿ ಅತಿ ಹೆಚ್ಚು ಅಂಕ ಪಡೆದ ‘ಹಾಯ್ ಮೆಟಾಯ್’ ಕೃತಿಯ ಲೇಖಕಿಯಾದ ಶ್ರೀಮತಿ ಸ್ಮಿತಾ ಅಮೃತ್ ರಾಜ್ ಸಂಪಾಜೆಯವರು ಪ್ರಶಸ್ತಿ ಪುರಸ್ತೃತಗೊಂಡಿದ್ದಾರೆ. ಮುಂದೆ ನಡೆಯುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಕೊಡಗು ಜಿಲ್ಲಾ ಕನ್ನಡ…

Read More

ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನ ‘ಶ್ರೀಕೃಷ್ಣರಾಜ ಪರಿಷತ್ತಿನ ಮಂದಿರ’ದಲ್ಲಿ ದಿನಾಂಕ 05 ಮೇ 2025ರಂದು ಏರ್ಪಾಟಾಗಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ 111ನೆಯ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿಯವರು ಮಾತನಾಡಿ “ಕನ್ನಡ ಭಾಷೆ, ಸಾಹಿತ್ಯ, ಕಲೆ, ಜಾನಪದ, ಸಂಸ್ಕೃತಿಗಳ ಸಂವರ್ಧನೆ ಹಾಗೂ ಸಂರಕ್ಷಣೆಯ ಮಹದಾಶಯದೊಂದಿಗೆ ಹುಟ್ಟಿದ ‘ಕನ್ನಡ ಸಾಹಿತ್ಯ ಪರಿಷತ್ತು’ ಇಂದು (ಮೇ 5) ‘111ನೆಯ ಸಂಸ್ಥಾಪನಾ ದಿನ’ವನ್ನು ಆಚರಿಸಿಕೊಳ್ಳುತ್ತಿದೆ. ಏಳು ಕೋಟಿ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆ ಎನ್ನಿಸಿಕೊಂಡಿರುವ ಇದು ಕನ್ನಡಿಗರೆಲ್ಲರ ಮಾತೃ ಸಂಸ್ಥೆ ಕೂಡ ಹೌದು. ಮಹಾತ್ಮ ಗಾಂಧೀಜಿಯವರಿಂದಲೇ ರಾಜರ್ಷಿ ಎನ್ನಿಸಿಕೊಂಡ ನಾಲ್ವಡಿ ಕೃಷ್ಣರಾಜ ಒಡೆಯರ್ ಇವರ ಪೋಷಣೆ ಮತ್ತು ಸರ್.ಎಂ. ವಿಶ್ವೇಶ್ವರಯ್ಯ ಮತ್ತು ಸರ್. ಮಿರ್ಜಾ ಇಸ್ಮಾಯಿಲ್ ಇವರ ಬೆಂಬಲದಿಂದ ರೂಪುಗೊಂಡ ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರೆಲ್ಲರ ಭವಿಷ್ಯದ ದಿಕ್ಯೂಚಿಯಾಗಿದೆ. ಕನ್ನಡ ಸಾಹಿತ್ಯ ಪರಿಷತ್ತು ಹುಟ್ಟಿದ್ದೇ ಮೊದಲನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ.…

Read More

ಉಡುಪಿ : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕದ ಇದರ ವತಿಯಿಂದ ಉಡುಪಿ ತಾಲೂಕು 15ನೆಯ ಕನ್ನಡ ಸಾಹಿತ್ಯ ಸಮ್ಮೇಳನ ‘ಕಲಾಯತನ’ ಸಾಹಿತ್ಯ ಯಕ್ಷ ಸಂಭ್ರಮವು ದಿನಾಂಕ 17 ಮೇ 2025ರಂದು ಉಡುಪಿಯ ಕೊಡವೂರು ಶ್ರೀ ಶಂಕರನಾರಾಯಣ ದೇವಳದಲ್ಲಿ ಪ್ರೊ. ಎಂ.ಎಲ್. ಸಾಮಗ ಇವರ ಸರ್ವಾಧ್ಯಕ್ಷತೆಯಲ್ಲಿ ನಡೆಯಲಿದೆ. ಈ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ಲೋಕಾರ್ಪಣೆಗೊಳಿಸಿ, “ವಿವಿಧ ವಿಚಾರ ಗೋಷ್ಠಿಗಳು, ಚಿಂತನ-ಮಂಥನ, ಕನ್ನಡ ನಾಡು ನುಡಿಗೆ ಸೇವೆ ಸಲ್ಲಿಸಿದವರಿಗೆ ಗೌರವ, ಪುಸ್ತಕ ಬಿಡುಗಡೆ ಮುಂತಾದ ವಿವಿಧ ಕಾರ್ಯಕ್ರಮಗಳು ಈ ಸಮ್ಮೇಳನದಲ್ಲಿ ಮೇಳೈಸಲಿರುವುದು ಅಭಿನಂದನಾರ್ಹ” ಎಂದರು. ಕನ್ನಡ ಸಂಸ್ಕೃತಿ ಇಲಾಖೆಯ ಉಡುಪಿ ಜಿಲ್ಲೆಯ ಸಹಾಯಕ ನಿರ್ದೇಶಕಿ ಪೂರ್ಣಿಮ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕ ಉಡುಪಿ ವಿಶ್ವನಾಥ್ ಶೆಣೈ, ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ಸಾಧು ಸಾಲ್ಯಾನ್, ಕ.ಸಾ.ಪ. ಉಡುಪಿ ತಾಲೂಕು ಘಟಕದ ಅಧ್ಯಕ್ಷ ರವಿರಾಜ್ ಹೆಚ್.ಪಿ., ಗೌರವ…

Read More

ಕಾಸರಗೋಡು : ದೇಲಂಪಾಡಿಯ ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾಸಂಘದ ಕೀರಿಕ್ಕಾಡು ಸ್ಮಾರಕ ಸಭಾಭವನದಲ್ಲಿ ದಿನಾಂಕ 03 ಮೇ 2025ನೇ ಶನಿವಾರದಂದು ವಿದ್ಯಾಶ್ರೀ ಆಚಾರ್ಯ ಈಶ್ವರಮಂಗಲ ಮತ್ತು ಮನೆಯವರ ವತಿಯಿಂದ ಸಂಯೋಜಿಸಲ್ಪಟ್ಟ ಈ ವಿಶೇಷ ಕಲಾ ಸೇವೆಯ ಮೊದಲಿಗೆ ಸ್ಥಳ ಸಾನ್ನಿಧ್ಯ ಶ್ರೀ ಗೋಪಾಲಕೃಷ್ಣದೇವರಿಗೆ ಪೂಜಾರ್ಚನೆ ಸಲ್ಲಿಸಲಾಯಿತು. ಶೀರಾಮ ಗೀತಾಭ್ಯಾಸ ತಂಡ ಹಾಗೂ ಪೂರ್ಣಿಮಾ ಬನಾರಿ ಇವರ ಸಹಭಾಗಿತ್ವದಲ್ಲಿ ಭಗವದ್ಗೀತೆ ಪಾರಾಯಣ ನಡೆಯಿತು. ಬಳಿಕ ಹಿರಿಯ ಭಾಗವತ ಗುರುಗಳಾದ ವಿಶ್ವವಿನೋದ ಬನಾರಿ ಇವರ ನಿರ್ದೇಶನದಲ್ಲಿ ಪಾರ್ತಿಸುಬ್ಬ ವಿರಚಿತ ‘ಪಂಚವಟಿ’ ಯಕ್ಷಗಾನ ತಾಳಮದ್ದಳೆ ಜರಗಿತು. ಭಾಗವತರಾಗಿ ಮೋಹನ ಮೆಣಸಿನಕಾನ, ಕುಮಾರಿ ವಿದ್ಯಾಶ್ರೀ ಆಚಾರ್ಯ ಈಶ್ವರ ಮಂಗಲ, ಕುಮಾರಿ ರಂಜಿತಾ ಆಚಾರ್ಯ ನಾರ್ಣಕಜೆ ಕಾಣಿಸಿಕೊಂಡರು. ಚೆಂಡೆಮದ್ದಳೆ ವಾದನದಲ್ಲಿ ಶ್ರೀಧರ ಆಚಾರ್ಯ ಈಶ್ವರ ಮಂಗಲ, ಮಂಡೆಕೂಲು ಅಪ್ಪಯ್ಯ ಮಣಿಯಾಣಿ, ವಿಷ್ಣು ಶರಣ ಬನಾರಿ, ಕೃಷ್ಣ ಪ್ರಸಾದ ಬೆಳ್ಳಿಪ್ಪಾಡಿ, ಸದಾನಂದ ಮಯ್ಯಾಳ ಇವರುಗಳು ಸಹಕರಿಸಿದರು. ಅರ್ಥಧಾರಿಗಳಾಗಿ ನಾರಾಯಣ ದೇಲಂಪಾಡಿ, ಪ್ರಭಾಕರ ಆಚಾರ್ಯ ಹಿರಿಯಾಣ, ಭಾಸ್ಕರ ಮಾಸ್ತರ್‌ ದೇಲಂಪಾಡಿ,…

Read More

ಬೆಂಗಳೂರು : ಕಪ್ಪಣ್ಣ ಅಂಗಳ ಇದರ ವತಿಯಿಂದ 93ನೇ ಶಾಸ್ತ್ರೀಯ ಮಾಸಿಕ ಸಂಗೀತ ಕಛೇರಿ ‘ಆಲಾಪ್’ ಕಾರ್ಯಕ್ರಮವನ್ನು ದಿನಾಂಕ 10 ಮೇ 2025ರಂದು ಸಂಜೆ 06-30 ಗಂಟೆಗೆ ಬೆಂಗಳೂರಿನ ಜೆ.ಪಿ. ನಗರದ ಕಪ್ಪಣ್ಣ ಅಂಗಳದಲ್ಲಿ ಆಯೋಜಿಸಲಾಗಿದೆ. ಈ ಹಿಂದೂಸ್ಥಾನಿ ವಾದ್ಯ ಸಂಗೀತ ಕಾರ್ಯಕ್ರಮದಲ್ಲಿ ಹೇಮಂತ್ ಕೃಷ್ಣ ಇವರಿಂದ ಬಾನ್ಸೂರಿ ವಾದನ ಹಾಗೂ ಭಾರ್ಗವ್ ರಾವ್ ಇವರಿಂದ ತಬಲಾ ವಾದನ ನಡೆಯಲಿದೆ. ‘ಆಲಾಪ್’ ಸರಣಿ ಸ್ವರ ಮಾಲಿಕೆಯ 93ನೇ ಕಾರ್ಯಕ್ರಮ ಇದಾಗಿದ್ದು, ಕಳೆದ 10 ವರ್ಷಗಳಿಂದ ಈ ಕಾರ್ಯಕ್ರಮ ನಡೆದುಕೊಂಡು ಬಂದಿದೆ. ಉದಯೋನ್ಮುಖ ಕಲಾವಿದರಿಗಾಗಿಯೇ ಆಯೋಜಿಸುವ ಈ ಸರಣಿಯಲ್ಲಿ ಒಂದು ತಿಂಗಳು ಹಿಂದೂಸ್ಥಾನಿ ಹಾಗೂ ಒಂದು ತಿಂಗಳು ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿಗಳು ನಡೆಯುತ್ತಿದೆ. ಶ್ರೀ ನಿವಾಸ್ ಜಿ. ಕಪ್ಪಣ್ಣ ಹಾಗೂ ಲಲಿತ ಕಪ್ಪಣ್ಣ ದಂಪತಿಗಳು ತಮ್ಮ ಮನೆಯ ಅಂಗಳದಲ್ಲಿಯೇ ಸುಸಜ್ಜಿತವಾದ ಸಭಾಂಗಣವನ್ನು ನಿರ್ಮಿಸಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗಾಗಿಯೇ ಮುಡಿಪಾಗಿಟ್ಟಿದ್ದಾರೆ. ಕಪ್ಪಣ್ಣ ಅವರ ಪುತ್ರಿ ಹಾಗೂ ಕಪ್ಪಣ್ಣ ಅಂಗಳದ ನಿರ್ದೇಶಕಿಯಾದ ಸ್ನೇಹ ಕಪ್ಪಣ್ಣರವರು ಈ…

Read More