Author: roovari

ಮುಂಬಯಿ : ತುಳುನಾಡಿನ ಭಾಷೆ ಹಾಗೂ ಸಂಸ್ಕೃತಿಯನ್ನು ಉಳಿಸುವ ನಿಟ್ಟಿನಲ್ಲಿ ಸಾಹಿತಿಕವಾಗಿ ತುಳುವರನ್ನು ಸಂಘಟಿಸಿದ ಕವಯಿತ್ರಿ ಸಂಘಟಕಿ ಗೀತಾ ಲಕ್ಷ್ಮೀಶ್ ಇವರ ನೇತೃತ್ವದಲ್ಲಿ ಸ್ಥಾಪನೆಗೊಂಡಿರುವ ತುಲುವೆರ ಕಲ ಟ್ರಸ್ಟ್ (ರಿ.) ಎಂಬ ಸಂಸ್ಥೆಯು ಮುಂಬೈಯಲ್ಲಿ ತುಳು ಭಾಷೆಗೆ ಅಧಿಕೃತ ಸ್ಥಾನಮಾನ ಸಿಗಬೇಕು ಎನ್ನುವ ಸದುದ್ದೇಶದಿಂದ ಮಹತ್ತರವಾದ ಯೋಜನೆಯನ್ನು ರೂಪಿಸಿ ಊರು ಹಾಗೂ ಮುಂಬೈನ ಜಂಟಿ ಆಶ್ರಯದಲ್ಲಿ ‘ತುಲುವೆರೆ ಕಲ ಮಿನದನ’ ಎಂಬ ತುಳು ಕಾರ್ಯಕ್ರಮವು ದಿನಾಂಕ 23 ಆಗಸ್ಟ್ 2025 ಶನಿವಾರದಂದು ಬಂಟರ ಭವನ ಕುರ್ಲಾ ಇದರ ಎನೆಕ್ಸ್ ಹಾಲ್‌ನಲ್ಲಿ ವಿಜೃಂಭಣೆಯಿಂದ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ತುಲುವೆರೆ ಕಲ ಟ್ರಸ್ಟಿನ ಸಂಸ್ಥಾಪಕಿ, ತುಳು ಲಿಪಿ ಶಿಕ್ಷಕಿ ಗೀತಾ ಲಕ್ಷ್ಮೀಶ್ ವಹಿಸಿದ್ದರು. ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಸಾಯಿ ಪ್ಯಾಲೇಸ್ ಗ್ರೂಪ್ ಆಫ್ ಹೋಟೆಲ್ಸ್ ನಿರ್ದೇಶಕ ಉದಯ ಸುಂದರ್ ಶೆಟ್ಟಿ ಮಾತನಾಡಿ “ಊರಿನವರು ಮತ್ತು ಮುಂಬೈಯವರು ಒಗ್ಗಟ್ಟಾಗಿ ಈ ಕಾರ್ಯಕ್ರಮವನ್ನು ಬಹಳ ಅರ್ಥಪೂರ್ಣವಾಗಿ ನಡೆಸಿದ್ದಾರೆ. ಮುಂಬೈ ನಗರದಲ್ಲಿ ತುಳು ಮಾತನಾಡುವವರು ಕಡಿಮೆಯಾಗುತ್ತಿದ್ದಾರೆ. ನಾವು…

Read More

ಮಂಗಳೂರು : ಸಂಸ್ಕೃತ ಸಂಘ ಹಾಗೂ ಸರೋಜಿನಿ ಮಧುಸೂಧನ ಕುಶೆ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ದಿನಾಂಕ 23 ಆಗಸ್ಟ್ 2025ರಂದು ಅತ್ತಾವರದಲ್ಲಿರುವ ಸರೋಜಿನೀ ಮಧುಸೂದನ ಕುಶೆ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಸಂಸ್ಕೃತೋತ್ಸವ ಮತ್ತು ಸನ್ಮಾನ ಕಾರ್ಯಕ್ರಮ ವಿಜೃಂಭಣೆಯಿಂದ ಕೊನೆಗೊಂಡಿತು. ಸಂಸ್ಕೃತ ಸ್ತೋತ್ರ ಕಂಠಪಾಠ ಸ್ಪರ್ಧೆ, ಸುಭಾಷಿತ ಕಂಠಪಾಠ ಸ್ಪರ್ಧೆ, ಏಕಪಾತ್ರಾಭಿನಯ, ಸಂಸ್ಕೃತ ಸಮುಗಾಯನ, ಸಮೂಹ ನೃತ್ಯ ಇತ್ಯಾದಿ 11 ಸ್ಪರ್ಧೆಗಳಿಗೆ 20ಕ್ಕೂ ಹೆಚ್ಚು ವಿದ್ಯಾಸಂಸ್ಥೆಗಳಿಂದ 300ಕ್ಕೂ ಹೆಚ್ಚು ಅಧಿಕ ವಿದ್ಯಾರ್ಥಿಗಳು ಆಗಮಿಸಿದ್ದರು. ಸ್ಪರ್ಧೆಯಲ್ಲಿ ವಿಜೇತರಾಗಿರುವವರಿಗೆ ಬಹುಮಾನವನ್ನು ವಿತರಿಸಲಾಯಿತು ಹಾಗೂ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಶ್ರೀಮತಿ ಭಾರತೀ ಸೊರಕೆ ಪ್ರಪಂಚದ ಅತ್ಯಂತ ಶ್ರೇಷ್ಠವಾದ ಭಾಷೆ ಸಂಸ್ಕೃತ, ಅದನ್ನು ಬಾಲ್ಯದಿಂದಲೇ ಕಲಿತರೆ ಮಾನಸಿಕ ಹಾಗೂ ಶಾರೀರಿಕ ಆರೋಗ್ಯ ವೃದ್ಧಿಸುತ್ತದೆ ಎಂದರು. ಕಾರ್ಯಕ್ರಮದಲ್ಲಿ ಎನ್.ಐ.ಟಿ.ಕೆ. ಸುರತ್ಕಲ್ ನ ನಿವೃತ್ತ ಸಂಸ್ಕೃತ ಪ್ರಾಧ್ಯಾಪಕರಾದ ಸುಬ್ರಹ್ಮಣ್ಯ ಭಟ್ಟರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷರು, ಪ್ರಸಿದ್ಧ ಜ್ಯೋತಿಷ್ಕರಾದ ಶ್ರೀ ರಂಗ ಐತಾಳರು ಮಾತನಾಡಿ “ಯಾವತ್ತೂ ಮನುಷ್ಯನಿಗೆ ಭಾಷಾಭಿಮಾನ, ದೇಶಾಭಿಮಾನ, ಸ್ವಾಭಿಮಾನದ…

Read More

ಸಿಂಗಾಪುರ : ಸದಾ ಚಟುವಟಿಕೆಯಿಂದಿರುವ ಸಿಂಗಾಪುರ ಕನ್ನಡ ಸಂಘ, ಸಾಮಾಜಿಕ, ಸಾಂಸ್ಕೃತಿಕ, ಶೈಕ್ಷಣಿಕ, ವಿನೋದ, ಶುಭ ಕಾರ್ಯಕ್ರಮಗಳಿಗೆ ಸದಾ ಪ್ರೋತ್ಸಾಹಿಸುವ ಹಾಗೂ ಸಿಂಗಾಪುರದ ಕನ್ನಡ ಸಮುದಾಯ ಹಾಗೂ ಇಲ್ಲಿನ ಇತರ ಸಮುದಾಯದ ಜೊತೆ ಸಾಂಸ್ಕೃತಿಕ ಸಂಬಂಧವನ್ನು ಬೆಳೆಸುವುದು, ಜಗತ್ತಿನ ವಿವಿಧೆಡೆಯಲ್ಲಿರುವ ಕನ್ನಡಿಗರೊಡನೇ ಸಾಂಸ್ಕೃತಿಕ ಸಂಬಂಧವನ್ನು ಕಲ್ಪಿಸುವ ಒಂದು ಸುಂದರ ತಂಡ. ಬೆಂಗಳೂರಿನಲ್ಲಿ ಮನೆ ಮಾತಾಗಿರುವ ಕಳೆದ ನಾಲ್ಕುವರೆ ದಶಕಗಳಿಂದ ಗುಣಾತ್ಮಕ ಯಕ್ಷಗಾನ ಪ್ರದರ್ಶನ, ಆಸಕ್ತರಿಗಾಗಿ ನಿರಂತರ ಯಕ್ಷಗಾನ ತರಬೇತಿ, ಯಕ್ಷಗಾನದ ಕುರಿತಾದ ಕಮ್ಮಟ, ಕಾರ್ಯಾಗಾರ, ಯಕ್ಷಾಂತರಂಗವನ್ನು ಸಮಗ್ರವಾಗಿ ಪರಿಚಯಿಸುವ ಪ್ರಾತ್ಯಕ್ಷಿಕೆ, ತಾಳಮದ್ದಲೆ, ಹೂವಿನ ಕೋಲು, ಗಾನವೈಭವ, ಪ್ರತಿವರ್ಷ ಸಾಧಕ ಕಲಾವಿದರನ್ನು ಗುರುತಿಸಿ ನಗದು ಪುರಸ್ಕಾರದೊಂದಿಗೆ ‘ಯಕ್ಷದೇಗುಲ’ ಪ್ರಶಸ್ತಿ, ಯಕ್ಷಗಾನ ಉತ್ಸವ, ಪುಸ್ತಕ ಪ್ರಕಟಣೆ, ಯಕ್ಷಾಭ್ಯಾಸ ಹೀಗೆ ಸದಾ ಚಟುವಟಿಕೆಯಿಂದಿರುವ ಸಂಸ್ಥೆಯಾದ ಯಕ್ಷದೇಗುಲ ಸಂಸ್ಥೆ. ಯಕ್ಷಗಾನ ಕ್ಷೇತ್ರಕ್ಕೆ ನೀಡಿದ ಅನುಪಮ ಕೊಡುಗೆಯನ್ನು ಮನಗಂಡು ‘ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿ ಪ್ರಶಸ್ತಿ’, ಉಡುಪಿ ಕಲಾರಂಗ ನೀಡುವ ಶ್ರೀ ಶ್ರೀ ವಿಶ್ವೇಶತೀರ್ಥ ಪ್ರಶಸ್ತಿ, ಶ್ರವಣ ಬೆಳಗೋಳದಲ್ಲಿ…

Read More

ಪುತ್ತೂರು : ಶ್ರೀ ಶಾರದಾ ಹಿಂದೂಸ್ತಾನಿ ಸಂಗೀತ ವಿದ್ಯಾಲಯ ನೆಹರು ನಗರ ಪುತ್ತೂರು ಇದರ 16ನೇ ವಾರ್ಷಿಕೋತ್ಸವದ ಪ್ರಯುಕ್ತ ‘ನಾದ ಗುಂಜನ್’ ಸಂಗೀತ ಕಾರ್ಯಕ್ರಮವನ್ನು ದಿನಾಂಕ 31 ಆಗಸ್ಟ್ 2025ರಂದು ಪೂರ್ವಾಹ್ನ 10-30 ಗಂಟೆಗೆ ಪುತ್ತೂರಿನ ಮಾತೃಛಾಯಾದಲ್ಲಿ ಹಮ್ಮಿಕೊಳ್ಳಲಾಗಿದೆ. ವಿದ್ಯಾಲಯದ ವಿದ್ಯಾರ್ಥಿಗಳಿಂದ ಹಾಗೂ ಶಿಕ್ಷಕರಿಂದ ಪ್ರಸ್ತುತಗೊಳ್ಳುವ ಸಂಗೀತ ಕಾರ್ಯಕ್ರಮಕ್ಕೆ ಕುಮಾರ ಅನ್ಮೋಲ್ ಕೆ.ವಿ., ಸುಮನ್ ದೇವಾಡಿಗ ಮತ್ತು ವಿನೋದ್ ಭಂಡಾರಿ ತಬಲಾದಲ್ಲಿ, ಶ್ರೀಮತಿ ಸುಮನಾ ಪ್ರಭು ಮತ್ತು ಗಣೇಶ್ ಆಚಾರ್ಯ ಸಂವಾದಿನಿಯಲ್ಲಿ ಸಹಕರಿಸಲಿದ್ದಾರೆ.

Read More

ಬೆಂಗಳೂರು : ಸ್ಟೇಜ್ ಬೆಂಗಳೂರು ಇವರ ವತಿಯಿಂದ ‘ಅಭಿನಯ ಕಾರ್ಯಾಗಾರ’ವು ಪ್ರಸ್ತುತಗೊಳ್ಳಲಿದ್ದು, ಸೀಮಿತ 15 ಜನರಿಗೆ ಮಾತ್ರ ಅವಕಾಶವಿದೆ. 16 ವರ್ಷ ಮೇಲ್ಪಟ್ಟ ಆಸ್ತಕರಿಗೆ ಸೋಮವಾರದಿಂದ ಶುಕ್ರವಾರ ಬೆಳಗ್ಗೆ ಗಂಟೆ 6-00ರಿಂದ 7-30ರ ತನಕ ಮತ್ತು 8-00ರಿಂದ 9-30ರ ತನಕ ಹಾಗೂ ಸಂಜೆ ಗಂಟೆ 7-00ರಿಂದ 9-00 ಗಂಟೆಗೆ ಎರಡು ತಿಂಗಳುಗಳ ಈ ಕಾರ್ಯಾಗಾರ ನಡೆಯಲಿದೆ. ಹೆಚ್ಚಿನ ಮಾಹಿತಿ ಮತ್ತು ನೋಂದಾವಣೆಗೆ 90088 30011 ಮತ್ತು 73384 73842 ಸಂಖ್ಯೆಯನ್ನು ಸಂಪರ್ಕಿಸಿರಿ. ಸಂಸ್ಥೆಯ ಬಗ್ಗೆ : ಸ್ಟೇಜ್ ಬೆಂಗಳೂರು ಕರ್ನಾಟಕ ಸರ್ಕಾರದ ಅಧೀನದಲ್ಲಿ ನೋಂದಾಯಿತ ಸಂಸ್ಥೆಯಾಗಿದ್ದು, ಯುವ ಪೀಳಿಗೆ ಮತ್ತು ರಂಗಭೂಮಿ ಉತ್ಸಾಹಿಗಳನ್ನು ಪ್ರೋತ್ಸಾಹಿಸುವ ದೃಷ್ಟಿಯೊಂದಿಗೆ ದಿನಾಂಕ 07 ಏಪ್ರಿಲ್ 2019ರಂದು ಸ್ಥಾಪಿಸಲಾಗಿದೆ. ಇದು ಭಾರತದಾದ್ಯಂತ ವ್ಯವಸ್ಥಿತವಾಗಿ ಸಾಂಸ್ಕೃತಿಕ ಮತ್ತು ನಾಟಕ ಪ್ರದರ್ಶನಗಳ ಪ್ರಚಾರ ಮತ್ತು ಅಭಿವೃದ್ಧಿಗೆ ಶ್ರಮಿಸುತ್ತಿದೆ. ನಾವು ವೃತ್ತಿಪರವಾಗಿ ಸಾಂಸ್ಕೃತಿಕ ಮತ್ತು ರಂಗಭೂಮಿ ಸಂಬಂಧಿತ ಚಟುವಟಿಕೆಗಳಲ್ಲಿ ತರಬೇತಿ, ಅಭ್ಯಾಸ ಮತ್ತು ಸಂಶೋಧನೆಯಲ್ಲಿ ತೊಡಗಿಸಿಕೊಂಡಿದ್ದೇವೆ. ಸ್ಟೇಜ್ ಬೆಂಗಳೂರು ಥಿಯೇಟರ್ ತಂಡವು…

Read More

ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯ ಇದರ ವತಿಯಿಂದ ಹಾಗೂ ಮಹಾತ್ಮಾ ಗಾಂಧಿ ಶಾಂತಿ ಪ್ರತಿಷ್ಠಾನ (ರಿ.) ಮಂಗಳೂರು ಸಹಯೋಗದಲ್ಲಿ ಪ್ರೊ. ಕೆ.ಈ. ರಾಧಾಕೃಷ್ಣ ಅನುವಾದಿಸಿರುವ ನೇತಾಜಿ ಸುಭಾಶ್ ಚಂದ್ರ ಬೋಸರ ಮೂರು ಪುಸ್ತಕಗಳ ಲೋಕಾರ್ಪಣೆ ಸಮಾರಂಭವು ದಿನಾಂಕ 31 ಆಗಸ್ಟ್ 2025ರಂದು ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾ ಭವನದಲ್ಲಿ ನಡೆಯಲಿದೆ. ಮಾನ್ಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್ ಇವರ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮವನ್ನು ಮಾನ್ಯ ಆರೋಗ್ಯ ಸಚಿವರಾದ ದಿನೇಶ್ ಗುಂಡೂ ರಾವ್ ಇವರು ಉದ್ಘಾಟನೆ ಮಾಡಲಿದ್ದಾರೆ. ಬಹುಶ್ರುತ ವಿದ್ವಾಂಸರಾದ ನಾರಾಯಣ ಯಾಜಿ ಕೃತಿ ಪರಿಚಯ ಮಾಡಲಿದ್ದಾರೆ.

Read More

ಉಡುಪಿ : ಉಡುಪಿ ಜಿಲ್ಲಾ ಕರ್ಣಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೇವಾ ಮತ್ತು ಸಾಂಸ್ಕೃತಿಕ ವೇದಿಕೆ ಉದ್ಯಾವರ ಫ್ರೆಂಡ್ಸ್ ಸರ್ಕಲ್ ಇದರ ವತಿಯಿಂದ ‘ಮಂಜಣ್ಣನ ನೆನಪು’ ಹದಿಮೂರು ಮಂಜುನಾಥ ಉದ್ಯಾವರ ಸಂಸ್ಮರಣಾ ಕಾರ್ಯಕ್ರಮವನ್ನು ದಿನಾಂಕ 31 ಆಗಸ್ಟ್ 2025ರಂದು ಸಂಜೆ 5-00 ಗಂಟೆಗೆ ಉದ್ಯಾವರ ಶ್ರೀ ವಿಠೋಬ ರುಖುಮಾಯಿ ನಾರಾಯಣ ಗುರು ಮಂದಿರದಲ್ಲಿ ಆಯೋಜಿಸಲಾಗಿದೆ. ಈ ಕಾರ್ಯಕ್ರಮವನ್ನು ಮಾಜಿ ಸಚಿವರಾದ ಕೆ. ಜಯಪ್ರಕಾಶ್ ಹೆಗ್ಡೆ ಇವರು ಉದ್ಘಾಟನೆ ಮಾಡಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ಪ್ರಜ್ಞಾನಂ ಟ್ರಸ್ಟ್ (ರಿ.) ಉಡುಪಿ ಪ್ರಸ್ತುತಿಯಲ್ಲಿ ವಿದುಷಿ ಸಂಸ್ಕೃತಿ ಪ್ರಭಾಕರ್ ಅಭಿನಯಿಸುವ ಏಕವ್ಯಕ್ತಿ ರಂಗಪ್ರಯೋಗ ‘ಹೆಜ್ಜೆಗೊಲಿದ ಬೆಳಕು’ ನಾಟ್ಯರಾಣಿ ಶಾಂತಲೆಯ ಆತ್ಮವೃತ್ತ ಪ್ರಸ್ತುತಗೊಳ್ಳಲಿದೆ.

Read More

ಮಂಗಳೂರು : ಮಂಗಳೂರು ಸಂಸ್ಕೃತ ಸಂಘ ಹಾಗೂ ಸರೋಜಿನಿ ಮಧುಸೂಧನ ಕುಶೆ ಶಿಕ್ಷಣ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ದಿನಾಂಕ 23 ಆಗಸ್ಟ್ 2025ರಂದು ಅತ್ತಾವರದಲ್ಲಿರುವ ಸರೋಜಿನೀ ಮಧುಸೂದನ ಕುಶೆ ಶಿಕ್ಷಣ ಸಂಸ್ಥೆಯಲ್ಲಿ ‘ಸಂಸ್ಕೃತೋತ್ಸವ ಮತ್ತು ಸನ್ಮಾನ’ ಕಾರ್ಯಕ್ರಮದ ಉದ್ಘಾಟನೆ ಕಾರ್ಯಕ್ರಮ ನಡೆಯಿತು. ಸಂಸ್ಕೃತೋತ್ಸವದ ಅಂಗವಾಗಿ ನಡೆಯುವ ವಿವಿಧ ಸಂಸ್ಕೃತ ಸ್ಪರ್ಧೆಗಳಿಗೆ ಚಾಲನೆ ನೀಡಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಕೃತ ಸಂಘದ ಗೌರವಾಧ್ಯಕ್ಷ ಶ್ರೀ ಕೆ.ಪಿ. ವಾಸುದೇವರಾವ್ ವಹಿಸಿದ್ದರು. ಆಕಾಶವಾಣಿ ಮಂಗಳೂರು ಇಲ್ಲಿಯ ನಿವೃತ್ತ ಸಹಾಯಕ ನಿರ್ದೇಶಕರಾದ ಶ್ರೀ ಸೂರ್ಯನಾರಾಯಣ ಭಟ್ ಮಾತನಾಡಿ “ಸಂಸ್ಕೃತ ಎನ್ನುವುದು ತಾಯಿ ಭಾಷೆ, ತಾಯಿಯನ್ನು ಎಷ್ಟು ಪ್ರೀತಿಸುತ್ತೇವೆಯೋ ಅಷ್ಟೇ ಪ್ರೀತಿ ಈ ಭಾಷೆಯ ಬಗ್ಗೆ ಇರಬೇಕು. ನಮ್ಮ ಪುರಾಣ, ರಾಮಾಯಣ, ಮಹಾಭಾರತ ಸಂಸ್ಕೃತದಲ್ಲಿದೆ, ಹಾಗಾಗಿ ಇಂತಹ ವಿಶೇಷವಾದ ಭಾಷೆಯನ್ನು ಕಲಿಯುವ ಪ್ರಯತ್ನ ಪ್ರತಿಯೊಬ್ಬರು ಅವಶ್ಯವಾಗಿ ಮಾಡಬೇಕು. ಸಂಸ್ಕೃತ ಎನ್ನುವುದು ಭಾಷೆಯಾಗದೆ ಜೀವನದ ಒಂದು ಭಾಗವಾಗಬೇಕು” ಎಂದು ಹೇಳಿದರು. ಸರೋಜಿನಿ ಮಧುಸೂದನ ಕುಶೆ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲರಾದ ಶ್ರೀ ಬಿಂದುಸಾರ…

Read More

ಮಂಗಳೂರು : ಸಾಹಿತ್ಯ ಪುಸ್ತಕಗಳ ಪ್ರಕಟಣೆ ಮತ್ತು ಪೂರಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಬೆಳ್ಳಿ ಹಬ್ಬ ‘ರಜತ ರಂಗು’ ಸಂಭ್ರಮದಲ್ಲಿರುವ ‘ಕಲ್ಲಚ್ಚು ಪ್ರಕಾಶನದ’ 16ನೇ ಆವೃತ್ತಿಯ ಕಲ್ಲಚ್ಚು ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 31 ಆಗಸ್ಟ್ 2025ರಂದು ಸಂಜೆ 3-45 ಗಂಟೆಗೆ ಮಂಗಳೂರಿನ ಲಾಲ್ ಬಾಗ್ ಕರಾವಳಿ ಉತ್ಸವ ಮೈದಾನದ ಎದುರಿನ ಹ್ಯಾಟ್ ಹಿಲ್ ನಲ್ಲಿ ಇರುವ ಆಫೀಸರ್ಸ್ ಕ್ಲಬ್ ಸಭಾಂಗಣದಲ್ಲಿ ಜರಗಲಿದೆ. ಈಗಾಗಲೇ ಕರ್ನಾಟಕದ ಪಂಚ ಸಾಧಕರಾದ ಜಬೀವುಲ್ಲಾ ಎಂ. ಅಸದ್, ಗೋಕಾವಿ ಗೆಳೆಯರ ಬಳಗ, ರೆಮೊನಾ ಎವೆಟ್ ಪೆರೇರಾ, ಡಾ. ಎಸ್.ಎಮ್. ಶಿವಪ್ರಕಾಶ್ ಮತ್ತು ಡಾ. ಪ್ರಕಾಶ ಕೆ. ಕೇಶವ ನಾಡಿಗ್ ಇವರಿಗೆ ಈ ಪ್ರತಿಷ್ಠಿತ ಪ್ರಶಸ್ತಿ ಘೋಷಣೆ ಆಗಿದ್ದು, ಕ.ಸಾ.ಪ.ದ ಮಾಜಿ ರಾಜ್ಯಾಧ್ಯಕ್ಷರಾದ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಪ್ರಶಸ್ತಿ ಪ್ರದಾನ ಮಾಡಲಿದ್ದು, ಸಾಹಿತಿ ಸಂತೋಷಕುಮಾರ ಮೆಹಂದಳೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ವಿಶೇಷ ಉಪನ್ಯಾಸ ನೀಡಲಿರುವರು. ಕವಿ ರಘು ಇಡ್ಕಿದು ಇವರ ಅಭಿನಂದನಾ ಮಾತು ಹಾಗೂ ಎನ್. ಸುಬ್ರಾಯ…

Read More

ಕಾಸರಗೋಡು : ಕನ್ನಡ ಭವನದ ರಜತ ವರ್ಷಾಚರಣೆ ಪ್ರಯುಕ್ತ ಕನ್ನಡ ಭವನ ವೇದಿಕೆಯಲ್ಲಿ ದಿನಾಂಕ 27 ಆಗಸ್ಟ್ 2025ರಂದು ನಡೆದ ಗಣೇಶ ಚತುರ್ಥಿ ವಿಶೇಷ ಕಾರ್ಯಕ್ರಮದಲ್ಲಿ ‘ರಾಷ್ಟ್ರಕವಿ ಗೋವಿಂದ ಪೈ ರಾಷ್ಟ್ರೀಯ ಪ್ರಶಸ್ತಿ 2025’ ಪ್ರಶಸ್ತಿ ಪ್ರದಾನ ನಡೆಯಿತು. ಪ್ರಶಸ್ತಿ ಸ್ವೀಕರಿಸಿದ ಚಲನಚಿತ್ರ ಸಾಹಿತಿ, ಹಿರಿಯ ಪತ್ರಕರ್ತ ಗಣೇಶ್ ಕಾಸರಗೋಡು ಇವರು ಮಾತನಾಡಿ “ಕನ್ನಡದ ಪ್ರಥಮ ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ಓರ್ವ ಮಹಾನ್ ವ್ಯಕ್ತಿ, ಅದ್ಭುತ ಪ್ರತಿಭೆ, ಕಾವ್ಯ ಮತ್ತು ಸಂಶೋಧನೆಯನ್ನು ಸವ್ಯಸಾಚಿಸಿದವರು. ಅವರ ಹೆಸರಿನಲ್ಲಿ ಕಾಸರಗೋಡಿನ ಸೀತಮ್ಮ ಪುರುಷನಾಯಕ ಸ್ಮಾರಕ ಕನ್ನಡ ಭವನ ಸ್ಥಾಪಿಸಿದ ರಾಷ್ಟ್ರೀಯ ಪ್ರಶಸ್ತಿಯನ್ನು ಸ್ವೀಕರಿಸುವುದು ಬದುಕಿನ ಮಹಾ ಭಾಗ್ಯ. ರಾಷ್ಟ್ರಕವಿಗಳ ಜೀವನ ಸಾಧನೆಯ ಕುರಿತು ಚಲನಚಿತ್ರವೊಂದು ನಿರ್ಮಾಣವಾಗಲಿದ್ದು, ಅದರ ಸಿದ್ಧತೆಯ ನಡುವೆ ಮಹಾಕವಿಗಳ ಹೆಸರಿನ ಪ್ರಶಸ್ತಿಯನ್ನು ಸಂತೋಷದಿಂದ ಹಾಗೂ ಹೆಮ್ಮೆಯಿಂದ ಸ್ವೀಕರಿಸಿದ್ದೇನೆ” ಎಂದು ಹೇಳಿದರು. ಕ.ಸಾ.ಪ. ಕೇರಳ ಗಡಿನಾಡ ಘಟಕ ಅಧ್ಯಕ್ಷರಾದ ಡಾ. ಜಯಪ್ರಕಾಶ್ ನಾರಾಯಣ ತೋಟ್ಟೆತೋಡಿ ಅಧ್ಯಕ್ಷತೆ ವಹಿಸಿದ್ದರು. ಕನ್ನಡ ಚುಟುಕು ಸಾಹಿತ್ಯ…

Read More