Author: roovari

ಕಿನ್ನಿಗೋಳಿ : ಯುಗಪುರುಷ ಕಿನ್ನಿಗೋಳಿ ಹಾಗೂ ಕರ್ನಾಟಕ ಜಾನಪದ ಪರಿಷತ್ ಬೆಂಗಳೂರು ಇದರ ದ. ಕ. ಜಿಲ್ಲಾ ತಾಲೂಕು ಘಟಕ ಮೂಡುಬಿದಿರೆ ಸಹಯೋಗದಲ್ಲಿ ‘ವಾಯ್ಸ್ ಆಫ್ ಆರಾಧನ’ ಇದರ ಪ್ರತಿಭೆಗಳಿಂದ ಜಾನಪದ, ಸಾಂಸ್ಕೃತಿಕ ವೈಭವ ಹಾಗೂ ಆಟಿಡೊಂಜಿ ದಿನ ಕಾರ್ಯಕ್ರಮವು ದಿನಾಂಕ 14-07-2024 ರಂದು ಕಿನ್ನಿಗೋಳಿ ಯುಗಪುರುಷ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಯುಗಪುರುಷ ಕಿನ್ನಿಗೋಳಿ ಇದರ ಸಂಪಾದಕ ಭುವನಾಭಿರಾಮ ಉಡುಪ ಮಾತನಾಡಿ “ತುಳುನಾಡಿನ ಸಂಸ್ಕೃತಿ, ಆಚರಣೆಗಳು, ಆಚಾರ ವಿಚಾರಗಳು, ಸಂಪ್ರದಾಯಗಳು ಮರೆಯುವ ಹಂತದಲ್ಲಿದ್ದು ಅದನ್ನು ಉಳಿಸಿ ಬೆಳಸುವ ನಿಟ್ಟಿನಲ್ಲಿ ಕರ್ನಾಟಕ ಜಾನಪದ ಪರಿಷತ್ ಕಾರ್ಯಕ್ರಮ ಆಯೋಜನೆ ಮಾಡಿ ಉತ್ತಮ ಕೆಲಸ ಕಾರ್ಯ ಮಾಡುತ್ತಿದೆ.” ಎಂದು ಹೇಳಿದರು. ಮೂಡುಬಿದಿರೆ ತಾಲೂಕು ಅಧ್ಯಕ್ಷೆ ಪದ್ಮಶ್ರೀ ಭಟ್ ನಿಡೋಡಿ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ದ. ಕ. ಜಿಲ್ಲಾ ಕನ್ನಡ ಜಾನಪದ ಪರಿಷತ್‌ ಇದರ ಅಧ್ಯಕ್ಷರಾದ ಪ್ರವೀಣ್ ಕುಮಾರ್ ಕೊಡಿಯಾಲ್‌ಬೈಲ್, ಮಾಜಿ ಕ. ಸಾ. ಪ. ಅಧ್ಯಕ್ಷರಾದ ಡಾ. ಹರಿಕೃಷ್ಣ ಪುನರೂರು, ರಾಜೇಶ್,…

Read More

ಮಂಗಳೂರು : ಮಂಗಳೂರಿನ ಕರಾವಳಿ ಲೇಖಕಿಯರ ವಾಚಕಿಯರ ಸಂಘದ ನವೀಕೃತ ಸಾಹಿತ್ಯ ಸದನದ ಉದ್ಘಾಟನಾ ಸಮಾರಂಭವು ದಿನಾಂಕ 13-07-2024ರಂದು ಮಂಗಳೂರಿನ ಉರ್ವಸ್ಟೋರ್ ಇಲ್ಲಿ ನಡೆಯಿತು. ಕ. ಲೇ. ವಾ.  ಸಂಘ, ಮಂಗಳೂರು ಇದರ ಅಧ್ಯಕ್ಷರಾದ ಡಾ. ಜ್ಯೋತಿ ಚೇಳಾಯ್ರು ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮವನ್ನು ಕರ್ನಾಟಕ ಸರಕಾರದ ಮಾನ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ನಿಗಮ ಹಾಗೂ ಅಂಗವಿಕಲರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರಾದ ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಕರ್  ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಮಾನ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ, ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಮಾನ್ಯ ಡಿ. ವೇದವ್ಯಾಸ ಕಾಮತ್, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆಯಾದ ಮಮತಾ ಗಟ್ಟಿ, ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಶ್ರೀನಾಥ ಎಂ.ಪಿ, ಸುರತ್ಕಲ್ಲಿನ ಎಂ. ಆರ್. ಪಿ. ಎಲ್. ಇದರ ಅಧಿಕಾರಿಯಾದ ಮೀನಾಕ್ಷಿ ಹಾಗೂ ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾದ  ಶ್ರೀ…

Read More

ಬಂಟ್ವಾಳ : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು ಇದರ ವತಿಯಿಂದ ವಿಟ್ಲ ಘಟಕದ ಸಹಭಾಗಿತ್ವದಲ್ಲಿ ಯಕ್ಷಧ್ರುವ-ಯಕ್ಷಶಿಕ್ಷಣ ಯೋಜನೆಯ ಯಕ್ಷಗಾನ ನಾಟ್ಯ ತರಬೇತಿ ಅಭಿಯಾನದ ಉಚಿತ ಯಕ್ಷಗಾನ ತರಗತಿಯು ದಿನಾಂಕ 11/07/2024ರಂದು ಬಂಟ್ವಾಳ ತಾಲೂಕಿನ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕೇಪು ಇಲ್ಲಿ ಉದ್ಘಾಟನೆಗೊಂಡಿತು. ಯಕ್ಷಗಾನ ಶಿಕ್ಷಕರಾದ ಶ್ರೀ ಗಣೇಶ ಕುಂದಲಕೋಡಿ ದೀಪ ಬೆಳಗಿಸುವುದರ ಮೂಲಕ ಯಕ್ಷಗಾನ ತರಗತಿಗೆ ಚಾಲನೆ ನೀಡಿದರು. ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶ್ರೀ ವೆಂಕಟ ರಾಘವೇಂದ್ರ ಸ್ವಾಮಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ವಿಟ್ಲ ಘಟಕದ ಅಧ್ಯಕ್ಷರಾದ ಶ್ರೀ ರಾಧಾಕೃಷ್ಣ ಶೆಟ್ಟಿ ಚೆಲ್ಲಡ್ಕ, ಪ್ರಧಾನ ಕಾರ್ಯದರ್ಶಿ ಶ್ರೀ ಪೂವಪ್ಪ‌ ಶೆಟ್ಟಿ ಅಳಿಕೆ, ಶ್ರೀ ಉಳ್ಳಾಲ್ತಿ ಸೇವಾ ಟ್ರಸ್ಟ್ (ರಿ.) ಕೇಪು ಇದರ ಅಧ್ಯಕ್ಷರಾದ ಶ್ರೀ ಪ್ರಭಾಕರ ಶೆಟ್ಟಿ ಪಡಿಬಾಗಿಲು, ವಿಟ್ಲ ಘಟಕದ ಪ್ರಧಾನ ಸಂಚಾಲಕರಾದ ಶ್ರೀ ಅರವಿಂದ ರೈ ಮೂರ್ಜೆಬೆಟ್ಟು, ಸಂಘಟನಾ ಕಾರ್ಯದರ್ಶಿ ಶ್ರೀ ಭಾಸ್ಕರ ಶೆಟ್ಟಿ ವೀರಕಂಭ,…

Read More

ಉಡುಪಿ : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದಿಂದ ನಡೆಯುತ್ತಿರುವ ವಿನೂತನ ಕಾರ್ಯಕ್ರಮ “ಮನೆಯೇ ಗ್ರಂಥಾಲಯ” ಇದರ ಸುವರ್ಣ ಸಂಭ್ರಮವು ಉಡುಪಿಯ ಗಾಂಧಿ ಆಸ್ಪತ್ರೆಯಲ್ಲಿ ದಿನಾಂಕ 15-07- 2024ರಂದು  ನಡೆಯಿತು. ಕನ್ನಡದ ಪ್ರಸಿದ್ಧ ವಿಮರ್ಶಕ ಪ್ರೊ. ಮುರುಳೀಧರ ಉಪಾಧ್ಯ ಹಿರಿಯಡ್ಕ ಅವರು ಗಾಂಧಿ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ. ಹರಿಶ್ಚಂದ್ರ ಅವರಿಗೆ ಪುಸ್ತಕಗಳನ್ನು ಹಸ್ತಾಂತರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು “ಆಸ್ಪತ್ರೆಗಳಲ್ಲಿ ಗ್ರಂಥಾಲಯ ಮಾಡುವ ಮೂಲಕ ರೋಗಿಗಳ ಸ್ವಸ್ಥ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯ. ರೋಗಿಗಳ ಮನಸ್ಥಿತಿಗೆ ಅನುಗುಣವಾಗಿ ವಿವಿಧ ರೀತಿಯ ಆರೋಗ್ಯಕ್ಕೆ, ಸಮಾಜಕ್ಕೆ ಹಾಗೂ ಪರಿಸರಕ್ಕೆ ಸಂಬಂಧಿಸಿದ ವಿವಿಧ ಬಗೆಯ ಪುಸ್ತಕಗಳು ಲಭ್ಯವಾಗಲಿ.” ಎಂದು ಆಶಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತ ನಿರ್ದೇಶಕ ಡಾ. ಹರಿಶ್ಚಂದ್ರ ಇವರನ್ನು ಕ. ಸಾ. ಪ. ಉಡುಪಿ ತಾಲೂಕು ಘಟಕದ ವತಿಯಿಂದ ಗೌರವಿಸಲಾಯಿತು . ಉಡುಪಿ ಕರಾವಳಿಯ ಭಾರತೀಯ ವೈದ್ಯಕೀಯ ಸಂಘ ಇದರ ಅಧ್ಯಕ್ಷೆಯಾದ ಡಾ. ರಾಜಲಕ್ಷ್ಮೀ,…

Read More

ಕಾರ್ಕಳ : ಕನ್ನಡ ಸಾಹಿತ್ಯ ಪರಿಷತ್ತು ಕಾರ್ಕಳ ತಾಲೂಕು ಘಟಕದ ಪದಾಧಿಕಾರಿಗಳ ಸಭೆಯು ಪ್ರಕಾಶ್ ಹೋಟೆಲ್ ಇದರ ಸಭಾಂಗಣದಲ್ಲಿ ದಿನಾಂಕ 13-07-2024ರಂದು ನಡೆಯಿತು. ‘ಸಾಹಿತ್ಯದ ಖುಷಿ ಸಾವಯವ ಕೃಷಿ’ ಎಂಬ ಶೀರ್ಷಿಕೆಯಡಿ ಈ ವರ್ಷದ ಸಾಹಿತ್ಯದ ಸರಣಿ ಕಾರ್ಯಕ್ರಮವನ್ನು ಕಾರ್ಕಳ ತಾಲೂಕಿನ ಶಾಲಾ ಕಾಲೇಜುಗಳಲ್ಲಿ ಸಾಹಿತ್ಯ ನಂದನ, ತಾಲೂಕಿನ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಸಾಹಿತ್ಯ ಚಂದನ, ತಾಲೂಕಿನ ವಿವಿಧ ಸಂಘ ಸಂಸ್ಥೆಗಳಲ್ಲಿ ಸಾಹಿತ್ಯ ಸಂಭ್ರಮ, ತಾಲೂಕಿನ ಹಿರಿಯ ಸಾಹಿತ್ಯ ಸಾಧಕರಿಗೆ ಸನ್ಮಾನ ಸಾಹಿತ್ಯ ಸಿರಿ, ತಾಲೂಕಿನ ಬರಹಗಾರ ಸಮ್ಮೇಳನ ಸಾಹಿತ್ಯ ಸೌರಭ ಹೀಗೆ ಸಾಹಿತ್ಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ‘ಇಳೆಯ ತುಂಬ ಮುಂಗಾರು ಮಳೆ’ ಶೀರ್ಷಿಕೆಯಲ್ಲಿ ಕ.ಸಾ.ಪ. ಸದಸ್ಯರ ಕವಿಗೋಷ್ಠಿ ನಡೆಯಲಿದ್ದು, ಗೋಷ್ಠಿ ಅಧ್ಯಕ್ಷತೆಯನ್ನು ಲೇಖಕಿ ಮಿತ್ರ ಪ್ರಭಾ ಹೆಗ್ಡೆ ವಹಿಸಲಿದ್ದಾರೆ. ಸಭೆಯಲ್ಲಿ ಶಿವಸುಬ್ರಹ್ಮಣ್ಯ ಜಿ. ಭಟ್, ದೇವುದಾಸ್ ನಾಯಕ್, ಆರ್. ರಮೇಶ್ ಪ್ರಭು, ಆಶೀಶ್ ಶೆಟ್ಟಿ, ಡಾ. ಸುಮತಿ ಪಿ., ಸುಲೋಚನಾ ಬಿ.ವಿ., ಮಾಲತಿ ಜಿ. ಪೈ, ಲಕ್ಷ್ಮೀ ಹೆಗಡೆ, ಶೈಲಜಾ…

Read More

ಮಂಗಳೂರು : ಉರ್ವ ಮಾರ್ಕೆಟ್ ಸುಲ್ತಾನ್ ಬತ್ತೇರಿ ರಸ್ತೆಯಲ್ಲಿರುವ ಯುವ ವೇದಿಕೆ ಟ್ರಸ್ಟ್ (ರಿ.) ಮತ್ತು ಅಶೋಕನಗರದ ಗೋಕುಲದಲ್ಲಿರುವ ದ್ರಾವಿಡ ಬ್ರಾಹ್ಮಣರ ಎಸೋಸಿಯೇಶನ್ (ರಿ.) ಇವರ ಯುವ ವೇದಿಕೆ ಇದರ ಜಂಟಿ ಆಶ್ರಯದಲ್ಲಿ ‘ಆಷಾಢ ಶ್ರಾವ್ಯ’ದ ಪ್ರಯುಕ್ತ ಯಕ್ಷಗಾನ ತಾಳಮದ್ದಳೆಯು ದಿನಾಂಕ 21-07-2024ರಂದು ಮಧ್ಯಾಹ್ನ 2-30ಕ್ಕೆ ಮಂಗಳೂರಿನ ಅಶೋಕನಗರದ ಗೋಕುಲ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ. ಕವಿ ತಿರುಮಲ ವಿರಚಿತ ‘ಭಾರ್ಗವ ರಾಮ’ ಪ್ರಸಂಗದ ತಾಳಮದ್ದಳೆಯ ಹಿಮ್ಮೇಳದಲ್ಲಿ ಶ್ರೀ ರವಿಚಂದ್ರ ಕನ್ನಡಿಕಟ್ಟೆ, ಶ್ರೀ ಕೃಷ್ಣ ಪ್ರಕಾಶ್ ಉಳಿತ್ತಾಯ ಮತ್ತು ಶ್ರೀ ಮುರಾರಿ ಕಡಂಬಳಿತ್ತಾಯ ಹಾಗೂ ಮುಮ್ಮೇಳದಲ್ಲಿ ಶ್ರೀ ಸೂರಿಕುಮೇರಿ ಗೋವಿಂದ ಭಟ್, ಶ್ರೀ ಸುಣ್ಣಂಬಳ ವಿಶ್ವೇಶ್ವರ ಭಟ್, ಶ್ರೀ ಮಧೂರು ವಾಸುದೇವ ರಂಗ ಭಟ್ ಮತ್ತು ವಿದ್ವಾನ್ ಶ್ರೀ ಸುಂಕದಗುಂಡಿ ಗಣಪತಿ ಭಟ್ ಭಾಗವಹಿಸಲಿರುವರು.

Read More

ಮಂಗಳೂರು : ಡಾ. ಮಾಲತಿ ಶೆಟ್ಟಿ ಮಾಣೂರು ಸಾರಥ್ಯದ ಸಾಹಿತ್ಯ ಪರ ಅಮೃತ ಪ್ರಕಾಶ ಪತ್ರಿಕೆ ಇದೀಗ 11ನೇ ವರುಷದ ಸಂಭ್ರಮದಲ್ಲಿದೆ. ಈಗಾಗಲೇ ಹಿರಿಯ ಕಿರಿಯ ಸಾಹಿತಿಗಳ ಕೃತಿಗಳನ್ನು ಪತ್ರಿಕೆ ವತಿಯಿಂದ ಸರಣಿ ಕೃತಿ ಬಿಡುಗಡೆ ಕಾರ್ಯಕ್ರಮದಡಿ 41 ಕೃತಿಗಳು ಬಿಡುಗಡೆಗೊಂಡಿವೆ. ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ಸಾಹಿತ್ಯ ಅಭಿರುಚಿವೆನ್ನುವ ವಿನೂತನ ಕಾರ್ಯಾಕ್ರಮ ಉಡುಪಿ, ದಕ್ಷಿಣ ಕನ್ನಡ, ಕಾಸರಗೋಡು ಸೇರಿದಂತೆ ಈಗಾಗಲೇ 101 ಯಶಸ್ವಿ ಕಾರ್ಯಯಕ್ರಮ ಮಾಡಿದೆ. ಈ ಕಾರ್ಯರಕ್ರಮ ನಿರಂತರ ಈ ವರುಷವೂ ನಡೆಯಲಿದೆ. ಹಿರಿಯ ಕಿರಿಯ ಸಾಹಿತಿಗಳ ಮನೆಗೆ ತೆರಳಿ, ಗುರುತಿಸಿ, ಗೌರವಿಸುವ ಕಾರ್ಯಕ ನಿರಂತರ ಹತ್ತು ವರುಷದಿಂದ ನಡೆಯುತ್ತಾ ಬಂದಿದೆ. ರಾಜ್ಯ ಮಟ್ಟದ ಲೇಖನ, ಕವನ, ಚುಟುಕು ಸ್ಪರ್ಧೆ ಮಾಡಿ ಬಹುಮಾನ ನೀಡುತ್ತಾ ಬಂದಿದೆ. ಇದೀಗ ಅಮೃತ ಪ್ರಕಾಶ ಪತ್ರಿಕೆ 11 ವರುಷ ಸವಿ ಸಂಭ್ರಮದ ವಿಶೇಷ ಸಂಚಿಕೆ ಬಿಡುಗಡೆ ಕಾರ್ಯ ಕ್ರಮ ಮಂಗಳೂರು ಪತ್ರಿಕಾ ಭವನದಲ್ಲಿ ದಿನಾಂಕ 22-07-2024ರಂದು ಬೆಳಗ್ಗೆ 10-30ಕ್ಕೆ ಬಿಡುಗಡೆಗೊಳ್ಳಲಿದೆ. ಕಾರ್ಯಈಕ್ರಮದ ಅಧ್ಯಕ್ಷತೆಯನ್ನು…

Read More

ಸುರತ್ಕಲ್ : ಕರ್ನಾಟಕ ಗಮಕ ಕಲಾ ಪರಿಷತ್ತು ಬೆಂಗಳೂರು, ಕರ್ನಾಟಕ ಗಮಕ ಕಲಾ ಪರಿಷತ್ತು ದ.ಕ. ಜಿಲ್ಲೆ, ಕರ್ನಾಟಕ ಗಮಕ ಕಲಾ ಪರಿಷತ್ತು ಮಂಗಳೂರು ಮತ್ತು ಸುರತ್ಕಲ್‌ ಗೋವಿಂದದಾಸ ಪದವಿ ಪೂರ್ವ ಕಾಲೇಜಿನ ಸಹಯೋಗದೊಂದಿಗೆ ಗೋವಿಂದ ದಾಸ ಪದವಿ ಪೂರ್ವ ಕಾಲೇಜಿನಲ್ಲಿ 9ನೇ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ‘ಗಮಕ ಕಲಾ ಸಮ್ಮೇಳನ’ವು ದಿನಾಂಕ 13-07-2024ರಂದು ನಡೆಯಿತು. ಈ ಸಮ್ಮೇಳನವನ್ನು ಜ್ಯೋತಿ ಪ್ರಜ್ವಲನೆ ಮಾಡಿ ಉದ್ಘಾಟನೆ ಮಾಡಿದ ಕರ್ನಾಟಕ ಗಮಕ ಕಲಾ ಪರಿಷತ್‌ನ ಅಧ್ಯಕ್ಷ ಎ.ವಿ. ಪ್ರಸನ್ನ ಮಾತನಾಡಿ “ಕಾವ್ಯದ ಜೊತೆಗೆ ಬೆಳೆದಿರುವ ಗಮಕ ಕಲೆ ಶ್ರೇಷ್ಠವಾದುದು. ಜನ ಸಾಮಾನ್ಯರಿಗೆ ಕಾವ್ಯಗಳನ್ನು ಪರಿಚಯಿಸಿ ನಾಡಿನ ಶ್ರೇಷ್ಠ ಸಂಸ್ಕೃತಿ ಪಸರಿಸುವ ಕಾರ್ಯವನ್ನು ಗಮಕಿಗಳು ಮಾಡುತ್ತಿದ್ದಾರೆ” ಎಂದು ನುಡಿದರು. ಸಮ್ಮೇಳನಾಧ್ಯಕ್ಷ ಗಮಕ ವಿದ್ವಾನ್ ಹೆಚ್. ಯಜ್ಞೇಶಾಚಾರ್ಯ ಹೊಸಬೆಟ್ಟು ಮಾತನಾಡಿ “ಗಮಕ ವಾಚನ ಮನೆಮನೆಗಳಲ್ಲಿ ಚಳುವಳಿಯ ರೂಪದಲ್ಲಿ ನಡೆಸಬೇಕಾಗಿದೆ. ಗಮಕ ಅಭಿಮಾನಿಗಳು ಈ ನಿಟ್ಟಿನಲ್ಲಿ ಶ್ರಮಿಸಬೇಕು. ಶ್ರೇಷ್ಠತರ ಕಲೆಯಾದ ಗಮಕವನ್ನು ಸಾಂಸ್ಕೃತಿಕ ಸಂಸ್ಥೆಗಳು ರಕ್ಷಿಸುವ ಕಾರ್ಯ…

Read More

ಕಲಬುರಗಿ : ರಂಗಸಂಗಮ ಕಲಾ ವೇದಿಕೆ ಕಲಬುರಗಿ ಇದರ ವತಿಯಿಂದ ಶ್ರೀ ಎಸ್.ಬಿ. ಜಂಗಮ ಶೆಟ್ಟಿ ಹಾಗೂ ಶ್ರೀಮತಿ ಸುಭದ್ರಾದೇವಿ ಜಂಗಮಶೆಟ್ಟಿ ರಾಜ್ಯ ಮಟ್ಟದ ರಂಗ ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 18-07-2024ರಂದು ಬೆಳಿಗ್ಗೆ 10-30 ಗಂಟೆಗೆ ಕಲಬುರಗಿಯ ಜಿಲ್ಲಾ ಕೋರ್ಟ್ ಎದುರುಗಡೆ ಇರುವ ವಿಶ್ವೇಶ್ವರಯ್ಯ ಭವನದಲ್ಲಿ ನಡೆಯಲಿದೆ. ಶ್ರೀ ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿಯ ಅಧ್ಯಕ್ಷರಾದ ಪೂಜ್ಯ ಶ್ರೀ ಸದಾಶಿವ ಸ್ವಾಮಿಗಳ ಸಾನಿಧ್ಯದಲ್ಲಿ ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷರಾದ ಶ್ರೀ ಕೆ.ವಿ. ನಾಗರಾಜ ಮೂರ್ತಿ ಇವರು ಪ್ರಶಸ್ತಿ ಪ್ರದಾನ ಮಾಡಲಿರುವರು. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಮಾನ್ಯ ಕುಲಪತಿಗಳಾದ ಪ್ರೊ. ಶರಣಪ್ಪ ವಿ. ಹಲಸೆ ಇವರು ಅಧ್ಯಕ್ಷತೆ ವಹಿಸಲಿದ್ದು, ಶ್ರೀ ಎಸ್.ಬಿ. ಜಂಗಮ ಶೆಟ್ಟಿ ಹಾಗೂ ಶ್ರೀಮತಿ ಸುಭದ್ರಾದೇವಿ ಜಂಗಮಶೆಟ್ಟಿ ಇವರ ಕುರಿತು ಹಿರಿಯ ಶ್ರೇಣಿ ನ್ಯಾಯಾಲಯದ ಆದೇಶ ಜಾರಿಕಾರರಾದ ಶ್ರೀ ಮಹಾದೇವ ಎಮ್. ಹಂಗರಗಿ ಇವರು ಮಾತನಾಡಲಿದ್ದಾರೆ. ರಂಗಸಂಗಮ ಕಲಾ ವೇದಿಕೆಯ ಅಧ್ಯಕ್ಷರಾದ ಶ್ರೀಮತಿ ಶಿವಗೀತಾ ಬಸವಪ್ರಭು…

Read More

ಕಾಸರಗೋಡು : ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನ ಕಾಸರಗೋಡು ವತಿಯಿಂದ ಕಾಸರಗೋಡಿನ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನದಲ್ಲಿ ‘ಸಿರಿಬಾಗಿಲು ಯಕ್ಷ ವೈಭವ’ವು ದಿನಾಂಕ 17-07-2024 ರಿಂದ 20-07-2024ರ ವರೆಗೆ ನಡೆಯಲಿದೆ. ಪ್ರಪ್ರಥಮ ಬಾರಿಗೆ ಹವ್ಯಾಸಿ ಕಲಾತಂಡಗಳ ಚಾರಿತ್ರಿಕ ಯಕ್ಷಗಾನ ಪ್ರದರ್ಶನ, ವಿಚಾರ ಸಂಕಿರಣ, ಭರತನಾಟ್ಯ, ಕನ್ನಡ ನಾಡಗೀತೆ ಗಾಯನ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮಗಳನ್ನು ಇದು ಒಳಗೊಂಡಿದೆ. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು ಇದರ ಸಹಯೋಗದೊಂದಿಗೆ ‘ಕರ್ನಾಟಕ ಸಂಭ್ರಮ-50ರ ಸವಿ ನೆನಪು 2023-24’ ಮತ್ತು ಕಲಾಪೋಷಕರ ಸಹಕಾರದೊಂದಿಗೆ ಈ ಕಾರ್ಯಕ್ರಮ ನಡೆಯಲಿದೆ. ದಿನಾಂಕ 17-07-2024 ರಂದು ಬೆಳಗ್ಗೆ 10.30ಕ್ಕೆ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸೋಮಣ್ಣ ಬೇವಿನಮರದ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮಕ್ಕೆ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದರು ಚಾಲನೆ ನೀಡುವರು. ಯಕ್ಷಗಾನ ಕಲಾಪೋಷಕ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜ, ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ್ ಮತ್ತೀಹಳ್ಳಿ, ಸದಸ್ಯ ಎ.…

Read More