Author: roovari

ಮಂಗಳೂರು : ಕಿಶೋರ ರಂಗ ಪಯಣ 2024, ಕಲಾಭಿ ಮಕ್ಕಳ ರಂಗಭೂಮಿ ಪ್ರಸ್ತುತ ಪಡಿಸಿದ ಭುವನ್ ಮಣಿಪಾಲ ರಂಗರೂಪ ಮತ್ತು ನಿರ್ದೇಶನದಲ್ಲಿ ‘ಮೊಗ್ಲಿ’ ನಾಟಕವು ದಿನಾಂಕ 06-07-2024ರಂದು ಸಂಜೆ 7-00 ಗಂಟೆಗೆ ಮಂಗಳೂರಿನ ಸಂತ ಅಲೋಶಿಯಸ್ (ಪರಿಗಣಿತ ವಿಶ್ವ ವಿದ್ಯಾನಿಲಯ) ಸಹೋದಯ ಸಭಾಂಗಣದಲ್ಲಿ ಪ್ರದರ್ಶನಗೊಂಡಿತು. ಆಂಗ್ಲ ಭಾಷೆಯ ರುಡ್ಯಾರ್ಡ್ ಕಿಪ್ಲಿಂಗ್ ಅವರ ಜಂಗಲ್ ಬುಕ್ ಈ ನಾಟಕದ ಕಥಾವಸ್ತುವಾಗಿ ಇದರ ಕಥಾ ನಾಯಕ ಮೊಗ್ಲಿಯ ಸುತ್ತ ಕಾಡಿನಲ್ಲಿ ನಡೆಯುವ ಸನ್ನಿವೇಶಗಳನ್ನು ಉಪಯೋಗಿಸಿ ಪ್ರಸ್ತುತ ಕಾಲಘಟ್ಟದ ಸಮಸ್ಯೆಗಳನ್ನು ತೋರಿಸುವ ವಿಶೇಷ ಪ್ರಯತ್ನವನ್ನು ಭುವನ್ ಮಣಿಪಾಲ್ ಇವರ ನಿರ್ದೇಶನದಲ್ಲಿ, ಕಲಾಭಿ ಮಕ್ಕಳ ರಂಗಭೂಮಿಯ ಮ್ಯಾನೇಜರ್ ಆದ ಧನುಷ್ ಕಾಮತ್ ಅವರ ನೇತೃತ್ವದಲ್ಲಿ ಈ ಪುಟ್ಟ ತಂಡ ಮಾಡಿದೆ. ಕಾರ್ಯಕ್ರಮದ ಅಭ್ಯಾಗತರಾಗಿ ಹೋಟೇಲ್ ದೀಪ ಕಂಫರ್ಟಿನ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀಮತಿ ಊರ್ಮಿಳಾ ರಮೇಶ್, ದೃಶ್ಯ ಕಲಾವಿದರಾದ ಶ್ರೀ ಕರಣ್ ಆಚಾರ್ಯ, ಅಮೃತ ವಿದ್ಯಾಲಯದ ಕ್ಯಾಂಪಸ್ ನಿರ್ದೇಶಕರಾದ ಶ್ರೀ ಯತೀಶ್ ಬೈಕಂಪಾಡಿ, ಕರ್ನಾಟಕ ಬ್ಯಾಂಕಿನ ಉಪ ಮಹಾಪ್ರಬಂಧಕರಾದ…

Read More

ಪುತ್ತೂರು : ವಾಹಿನಿ ಕಲಾ ಸಂಘ, ದರ್ಬೆ, ಪುತ್ತೂರು ಇದರ ವತಿಯಿಂದ ಕಥಾಸ್ಪರ್ಧೆ-2024 ಮತ್ತು ಕವನ ಸ್ಪರ್ಧೆ-2024ನ್ನು ಆಯೋಜಿಸಲಾಗಿದೆ. ನಿಯಮಗಳು : 1. ಬರಹಗಾರರು ತಮ್ಮ ಇಷ್ಟದ ವಿಷಯದಲ್ಲಿ ಕತೆ, ಕವನಗಳನ್ನು ಕಳುಹಿಸಬಹುದು. 2. ಕತೆ, ಕವನಗಳು ಸ್ವತಂತ್ರವಾಗಿರಬೇಕು. ಅನುವಾದ, ಅನುಕರಣೆಗಳಿಗೆ ಅವಕಾಶವಿಲ್ಲ. 3. ಕತೆ, ಕವನಗಳು ಈ ಹಿಂದೆ ಎಲ್ಲಿಯೂ ಪ್ರಕಟಗೊಂಡಿರಬಾರದು. ವಿದ್ಯುನ್ಮಾನ ಮಾಧ್ಯಮಗಳಲ್ಲೂ ಪ್ರಕಟಿಸಿರಬಾರದು. 4. ಯುವ ಮತ್ತು ಸಾರ್ವಜನಿಕ ಎಂಬ ಎರಡು ವಿಭಾಗಗಳಲ್ಲಿ ಸ್ಪರ್ಧೆ ಏರ್ಪಡಿಸಲಾಗುವುದು. ಸ್ಪರ್ಧೆಗಳಲ್ಲಿ ದೇಶವಿದೇಶಗಳಲ್ಲಿ ವಾಸಿಸುವ ಕನ್ನಡಿಗರೆಲ್ಲರೂ ಭಾಗವಹಿಸಬಹುದು. 16ರಿಂದ 25 ವರ್ಷ ವಯೋಮಿತಿಯೊಳಗಿನ ವ್ಯಕ್ತಿಗಳು ಯುವ ವಿಭಾಗಕ್ಕೆ ಸ್ಪರ್ಧಿಸಬಹುದು. ಅವರು ವಿದ್ಯಾರ್ಥಿಗಳೇ ಆಗಿರಬೇಕು ಎಂದಿಲ್ಲ. ವಯಸ್ಸಿನ ಸ್ಪಷ್ಟೀಕರಣಕ್ಕಾಗಿ, ಶಾಲಾ ಪ್ರಮಾಣಪತ್ರ/ ಆಧಾರ್/ ಆದಾಯ ತೆರಿಗೆ ಪಾನ್ ಕಾರ್ಡ್ ಇವುಗಳಲ್ಲಿ ಒಂದರ ಪ್ರತಿಯನ್ನು ಲಗತ್ತಿಸಬೇಕು. 5. ಕತೆಗಳು ಆರುನೂರು ಪದಗಳನ್ನು ಮೀರಬಾರದು. ಕವನಗಳು ಮೂವತ್ತು ಸಾಲುಗಳ ಒಳಗಿರಬೇಕು. ಕವನಗಳು ಛಂದೋಬದ್ಧವಾಗಿರಬೇಕು. ಷಟ್ಪದಿ, ಚೌಪದಿ, ಗಜಲ್, ಸಾನೆಟ್ ಇತ್ಯಾದಿಗಳಿಗೆ ಅವಕಾಶ ಇದೆ. ಚುಟುಕು, ಮುಕ್ತಕ,…

Read More

ಮಂಗಳೂರು : ಹಿರಿಯ ಜಾನಪದ ವಿದ್ವಾಂಸ, ಕವಿ – ಸಾಹಿತಿ ಡಾ. ವಾಮನ ನಂದಾವರ ಅವರಿಗೆ 80 ತುಂಬಿದ ಸಂದರ್ಭದಲ್ಲಿ ಅವರು ವಾಸ್ತವ್ಯವಿರುವ ಗುರುಪುರ ಬಳಿಯ ಶಿವರಾವ್ ನೂಯಿ ಫೌಂಡೇಶನ್ ಉಳಾಯಿಬೆಟ್ಟು ಇಲ್ಲಿನ ‘ಅವತಾರ್’ನಲ್ಲಿ ದಿನಾಂಕ 06-07-2024ರಂದು ಸರಳ ಸಮಾರಂಭವೊಂದು ಜರಗಿತು. ಫೌಂಡೇಶನ್ನಿನ ಆಡಳಿತ ಮಂಡಳಿ ಸಹಯೋಗದಲ್ಲಿ ಶ್ರೀಮತಿ ಚಂದ್ರಕಲಾ ನಂದಾವರ ಮತ್ತು ಮಕ್ಕಳು ಕಾರ್ಯಕ್ರಮವನ್ನು ಏರ್ಪಡಿಸಿದ್ದರು. ಕಾರ್ಯಕ್ರಮದ ಅಂಗವಾಗಿ ಆಹ್ವಾನಿತ ಅತಿಥಿಗಳ ಸಮ್ಮುಖದಲ್ಲಿ ಹಿರಿಯ ಕಲಾವಿದರಿಂದ ‘ಭೀಷ್ಮಪರ್ವ’ ಯಕ್ಷಗಾನ ತಾಳಮದ್ದಳೆ ಜರಗಿತು. ಡಾ. ಎಂ. ಪ್ರಭಾಕರ ಜೋಶಿ (ಭೀಷ್ಮ), ಭಾಸ್ಕರ ರೈ ಕುಕ್ಕುವಳ್ಳಿ (ಕೌರವ), ಜಿ.ಕೆ. ಭಟ್ ಸೇರಾಜೆ (ಶ್ರೀಕೃಷ್ಣ) ಮತ್ತು ನಿತ್ಯಾನಂದ ಕಾರಂತ ಪೊಳಲಿ (ಅರ್ಜುನ) ಅರ್ಥಧಾರಿಗಳಾಗಿದ್ದರು. ಭಾಗವತರಾಗಿ ಶಿವಪ್ರಸಾದ್ ಎಡಪದವು, ಹಿಮ್ಮೇಳದಲ್ಲಿ ಲಕ್ಷ್ಮೀಶ ಅಮ್ಮಣ್ಣಾಯ, ಕೃಷ್ಣ ಪ್ರಕಾಶ್ ಉಳಿತಾಯ ಮತ್ತು ಅಂಬಾತನಯ ಅರ್ನಾಡಿ ಭಾಗವಹಿಸಿದ್ದರು. ಪ್ರೊ. ಬಿ.ಎ. ವಿವೇಕ ರೈ ಸೇರಿದಂತೆ ಹಿರಿಯ ಸಾಹಿತಿಗಳು, ಗಣ್ಯರು ಮತ್ತು ಅವತಾರ್ ನಿವಾಸಿಗಳು ಉಪಸ್ಥಿತರಿದ್ದರು. ಪ್ರೊ. ಚಂದ್ರಕಲಾ ನಂದಾವರ ಸ್ವಾಗತಿಸಿ…

Read More

ಮಂಗಳೂರು : ಕುಡ್ಲ ಆರ್ಟ್ಸ್ ಫೆಸ್ಟಿವಲ್, ನೃತ್ಯಾಂಗಣ ಮತ್ತು ಅಮೃತ ವಿದ್ಯಾಲಯಂ ಇವುಗಳ ಸಹಯೋಗದಲ್ಲಿ ಪಸ್ತುತ ಪಡಿಸುವ ‘ಶರಸೇತು ಬಂಧನ’ ಹರಿಕಥೆಯು ದಿನಾಂಕ 14-07-2024ರಂದು ಸಂಜೆ ಗಂಟೆ 6-30ಕ್ಕೆ ಮಂಗಳೂರಿನ ಬೋಳೂರ್ ಅಮೃತ ವಿದ್ಯಾಲಯಂನಲ್ಲಿ ಪ್ರಸ್ತುತಗೊಳ್ಳಲಿದೆ. ಈ ಹರಿಕಥೆ ಕಾರ್ಯಕ್ರಮದಲ್ಲಿ ಹರಿದಾಸ ಶ್ರೇಣಿ ಮುರಳಿಯವರಿಗೆ ಶ್ರೀಪತಿ ಭಟ್ ಬೆಲ್ಲೇರಿ ಹಾರ್ಮೋನಿಯಂನಲ್ಲಿ ಮತ್ತು ಕೌಶಿಕ್ ಮಂಜನಾಡಿ ತಬಲಾದಲ್ಲಿ ಸಹಕರಿಸಲಿದ್ದಾರೆ.

Read More

ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಂಗಳೂರು, ‘ಕಾಂಜವೇ’ ಸಾಂಸ್ಕೃತಿಕ ವೇದಿಕೆ ಬೆಳ್ತಂಗಡಿ, ವಿದ್ಯಾಪ್ರಕಾಶನ ಅತ್ತಾವರ ಮಂಗಳೂರು ಹಾಗೂ ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.) ಇದರ ಸಹಯೋಗದೊಂದಿಗೆ ಮೂರು ಪುಸ್ತಕಗಳ ಲೋಕಾರ್ಪಣೆ ಕಾರ್ಯಕ್ರಮವು ದಿನಾಂಕ 12-07-2024ರಂದು ಮಂಗಳೂರಿನ ಕೆನರಾ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ. ಶೀನಾ ನಾಡೋಳಿಯವರ ‘ಬೊಳಂತ್ಯೆ-ಉರ್ಪೆಲ್’, ‘ಧರ್ಮದೃಷ್ಟಿ’ ಮತ್ತು ಪ್ಲೀಸ್ ನನ್ನ ಫೀಸ್ ಕೊಡಿ’ ಎಂಬ ಮೂರು ಕೃತಿಗಳನ್ನು ವಿಶ್ರಾಂತ ಉಪಕುಲಪತಿಗಳಾದ ಡಾ. ಕೆ. ಚಿನ್ನಪ್ಪ ಗೌಡ ಇವರು ಲೋಕಾರ್ಪಣೆಗೊಳಿಸಲಿದ್ದು, ಆಂಗ್ಲ ಭಾಷಾ ಪ್ರಾಧ್ಯಾಪಕರಾದ ಶ್ರೀ ನಂದಕಿಶೋರ್ ಎಸ್. ಮತ್ತು ಖ್ಯಾತ ರಂಗಕರ್ಮಿಯಾದ ಶ್ರೀ ಮೋಹನ್ ಚಂದ್ರ ಯು. ಇವರುಗಳು ಪುಸ್ತಕ ಪರಿಚಯ ಮಾಡಲಿದ್ದಾರೆ. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಶ್ರೀ ತಾರಾನಾಥ್ ಗಟ್ಟಿ ಇವರು ಅಧ್ಯಕ್ಷತೆ ವಹಿಸಲಿದ್ದು, ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ಅಧ್ಯಕ್ಷರಾದ ಶ್ರೀ ಗೋಪಾಲಕೃಷ್ಣ ಶೆಟ್ಟಿ, ಖ್ಯಾತ ಸಾಹಿತಿಗಳಾದ ಶ್ರೀ ರಘು ಇಡ್ಕಿದು, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರಾದ ಶ್ರೀ ದಯಾನಂದ…

Read More

ಕಾಂತಾವರ: ಯಕ್ಷದೇಗುಲ ಕಾಂತಾವರದ ವಾರ್ಷಿಕ ಆಟ ,ಕೂಟ, ಬಯಲಾಟ ಸಹಿತ 22 ನೇ ‘ಯಕ್ಷೋಲ್ಲಾಸ’  ಕಾರ್ಯಕ್ರಮವು ದಿನಾಂಕ 21-07-2024ನೇ ಭಾನುವಾರದಂದು ಶ್ರೀ ಕ್ಷೇತ್ರ ಕಾಂತಾವರದಲ್ಲಿ ನಡೆಯಲಿದೆ. ಅಂದು ಯಕ್ಷ ರಂಗದ ಸಿಡಿಲ ಮರಿ ಖ್ಯಾತಿವೆತ್ತ  ಪುತ್ತೂರು ದಿ. ಡಾ. ಶ್ರೀಧರ ಭಂಡಾರಿ  ಸಂಸ್ಮರಣಾ ಪ್ರಶಸ್ತಿಯನ್ನು ಧರ್ಮಸ್ಥಳ ಮೇಳದ ನಿವೃತ್ತ ಕಲಾವಿದ ನಿಡ್ಲೆ ಗೋವಿಂದ ಭಟ್ ಇವರಿಗೆ ಹಾಗೂ  ಸವ್ಯ ಸಾಚಿ ಕಲಾವಿದ ಬಾಯಾರು ದಿ. ಪ್ರಾಕಾಶ್ಚಂದ್ರ ರಾವ್ ಸಂಸ್ಮರಣಾ ಪ್ರಶಸ್ತಿಯನ್ನು  ಸುರತ್ಕಲ್ ಮೇಳದ ನಿವೃತ್ತ ಕಲಾವಿದ  ಪುತ್ತಿಗೆ ಕುಮಾರ ಗೌಡ ಇವರಿಗೆ ನೀಡಲು ಸಂಸ್ಥೆಯ ಆಯ್ಕೆ ಸಮಿತಿ  ತೀರ್ಮಾನಿಸಿದೆ.  ಅಂದು ನಡೆಯುವ ಸಭಾ ಸಂಭ್ರಮದಲ್ಲಿ  ಕ್ಷೇತ್ರದ ಧರ್ಮದರ್ಶಿ ಡಾ. ಜೀವಂಧರ ಬಲ್ಲಾಳರ ಅಧ್ಯಕ್ಷತೆಯಲ್ಲಿ ಕಾರ್ಕಳ ಕ್ಷೇತ್ರದ ಶಾಸಕರು ಹಾಗೂ ಮಾಜಿ ಸಚಿವರಾದ ವಿ. ಸುನಿಲ್ ಕುಮಾರ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಪ್ರಶಸ್ತಿಯು ನಗದು ಪುರಸ್ಕಾರವನ್ನು ಒಳಗೊಂಡಿದೆ ಎಂದು ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಮಹಾವೀರ ಪಾಂಡಿ ತಿಳಿಸಿದ್ದಾರೆ. ಪುತ್ತಿಗೆ ಕುಮಾರ ಗೌಡ ನಿಡ್ಲೆ…

Read More

ಮೈಸೂರು: ಮೈಸೂರಿನ ಗಾನಭಾರತಿ ಸಾಂಸ್ಕೃತಿಕ ವೇದಿಕೆಯ ಪ್ರಾಯೋಜಿತ ಕಾರ್ಯಕ್ರಮದಲ್ಲಿ ಮಂಗಳೂರಿನ ನಾದನೃತ್ಯ ಕಲಾಸಂಸ್ಥೆಯ ನಿರ್ದೇಶಕಿ ಡಾ. ಭ್ರಮರಿ ಶಿವಪ್ರಕಾಶರಿಂದ ‘ಕುಮಾರವ್ಯಾಸ ನೃತ್ಯಭಾರತ’ ಎಂಬ ಶಾಸ್ತ್ರೀಯ ಭರತನಾಟ್ಯ ಕಾರ್ಯಕ್ರಮವು ದಿನಾಂಕ 04-07-2024 ರಂದು ಮೈಸೂರಿನ ಕುವೆಂಪು ನಗರದಲ್ಲಿರುವ ವೀಣೆ ಶೇಷಣ್ಣ  ಭವನದಲ್ಲಿ ನಡೆಯಿತು. ಗಾನಭಾರತಿಯ ಅಧ್ಯಕ್ಷೆ ನಿವೃತ್ತ ಕನ್ನಡ ಪ್ರಾಧ್ಯಾಪಕಿ, ಸಂಗೀತಜ್ಞೆ, ವಿಮರ್ಶಕಿ ಡಾ. ರಮಾ ವಿ. ಬೆಣ್ಣೂರು ಮಾತನಾಡಿ “ಕುಮಾರವ್ಯಾಸ ಹಾಡಿದ ಕೃಷ್ಣ ಕಥೆಯ ನೃತ್ಯ ಪ್ರಸ್ತುತಿಯು ಕನ್ನಡನಾಡಿನ ಕಲಾಪ್ರಪಂಚದಲ್ಲಿ ಒಂದು ಅನನ್ಯ ಪ್ರಯತ್ನ. ಕನ್ನಡ ಸಾಹಿತ್ಯ ಕೃತಿ ಆಧಾರಿತ ಪ್ರಸ್ತುತಿಯನ್ನೇ ಪ್ರೋತ್ಸಾಹಿಸಲು ಬಯಸಿ ಪ್ರಾಯೋಜಿಸಿದ ಶ್ರೀ ರವಿ ಬಳೆ ದಂಪತಿಗಳ ಸಹೃದಯತನವು ಶ್ಲಾಘನೀಯ.” ಎಂದರು.

Read More

ತೆಕ್ಕಟ್ಟೆ: ಯಶಸ್ವೀ ಕಲಾವೃಂದ ಕೊಮೆ, ತೆಕ್ಕಟ್ಟೆ ಸಂಯೋಜನೆಯಲ್ಲಿ ‘ಸಿನ್ಸ್ 1999 ಶ್ವೇತಯಾನ-41’ ಕಾರ್ಯಕ್ರಮದಡಿಯಲ್ಲಿ ದಿಮ್ಸಾಲ್ ಫಿಲ್ಮ್ಸ್ ಹಾಗೂ ಧಮನಿ ಟ್ರಸ್ಟ್ ಸಹಕಾರದೊಂದಿಗೆ ಪ್ರಸಿದ್ಧ ಕಲಾವಿದರ ಕೂಡುವಿಕೆಯಲ್ಲಿ ‘ಶ್ರೀ ರಾಮ ಪಟ್ಟಾಭಿಷೇಕ’ ತಾಳಮದ್ದಳೆ ಕಾರ್ಯಕ್ರಮವು ದಿನಾಂಕ 07-07-2024 ರಂದು ತೆಕ್ಕಟ್ಟೆಯ ಪಟೇಲರ ಬೆಟ್ಟುವಿನ ಶಾಂತಾ ಸುಧಾಕರ ಶೆಟ್ಟಿ ಇವರ ಮನೆಯಂಗಳದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಸುಧಾಕರ ಶೆಟ್ಟಿ, ಶಾಂತಾ ಶೆಟ್ಟಿ, ಕುಮಾರಿ ಮಾನ್ವಿಯವರನ್ನು ಅಭಿನಂದಿಸಿ ಮಾತನಾಡಿದ ಬಸ್ರೂರು ಮಹಾಲಿಂಗೇಶ್ವರ ದೇಗುಲದ ಆಡಳಿತ ಧರ್ಮದರ್ಶಿ ಅಪ್ಪಣ್ಣ ಹೆಗಡೆ “ಧಾರ್ಮಿಕ ವಿಧಿ ವಿಧಾನಗಳನ್ನು ಅರಿತ ಸುಧಾಕರ ಶೆಟ್ಟಿಯವರು ಗುರು ಹಿರಿಯರ ಮೇಲೆ ಅಪಾರ ಗೌರವವನ್ನು ಹೊಂದಿದವರು. ಜೀವನದಲ್ಲಿ ಬಹು ಕಷ್ಟದಿಂದ ಏಳ್ಗೆಯನ್ನು ಸಾಧಿಸಿದವರು. ಅಪಾರ ಜನಸ್ನೇಹಿಯಾಗಿ ಸಮಾಜದಲ್ಲಿ ಚಿರಪರಿಚಿತರಾಗಿ ಸಾಂಸ್ಕೃತಿಕ ವಲಯ, ಸಮಾಜ ಸೇವಾ ಸಂಸ್ಥೆ ಹಾಗೂ ಧಾರ್ಮಿಕ ಕ್ಷೇತ್ರಗಳಿಗೆ ನೆರವನ್ನು ನೀಡುತ್ತಾ ಬೆಳೆದವರು. ಕಲಾಪ್ರೇಮಿಯಾಗಿರುವ ಇವರು ಗ್ರಹಪ್ರವೇಶ ಎನ್ನುವ ಧಾರ್ಮಿಕ ಕಾರ್ಯಕ್ರಮದ ಈ ಸಂದರ್ಭದಲ್ಲಿ ತಾಳಮದ್ದಳೆಯಂತಹ ಅಪೂರ್ವ ಕಾರ್ಯಕ್ರಮವನ್ನು ಏರ್ಪಡಿಸಿ, ಪ್ರೇಕ್ಷಕರಿಗೂ ಆಹ್ವಾನವಿತ್ತು ಸತ್ಕರಿಸುವ ಮನೋಭಾವ…

Read More

ಮಂಗಳೂರು : ಉರ್ವಸ್ಟೋರ್ ನಲ್ಲಿರುವ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ 1932ರಲ್ಲಿ ದಿ. ಹೂವಪ್ಪ ಮಡಿವಾಳರಿಂದ ಆರಂಭಗೊಂಡ ಶ್ರೀ ಶಾರದಾಂಬಾ ಯಕ್ಷಗಾನ ಮಂಡಳಿಯನ್ನು ದಶಕಗಳ ಕಾಲ ಮುನ್ನಡೆಸಿ ಕಲಾಸೇವೆ ಸಲ್ಲಿಸಿದ ಭಾಗವತ ಕೃಷ್ಣಪ್ಪ ಕರ್ಕೇರ ಇವರ ಸಂಸ್ಮರಣಾ ಕಾರ್ಯಕ್ರಮವು ದಿನಾಂಕ 03-07-2024ರ ಬುಧವಾರದಂದು ಮಂಗಳೂರಿನ ಉರ್ವಸ್ಟೋರ್ ನಲ್ಲಿರುವ ಶ್ರೀ ಮಹಾಗಣಪತಿ ದೇವಸ್ಥಾನದ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಶ್ರೀಮಹಾಗಣಪತಿ ದೇವಸ್ಥಾನ ಉರ್ವಸ್ಟೋರ್ ಇದರ ಅಧ್ಯಕ್ಷರಾದ ಸುರೇಂದ್ರ ರಾವ್ ಮಾತನಾಡಿ “ಅಪ್ರತಿಮ ಯಕ್ಷಗಾನ ಭಾಗವತ ದಿವಂಗತ ಡಿ. ಕೃಷ್ಣಪ್ಪ ಕರ್ಕೇರ ಅವರು ಯಕ್ಷಗಾನ ಕಲಾ ಸೇವೆಗೈದು, ಯಕ್ಷಲೋಕದಲ್ಲಿ ಅಚ್ಚಳಿಯದ ಸ್ಥಾನ ಪಡೆದಿದ್ದಾರೆ. ಅವರ ಕಲಾಸೇವೆಯನ್ನು ಮುಂದುವರಿಸುವ ನಿಟ್ಟಿನಲ್ಲಿ ಅವರು ಮುನ್ನಡೆಸಿದ ಶ್ರೀ ಶಾರದಾಂಬಾ ಯಕ್ಷಗಾನ ಮಂಡಳಿಯ ಯಕ್ಷಗಾನ ತಾಳಮದ್ದಲೆ ವಾರದ ಕೂಟಗಳಿಗೆ ಸಂಪೂರ್ಣ ಬೆಂಬಲ ನೀಡಬೇಕು.” ಎಂದು ಹೇಳಿದರು. ಶ್ರೀಶಾರದಾಂಬಾ ಯಕ್ಷಗಾನ ಮಂಡಳಿಯ ಗೌರವಾಧ್ಯಕ್ಷ ಉದ್ಯಮಿ ಕೆ. ಎಲ್. ಜಯಪ್ರಕಾಶ್ ರಾವ್, ಮಹಾಪೋಷಕ ಸಿ. ಎಸ್. ಭಂಡಾರಿ, ಕನ್ನಡ ಸಾಹಿತ್ಯ ಪರಿಷತ್‌ ನಿಕಟಪೂರ್ವ ಜಿಲ್ಲಾಧ್ಯಕ್ಷ…

Read More

ಕುಶಾಲನಗರ : ಕುಶಾಲನಗರದ ಕನ್ನಡ ಸಿರಿ ಸ್ನೇಹ ಬಳಗದ ವತಿಯಿಂದ ಆಯೋಜಿಸಿದ ಗ್ರೀಷ್ಮಸಿರಿ ಕವಿಗೋಷ್ಠಿ ಅಂಗವಾಗಿ ಉಳುವಂಗಡ ಕಾವೇರಿ ಉದಯ ಅವರ ‘ಕಲ್ಪನೆಯ ಹನಿಗಳು’ ಕವನ ಸಂಕಲನದ  ಲೋಕಾರ್ಪಣಾ ಸಮಾರಂಭವು ದಿನಾಂಕ 07-07-2024ರ ಭಾನುವಾರದಂದು ಕುಶಾಲನಗರ ತಾಲೂಕಿನ ಹಾರಂಗಿಯಲ್ಲಿ ನಡೆಯಿತು. ಕವನ ಸಂಕಲನ ಲೋಕಾರ್ಪಣೆಗೊಳಿಸಿ ಮಾತನಾಡಿದ ಸಾಹಿತಿ ಭಾರದ್ವಾಜ್ ಕೆ. ಆನಂದತೀರ್ಥ “ಕವಿಗಳನ್ನು ಸಮಾಜ ಗಮನಿಸುತ್ತಿರುತ್ತದೆ. ಹಾಗಾಗಿ ಕವನ ಬರೆಯುವವರು ಸಾಕಷ್ಟು ಹುಷಾರಾಗಿ ಇರಬೇಕು. ಕವನಗಳ ರಚನೆ ಬಹಳ ಸುಲಭ ಎಂದು ಅಂದು ಕೊಳ್ಳುತ್ತೇವೆ. ಆದರೆ ಇದರಷ್ಟು ಆಪಾಯಕಾರಿ ಕೆಲಸ ಯಾವುದೂ ಇಲ್ಲ. ಕವನ ಬರೆಯುವಾಗ ಯಾರೂ ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ. ಕವನ ಬರೆಯುವವರಿಗೆ ಅದರ ಪರಿಣಾಮಗಳ ಅರಿವು ಇರಬೇಕು. ಬರೆಯುವವರು ಓದುವ ಹವ್ಯಾಸ ಹೊಂದಿರಬೇಕು. ಹೆಚ್ಚು ಹೆಚ್ಚು ಓದಿ ಕಡಿಮೆ ಬರೆಯಬೇಕು. ಬರೆಯುವುದನ್ನು ಪರಿಣಾಮಕಾರಿಯಾಗಿ ಬರೆಯಬೇಕು. ಶಬ್ದಗಳನ್ನು ಚೆಂದವಾಗಿ ಜೋಡಿಸುವುದು ಕೂಡ ಒಂದು ಕಲೆ. ಈ ಕಲೆ ಕವಿಗಳಿಗೆ ಇರಬೇಕು. ಕವನ ಬರೆದವರು ಅದನ್ನು ತಾವೇ ಒಮ್ಮೆ ಓದಬೇಕು. ಅದನ್ನು ಒಳ್ಳೆಯ…

Read More