Author: roovari

ಕಾಸರಗೋಡು : ದೇಲಂಪಾಡಿಯ ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾಸಂಘದ ಕೀರಿಕ್ಕಾಡು ಸ್ಮಾರಕ ಸಭಾಭವನದಲ್ಲಿ ಮೊದಲಿಗೆ ಸ್ಥಳ ಸಾನಿಧ್ಯ ಶ್ರೀ ಗೋಪಾಲಕೃಷ್ಣ ದೇವರಿಗೆ ವಿಶೇಷ ಪೂಜಾರ್ಚನೆ ಸಲ್ಲಿಸಿದ ಬಳಿಕ ಕೀರಿಕ್ಕಾಡು ಸುಬ್ರಹ್ಮಣ್ಯ ಭಟ್ ಸಂಸ್ಮರಣೆ ಹಾಗೂ ಯಕ್ಷಗಾನ ತಾಳಮದ್ದಳೆಯು ದಿನಾಂಕ 28-09-2024ನೇ ಶನಿವಾರದಂದು ನಡೆಯಿತು. ಶಾಂತಕುಮಾರಿ ದೇಲಂಪಾಡಿ, ಉಷಾಕಾವೇರಿ ಗುಡ್ಡಡ್ಕ, ಪೂರ್ಣಿಮಾ ಬನಾರಿ, ಈಶ್ವರಿ ಪೃಥ್ವಿ ಅವರು ಭಗವದ್ಗೀತಾ ಪಾರಾಯಣವನ್ನು ನಡೆಸಿಕೊಟ್ಟರು. ನಂತರ ಪೂಜಾ ಸಿ.ಎಚ್. ದೇಲಂಪಾಡಿ ಇವರ ನಿರೂಪಣೆಯೊಂದಿಗೆ ಆರಂಭಗೊಂಡ ಸಂಸ್ಮರಣೆ ಸಭೆಯಲ್ಲಿ ಶ್ರೀಮತಿ ಜಯಂತಿ ಗುಂಡ್ಯಡ್ಕ ಪ್ರಾರ್ಥನಾಗೀತೆಯನ್ನು ಹಾಡಿದರು. ಶ್ರೀಮತಿ ಶ್ವೇತಾ ರಮೇಶ್ ಬೆಳ್ಳಿಪ್ಪಾಡಿ ಸ್ವಾಗತಿಸಿದರು. ಕಲಾ ಸಂಘದ ಅಧ್ಯಕ್ಷರಾದ ಹಿರಿಯ ಸಾಹಿತಿ ಡಾ. ರಮಾನಂದ ಬನಾರಿಯವರು ಪ್ರಾಸ್ತವಿಕ ನುಡಿಗಳೊಂದಿಗೆ ಸಂದರ್ಭೋಚಿತ ಮಾತುಗಳನ್ನಾಡಿ ಕಾರ್ಯಕ್ರಮಕ್ಕೆ ಚಾಲನೆಯನ್ನಿತ್ತರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ವಿದ್ವಾಂಸ ಅರ್ಥಧಾರಿ ವೆಂಕಟೇಶ್ ಕುಮಾರ್ ಉಳುವಾನ ಇವರು ಮಾತನಾಡುತ್ತಾ ಬನಾರಿ ಕಲಾ ಸಂಘದ ಚಟುವಟಿಕೆ ಮತ್ತು ನಿರಂತರತೆಯನ್ನು ಶ್ಲಾಘಿಸಿದರು. ಸಂಘದ ಹಿರಿಯ ಕಲಾವಿದ ಬೆಳ್ಳಿಪ್ಪಾಡಿ ಸದಾಶಿವ ರೈ…

Read More

ಮಂಗಳೂರು : ಮಂಗಳೂರಿನ ಕದ್ರಿ ದೇವಸ್ಥಾನದ ಆವರಣದಲ್ಲಿರುವ ‘ಕದಳಿ ಕಲಾ ಕೇಂದ್ರ’ ಇದರ ವತಿಯಿಂದ ‘ಕದಳಿ ದಶಾಹ’ ಮಕ್ಕಳ ಹಾಗೂ ಯುವ ತಂಡಗಳಿಂದ ಯಕ್ಷಗಾನ ಪ್ರದರ್ಶನವನ್ನು ದಿನಾಂಕ 03 ಅಕ್ಟೋಬರ್ 2024ರಿಂದ 12 ಅಕ್ಟೋಬರ್ 2024ರವರೆಗೆ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ರಾಜಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ದಿನಾಂಕ 03 ಅಕ್ಟೋಬರ್ 2024ರಂದು ಮಾಜಿ ರಾಜ್ಯಾಧ್ಯಕ್ಷರಾದ ಶ್ರೀ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಇವರ ಅಧ್ಯಕ್ಷತೆಯಲ್ಲಿ ಮೂಡಬಿದರೆಯ ಶ್ರೀಪತಿ ಭಟ್ ಇವರು ಈ ಕಾರ್ಯಕ್ರಮದ ಉದ್ಘಾಟನೆ ಮಾಡಲಿರುವರು. ಸಭಾ ಕಾರ್ಯಕ್ರಮದ ಬಳಿಕ ಉಡುಪಿ ಜಿಲ್ಲೆಯ ಪುತ್ತೂರಿನ ಶ್ರೀ ಭಗವತೀ ಯಕ್ಷ ಕಲಾ ಬಳಗ (ರಿ.) ಇವರಿಂದ ‘ನರಕಾಸುರ ಮೋಕ್ಷ’ ಯಕ್ಷಗಾನ ಪ್ರದರ್ಶನ ನಡೆಯಲಿದೆ. ದಿನಾಂಕ 04 ಅಕ್ಟೋಬರ್ 2024ರಂದು ಉಡುಪಿ ಜಿಲ್ಲೆಯ ಎಲ್ಲೂರಿನ ಶ್ರೀ ಪಂಚಾಕ್ಷರೀ ಮಕ್ಕಳ ಮೇಳ ಇವರಿಂದ ‘ಸ್ವಯಂ ಪ್ರಭಾ ಪರಿಣಯ’, ದಿನಾಂಕ 05 ಅಕ್ಟೋಬರ್ 2024ರಂದು ಕಾರ್ಕಳ ಲಕ್ಷ್ಮೀಪುರದ ಶ್ರೀ ಆದಿಶಕ್ತಿ ಮಹಾಲಕ್ಷ್ಮೀ ಯಕ್ಷಗಾನ ಮಂಡಳಿಯವರಿಂದ ‘ದಕ್ಷ ಯಜ್ಞ’, ದಿನಾಂಕ…

Read More

ಮಂಗಳೂರು : ಆಕೃತಿ ಆಶಯ ಪಬ್ಲಿಕೇಶನ್ಸ್ ಮಂಗಳೂರು ಇವರು ಮಂಗಳೂರು ವಿಶ್ವವಿದ್ಯಾನಿಲಯ ಕನ್ನಡ ಸಂಘ ಆಶ್ರಯದಲ್ಲಿ ಆಯೋಜಿಸಿದ ಸಾಹಿತಿ ಚಂದ್ರಹಾಸ ಕಣಂತೂರು ವಿರಚಿತ ‘ಪಡಿಯಕ್ಕಿ’- ತುಳುನಾಡಿನ ದೈವಾರಾಧನೆಯ ಕಥೆಗಳು ಕೃತಿಯ ಲೋಕಾರ್ಪಣಾ ಸಮಾರಂಭವು ದಿನಾಂಕ 28 ಸೆಪ್ಟೆಂಬರ್ 2024ರ ಶನಿವಾರದಂದು ಮಂಗಳೂರಿನ ವಿಶ್ವವಿದ್ಯಾನಿಲಯ ಕಾಲೇಜಿನ ಶಿವರಾಮ ಕಾರಂತ ಸಭಾ ಭವನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಕೃತಿ ಲೋಕಾರ್ಪಣೆಗೊಳಿಸಿದ ಬಂಟ್ವಾಳದ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಸಂಚಾಲಕ ಪ್ರೊ. ತುಕಾರಾಮ ಪೂಜಾರಿಯವರು ಮಾತನಾಡಿ “ಪಡಿಯಕ್ಕಿ ತುಳು ಬದುಕಿನ ವಿಶೇಷವಾದ ಪಡಿಯಚ್ಚು ಮೂಡಿಸಿದೆ. ಕನ್ನಡದ ಗಡಿಮೀರಿ ಈ ಕೃತಿ ಬೆಳೆಯಬೇಕು. ಆಂಗ್ಲ ಭಾಷೆಗೆ ತರ್ಜುಮೆಯಾಗುವ ಅಗತ್ಯವಿದೆ. ತುಳು ಭಾಷೆಯಲ್ಲಿರುವಷ್ಟು ಶ್ರೀಮಂತಿಕೆ ಜಗತ್ತಿನ ಬೇರೆ ಯಾವುದೇ ಭಾಷೆಯಲ್ಲಿ ಇರಲಾರದು. ಆದರೆ ಇಂದು ತುಳುವ ಬದುಕು ಸಂಪೂರ್ಣವಾಗಿ ಬದಲಾಗಿ ಬಿಟ್ಟಿದೆ. ಜಿಜ್ಞಾಸೆಗೆ ಅವಕಾಶ ಇರುವ ಅನೇಕ ವಸ್ತುಗಳು ಕೃತಿಯಲ್ಲಿವೆ.” ಎಂದರು. ಕವಿ ಮತ್ತು ನಿವೃತ್ತ ಉಪನ್ಯಾಸಕ ಕೆ. ಟಿ. ಆಳ್ವ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ…

Read More

ಮಂಗಳೂರು : ಕಾರ್ವಾಲ್ ಮನೆತನ ಮತ್ತು ಮಾಂಡ್ ಸೊಭಾಣ್ ಜಂಟಿಯಾಗಿ ನೀಡುವ 20ನೇ ಸಾಲಿನ ‘ಕಲಾಕಾರ್’ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಸಂಗೀತ, ನಾಟಕ, ನೃತ್ಯ ಅಥವಾ ಜನಪದ ಕಲೆಯಲ್ಲಿ ಮಹತ್ವದ ಯೋಗದಾನ ಮಾಡಿದ ಕರ್ನಾಟಕ ಮೂಲದ ಓರ್ವ ಕೊಂಕಣಿ ಮಾತೃಭಾಷಿಕ ಕಲಾವಿದರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗುವುದು. ಪುರಸ್ಕಾರವು ಸ್ಮರಣಿಕೆ, ಪ್ರಮಾಣ ಪತ್ರ ಹಾಗೂ 50,000 ರೂಪಾಯಿಗಳನ್ನು ಒಳಗೊಂಡಿರುತ್ತದೆ. ಈ ಪುರಸ್ಕಾರವನ್ನು ದಿನಾಂಕ 03 ನವಂಬರ್ 2024ರಂದು ಕಲಾಂಗಣದಲ್ಲಿ ನಡೆಯುವ 275ನೇ ತಿಂಗಳ ವೇದಿಕೆ ಕಾರ್ಯಕ್ರಮದಲ್ಲಿ ಹಸ್ತಾಂತರಿಸಲಾಗುವುದು. ಸಾಧನೆಯ ವಿವರಗಳು ಹಾಗೂ ಇತ್ತೀಚಿನ ಭಾವಚಿತ್ರದೊಡನೆ ಸ್ವತಹ ಕಲಾವಿದರು ಅಥವಾ ಇತರರು ಹೆಸರು ಸಲ್ಲಿಸಬಹುದು. ವಿಳಾಸ : ಮಾಂಡ್ ಸೊಭಾಣ್, ಕಲಾಂಗಣ್, ಶಕ್ತಿನಗರ, ಮಂಗಳೂರು 575016 ಇಮೇಲ್:[email protected] ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 23 ಅಕ್ಟೋಬರ್ 2024

Read More

ಮೈಸೂರು : ನಿರಂತರ ಫೌಂಡೇಶನ್ ಮೈಸೂರು ಆಯೋಜಿಸಿದ ‘ಸಹಜರಂಗ 2024’ ಕಾಲೇಜು ವಿದ್ಯಾರ್ಥಿಗಳಿಗೆ ರಂಗ ತರಬೇತಿ ಶಿಬಿರದ ಸಮಾರೋಪ ಸಮಾರಂಭ ಮತ್ತು ನಾಟಕ ಪ್ರದರ್ಶನ ದಿನಾಂಕ 29 ಸೆಪ್ಟೆಂಬರ್ 2024ರ ಭಾನುವಾರದ ಸಂಜೆ ಮೈಸೂರಿನ ಕಲಾಮಂದಿರ ಆವರಣದಲ್ಲಿರುವ ಕಿರುರಂಗಮಂದಿರದಲ್ಲಿ ನಡೆಯಿತು. ನಿರಂತರ ಫೌಂಡೇಶನ್ ಸಂಸ್ಥೆಯು ರಂಗಭೂಮಿ ಶಿಕ್ಷಣ, ಸಾಹಿತ್ಯ, ಸಂಸ್ಕೃತಿ, ಪರಿಸರ ಹಾಗೂ ಯುವ ಪೀಳಿಗೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಹಲವಾರು ಚಟುವಟಿಕೆಗಳನ್ನು ರೂಪಿಸುತ್ತಿದೆ. ಕಳೆದ ಎರಡು ದಶಕಗಳಿಂದಲೂ ಸ್ಪಷ್ಟ ಉದ್ದೇಶ ಮತ್ತು ಸಾಮಾಜಿಕ ಆಶಯದೊಂದಿಗೆ ಮುನ್ನಡೆಯುತ್ತಿರುವ ಈ ಸಂಸ್ಥೆ, ಕಾಲೇಜು ವಿದ್ಯಾರ್ಥಿಗಳಿಗಾಗಿ ಕಳೆದ 17 ವರ್ಷಗಳಿಂದ ಉಚಿತವಾಗಿ ‘ಸಹಜರಂಗ’ ರಂಗ ತರಬೇತಿ ಶಿಬಿರವನ್ನು ಆಯೋಜಿಸಿಕೊಂಡು ಬರುತ್ತಿದೆ.1 ತಿಂಗಳ ಕಾಲ ನಡೆಯುವ ಈ ಶಿಬಿರದಲ್ಲಿ ರಂಗಭೂಮಿ ಇತಿಹಾಸ, ರಂಗ ಸಂಗೀತ, ಪರಿಸರ, ನಟನೆ, ಸಮರಕಲೆ ಸೇರಿದಂತೆ ಸಾಹಿತ್ಯ, ಪ್ರಚಲಿತ ವಿದ್ಯಮಾನಗಳ ಬಗ್ಗೆ ತರಗತಿಗಳು ರೂಪುಗೊಂಡಿರುತ್ತವೆ. ನಾಡಿನ ಸಾಹಿತಿಗಳು, ವಿಷಯ ಪರಿಣಿತರು, ರಂಗ ನಿರ್ದೇಶಕರು, ಸಂಗೀತ ನಿರ್ದೇಶಕರು ಶಿಬಿರಾರ್ಥಿಗಳೊಂದಿಗೆ ಚರ್ಚೆ ಸಂವಾದಗಳಲ್ಲಿ ಪಾಲ್ಗೊಳ್ಳುತ್ತಾರೆ. ಹಾಗೆಯೇ ಪ್ರಸ್ತುತ…

Read More

ಮಡಿಕೇರಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ಚೇರಂಬಾಣೆಯ ಬೇಂಗ್ ನಾಡು ಕೊಡವ ಸಮಾಜ ಸಹಕಾರದಲ್ಲಿ ಕೊಡಗಿನ ಆದಿಕವಿ ಹರದಾಸ ಅಪ್ಪನೆರವಂಡ ಅಪ್ಪಚ್ಚ ಕವಿ ಅವರ 157ನೇ ಜನ್ಮದಿನದ ಪ್ರಯುಕ್ತ ‘ಕೊಡವ ಸಾಹಿತ್ಯ ನಾಳ್’ ಕಾರ್ಯಕ್ರಮ ದಿನಾಂಕ 27 ಸೆಪ್ಟೆಂಬರ್ 2024ರಂದು ಮಡಿಕೇರಿಯ ಚೇರಂಬಾಣೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಅಪ್ಪಚ್ಚ ಕವಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿದ ವೀರಾಜಪೇಟೆ ಶಾಸಕ ಎ. ಎಸ್. ಪೊನ್ನಣ್ಣ “ಕೊಡವ ಭಾಷೆ, ಸಂಸ್ಕೃತಿ, ಸಾಹಿತ್ಯ, ಕಲೆ ಬೆಳವಣಿಗೆಯಲ್ಲಿ ಕೊಡಗಿನ ಆದಿಕವಿ ಹರದಾಸ ಅಪ್ಪನೆರವಂಡ ಅಪ್ಪಚ್ಚ ಕವಿ ಅವರ ಶ್ರಮ ಮಹತ್ತರವಾಗಿದೆ. ಕೊಡವ ಸಾಹಿತ್ಯ ಬೆಳವಣಿಗೆಯಲ್ಲಿ ಇಂದಿನ ಮಕ್ಕಳು ಮನಸ್ಸು ಮಾಡಬೇಕಿದೆ. ಅಪ್ಪಚ್ಚ ಕವಿಯ ಆಶೋತ್ತರಗಳನ್ನು ಉಳಿಸಿ ಬೆಳೆಸುವಲ್ಲಿ ಕೊಡವ ಭಾಷಿಕರೆಲ್ಲರೂ ಒಂದುಗೂಡಬೇಕಿದೆ. ಕೊಡವ ಭಾಷಿಕರೆಲ್ಲರೂ ಒಟ್ಟುಗೂಡಿದಾಗ ಕೊಡವ ಸಂಸ್ಕೃತಿ, ಆಚಾರ, ವಿಚಾರಗಳು, ಸಾಹಿತ್ಯ ಉಳಿಸಿ ಬೆಳೆಸಲು ಸಾಧ್ಯ. ಕೊಡವ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ ಉಳಿದರೆ ಮಾತ್ರ ಕೊಡವ ಭಾಷಿಕ ಜನಾಂಗ…

Read More

ಮಂಗಳೂರು: ಆರ್ಟ್ ಕೆನರಾ ಟ್ರಸ್ಟ್ ಮಂಗಳೂರು, ಕವಿತಾ ಕುಟೀರ, ಪೆರಡಾಲ ಮತ್ತು ನವಜೀವನ ಹೈಸ್ಕೂಲ್ ಪೆರಡಾಲ, ಕಾಸರಗೋಡು ಇದರ ಹಿರಿಯ ವಿದ್ಯಾರ್ಥಿಗಳ ಸಹಯೋಗದೊಂದಿಗೆ ಉಡುಪಿ, ದ.ಕ. ಮತ್ತು ಕಾಸರಗೋಡು ಜಿಲ್ಲೆಗಳ ಬರಹಗಾರರ ಆಯ್ದ ಕತೆ ಕವನ ಸಂಕಲನ ಕವಿ ಕಯ್ಯಾರ ಸ್ಮೃತಿ ‘ಐಕ್ಯವೇ ಮಂತ್ರ’ ಪುಸ್ತಕದ ಲೋಕಾರ್ಪಣಾ ಸಮಾರಂಭವು ದಿನಾಂಕ 28 ಸೆಪ್ಟೆಂಬರ್ 2024ರ ಶನಿವಾರದಂದು ಮಂಗಳೂರಿನ ಬಿ. ಇ. ಎಂ. ಹೈಸ್ಕೂಲ್ ಸಭಾಂಗಣದಲ್ಲಿ ನಡೆಯಿತು. ಸಮಾರಂಭದ ಅಧ್ಯಕ್ಷತೆ ವಹಿಸಿದ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಎಂ. ಪಿ. ಶ್ರೀ ನಾಥ್ ಮಾತನಾಡಿ “ಕಾಸರಗೋಡು ಕರ್ನಾಟಕಕ್ಕೆ ಸೇರಬೇಕು ಎಂದು ತನ್ನ ಬದುಕಿನ ಕೊನೆಯವರೆಗೂ ಹೋರಾಟ ನಡೆಸಿದ ಕನ್ನಡದ ಮಹಾನ್ ಹೋರಾಟಗಾರ, ಸಾಹಿತಿ ಕಯ್ಯಾರ ಕಿಂಞಣ್ಣ ರೈ ಅವರ ಕನಸು ಕೊನೆಗೂ ಈಡೇರದೆ ಇರುವುದು ಇಂದಿಗೂ ಬೇಸರ ತರುವ ವಿಷಯ. ಕನ್ನಡಕ್ಕಾಗಿ ಹೋರಾಡಿದ ಅವರ ಹೋರಾಟ ಸದಾ ಸ್ಮರಣೀಯವಾದುದು. ಕಯ್ಯಾರರು ತುಳು, ಕನ್ನಡ ಸಾಹಿತ್ಯದ ಜೊತೆಗೆ ಕೃಷಿ…

Read More

ತೆಕ್ಕಟ್ಟೆ: ನವರಾತ್ರಿಯ ಸಂದರ್ಭಗಳಲ್ಲಿ ಬಹಳ ಹಿಂದಿನ ಕಾಲದಿಂದಲೂ ಯಕ್ಷಗಾನ ಪ್ರಕಾರವಾದ ಹೂವಿನಕೋಲು ಕಾರ್ಯಕ್ರಮವನ್ನು ಅಭಿಯಾನ ರೂಪದಲ್ಲಿ ಕಳೆದ ಹಲವು ವರ್ಷಗಳಿಂದ ಮನೆ ಮನೆಗೆ ತೆರಳಿ ಕಲೆಯನ್ನು ಉಳಿಯುವಂತೆ ಮಾಡಿದ ಹೆಗ್ಗಳಿಕೆ ಯಶಸ್ವೀ ಕಲಾವೃಂದ ಕೊಮೆಯದ್ದು. ಸಂಸ್ಥೆಯ ಬೆಳ್ಳಿ ಹಬ್ಬದ ಸಂಭ್ರಮದ ಈ ಸಂದರ್ಭದಲ್ಲಿ ನವರಾತ್ರಿಯ 03 ಅಕ್ಟೋಬರ್ 2024 ರಿಂದ 12 ರ ವರೆಗೆ ಕುಂದಾಪುರ, ಉಡುಪಿ, ಮಂಗಳೂರು ಬೈಂದೂರು, ಮಾರಣಕಟ್ಟೆ ಹೀಗೆ ಹಲವು ಕಡೆಗಳಲ್ಲಿ ಮಕ್ಕಳನ್ನು ನಾಲ್ಕು ತಂಡವಾಗಿ ‘ಮನೆ ಮನೆಗಳಲ್ಲಿ ಹೂವಿನಕೋಲು ಅಭಿಯಾನ’ ಕಾರ್ಯಕ್ರಮಕ್ಕಾಗಿ ಯಶಸ್ವೀ ಕಲಾವೃಂದದ ತಂಡಗಳು ಹೊರಡಲಿವೆ. ಮನೆಯ ಮನಗಳಲ್ಲಿ ಸಂತಸ, ಧನಕನಕ ಹೆಚ್ಚಲೆಂದು ಹಾರೈಸುವ ಚೌಪದಿಯ ಸಾಲನ್ನು ಗೊಣಗುತ್ತ ಸಾರುವ ಈ ಕಾರ್ಯಕ್ರಮವನ್ನು ಆಸಕ್ತರ ಮನೆಯಲ್ಲಿ ನಡೆಸಲಾಗುವುದು. ಕಾರ್ಯಕ್ರಮ ನೆರವೇರಿಸುವ ಅಪೇಕ್ಷೆ ಇದ್ದರೆ 9945947771 ಈ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಯಶಸ್ವೀ ಕಲಾವೃಂದದ ಅಧ್ಯಕ್ಷ ಸೀತಾರಾಮ ಶೆಟ್ಟಿ ಮಲ್ಯಾಡಿ ತಿಳಿಸಿದ್ದಾರೆ.

Read More

ಕಾರ್ಕಳ : ಕನ್ನಡ ಸಂಘ ಕಾಂತಾವರ, ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕಾರ್ಕಳ ಸಮಿತಿ ಮತ್ತು ಅಲ್ಲಮಪ್ರಭು ಪೀಠ ಕಾಂತಾವರ ಇವುಗಳ ಸಹಯೋಗದಲ್ಲಿ ‘ಅರಿವು ತಿಳಿವು’ ತಿಂಗಳ ಉಪನ್ಯಾಸ ಮಾಲಿಕೆಯು ದಿನಾಂಕ 28 ಸೆಪ್ಟೆಂಬರ್ 2024 ರಂದು ಕಾರ್ಕಳದ ಹೋಟೆಲ್ ಪ್ರಕಾಶ್ ಇದರ ಸಂಭ್ರಮ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಲು ಆಗಮಿಸಿದ ವೇದ ವಿದ್ವಾಂಸರಾದ ಡಾ. ಕಾರ್ತಿಕ್ ವಾಗ್ಳೆ ಪಂಚನಬೆಟ್ಟು ಇವರು ‘ಮಾಂಡೂಕ್ಯ ಉಪನಿಷತ್ತು’ ಇದರ ಕುರಿತು ಮಾತನಾಡುತ್ತಾ “ವೇದಾಂತ ದರ್ಶನಗಳ ಅಧ್ಯಯನದಿಂದಲೇ ನಾವು ಭಾರತೀಯ ಸಂಸ್ಕೃತಿಯ ಹಿರಿಮೆಯನ್ನು ಅರಿತುಕೊಳ್ಳಲು ಸಾಧ್ಯವಿದೆ. ಬ್ರಹ್ಮಸೂತ್ರ, ಭಗವದ್ಗೀತೆ ಮತ್ತು ಉಪನಿಷತ್ತುಗಳೆಂಬ ಪ್ರಸ್ಥಾನತ್ರಯಗಳಲ್ಲಿ ಉಪನಿಷತ್ತುಗಳು ವೇದದ ಭಾಗವೇ ಆಗಿರುವುದು. ಅರ್ಥವೇದದಲ್ಲಿ ಬರುವ ಮಾಂಡೂಕ್ಯ ಉಪನಿಷತ್ ಗಾತ್ರದ ದೃಷ್ಟಿಯಿಂದ ಹನ್ನೆರಡು ಮಂತ್ರಗಳುಳ್ಳ ಸಣ್ಣ ಉಪನಿಷತ್ತು ಆದರೂ ಮೋಕ್ಷಾಪೇಕ್ಷಿಗಳಿಗೆ ಇದು ಅತ್ಯಂತ ಮಹತ್ವಪೂರ್ಣವಾದ ಉಪನಿಷತ್ ಆಗಿದ್ದು ಬ್ರಹ್ಮ ಜ್ಞಾನವನ್ನು ಹೊಂದುವುದರಿಂದ ಲೌಕಿಕದ ಮೇಲಿನ ಮೋಹ ಕಳೆದು ಮೋಕ್ಷದೆಡೆಗೆ ಸಾಗುವ ಸಾಧನಾಮಾರ್ಗವನ್ನು ಇದು ವಿವರಿಸುತ್ತದೆ.” ಎಂದರು. ಡಾ. ನಾ.…

Read More

ಮಂಗಳೂರು : ಕಲ್ಕೂರ ಪ್ರತಿಷ್ಠಾನ ಹಾಗೂ ಕಾರಂತ ಹುಟ್ಟುಹಬ್ಬ ಆಚರಣಾ ಸಮಿತಿ 2024ನೇ ಸಾಲಿನ ‘ಕಾರಂತ ಪ್ರಶಸ್ತಿ’ಗೆ ಬಹುಶ್ರುತ ವಿದ್ವಾಂಸ ಎಂ. ಪ್ರಭಾಕರ ಜೋಶಿ ಅವರನ್ನು ಆಯ್ಕೆ ಮಾಡಿದೆ. ಅಕ್ಟೋಬರ್ 10ರಂದು ಮಂಗಳೂರಿನಲ್ಲಿ ಜರಗಲಿರುವ ಡಾ. ಕೋಟ ಶಿವರಾಮ ಕಾರಂತರ ಜನ್ಮ ದಿನೋತ್ಸವದ ಸಮಾರಂಭದಲ್ಲಿ ಈ ಪ್ರಶಸ್ತಿ ಪ್ರದಾನ ನಡೆಯಲಿದೆ. ಎಂ. ಪ್ರಭಾಕರ ಜೋಶಿ: ಯಕ್ಷಗಾನ ಕ್ಷೇತ್ರದಲ್ಲಿ ಬಹುಮುಖ್ಯ ಸಾಧನೆಗೈದಿರುವ ಡಾ. ಪ್ರಭಾಕರ ಜೋಷಿ ಅವರು ಕರ್ನಾಟಕದ ಬಹುಶ್ರುತ ವಿದ್ವಾಂಸರು. ಕಲಾವಿದ, ಸಂಶೋಧಕ, ಯಕ್ಷಗಾನ ಕೋಶದ ನಿರ್ಮಾಪಕ, ವಿಮರ್ಶಕ, ಸಂಪನ್ಮೂಲ ವ್ಯಕ್ತಿಯಾಗಿ ಅವರದ್ದು ಅಚ್ಚಳಿಯದ ಛಾಪು. 1946ರಲ್ಲಿ ಕಾರ್ಕಳ ತಾಲ್ಲೂಕಿನ ಮಾಳದಲ್ಲಿ ಜನಿಸಿದ ಪ್ರಭಾಕರಜೋಷಿ ಅವರದ್ದು ಸಾಹಿತ್ಯಿಕ-ಕಲಾಕುಟುಂಬ. ವಿದ್ಯಾರ್ಥಿ ದೆಸೆಯಿಂದಲೂ ಸಾಹಿತ್ಯ-ಸಂಸ್ಕೃತಿ ಪ್ರೀತಿ. ವಾಣಿಜ್ಯದಲ್ಲಿ ಸ್ನಾತಕೋತ್ತರ ಪದವಿ, ಹಿಂದಿ ಸಾಹಿತ್ಯ ರತ್ನ ಮತ್ತು ಯಕ್ಷಗಾನದಲ್ಲಿ ಪಿ. ಎಚ್. ಡಿ. ಪದವಿ ಪಡೆದಿರುವ ಇವರು ಮೂರು ದಶಕಗಳ ಕಾಲ ವಾಣಿಜ್ಯ ಪ್ರಾಧ್ಯಾಪಕರಾಗಿ ಹಾಗೂ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದಾರೆ. ಕನ್ನಡ, ಸಂಸ್ಕೃತ, ಮರಾಠಿ, ತುಳು,…

Read More