Subscribe to Updates
Get the latest creative news from FooBar about art, design and business.
Author: roovari
ಕಾಸರಗೋಡು : ಬೀರಂತಬೈಲು ಕನ್ನಡ ಭವನ ಮತ್ತು ಗ್ರಂಥಾಲಯ, ಕನ್ನಡ ಭವನ ಪ್ರಕಾಶನ ಸಂಸ್ಥೆ ಹಾಗು ಕೋಲಾರದ ಸ್ವರ್ಣಭೂಮಿ ಫೌಂಡೇಶನ್ ಜಂಟಿಯಾಗಿ ಕನ್ನಡ ಭವನ ಬಯಲು ರಂಗ ಮಂಟಪದಲ್ಲಿ ಆಯೋಜಿಸಿದ ‘ಕೇರಳ – ಕರ್ನಾಟಕ ಗಡಿನಾಡು ಕನ್ನಡ ಸಾಂಸ್ಕಂತಿಕ ಉತ್ಸವ’ ದಿನಾಂಕ 11-04-2024 ರಂದು ನಡೆಯಿತು. ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಎಡನೀರು ಮಠಾಧೀಶರಾದ ಶ್ರೀ ಸಚ್ಚಿದಾನಂದ ಭಾರತಿ ಶ್ರೀಪಾದಂಗಳವರು “ದಿನದಿಂದ ದಿನಕ್ಕೆ ಗಡಿನಾಡು ಕಾಸರಗೋಡಿನಲ್ಲಿ ಕನ್ನಡದ ಅಸ್ತಿತ್ವ ತೆರೆಮರೆಗೆ ಸರಿಯುತ್ತಿರುವ ಸಂದರ್ಭದಲ್ಲಿ ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿಯನ್ನು ಉಳಿಸಿ ಬೆಳೆಸಲು ಪ್ರತೀಯೊಬ್ಬ ಕನ್ನಡಿಗನೂ ಕಂಕಣಬದ್ಧರಾಗಬೇಕು. ಸಾಹಿತ್ಯ ಹಾಗೂ ಕಲೆಗಳಿಂದ ನಮ್ಮ ಸಂಸ್ಕೃತಿಯ ಸಂವರ್ಧನೆ ಮತ್ತು ಸಂರಕ್ಷಣೆ ಸಾಧ್ಯ. ಈ ನಿಟ್ಟಿನಲ್ಲಿ ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯದ ಕನ್ನಡ ಪರ ಚಟುವಟಿಕೆಗಳು ಇತರ ಸಂಘ ಸಂಸ್ಥೆಗಳಿಗೆ ಮಾದರಿ ಹಾಗು ಅನುಕರಣೀಯವಾಗಿದೆ.” ಎಂದು ಹೇಳಿದರು. ಕಾಯಕ್ರಮವನ್ನು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷರಾದ ಪ್ರದೀಪ್ ಕುಮಾರ್ ಕಲ್ಕೂರ ದೀಪ ಪ್ರಜ್ವಲನಗೈದು ಉದ್ಘಾಟಿಸಿದರು.…
ಉಡುಪಿ : ಮಹತೋಭಾರ ಶ್ರೀ ಶಂಕರನಾರಾಯಣ ದೇವಸ್ಥಾನ ಕೊಡವೂರು ಮತ್ತು ನೃತ್ಯನಿಕೇತನ ಕೊಡವೂರು ಜಂಟಿ ಆಶ್ರಯದಲ್ಲಿ ಆರಂಭಗೊಂಡಿದ್ದ ಏಕವ್ಯಕ್ತಿ ನೃತ್ಯ ಪ್ರದರ್ಶನಕ್ಕೊಂದು ವೇದಿಕೆ ‘ನೃತ್ಯ ಶಂಕರ’ ಸರಣಿ ಕಾರ್ಯಕ್ರಮವು ದಿನಾಂಕ 15-04-2024ರಂದು ಸಂಜೆ ಗಂಟೆ 6.25ಕ್ಕೆ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದ ವಸಂತ ಮಂಟಪದಲ್ಲಿ ನಡೆಯಲಿದೆ. ಈ ದಿನದ ಸರಣಿ ಕಾರ್ಯಕ್ರಮದಲ್ಲಿ ಬೆಂಗಳೂರಿನ ಅದಿತಿ ವಿ. ರಾವ್ ಇವರು ನೃತ್ಯ ಪ್ರದರ್ಶನ ನೀಡಲಿದ್ದಾರೆ. ಅದಿತಿ ವಿ. ರಾವ್ ಇವರು ಕರ್ನಾಟಕ ಕಲಾಶ್ರೀ ಡಾ. ಸುಪರ್ಣಾ ವೆಂಕಟೇಶ್ ಇವರಿಂದ 15 ವರ್ಷಗಳಿಂದ ಭರತನಾಟ್ಯದಲ್ಲಿ ತರಬೇತಿ ಪಡೆಯುತ್ತಿದ್ದು, ಶ್ರೀಮತಿ ಶ್ವೇತಾ ವೆಂಕಟೇಶ್ ಇವರಿಂದ ಕಥಕ್ ತರಬೇತಿ ಪಡೆಯುತ್ತಿದ್ದಾರೆ. ಕಂಸಾಳೆ, ಕೋಲಾಟ, ಕರಗ, ಪಟ್ಟದಕುಣಿತ, ಡೊಳ್ಳು ಕುಣಿತ, ಘೂಮರ್ಮತ್ತು ಇತರ ಹಲವು ಪ್ರಕಾರಗಳ ಜಾನಪದ ನೃತ್ಯದ ಅನುಭವ ಹೊಂದಿರುತ್ತಾರೆ. ಭರತನಾಟ್ಯದಲ್ಲಿ ಜೂನಿಯರ್ ಮತ್ತು ಸೀನಿಯರ್ ಹಾಗೂ ಕಥಕ್ ಜೂನಿಯರ್ ಪರೀಕ್ಷೆಯನ್ನು ಅತ್ಯುತ್ತಮ ಶ್ರೇಣಿಯಲ್ಲಿ ಪೂರ್ಣಗೊಳಿಸಿದ್ದು, ಭರತನಾಟ್ಯ ಪ್ರದರ್ಶನ ಕಲೆಗಳಲ್ಲಿ ಸ್ನಾತಕೋತ್ತರ ಪದವಿ ಪಡೆದಿರುತ್ತಾರೆ. ದಿನಾಂಕ 21-05-2022ರಂದು…
ಉದಯೋನ್ಮುಖ ಲೇಖಕಿ ವಿನಿಶಾ ಅವರ ‘ಎತ್ತಿನ ಗಾಡಿ ಎಕ್ಸ್ ಪ್ರೆಸ್ ಭಾಗ 2’ ಎಂಬ ಮಂದಾನಿಲ ಪ್ರಕಾಶನದಿಂದ ಪ್ರಕಟವಾದ ಕೃತಿಯ ವೈಶಿಷ್ಟ್ಯವೆಂದರೆ ಅದು ಒಳಗೂ ಹೊರಗೂ ಮೈತುಂಬಾ ಮುದ್ದಾಗಿ ಹೊದ್ದುಕೊಂಡ ತೀರ್ಥಹಳ್ಳಿಯ ಸುಂದರ ಆಡುಭಾಷೆ. ಬೆನ್ನುಡಿ, ರಕ್ಷಾ ಪುಟದ ಒಳಪುಟ ಎಲ್ಲವನ್ನೂ ಹಳ್ಳಿಗರ ಮಾತುಗಳಿಂದಲೇ ತುಂಬಿಸಲಾಗಿದೆ. ಒಳಪುಟಗಳ 51 ಲಲಿತ ಬರಹಗಳಿಗೆ ‘ಲಘು ಬರಹಗಳ ಕಂತೆ’ ಎಂಬ, ಒಳಗಿನ ಬರಹಗಳದ್ದೇ ಶೈಲಿಯ ಉಪಶೀರ್ಷಿಕೆ ನೀಡಲಾಗಿದೆ. ಈ 51 ಲೇಖನಗಳನ್ನು ಲೇಖಕಿ ಆತ್ಮಕಥನದ ಶೈಲಿಯಲ್ಲಿ ಬರೆದಿದ್ದಾರೆ. ತಮ್ಮ ದೈನಂದಿನ ಬದುಕಿನಲ್ಲಿ ತಾವು ಕಣ್ಣಾರೆ ಕಂಡ ಹಾಗೂ ಸ್ವತಃ ಅನುಭವಿಸಿದ ವಿಚಾರಗಳನ್ನೇ ಎತ್ತಿಕೊಂಡಿದ್ದಾರೆ. ಸೂಕ್ಷ್ಮ ಕಣ್ಣುಗಳ ಅವರ ತಂಗಿ ಮುದ್ದು ತೀರ್ಥಹಳ್ಳಿ ಅವರ ಎಲ್ಲಾ ಅನುಭವಗಳಲ್ಲಿ ಸದಾ ಅವರ ಜೊತೆಗೆ ಇರುತ್ತಾರೆ. ಪತಿ ಪ್ರಮೋದ್ ಕೂಡಾ ಇರುತ್ತಾರೆ. ಎದ್ರು ಮನೆಯವರೂ, ಪಕ್ಕದ ಮನೆಯವರೂ, ಹಿಂದಿನ ಮನೆಯವರೂ ಊರೂರು ಸುತ್ತುತ್ತಾ ಇದ್ದ ಕುಟುಂಬವಾಗಿದ್ದರಿಂದ ಅವರು ಹಿಂದೆ ಇದ್ದ ಹಳ್ಳಿಯವರೂ – ಹೀಗೆ ಎಲ್ಲರೂ ಇಲ್ಲಿ…
ಪುತ್ತೂರು : ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ಇದರ ದ್ವಿತೀಯ ವರ್ಷದ ಸಂಭ್ರಮ, ಕೃತಿ ಲೋಕಾರ್ಪಣೆ ಮತ್ತು ದಿವ್ಯಾಂಗ ಚೇತನ ಕವಿಗೋಷ್ಠಿಯನ್ನು ದಿನಾಂಕ 14-04-2023ರಂದು ಬೆಳಿಗ್ಗೆ 10-00 ಗಂಟೆಗೆ ಪುತ್ತೂರಿನ ಅನುರಾಗ ವಠಾರದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮವನ್ನು ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕದ ಅಧ್ಯಕ್ಷರಾದ ಶ್ರೀ ಪುತ್ತೂರು ಉಮೇಶ್ ನಾಯಕ್ ಇವರ ಅಧ್ಯಕ್ಷತೆಯಲ್ಲಿ ಪುತ್ತೂರಿನ ಕರ್ನಾಟಕ ಸಂಘದ ಅಧ್ಯಕ್ಷರಾದ ಹಾಗೂ ಹಿರಿಯ ಸಾಹಿತಿಗಳಾದ ಶ್ರೀ ಬಿ. ಪುರಂದರ ಭಟ್ ಇವರು ಉದ್ಘಾಟಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಸುನೀತಾ ಶ್ರೀರಾಮ್ ಕೊಯಿಲ ಇವರ ‘ಆಶಯ’ ಮತ್ತು ಕುಮಾರಿ ಪಾವನಿ ಬಿ. ನಲ್ಕ ಇವರ ‘ಸಪ್ತಮಿ’ ಎಂಬ ಕವನ ಸಂಕಲನಗಳ ಕೃತಿ ಲೋಕಾರ್ಪಣೆಗೊಳ್ಳಲಿದೆ. ಆಹ್ವಾನಿತ ವಿಶೇಷ ಚೇತನ ಪ್ರತಿಭೆಗಳು ‘ಕವಿಗೋಷ್ಠಿ’ ಪ್ರಸ್ತುತ ಪಡಿಸಲಿದ್ದು, ಈ ಕಾರ್ಯಕ್ರಮವು ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ನೇತೃತ್ವದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕ ಸಹಯೋಗದಲ್ಲಿ ನಡೆಯಲಿದೆ. ಮಿತ್ರಂಪಾಡಿ ಜಯರಾಮ ರೈ ಮಹಾ ಪೋಷಕತ್ವದಲ್ಲಿ ತಾಲೂಕು…
ಬಂಟ್ವಾಳ : ಸಿದ್ಧಕಟ್ಟೆಯ ಸರಕಾರಿ ಕಾಲೇಜಿನ ವಾರ್ಷಿಕ ಸಂಚಿಕೆ ‘ಸಿದ್ಧ ಸುಧೆ’ಯ ಲೋಕಾರ್ಪಣೆ ಸಮಾರಂಭವು ದಿನಾಂಕ 11-04-2024 ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ. ಅಜೆಕಳ ಗಿರೀಶ ಭಟ್ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸಂಚಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಬಂಟ್ವಾಳ ಸಮಿತಿಯ ಅಧ್ಯಕ್ಷ, ಮಂಗಳೂರು ಕಣಚೂರು ಆಯುರ್ವೇದ ಕಾಲೇಜಿನ ವೈದ್ಯಕೀಯ ಸಲಹೆಗಾರ, ಮಂಗಳಾ ಆಸ್ಪತ್ರೆಯ ಶಸ್ತ್ರ ಚಿಕಿತ್ಸಕ ಹಾಗೂ ಬರಹಗಾರ ಡಾ. ಸುರೇಶ ನೆಗಳಗುಳಿ “ವಿದ್ಯಾಭ್ಯಾಸದ ಜೊತೆ ಜೊತೆಗೇ ಸಾಹಿತ್ಯ, ಕಲೆ ಮುಂತಾದ ವಿಷಯಗಳಲ್ಲಿ ತೊಡಗಿಸಿಕೊಳ್ಳುವುದು ಕಲಿಕೆಯ ಅಭಿವೃದ್ಧಿಗೆ ಪೂರಕ. ಬರೆಹಗಳು ರಾಷ್ಟ್ರದ ಉನ್ನತಿಗೆ ಪೂರಕವಾಗಿದ್ದು ಎಷ್ಟೋ ಸಾಧನೆಗಳು ಕೇವಲ ಸಾಹಿತ್ಯದಿಂದ ಆದ ಉದಾಹರಣೆಗಳು ಸಾಕಷ್ಟಿವೆ . ಶಾಲಾ ಪತ್ರಿಕೆ ‘ಸಿದ್ಧಸುಧೆ’ಯೂ ಆ ನಿಟ್ಟಿನತ್ತ ಅಳಿಲ ಸೇವೆಯೇ ಸರಿ.” ಎಂದು ಹೇಳಿದರು. ಕಾರ್ಯಕ್ರಮದಲ್ಲಿ ರಾಷ್ಟ್ರ ನಿರ್ಮಾಣದಲ್ಲಿ ಸಾಹಿತ್ಯದ ಪಾತ್ರ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದ ಸರಕಾರೀ ಪ್ರಥಮ ದರ್ಜೆ ಕಾಲೇಜಿನ…
ಮಂಗಳೂರು : ಕಲಾಭಿ (ರಿ) ಮಂಗಳೂರು ಹಾಗೂ ಕೆನರಾ ಕಲ್ಚರಲ್ ಅಕಾಡೆಮಿಯು ಜಂಟಿಯಾಗಿ ಆಯೋಜಿಸಿರುವ ‘ಅರಳು 2024’ರ ಕಾರ್ಯಾಗಾರದ ಉದ್ಘಾಟನಾ ಕಾರ್ಯಕ್ರಮವು ದಿನಾಂಕ 11-04-2024ರಂದು ಮಂಗಳೂರಿನ ಕೆನರಾ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾದ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಮಂಗಳೂರಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಶ್ರೀ ರಾಜೇಶ್, ಕಲಾಭಿ ಸಂಸ್ಥೆಯ ಅಧ್ಯಕ್ಷರಾಗಿರುವ ಸುರೇಶ್ ನಾಯ್ಕ್, ಅರೆಹೊಳೆ ಪ್ರತಿಷ್ಠಾನದ ಅಧ್ಯಕ್ಷರಾಗಿರುವ ಅರೆಹೊಳೆ ಸದಾಶಿವ ರಾವ್, ಕೆನರಾ ಹೈಸ್ಕೂಲ್ ಅಸೋಸಿಯೇಷನ್ನಿನ ಪಿ. ಆರ್ . ಒ. ಉಜ್ವಲ್ ಮಲ್ಯ ಹಾಗೂ ಕೆನರಾ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಕವಿತಾ ಮೌರ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಲಾಭಿ ಸಂಸ್ಥೆಯ ಸ್ಥಾಪಕ ಹಾಗೂ ಕೆನರಾ ಕಲ್ಚರಲ್ ಅಕಾಡೆಮಿಯ ಸಂಯೋಜಕರಾದ ಉಜ್ವಲ್ ಯು.ವಿ. ಸಂಸ್ಥೆಯ ಪರಿಚಯವನ್ನು ಮಾಡಿದರು. ‘ಅರಳು 2024’ ಕಾರ್ಯಗಾರದ ನಿರ್ದೇಶಕರಾಗಿರುವ ಭುವನ್ ಮಣಿಪಾಲ್ ವಂದಿಸಿದರು. 10 ದಿನಗಳ ಈ ಕಾರ್ಯಾಗಾರದಲ್ಲಿ ನಿರ್ದೇಶಕರುಗಳಾಗಿ ರಾಜು…
ಉಡುಪಿ : ಭಾವನಾ ಪೌಂಡೇಶನ್ (ರಿ.) ಹಾವಂಜೆ ಹಾಗೂ ಭಾಸ ಗ್ಯಾಲರಿ ಮತ್ತು ಸ್ಟುಡಿಯೋ ಇವರ ವತಿಯಿಂದ ಗ್ರಾಮೀಣ ಭಾಗದಲ್ಲಿ ಸಂಯೋಜಿಸುತ್ತಿರುವ ‘ಬಾಲ ಲೀಲಾ’ ಚಿಣ್ಣರ ಬೇಸಿಗೆ ಶಿಬಿರವು ಶ್ರೀ ಮಹಾಲಿಂಗೇಶ್ವರ ದೇವಳದ ವಠಾರದಲ್ಲಿ ದಿನಾಂಕ 11-04-2024ರಂದು ಪ್ರಾರಂಭಗೊಂಡಿತು. ಈ ಶಿಬಿರವನ್ನು ಉದ್ಘಾಟನೆಗೊಳಿಸಿದ ಮಣಿಪಾಲದ ವೈದ್ಯೆ ಡಾ. ಮಾಧುರಿ ಭಟ್ ಇವರು “ಸ್ವಚ್ಛಂದದ ಪರಿಸರದಲ್ಲಿ ಭಾವನಾ ಫೌಂಡೇಶನ್ ಸಂಘಟಿಸುತ್ತಿರುವ ಬೇಸಿಗೆ ಶಿಬಿರವು ಬಹು ಮಹತ್ವಪೂರ್ಣವಾದುದು ಮತ್ತು ಇಂದಿನ ಆಧುನಿಕ ಜೀವನದ ನಡುವೆ ಸಾಂಪ್ರದಾಯಿಕ ಮೌಲ್ಯಗಳನ್ನು ಎತ್ತಿ ಹಿಡಿಯುವ ಪ್ರಯತ್ನ ನಿಜಕ್ಕೂ ಶ್ಲಾಘನೀಯ” ಎಂಬುದಾಗಿ ಅಭಿಪ್ರಾಯವಿತ್ತರು. ಮುಖ್ಯ ಅತಿಥಿಗಳಾಗಿ ಅಡ್ವೋಕೇಟ್ ಮುಗ್ಗೇರಿ ನಾಗರಾಜ ಭಟ್, ಭಾವನಾ ಫೌಂಡೇಶನ್ನ ಸ್ಥಾಪಕಾಧ್ಯಕ್ಷರಾದ ಯಕ್ಷಗುರು ಹಾವಂಜೆ ಮಂಜುನಾಥ ರಾವ್ ಹಾಗೂ ಶಿಬಿರ ಸಂಯೋಜಕರಾದ ಡಾ. ಜನಾರ್ದನ ಹಾವಂಜೆ, ವಿಶುರಾವ್ ಹಾವಂಜೆ ಹಾಗೂ ಉದಯ್ ಕೋಟ್ಯಾನ್ ಉಪಸ್ಥಿತರಿದ್ದರು. ಈ ಬೇಸಿಗೆ ಶಿಬಿರವು ನಾಲ್ಕು ದಿನಗಳ ಕಾಲ ನಡೆಯಲಿದ್ದು ಮಕ್ಕಳಲ್ಲಿ ಸೃಜನಶೀಲತೆಯನ್ನು ಬೆಳೆಸುವ ನಿಟ್ಟಿನಲ್ಲಿ ರೂಪಿಸಲಾಗಿದೆ. ಬಿಹಾರದ ಜನಪದ ಕಲೆಗಳ…
ಉಡುಪಿ : ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಸಹಕಾರದಲ್ಲಿ ಸುನಾಗ್ ಆಸ್ಪತ್ರೆಯ ಆಶ್ರಯದಲ್ಲಿ ‘ಸುನಾಗ್ ನವ್ಯಹಿತ ಬೇಸಿಗೆ ಶಿಬಿರ’ವು ಉಡುಪಿಯ ಕುಂಜಿಬೆಟ್ಟುವಿನಲ್ಲಿರುವ ಐಡನ್ ಸ್ಟೆ ಹೋಂ ನಲ್ಲಿ ದಿನಾಂಕ 11-04-2024ರ ಗುರುವಾರದಂದು ಉದ್ಘಾಟನೆಗೊಂಡಿತು. ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಅಧ್ಯಕ್ಷರಾದ ರವಿರಾಜ್ ಎಚ್.ಪಿ ಮಾತನಾಡಿ “ಎಳೆವೆಯಲ್ಲಿಯೇ ವಿದ್ಯಾರ್ಥಿಗಳು ಪಾಠದೊಂದಿಗೆ ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಸಿ ಕೊಳ್ಳಬೇಕು. ಕನ್ನಡ ಸಾಹಿತ್ಯ ಪರಿಷತ್ತು ಮಕ್ಕಳ ಶಿಬಿರಗಳಿಗೆ ಸಹಕಾರವನ್ನು ನೀಡುತ್ತಿದ್ದು, ಈ ಶಿಬಿರದ ಮೂಲಕ ಕನ್ನಡ ನಾಡು-ನುಡಿ ಸಂಸ್ಕೃತಿಯ ಅರಿವನ್ನು ಮಕ್ಕಳಿಗೆ ತಿಳಿಸುವ ಸಲುವಾಗಿ ನಾಡಿನ ಹಿರಿಯ ಸಂಪನ್ಮೂಲ ವ್ಯಕ್ತಿಗಳು ಆಗಮಿಸುತ್ತಿದ್ದು ಇದು ಒಂದು ಪರಿಪೂರ್ಣ ಶಿಬಿರವಾಗುತ್ತದೆ. ಆಟದ ಮೂಲಕ ಶಿಕ್ಷಣವನ್ನು ಈ ಶಿಬಿರದಲ್ಲಿ ಕಲಿಸಲಾಗುವುದು.” ಎಂದರು. ಶಿಬಿರವನ್ನು ನಾಡಿನ ಹೆಸರಾಂತ ಜಾದುಗಾರ ಪ್ರೊ. ಶಂಕರ್ ಉದ್ಘಾಟಿಸಿದರು. ಸಭಾ ಕಾರ್ಯಕ್ರಮದಲ್ಲಿ ಪರಿಸರ ಪ್ರೇಮಿ ತೇಜಸ್ವಿ ಆಚಾರ್ಯ, ಪ್ರಸಿದ್ಧ ಜಾದೂಗಾರ ಜೂ. ಶಂಕರ್ ಉಪಸ್ಥಿತರಿದ್ದರು. ಶಿಬಿರದ ನಿರ್ದೇಶಕ ಡಾ.…
ಕಟೀಲು : ಕಟೀಲು ದೇವಳ ಪ್ರಥಮ ದರ್ಜೆ ಕಾಲೇಜಿನಲ್ಲಿ ಭ್ರಾಮರೀ ಯಕ್ಷ ಝೇಂಕಾರ-2024 ಆಂತರ್ ಕಾಲೇಜು ತೆಂಕುತಿಟ್ಟು ಯಕ್ಷಗಾನ ಸ್ಪರ್ಧೆ ಸಮಾರೋಪ ಸಮಾರಂಭ ದಿನಾಂಕ 5-04-2024 ರಂದು ನಡೆಯಿತು. ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮೂಡಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ “ಭಾರತದಲ್ಲಿನ ಕೆಲವು ಜಾನಪದ ಕಲೆಗಳು ನಶಸಿ ಹೋಗುವತ್ತಿದ್ದು 500 ವರ್ಷಕ್ಕೂ ಮಿಕ್ಕಿ ಇತಿಹಾಸವಿರುವ ಯಕ್ಷಗಾನ ಕಲೆಯು ಹೊಸ ಹೊಸ ಕಲ್ಪನೆಯೊಂದಿಗೆ ಮೂಲ ಚೌಕಟ್ಟಿಗೆ ದಕ್ಕೆಯಾಗದಂತೆ ಬೆಳೆದಿದೆ.” ಎಂದು ಹೇಳಿದರು. ಹರಿನಾರಾಯಣ ದಾಸ ಆಸ್ರಣ್ಣ ಸಮಾರೋಪ ಭಾಷಣಗೈದರು. ದೇವಸ್ಥಾನದ ಆಡಳಿತ ಮಂಡಳಿಯ ಪ್ರತಿನಿಧಿ ಬಿಪಿನ್ ಚಂದ್ರ ಶೆಟ್ಟಿ ಕೊಡೆತ್ತೂರು ಗುತ್ತು, ಉದ್ಯಮಿ ಯಾದವ ಕೋಟ್ಯಾನ್ ಪೆರ್ಮುದೆ, ಪ್ರವೀಣ್ ಭಂಡಾರಿ ಕೊಡೆತ್ತೂರು ಗುತ್ತು, ಕಾಲೇಜಿನ ಹಿರಿಯ ಹಳೆ ವಿದ್ಯಾರ್ಥಿ ಗಂಗಾಧರ ದೇವಾಡಿಗ, ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಕಿರಣ್ ಕುಮಾರ್ ಶೆಟ್ಟಿ, ವಿದ್ಯಾರ್ಥಿ ಸಂಘದ ಅಧ್ಯಕ್ಷ ಕೆ. ದೀಪಕ್, ಕಾರ್ಯದರ್ಶಿ ಬಿ. ನಿಶಾ, ಪುಷ್ಪರಾಜ ಜೆ.…
ಕುಂದಾಪುರ : ಯಕ್ಷಗಾನ ಕಲಾ ಕೇಂದ್ರ ಹಂಗಾರಕಟ್ಟೆ ಐರೋಡಿ ಇವರ ವತಿಯಿಂದ ‘ನಲಿ ಕುಣಿ -2024’ ಯಕ್ಷಗಾನ ಅಭಿನಯ ಮತ್ತು ನೃತ್ಯ ತರಬೇತಿ ಶಿಬಿರವನ್ನು ದಿನಾಂಕ 13-04-2024ರಿಂದ 28-04-2024ರವರೆಗೆ ಹಂಗಾರಕಟ್ಟೆ ಐರೋಡಿಯ ಯಕ್ಷಗಾನ ಕಲಾ ಕೇಂದ್ರದಲ್ಲಿ ಆಯೋಜಿಸಲಾಗಿದೆ. ಈ ಶಿಬಿರದ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಲಾ ಕೇಂದ್ರದ ಅಧ್ಯಕ್ಷರಾದ ಆನಂದ ಸಿ. ಕುಂದರ್ ವಹಿಸಲಿದ್ದು, ಶಿಬಿರದ ಉದ್ಘಾಟನೆಯನ್ನು ಕುಂದಾಪುರದ ಉದ್ಯಮಿಗಳಾದ ಕೆ.ಆರ್. ನಾಯಿಕ್ ನೆರವೇರಿಸಲಿದ್ದಾರೆ. ಭಾರತ್ ಸಂಚಾರ್ ನಿಗಮದ ನಿವೃತ್ತ ಸಹಾಯಕ ಮಹಾ ಪ್ರಭಂದಕರಾದ ಸತ್ಯನಾರಾಯಣ ಪುರಾಣಿಕ್, ಪ್ರಾಚಾರ್ಯ ಮತ್ತು ಶಿಬಿರದ ನಿರ್ದೇಶಕರಾದ ಸದಾನಂದ ಐತಾಳ ಉಪಸ್ಥಿತರಿರುತ್ತಾರೆ. ಸುಮಾರು 80 ವಿದ್ಯಾರ್ಥಿಗಳು ಭಾಗವಹಿಸುತ್ತಿದ್ದು, ಶಿಬಿರದ ಸಹ ಶಿಕ್ಷಕರಾಗಿ ಗಣೇಶ ಚೇರ್ಕಾಡಿ ಮತ್ತು ಕೇಶವ ಆಚಾರ್ ಭಾಗವಹಿಸಲಿದ್ದಾರೆ.