Subscribe to Updates
Get the latest creative news from FooBar about art, design and business.
Author: roovari
ಕೊಪ್ಪಳ : ಇಲ್ಲಿನ ಶಿವಶಾಂತವೀರ ಮಂಗಲ ಭವನದಲ್ಲಿ 1858ರ ಸ್ವಾತಂತ್ರ್ಯ ಹೋರಾಟ ಕೊಪ್ಪಳ ಹುತಾತ್ಮರ ವೇದಿಕೆಯಲ್ಲಿ, ಗದಗಿನ ಲಡಾಯಿ ಪ್ರಕಾಶನ, ಹೊನ್ನಾವರ ತಾಲ್ಲೂಕು ಕವಲಕ್ಕಿಯ ಕವಿ ಪ್ರಕಾಶನ, ಧಾರವಾಡದ ಚಿತ್ತಾರ ಕಲಾ ಬಳಗ ಹಾಗೂ ಕೊಪ್ಪಳದ ಮೇ ಸಾಹಿತ್ಯ ಬಳಗದ ಸಹಯೋಗದಲ್ಲಿ ಆಯೋಜಿಸಿರುವ ಎರಡು ದಿನಗಳ ಮೇ ಸಾಹಿತ್ಯ ಮೇಳವು ಇಂದು ದಿನಾಂಕ 25-05-2024ರಂದು ಪ್ರಾರಂಭಗೊಂಡಿತು. ಈ ಬಾರಿ “ಸಂವಿಧಾನ ಭಾರತ ಧರ್ಮಕಾರಣ” ಎಂಬ ಆಶಯವಾಕ್ಯದೊಂದಿಗೆ ಮೇಳ ನಡೆಯುತ್ತಿದೆ. ಸಮಾಜದ ವಿವಿಧ ಅಲೆಮಾರಿ ಸಮುದಾಯಗಳಿಗೆ ಸೇರಿದ ಜನಸಾಮಾನ್ಯರಾದ ಬಸಮ್ಮ, ಜಂಬವ್ವ, ದುರ್ಗವ್ವ, ಶೋಭಾ ಮಠ, ಫಕೀರಜ್ಜ ಮತ್ತು ಮಕ್ಕಳು ಸಂವಿಧಾನದ ಪ್ರಸ್ತಾವನೆಯನ್ನು ಅತಿಥಿಗಳಿಗೆ ಸಲ್ಲಿಸಿ, ರಮೇಶ ಗಬ್ಬೂರ ನೇತೃತ್ವದಲ್ಲಿ ಎಲ್ಲರೂ ಸಂವಿಧಾನ ರಕ್ಷಣೆಯ ಪ್ರತಿಜ್ಞೆ ಸ್ವೀಕರಿಸುವ ಮೂಲಕ ಮೇಳಕ್ಕೆ ಚಾಲನೆ ದೊರೆಯಿತು. ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಗೋಪಾಲಗೌಡ ಅಧ್ಯಕ್ಷತೆ ವಹಿಸುವರು,ನವದೆಹಲಿಯ ರೈತ ಹೋರಾಟಗಾರ ರಾಕೇಶ್ ಟಿಕಾಯತ್,ಪಣಜಿಯ ಕೊಂಕಣಿ ಕವಿ,ಹೋರಾಟಗಾರ,ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ದಾಮೋದರ್ ಮೌಜೋ,ತೆಲಂಗಾಣದ ಕವಿ,ಹೋರಾಟಗಾರ್ತಿ ದಿಕ್ಸೂಚಿ ಮಾತುಗಳನ್ನಾಡಿದರು. ಬಸವರಾಜ ಹೂಗಾರ…
ಮಂಗಳೂರು : ವಿಶ್ರಾಂತ ಪ್ರಾಧ್ಯಾಪಕ, ಸಾಹಿತಿ ಮತ್ತು ಅರ್ಥಧಾರಿ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿಯವರಿಗೆ ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ‘ಬಿಲ್ವಶ್ರೀ’ ಸಭಾಂಗಣದಲ್ಲಿ ಕ್ಷೇತ್ರದ ಪತ್ತನಾಜೆ ಉತ್ಸವ ಸಂದರ್ಭ ಶ್ರೀ ಮಹಾಲಿಂಗೇಶ್ವರ ಯಕ್ಷಗಾನ ಕಲಾ ಸಂಘವು ಏರ್ಪಡಿಸಿದ ಹುಟ್ಟೂರ ಸಮ್ಮಾನ ಕಾರ್ಯಕ್ರಮವು ದಿನಾಂಕ 24-05-2024ರಂದು ನಡೆಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಹಿರಿಯ ಯಕ್ಷಗಾನ ಅರ್ಥಧಾರಿ ಮತ್ತು ವಿದ್ವಾಂಸ ಡಾ. ಎಂ. ಪ್ರಭಾಕರ ಜೋಶಿ ಇವರು ಮಾತನಾಡುತ್ತಾ “ವ್ಯಕ್ತಿಯೊಬ್ಬ ದೊಡ್ಡ ಶಕ್ತಿಯಾಗುವುದು ತನ್ನ ಸಾಧನೆಯ ಬಲದಿಂದ. ಭಾಸ್ಕರ ರೈ ಕುಕ್ಕುವಳ್ಳಿಯವರು ಕೇವಲ ಯಕ್ಷಗಾನಕ್ಕಾಗಿ ಸೀಮಿತರಾದವರಲ್ಲ. ಅವರು ಶಿಕ್ಷಣ ಸಂಪನ್ಮೂಲ ವ್ಯಕ್ತಿಯಾಗಿ, ಕವಿ – ಸಾಹಿತಿಯಾಗಿ, ಸಾಂಸ್ಕೃತಿಕ ಸಂಘಟಕರಾಗಿ ವಿಶೇಷ ಸಾಧನೆ ಮಾಡಿದ ಸಾಹಸಿ. ಕನ್ನಡ ಮತ್ತು ತುಳು ಭಾಷೆಗಳಲ್ಲಿ ಸುಮಾರು 30 ಕೃತಿಗಳನ್ನು ಹೊರ ತಂದ ಪ್ರಬುದ್ಧ ಲೇಖಕ. ದೇಶ ವಿದೇಶಗಳ ಪ್ರಮುಖ ಕಾರ್ಯಕ್ರಮಗಳಲ್ಲಿ ಕರಾವಳಿಯ ಸಾಂಸ್ಕೃತಿಕ ಹರಿಕಾರರಾಗಿ ಭಾಗವಹಿಸಿ ಹಲವು ಪ್ರಶಸ್ತಿಗಳಿಗೆ ಭಾಜನರಾದ ಭಾಸ್ಕರ ರೈ ಅವರು ನಿರಂತರ ಕ್ರಿಯಾಶೀಲರಾಗಿರುವ…
ಕೋಟ: ಕರ್ನಾಟಕ ರಾಜ್ಯ ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತೆ ಹಾಗೂ ಕುಂದಗನ್ನಡದ ಆಶುಕವಿಯಾದ ಸಾಲಿಗ್ರಾಮ ಕಾರ್ತಟ್ಟು ನಿವಾಸಿ ಕಮಲಾ ನಾಯರಿ ಅಸೌಖ್ಯದಿಂದ ದಿನಾಂಕ 24-05-2024ನೇ ಶುಕ್ರವಾರ ನಿಧನ ಹೊಂದಿದರು. ಅವರಿಗೆ 94ವರ್ಷ ವಯಸ್ಸಾಗಿತ್ತು. ಮೃತರು ಮೂವರು ಪುತ್ರರು ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ನೂರಾರು ಕುಂದಗನ್ನಡದ ಜಾನಪದ ಕಥೆಗಳು ಹಾಗೂ ಹಾಡುಗಳನ್ನು ಅಕ್ಷರ ಜ್ಞಾನ ಇಲ್ಲದ ಇವರು ಆಡುಮಾತಿನಲ್ಲಿ ಕಂಠಪಾಠದ ಮೂಲಕ ಕಟ್ಟಿಕೊಟ್ಟಿದ್ದರು. ಇವರ 130 ಕುಂದಗನ್ನಡದ ಕಥೆಗಳಿಗೆ ಬರಹರೂಪವನ್ನು ನೀಡಿ ಪುಸ್ತಕ ರೂಪದಲ್ಲಿ ಹೊರತರುವ ಕಾರ್ಯವನ್ನು ಹಿರಿಯ ಸಂಶೋಧಕಿ ಡಾ. ಗಾಯತ್ರಿ ನಾವಡ ಅವರು ಮಾಡಿದ್ದು, ಶೀಘ್ರದಲ್ಲೇ ಬಿಡುಗಡೆಯಾಗಲಿತ್ತು. ಸಾಹಿತ್ಯ ಕ್ಷೇತ್ರದಲ್ಲಿ ಇವರು ಮಾಡಿದ ಸಾಧನೆಯನ್ನು ಗುರುತಿಸಿ ರಾಜ್ಯ ಜಾನಪದ ಅಕಾಡೆಮಿ ಪ್ರಶಸ್ತಿ, ಉಡುಪಿ ಜಿಲ್ಲಾ ಕ. ಸಾ. ಪ. ಪುರಸ್ಕಾರ, ಗಿಳಿಯಾರು ಜನಸೇವಾ ಟ್ರಸ್ಟ್ನ ಕುಂದಾಪ್ರ ಕನ್ನಡ ದಿನಾಚರಣೆ ಪುರಸ್ಕಾರ ಸೇರಿದಂತೆ ಹಲವಾರು ಪ್ರಶಸ್ತಿ ಪುರಸ್ಕಾರಗಳು ಸಂದಿದೆ.
ಮೂಡುಬಿದಿರೆ : ಶಿವರಾಮ ಕಾರಂತ ಪ್ರತಿಷ್ಠಾನದ ವತಿಯಿಂದ ಕೊಡಮಾಡುವ ‘ಶಿವರಾಮ ಕಾರಂತ ಪ್ರಶಸ್ತಿ’ ಮತ್ತು ‘ಶಿವರಾಮ ಕಾರಂತ ಪುರಸ್ಕಾರ’ ಪ್ರದಾನ ಸಮಾರಂಭವು ದಿನಾಂಕ 29-05-2024ರಂದು ಸಂಜೆ 5-00 ಗಂಟೆಗೆ ಮೂಡುಬಿದಿರೆಯ ಸ್ವರಾಜ್ಯ ಮೈದಾನ ಕನ್ನಡ ಭವನದಲ್ಲಿ ನಡೆಯಲಿದೆ. ಈ ಕಾರ್ಯಕ್ರಮವನ್ನು ಮೂಡುಬಿದಿರೆಯ ಶಿವರಾಮ ಕಾರಂತ ಪ್ರತಿಷ್ಠಾನದ ಅಧ್ಯಕ್ಷೆ ಶ್ರೀಮತಿ ಜಯಶ್ರೀ ಅಮರನಾಥ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ಪುತ್ತೂರಿನ ಶ್ರೀ ಲಕ್ಷ್ಮೀಶ ತೋಳ್ಪಾಡಿಯವರು ಉದ್ಘಾಟನೆ ಮಾಡಲಿದ್ದಾರೆ. ಖ್ಯಾತ ಜಾನಪದ ವಿದ್ವಾಂಸರು ಸೃಜನಶೀಲ ಲೇಖಕರು ಆಗಿರುವ ಮೈಸೂರಿನ ಪ್ರೊ. ಕೃಷ್ಣಮೂರ್ತಿ ಹನೂರ, ಖ್ಯಾತ ಕವಿಗಳು ಬರಹಗಾರರು ಆಗಿರುವ ಬೆಂಗಳೂರಿನ ಡಾ. ಚಿನ್ನಸ್ವಾಮಿ ಮೂಡ್ನಾಕೂಡು, ಕನ್ನಡದ ಕೀಲಿಮಣೆ ವಿನ್ಯಾಸ ಸಂಶೋಧಿಸಿ ಕನ್ನಡ ಭಾಷೆಗೆ ವಿಶಿಷ್ಟ ಕೊಡುಗೆ ನೀಡಿದ ಉಡುಪಿಯ ಶ್ರೀ ಕೆ.ಪಿ. ರಾವ್ ಇವರುಗಳಿಗೆ ಹಾಗೂ ಸಂಸ್ಕೃತಿಯನ್ನು ಕಟ್ಟುವ ಕಾಯಕದಲ್ಲಿ ಅರ್ಪಣಾ ಭಾವದಿಂದ 75 ವರ್ಷಗಳ ಕಾಲ ಬದ್ಧತೆಯಿಂದ ಕೆಲಸ ಮಾಡುತ್ತಿರುವ ಹೆಗ್ಗೋಡಿನ ನೀನಾಸಂ ಸಂಸ್ಥೆಗೆ ‘ಶಿವರಾಮ ಕಾರಂತ ಪ್ರಶಸ್ತಿ’ಯನ್ನು ಮತ್ತು ‘ಶಿವರಾಮ ಕಾರಂತ ಪುರಸ್ಕಾರ’ವನ್ನು…
ಉಡುಪಿ : ಮಹತೋಭಾರ ಶ್ರೀ ಶಂಕರನಾರಾಯಣ ದೇವಸ್ಥಾನ ಕೊಡವೂರು ಮತ್ತು ನೃತ್ಯನಿಕೇತನ ಕೊಡವೂರು ಜಂಟಿ ಆಶ್ರಯದಲ್ಲಿ ಆರಂಭಗೊಂಡಿದ್ದ ಏಕವ್ಯಕ್ತಿ ನೃತ್ಯ ಪ್ರದರ್ಶನಕ್ಕೊಂದು ವೇದಿಕೆ ‘ನೃತ್ಯ ಶಂಕರ’ ಸರಣಿ ಕಾರ್ಯಕ್ರಮವು ದಿನಾಂಕ 27-05-2024ರಂದು ಸಂಜೆ ಗಂಟೆ 6.25ಕ್ಕೆ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದ ವಸಂತ ಮಂಟಪದಲ್ಲಿ ನಡೆಯಲಿದೆ. ಈ ದಿನದ ಸರಣಿ ಕಾರ್ಯಕ್ರಮದಲ್ಲಿ ಕುಮಾರಿ ಕೀರ್ತನ ಯು. ಭಟ್ ಇವರು ನೃತ್ಯ ಪ್ರದರ್ಶನ ನೀಡಲಿದ್ದಾರೆ. ಕು. ಕೀರ್ತನಾ ಯು. ಭಟ್ ಉಡುಪಿ ಸಮೀಪದ ಕೊರಂಗ್ರಪಾಡಿ ನಿವಾಸಿಯಾದ ಉದಯ ಭಟ್ ಹಾಗೂ ಜ್ಯೋತಿ ಯು. ಭಟ್ ಇವರ ಸುಪುತ್ರಿಯಾದ ಕೀರ್ತನಾ ಯು. ಭಟ್ ಪ್ರಸ್ತುತ ಎಂ.ಬಿ.ಎ. ಪದವಿಯನ್ನು ಪೂರ್ಣಪ್ರಜ್ಞಾ ಸಂಸ್ಥೆಯಲ್ಲಿ ನಡೆಸುತ್ತಿದಾಳೆ. ಬಾಲ್ಯದಿಂದಲೇ ಭರತನಾಟ್ಯ ಕ್ಷೇತ್ರದಲ್ಲಿ ಆಸಕ್ತಿ ಹೊಂದಿದ ಇವಳು ತನ್ನ 3ನೇ ತರಗತಿ ಇರುವಾಗಲೇ ಭರತನಾಟ್ಯ ಕ್ಷೇತ್ರಕ್ಕೆ ಕಾಲಿಟ್ಟವಳು. ತನ್ನ ನೆಚ್ಚಿನ ಗುರುಗಳಾದ ಸುಧೀರ್ ರಾವ್ ಕೊಡವೂರು ಹಾಗೂ ಮಾನಸಿ ಸುಧೀರ್ ಇವರ ಬಳಿ ಭರತನಾಟ್ಯವನ್ನು ಕಲಿತು ಇಂದಿಗೆ 13 ವರ್ಷವನ್ನು ಪೂರ್ಣಗೊಳಿಸಿದ್ದು,…
‘ಮೊದಲು ಹಿರಿಯ ಸಾಹಿತಿಗಳು ಬರೆದ ಒಳ್ಳೆಯ ಕೃತಿಗಳನ್ನು ಓದಿ. ಅನಂತರ ಬರೆಯಿರಿ’ ಎಂದು ನಾವು ತರುಣ ಬರಹಗಾರರಿಗೆ ಯಾವಾಗಲೂ ಸಲಹೆ ನೀಡುತ್ತಿರುತ್ತೇವೆ. ಇವತ್ತು ನಾವು ನೋಡುತ್ತಿರುವ ಅನೇಕ ತರುಣ ಲೇಖಕರಲ್ಲಿ ಒಂದು ರೀತಿಯ ಅಪಕ್ವತೆ, ಯಾಂತ್ರಿಕತೆ ಮತ್ತು ಅನುಭವದ ಕೊರತೆಯಿಂದ ಉಂಟಾಗುವ ಚರ್ವಿತ-ಚರ್ವಣಗಳನ್ನು ನಾವು ಕಾಣುತ್ತಿರುವುದು ಸುಳ್ಳಲ್ಲ. ಆದರೆ ಸಲಹೆಗಳನ್ನು ಬರೇ ಬಾಯಿ ಮಾತಿನಲ್ಲಿ ಹೇಳಿದರೆ ಸಾಕಾಗುವುದಿಲ್ಲ. ಇದನ್ನು ಮನಗಂಡ ಪ್ರಬುದ್ಧ ವಿಮರ್ಶಕ ನರೇಂದ್ರ ಪೈಯವರು ಜಾಗತಿಕ ಸಾಹಿತ್ಯದಲ್ಲಿ ಬಹಳಷ್ಟು ಹೆಸರು ಮಾಡಿ ಶ್ರೇಷ್ಠ ಲೇಖಕರು ಅನ್ನಿಸಿಕೊಂಡ ಹದಿನಾಲ್ಕು ಮಂದಿ ಲೇಖಕರ ಹದಿನಾರು ಕೃತಿಗಳನ್ನು ಓದಿ ತಮ್ಮ ಸೂಕ್ಷ್ಮ ಅವಲೋಕನದ ಮೂಲಕ ಅವುಗಳನ್ನು ವಿಶ್ಲೇಷಣೆ ಮತ್ತು ವಿಮರ್ಶೆಗೆ ಒಳಪಡಿಸಿ ‘ಸಾವಿರದ ಒಂದು ಪುಸ್ತಕ’ ಎಂಬ 180 ಪುಟಗಳ ಒಂದು ಕೃತಿಯನ್ನು ಕನ್ನಡ ಸಾಹಿತ್ಯ ಲೋಕಕ್ಕೆ ಸಮರ್ಪಿಸಿದ್ದಾರೆ. ಈ ಶೀರ್ಷಿಕೆಯನ್ನು ಮೊದಲು ನೋಡಿದಾಗ ನನಗೆ ಥಟ್ಟನೆ ಅರೇಬಿಯನ್ ನೈಟ್ಸ್ ನ ‘ಸಾವಿರದ ಒಂದು ರಾತ್ರಿ’ಯು ನೆನಪಾಯಿತು. ಅದರಲ್ಲಿ ಕ್ರೂರಿಯಾದ ರಾಜನ ಮನಃಪರಿವರ್ತನೆ ಮಾಡಲು…
ಪುತ್ತೂರು : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕ ಇದರ ವತಿಯಿಂದ ಶ್ರೀ ಜನಾರ್ದನದುರ್ಗ ಇವರ ‘ಶಾಂತೇಶ್ವರನ ವಚನಗಳು’ ಕೃತಿ ಲೋಕಾರ್ಪಣೆ ಹಾಗೂ ಕವಿಗೋಷ್ಠಿಯು ದಿನಾಂಕ 27-05-2024ರಂದು ಮಧ್ಯಾಹ್ನ 2-30 ಗಂಟೆಗೆ ಪುತ್ತೂರಿನ ಜೈನ ಭವನ ರಸ್ತೆಯ ಅನುರಾಗ ವಠಾರದಲ್ಲಿ ನಡೆಯಲಿದೆ. ಈ ಕಾರ್ಯಕ್ರಮವನ್ನು ಪುತ್ತೂರು ತಾಲೂಕು ಕ.ಸಾ.ಪ.ದ ಅಧ್ಯಕ್ಷರಾದ ಶ್ರೀ ಉಮೇಶ್ ನಾಯಕ್ ಇವರ ಅಧ್ಯಕ್ಷತೆಯಲ್ಲಿ ವಿಶ್ರಾಂತ ಪ್ರಾಂಶುಪಾಲರಾದ ಪ್ರೊ. ಝೇವಿಯರ್ ಡಿ’ಸೋಜ ಇವರು ದೀಪ ಪ್ರಜ್ವಲನೆ ಮಾಡಿ ಉದ್ಘಾಟಿಸಲಿದ್ದಾರೆ. ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ ಲೋಕೇಶ್ ಎಸ್.ಆರ್. ಇವರು ಕೃತಿ ಲೋಕಾರ್ಪಣೆ ಮಾಡಲಿದ್ದು, ಹಿರಿಯ ಸಾಹಿತಿಯಾದ ಡಾ. ವರದರಾಜ ಚಂದ್ರಗಿರಿ ಕೃತಿ ಪರಿಚಯ ಹಾಗೂ ಬೆಟ್ಟಂಪಾಡಿ ಕಾಲೇಜಿನ ಗ್ರಂಥಪಾಲಕರಾದ ಶ್ರೀ ರಾಮ ಕೆ. ಇವರು ಕೃತಿಕಾರರ ಪರಿಚಯ ಮಾಡಲಿರುವರು. ಇದೇ ಸಂದರ್ಭದಲ್ಲಿ ಸಾಹಿತಿ ಶ್ರೀ ಪಿ.ಎಸ್. ನಾರಾಯಣ ಭಟ್ ಇವರ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ ಹಾಗೂ ವಿಶೇಷ ಕಾರ್ಯಕ್ರಮವಾಗಿ ಶ್ರೀಮತಿ ನಂದಿನಿ ವಿನಾಯಕ್ ಇವರಿಂದ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಿಟ್ಟೂರು ಸಮೀಪದ ಅಳಗೋಡು ನಿವಾಸಿ ಶ್ರೀಯುತ ಅನಂತಮೂರ್ತಿ ಬಿ.ಟಿ ಹಾಗೂ ಶ್ರೀಮತಿ ಗೀತಾ ಅವರ ಮಗನಾಗಿ 1.05.1995 ರಂದು ಡಾ.ಶಿವಕುಮಾರ ಅಳಗೋಡು ಅವರ ಜನನ. ಕನ್ನಡ ಸಾಹಿತ್ಯದಲ್ಲಿ ದ್ವಿತೀಯ ರ್ಯಾಂಕಿನೊಂದಿಗೆ ಸ್ನಾತಕೋತ್ತರ ಪದವಿ ಹಾಗೂ ಹಂಪಿಯ ಕನ್ನಡ ವಿಶ್ವವಿದ್ಯಾಲಯದಿಂದ ‘ಯಕ್ಷಗಾನ ಪೂರ್ವರಂಗ ಅಧ್ಯಯನ’ ವಿಷಯಕ್ಕೆ ಪಿ.ಎಚ್ಡಿ ಪದವಿ ಇವರ ವಿದ್ಯಾಭ್ಯಾಸ. ಡಾ.ಶಿವಕುಮಾರ ಅಳಗೋಡು ಅವರು ಹವ್ಯಾಸಿ ಯಕ್ಷಗಾನ ಕಲಾವಿದ, ತಾಳಮದ್ದಳೆ ಅರ್ಥಧಾರಿ, ಛಂದೋಬದ್ದ ಯಕ್ಷ ಕವಿ, ಲೇಖಕರಾಗಿ ಗುರುತಿಸಿಕೊಂಡಿರುವ ಇವರು ಪ್ರಸ್ತುತ ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ಪದವಿ ವಿಭಾಗದ ಕನ್ನಡ ಉಪನ್ಯಾಸಕರಾಗಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಡಿ.ಎಸ್. ಸುಬ್ರಹ್ಮಣ್ಯ ಮೂರ್ತಿ, ನಿಟ್ಟೂರು ಇವರು ಯಕ್ಷಗಾನದ ಪ್ರಾಥಮಿಕ ಗುರು. ಬಳಿಕ ಮಂಜುನಾಥ ಕುಲಾಲ್ ಐರೋಡಿ, ಪ್ರಸಾದ್ ಕುಮಾರ್ ಮೊಗೆಬೆಟ್ಟು, ಕೃಷ್ಣಮೂರ್ತಿ ಭಟ್ ಬಗ್ವಾಡಿ ಅವರ ಬಳಿ ಯಕ್ಷಗಾನವನ್ನು ಅಭ್ಯಾಸ ಮಾಡಿರುತ್ತಾರೆ ಹಾಗೂ ಶಿಮಂತೂರು ನಾರಾಯಣ ಶೆಟ್ಟಿ ಅವರ ಪಟ್ಟದ ಶಿಷ್ಯರಾದ ಗಣೇಶ್ ಕೊಲೆಕಾಡಿ, ಡಿ.ಎಸ್ ಶ್ರೀಧರ್ ಇವರು ಛಂದಸ್ಸಿನ…
ಮೂಡುಬಿದಿರೆ : ಶಿವರಾಮ ಕಾರಂತ ಪ್ರತಿಷ್ಠಾನದ ವತಿಯಿಂದ ಕೊಡಮಾಡುವ ಈ ಬಾರಿಯ ಡಾ. ‘ಶಿವರಾಮ ಕಾರಂತ ಪುರಸ್ಕಾರ’ಕ್ಕೆ ನಾಲ್ವರು ಸಾಹಿತಿಗಳ ಕೃತಿಗಳನ್ನು ಆಯ್ಕೆ ಮಾಡಲಾಗಿದೆ. ಎಚ್.ಆರ್. ಲೀಲಾವತಿಯವರ ಆತ್ಮ ಕಥನ – ‘ಹಾಡಾಗಿ ಹರಿದಾಳೆ’, ಡಾ. ಬಿ. ಜನಾರ್ದನ ಭಟ್ ಇವರ ‘ವಿನೂತನ ಕಥನ ಕಾರಣ’, ಪ್ರೊ. ಎಚ್.ಟಿ. ಪೋತೆ ಇವರ ‘ಅಂಬೇಡ್ಕರ್ ಮತ್ತು…’, ಡಾ. ನಿತ್ಯಾನಂದ ಬಿ. ಶೆಟ್ಟಿಯವರ ‘ಮಾರ್ಗಾನ್ವೇಷಣೆ’ ಕೃತಿಗಳಿಗೆ ನೀಡಲಾಗಿದೆ. ಪುರಸ್ಕಾರವು ರೂ.10 ಸಾವಿರ ನಗದು ಗೌರವ ಸಂಭಾವನೆ ಹೊಂದಿದೆ ಎಂದು ಶಿವರಾಮ ಕಾರಂತ ಪ್ರತಿಷ್ಠಾನದ ಅಧ್ಯಕ್ಷೆ ಜಯಶ್ರೀ ಅಮರನಾಥ ಶೆಟ್ಟಿ ಮತ್ತು ಪ್ರಧಾನ ಕಾರ್ಯದರ್ಶಿ ಡಾ. ಜಯಪ್ರಕಾಶ್ ಮಾವಿನಕುಳಿ ತಿಳಿಸಿದ್ದಾರೆ. ಎಚ್.ಆರ್. ಲೀಲಾವತಿ ಇವರು ಆಕಾಶವಾಣಿ ಮೈಸೂರಿನ ‘ಎ’ ದರ್ಜೆಯ ಸಂಗೀತ ಸಂಯೋಜಕ ಕಲಾವಿದೆ. ಹಲವಾರು ಶ್ರೇಷ್ಟ ಸಂಗೀತ ಅಧ್ಯಾಪಕರಿಂದ ಶಾಸ್ತ್ರೀಯ ಸಂಗೀತದೊಂದಿಗೆ ಭಾವಗೀತೆ ಭಜನೆಗಳಂತಹ ಸಂಗೀತದ ಬೇರೆ ಬೇರೆ ವಿಭಾಗಗಳನ್ನು ಕಲಿತು ಕರಗತ ಮಾಡಿಕೊಂಡವರು. ಮೈಸೂರು ಬೆಂಗಳೂರು ಕಲ್ಕತ್ತ ಮಾತ್ರವಲ್ಲದೆ, ಭಾರತದಾದ್ಯಂತ ಬೇರೆ ಬೇರೆ…
ಮಂಗಳೂರು : ಎರಿಕ್ ಅಲೆಕ್ಸಾಂಡರ್ ಒಝೇರಿಯೊ ಇವರ ಜನುಮದ ಅಮೃತೋತ್ಸವ ಪ್ರಯುಕ್ತ, ಅವರು ಭಾಷೆ, ಸಂಗೀತ, ಕಲೆ, ಸಂಸ್ಕೃತಿ, ಸಂಘಟನೆ ಹೀಗೆ ಕೊಂಕಣಿಯ ಸಮಗ್ರ ಅಭಿವೃದ್ಧಿಗಾಗಿ ಮಾಡಿದ ಕಾರ್ಯಗಳನ್ನು ಗೌರವಿಸಲು, ಅವರಿಂದ ಪ್ರೇರಣೆ ಪಡೆದು, ಅವರ ಕೊಂಕಣಿ ಕೆಲಸಗಳ ಮುಂದುವರಿಕೆಯನ್ನು ಪ್ರೋತ್ಸಾಹಿಸಲು ಮಾಂಡ್ ಸೊಭಾಣ್ ‘ಎರಿಕ್ ಅಲೆಕ್ಸಾಂಡರ್ ಒಝೇರಿಯೊ ಅಮೃತೋತ್ಸವ ಸಂಶೋಧನಾ ಅನುದಾನ’ವನ್ನು ಘೋಷಿಸಿದೆ. ಈ ಅನುದಾನ ಒಂದು ಲಕ್ಷ ರೂಪಾಯಿಯನ್ನು ಒಳಗೊಂಡಿದ್ದು, ಮೂರು ತಿಂಗಳ ಕಾಲಾವಧಿಯಲ್ಲಿ, ಕೆಳಗೆ ನೀಡಿದ ವಿಷಯಗಳ ಪೈಕಿ ಒಂದರ ಮೇಲೆ ಅಧ್ಯಯನಾತ್ಮಕ ಸಂಶೋಧನೆ ನಡೆಸಬೇಕು. ಬೇರೆ ಬೇರೆ ಸಂಶೋಧನಾ ಅಧ್ಯಯನದ ಬಗ್ಗೆ ಈ ಅನುದಾನವನ್ನು ವಾರ್ಷಿಕವಾಗಿ ನೀಡಲಾಗುವುದು. ಕೊಂಕಣಿ ಭಾಷೆ-ಸಂಸ್ಕೃತಿಯ ಬಗ್ಗೆ ಅಧ್ಯಯನ ನಡೆಸುವ ಕ್ಷಮತೆಯುಳ್ಳ, ಯಾವುದೇ ಭಾಷೆ ಅಥವಾ ಕೊಂಕಣಿಯ ಯಾವುದೇ ಭಾಷಾ ಪ್ರಬೇಧದ ಜನರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31-07-2024. ಆಸಕ್ತಿಯುಳ್ಳವರು ತಮ್ಮ ಪರಿಚಯ ಹಾಗೂ ಸಂಶೋಧನೆಗೆ ಆಯ್ಕೆ ಮಾಡಿದ ವಿಷಯದ ಸಾರಾಂಶ ಬರೆದು ಮಾಂಡ್ ಸೊಭಾಣ್ ಮಿಂಚಂಚೆಗೆ…