Author: roovari

ಬೆಂಗಳೂರು : ಕಲೆ ಮತ್ತು ಸಾಹಿತ್ಯಕ್ಕೆ ಸಮರ್ಪಿತವಾದ ರಾಷ್ಟ್ರೀಯ ಸಂಸ್ಥೆ ‘ಸಂಸ್ಕಾರ ಭಾರತೀ ಕರ್ನಾಟಕ (ನೋಂ.)’ ಇದರ ವತಿಯಿಂದ ‘ಭರತಮುನಿ ಸಂಮಾನ 2024’ಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ನಾಟ್ಯಶಾಸ್ತ್ರ, ಕಾವ್ಯತತ್ವ ವಿವೇಚನೆಗಷ್ಟೇ ಸೀಮಿತವಾಗಿರದ, ನಾಟಕ ಕಲೆಯ ಸಂಕ್ಷಿಪ್ತ ವಿಶ್ವಕೋಶವೆನ್ನಿಸಿದ ‘ನಾಟ್ಯಶಾಸ್ತ್ರ’ದ ಕರ್ತೃ, ಭಾರತದ ಸುವಿಖ್ಯಾತ ಶಾಸ್ತ್ರಜ್ಞ ಶ್ರೀ ಭರತ ಮುನಿಯು ‘ರಂಗ ಪಿತಾಮಹ’ರೆಂಬುದಾಗಿಯೇ ಸರ್ವವಿದಿತ. ಕಲೆ ಮತ್ತು ಸಾಹಿತ್ಯಕ್ಕೆ ಸಮರ್ಪಿತವಾದ ರಾಷ್ಟ್ರೀಯ ಸಂಸ್ಥೆಯಾದ ಸಂಸ್ಕಾರ ಭಾರತೀ ಕಳೆದ ನಾಲ್ಕು ದಶಕಗಳಿಂದ ಕಲೆಯ ಮೂಲಕ ಅನೇಕ ಸಾಮಾಜಿಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಭಾರತೀಯ ಮೌಲ್ಯಗಳ ಆಧಾರದ ಮೇಲೆ ಸಾಮಾಜಿಕ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಪ್ರದರ್ಶನ ನೀಡುವ ಮೂಲಕ ಅನೇಕ ಯಶಸ್ಸನ್ನು ಸಾಧಿಸಿದವರಿಗೆ ಪ್ರತಿ ವರ್ಷದಂತೆ ಈ ವರ್ಷವೂ ಸಹ ಅಖಿಲ ಭಾರತ ಮಟ್ಟದಲ್ಲಿ ಪ್ರದರ್ಶನ ಕಲೆ ಮತ್ತು ಸಾಹಿತ್ಯದ ವಿಭಾಗಗಳಲ್ಲಿ ಸಾಧನೆ ಮಾಡಿದ ಇಬ್ಬರು ಕಲಾವಿದರಿಗೆ ಭರತಮುನಿ ಸಂಮಾನವನ್ನು ನೀಡಿ ಪುರಸ್ಕರಿಸಲಾಗುವುದು. ಪ್ರಶಸ್ತಿಯು ತಲಾ ಒಂದು ಲಕ್ಷದ ಐವತ್ತೊಂದು ಸಾವಿರ ರೂಪಾಯಿ…

Read More

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಕರಾವಳಿ ಸಂಗೀತ ಕಲಾವಿದರ ಒಕ್ಕೂಟದ 17 ನೇ ವಾರ್ಷಿಕೋತ್ಸವ ಮಂಗಳೂರಿನ ಪುರಭವನದಲ್ಲಿ ದಿನಾಂಕ 26 ಸೆಪ್ಟೆಂಬರ್ 2024 ರಂದು ನಡೆಯಿತು. ಇದರ ಪ್ರಯುಕ್ತ ಆಯೋಜಿಸಿದ ‘ಸ್ವರ ಕುಡ್ಲ ಸೀಸನ್ 6’ ಸಂಗೀತ ಸ್ಪರ್ಧೆಯಲ್ಲಿ ಮಂಗಳೂರಿನ ಆಯೂಷ್ ಪ್ರೇಮ್ ವಿಜೇತರಾಗಿ ಹೊರಹೊಮ್ಮಿದ್ದಾರೆ. ಸೈಂಟ್ ಅಲೋಶಿಯಸ್, ಕೊಡಿಯಾಲ್ ಬೈಲ್ ಇಲ್ಲಿನ 9ನೆಯ ತರಗತಿಯ ವಿದ್ಯಾರ್ಥಿಯಾದ ಆಯುಷ್ ಪ್ರೇಮ್, ಉಡುಪಿ ಮತ್ತು ದಕ್ಷಿಣ ಕನ್ನಡ ಎರಡೂ ಜಿಲ್ಲೆಗಳಿಂದ ಯಾವುದೇ ವಯೋಮಿತಿ ಇಲ್ಲದ 90 ಮಂದಿ ಸ್ಪರ್ಧಿಗಳಿಂದ ಕೂಡಿದ ಅತೀ ಕಠಿಣ ಸ್ಪರ್ಧೆಯಲ್ಲಿ ವಿಜೇತರಾಗಿರುವುದು ಗಮನಾರ್ಹ ಮತ್ತು ಶ್ಲಾಘನೀಯ. ಇದೇ ಸ್ಪರ್ಧೆಯಲ್ಲಿ ಸ್ನೇಹಿತ್ ಸುರೇಂದ್ರನ್ ಇವರು ರನ್ನರ್ ಅಪ್ ಹಾಗೂ ಮೂರನೇ ಬಹುಮಾನವನ್ನು ಮಹೇಂದ್ರ ಶೆಟ್ಟಿ ಮತ್ತು ಪ್ರಣತಿ ಕೂಳೂರು ಹಂಚಿಕೊಂಡರು. ಒಕ್ಕೂಟದ ಅಧ್ಯಕ್ಷರಾದ ದೀಪಕ್ ರಾಜ್ ಉಳ್ಳಾಲ್ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮವನ್ನು ಉದ್ಯಮಿ ಕುಕ್ಕುಂದೂರು ಚಂದ್ರಶೇಖರ ಶೆಟ್ಟಿ ಉದ್ಘಾಟಿಸಿದರು. ದೈಜಿವರ್ಲ್ಡ್ ಮೀಡಿಯಾ ಸ್ಥಾಪಕ ವಾಲ್ಟರ್…

Read More

ಬೆಂಗಳೂರು : ಅಖಿಲ ಕರ್ನಾಟಕ ಸುಗಮ ಸಂಗೀತ ಸಂಸ್ಥೆಗಳ ಒಕ್ಕೂಟ (ರಿ.) ಇದರ ವತಿಯಿಂದ ಬಿ.ಎಂ.ಶ್ರೀ. ಸ್ಮಾರಕ ಪ್ರತಿಷ್ಠಾನ ಬೆಂಗಳೂರು ಇವರ ಸಹಯೋಗದೊಂದಿಗೆ ಮತ್ತು ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಬೆಂಗಳೂರು ಇವರ ಸಹಕಾರದೊಂದಿಗೆ ‘ಹಾಡು ಹೊಸ ಹಾಡು’ ಹೊಸ ಸಂಯೋಜನೆಯ ಭಾವಗೀತೆಗಳ ಗಾಯನ ಸರಣಿ ಕಾರ್ಯಕ್ರಮವನ್ನು ದಿನಾಂಕ 28 ಸೆಪ್ಟೆಂಬರ್ 2024ರಂದು ಬೆಳಿಗ್ಗೆ 10-30 ಗಂಟೆಗೆ ಬೆಂಗಳೂರಿನ ಎನ್.ಆರ್. ಕಾಲೋನಿಯ ಬಿ.ಎಂ.ಶ್ರೀ. ಪ್ರತಿಷ್ಠಾನದಲ್ಲಿ ಹಮ್ಮಿಕೊಳ್ಳಲಾಗಿದೆ. ಇದೇ ಸಂದರ್ಭದಲ್ಲಿ ‘ಸುಗಮ ಸಂಗೀತ’ ಪಠ್ಯಕ್ರಮದ ಕರಡನ್ನು ವಿಶ್ವವಿದ್ಯಾಲಯಕ್ಕೆ ಸಲ್ಲಿಸುವ ಸಮಾರಂಭವು ನಡೆಯಲಿದೆ. ಭಾವಗೀತೆಗಳ ಗಾಯನ ಮತ್ತು ಸಮೂಹ ಗಾಯನಕ್ಕೆ ಪ್ರಮೋದ್ ಕೀಬೋರ್ಡ್, ಸುಧೀರ್ ತಬಲಾ ಮತ್ತು ಪವನ್ ರಿದಂನಲ್ಲಿ ಸಹಕರಿಸಲಿರುವರು.

Read More

ಮಂಗಳೂರು : ಯಕ್ಷಗಾನದ ಗುರು ದಂಪತಿ – ಶ್ರೀಮತಿ ಲೀಲಾವತಿ ಬೈಪಾಡಿತ್ತಾಯ ಹಾಗೂ ಶ್ರೀ ಹರಿನಾರಾಯಣ ಬೈಪಾಡಿತ್ತಾಯ ಹೆಸರಿನಲ್ಲಿ ನೀಡಲಾಗುವ 2024ನೇ ಸಾಲಿನ ಪ್ರತಿಷ್ಠಿತ ‘ಶ್ರೀ ಹರಿಲೀಲಾ ಯಕ್ಷನಾದ ಪ್ರಶಸ್ತಿ’ಯನ್ನು ಹಿರಿಯ ಯಕ್ಷಗಾನ ಗುರು, ಮದ್ದಳೆಗಾರರಾಗಿರುವ ಶ್ರೀ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಇವರಿಗೆ ನೀಡಿ ಗೌರವಿಸಲಾಗುತ್ತಿದೆ. ಪ್ರಶಸ್ತಿಯು ರೂ.10,078/- ನಗದು, ಬಿನ್ನವತ್ತಳೆ ಹಾಗೂ ಸ್ಮರಣಿಕೆಯನ್ನು ಒಳಗೊಂಡಿರುತ್ತದೆ. ಬೈಪಾಡಿತ್ತಾಯರು ಸ್ಥಾಪಿಸಿರುವ ಡಿ.ಜಿ. ಯಕ್ಷ ಫೌಂಡೇಶನ್ (ರಿ) ಸಹಯೋಗದಲ್ಲಿ ಶಿಷ್ಯವೃಂದದವರು ಏರ್ಪಡಿಸಿರುವ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಯಕ್ಷಕಲಾ ಪೊಳಲಿಯ ಸಂಪೂರ್ಣ ಸಹಕಾರದೊಂದಿಗೆ ದಿನಾಂಕ 13 ಅಕ್ಟೋಬರ್ 2024ರ ಭಾನುವಾರದಂದು ಮಧ್ಯಾಹ್ನ 2-00 ಗಂಟೆಯಿಂದ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ ಎಂದು ಡಿ.ಜಿ. ಯಕ್ಷ ಫೌಂಡೇಶನ್ ನಿರ್ದೇಶಕ ಅವಿನಾಶ್ ಬೈಪಾಡಿತ್ತಾಯ ತಿಳಿಸಿರುತ್ತಾರೆ. 2021, 2022 ಹಾಗೂ 2023ರಲ್ಲಿ ಅನುಕ್ರಮವಾಗಿ ಯಕ್ಷಗಾನ ರಂಗದ ದಿಗ್ಗಜ ಹಿಮ್ಮೇಳವಾದಕರಾದ ಶ್ರೀ ಲಕ್ಷ್ಮೀಶ ಅಮ್ಮಣ್ಣಾಯ, ಶ್ರೀ ಪೆರುವಾಯಿ ನಾರಾಯಣ ಭಟ್ ಹಾಗೂ ಶ್ರೀ ಮಿಜಾರು ಮೋಹನ ಶೆಟ್ಟಿಗಾರ್ ಇವರುಗಳಿಗೆ…

Read More

ಶಿವಮೊಗ್ಗ : ಮಾಣಿಕ್ಯ ಪ್ರಕಾಶನ (ರಿ.) ಹಾಸನ ಇದರ ವತಿಯಿಂದ ‘ರಾಜ್ಯ ಮಟ್ಟದ ಎಂಟನೇ ಕವಿಕಾವ್ಯ ಸಂಭ್ರಮ 2024’ವನ್ನು ದಿನಾಂಕ 28 ಸೆಪ್ಟೆಂಬರ್ 2024ರಂದು ಬೆಳಗ್ಗೆ 10-00 ಗಂಟೆಗೆ ಶಿವಮೊಗ್ಗದ ಸಹ್ಯಾದ್ರಿ ಕಲಾ ಕಾಲೇಜಿನ ಜಯಚಾಮರಾಜೇಂದ್ರ ಒಡೆಯರ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಮಾಣಿಕ್ಯ ಪ್ರಶಸ್ತಿ ಹಾಗೂ ಜನ್ನ ಕಾವ್ಯ ಪ್ರಶಸ್ತಿ ಪ್ರದಾನ ಮತ್ತು ಕವಿಗೋಷ್ಠಿ ನಡೆಯಲಿವೆ. ಸಾಹಿತಿ ಡಾ. ಎಚ್.ಕೆ. ಹಸೀನಾ ಇವರ ಅಧ್ಯಕ್ಷತೆಯಲ್ಲಿ ಪ್ರಸಿದ್ಧ ಸಾಹಿತಿ ಮತ್ತು ಸಂಸ್ಕೃತಿ ಚಿಂತಕರಾದ ಟಿ. ಸತೀಶ್ ಜವರೇಗೌಡ ಇವರು ಈ ಕಾರ್ಯಕ್ರಮದ ಉದ್ಘಾಟನೆ ಮಾಡಲಿರುವರು. ಉಡುಪಿಯ ಸಾಹಿತಿ ಪ್ರಭಾವತಿ ಶೆಡ್ತಿ ಕಾವಡಿ ಇವರು ಕಾರ್ಕಳದ ಸಾವಿತ್ರಿ ಮನೋಹರ್ ಇವರ “ನಮ್ಮ ಸಂಸಾರ ಆನ್ ಲೈನ್ ಅವಾಂತರ” ಕೃತಿಗೆ “ಪ್ರಭಾವತಿ ಶೆಡ್ತಿ ದತ್ತಿ – ನಾಟಕ ಮಾಣಿಕ್ಯ ಪ್ರಶಸ್ತಿ”, ಮೋಹನ ಎಂ.ಕೆ. ತುರುವೇಕೆರೆ ಇವರು ಕುಂದಾಪುರ ತಾಲೂಕಿನ ವೀಣಾ ರಾವ್ ಇವರ “ಮಧುರ ಮುರುಳಿ” ಕೃತಿಗೆ “ದಿ. ಮಹಾದೇವಮ್ಮ ಈ. ಕೃಷ್ಣಯ್ಯ ಸ್ಮಾರಕ…

Read More

ಮಂಗಳೂರು : ಕುದ್ಮುಲ್ ರಂಗರಾವ್‌ ಪುರಭವನದಲ್ಲಿ ಗಾಂಧಿ ವಿಚಾರ ವೇದಿಕೆ ನೇತೃತ್ವದಲ್ಲಿ ಆರ್.ಜಿ. ಫೌಂಡೇಶನ್ ಮತ್ತು ಅಹರ್ನಿಶಿ ಪ್ರಕಾಶನ ಶಿವಮೊಗ್ಗ ಸಹಯೋಗದಲ್ಲಿ ಮಂಗಳೂರಿನ ಲೇಖಕ, ಅಂಕಣಕಾರ ಎಂ.ಜಿ. ಹೆಗಡೆ ಇವರ ಆತ್ಮಕತೆ ‘ಚಿಮಣಿ ಬೆಳಕಿನಿಂದ’ ಕೃತಿ ಲೋಕಾರ್ಪಣೆ ಕಾರ್ಯಕ್ರಮವು ದಿನಾಂಕ 22 ಸೆಪ್ಟೆಂಬರ್ 2024ರಂದು ನಡೆಯಿತು. ಈ ಕಾರ್ಯಕ್ರಮದಲ್ಲಿ ಕೃತಿ ಬಿಡುಗಡೆಗೊಳಿಸಿದ ಹಿರಿಯ ಸಾಹಿತಿ ಕವಿ ಸುಬ್ರಾಯ ಚೊಕ್ಕಾಡಿ ಇವರು ಮಾತನಾಡಿ “ಆತ್ಮಕತೆ ಬರೆಯುವುದು ಸುಲಭದ ಕೆಲಸವಲ್ಲ. ವ್ಯಕ್ತಿಯ ಒಳ್ಳೆತನ ಮತ್ತು ಕೆಟ್ಟತನ ಎರಡನ್ನು ಮುಚ್ಚಿಡದೇ ನಿರ್ಭಿತಿಯಿಂದ ಬರೆಯುವ ಶಕ್ತಿ ಲೇಖಕನಿಗೆ ಬರಬೇಕು. ಇಲ್ಲದೇ ಹೋದರೆ ಆತ್ಮಕತೆಗಳು ಬರೀ ಹುಸಿ ಕೃತಿಯಾಗಿ ಬಿಡುವ ಭಯ ಇರುತ್ತದೆ. ಎಂ.ಜಿ. ಹೆಗಡೆ ಸತ್ಯವನ್ನು ಧೈರ್ಯವಾಗಿ ಆತ್ಮ ಕೃತಿಯ ಮೂಲಕ ಹೊರಗೆ ಇಟ್ಟಿದ್ದಾರೆ” ಎಂದು ಹೇಳಿದರು. ಚಿಂತಕ ಅರವಿಂದ ಚೊಕ್ಕಾಡಿ ಇವರು ಪುಸ್ತಕ ಪರಿಚಯ ಮಾಡುತ್ತಾ ಮಾತನಾಡಿ “ಆತ್ಮಕತೆ ಎನ್ನುವುದು ಜೀವಮಾನ ಉದ್ದಕ್ಕೂ ತನ್ನನ್ನು ಅವಲೋಕನ ಮಾಡುವ ಕೃತಿಯಾಗಿ ಬರಬೇಕು. ಎಂ.ಜಿ. ಹೆಗಡೆ ಸತ್ಯ ವಿಚಾರವನ್ನು…

Read More

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಸಂಸ್ಥೆ ಸ್ವಸ್ತಿಕ್ ಕಲಾ ಕೇಂದ್ರ (ರಿ.) ಜಲ್ಲಿಗುಡ್ಡೆ ಮಂಗಳೂರು ಇವರ ವತಿಯಿಂದ ಮತ್ತು ದಿ. ಪುಟ್ಟಣ್ಣ ಕುಲಾಲ್ ಪ್ರತಿಷ್ಠಾನ (ರಿ.) ಪಡೀಲ್ ಇವರ ಸಹಭಾಗಿತ್ವದಲ್ಲಿ ಯಕ್ಷರಂಗದ ಧೀಮಂತ ಪ್ರತಿಭೆ ‘ದಿ. ಬಾಬು ಕುಡ್ತಡ್ಕ ಪ್ರಶಸ್ತಿ’ ಪ್ರದಾನ ಸಮಾರಂಭವನ್ನು ದಿನಾಂಕ 29 ಸೆಪ್ಟೆಂಬರ್ 2024ರಂದು ಸಂಜೆ 4-00 ಗಂಟೆಗೆ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಮಹಾನಗರ ಪಾಲಿಕೆಯ ಸದಸ್ಯರಾದ ಶ್ರೀ ಕೆ. ಅಶ್ರಫ್ ಇವರ ಅಧ್ಯಕ್ಷತೆ ಹಾಗೂ ದಿ. ಪುಟ್ಟಣ್ಣ ಕುಲಾಲ್ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಅಣ್ಣಯ್ಯ ಕುಲಾಲ್ ಮತ್ತು ಆತ್ಮಶಕ್ತಿ ವಿವಿದೋದ್ದೇಶ ಸಹಕಾರಿ ಸಂಘ (ರಿ.) ಇದರ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್ ಇವರುಗಳ ಗೌರವ ಉಪಸ್ಥಿತಿಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಯಕ್ಷರಂಗದ ಹಿರಿಯ ಸಾಧಕ ಶ್ರೀ ಎಂ.ಕೆ. ರಮೇಶ್ ಆಚಾರ್ಯ ಇವರಿಗೆ 2024-25ರ ಪ್ರತಿಷ್ಠಿತ ‘ಬಾಬು ಕುಡ್ತಡ್ಕ ಪ್ರಶಸ್ತಿ’ ಪ್ರದಾನ ಮಾಡಲಾಗುವುದು. ಸಭಾ ಕಾರ್ಯಕ್ರಮದ ಬಳಿಕ ಪ್ರಮೀತ…

Read More

ಹಂಗಾರಕಟ್ಟೆ : ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಹಾಗೂ ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ ಗುಂಡ್ಮಿ ಸಹಯೋಗದೊಂದಿಗೆ ಆಯೋಜಿಸಿದ ಯಕ್ಷಗಾನ ಬಣ್ಣಗಾರಿಕೆ ಮತ್ತು ವೇಷಗಾರಿಕೆ ಕಾರ್ಯಾಗಾರದ ಉದ್ಘಾಟನಾ ಸಮಾರಂಭವು ದಿನಾಂಕ 14 ಸೆಪ್ಟೆಂಬರ್ 2024ರಂದು ಸಾಲಿಗ್ರಾಮದಲ್ಲಿರುವ ಯಕ್ಷಗಾನ ಕಲಾಕೇಂದ್ರದ ಸದಾನಂದ ರಂಗಮಂಟಪದಲ್ಲಿ ನಡೆಯಿತು. ಕಾರ್ಯಾಗಾರವನ್ನು ಉದ್ಘಾಟಿಸಿದ ಮಣಿಪಾಲ ಮಾಹೆ ಸಹಕುಲಾಧಿಪತಿ ಡಾ. ಎಚ್.ಎಸ್. ಬಲ್ಲಾಳ್ ಮಾತನಾಡಿ “ಯಕ್ಷಗಾನ ಕಲೆಯನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿ ಹಮ್ಮಿಕೊಳ್ಳುತ್ತಿರುವ ಪೂರಕ ಕಾರ್ಯಕ್ರಮಗಳು ಪ್ರಶಂಸನೀಯ.” ಎಂದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾದ ಡಾ. ತಲ್ಲೂರು ಶಿವರಾಮ ಶೆಟ್ಟಿ ಮಾತನಾಡಿ “ಮಕ್ಕಳಿಗೆ ಯಕ್ಷಗಾನ ಕಲೆಯ ಬಗ್ಗೆ ಆಸಕ್ತಿ ಮೂಡಿಸಿ ಭವಿಷ್ಯದ ಕಲಾವಿದರು ಹಾಗೂ ಕಲಾಪ್ರೇಮಿಗಳನ್ನು ರೂಪುಗೊಳಿಸಬೇಕು ಎನ್ನುವುದು ಅಕಾಡಮಿಯ ಆಶಯ. ಈ ನಿಟ್ಟಿನಲ್ಲಿ ಯಕ್ಷಗಾನದ ವೇಷಭೂಷಣಗಳು ಹಾಗೂ ಬಣ್ಣಗಾರಿಕೆ ಬಗ್ಗೆ ಮಕ್ಕಳಿಗೆ ಮತ್ತು ಕಲಾಸಕ್ತರಿಗೆ ಅರಿವು ಮೂಡಿಸಲು ಇಂಥ ಕಾಯಾಗಾರ ಆಯೋಜಿಸಲಾಗುತ್ತಿದೆ.” ಎಂದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ…

Read More

ಪುತ್ತೂರು: ಅಕ್ಷಯ ಎಜ್ಯುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಅದ್ವಯ ಸಾಹಿತ್ಯ ಸಂಘ ಮತ್ತು ಆಂತರಿಕ ಗುಣಮಟ್ಟದ ಭರವಸೆ ಕೋಶ ಸಹಭಾಗಿತ್ವದಲ್ಲಿ ‘ಸಾಹಿತ್ಯ ಚಿಲುಮೆ -2024’ ಶೀರ್ಷಿಕೆಯಡಿ ಭಾಷಾ ವಿಭಾಗದ ನೇತೃತ್ವದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ ದಿನಾಂಕ 19 ಸೆಪ್ಟೆಂಬರ್ 2024ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಸಂತ ಫಿಲೋಮಿನ ಕಾಲೇಜ್‌ನ ಉಪ ಪ್ರಾಂಶುಪಾಲ ಡಾ. ವಿಜಯ್ ಕುಮಾರ್ ಎಂ. ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಅಧ್ಯಕ್ಷರಾದ ಜಯಂತ್ ನಡುಬೈಲ್ ಮಾತನಾಡಿ “ವಿದ್ಯಾರ್ಥಿಗಳು ತಮ್ಮ ಅಭಿರುಚಿಗೆ ಹೊಂದಿಕೊಂಡು ತಮ್ಮನ್ನು ತಾವು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು.” ಎಂದು ಸಲಹೆ ನೀಡಿದರು. ಕಾಲೇಜಿನ ಪ್ರಾಂಶುಪಾಲ ಸಂಪತ್ ಕೆ. ಪಕ್ಕಳ ಮಾತನಾಡಿದರು. ಕನ್ನಡ ವಿಭಾಗದ ಸಹ ಪ್ರಾಧ್ಯಾಪಕ ದಯಾನಂದ ಸುವರ್ಣ ವಿವಿಧ ಸ್ಪರ್ಧೆಗಳ ವಿಜೇತರ ಪಟ್ಟಿಯನ್ನು ವಾಚಿಸಿದರು. ದ್ವಿತೀಯ ಪದವಿ ಫ್ಯಾಷನ್ ಡಿಸೈನ್ ವಿಭಾಗದ ಪ್ರಕೃತಿ ಪ್ರಾರ್ಥನೆ ಹಾಡಿ, ಕನ್ನಡ ವಿಭಾಗದ ಸಹ ಪ್ರಾಧ್ಯಾಪಕ ಹರಿಶ್ಚಂದ್ರ…

Read More

ನವಿಮುಂಬಯಿ : ಜೂಹಿನಗರ, ಪ್ಲಾಟ್ ನಂಬರ್ 42 ಸೆಕ್ಟರ್ 24 ಇಲ್ಲಿನ ಬಂಟ್ಸ್ ಸೆಂಟರ್ ನ ದಿ. ಮನೋಹರ್ ಹೆಗ್ಡೆ ಸಂಸ್ಮರಣ ವೇದಿಕೆಯಲ್ಲಿ ದಿನಾಂಕ 22 ಸೆಪ್ಟೆಂಬರ್ 2024ರಂದು ತುಳು ನಾಟಕ ರಂಗೋತ್ಸವದ ಸಮಾರೋಪ ಸಮಾರಂಭ ಜರಗಿತು. ಈ ಸಮಾರಂಭದಲ್ಲಿ ನಾಟಕ ಸ್ಪರ್ಧೆಯ ತೀರ್ಪುಗಾರರಾಗಿ ಪಾಲ್ಗೊಂಡ ಕಾಂತಾರ ಚಿತ್ರ ಕಲಾವಿದ, ಸಿನಿಮಾ, ನಾಟಕ ನಿರ್ದೇಶಕ ಬಾಸುಮ ಕೊಡಗು ಎಲ್ಲಾ ಕಲಾವಿದರನ್ನು ಉದ್ದೇಶಿಸಿ ಮಾತನಾಡಿ “ರಂಗಭೂಮಿ ಫೈನ್ ಆರ್ಟ್ಸ್ ಸಂಸ್ಥೆಯು ತುಂಬಾ ಅಚ್ಚುಕಟ್ಟಾಗಿ ನಾಟಕ ಸ್ಪರ್ಧೆಯನ್ನು ಏರ್ಪಡಿಸಿದ್ದು, ಅನೇಕ ಯುವ ಪ್ರತಿಭೆಗಳಿಗೆ ರಂಗವೇದಿಕೆಯಲ್ಲಿ ಅಭಿನಯಿಸುವ ಅವಕಾಶ ಒದಗಿದೆ. ಸಮಾಜಕ್ಕೆ ಒಳ್ಳೆಯ ಸಂದೇಶವನ್ನು ನೀಡುವ ನಾಟಕಗಳು ಸ್ಪರ್ಧೆಯಲ್ಲಿ ಪ್ರದರ್ಶನಗೊಂಡಿದ್ದು, ಅನೇಕ ಕಲಾವಿದರಿಗೆ ತಮ್ಮ ಪ್ರತಿಭೆಯನ್ನು ತೋರ್ಪಡಿಸುವ ಅವಕಾಶ ಕೂಡಾ ಇದರಿಂದ ಸಿಕ್ಕಿದೆ. ಅನೇಕ ಪ್ರತಿಭಾವಂತ ಕಲಾವಿದರು ಈ ಸ್ಪರ್ಧೆಯಿಂದ ಬೆಳಕಿಗೆ ಬಂದಿದ್ದಾರೆ. ಭವಿಷ್ಯದಲ್ಲಿ ಈ ಕಲಾವಿದರು ಕಲಾ ಕ್ಷೇತ್ರಕ್ಕೆ ದೊಡ್ಡ ಆಸ್ತಿಯಾಗಬಲ್ಲರು. ಮುಂಬಯಿ ಮಹಾನಗರದಲ್ಲಿ ನೀವೆಲ್ಲರೂ ಸೇರಿ ರಂಗಭೂಮಿಯನ್ನು ಉಳಿಸಿ ಬೆಳೆಸುವ ಮಹತ್ಕಾರ್ಯವನ್ನು ಮಾಡುತ್ತಿದ್ದೀರಿ.…

Read More