Author: roovari

ವಿದ್ಯಾಗಿರಿ : ಆಳ್ವಾಸ್ ಶಿಕ್ಷಣ ಮಹಾವಿದ್ಯಾಲಯ ಇದರ ವತಿಯಿಂದ ‘ಶಿಕ್ಷಣದಲ್ಲಿ ನಾಟಕ ಮತ್ತು ಕಲೆ’ಯ ಕುರಿತು ಕಾರ್ಯಾಗಾರವನ್ನು 31 ಆಗಸ್ಟ್ 2024ರಂದು ಆಳ್ವಾಸ್ ರಂಗ ಅಧ್ಯಯನ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಾಗಾರದಲ್ಲಿ ಮಾಹಿತಿ ನೀಡಿದ ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ನಿರ್ದೇಶಕ ಜೀವನ್‌ರಾಮ್ ಸುಳ್ಯ ಇವರು “ಶಿಕ್ಷಣ ಕ್ಷೇತ್ರದಲ್ಲಿ ನಾಟಕ ಮತ್ತು ಕಲೆ ಕೇವಲ ಪಠ್ಯೇತರ ಚಟುವಟಿಕೆಗಳಲ್ಲ. ಬದಲಾಗಿ ಅವು ಸೃಜನಶೀಲತೆ, ಬೌದ್ಧಿಕ ಬೆಳವಣಿಗೆಯನ್ನು ಅಭಿವೃದ್ಧಿ ಪಡಿಸಲಿರುವ ಪ್ರಬಲ ಸಾಧನಗಳಾಗಿವೆ. ಶಿಕ್ಷಣದಲ್ಲಿ ಕಲೆಯನ್ನು ರೂಢಿಸಿಕೊಳ್ಳುವುದರಿಂದ ವಿದ್ಯಾರ್ಥಿಗಳನ್ನು ಸೃಜನಶೀಲರನ್ನಾಗಿ ಮಾಡಲು ಸಾಧ್ಯವಾಗುತ್ತದೆ. ಇದರಿಂದ ವಿದ್ಯಾರ್ಥಿಗಳಲ್ಲಿ ಸ್ವಯಂ ಅಭಿವ್ಯಕ್ತಿ ಮತ್ತು ಸಂವಹನಕ್ಕಾಗಿ ಮೌಲ್ಯಯುತವಾದ ಕೌಶಲ್ಯಗಳನ್ನು ಬೆಳೆಸಿಕೊಳ್ಳಲು ಸಾಧ್ಯವಾಗುತ್ತದೆ. ಶಿಕ್ಷಣದಲ್ಲಿ ನೃತ್ಯ, ಸಂಗೀತ, ನಾಟಕ, ಸೃಜನಶೀಲ ಬರವಣಿಗೆ, ರಂಗಭೂಮಿ ಇತ್ಯಾದಿಗಳು ಒಳಗೊಂಡಿರಬೇಕು. ನಾಟಕಗಳು ನಮ್ಮ ಸುತ್ತಮುತ್ತಲಿನ ಸುಂದರ ದೃಶ್ಯಗಳನ್ನು ನಮ್ಮ ಕಣ್ಣ ಮುಂದೆ ಸೃಷ್ಟಿಸುವುದರಿಂದ ವಿದ್ಯಾರ್ಥಿಗಳಿಗೆ ಬಹುಬೇಗನೆ ಅರ್ಥೈಸಿಕೊಳ್ಳಲು ಸಾಧ್ಯವಾಗುತ್ತದೆ. ಕಲೆಗಳು ವಿದ್ಯಾರ್ಥಿಗಳ ಬೌದ್ಧಿಕ ಮಟ್ಟವನ್ನು ಸುಧಾರಿಸಲು ಸಹಾಯಕ. ಪ್ರದರ್ಶನದ ಕಲೆಗಳು ಮಕ್ಕಳಲ್ಲಿ ತಮ್ಮ ಭಾವನೆ…

Read More

ಬೆಂಗಳೂರು:  ಕರ್ನಾಟಕ ಸಂಗೀತ ಮತ್ತು ನೃತ್ಯ ಅಕಾಡೆಮಿ ಈ ಬಾರಿ ಶಿಷ್ಯ ವೇತನಕ್ಕೆ ಅಭ್ಯರ್ಥಿಗಳನ್ನು ಭಿನ್ನ ರೀತಿಯಲ್ಲಿ ಆಯ್ಕೆ ಮಾಡಲಿದೆ. ಸಂಗೀತ, ನೃತ್ಯ ಅಭ್ಯರ್ಥಿಗಳಿಗೆ ಆರ್ಥಿಕ ಹೊರೆಯಾಗಬಾರದು ಎಂಬ ಉದ್ದೇಶದಿಂದ ಈ ಬಾರಿ ಶಿಷ್ಯ ವೇತನಕ್ಕೆ ಅಭ್ಯರ್ಥಿಗಳು ತಾವಿರುವ ಸ್ಥಳದಲ್ಲೇ ವೀಡಿಯೋ ಚಿತ್ರೀಕರಣ ಮಾಡಿ ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸಬಹುದು ಎಂದು ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಅಧ್ಯಕ್ಷೆ ಶುಭಾ ಧನಂಜಯ ತಿಳಿಸಿದ್ದಾರೆ. ಕಳೆದ 2 ವರ್ಷಗಳಿಂದ ಅನೇಕ ಕಾರಣಗಳಿಂದಾಗಿ ಶಿಷ್ಯವೇತನ ನೀಡಿರಲಿಲ್ಲ. ಈಗ ಎರಡೂ ವರ್ಷದ್ದು ಸೇರಿಸಿ 200 ಮಂದಿಗೆ ತಲಾ 10 ಸಾವಿರ ರೂಪಾಯಿ ನೀಡಲಾಗುತ್ತಿದೆ. ಈ ಹಿಂದೆ 16 ರಿಂದ 24ರ ವಯೋಮಿತಿಯವರನ್ನು ಸಂದರ್ಶನ ಮಾಡಿ ಶಿಷ್ಯ ವೇತನಕ್ಕೆ ಆಯ್ಕೆ ಮಾಡಲಾಗುತ್ತಿತ್ತು. ಆದರೆ ದೂರದೂರುಗಳಿಂದ ಬರುವವರಿಗೆ ಬಸ್ ಪ್ರಯಾಣ, ತಂಗುವ ವ್ಯವಸ್ಥೆ ಸೇರಿದಂತೆ ಹಲವು ರೀತಿಯ ತೊಂದರೆ ಆಗುತ್ತಿರುವ ಹಿನ್ನೆಲೆಯಲ್ಲಿ ಅಕಾಡೆಮಿ ಈ ನಿರ್ಧಾರಕ್ಕೆ ಬಂದಿದೆ. ಆಯಾ ಕಲಾ ಪ್ರಕಾರಕ್ಕೆ ಅನುಗುಣವಾಗಿ ಅಭ್ಯರ್ಥಿಗಳು ವಿಡಿಯೋ ಚಿತ್ರೀಕರಿಸಿ ಕಳುಹಿಸಿ ಕೊಟ್ಟ…

Read More

“ಇ ತಿ ಹ ಯ” ಎಂಬ ನಾಟಕದ ಎರಡು ಪ್ರದರ್ಶನಗಳನ್ನು 28 ಅಕ್ಟೋಬರ್ 2024 ಸರಳಾಂಗಣದಲ್ಲಿ ಏರ್ಪಡಿಸಿದ್ದರು. ಈ ನಾಟಕವನ್ನು ವಿಜಯನಗರ ಬಿಂಬ ರಂಗ ಶಿಕ್ಷಣ ಕೇಂದ್ರದ ಈ ಸಾಲಿನ ವಿದ್ಯಾರ್ಥಿಗಳು ತಮ್ಮ ಅಭ್ಯಾಸ ಮಾಲಿಕೆ ಅಡಿಯಲ್ಲಿ ನಾಟಕ ಪ್ರದರ್ಶಿಸಿದರು. ವಿಶೇಷವೆಂದರೆ ಕೆಲವು ವಿದ್ಯಾರ್ಥಿಗಳು ನಾಟಕದ ಪ್ರದರ್ಶನದಲ್ಲಿ ಭಾಗವಹಿಸಿದ್ದು ಮಿಕ್ಕ ವಿದ್ಯಾರ್ಥಿಗಳು ನೇಪಥ್ಯದಲ್ಲಿ ಕೆಲಸ ಮಾಡಿದರು. “ಐತಿಹ್ಯ ಮಾಲೆಯ ಕಥೆಗಳು” …ಇದು ಕೊಟ್ಟಾರತ್ತಿಲ್ ಶಂಕುಣ್ಣಿ ಬರೆದ ಮಲಯಾಳಂ ಕಥೆಗಳು. ಶ್ರೀ ಡಿ.ಆರ್. ನಾಗರಾಜ್ ನೆನಪಿನ ಅಕ್ಷರ ಚಿಂತನ ಎಂಬ ಅಡಿಯಲ್ಲಿ ಶ್ರೀ ಬಿ.ಆರ್. ವೆಂಕಟ್ರಮಣ ಐತಾಳ್ ಕನ್ನಡಕ್ಕೆ ಅನುವಾದಿಸಿದ್ದಾರೆ. ಈ ಕಥಾ ಮಾಲಿಕೆಯಿಂದ ಆಯ್ದ ನಾಲ್ಕು ಕಥೆಗಳನ್ನು ಹೆಣೆದು ಕಥಾನಕ ರೂಪದಲ್ಲಿ ರಂಗದ ಮೇಲೆ ಪ್ರದರ್ಶಿಸಲಾಯಿತು. ಈ ಕಥೆಗಳಲ್ಲಿ ಕಾರಣಿಕ ಪುರುಷರು ಹೇಗೆ ಸಮಾಜದ ಹಿತ ಕಾಪಾಡಲು ಕಾರಣೀಭೂತರಾಗಿದ್ದರು ಎಂಬ ವಿಷಯವನ್ನು ಕಥೆಗಳ ಮೂಲಕ ಕಥೆಗಾರರು ಆ ಕಾಲಕ್ಕೆ ಅನುಗುಣವಾಗಿ ನಿರೂಪಿಸಿದ್ದಾರೆ. ಈ ಕಥೆಗಳಲ್ಲಿ ಬರುವ ಕಾರಣಿಕರು ವಿವಿಧ ಜಾತಿಯವರಾಗಿದ್ದರೂ, ಸಮಾಜದ…

Read More

ತೆಕ್ಕಟ್ಟೆ: ಯಶಸ್ವೀ ಕಲಾವೃಂದ (ರಿ.)ಕೊಮೆ, ತೆಕ್ಕಟ್ಟೆ ಸಂಸ್ಥೆಯ ‘ಸಿನ್ಸ್ 1999 ಶ್ವೇತಯಾನ-48’ ಕಾರ್ಯಕ್ರಮದಡಿಯಲ್ಲಿ ರೋಟರಿ ಕ್ಲಬ್ ತೆಕ್ಕಟ್ಟೆ ಸಹಯೋಗದೊಂದಿಗೆ ಬಿ. ಎಮ್. ರಾಮಕೃಷ್ಣ ಹತ್ವಾರ್ ಸಂಸ್ಮರಣೆ ಕಾರ್ಯಕ್ರಮವು 04 ಆಗಸ್ಟ್ 2024 ರಂದು ತೆಕ್ಕಟ್ಟೆಯ ಹಯಗ್ರೀವದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ  ಭಾಗವಹಿಸಿದ ‘ಸಿನ್ಸ್ 1999 ಶ್ವೇತಯಾನ’ದ ಉಪ ಕಾರ್ಯಾಧ್ಯಕ್ಷ ಕೊಮೆ ಗೋಪಾಲ ಪೂಜಾರಿ ಮಾತನಾಡಿ “ಧಾರ್ಮಿಕ, ಶೈಕ್ಷಣಿಕ, ಸಾಂಸ್ಕೃತಿಕ ಜಗತ್ತಿಗೆ ಬಹು ದೊಡ್ಡ ಕೊಡುಗೆ ಇತ್ತ ಬಿ. ಎಮ್. ರಾಮಕೃಷ್ಣ ಹತ್ವಾರ್‌ರ ಕಾಯ ಅಳಿದು ಕೀರ್ತಿ ಉಳಿದಿದೆ. ಅದೆಷ್ಟೋ ಶಾಲಾ ಕಾಲೇಜುಗಳ ಕೊಠಡಿಗಳು ಹತ್ವಾರರ ಹೆಸರಿನಲ್ಲಿ ಉಳಿದಿವೆ. ಸಾಂಸ್ಕೃತಿಕವಾಗಿ ತೆಕ್ಕಟ್ಟೆಯ ಬೆಟ್ಟಿನ ಮನೆಯಲ್ಲಿ ವರ್ಷಂಪ್ರತೀ ಪ್ರಸಿದ್ಧ ಕಲಾವಿದರನ್ನು ಜಮಾಯಿಸಿ, ಅದ್ದೂರಿಯ ತಾಳಮದ್ದಳೆ ಏರ್ಪಡುವಂತೆ ಮಾಡಿದ ಕಲಾ ಪ್ರೇಮಿಗಳು ಹತ್ವಾರರು. ಗತ ಕಾಲದಲ್ಲಿ ತೆಕ್ಕಟ್ಟೆಯಲ್ಲಿ ತಾಳಮದ್ದಳೆಯ ಸಂಘಟಕರಾಗಿ ಹೆಸರಾದ ಹತ್ವಾರರು ಜೀವಿತ ಕಾಲದಲ್ಲಿ ತೆಂಕು ಬಡಗಿನ ಅನೇಕ ಯಕ್ಷಗಾನವನ್ನು ಆ ಕಾಲದಲ್ಲಿ ಏರ್ಪಡಿಸಿ ಜನಾನುರಾಗಿಯಾಗಿದ್ದರು. ಇಂತಹ ಹತ್ವಾರರು ಸಮಾಜದ ಎಲ್ಲಾ ವಿಭಾಗದಲ್ಲೂ ತಮ್ಮ ಕೊಡುಗೆಯನ್ನಿತ್ತು…

Read More

ಮಂಗಳೂರು : ಯುವವಾಹಿನಿ ಕೇಂದ್ರ ಸಮಿತಿ ಹಾಗೂ ಮಂಗಳೂರು ಘಟಕ ವತಿಯಿಂದ ಪ್ರಬಂಧ ಹಾಗೂ ಭಾಷಣ ಸ್ಪರ್ಧೆಗಳನ್ನು ವಿವಿಧ ವಿಭಾಗಗಳಲ್ಲಿ ಆಯೋಜಿಸಲಾಗಿದೆ. ಸ್ಪರ್ಧೆಯಲ್ಲಿ ಯಾವುದೇ ಮಾನ್ಯತೆ ಪಡೆದ ಪ್ರೌಢಶಾಲೆ/ ಕಾಲೇಜ್/ವಿ.ವಿ.ಗಳ ವಿದ್ಯಾರ್ಥಿಗಳು ಭಾಗವಹಿಸಬಹುದು. ಸ್ಪರ್ಧೆಯು 11 ಆಗಸ್ಟ್ 2024ರಂದು ಶಾರದಾ ವಿದ್ಯಾಲಯ ಕೊಡಿಯಾಲಬೈಲು ಇಲ್ಲಿ ನಡೆಯಲಿದೆ. ಸ್ಪರ್ಧೆಯಲ್ಲಿ ಭಾಗವಹಿಸಲು ನೋಂದಣಿ ಕಡ್ಡಾಯವಾಗಿದ್ದು 8 ಆಗಸ್ಟ್ 2024 ಕೊನೆಯ ದಿನವಾಗಿದೆ. ‘ಶೈಕ್ಷಣಿಕ ಕ್ರಾಂತಿ ಹಾಗೂ ಸಾಮಾಜಿಕ ಬದಲಾವಣೆಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ದೃಷ್ಟಿಕೋನ’ ಎಂಬ ವಿಷಯದಲ್ಲಿ ಭಾಷಣ ಸ್ಪರ್ಧೆ ಹಾಗೂ ‘ನಮ್ಮ ಜೀವನದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಗಳ ಪ್ರಾಮುಖ್ಯ’ ಎಂಬ ವಿಷಯದಲ್ಲಿ ಪ್ರಬಂಧ ಸ್ಪರ್ಧೆ ನಡೆಯಲಿದೆ. ಪ್ರಬಂಧ ಸ್ಪರ್ಧೆಯು ಪ್ರೌಢಶಾಲಾ ವಿಭಾಗ 8, 9, 10 ತರಗತಿ ಹಾಗೂ ಕಾಲೇಜ್ ವಿಭಾಗ ಪಿ. ಯು. ಸಿ. ಹಾಗೂ ಪದವಿ.ವಿಭಾಗಗಳಲ್ಲಿ ನಡೆಯಲಿದ್ದು, ಭಾಷಣ ಸ್ಪರ್ಧೆಯು ಪ್ರೌಢಶಾಲೆ, ಕಾಲೇಜ್ ಮತ್ತು ಮುಕ್ತ ವಿಭಾಗ (18 ಮೇಲ್ಪಟ್ಟಯಾವುದೇ ವ್ಯಕ್ತಿಗಳು)ಗಳಲ್ಲಿ ನಡೆಯಲಿದೆ. ಮುಕ್ತ ವಿಭಾಗಕ್ಕೆ ಭಾಷಣದ 5…

Read More

ಮಂಗಳೂರು: ಕರ್ನಾಟಕ ಬಾಲವಿಕಾಸ ಅಕಾಡೆಮಿಯ ವತಿಯಿಂದ 2023ನೇ ಸಾಲಿನಲ್ಲಿ ಮಕ್ಕಳ ಕ್ಷೇತ್ರದಲ್ಲಿ ರಚಿಸಲ್ಪಟ್ಟ ಆಯ್ದ ಉತ್ತಮ ಪುಸ್ತಕಗಳಿಗೆ ‘ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿ’ಗಾಗಿ ಅರ್ಜಿ ಆಹ್ವಾನಿಸಲಾಗಿದೆ. 26 ಆಗಸ್ಟ್ 2024 ಪುಸ್ತಕಗಳನ್ನು ಕಳುಹಿಸಲು ಕೊನೆಯ ದಿನವಾಗಿದೆ. 2023ನೇ ಸಾಲಿನ ಜನವರಿ ತಿಂಗಳಿನಿಂದ ಡಿಸೆಂಬರ್ ತಿಂಗಳ ಅಂತ್ಯದ ಅವಧಿಯಲ್ಲಿ ಪ್ರಕಟಗೊಂಡ ಸ್ವರಚಿತ ಕವನ ಸಂಕಲನ, ಕಥಾ ಸಂಕಲನ, ನಾಟಕ ( ಪಠ್ಯಾಧರಿತ ಬಿಟ್ಟು ) ಮಕ್ಕಳ ಕಾದಂಬರಿ, ವೈಜ್ಞಾನಿಕ ಲೇಖನಗಳ ಸಂಕಲನ, ಅನುವಾದಿತ ಕೃತಿ (ಯಾವುದೇ ಪ್ರಕಾರದ ಮಕ್ಕಳ ಸಾಹಿತ್ಯ), ಮಕ್ಕಳ ಸಾಹಿತ್ಯ ವಿಮರ್ಶಾ ಕೃತಿ ಈ ರೀತಿಯ ಏಳು ಪ್ರಕಾರದ ಮಕ್ಕಳ ಸಾಹಿತ್ಯ ಕೃತಿಗಳನ್ನು ಪ್ರಶಸ್ತಿಗಾಗಿ ಆಹ್ವಾನಿಸಲಾಗಿದೆ. ಈ ಮೇಲ್ಕಾಣಿ ಸಿದ ಕ್ಷೇತ್ರಗಳಲ್ಲಿ ಪ್ರಕಟಗೊಂಡ ಪುಸ್ತಕಗಳನ್ನು ಪ್ರಶಸ್ತಿಗಾಗಿ ಪರಿಗಣಿಸಲು ಅಥವಾ ಮೌಲ್ಯ ಮಾಪನಗೊಳಿಸಲು ಪ್ರತಿಯೊಂದು ಕೃತಿಯ ನಾಲ್ಕು ಪ್ರತಿಗಳನ್ನು ಹಾಗೂ ಸ್ವವಿವರಗಳನ್ನೊಳಗೊಂಡ ಮನವಿಯೊಂದಿಗೆ ಅಕಾಡೆಮಿಯ ಕೇಂದ್ರ ಕಚೇರಿಗೆ ಕಳುಹಿಸಿಕೊಡಬೇಕು. ವಿಳಾಸ – ಯೋಜನಾಧಿಕಾರಿಗಳು, ಕರ್ನಾಟಕ ಬಾಲವಿಕಾಸ ಅಕಾಡೆಮಿ, ಚಂದ್ರಿಕಾ ಲೇಔಟ್ ಹಿಂಭಾಗ,…

Read More

ನವದೆಹಲಿ : ಭರತನಾಟ್ಯ ಮತ್ತು ಕೂಚುಪುಡಿಯ ಹೆಸರಾಂತ ನೃತ್ಯ ಕಲಾವಿದೆ ಯಾಮಿನಿ ಕೃಷ್ಣಮೂರ್ತಿ ಅವರು 03 ಆಗಸ್ಟ್ 2024ರ ಶನಿವಾರದಂದು ನಿಧನರಾದರು. ಅವರಿಗೆ 84ವರ್ಷ ವಯಸ್ಸಾಗಿತ್ತು. ವಯೋ ಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು ಏಳು ತಿಂಗಳಿಂದ ತೀವ್ರ ನಿಗಾ ಘಟಕದಲ್ಲಿ (ಐ. ಸಿ. ಯು.) ಚಿಕಿತ್ಸೆ ಪಡೆಯುತ್ತಿದ್ದರು. ಯಾಮಿನಿ ಅವರಿಗೆ ಇಬ್ಬರು ಸಹೋದರಿಯರಿದ್ದಾರೆ. ಸಂಸ್ಕೃತ ವಿದ್ವಾಂಸ ಎಂ. ಕೃಷ್ಣಮೂರ್ತಿ ಇವರ ಮಗಳಾದ ಯಾಮಿನಿ ಕೃಷ್ಣಮೂರ್ತಿ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ಮದನಪಲ್ಲಿಯಲ್ಲಿ 1940ರ ಡಿಸೆಂಬರ್ 20ರಂದು ಜನಿಸಿದರು. ತನ್ನ ಐದನೇ ವಯಸ್ಸಿನಿಂದಲೇ ಭರತನಾಟ್ಯ ಕಲಿಕೆಯನ್ನು ಪ್ರಾರಂಬಿಸಿದ ಇವರಿಗೆ ‘ಪದ್ಮಶ್ರೀ’, ‘ಪದ್ಮಭೂಷಣ’, ’ಪದ್ಮ ವಿಭೂಷಣ’, ‘ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ’ಗಳು ಸಂದಿವೆ.

Read More

ಚೊಕ್ಕಾಡಿ : ಚೂಂತಾರು ಸರೋಜಿನಿ ಭಟ್‌ ಪ್ರತಿಷ್ಠಾನ (ರಿ.) ಮಂಗಳೂರು, ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸುಳ್ಯ ಘಟಕ, ಜೇ.ಸಿ.ಐ. ಬೆಳ್ಳಾರೆ ಇದರ ಸಂಯುಕ್ತ ಆಶ್ರಯದಲ್ಲಿ ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲಾ ಮುಖ್ಯ ಶಿಕ್ಷಕ ಶ್ರೀ ರಾಮಕೃಷ್ಣ ಭಟ್ ಚೊಕ್ಕಾಡಿಯವರ 60ರ ಅಭಿನಂದನಾ ಸಮಾರಂಭ ಮತ್ತು ಅಭಿನಂದನಾ ಗ್ರಂಥ ಬಿಡುಗಡೆ ಸಮಾರಂಭವು ದಿನಾಂಕ 04 ಆಗಸ್ಟ್ 2024ರಂದು ಚೊಕ್ಕಾಡಿಯ ಶ್ರೀರಾಮ ದೇವಾಲಯದ ದೇಸೀ ಸಭಾಭವನದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಅಭಿನಂದನಾ ಭಾಷಣ ಮಾಡಿದ ಇತಿಹಾಸ ತಜ್ಞ, ಲೇಖಕ ಪುಂಡಿಕಾಯಿ ಗಣಪಯ್ಯ ಭಟ್ “ಒಬ್ಬ ವ್ಯಕ್ತಿ ಹತ್ತು ಹಲವು ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದರೆ ಅದು ರಾಮಕೃಷ್ಣ ಭಟ್ಟರ ವ್ಯಕ್ತಿತ್ವ. ರಾಮಕೃಷ್ಣ ಭಟ್ಟರು ನಿವೃತ್ತಿಯಾಗಿ ಕೇವಲ 4 ದಿವಸಗಳಲ್ಲಿ ಅಭಿನಂದನಾ ಗ್ರಂಥ ಬಿಡುಗಡೆಗೊಂಡಿರುವುದು ಇದರ ಹಿಂದೆ ಡಾ. ಮುರಲೀಮೋಹನ್ ಚೂಂತಾರುರವರ ಶ್ರಮ ಎದ್ದು ಕಾಣುತ್ತದೆ. ಸುಮಾರು 600ಕ್ಕೂ ಹೆಚ್ಚು ಲೇಖನಗಳು ಬೇರೆ ಬೇರೆ ಮಾಧ್ಯಮಗಳಲ್ಲಿ ಪ್ರಕಟಗೊಂಡಿರುವುದು, ಪುಸ್ತಕಗಳನ್ನು ಬರೆದಿರುವುದು ರಾಮಕೃಷ್ಣ ಭಟ್ಟರು…

Read More

ಸುಳ್ಯ : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸುಳ್ಯ ತಾಲೂಕು ಘಟಕ ಮತ್ತು ಕ.ಸಾ.ಪ. ಸುಳ್ಯ ಹೋಬಳಿ ಘಟಕ ಇದರ ಆಶ್ರಯದಲ್ಲಿ ಮುಂಗಾರು ಕವಿಗೋಷ್ಠಿ- ವರ್ಷ ವೈಭವವು ದಿನಾಂಕ 3 ಆಗಸ್ಟ್ 2024ರಂದು ಸುಳ್ಯದ ಕನ್ನಡ ಭವನದಲ್ಲಿ ನಡೆಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ.ಸಾ.ಪ. ಅಧ್ಯಕ್ಷ ಚಂದ್ರಶೇಖರ ಪೇರಾಲು ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಸಾಹಿತಿ ಕುಮಾರಸ್ವಾಮಿ ತೆಕ್ಕುಂಜ ನೆರವೇರಿಸಿದರು. ಕ.ಸಾ.ಪ. ಸುಳ್ಯ ಹೋಬಳಿ ಘಟಕದ ಅಧ್ಯಕ್ಷೆ ಚಂದ್ರಾವತಿ ಬಡ್ಡಡ್ಕ, ಕ.ಸಾ.ಪ. ಗೌರವ ಕಾರ್ಯದರ್ಶಿಗಳಾದ ತೇಜಸ್ವಿ ಕಡಪಳ, ಶ್ರೀಮತಿ ಚಂದ್ರಮತಿ ಕೆ., ಗೌರವ ಕೋಶಾಧಿಕಾರಿ ದಯಾನಂದ ಆಳ್ವ, ನಿವೃತ್ತ ಉಪನ್ಯಾಸಕ ಎ. ಅಬ್ದುಲ್ಲ ಅರಂತೋಡು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸುಳ್ಯದ ಎನ್.ಎಂ.ಸಿ. ಕನ್ನಡ ವಿಭಾಗದ ಮುಖ್ಯಸ್ಥರಾದ ಶ್ರೀ ಸಂಜೀವ ಕುದ್ಪಾಜೆಯವರ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ ನಡೆಯಿತು. ಕವಿಗಳಾದ ಯೋಗೀಶ್ ಹೊಸೊಳಿಕೆ, ಹೇಮಾ ಗಣೇಶ ಕಜೆಗದ್ದೆ, ಸಾನು ಉಬರಡ್ಕ, ಡಾ.ಅನುರಾಧಾ ಕುರುಂಜಿ, ಉದಯಭಾಸ್ಕರ ಸುಳ್ಯ, ಲತಾಶ್ರೀ ಸುಪ್ರೀತ್ ಮೋಂಟಡ್ಕ, ಮಮತಾ ರವೀಶ್ ಪಡ್ಡಂಬೈಲು, ಪೂರ್ಣಿಮಾ…

Read More

ಕಾಸರಗೋಡು : ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕ ಕಾಸರಗೋಡು, ಕಾಸರಗೋಡು ಜಿಲ್ಲಾ ಕನ್ನಡ ಲೇಖಕರ ಸಂಘ, ಶಂಪಾ ಪ್ರತಿಷ್ಠಾನ (ರಿ.) ಬೆಂಗಳೂರು ಮತ್ತು ವಿಕಾಸ ಮೀಯಪದವು ಇವರ ಸಂಯುಕ್ತ ಆಶ್ರಯದಲ್ಲಿ ‘ಡಾ. ನಾ. ಮೊಗಸಾಲೆ ಪೌರಾಭಿನಂದನೆ ಹಾಗೂ ಸಾಹಿತ್ಯ ಸಮೀಕ್ಷೆ’ ಕಾರ್ಯಕ್ರಮವನ್ನು ದಿನಾಂಕ 10-08-2024ರಂದು ಬೆಳಗ್ಗೆ 10-00 ಗಂಟೆಗೆ ಮೀಯಪದವು ಶ್ರೀ ವಿದ್ಯಾವರ್ಧಕ ಉನ್ನತ ಪ್ರೌಢ ಶಾಲೆಯ ನಾರಾಯಣೀಯಂ ರಂಗಮಂದಿರದಲ್ಲಿ ಆಯೋಜಿಸಲಾಗಿದೆ. ಕಾಸರಗೋಡು ಜಿಲ್ಲಾ ಕನ್ನಡ ಲೇಖಕರ ಸಂಘದ ಅಧ್ಯಕ್ಷರಾದ ಡಾ. ರಾಮಾನಂದ ಬನಾರಿ ಇವರ ಅಧ್ಯಕ್ಷತೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು ಡಾ. ಮಹೇಶ್ ಜೋಶಿ ಇವರು ಉದ್ಘಾಟನೆ ಮಾಡಲಿದ್ದಾರೆ. ‘ಸಾಹಿತ್ಯ ಸಮೀಕ್ಷೆ’ ಗೋಷ್ಠಿ 1ರಲ್ಲಿ ಮೊಗಸಾಲೆಯವರ ಕಾವ್ಯದ ಬಗ್ಗೆ ಸಾಹಿತಿ ಮತ್ತು ವಿಮರ್ಶಕ ಶ್ರೀ ರಮೇಶ್ ಭಟ್ ಬೆಳಗೋಡು, ಕಾದಂಬರಿಗಳ ಬಗ್ಗೆ ವಿಮರ್ಶಕ ಕಾದಂಬರಿಕಾರ ಡಾ. ಬಿ. ಜನಾರ್ದನ ಭಟ್, ಸಣ್ಣ ಕತೆಗಳ ಬಗ್ಗೆ ಸಾಹಿತಿ ಡಾ. ಸುಭಾಷ್ ಪಟ್ಟಾಜೆ ಮಾಹಿತಿ ನೀಡಲಿರುವರು. ಮಧ್ಯಾಹ್ನ 1-00…

Read More