Author: roovari

ಉಡುಪಿ : ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರ ಹಾಗೂ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ ಮಣಿಪಾಲ ನೀಡುವ ‘ಕಡೆಂಗೋಡ್ಲು ಕಾವ್ಯ ಪ್ರಶಸ್ತಿ – 2024’ಯು ಲೇಖಕ ಡಾ. ಶೈಲೇಶ್ ಕುಮಾರ್ ಶಿವಕುಮಾರ್ ಅವರ ‘ಅನುವಾದವೆಂಬೋ ಸಂಬಂಧ’ ಕವನಸಂಕಲನಕ್ಕೆ ಲಭಿಸಿದೆ. ಪ್ರಶಸ್ತಿಯು 10,000/ ನಗದು ಹಾಗೂ ಪ್ರಶಸ್ತಿ ಫಲಕವನ್ನೊಳಗೊಂಡಿರುತ್ತದೆ. ಕವಿ, ಕಾದಂಬರಿಕಾರ, ನಾಟಕಕಾರ, ಕಥೆಗಾರ, ಪತ್ರಿಕೋದ್ಯಮಿ, ಹೀಗೆ ಕನ್ನಡ ಸಾರಸ್ವತ ಲೋಕದಲ್ಲಿ ಹೆಸರುವಾಸಿಯಾದ ಕಡೆಂಗೋಡ್ಲು ಶಂಕರ ಭಟ್ಟರ ಹೆಸರಲ್ಲಿ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ ಎಂದು ಆಡಳಿತಾಧಿಕಾರಿ ಡಾ. ಬಿ. ಜಗದೀಶ್ ಶೆಟ್ಟಿ ತಿಳಿಸಿದ್ದಾರೆ. ಡಾ. ಶೈಲೇಶ್ ಕುಮಾರ್ ಶಿವಕುಮಾರ್ ಅವರು ಬೆಂಗಳೂರು ವಿ.ವಿಯಿಂದ ಕಂಪ್ಯೂಟರ್‌ಸೈನ್ಸ್ ಇಂಜಿನಿಯರಿಂಗ್ ಪದವಿ, ಕಂಪ್ಯೂಟರ್ ಸೈನ್ಸ್ನಲ್ಲಿ ಪಿ. ಎಚ್. ಡಿ. ಹಾಗೂ ಇನ್‌ಫಾರ್ಮೇಶನ್ ಟೆಕ್ನಾಲಜಿಯಲ್ಲಿ ಎಂ. ಬಿ. ಎ. ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಈಗ ಕನ್ನಡ ಎಂ.ಎ. ಪದವಿ ಪಡೆದು ಪಿ. ಎಚ್. ಡಿ. ಗಾಗಿ ಜೈನ್‌ ವಿಶ್ವವಿದ್ಯಾಲಯದಲ್ಲಿ ನವ್ಯಕಾವ್ಯದ ಕುರಿತಾದ ಸಂಶೋಧನೆಯ ಅಂತಿಮ ಹಂತದಲ್ಲಿದ್ದಾರೆ.…

Read More

ಪುತ್ತೂರು : ನಿವೃತ್ತ ಪ್ರಾಧ್ಯಾಪಕ, ಸಾಹಿತಿ, ಅರ್ಥಧಾರಿ ಮತ್ತು ಮಾಧ್ಯಮ ತಜ್ಞ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಅವರಿಗೆ ‘ಹುಟ್ಟೂರ ಸಮ್ಮಾನ’ ಕಾರ್ಯಕ್ರಮವು ದಿನಾಂಕ 24-05-2024ರ ಶುಕ್ರವಾರದಂದು ಜರಗಲಿದೆ. ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪತ್ತನಾಜೆ ಉತ್ಸವ ಸಂದರ್ಭ ಕ್ಷೇತ್ರದ ‘ಬಿಲ್ವ ಶ್ರೀ’ ಸಭಾಂಗಣದಲ್ಲಿ ನಡೆಯಲಿರುವ ಶ್ರೀ ಮಹಾಲಿಂಗೇಶ್ವರ ಯಕ್ಷಗಾನ ಕಲಾ ಸಂಘದ ವಾರ್ಷಿಕೋತ್ಸವ ಸಂದರ್ಭದಲ್ಲಿ ಈ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಬೆಳಿಗ್ಗೆ ಗಂಟೆ 10.00ರಿಂದ ಯಕ್ಷಗಾನ ವಿದ್ವಾಂಸ ಡಾ. ಎಂ. ಪ್ರಭಾಕರ ಜೋಶಿ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮವನ್ನು ಪುತ್ತೂರು ಶಿವಬ್ರಾಹ್ಮಣ ಸ. ಸೇ. ಸಂಘದ ನಿರ್ದೇಶಕ ಬೆಟ್ಟಂಪಾಡಿ ಅಶೋಕ ಕುಮಾರ ಉದ್ಘಾಟಿಸುವರು. ಪುತ್ತೂರು ಪೆರ್ಲಡ್ಕದ ಎಸ್. ಡಿ. ಪಿ. ರೆಮಿಡೀಸ್ ಆಂಡ್ ರೀಸರ್ಚ್ ಸೆಂಟರ್ ನಿರ್ದೇಶಕ ಡಾ. ಹರಿಕೃಷ್ಣ ಪಾಣಾಜೆ, ಬೆಟ್ಟಂಪಾಡಿ ನವೋದಯ ವಿದ್ಯಾ ಸಮಿತಿ ಅಧ್ಯಕ್ಷ ಡಿ. ಎಂ. ಬಾಲಕೃಷ್ಣ ಭಟ್ ಘಾಟೆ ಮತ್ತು ಪ್ರಗತಿಪರ ಕೃಷಿಕ ಎಂ. ಮುತ್ತಣ್ಣ ಶೆಟ್ಟಿ ಚೆಲ್ಯಡ್ಕ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು.…

Read More

ಗುತ್ತಿಗಾರು : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಸುಳ್ಯ ತಾಲೂಕು ಪಂಚಾಯತ್, ಗುತ್ತಿಗಾರು ಗ್ರಾಮ ಪಂಚಾಯತ್, ಅರಿವು ಕೇಂದ್ರ, ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕದ ಆಶ್ರಯದಲ್ಲಿ ಗುತ್ತಿಗಾರು ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ದಿನಾಂಕ 02-05-2024ರಂದು ಪ್ರಾರಂಭವಾಗಿ 15 ದಿನಗಳ ಕಾಲ ನಡೆದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಕಾರ್ಯಕ್ರಮವು ದಿನಾಂಕ 16-05-2024ರಂದು ನಡೆಯಿತು. ಸ್ಥಳೀಯ ಸಂಪನ್ಮೂಲ ವ್ಯಕ್ತಿಗಳಿಂದ ಬೇಸಿಗೆಯಲ್ಲಿ ಮಕ್ಕಳ ಆರೋಗ್ಯ, ಅಭಿನಯ ಗೀತೆ/ನೃತ್ಯ, ನಿಧಿ ಶೋಧ, ಚಿತ್ರಕಲೆ, ವಿನೋದ ವಿಜ್ಞಾನ, ಮಕ್ಕಳು ಮತ್ತು ಪ್ರಕೃತಿ ಬಾಂಧವ್ಯ, ಯೋಗ ಮತ್ತು ಧ್ಯಾನ, ಮೋಜಿನ ಗಣಿತ, ಪರಿಸರ ಸ್ವಚ್ಛತಾ ಗೀತೆ, ಚದುರಂಗ ಆಟ, ಸ್ವರಚಿತ ಕವನ/ಕಥೆ, ಕಸದಿಂದ ರಸ, ಅರಿವು ಮೂಡಿಸುವ ಚಟುವಟಿಕೆಗಳು ಮಾತ್ರವಲ್ಲದೆ ಅಧ್ಯಯನ ಪ್ರವಾಸದಲ್ಲಿ ಸುಬ್ರಹ್ಮಣ್ಯ ಪೋಲೀಸ್ ಠಾಣೆ, ಸುಬ್ರಹ್ಮಣ್ಯ ವಲಯ ಅರಣ್ಯ ಕಛೇರಿ, ಸಾಲು ಮರದ ತಿಮ್ಮಕ್ಕ…

Read More

ಪುತ್ತೂರು : ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇಲ್ಲಿ ವಾಣಿಜ್ಯ ವಿಭಾಗ, ಕಾಮರ್ಸ್ ಅಸೋಸಿಯೇಷನ್ ಮತ್ತು ಐಕ್ಯೂಎಸಿ ಘಟಕದ ಸಹಯೋಗದಲ್ಲಿ ಆಯೋಜಿಸಿದ ಏಕತ್ರ -2024 ಕಾರ್ಯಕ್ರಮವು ದಿನಾಂಕ 22-05-2024ರಂದು ನಡೆಯಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಾಸ್ಟರ್ ಪ್ಲಾನರಿ ಪುತ್ತೂರು ಇದರ ಉದ್ಯಮಿ ಆಕಾಶ್ ಎಸ್.ಕೆ. “ಒಂದು ಉದ್ಯಮವನ್ನು ಯಶಸ್ವಿಯಾಗಿ ನಡೆಸಲು ಹಲವಾರು ಸಮಸ್ಯೆಗಳು ಉಂಟಾಗುತ್ತದೆ. ಆಗ ಅವುಗಳಿಗೆಲ್ಲ ಯೋಚಿಸಿ ಪರಿಹಾರವನ್ನು ಕಂಡುಕೊಂಡು ಮುಂದುವರೆಯುವ ಶಕ್ತಿ ನಮ್ಮಲ್ಲಿರಬೇಕು. ಉದ್ಯಮ ಕ್ಷೇತ್ರಕ್ಕೆ ಕೌಶಲ್ಯವೆನ್ನುವುದು ಅತ್ಯಗತ್ಯ. ಬದಲಾವಣೆಗೆ ನಾವು ಹೊಂದಿಕೊಂಡು ನಮ್ಮ ಕೆಲಸದಲ್ಲಿ ಹೊಸತನವನ್ನು ಕಂಡು ಯಶಸ್ವಿಗೊಳ್ಳಬೇಕು ಅದಕ್ಕಾಗಿ ನಿರಂತರವಾದ ಕಲಿಕೆಯಲ್ಲಿ ನಮ್ಮನ್ನು ನಾವು ತೊಡಗಿಸಿಕೊಳ್ಳೋಣ. ಆರ್ಥಿಕವಾಗಿ ಯಾರು ಕೂಡ ಬಲಿಷ್ಟರಾಗಬಹುದು ಆದರೆ, ಅದನ್ನು ಹೊರತುಪಡಿಸಿ ಸಮಾಜಕ್ಕೆ ಸೇವೆ ಮಾಡುವ ಜನರಿಗೆ ಒಳಿತನ್ನು ಮಾಡುವ ಗುಣ ನಮ್ಮದಾಗಬೇಕು” ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಪ್ರೊ. ಶ್ರೀಪತಿ ಕಲ್ಲೂರಾಯ “ನಮ್ಮ ದೇಶ…

Read More

ಸಾಲಿಗ್ರಾಮ : ಐರೋಡಿಯ ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ ಇದರ ಐವತ್ತರ ಸಂಭ್ರಮದ ಪ್ರಯುಕ್ತ ಬೈಂದೂರಿನ ಲಾವಣ್ಯ ತಂಡದವರು ರಾಜೇಂದ್ರ ಕಾರಂತ್ ರಚನೆ ಮತ್ತು ನಿರ್ದೇಶನದಲ್ಲಿ ‘ನಾಯಿ ಕಳೆದಿದೆ’ ಎಂಬ ಸಾಮಾಜಿಕ ನಾಟಕವನ್ನು ದಿನಾಂಕ 26-05-2024ರಂದು ಸಂಜೆ 6-00 ಗಂಟೆಗೆ ಸಾಲಿಗ್ರಾಮ ಗುಂಡ್ಮಿಯ ಸದಾನಂದ ರಂಗ ಮಂಟಪದಲ್ಲಿ ಪ್ರಸ್ತುತ ಪಡಿಸಲಿದ್ದಾರೆ. ನಾಟಕ : ನಾಯಿ ಕಳೆದಿದೆ ಬೆಂಗಳೂರಿನಲ್ಲಿದ್ದುಕೊಂಡೇ ಕಾರ್ಯದೊತ್ತಡದ ನೆಪ ನೀಡಿ ಪ್ರತ್ಯೇಕವಾಗಿ ವಾಸಿಸುವ, ತಂದೆ-ತಾಯಿಯರ ಭಾವನೆಗಳನ್ನು ಅರ್ಥಮಾಡಿಕೊಳ್ಳಲಾಗದ, ವಾರಕ್ಕೊಮ್ಮೆ ಮನೆಗೆ ಬಂದಾಗಲೂ ಲ್ಯಾಪ್‌ಟಾಪ್, ಮೊಬೈಲ್‌ನಲ್ಲಿ ಮುಳುಗುವ ಮಕ್ಕಳು, ಬಾಳಿನ ಇಳಿ ಹೊತ್ತಿನಲ್ಲಿರುವ ವೃದ್ಧ ತಂದೆ-ತಾಯಿಯರಲ್ಲಿ ಉಂಟು ಮಾಡುವ ತಲ್ಲಣಗಳು ವೀಕ್ಷಕರ ಮನ ಕರಗುವಂತೆ ಮಾಡುತ್ತವೆ. ಅಮೇರಿಕಾದ ಭವ್ಯ ಬದುಕಿನ ಆಸೆ ಹೊತ್ತು ಅಲ್ಲಿಗೆ ತೆರಳಿದ ಮಗ, ಸೊಸೆ ವೃದ್ಯಾಪ್ಯದಲ್ಲಿ ಆಸರೆಯಾಗಲಿಲ್ಲವಲ್ಲ ಎಂಬ ವೇದನೆ ಒಂದೆಡೆಯಾದರೆ, ಇನ್ನೊಂದೆಡೆ ಅವರು ಬಿಟ್ಟು ಹೋದ ನೆಮ್ಮದಿಯ ಬದುಕಿಗೆ ಮುಳ್ಳಾಗಿ ಕಾಡುವ ನಾಯಿ, ನಾಯಿಯ ಬೊಗಳುವಿಕೆ ವೃದ್ಧರ ಬದುಕನ್ನು ನರಕ ಸದೃಶವಾಗಿಸುತ್ತದೆ. ಫೋನಿನಲ್ಲೂ ತಮಗಿಂತ ನಾಯಿ ಕುರಿತಾಗಿ…

Read More

ಪುತ್ತೂರು : ಹಾರಾಡಿ ರಾಮ್ ಲೀಲಾ ಆರ್ಕೆಡ್ ಇದರ ವತಿಯಿಂದ ವಿದ್ಯಾರ್ಥಿಗಳಿಗೆ ‘ಡ್ರಾಮಾ ಡ್ರೀಮ್’ ರಂಗ ಶಿಕ್ಷಣ ತರಗತಿಗಳು ಪ್ರಾರಂಭಗೊಳ್ಳಲಿದ್ದು, ಪುತ್ತೂರು ಪರಿಸರದ ಪ್ರತಿಭಾ ವಿದ್ಯಾರ್ಥಿಗಳಿಗೆ ಸುವರ್ಣ ಅವಕಾಶ ಇದಾಗಿದೆ. 48 ತರಗತಿಗಳ ಜಾನಪದ, ಪೌರಾಣಿಕ ಮತ್ತು ಐತಿಹಾಸಿಕ ವಿಷಯಗಳ ನಾಟಕ ತರಬೇತಿ ಇದಾಗಿದ್ದು, ಪ್ರತಿ ಶನಿವಾರ ಮತ್ತು ಆದಿತ್ಯವಾರ ವಿದ್ಯಾರ್ಥಿಗಳ ಅನುಕೂಲತೆಗಾಗಿ ಬ್ಯಾಚ್ ಮುಖೇನ ಕ್ಲಾಸ್ ನಡೆಯಲಿದೆ. ರಂಗ ಶಿಕ್ಷಣ ಪಡೆದ ಪದವೀಧರರಿಂದ ರಂಗ ತರಬೇತಿ ನೀಡಲಾಗುವುದು. ತರಗತಿಯಲ್ಲಿ ತಯಾರಾದ ರಂಗ ನಾಟಕವನ್ನು ರಾಜ್ಯ ಮಟ್ಟದ ಮಕ್ಕಳ ನಾಟಕೋತ್ಸವ ಕಾರ್ಯಕ್ರಮ ಆಯೋಜಿಸಿ ಪ್ರದರ್ಶನ ನೀಡಲಾಗುವುದು. ಎಲ್ಲಾ ವಿದ್ಯಾರ್ಥಿಗಳಿಗೆ ಸ್ಮರಣಿಕೆ ಮತ್ತು ಪ್ರಮಾಣ ಪತ್ರ ನೀಡಿ ಗೌರವಿಸಲಾಗುವುದು. ಅಲ್ಲದೆ ಡ್ರಾಮಾ ವಿದ್ಯಾರ್ಥಿಗಳಿಗಾಗಿ ಸಾಮಾನ್ಯ ಜ್ಞಾನ ಪರೀಕ್ಷೆ, ಇನ್ನಿತರ ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗುವುದು. ಸಂಸ್ಥೆಯು ತರಗತಿಯ ವಾರ್ಷಿಕ ಶುಲ್ಕ ನಿಗದಿಪಡಿಸಿದ್ದು, ಪೋಷಕರ ಅನುಕೂಲತೆಗಾಗಿ ಎರಡು ಹಂತಗಳಲ್ಲಿ ಶುಲ್ಕ ಪಾವತಿಸಬಹುದಾಗಿದೆ. ದಿನಾಂಕ 26-05-2024ರಂದು ವಿದ್ಯಾರ್ಥಿಗಳ ದಾಖಲಾತಿ ದಿನಾಂಕ ನಿಗದಿಪಡಿಸಿದ್ದು, ಏಳು ವರ್ಷ ಮೇಲ್ಪಟ್ಟ ಅಭಿನಯದಲ್ಲಿ…

Read More

ಪುತ್ತೂರು : ಕರ್ನಾಟಕ ಗಮಕ ಕಲಾ ಪರಿಷತ್ತು ಪುತ್ತೂರು ಘಟಕದ ವಾರ್ಷಿಕ ಮಹಾಸಭೆಯು ಇದೇ ತಾರೀಕು 20-05-2024ನೇ ಸೋಮವಾರದಂದು ತೆಂಕಿಲದ ವಿವೇಕಾಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ಭಾಸ್ಕರ ಬಾರ್ಯರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಭೆಗೆ ಆಗಮಿಸಿದ ಜಿಲ್ಲಾಧ್ಯಕ್ಷರಾದ ಮಧೂರು ಮೋಹನ್ ಕಲ್ಲೂರಾಯರು ಮಾತನಾಡುತ್ತಾ “ಗಮಕವೆಂಬ ಅಪರೂಪದ ಕಲೆಯನ್ನು ಜನಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ಹೆಚ್ಚು ಹೆಚ್ಚು ಕಾರ್ಯಕ್ರಮಗಳನ್ನು ಆಯೋಜಿಸುವ ಅಗತ್ಯತೆ ಇದೆ. ಮನೆ ಮನೆಗಳಲ್ಲಿ ಗಮಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಆಸಕ್ತರನ್ನು ಉತ್ತೇಜಿಸುವುದರ ಜೊತೆಗೆ, ಸದಸ್ಯರ ಸಂಖ್ಯೆಯನ್ನು ಹೆಚ್ಚಿಸುವುದು ಕೂಡಾ ಅತೀ ಅವಶ್ಯಕ” ಎಂದು ಹೇಳಿದರು. ಬಳಿಕ ಪ್ರಸಕ್ತ 2024-25ನೇ ಸಾಲಿನ ವರ್ಷದ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು. ಗೌರವಾಧ್ಯಕ್ಷರಾಗಿ ಭಾಸ್ಕರ ಬಾರ್ಯ, ಅಧ್ಯಕ್ಷರಾಗಿ ವೇದವ್ಯಾಸ ರಾಮಕುಂಜ, ಉಪಾಧ್ಯಕ್ಷರಾಗಿ ಶೋಭಿತ ಸತೀಶ್, ಈಶ್ವರ ಭಟ್ ಗುಂಡ್ಯಡ್ಕ, ವತ್ಸಲಾ ರಾಜ್ಞಿ, ಪ್ರಧಾನ ಕಾರ್ಯದರ್ಶಿಗಳಾಗಿ ಶಂಕರಿ ಶರ್ಮ, ಸಹಕಾರ್ಯದರ್ಶಿಗಳಾಗಿ ಸುಮನ ರಾವ್, ಸಂಚಾಲಕರಾಗಿ ಆಶಾ ಬೆಳ್ಳಾರೆ ಹಾಗೂ ಖಜಾಂಚಿಯಾಗಿ ವೀಣಾ ಸರಸ್ವತಿ ಇವರು ಆಯ್ಕೆಯಾದರು. ಜಿಲ್ಲಾಧ್ಯಕ್ಷರಾದ ಮಧೂರು…

Read More

ಮಂಗಳೂರು : ಸಂಗೀತ ವಿದ್ಯಾರ್ಥಿಗಳಿಗಾಗಿ ಮತ್ತು ಸಂಗೀತಾಸಕ್ತರಿಗಾಗಿ ಧ್ಯಾನ ಸಂಗೀತ ಅಕಾಡೆಮಿ ಕಲಾ ಟ್ರಸ್ಟಿನ ವತಿಯಿಂದ ‘ದಾಸ ವಂದನ’ ಸಂಗೀತ ಕಾರ್ಯಾಗಾರವನ್ನು ದಿನಾಂಕ 25-05-2024ರಂದು ಸಂಜೆ 4 ಗಂಟೆಗೆ ಮಗಳೂರಿನ ವಿ. ಟಿ. ರಸ್ತೆಯಲ್ಲಿರುವ ಶ್ರೀ ಕೃಷ್ಣ ಮಂದಿರದ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ದಾಸಪರಂಪರೆಯಲ್ಲಿ ಬಂದ ಅಪರೂಪದ ಹಾಡುಗಳ ಸ್ವರಸಂಯೋಜನೆ ಮಾಡುವ ಮತ್ತು ಕಲಿಯುವ ಅವಕಾಶವಿದ್ದು, ಈ ಕಾರ್ಯಕ್ರಮದಲ್ಲಿ ಸಂಗೀತ ಕಲಾವಿದರಾದ ಗುರುರಾಜ ಮಾರ್ಪಳ್ಳಿ ಸಂಪನ್ಮೂಲ ವ್ಯಕ್ತಿಯಾಗಿ ಮಾರ್ಗದರ್ಶನ ಮಾಡಲಿದ್ದಾರೆ. ಆಸಕ್ತರು ಉಚಿತವಾಗಿ ಹೆಸರು ನೋಂದಾಯಿಸಿಕೊಳ್ಳಲು 9886914748 ಸಂಪರ್ಕಿಸಬಹುದು.

Read More

ಮಂಗಳೂರು : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು ಇದರ ಆಶ್ರಯದಲ್ಲಿ ‘ಯಕ್ಷಧ್ರುವ ಪಟ್ಲ ಸಂಭ್ರಮ 2024’ ಕಾರ್ಯಕ್ರಮವು ದಿನಾಂಕ 26-05-2024ರಂದು ಅಡ್ಯಾರ್‌ನ ಅಡ್ಯಾ‌ರ್ ಗಾರ್ಡನ್‌ನಲ್ಲಿ ಜರುಗಲಿದೆ. ಬೆಳಗ್ಗೆ ಗಂಟೆ 7.45ಕ್ಕೆ ಚೌಕಿ ಪೂಜೆ – ಅಬ್ಬರ ತಾಳ, ಬಳಿಕ ಯಕ್ಷಧ್ರುವ ಪಟ್ಲ ಫೌಂಡೇಶನ್ ಇದರ ಮಹಿಳಾ ಘಟಕದ ಸದಸ್ಯೆಯರಿಂದ ಯಕ್ಷಗಾನ ನಡೆಯಲಿದೆ. 9-00 ಗಂಟೆಗೆ ಉದ್ಘಾಟನಾ ಸಮಾರಂಭದಲ್ಲಿ ಎಡನೀರು ಮಠದ ಶ್ರೀ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಅವರ ದಿವ್ಯ ಉಪಸ್ಥಿತಿಯಲ್ಲಿ ಶ್ರೀ ಕ್ಷೇತ್ರ ಕಟೀಲಿನ ಅನುವಂಶಿಕ ಪ್ರಧಾನ ಅರ್ಚಕರಾದ ವೆಂಕಟ್ರಮಣ ಆಸ್ರಣ್ಣ ಆರ್ಶೀರ್ವಚನ ನೀಡಲಿದ್ದಾರೆ. ಟ್ರಸ್ಟ್ ಗೌರವಾಧ್ಯಕ್ಷ ಕುಳೂರು ಕನ್ಯಾನ ಸದಾಶಿವ ಶೆಟ್ಟಿ ಉದ್ಘಾಟಿಸಲಿದ್ದು, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಪಾವಂಜೆ ಕ್ಷೇತ್ರದ ಆಡಳಿತ ಮೊಕ್ತೇಸರ ಶಶೀಂದ್ರ ಕುಮಾ‌ರ್ ಶುಭಾಶಂಸನೆಗೈಯಲಿರುವರು. 11-00 ಗಂಟೆಗೆ ಯುವ ಭಾಗವತರಿಂದ ‘ಗಾನ ವೈಭವ’ ನಡೆಯಲಿದೆ. ಮಧ್ಯಾಹ್ನ 1-00 ಗಂಟೆಗೆ ನಡೆಯುವ ಸಭಾ…

Read More

ಸುರತ್ಕಲ್ : ಮಣಿ ಕೃಷ್ಣಸ್ವಾಮಿ ಅಕಾಡೆಮಿ ಮತ್ತು ಸುರತ್ಕಲ್ ನಾಗರಿಕ ಸಲಹಾ ಸಮಿತಿ ಸಂಸ್ಥೆಗಳ ಆಶ್ರಯದಲ್ಲಿ ಹಿರಿಯ ಸಂಗೀತಗಾರ ವಿದ್ವಾನ್ ಎನ್.ಕೆ. ಸುಂದರಾಚಾರ್ಯ ಸಂಸ್ಮರಣಾ ಸಂಗೀತ ಕಛೇರಿಯು ದಿನಾಂಕ 26-05-2024ರಂದು ಸಂಜೆ ಗಂಟೆ 5-00ಕ್ಕೆ ಸುರತ್ಕಲ್‌ನ ‘ಅನುಪಲ್ಲವಿ’ಯಲ್ಲಿ ನಡೆಯಲಿದೆ. ಮೊದಲಿಗೆ ವಿದ್ವಾನ್ ಅನೀಶ್ ವಿ. ಭಟ್ ಅವರ ಶಿಷ್ಯರಾದ ಕುಮಾರಿ ಅನೀಷಾ ರಾವ್ ಮತ್ತು ಕುಮಾರಿ ಸಂಹಿತಾ ಇವರಿಂದ ಪ್ರಾರ್ಥನೆ ನಡೆಯಲಿದೆ. ಬಳಿಕ ಶೃಂಗೇರಿಯ ಸೀತಾ ಪ್ರಜ್ಞ ಡಿ.ಎಸ್. ಇವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ ನಡೆಯಲಿದೆ. ಇವರಿಗೆ ವಯಲಿನ್‌ನಲ್ಲಿ ಮಹತೀ ಕೆ. ಕಾರ್ಕಳ, ಮೃದಂಗದಲ್ಲಿ ನಿಕ್ಷಿತ್ ಪುತ್ತೂರು, ಬೆಂಗಳೂರು ಇವರು ಸಹಕರಿಸಲಿರುವರು. ಮಂಗಳೂರಿನ ಸನಾತನ ನಾಟ್ಯಾಲಯದ ವಿದುಷಿ ಶಾರದಾ ಮಣಿ ಶೇಖರ್ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಮಣಿ ಕೃಷ್ಣಸ್ವಾಮಿ, ಆಕಾಡೆಮಿಯ ಕಾರ್ಯದರ್ಶಿಯಾದ ಪಿ. ನಿತ್ಯಾನಂದ ರಾವ್ ಹಾಗೂ ಸುರತ್ಕಲ್ ನಾಗರಿಕ ಸಲಹಾ ಸಮಿತಿ ಅಧ್ಯಕ್ಷರಾದ ಡಾ. ಕೆ. ರಾಜಮೋಹನ್ ರಾವ್ ತಮಗೆಲ್ಲರಿಗೂ ಆದರದ ಸ್ವಾಗತ ಬಯಸಿದ್ದಾರೆ.

Read More