Author: roovari

ಮಂಗಳೂರು : ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿಯವರ 60 ವರ್ಷಗಳ ಸಾಧನಾ ಪಥದ ನೆಲೆಯಲ್ಲಿ ಕಲ್ಕೂರ ಪ್ರತಿಷ್ಠಾನದ ವತಿಯಿಂದ ‘ಷಷ್ಟ್ಯಬ್ದ ಅಭಿವಂದನ’ ಸಮಾರಂಭ ದಿನಾಂಕ 30-03-2024ರ ಶನಿವಾರದಂದು ಮಂಗಳೂರಿನ ಶರವು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ನಡೆಯಿತು. ಇದೇ ಸಂದರ್ಭದಲ್ಲಿ ಕಲ್ಕೂರ ಪ್ರತಿಷ್ಠಾನ ಆಯೋಜಿಸಿದ ಬಹುಭಾಷಾ ಕವನ ಹಾಗೂ ಭಕ್ತಿ ಗೀತೆ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಬಹುಭಾಷಾ ಕವನ ಸ್ಪರ್ಧೆಯ ಪ್ರೌಢಶಾಲಾ ವಿಭಾಗದಲ್ಲಿ ಕು. ಕೃತಿ ಬಿ. ಕೆ. ಎಕ್ಕಾರ್ ಪ್ರಥಮ, ಕು. ಧನ್ವಿತಾ ಕಾರಂತ್ ಬಂಟ್ವಾಳ ದ್ವಿತೀಯ, ಹಾಗೂ ಬೆಂಗಳೂರಿನ ಕು. ಸಿಂಚನಾ ಎಸ್. ಶಂಕರ್ ತೃತೀಯ. ಕಾಲೇಜು ವಿಭಾಗದಲ್ಲಿ ಕು. ವಿಜಯಲಕ್ಷ್ಮೀ ಆರ್. ಕಾಮತ್ ವಾರಂಗ ಪ್ರಥಮ, ಶ್ರೀ ಸಮ್ಯಕ್ತ್ ಜೈನ್ ಕಡಬ ದ್ವಿತೀಯ ಹಾಗೂ ಉತ್ತರಕನ್ನಡದ ಕು. ಭಾಗ್ಯಶ್ರೀ ಭಟ್ ತೃತೀಯ. ಮುಕ್ತ ವಿಭಾಗದಲ್ಲಿ ತೀರ್ಥಹಳ್ಳಿಯ ಶ್ರೀ ವಾ. ಮುರಳೀಧರ ಪ್ರಥಮ, ಬಂಟ್ವಾಳದ ಶ್ರೀಮತಿ ಶೈಲಜಾ ಕೇಕಣಾಜೆ ದ್ವಿತೀಯ ಹಾಗೂ ಬೆಂಗಳೂರಿನ ದಿವಾಕರ ಡೋಂಗ್ರೆ ತೃತೀಯ ಬಹುಮಾನವನ್ನು…

Read More

ಕಾಸರಗೋಡು: ಕನ್ನಡ ಭಾಷೆ ಮತ್ತು ಸಂಸ್ಕೃತಿಗಾಗಿ ಸೇವೆ ಸಲ್ಲಿಸಿದ ಹಿರಿಯರನ್ನು ಗೌರವಿಸುವ ಉದ್ದೇಶದಿಂದ ಕನ್ನಡ ಸಾಹಿತ್ಯ ಪರಿಷತ್ತಿನ ಕೇರಳ ಗಡಿನಾಡ ಘಟಕವು ಆರಂಭಿಸಿದ ‘ಸಾಹಿತ್ಯ ಪರಿಷತ್‌ನ ನಡಿಗೆ ಕನ್ನಡದ ಹಿರಿಯ ಸಾಧಕರ ಕಡೆಗೆ’ ಎಂಬ ಕಾರ್ಯಕ್ರಮದಡಿಯಲ್ಲಿ ಹಿರಿಯ ಪತ್ರಕರ್ತ, ತುಳು ಮತ್ತು ಕನ್ನಡ ಸಾಹಿತಿ ಮಲಾರ್ ಜಯರಾಮ ರೈ ಅವರನ್ನು ಅಭಿನಂದಿಸುವ ಕಾರ್ಯಕ್ರಮವು ದಿನಾಂಕ 30-03-2024ರಂದು ಶಿರಿಯದ ಅಡ್ಕದಲ್ಲಿರುವ ಅವರ ನಿವಾಸದಲ್ಲಿ ನಡೆಯಿತು. ಕನ್ನಡ ಸಾಹಿತ್ಯ ಪರಿಷತ್‌ನ ಕೇರಳ ಗಡಿನಾಡ ಘಟಕದ ಅಧ್ಯಕ್ಷ ಡಾ. ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ ಅವರು ಮಲಾರ್ ಜಯರಾಮ ರೈ ದಂಪತಿಯನ್ನು ಶಾಲು ಹೊದಿಸಿ ಫಲಪುಷ್ಪ, ಸ್ಮರಣಿಕೆ ನೀಡಿ ಗೌರವಿಸಿದರು.  ಕಾರ್ಯಕ್ರಮದಲ್ಲಿ ಅಭಿನಂದನಾ ಭಾಷಣ ಮಾಡಿದ ಕಸಾಪ ಗಡಿನಾಡ ಘಟಕದ ಗೌರವ ಕಾರ್ಯದರ್ಶಿ ಶೇಖರ ಶೆಟ್ಟಿ ಬಾಯಾರು “ಪತ್ರಿಕಾ ರಂಗಕ್ಕೆ ಹಾಗೂ ಧಾರ್ಮಿಕ ರಂಗಕ್ಕೆ ತುಳು ಮತ್ತು ಕನ್ನಡ ಭಾಷೆ, ಸಂಸ್ಕೃತಿಗೆ ಮಲಾರ್ ಜಯರಾಮ ರೈಗಳು ನೀಡಿದ ಕೊಡುಗೆ ಅಪಾರವಾದುದು.” ಎಂದರು.  ಕಣಿಪುರ ಪತ್ರಿಕೆಯ ಸಂಪಾದಕ ಎಂ.ನಾ.…

Read More

ಕೋಟ : ಮಿತ್ರ ಮಂಡಳಿ ಕೋಟ, ಡಾ. ಕಾರಂತ ಮಕ್ಕಳ ಸಾಹಿತ್ಯ ವೇದಿಕೆ ಸಾಲಿಗ್ರಾಮ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಬ್ರಹ್ಮಾವರ ತಾಲೂಕು ಘಟಕ ಇದರ ಜಂಟಿ ಆಶ್ರಯದಲ್ಲಿ ‘ಯುಗಾದಿ ಸಾಹಿತ್ಯೋತ್ಸವ’ವನ್ನು ದಿನಾಂಕ 11-04-2024ರಂದು ಕೋಟದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಾರಂತ ಸಭಾ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಬೆಳಗ್ಗೆ ಗಂಟೆ 9.30ರಿಂದ ಶ್ರೀಮತಿ ಪಲ್ಲವಿ ತುಂಗ ಇವರಿಂದ ಅಡಿಗ ಕಾವ್ಯ ರಸಧಾರೆ. 10-00 ಗಂಟೆಗೆ ಕೋಟದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಪುಷ್ಪಾವತಿ ಇವರ ಉಪಸ್ಥಿತಿಯಲ್ಲಿ ಕುಂದಾಪುರದ ಸಾಹಿತಿ ಹಿರಿಯ ನ್ಯಾಯವಾದಿಯಾದ ಶ್ರೀ ಎ.ಎಸ್.ಎನ್. ಹೆಬ್ಬಾರ್ ಇವರು ಈ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಗಂಟೆ 10-45ಕ್ಕೆ ‘ಸಾಹಿತ್ಯ ಸಲ್ಲಾಪ’ದಲ್ಲಿ ಉಪನ್ಯಾಸ -1ರಲ್ಲಿ ‘ಶ್ರೀ ನೀಲಾವರ ಸುರೇಂದ್ರ ಅಡಿಗರ ಶೈಕ್ಷಣಿಕ ಕೃತಿಗಳು’ ಎಂಬ ವಿಷಯದ ಬಗ್ಗೆ ಉಪಪ್ರಾಂಶುಪಾಲರಾದ ಡಾ. ಕೆ. ಅಶೋಕ ಕಾಮತ್ ಇವರು, ಉಪನ್ಯಾಸ -2ರಲ್ಲಿ ‘ಅಡಿಗ, ಇತ್ತೀಚಿನ ಸಾಹಿತ್ಯಾನುಸಂಧಾನ’ ಎಂಬ ವಿಷಯದ ಬಗ್ಗೆ ಸಾಹಿತಿ ಮತ್ತು ಶಿಕ್ಷಕರಾದ…

Read More

ಉಡುಪಿ : ಶ್ರೀ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನ ಅಂಬಲಪಾಡಿ ಇದರ ಆಶ್ರಯದಲ್ಲಿ ಕರ್ನಾಟಕ ಜಾನಪದ ಪರಿಷತ್ತು (ರಿ.) ಉಡುಪಿ ಜಿಲ್ಲೆ ಮತ್ತು ತಲ್ಲೂರ್ಸ್ ಫ್ಯಾಮಿಲಿ ಟ್ರಸ್ಟ್ (ರಿ.) ಇವರ ಸಹಯೋಗದಲ್ಲಿ ಉಡುಪಿಯ ಶ್ರೀ ರಾಮ್ ಜಾನಪದ ಕಲಾ ತಂಡದವರಿಂದ ‘ಜಾನಪದ ವೈಭವ’ವು ಅಂಬಲಪಾಡಿ ದೇವಸ್ಥಾನದ ಶ್ರೀ ಜನಾರ್ದನ ಬಯಲು ರಂಗ ಮಂದಿರದಲ್ಲಿ ದಿನಾಂಕ 07-04-2024ರಂದು ಸಂಜೆ 6 ಗಂಟೆಗೆ ನಡೆಯಲಿದೆ.

Read More

ಮಂಜೇಶ್ವರ : ಸಾಹಿತಿ, ವ್ಯಂಗ್ಯಚಿತ್ರಗಾರ, ಪತ್ರಕರ್ತ, ಅಂಕಣಬರಹಗಾರ, ಸಂಘಟಕ, ಕೃಷಿಕ, ಶಿಬಿರ ಸಂಪನ್ಮೂಲ ವ್ಯಕ್ತಿಯಾಗಿ ಸಮಾಜದ ವಿವಿಧ ಉನ್ನತ ಕ್ಷೇತ್ರಗಳಲ್ಲಿ ಸದಾ ತೊಡಗಿಸಿಕೊಂಡಿರುವ ಕಾಸರಗೋಡು ಜಿಲ್ಲೆಯ ಅಡೂರು ಗ್ರಾಮದ ಪ್ರಶಾಂತ ರಾಜ ವಿ ತಂತ್ರಿ (ವಿರಾಜ್ ಅಡೂರು) ಅವರಿಗೆ ದಿನಾಂಕ 01-04-2024ರ ಸೋಮವಾರದಂದು ‘ಗಡಿನಾಡ ಚೈತನ್ಯ -2024’ ಪ್ರಶಸ್ತಿ ಪ್ರದಾನ ಮಾಡಲಾಯಿತು. ವರ್ಕಾಡಿ ಕಾವಿ ಸುಬ್ರಹ್ಮಣ್ಯ ಕ್ಷೇತ್ರದ ಬ್ರಹ್ಮಕಲಶದ ಸಂದರ್ಭದಲ್ಲಿ ಕಾಸರಗೋಡಿನ ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕಂತಿಕ ಸಂಘದ ವತಿಯಿಂದ ನಡೆದ ಸಾಹಿತ್ಯ ಗಾನ ನೃತ್ಯ ವೈಭವ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ವಿರಾಜ್ ಅಡೂರು ಅವರ ಗಡಿನಾಡಿನಲ್ಲಿ ಕನ್ನಡ ಭಾಷೆಯ ಕುರಿತ ಕಾಳಜಿ ಹಾಗೂ ಸಮಾಜಮುಖಿ ಕೆಲಸಗಳನ್ನು ಗುರುತಿಸಿ ಈ ಪ್ರಶಸ್ತಿ ನೀಡಿಲಾಯಿತು. ಕಾರ್ಯಕ್ರಮದಲ್ಲಿ ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಘದ ಅಧ್ಯಕ್ಷೆ ಡಾ.ವಾಣಿಶ್ರೀ ಕಾಸರಗೋಡು, ಕಾರ್ಯದರ್ಶಿ ಗುರುರಾಜ್ ಕಾಸರಗೋಡು, ಜಯಂತಿ ಪಿ. ರಾಜ್, ಆದ್ಯಂತ್ ಅಡೂರು, ಉಷಾ ಸುಧಾಕರನ್, ವಿದುಷಿ ರೇಖಾ ದಿನೇಶ್ ಮಂಜೇಶ್ವರ, ಕಾವಿ ಸುಬ್ರಹ್ಮಣ್ಯ…

Read More

ಕಾಸರಗೋಡು : ಕಾಸರಗೋಡಿನ ಕೂಡ್ಲಿನಲ್ಲಿ ದೇಶೀಯ ಅಧ್ಯಾಪಕ ಪರಿಷತ್ ಇದರ ಕಾರ್ಯಾಲಯದ ಉದ್ಘಾಟನೆಯು ದಿನಾಂಕ 03-04-2024 ರಂದು ನಡೆಯಿತು. ಈ ಸಂದರ್ಭದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಬದಿಯಡ್ಕದ ರಂಗಸಿರಿ ಸಾಂಸ್ಕೃತಿಕ ವೇದಿಕೆಯ ಕಲಾವಿದರಿಂದ ‘ವೀರಮಣಿ ಕಾಳಗ’ ಎಂಬ ಪ್ರಸಂಗವು ಯಶಸ್ವಿಯಾಗಿ ಪ್ರದರ್ಶನಗೊಂಡಿತು. ಶತ್ರುಘ್ನನಾಗಿ ಮಾ. ಮನ್ವಿತ್ ಕೃಷ್ಣ ನಾರಾಯಣಮಂಗಲ ಅವರ ರಂಗನಡೆಗಳು, ಹನುಮನಾಗಿ ಕು. ಅಭಿಜ್ಞಾ ಭಟ್ ಅವರ ಉತ್ತಮ ವಾಕ್ಸರಣಿ, ವೀರಮಣಿಯ ಗತ್ತುಗಾರಿಕೆಯೊಂದಿಗೆ ಡಾ. ಶ್ರೀಶ ಕುಮಾರ ಪಂಜಿತ್ತಡ್ಕ, ಶಿವನಾಗಿ ಶ್ರೀ ಶಶಿಧರ ಕುದಿಂಗಿಲ ಅವರ ರಂಗವೈಖರಿ ಹಾಗೂ ಲಾಲಿತ್ಯ ಗಾಂಭೀರ್ಯದೊಂದಿಗೆ ಶ್ರೀರಾಮನಾಗಿ ವಿನಯ ಚಿಗುರುಪಾದೆ ಅವರು ಪ್ರಸಂಗದ ಯಶಸ್ಸಿಗೆ ಕಾಣಿಕೆಯಿತ್ತರು. ಭಾಗವತರಾಗಿ ಶ್ರೀ ಕೇಶವ ಪ್ರಸಾದ, ಚೆಂಡೆ ಹಾಗೂ ಮದ್ದಳೆಗಳಲ್ಲಿ ಶ್ರೀ ಚೇವಾರು ಶಂಕರ ಕಾಮತ್, ಯಕ್ಷಗಾನ ಗುರು ಶ್ರೀ ಸೂರ್ಯನಾರಾಯಣ ಪದಕಣ್ಣಾಯ ಬಾಯಾರು ಹಾಗೂ ಶ್ರೀ ಕೃಷ್ಣಮೂರ್ತಿ ಎಡನಾಡು ಹಿಮ್ಮೇಳಗಳಲ್ಲಿ ಸಹಕರಿಸಿದರು. ಪ್ರಬುದ್ಧ ಪ್ರೇಕ್ಷಕ ಗಡಣ ಮೌನವಾಗಿ ವೀಕ್ಷಿಸಿ, ಸೂಕ್ತ ಪ್ರತಿಕ್ರಿಯೆ ನೀಡಿದರು.

Read More

ಬೆಂಗಳೂರು: ಹಿರಿಯ ಪತ್ರಕರ್ತ, ಅಂಕಣಕಾರ ಎಂ. ಕೆ. ಭಾಸ್ಕರ್‌ರಾವ್ (75) ಅವರು ಅಸೌಖ್ಯದಿಂದ ಬೆಂಗಳೂರಿನಲ್ಲಿ ದಿನಾಂಕ 03-04-2024ರ ಬುಧವಾರದಂದು ನಿಧನರಾದರು. ಎರಡು ವರ್ಷದಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೃತರು ಪತ್ನಿ, ಪುತ್ರ ಹಾಗೂ ಅಪಾರ ಸಾಹಿತ್ಯಾಭಿಮಾನಿಗಳನ್ನು ಆಗಲಿದ್ದಾರೆ. ಮೂಲತಃ ಶಿರಸಿ ತಾಲೂಕಿನವರಾದ ಎಂ. ಕೆ. ಭಾಸ್ಕರ ರಾವ್ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಶಿಕ್ಷಣ ಮುಗಿಸಿ ಪತ್ರಿಕೋದ್ಯಮ ಸೇರಿದರು. ಸಂಯುಕ್ತ ಕರ್ನಾಟಕ ಪತ್ರಿಕೆಯ ಮೂಲಕ ವೃತ್ತಿಜೀವನ ಆರಂಭಿಸಿದ್ದ ಭಾಸ್ಕರ್‌ರಾವ್ ಆನಂತರ ‘ಪ್ರಜಾವಾಣಿ’ ಪತ್ರಿಕೆಯಲ್ಲಿ ದಶಕಗಳ ಕಾಲ ವರದಿಗಾರ, ಸಿನಿಮಾ ಪತ್ರಕರ್ತ, ರಾಜಕೀಯ ವಿಶ್ಲೇಷಕ, ಸಾಂಸ್ಕೃತಿಕ ಬರಹಗಾರರಾಗಿ ಕಾರ್ಯನಿರ್ವಹಿಸಿ ಸಹಾಯಕ ಸಂಪಾದಕರಾಗಿ ನಿವೃತ್ತರಾಗಿದ್ದರು. ನಿವೃತ್ತಿಯ ಬಳಿಕ ಅಂಕಣಕಾರರಾಗಿ ಹಲವು ಪತ್ರಿಕೆಗಳಲ್ಲಿ ರಾಜಕೀಯ ವಿದ್ಯಮಾನ, ಸಾಂಸ್ಕೃತಿಕ ಪಲ್ಲಟಗಳನ್ನು ವಿಶ್ಲೇಷಿಸಿ ಜನಪ್ರಿಯರಾಗಿದ್ದರು. ಭಾಸ್ಕರ್ ರಾವ್ ಅವರು ಉಪೇಂದ್ರ ಅಭಿನಯದ ‘ಹಾಲಿವುಡ್’ ಸಿನಿಮಾ ಸೇರಿ ಹಲವು ಚಿತ್ರಗಳಲ್ಲಿ ನಟಿಸಿದ್ದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ, ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ರಾಷ್ಟ್ರೀಯ…

Read More

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಯಕ್ಷ ಕಲಾ ಕೇಂದ್ರ ಹಾಗೂ ಲಲಿತ ಕಲಾ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಸ್ಪಂದನ ಸಭಾಭವನದಲ್ಲಿ ವಿಶ್ವ ರಂಗಭೂಮಿ ದಿನಾಚರಣೆಯ ಪ್ರಯುಕ್ತ ವಿಶೇಷ ಉಪನ್ಯಾಸ ಮತ್ತು ರಂಗಗೀತೆ ಗಾಯನ ಕಾರ್ಯಕ್ರಮವು ದಿನಾಂಕ 02-04-2024 ರಂದು ನಡೆಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ. ವಿಜಯಕುಮಾರ್ ಎಂ ವಿದ್ಯಾರ್ಥಿಗಳನ್ನು ಉದ್ದೇಶಿಸಿ ರಂಗಭೂಮಿಯ ವಿಕಾಸ, ರಂಗ ಭೂಮಿಯ ಪ್ರಕಾರಗಳು ಮತ್ತು ರೂಪಗಳು, ರಂಗ ಭೂಮಿಯ ಯಶಸ್ಸಿನಲ್ಲಿ ನಾಟಕಕಾರರು, ನಿರ್ದೇಶಕರು, ನಟರು ಮತ್ತು ವಿನ್ಯಾಸಕರ ಪಾತ್ರ, ರಂಗಭೂಮಿ ಸಂಸ್ಕೃತಿಯು ತೋರಿಸುವ ಜೀವನ ಮೌಲ್ಯಗಳು ಮತ್ತು ಸಾಮಾಜಿಕ ಸಮಸ್ಯೆಗಳು, ಜನಸಾಮಾನ್ಯರ ಮೇಲೆ ರಂಗಭೂಮಿಯ ಪ್ರಭಾವ, ಹಾಗೂ ರಂಗಭೂಮಿಯು ಶಕ್ತಿಯುತ ಶೈಕ್ಷಣಿಕ ಸಾಧನವಾಗಿ ಹೇಗೆ ಕಾರ್ಯ ನಿರ್ವಹಿಸುತ್ತದೆ ಎಂಬ ವಿಷಯಗಳ ಕುರಿತು ತಿಳಿಯಪಡಿಸಿದರು. ಕಾಲೇಜಿನ ಪ್ರಾಂಶುಪಾಲರಾದ ವಂದನೀಯ . ಡಾ. ಆ್ಯಂಟನಿ ಪ್ರಕಾಶ್‌ ಮೊಂತೇರೊ ಮಾತನಾಡಿ “ಡಿಜಿಟಲ್‌ ಮಾಧ್ಯಮಗಳ ಪ್ರಭಾವಕ್ಕೊಳಗಾದ ಜನತೆಯು ವೃತ್ತಿ ಹಾಗೂ ಹವ್ಯಾಸಿ ರಂಗಭೂಮಿಯ ಬಗ್ಗೆ…

Read More

ಬೆಂಗಳೂರು : ಕರ್ನಾಟಕ ಪತ್ರಕರ್ತೆಯರ ಸಂಘ ಮತ್ತು ಬೆಂಗಳೂರು ನಗರ ವಿಶ್ವವಿದ್ಯಾಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ‘ಮಹಿಳಾ ದಿನಾಚರಣೆ ಸಮಾರಂಭ’ ಕಾರ್ಯಕ್ರಮವು ದಿನಾಂಕ 03-04-2024ರ ಬುಧವಾರದಂದು ಜ್ಞಾನಜ್ಯೋತಿ ಸಭಾಂಗಣದ ಸೆಮಿನಾರ್ ಹಾಲ್ ನಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಿವೃತ್ತ ಐ.ಎ.ಎಸ್‌. ಅಧಿಕಾರಿ ನಾಗಾಂಬಿಕಾ ದೇವಿ ಮಾತನಾಡಿ “ಅನಕ್ಷರಸ್ಥ ಹೆಣ್ಣು ಮಕ್ಕಳಿಗೆ ಇರುವ ಧೈರ್ಯ ವಿದ್ಯಾವಂತ ಹೆಣ್ಣುಮಕ್ಕಳಲ್ಲಿ ಕಾಣುತ್ತಿಲ್ಲ. ವಿದ್ಯೆಯ ಜೊತೆಗೆ ಸಶಕ್ತರಾಗುವುದನ್ನು ಮಹಿಳೆಯರು ಕಲಿಯಬೇಕು. ಹೆಣ್ಮಕ್ಕಳನ್ನು ಓದಿಸುವುದು, ಅವರನ್ನು ಕೆಲಸಕ್ಕೆ ಕಳುಹಿಸುವುದೇ ಬಹಳ ದೊಡ್ಡ ಉಪಕಾರ ಎಂದು ಹೆಚ್ಚಿನ ಮನೆಗಳಲ್ಲಿ ಹಿರಿಯರು ತಿಳಿದುಕೊಂಡಿದ್ದಾರೆ. ಇಂಥ ಮನಃಸ್ಥಿತಿಯಿಂದ ಹೊರಬರಬೇಕು. ಐ.ಎ.ಎಸ್‌. ಅಧಿಕಾರಿಯಾಗಲಿ, ಪತ್ರಕರ್ತರಾಗಲಿ ಕೆಲಸದಲ್ಲಿ ಪುಲ್ಲಿಂಗ, ಸ್ತ್ರೀಲಿಂಗ ಎಂಬುದಿಲ್ಲ. ಕೆಲಸ ಮಾಡುವ ಸ್ಥಳಗಳಲ್ಲಿ ಈ ತಾರತಮ್ಯ ಮತ್ಯಾಕೆ ಇರಬೇಕು. ದಾಸ್ಯ ಮನೋಭಾವದಿಂದ ಮಹಿಳೆಯರು ಹೊರಬರಬೇಕು. ಅವಕಾಶವನ್ನು ಬೇರೆಯವರು ನೀಡುವುದಲ್ಲ. ಅವಕಾಶ ಪಡೆಯುವುದು ನಿಮ್ಮ ಹಕ್ಕು” ಎಂದು ಪ್ರತಿಪಾದಿಸಿದರು. ಮಹಿಳಾ ಹಕ್ಕುಗಳ ಹೋರಾಟಗಾರ್ತಿ ಬೃಂದಾ ಅಡಿಗ ಮಾತನಾಡಿ…

Read More

ಮಂಗಳೂರು : ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನ ಇದರ ಆಶ್ರಯದಲ್ಲಿ ವಿಶ್ವಕರ್ಮ ಕಲಾ ಪರಿಷತ್ ಹಮ್ಮಿಕೊಂಡಿರುವ ‘ಸಮರ್ಪಣಂ ಕಲೋತ್ಸವ 2024’ವು ದಿನಾಂಕ 13-04-2024ರಂದು ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದ ಆವರಣದಲ್ಲಿ ನಡೆಯಲಿದೆ. ಸಮರ್ಪಣಂ ಕಲೋತ್ಸವದ ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀಮಜ್ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಪೀಠಾಧೀಶ್ವರ ಪರಮ ಪೂಜ್ಯ ಜಗದ್ಗುರು ಅನಂತಶ್ರೀವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರು ದೀಪ ಪ್ರಜ್ವಲನೆ ಮಾಡಿ ನೆರವೇರಿಸಲಿರುವರು. ಇದೇ ಸಂದರ್ಭದಲ್ಲಿ ವಿಶ್ವವಿಖ್ಯಾತ ಅಯೋಧ್ಯಾ ಶ್ರೀ ರಾಮಲಲ್ಲಾ ವಿಗ್ರಹ ನಿರ್ಮಾತೃ ಅಭಿನವ ಅಮರಶಿಲ್ಪಿ ಶ್ರೀ ಅರುಣ್ ಯೋಗಿರಾಜ್ ಜೀ ಇವರಿಗೆ ‘ವಿಶ್ವಕರ್ಮ ಕುಲ ತಿಲಕ’ ಬಿರುದು ಪ್ರದಾನ ಹಾಗೂ ಗೌರವ ಸಂಮಾನ ನಡೆಯಲಿದೆ. ಮೂಡಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸ್ಥಾಪಕರು ಹಾಗೂ ಅಧ್ಯಕ್ಷರಾದ ಡಾ. ಎಂ. ಮೋಹನ ಆಳ್ವ ಇವರು ಕಲೋತ್ಸವಕ್ಕೆ ಚಾಲನೆ ನೀಡಲಿದ್ದು, ವಿಶ್ವಕರ್ಮ ಕಲಾ ಪರಿಷತ್ ಇದರ ಅಧ್ಯಕ್ಷರಾದ ಡಾ. ಎಸ್.ಪಿ. ಗುರುದಾಸ್ ಇವರು ಅಧ್ಯಕ್ಷತೆ ವಹಿಸಲಿದ್ದಾರೆ. ಹಿರಿಯ ಕಲಾ ಸಾಧಕರಾದ ಹರೇಕಳದ ಕಾಷ್ಠಶಿಲ್ಪಿ ಶ್ರೀ ಬೈತಾರ್…

Read More