Author: roovari

ಮಂಗಳೂರು : ಸೋಮೇಶ್ವರ ಕೊಲ್ಯದಲ್ಲಿರುವ ನಾಟ್ಯನಿಕೇತನ (ರಿ.) ಅರ್ಪಿಸುವ ‘ಕರ್ನಾಟಕ ರಾಜ್ಯೋತ್ಸವ’, ‘ಶಾಂತಲಾ ನಾಟ್ಯ’ ಪ್ರಶಸ್ತಿ’ ಪುರಸ್ಕೃತ ನೃತ್ಯ ಗುರು ನಾಟ್ಯಾಚಾರ್ಯ ಶ್ರೀ ಉಳ್ಳಾಲ್ ಮೋಹನ್ ಕುಮಾರ್ ಇವರ 90ನೇ ವರ್ಷಾಚರಣೆಯ ಪ್ರಯುಕ್ತ ನೃತ್ಯ ಸರಣಿ-ಮಾಲಿಕೆ 9 ‘ನಾಟ್ಯ ಮೋಹನ ನವತ್ಯುತ್ಸಹ’ ಕಾರ್ಯಕ್ರಮವನ್ನು ದಿನಾಂಕ 21 ಸೆಪ್ಟೆಂಬರ್ 2024ರಂದು ಸಂಜೆ 6-00 ಗಂಟೆಗೆ ಕೊಲ್ಯದ ನಾಟ್ಯನಿಕೇತನ ನೃತ್ಯಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ಕಲಾತಿಲಕ, ನಾಟ್ಯಾಚಾರ್ಯ ಉಳ್ಳಾಲ್ ಮೋಹನ್ ಕುಮಾರ್ ಇವರಿಂದ ದೇವತಾ ಜ್ಯೋತಿ ಪ್ರಜ್ವಲನೆಯೊಂದಿಗೆ ಪ್ರಾರಂಭವಾಗುವ ಈ ಕಾರ್ಯಕ್ರಮದಲ್ಲಿ ಮಂಗಳ ಗಂಗೋತ್ರಿ ಮಂಗಳೂರು ವಿಶ್ವವಿದ್ಯಾನಿಲಯ ರಸಾಯನ ಶಾಸ್ತ್ರ ವಿಭಾಗದ ಸಂಶೋಧಕಿ ನೃತ್ಯ ವಿದುಷಿ ಶ್ರೀಮತಿ ಅದಿತಿ ನಾಯಕ್ ಇವರು ನೃತ್ಯ ಪ್ರಸ್ತುತಿ ನೀಡಲಿದ್ದಾರೆ.

Read More

ಕಲ್ಮಂಜ : ಯಕ್ಷಧ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕ ಇದರ ವತಿಯಿಂದ ಸರಕಾರಿ ಪ್ರೌಢಶಾಲೆ ಕಲ್ಮಂಜದಲ್ಲಿ ಯಕ್ಷಧ್ರುವ-ಯಕ್ಷ ಶಿಕ್ಷಣ ನಾಟ್ಯ ತರಬೇತಿ ಕಾರ್ಯಕ್ರಮದ ಉದ್ಘಾಟನೆಯು ದಿನಾಂಕ 17 ಸೆಪ್ಟೆಂಬರ್ 2024ರಂದು ನಡೆಯಿತು. ಉದ್ಘಾಟನೆಯನ್ನು ಯಕ್ಷಧ್ರುವ ಪಟ್ಲ ಪೌಂಡೇಶನ್ ಬೆಳ್ತಂಗಡಿ ಘಟಕದ ಗೌರವ ಸಲಹೆಗಾರರಾದ ರಘುರಾಮ ಶೆಟ್ಟಿ ಇವರು ನೆರವೇರಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ. ಅಧ್ಯಕ್ಷ ಮಂಜುನಾಥ್ ಶೆಟ್ಟಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ಸುರೇಶ್‌ ಶೆಟ್ಟಿ ಲಾಯಿಲ, ಯಕ್ಷ ಗುರುಗಳಾದ ಈಶ್ವರ್ ಪ್ರಸಾದ್‌ ಧರ್ಮಸ್ಥಳ ಹಾಗೂ ಘಟಕದ ಪದಾಧಿಕಾರಿಗಳಾದ ವಸಂತ ಶೆಟ್ಟಿ, ಶ್ರದ್ಧಾ ವೆಂಕಟರಮಣ ಶೆಟ್ಟಿ ಉಜಿರೆ, ದೇವರಾಜ್ ಉಜಿರೆ ಇವರುಗಳು ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕಿ ಪೂರ್ಣಿಮಾ ಸ್ವಾಗತಿಸಿ, ಶಿಕ್ಷಕ ಸುಧೀಂದ್ರ ಕಾರ್ಯಕ್ರಮ ನಿರೂಪಿಸಿ, ಶಿಕ್ಷಕಿ ಸವಿತಾ ಧನ್ಯವಾದವಿತ್ತರು. ಶಾಲೆಯ ಎಲ್ಲಾ ಶಿಕ್ಷಕರು ಕಾರ್ಯಕ್ರಮಕ್ಕೆ ಸಹಕರಿಸಿದರು.

Read More

ಶಿವಮೊಗ್ಗ : ರಂಗಾಯಣ ಶಿವಮೊಗ್ಗ ಇದರ ವತಿಯಿಂದ ರಂಗಭೀಷ್ಮ ಬಿ.ವಿ. ಕಾರಂತರ ಜನ್ಮದಿನದ ನೆನಪಿನಲ್ಲಿ ಮೂರು ದಿನದ ‘ನಾಟಕೋತ್ಸವ 2024’ವನ್ನು 21 ಸೆಪ್ಟೆಂಬರ್ 2024ರಿಂದ 23 ಸೆಪ್ಟೆಂಬರ್ 2024ರವರೆಗೆ ಪ್ರತಿ ದಿನ ಸಂಜೆ 6-30 ಗಂಟೆಗೆ ಶಿವಮೊಗ್ಗದ ಅಶೋಕ ನಗರ, ಸುವರ್ಣ ಸಂಸ್ಕೃತಿ ಭವನದಲ್ಲಿ ಆಯೋಜಿಸಿದೆ. ದಿನಾಂಕ 21 ಸೆಪ್ಟೆಂಬರ್ 2024ರಂದು ಜೋಸೆಫ್ ಜಾನ್ ಇವರ ನಿರ್ದೇಶನದಲ್ಲಿ ಬೆಂಗಳೂರಿನ ಸುಸ್ಥಿರ ಪ್ರತಿಷ್ಠಾನ ತಂಡ ದವರಿಂದ ‘ಸರಸ ವಿರಸ ಸಮರಸ’ ನಾಟಕ, ದಿನಾಂಕ 22 ಸೆಪ್ಟೆಂಬರ್ 2024ರಂದು ಧಾರವಾಡದ ಆಟಮಾಟ (ರಿ) ಸಾಂಸ್ಕೃತಿಕ ಪಥ ತಂಡದವರು ಮಹಾದೇವ ಹಡಪದ ಇವರ ರಂಗರೂಪ, ಪರಿಕಲ್ಪನೆಯ ‘ನಾ ರಾಜಗುರು’ ಎಂಬ ನಾಟಕವನ್ನು ವಿಶ್ವರಾಜ ರಾಜಗುರು ಅಭಿನಯಿಸಲಿರುವರು. ದಿನಾಂಕ 23 ಸೆಪ್ಟೆಂಬರ್ 2024ರಂದು ಒಡ್ಡೋಲಗ ರಂಗಪರ್ಯಟನ ಹಿತ್ಲಕೈ ಇವರು ವಿವೇಕ್ ಶಾನ್ ಭಾಗ್ ರಚಿಸಿರುವ ಗಣಪತಿ ಬಿ. ಹಿತ್ಲಕೈ ಇವರ ನಿರ್ದೇಶನದಲ್ಲಿ ‘ಬಹುಮುಖಿ’ ನಾಟಕ ಪ್ರದರ್ಶನ ನೀಡಲಿದ್ದಾರೆ.

Read More

ಮಂಗಳೂರು : ನಮ್ಮನೆ ಕುಡ್ಲ, ನ್ಯೂಸ್ ಕರ್ನಾಟಕ ಮತ್ತು ಪಾತ್ ವೇ ಎಂಟರ್ಪ್ರೈಸ್ಸ್ ಇದರ ವತಿಯಿಂದ ಹಾಗೂ ಜೆ.ಸಿ.ಐ. ಇವರ ಸಹಯೋಗದೊಂದಿಗೆ ‘ಚಿತ್ರಕಲಾ ಸ್ಪರ್ಧೆ’ಯನ್ನು ದಿನಾಂಕ 21 ಸೆಪ್ಟೆಂಬರ್ 2024ರಂದು ರಾಜಾಜಿ ಪಾರ್ಕ್ ಇಲ್ಲಿ ಹಮ್ಮಿಕೊಳ್ಳಲಾಗಿದೆ. ‘ನಮ್ಮನೆ ಕುಡ್ಲ’ ಎಂಬ ವಿಷಯ ಬಗ್ಗೆ ಮೂರು ವಿಭಾಗಗಳಲ್ಲಿ ಈ ಸ್ಪರ್ಧೆಯು ನಡೆಯಲಿದ್ದು, ಹೆಚ್ಚಿನ ಮಾಹಿತಿಗಾಗಿ 7676218092 ಸಂಖ್ಯೆಯನ್ನು ಸಂಪರ್ಕಿಸಿರಿ.

Read More

ಬಸ್ರೂರು: ಯಶಸ್ವೀ ಕಲಾವೃಂದ (ರಿ.) ಕೊಮೆ ತೆಕ್ಕಟ್ಟೆ ಸಂಯೋಜನೆಯೊಂದಿಗೆ ‘ಸಿನ್ಸ್ 1999 ಶ್ವೇತಯಾನ-62’ ಕಾರ್ಯಕ್ರಮದಡಿಯಲ್ಲಿ ಆಯೋಜನೆಗೊಂಡ ‘ಸ್ಕೂಲ್ಸ್ ಇನ್ ಒಡ್ಡೋಲಗ’ ಕಾರ್ಯಕ್ರಮದ ಸಮಾರೋಪ ಸಮಾರಂಭ 18 ಸೆಪ್ಟೆಂಬರ್ 2024ರಂದು ಸರಕಾರಿ ಪ್ರೌಢ ಶಾಲೆ ಬಸ್ರೂರಿನಲ್ಲಿ ನಡೆಯಿತು. ಸಮಾರೋಪ ಸಮಾರಂಭವನ್ನು ಉದ್ಘಾಟಿಸಿದ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಸುಬ್ರಹ್ಮಣ್ಯ ಕಾಂತ್ ಮಾತನಾಡಿ “ಯಕ್ಷಗಾನ ಕಲೆಯನ್ನು ಉಳಿಸಬೇಕು, ಬೆಳೆಸಬೇಕು ಎನ್ನುವ ದೃಷ್ಟಿಯಿಂದ ಮಕ್ಕಳಿಂದ ಮಕ್ಕಳಿಗಾಗಿ ಯಕ್ಷಗಾನ ಒಡ್ಡೋಲಗ ಕಾರ್ಯಕ್ರಮ ಹೆಚ್ಚು ಪ್ರಸ್ತುತ. ಕಲೆಯಲ್ಲಿ ಪರಂಪರೆಯ ನಡೆಗಳು ಉಳಿಯುವುದಕ್ಕೆ ಸರ್ವರೂ ಶ್ರಮಿಸಬೇಕು. ಪೂರ್ವರಂಗವು ಯಕ್ಷಗಾನದ ಕಥೆಗಳ ಆಸ್ವಾದನೆಗೆ ಒಳ್ಳೆಯ ವಾತಾವರಣ ಕಲ್ಪಿಸಿಕೊಡುತ್ತದೆ. ಆದರೆ ಇತ್ತೀಚೆಗೆ ರಂಗದಲ್ಲಿ ಚೌಕಿ ಪೂಜೆಯ ಬಳಿಕ ಗಣಪತಿ ಸ್ತುತಿ ಮಾಡಿ ನೇರವಾಗಿ ಪ್ರಸಂಗ ಪ್ರದರ್ಶನ ಕಾಣುತ್ತೇವೆ. ಆದರೆ ಪ್ರಸಂಗದ ಪ್ರಸ್ತುತಿಗೆ ಮೊದಲು ಪೂರ್ವರಂಗದ ಹೂರಣವಿದ್ದರೆ ಹೆಚ್ಚು ಪರಿಣಾಮಕಾರಿಯಾಗುತ್ತದೆ. ಇದನ್ನು ಅಲ್ಲಲ್ಲಿ ಶಾಲೆಗಳಲ್ಲಿ ನೆನಪಿಸುವುದಕ್ಕೆ ಹೊರಟ ಸಂಸ್ಥೆಗೆ ಯಶಸ್ಸಾಗಲಿ.” ಎಂದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಅಶೋಕ್ ಬಸ್ರೂರು ಮಾತನಾಡಿ “ತೆಕ್ಕಟ್ಟೆ ಭಾಗದಲ್ಲಿ…

Read More

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ದಿವಂಗತ ಸಣ್ಣಯ್ಯ ಮತ್ತು ಗಿರಿಜಾ ದಂಪತಿಗಳಿಗೆ ದಿನಾಂಕ 07-07-1977ರಂದು ಜನಿಸಿದ ಸುಪುತ್ರಿ ಪ್ರೇಮ ಕಿಶೋರ್. ದಿವಾಣ ಶಿವಶಂಕರ್ ಭಟ್ ತೆಂಕಿನ ಗುರುಗಳು ಹಾಗೂ ಗುರುನಂದನ್ ಹೊಸೂರು ಬಡಗಿನ ಗುರುಗಳು. ಬಾಲ್ಯದಲ್ಲಿ ಯಕ್ಷಗಾನದ ಮೇಲೆ ತುಂಬಾ ಆಸಕ್ತಿ ಇತ್ತು. ಆದ್ರೆ ಅದಕ್ಕೆ ಅವಕಾಶ ಇರಲಿಲ್ಲ. ಮದುವೆ ಆದ ನಂತರ ನನ್ನ ಅತ್ತೆ ಯಕ್ಷಗಾನ ಮಾಡ್ತಾ ಇದ್ರು. ಅವರು ಬಡಗಿನ ವೇಷ ಮಾಡುತ್ತಿದ್ದರು. ಅವರೇ ನನಗೆ ಪ್ರೇರಣೆ ಎಂದು ಹೇಳುತ್ತಾರೆ ಪ್ರೇಮ ಕಿಶೋರ್. ರಂಗಕ್ಕೆ ಹೋಗುವ ಮೊದಲು ಪ್ರಸಂಗದ ಪದ್ಯಗಳನ್ನು ಓದುತ್ತೇನೆ. ನನ್ನ ಜೊತೆ ಪಾತ್ರದ ಬಗ್ಗೆ ತಿಳಿದುಕೊಳ್ಳುತ್ತೇನೆ. ಸಂವಾದ ಹೇಗೆ ಸೃಷ್ಟಿ ಆಗ್ತದೆ ಅಂತ ನೋಡಿಕೊಳ್ಳುತ್ತೇನೆ. ಹಿರಿಯ ಕಲಾವಿದರ ಅರ್ಥಗಾರಿಕೆಯನ್ನು ಕೇಳುತ್ತೇನೆ. ನನಗೆ ಕೊಟ್ಟ ಪಾತ್ರವನ್ನು ಅಚ್ಚುಕಟ್ಟಾಗಿ ಚೊಕ್ಕವಾಗಿ ತಪ್ಪಾಗದ ರೀತಿಯಲ್ಲಿ ನಿಭಾಯಿಸಬೇಕು ಎನ್ನುವ ಬದ್ಧತೆ ನಿಲ್ಲಿಸಿಕೊಳ್ಳುತ್ತೇನೆ. ಪಾತ್ರದ ಮೂಲ ಆಶಯಕ್ಕೆ ಯಾವುದೇ ರೀತಿಯ ತೊಂದರೆಯಾಗದ ರೀತಿಯಲ್ಲಿ ಎಚ್ಚರವಹಿಸುತ್ತೇನೆ. ಮೇಳದ ಆಟಗಳನ್ನು ನೋಡುವುದಕ್ಕೆ ಹೋಗುತ್ತೇನೆ. ಯಾವೆಲ್ಲಾ ಪಾತ್ರಗಳನ್ನು…

Read More

ಸಾಗರ : ಗೀರ್ವಾಣಭಾರತೀ ಟ್ರಸ್ಟ್ (ರಿ.) ಸಾಗರ ಮತ್ತು ಪಾಂಚಜನ್ಯ ಕಲಾವೇದಿಕೆ ಅಂಬಾರಗೋಡ್ಲು ಇವರ ಸಂಯುಕ್ತಾಶ್ರಯದಲ್ಲಿ ಶ್ರೀಧರ ಡಿ.ಎಸ್. ವಿರಚಿತ ‘ಸತ್ವಶೈಥಿಲ್ಯ’ ಎಂಬ ಪ್ರಸಂಗದ ಯಕ್ಷಗಾನ ತಾಳಮದ್ದಲೆಯು ದಿನಾಂಕ 21 ಸೆಪ್ಟೆಂಬರ್ 2024ರಂದು ಸಾಗರದ ಸಸರವಳ್ಳಿ, ಗಾಡಿಗೆರೆ, ವೆಂಕಟರಮಣ ದೇವಸ್ಥಾನದಲ್ಲಿ ನಡೆಯಲಿದೆ. ಹಿಮ್ಮೇಳದಲ್ಲಿ ಯಜ್ಞೇಶ್ವರ ಹೆಗಡೆ ಅಂಬಾರಗೋಡ್ಲು, ಚಿನ್ಮಯ ಹೆಗಡೆ ಅಂಬಾರಗೋಡ್ಲು, ಭಾರ್ಗವ ಕೆ.ಎನ್. ಮತ್ತು ಮಿತ್ರ ಮಧ್ಯಸ್ಥ ಗೊರಮನೆ. ಅರ್ಥಧಾರಿಗಳಾಗಿ ದ್ರೋಣ – ಅರುಣ ಬಿ.ಟಿ., ಅಶ್ವತ್ಥಾಮ – ರವಿಶಂಕರ ಕೆ.ಆರ್. ಸಾಗರ, ಕೃಷ್ಣ – ಪ್ರಶಾಂತ ಮಧ್ಯಸ್ಥ ಗೊರಮನೆ ಮತ್ತು ಬಲರಾಮ – ಮಿತ್ರ ಮಧ್ಯಸ್ಥ ಗೊರಮನೆ ಇವರುಗಳು ಸಹಕರಿಸಲಿದ್ದಾರೆ.

Read More

ಕುಂದಾಪುರ : ಸಮುದಾಯ ಸಾಂಸ್ಕೃತಿಕ ಸಂಘಟನೆ (ರಿ.) ಕುಂದಾಪುರ ಇವರ ವತಿಯಿಂದ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕುಂದಾಪುರ ಘಟಕ ಇವರ ಸಹಕಾರದೊಂದಿಗೆ ನಿರಂಜನ 100 ನೆನಪಿನಲ್ಲಿ ‘ತಿಂಗಳ ಓದು’ ಕಾರ್ಯಕ್ರಮವನ್ನು ದಿನಾಂಕ 22 ಸೆಪ್ಟೆಂಬರ್ 2024ರಂದು ಬೆಳಿಗ್ಗೆ 10-00 ಗಂಟೆಗೆ ಕುಂದಾಪುರದ ಭಂಡಾರ್ ಕಾರ್ಸ್ ಕಾಲೇಜು ರಸ್ತೆಯಲ್ಲಿರುವ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ನಿರಂಜನರ ‘ಧ್ವನಿ’ ಎಂಬ ಕಥೆಯನ್ನು ವಾಸುದೇವ ಗಂಗೇರ ಇವರ ರಂಗ ಓದು ಮತ್ತು ನಿರ್ದೇಶನದಲ್ಲಿ ಸಮುದಾಯ ಕುಂದಾಪುರ ಇವರು ಪ್ರಸ್ತುತ ಪಡಿಸಲಿರುವರು.

Read More

ಬೇಳೂರು : ಯಶಸ್ವೀ ಕಲಾವೃಂದ (ರಿ.) ಕೊಮೆ, ತೆಕ್ಕಟ್ಟೆ ‘ಸಿನ್ಸ್ 1999 ಶ್ವೇತಯಾನ-61’ರ ಕಾರ್ಯಕ್ರಮದಡಿಯಲ್ಲಿ ರೋಟರಿ ಕ್ಲಬ್ ತೆಕ್ಕಟ್ಟೆ ಸಹಕಾರದೊಂದಿಗೆ ‘ಶಾಲೆಗಳಲ್ಲಿ ಒಡ್ಡೋಲಗ’ ಎಂಬ ಕಾರ್ಯಕ್ರಮವು ದಿನಾಂಕ 18 ಸೆಪ್ಟೆಂಬರ್ 2024ರಂದು ಬೇಳೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಡಾ. ಪ್ರದೀಪ ವಿ. ಸಾಮಗ ಇವರು ಮಾತನಾಡಿ “ಯಕ್ಷಗಾನದಲ್ಲಿ ಬೆಳಕಿಗೆ ಬಹಳ ಮಹತ್ವ ಇದೆ. ರಾತ್ರಿ ಕೋಡಂಗಿ ತಂದ ಬೆಳಕು ರಂಗದಲ್ಲಿ ಪ್ರತಿಷ್ಟಾಪಿಸಿದರೆ, ಬೆಳಿಗ್ಗೆ ಮಂಗಳ ಆಗುವವರೆಗೆ ಆರುವ ಹಾಗಿರಲಿಲ್ಲ. ಯಕ್ಷಗಾನಕ್ಕೂ ಬೆಳಕಿಗೂ ಅನ್ಯೋನ್ಯ ಸಂಬಂಧವಿದೆ. ಹಾಗಾಗಿ ಯಕ್ಷಗಾನಕ್ಕೆ ಬೆಳಕಿನ ಸೇವೆ ಅಂತಲೇ ಹೆಸರು. ಬೆಳಕು ಅಂದರೆ ಜ್ಞಾನ. ಈ ಜ್ಞಾನ ಪ್ರಸಾರದಲ್ಲಿ ತನ್ನದ್ದಾದಂತಹ ಯೋಗದಾನವನ್ನು ಕೊಡುತ್ತಾ ಬಂದದ್ದು ಯಕ್ಷಗಾನ. ಹಾಡು, ನೃತ್ಯ, ಅಭಿನಯ, ಮಾತು, ಪೌರಾಣಿಕ ಪ್ರಜ್ಞೆ, ಸಾಹಿತ್ಯ ಜ್ಞಾನ, ಭಾಷಾ ಸ್ವಾತಂತ್ರ್ಯ ಎಲ್ಲವನ್ನೂ ಒಳಗೊಂಡ ಸಮೃದ್ಧ ಕಲೆ ಯಕ್ಷಗಾನ. ಯಕ್ಷಗಾನಕ್ಕೆ ಬರುವ ಯುವ ಕಲಾವಿದರಿಗೆ ಆಸಕ್ತಿ ಬಹಳ ಇದೆ. ಆದರೆ ಅದರ ಬಗೆಗಿನ…

Read More

ಬೆಂಗಳೂರು : ಯಕ್ಷಗಾನದ ಕಂಚಿನ ಕಂಠದ ಭಾಗವತರೆಂದೇ ಪ್ರಸಿದ್ಧರಾದ ಶ್ರೀಯುತ ಕಾಳಿಂಗ ನಾವಡರ ನೆನಪಿನಲ್ಲಿ ಬೆಂಗಳೂರಿನ ಪ್ರತಿಷ್ಟಿತ ಸಾಂಸ್ಕೃತಿಕ ಸಂಸ್ಥೆಯಾದ ಕಲಾ ಕದಂಬ ಆರ್ಟ್ ಸೆಂಟರ್ ಪ್ರತೀ ವರ್ಷ ಯಕ್ಷಗಾನದ ಸಾಧಕರೊಬ್ಬರಿಗೆ ‘ಕಾಳಿಂಗ ನಾವಡ ಪ್ರಶಸ್ತಿ’ ನೀಡುತ್ತಿದೆ. ಹತ್ತು ಸಾವಿರ ನಗದು, ಬೆಳ್ಳಿ ತಟ್ಟೆ, ಪ್ರಶಸ್ತಿ ಪತ್ರ, ನೆನಪಿನ ಕಾಣಿಕೆಯನ್ನು ‘ಕಾಳಿಂಗ ನಾವಡ ಪ್ರಶಸ್ತಿ’ಯು ಒಳಗೊಂಡಿರುತ್ತದೆ. ಗುಂಡ್ಮಿ ಸದಾನಂದ ಐತಾಳ್, ಸುಬ್ರಹ್ಮಣ್ಯ ಧಾರೇಶ್ವರ್, ಕೆಪ್ಪೆಕೆರೆ ಸುಬ್ರಾಯ ಹೆಗಡೆ, ಎಳ್ಳಾರೆ ವೆಂಕಟ್ರಾಯ ನಾಯಕ್, ನೆಬ್ಬೂರು ನಾರಾಯಣ ಹೆಗಡೆ, ಕರ್ಕಿ ಪ್ರಭಾಕರ ಭಂಡಾರಿ, ಕೆ.ಪಿ. ಹೆಗ್ಡೆ, ಟಿ. ಜಯಂತ್ ಕುಮಾರ್, ಮಂದಾರ್ತಿ ರಾಮಕೃಷ್ಣ, ಶ್ರೀಧರ ಹೆಬ್ಬಾರ್, ಗೋವಿಂದ ಉರಾಳ, ಶಂಕರ ಭಾಗವತ ಯಲ್ಲಾಪುರ, ಬಿದ್ಕಲ್‌ಕಟ್ಟೆ ಕೃಷ್ಣಯ್ಯ ಆಚಾರ್ಯ ಹಾಗೂ ಸುರೇಶ್ ರಾವ್ ಬಾರ್ಕೂರ್ ಅವರು ಈಗಾಗಲೇ ‘ಕಾಳಿಂಗ ನಾವಡ ಪ್ರಶಸ್ತಿ’ಗೆ ಭಾಜನರಾಗಿದ್ದಾರೆ. ಈ ಸಾಲಿನ ‘ಕಾಳಿಂಗ ನಾವಡ ಪ್ರಶಸ್ತಿ’ಯನ್ನು ಸುಮಾರು 46 ವರ್ಷಗಳಿಂದ ಯಕ್ಷಗಾನದ ವೀರ ವಾದ್ಯವೆನಿಸಿದ ಚಂಡೆಯ ನುಡಿಸಾಣಿಕೆಯಲ್ಲಿ ನೈಪುಣ್ಯತೆಯನ್ನು ಸಾಧಿಸಿ ಚಂಡೆಯ…

Read More