Author: roovari

ಮಂಗಳೂರು : ಡಾ. ಮಾಲತಿ ಶೆಟ್ಟಿ ಮಾಣೂರು ಸಾರಥ್ಯದ ಸಾಹಿತ್ಯ ಪರ ಅಮೃತ ಪ್ರಕಾಶ ಪತ್ರಿಕೆಯ ವತಿಯಿಂದ ನಡೆದ 41ನೇ ಸರಣಿ ಕೃತಿ ಲೇಖಕ ಹಾಗೂ ವಿಜಯಾ ಬ್ಯಾಂಕ್‌ನ ನಿವೃತ್ತ ಮುಖ್ಯ ಪ್ರಬಂಧಕರಾದ ಚೇರ್ಕಾಡಿ ಸಚ್ಚಿದಾನಂದ ಶೆಟ್ಟಿಯವರ ‘ಪ್ರಕೃತಿಯೇ ಮಹಾಮಾತೆ’ ಇದರ ಲೋಕಾರ್ಪಣೆ ಸಮಾರಂಭವು ದಿನಾಂಕ 27-06-2024ರಂದು ಮಂಗಳೂರಿನ ಪತ್ರಿಕಾ ಭವನದಲ್ಲಿ ನಡೆಯಿತು. ಕಾರ‍್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ರಾಮಕೃಷ್ಣ ಕೈಡಿಟ್ ಕೋ-ಅಪರೇಟಿವ್ ಸೊಸೈಟಿ ಮಂಗಳೂರು ಇದರ ಅಧ್ಯಕ್ಷರಾದ ಕೆ. ಜೈರಾಜ್ ಬಿ. ರೈ ವಹಿಸಿದ್ದರು. ‘ಪ್ರಕೃತಿಯೇ ಮಾಹಾಮಾತೆ’ ಕೃತಿಯನ್ನು ಎಸ್. ಡಿ. ಎಂ. ಪಿ. ಜಿ. ಮ್ಯಾನೇಜ್‌ಮೆಂಟ್ ಸೆಂಟರ್‌ನ ನಿವೃತ್ತ ಪ್ರಾಂಶುಪಾಲರು ಮತ್ತು ನಿದೇರ್ಶಕರಾದ ಡಾ. ದೇವರಾಜ್ ಕೆ. ಲೋಕಾರ್ಪಣೆಗೊಳಿಸಿದರು. ಮುಖ್ಯ ಅತಿಥಿಗಳಾಗಿ ಉದ್ಯಮಿ, ಸಮಾಜಸೇವಕ ಹಾಗೂ ವಿಕಾಸ ಸೇವಾ ಪ್ರತಿಷ್ಠಾನ ಸಂಘದ ಅಧ್ಯಕ್ಷರಾದ ಸದಾನಂದ ಉಪಾಧ್ಯಾಯ, ಕೃತಿಯ ಲೇಖಕರಾದ ಚೇರ್ಕಾಡಿ ಸಚ್ಚಿದಾನಂದ ಶೆಟ್ಟಿ, ಅಮೃತಪ್ರಕಾಶ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಡಾ. ಮಾಲತಿ ಶೆಟ್ಟಿ ಮಾಣೂರು ಉಪಸ್ಥಿತರಿದ್ದರು.

Read More

ಉಡುಪಿ : ‘ನಮ‌ ತುಳುವೆರ್ ಕಲಾ ಸಂಘಟನೆ’ ಮುದ್ರಾಡಿ ಮತ್ತು ‘ಕರ್ನಾಟಕ ಬೀದಿ ನಾಟಕ ಅಕಾಡೆಮಿ’ ವತಿಯಿಂದ ಉಡುಪಿಯ ಯಕ್ಷಗಾನ ಕಲಾರಂಗದ ಐ.ವೈ.ಸಿ. ಸಭಾಂಗಣದಲ್ಲಿ ದಿನಾಂಕ 27-06-2024ರಂದು ಜರಗಿದ ಕಾರ್ಯಕ್ರಮದಲ್ಲಿ ‘ಸಿ.ಜಿ.ಕೆ. ರಂಗ ಪುರಸ್ಕಾರ-2024’ವನ್ನು ಪ್ರದಾನ ಮಾಡಲಾಯಿತು. ರಂಗಕರ್ಮಿಗಳಾದ ಉಡುಪಿಯ ರವಿರಾಜ ಎಚ್.ಪಿ. ಮತ್ತು ಮಂಗಳೂರಿನ ಶಶಿರಾಜ್ ರಾವ್ ಕಾವೂರು ಇವರಿಗೆ ಹಿರಿಯ ವಿದ್ವಾಂಸ ನಾಡೋಜ ಡಾ. ಕೆ.ಪಿ. ರಾವ್ ಇವರು ‘ಸಿ.ಜಿ.ಕೆ. ರಂಗ ಪುರಸ್ಕಾರ’ ಪ್ರದಾನ ಮಾಡಿ “ರಂಗಭೂಮಿಯಿಂದ ಸಾಮಾಜಿಕ ಬದಲಾವಣೆಯಾಗುತ್ತದೆ. ಬಿ.ವಿ. ಕಾರಂತರಂತ ಶ್ರೇಷ್ಠ ಕಲಾವಿದರು ರಂಗಭೂಮಿ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅಪಾರವಾದುದು” ಎಂದರು. ತುಳುಕೂಟ ಉಡುಪಿಯ ಅಧ್ಯಕ್ಷರಾದ ಇಂದ್ರಾಳಿ ಜಯಕರ ಶೆಟ್ಟಿ ಅವರು ಅಧ್ಯಕ್ಷತೆ ವಹಿಸಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಶ್ರೀಮತಿ ಪೂರ್ಣಿಮಾ ಮತ್ತು ಕಲಾವಿದ ಮೈಮ್ ರಾಮದಾಸ್ ಅವರು ಸಿ.ಜಿ.ಕೆ‌‌‌. ಅವರೊಂದಿಗಿನ ಒಡನಾಟವನ್ನು ನೆನಪಿಸಿಕೊಂಡರು. ಸಂಸ್ಕೃತಿ ವಿಶ್ವಪ್ರತಿಷ್ಠಾನದ ಸ್ಥಾಪಕ ವಿಶ್ವನಾಥ್ ಶೆಣೈ ಮತ್ತು ರಂಗಕರ್ಮಿ ನಮ ತುಳುವೆರ್ ಕಲಾ ಸಂಘಟನೆಯ ಸುಕುಮಾರ್…

Read More

ಮಂಗಳೂರು : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು ಇದರ ಉಚಿತ ಯಕ್ಷಗಾನ ತರಬೇತಿ ಅಭಿಯಾನದಡಿ ನಡೆಯುತ್ತಿರುವ ಯಕ್ಷಶಿಕ್ಷಣ ತರಗತಿಯ ಉದ್ಘಾಟನಾ ಸಮಾರಂಭವನ್ನು ದಿನಾಂಕ 25-06-2024ರಂದು ಮುಳ್ಳಕಾಡು ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಮಂಗಳೂರಿನ ಮಹಾಪೌರರಾದ ಶ್ರೀ ಸುಧೀರ್ ಶೆಟ್ಟಿ ಕಣ್ಣೂರು ಇವರು ಉದ್ಘಾಟಿಸಿದರು. ದ.ಕ. ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಶ್ರೀ ವೆಂಕಟೇಶ್ ಪಟಗಾರ ಅಧ್ಯಕ್ಷತೆ ವಹಿಸಿದ್ದರು. ಪಟ್ಲ ಫೌಂಡೇಶನ್ನಿನ ಸ್ಥಾಪಕಾಧ್ಯಕ್ಷರಾದ ಶ್ರೀ ಸತೀಶ್ ಶೆಟ್ಟಿ ಪಟ್ಲ ಇವರ ಗೌರವ ಉಪಸ್ಥಿತಿಯಲ್ಲಿ ಮಂಗಳೂರಿನ ಮಹಾಪೌರರಾದ ಶ್ರೀ ಸುಧೀರ್ ಶೆಟ್ಟಿ ಕಣ್ಣೂರು ಮತ್ತು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಶ್ರೀ ವೆಂಕಟೇಶ್ ಪಟಗಾರ ಇವರನ್ನು ಗೌರವಿಸಲಾಯಿತು. ಮುಳ್ಳಕಾಡು ಶಾಲಾ ಮುಖ್ಯ ಶಿಕ್ಷಕರಾದ ಶ್ರೀ ಜಿ. ಉಸ್ಮಾನ್ ರವರು ಅತಿಥಿಗಳನ್ನು ಸ್ವಾಗತಿಸಿದರು. ಯಕ್ಷಧ್ರುವ ಪಟ್ಲ ಫೌಂಡೇಶನ್ ನ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪುರುಷೋತ್ತಮ ಭಂಡಾರಿಯವರು ಪ್ರಸ್ತಾವನೆಗೈದರು. ಸ್ಥಳೀಯ ಕಾರ್ಪೋರೇಟರ್ ಶ್ರೀಮತಿ ಗಾಯತ್ರಿ ಎ. ರಾವ್, ಪ್ರೌಢ ಶಾಲಾ ಎಸ್.ಡಿ.ಎಂ.ಸಿ.…

Read More

ಮಂಜನಾಡಿ : ಅಂಬುರುಹ ಯಕ್ಷಸದನ ಪ್ರತಿಷ್ಠಾನ ಬೊಟ್ಟಿಕೆರೆ (ರಿ.) ಮಂಜನಾಡಿ ಸಂಸ್ಥೆಯ 2024ನೇ ಸಾಲಿನ ಅಭಿನವ ವಾಲ್ಮೀಕಿ, ಯಕ್ಷಗಾನ ಸವ್ಯಸಾಚಿ ಬೊಟ್ಟಿಕೆರೆ ಪುರುಷೋತ್ತಮ ಪೂಂಜ ಸಂಸ್ಮರಣಾರ್ಥ ‘ಅಂಬುರುಹ ಯಕ್ಷಸದನ ಪ್ರಶಸ್ತಿ’ ಪ್ರದಾನ ಕಾರ್ಯಕ್ರಮವು ದಿನಾಂಕ 21-06-2024ರಂದು ಪೂಂಜರ ಮನೆ ಅಂಬುರುಹದಲ್ಲಿ ನಡೆಯಿತು. ಪ್ರಶಸ್ತಿ ಸ್ವೀಕರಿಸಿದ ತೆಂಕುತಿಟ್ಟು ಯಕ್ಷಗಾನ ರಂಗದ ಅಭಿನವ ಕೋಟಿ ಖ್ಯಾತಿಯ ಕಲಾವಿದ ಶ್ರೀ ಕೆ.ಎಚ್. ದಾಸಪ್ಪ ರೈ ಇವರು ಮಾತನಾಡಿ “ಯಕ್ಷಗಾನ ರಂಗದ ಹಿಮ್ಮೇಳ-ಮುಮ್ಮೇಳದ ಬಗ್ಗೆ ಅಪಾರ ಜ್ಞಾನ ಹೊಂದಿದ್ದ ಬೊಟ್ಟಿಕೆರೆ ಪುರುಷೋತ್ತಮ ಪೂಂಜರು ಆಡಂಬರವನ್ನು‌ ಬಯಸದ ಸವ್ಯಸಾಚಿ ಕಲಾವಿದ. ಅವರ ಯಕ್ಷಗಾನೀಯ ಚಿಂತನೆಗಳು ಮತ್ತು ಪ್ರಸಂಗಗಳು ಸಾರ್ವಕಾಲಿಕವಾದುದು. ಪೂಂಜರು ಯಕ್ಷಗಾನ ಲೋಕದ ರಸಕವಿ ಸರ್ವಜ್ಞ. ಇವರ ಪ್ರಸಂಗಗಳು ಪುರಾಣಗಳನ್ನು ತಾರ್ಕಿಕ ನೆಲೆಯಲ್ಲಿ ಕಟ್ಟಿಕೊಡುತ್ತವೆ. ಯಕ್ಷಗಾನೀಯ ಚಟುವಟಿಕೆಯನ್ನು ಮುಂದುವರಿಸುವಲ್ಲಿ ಕಾರ್ಯಪ್ರವೃತ್ತವಾಗಿರುವ ಅಂಬುರುಹ ಪ್ರತಿಷ್ಠಾನದ‌ ಕೆಲಸ ಸ್ತುತ್ಯಾರ್ಹವಾದುದು. ಪೂಂಜರ ಹೆಸರಿನಲ್ಲಿ ಕೊಡುವ ಈ ಪ್ರಶಸ್ತಿಯು ನನ್ನ ಪಾಲಿಗೆ ಬೊಟ್ಟಿಕೆರೆಯ ಪ್ರಸಾದ” ಎಂದು ಹೇಳಿದರು. ಅಂಬುರುಹ ಪ್ರತಿಷ್ಠಾನದ ಟ್ರಸ್ಟಿ ಸದಾಶಿವ ಆಳ್ವ…

Read More

ಬೆಂಗಳೂರು : ಮಂಡ್ಯದಲ್ಲಿ ಅಯೋಜಿತವಾಗಿರುವ 87ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ದಿನಾಂಕಗಳನ್ನು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಮತ್ತು ಪದಾಧಿಕಾರಿಗಳು, ಮಂಡ್ಯ ಜಿಲ್ಲೆಯ ಉಸ್ತುವಾರಿ ಸಚಿವರಾದ ಚೆಲುವರಾಯ ಸ್ವಾಮಿ, ಮಂಡ್ಯ ಜಿಲ್ಲೆಯ ಶಾಸಕರುಗಳನ್ನು ಒಳಗೊಂಡ ಸಭೆಯಲ್ಲಿ ಚರ್ಚಿಸಿ ದಿನಾಂಕ 25-06-2024ರಂದು ಅಂತಿಮಗೊಳಿಸಿ ಪ್ರಕಟಿಸಿದ್ದಾರೆ. ಮಂಡ್ಯದಲ್ಲಿ ಅಯೋಜಿತವಾಗಿರುವ 87ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಡಿಸೆಂಬರ್ ತಿಂಗಳ 20, 21, 22ರ ಶುಕ್ರವಾರ, ಶನಿವಾರ, ಭಾನುವಾರಗಳಂದು ನಡೆಯಲಿದೆ. ಕನ್ನಡ ಸಾಹಿತ್ಯ ಪರಿಷತ್ತು, ಸರ್ಕಾರ ಮತ್ತು ಜಿಲ್ಲಾಡಳಿತದ ಸಂಪೂರ್ಣ ಸಹಾಯ, ಸಹಕಾರ, ಸಹಯೋಗ, ಸಮನ್ವಯ ಮತ್ತು ಸಮಾಲೋಚನೆಗಳಿಂದ ಈ ಸಮ್ಮೇಳನವು ಯಶಸ್ವಿಯಾಗಿ ನಡೆಯಲಿದೆ ಎನ್ನುವ ವಿಶ್ವಾಸವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿಯವರು ವ್ಯಕ್ತಪಡಿಸಿದ್ದಾರೆ. ಮೂರು ದಿನಗಳ ಕಾಲ ಜಗತ್ತಿನಲ್ಲೆಡೆಯಲ್ಲಿಯೂ ಇರುವ ಕನ್ನಡಿಗರು ಅಕ್ಕರೆಯ ನಾಡು ಸಕ್ಕರೆಯ ಬೀಡು ಮಂಡ್ಯಕ್ಕೆ ಆಗಮಿಸಬೇಕು. ಅಲ್ಲಿ ಕನ್ನಡ-ಕನ್ನಡಿಗ–ಕರ್ನಾಟಕದ ಕುರಿತು ಅರ್ಥಪೂರ್ಣ…

Read More

ಮಂಜನಾಡಿ : ಭಾರತಿ ಕಲಾ ಆರ್ಟ್ಸ್ ಪೂಪಾಡಿಕಲ್ಲ್ ಇದರ ಸಂಯೋಜನೆಯಲ್ಲಿ ಯಕ್ಷಗಾನ ತಾಳಮದ್ದಳೆ ಸಪ್ತಾಹ ಮತ್ತು ಯಕ್ಷಗಾನ ಪ್ರದರ್ಶನವನ್ನು ದಿನಾಂಕ 30-06-2024ರಿಂದ 07-07-2024ರವರೆಗೆ ಸಂಜೆ 6-00 ಗಂಟೆಗೆ ಪೂಪಾಡಿಕಲ್ಲ್ ಶ್ರೀ ನಾಗದೇವತಾ ರಕ್ತೇಶ್ವರೀ ಸನ್ನಿಧಿಯಲ್ಲಿ ಹಮ್ಮಿಕೊಳ್ಳಲಾಗಿದೆ. ದಿನಾಂಕ 30-06-2024ರಂದು ಯಕ್ಷಬಳಗ ಹೊಸಂಗಡಿ ಇದರ ಕಲಾವಿದರಿಂದ ತಾಳಮದ್ದಳೆ ‘ಭ್ರಗುಶಾಪ’, ದಿನಾಂಕ 01-07-2024ರಂದು ಶ್ರೀ ಶಂಕರನಾರಾಯಣ ಯಕ್ಷಗಾನ ಪ್ರತಿಷ್ಠಾನ ಕೋಳ್ಯೂರು ಇದರ ಕಲಾವಿದರಿಂದ ತಾಳಮದ್ದಳೆ ‘ಕರ್ಮಬಂದ’, ದಿನಾಂಕ 02-07-2024ರಂದು ಶ್ರೀ ವಿಶ್ವಭಾರತಿ ಯಕ್ಷ ಕಲಾ ಮಿಲನ ಕೋಟೆಕಾರು ಮಡೂರು ಇವರಿಂದ ತಾಳಮದ್ದಳೆ ‘ಪ್ರತಿಸ್ವರ್ಗ’, ದಿನಾಂಕ 03-07-2024ರಂದು ಶ್ರೀ ಮಹಾಲಿಂಗೇಶ್ವರ ಮಹಿಳಾ ಯಕ್ಷಗಾನ ಮಂಡಳಿ, ಕುಂಜತ್ತೂರು ಇವರಿಂದ ತುಳು ತಾಳಮದ್ದಳೆ ‘ಅಂಕದ ಬೂಲ್ಯ’, ದಿನಾಂಕ 04-07-2024ರಂದು ವಿಶ್ವಭಾರತಿ ಯಕ್ಷ ಸಂಜೀವಿನಿ ಟ್ರಸ್ಟ್ (ರಿ.) ಮುಡಿಪು ಇವರಿಂದ ತಾಳಮದ್ದಳೆ ‘ಶಿವಭಕ್ತ ವೀರಮಣಿ’, ದಿನಾಂಕ 05-07-2024ರಂದು ಇರಾ ಶ್ರೀ ಸೋಮನಾಥೇಶ್ವರ ಯಕ್ಷಗಾನ ಕಲಾ ಸಂಘ ಇರಾ, ಕುಂಡಾವು ಇವರಿಂದ ತಾಳಮದ್ದಳೆ ‘ಕರ್ಣಾರ್ಜುನ’, ದಿನಾಂಕ 06-07-2024ರಂದು ಶ್ರೀ ಭ್ರಾಮರಿ ಕಲಾವೃಂದ…

Read More

ಬಂಟ್ವಾಳ : ಶ್ರೀರಾಮ ಪ್ರೌಢಶಾಲೆಯ ಮಧುಕರ ಸಭಾಂಗಣದಲ್ಲಿ ದಿನಾಂಕ 25-06-2024ನೇ ಮಂಗಳವಾರದಂದು ಯಕ್ಷಧ್ರುವ ಯಕ್ಷ ಶಿಕ್ಷಣ ತರಬೇತಿ ಉದ್ಘಾಟನಾ ಕಾರ್ಯಕ್ರಮವನ್ನು ಅತಿಥಿ ಅಭ್ಯಾಗತರಿಂದ ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಲಾಯಿತು. ಶ್ರೀವತ್ಸ ದೇವರ ಸ್ತುತಿಯನ್ನು ಹಾಡಿದನು. ಈ ಕಾರ್ಯಕ್ರಮದ ಅಧ್ಯಕ್ಷರಾದ ಶ್ರೀರಾಮ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿ, ಶ್ರೀರಾಮ ವಿದ್ಯಾ ಕೇಂದ್ರದ ಟ್ರಸ್ಟಿ ಹಾಗೂ ಮಂಗಳೂರು ಗ್ರಾಮಾಂತರ ಜಿಲ್ಲಾ ಗ್ರಾಮಾವಿಕಾಸ ಸಂಯೋಜಕರಾದ ಶ್ರೀ ಸುಜಿತ್ ಕುಮಾರ್ ಇವರು ಮಾತನಾಡಿ “ಯಕ್ಷಗಾನವು ಶಿಕ್ಷಣದ ಜೊತೆ ಇರುವಂತಹ ಒಂದು ಕಲೆ. ಈ ಕಲೆಯನ್ನು ಮತ್ತು ಸಂಸ್ಕೃತಿಯನ್ನು ಉಳಿಸುವುದು ನಮ್ಮ ಕರ್ತವ್ಯ ಹಾಗೂ ವಿಶ್ವಗುರು ಭಾರತ ನಿರ್ಮಾಣದಲ್ಲಿ ಯಕ್ಷಗಾನದ ಕಲೆಯ ಪಾತ್ರವು ಮುಖ್ಯವಾಗಬೇಕು” ಎಂದು ತಿಳಿಸಿದರು. ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು ಇದರ ವಿಟ್ಲ ಘಟಕದ ಅಧ್ಯಕ್ಷರಾದ ಶ್ರೀ ರಾಧಾಕೃಷ್ಣ ಶೆಟ್ಟಿ ಚೆಲ್ಲಡ್ಕ ಇವರು “ಯಕ್ಷಗಾನವನ್ನು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು ಹಾಗೂ ಯಕ್ಷಗಾನದ ಜೊತೆ ಸಮಾಜಕ್ಕೆ ನಮ್ಮಿಂದಾಗುವ ಸೇವೆ ಮಾಡಬೇಕು” ಎಂದು ಹೇಳಿ ಶುಭ ಹಾರೈಸಿದರು.…

Read More

ಬೆಂಗಳೂರು : ಕರ್ನಾಟಕ ನಾಟಕ ಅಕಾಡೆಮಿಯು ರಂಗಭೂಮಿಗೆ ಸಂಬಂಧಿಸಿದಂತೆ ಈಗಾಗಲೇ ಪ್ರಕಟವಾಗಿರುವ ರಂಗಭೂಮಿಯ ಆಕರ ಗ್ರಂಥಗಳಿಗೆ ಬಹುಮಾನ ನೀಡಲು ತೀರ್ಮಾನಿಸಿದೆ. ಕನ್ನಡ ರಂಗಭೂಮಿಯ ಬೆಳವಣಿಗೆ, ವೈವಿಧ್ಯತೆ ಹಾಗೂ ರಂಗಭೂಮಿಯ ಇತಿಹಾಸವನ್ನು ತಿಳಿಸುವಂತಹ ವಿಮರ್ಶಾತ್ಮಕ ಕೃತಿಗಳಿಗೆ ಈ ಬಹುಮಾನ ನೀಡಲಾಗುವುದು. 2021, 2022 ಮತ್ತು 2023ನೇ ಸಾಲಿನಲ್ಲಿ ಪ್ರಕಟವಾದ ಕೃತಿಗಳನ್ನು ಈ ಬಹುಮಾನಕ್ಕಾಗಿ ಆಹ್ವಾನಿಸಲಾಗಿದ್ದು, ಪ್ರತಿಸಾಲಿಗೆ ತಲಾ ಒಂದು ಪುಸ್ತಕ ಬಹುಮಾನವನ್ನು ನೀಡಲಾಗುವುದು. ಈ ಬಹುಮಾನದ ಮೊತ್ತ ರೂ.25,000/-ಗಳಾಗಿರುತ್ತವೆ. ಕೃತಿಗಳನ್ನು ಲೇಖಕರೇ ನೇರವಾಗಿ ಅಕಾಡೆಮಿಗೆ ಕಳುಹಿಸಿಕೊಡಲು ಕೋರಿದೆ. ನಿಬಂಧನೆಗಳು : 1. ಕೃತಿಗಳು ಜನವರಿ 2021ರಿಂದ ಡಿಸೆಂಬರ್ 2023ರೊಳಗೆ ಮುದ್ರಣವಾದ ಮೊದಲ ಪ್ರಕಟಣೆಯಾಗಿರಬೇಕು. 2. ಅನುವಾದಿತ ಕೃತಿಗಳಿಗೆ ಅವಕಾಶವಿರುವುದಿಲ್ಲ. 3. ಪುಸ್ತಕಗಳು ಯಾವುದೇ ಪದವಿಗಾಗಿ, ಪಿ.ಹೆಚ್‌.ಡಿ.ಗಾಗಿ ಮತ್ತು ಪಠ್ಯ ಪುಸ್ತಕಕ್ಕೆ ಸಿದ್ಧಪಡಿಸಿದ ವಿಷಯವಾಗಿರಬಾರದು. 4. ಕಳುಹಿಸಲ್ಪಡುವ ಕೃತಿ ನಾಟಕವಾಗಿರಬಾರದು, ರಂಗಸಂಬಂಧಿ ವಸ್ತುವುಳ್ಳದ್ದಾಗಿರಬೇಕು. 5. ಕೃತಿಯ ತಾಂತ್ರಿಕ ಪುಟದಲ್ಲಿ ಮುದ್ರಣ ವರ್ಷವನ್ನು ನಮೂದಿಸಿರಬೇಕು. 6. ಮರುಮುದ್ರಣವಾದ ಪುಸ್ತಕಗಳಾಗಿರಬಾರದು. 7. ಅಕಾಡೆಮಿಯ ಸದಸ್ಯರು ರಚಿಸಿದ ಕೃತಿಗಳಾಗಿರಬಾರದು.…

Read More

ಪುತ್ತೂರು : ಸಂತ ಫಿಲೋಮಿನಾ ಕಾಲೇಜಿನ ಯಕ್ಷಕಲಾ ಕೇಂದ್ರ ಹಾಗೂ ದೇಶಭಕ್ತ ಎನ್‌.ಎಸ್‌. ಕಿಲ್ಲೆ ಪ್ರತಿಷ್ಠಾನಗಳ ಸಹಯೋಗದೊಂದಿಗೆ ‘ಫಿಲೋ ಯಕ್ಷಾಮೃತ’ ಪ್ರಮಾಣ ಪತ್ರ ಪ್ರದಾನ ಕಾರ್ಯಕ್ರಮವು ದಿನಾಂಕ 18-06-2024ರಂದು ಕಾಲೇಜಿನ ಸ್ನಾತಕೋತ್ತರ ವಿಭಾಗದ ಸಭಾಭವನದಲ್ಲಿ ನಡೆಯಿತು. ಯಕ್ಷಾಮೃತ ಸರ್ಟಿಫಿಕೇಟ್‌ ಕೋರ್ಸ್ ನಲುವತ್ತು ಗಂಟೆಗಳ ಪಠ್ಯವನ್ನು ಹೊಂದಿದ್ದು, ಲಿಖಿತ ಮತ್ತು ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರವನ್ನು ನೀಡಲು ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ವಂದನೀಯ ಡಾ. ಆ್ಯಂಟನಿ ಪ್ರಕಾಶ್‌ ಮೊಂತೇರೊ ಮಾತನಾಡಿ “ಕಲೆಯು ವಿಶ್ವ ಮಾನ್ಯ. ಅದು ಜಾತಿ ಅಂತಸ್ತುಗಳ ಪರಿಧಿಯನ್ನು ಮೀರಿ ಪ್ರತಿಭಾ ಸಂಪನ್ನರಾದ ಸರ್ವರಿಗೂ ಒಲಿಯುವ ವಿಶೇಷ ವಿದ್ಯೆ. ಅದಕ್ಕೆ ವಿದ್ಯಾರ್ಥಿಗಳ ವ್ಯಕ್ತಿತ್ವವನ್ನು ಬೆಳಗಿಸುವ ಅಪೂರ್ವ ಶಕ್ತಿ ಇದೆ.” ಎಂದು ಹೇಳಿ ಯಕ್ಷಾಮೃತ ಪ್ರಮಾಣಪತ್ರ ಸ್ವೀಕರಿಸಲು ಅರ್ಹರಾದ ಎಲ್ಲಾ ವಿದ್ಯಾರ್ಥಿಗಳನ್ನು ಪ್ರಶಂಸಿಸಿದರು. ಯಕ್ಷಗಾನ ರಂಗ ಪ್ರಯೋಗ ಕಲೆಯ ಸರ್ಟಿಫಿಕೇಟ್‌ ಕೋರ್ಸ್ “ಯಕ್ಷಾಮೃತ”ದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರವನ್ನು ನೀಡಲಾಯಿತು. ದೇಶಭಕ್ತ ಎನ್‌.ಎಸ್‌.…

Read More

ಸುರತ್ಕಲ್ : ಯಕ್ಷಧ್ರುವ ಪಟ್ಲ ಪೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು ಇದರ ವತಿಯಿಂದ ಯಕ್ಷಧ್ರುವ ಯಕ್ಷ ಶಿಕ್ಷಣ ಉಚಿತ ತರಗತಿಯ ಉದ್ಘಾಟನಾ ಕಾರ್ಯಕ್ರಮವು ಎಂ.ಆರ್.ಪಿ.ಎಲ್.ನ ಡೆಲ್ಲಿ ಪಬ್ಲಿಕ್ ಶಾಲೆಯಲ್ಲಿ ದಿನಾಂಕ 26-06-2024ರಂದು ನಡೆಯಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ಹವ್ಯಾಸಿ ಯಕ್ಷಗಾನ ಕಲಾವಿದರು, ಶಾರದ ಯಕ್ಷಗಾನ ಮಂಡಳಿ ಪೆರ್ಮುದೆ ಇದರ ಅಧ್ಯಕ್ಷರಾದ ಉಲ್ಲಾಸ್ ಆರ್. ಶೆಟ್ಟಿ ಪೆರ್ಮುದೆ ಇವರು ಮಾತನಾಡಿ “ವಿದ್ಯಾರ್ಥಿಗಳು ಕಲಿಕೆಯ ಜತೆಗೆ ಪಠ್ಯೇತರ ಚಟುವಟಿಕೆಗಳಾದ ಯಕ್ಷಗಾನದಲ್ಲಿ ತೊಡಗಿಸಿಕೊಂಡಾಗ ವಿದ್ಯಾರ್ಥಿಗಳ ಮನೋಬಲ ವೃದ್ಧಿಯಾಗುತ್ತದೆ. ಮಾನವೀಯ ಮೌಲ್ಯಗಳಿಗೆ ಬೆಲೆ ನೀಡುತ್ತಾ ಬಂದಿರುವ ಪಟ್ಲ ಪೌಂಡೇಶನ್ ಎಲ್ಲೆಡೆ ಮನೆ ಮಾತಾಗಿದೆ. ಇದು ದೇಶ ವಿದೇಶಗಳಲ್ಲಿ ಒಳ್ಳೆಯ ಹೆಸರನ್ನು ಪಡೆದಿದ್ದು, ಒಂದು ಉತ್ತಮ ಸಂಘಟನೆಯಾಗಿದೆ. ಈ ಟ್ರಸ್ಟಿನ ಸಮಾಜಮುಖಿ ಸೇವೆ ನಿರಂತರವಾಗಿ ಮುಂದುವರಿಯಲಿ” ಎಂದು ನುಡಿದರು. ಮುಖ್ಯ ಅತಿಥಿಗಳಾಗಿ ಪ್ರಸಿದ್ಧ ಯಕ್ಷಗಾನ ಕಲಾವಿದ ರಕ್ಷಿತ್ ಶೆಟ್ಟಿ ಪಡ್ರೆ ಮಾತನಾಡಿ “ದಾನಿಗಳ ನೆರವಿನಿಂದ ಯಕ್ಷಧ್ರುವ ಪಟ್ಲ ಪೌಂಡೇಶನ್ ಟ್ರಸ್ಟ್ ಇಷ್ಟರವರೆಗೆ ಅಶಕ್ತ ಕಲಾವಿದರಿಗೆ ಸಹಾಯ ಹಸ್ತ, ಮನೆ…

Read More