Subscribe to Updates
Get the latest creative news from FooBar about art, design and business.
Author: roovari
ಉಡುಪಿ : ಗಾಂಧಿ ಆಸ್ಪತ್ರೆಯ 30ರ ಸಂಭ್ರಮದ ಪ್ರಯುಕ್ತ ಖ್ಯಾತ ಬಾಲ ಕಲಾವಿದೆ ಹತ್ತು ವರ್ಷದ ಕುಮಾರಿ ಗಂಗಾ ಶಶಿಧರನ್ ಇವರ ವಯೋಲಿನ್ ವಾದನ ಕಛೇರಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಕಿಕ್ಕಿರಿದ ಜನ ಸಂದಣಿಯ ನಡುವೆ ದಿನಾಂಕ 15-05-2024ರಂದು ನಡೆಯಿತು. ಅಪಾರ ಜನಪ್ರಿಯತೆಯನ್ನು ಪಡೆದುಕೊಂಡಿರುವ ಈ ಬಾಲ ಕಲಾವಿದೆಯನ್ನು ಪೂಜ್ಯ ಪರ್ಯಾಯ ಹಿರಿಯ ಮತ್ತು ಕಿರಿಯ ಶ್ರೀಪಾದರು ಶ್ರೀಕೃಷ್ಣ ಪ್ರಸಾದವನ್ನು ನೀಡಿ, ಗೌರವಿಸಿ ಹರಸಿದರು. ಗುರು ವಿದ್ವಾನ್ ಶ್ರೀ ಅನುರೂಪ್ ಹಾಗೂ ಪಕ್ಕವಾದ್ಯದಲ್ಲಿ ಸಹಕರಿಸಿದರನ್ನು ಪ್ರಸಾದ ನೀಡಿ ಗೌರವಿಸಿದರು. ರಾಜಾಂಗಣದಲ್ಲಿ ನಡೆದ ಕಿಕ್ಕಿರಿದ ಕಲಾಪ್ರಿಯರು ಪಿಟೀಲು ವಾದನದ ಸುಧೆಯನ್ನು ಉಡುಪಿಯ ಪ್ರಸಿದ್ಧ ಗಾಂಧಿ ಆಸ್ಪತ್ರೆಯ ನಿರ್ದೇಶಕ ಡಾ. ಹರಿಶ್ಚಂದ್ರರವರು ತಮ್ಮ ಆಸ್ಪತ್ರೆಯ 30ನೇ ವರ್ಧಂತ್ಯುತ್ಸವದ ಅಂಗವಾಗಿ ಆಯೋಜಿಸಿದ್ದರು. ಆಸ್ಪತ್ರೆಯ ವತಿಯಿಂದ ಗುರು ಹಾಗು ಶಿಷ್ಯೆಯನ್ನು ಅದ್ದೂರಿಯಾಗಿ ಅಭಿನಂದಿಸಲಾಯಿತು. ಶ್ರೀ ಮಠದ ವತಿಯಿಂದ ಎಂ. ಹರಿಶ್ಚಂದ್ರ, ಲಕ್ಷ್ಮಿ ದಂಪತಿಗಳನ್ನು ಪರ್ಯಾಯ ಶ್ರೀಪಾದರು ಶ್ರೀಕೃಷ್ಣ ಪ್ರಸಾದ ನೀಡಿ ಅಭಿನಂದಿಸಿದರು. ಕುಮಾರಿ ಗಂಗಾಳಿಗೆ ಭಗವದ್ಗೀತೆಯನ್ನು ಬರೆಯುವ…
ಮಂಗಳೂರು : ವಿಶ್ವವಿದ್ಯಾನಿಲಯ ಕಾಲೇಜಿನ ಶಿವರಾಮ ಕಾರಂತ ಸಭಾ ಭವನದಲ್ಲಿ ಕೇಂದ್ರೀಯ ಹಿಂದಿ ನಿರ್ದೇಶನಾಲಯ ಆಗ್ರಾ ಭಾರತ ಶಿಕ್ಷಣ ಸಚಿವಾಲಯ (ಉನ್ನತ ಶಿಕ್ಷಣ ವಿಭಾಗ, ಭಾರತ ಸರ್ಕಾರ), ಮಂಗಳೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಹಿಂದಿ ವಿಭಾಗ ಹಾಗೂ ಆಂತರಿಕ ಗುಣಮಟ್ಟ ಖಾತರಿಕೋಶ ಮತ್ತು ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಇವರ ಸಹಭಾಗಿತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಐದು ದಿನಗಳ ವಿಶೇಷವಾದ ‘ಹಿಂದಿ ಯುವ ಬರಹಗಾರರ ಶಿಬಿರ’ವು ದಿನಾಂಕ 13-05-2024ರಂದು ಉದ್ಘಾಟನೆಗೊಂಡಿತು. ಈ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ. ಎಲ್. ಧರ್ಮ “ಭಾಷೆ ಸಂವಹನಕ್ಕಿರುವ ಮಾಧ್ಯಮ ಮಾತ್ರವಲ್ಲ; ಅದೊಂದು ಬದುಕು, ಸಂಸ್ಕೃತಿ. ಭಾಷೆ ನಶಿಸಿದರೆ ಸಂಸ್ಕೃತಿಯೇ ನಾಶವಾದಂತೆ. ಹಾಗಾಗಿ ಭಾಷೆ ಬದುಕಿನ ಜೀವಾಳ. ಸೃಜನಾತ್ಮಕ ಬರವಣಿಗೆ ಹೃದಯದಲ್ಲಿ ಹುಟ್ಟುತ್ತದೆ. ಮನಸ್ಸಿನ ಪ್ರಲಾಪ, ಕೋಪ-ತಾಪ, ಪ್ರೀತಿ ಇವೆಲ್ಲವೂ ಮನತಣಿಸುವ ಅಕ್ಷರಗಳ ರೂಪವನ್ನು ತಾಳುತ್ತದೆ. ಅಂತಹ ಬರವಣಿಗೆ ಹೊಸತನದಿಂದ ಕೂಡಿರುತ್ತದೆ. ಅದರ ಜೊತೆಗೆ ನಾವು ನುಡಿಯುವ ಪ್ರತಿ ಮಾತು ಸಂಬಂಧಗಳನ್ನು ಬೆಸೆಯುವಂತಿರಬೇಕೇ ವಿನಃ ಬೇರ್ಪಡಿಸುವಂತಿರಬಾರದು” ಎಂದು…
ಬೆಂಗಳೂರು : ಜಂಗಮ ಕಲೆಕ್ಟಿವ್ ಇದರ ವತಿಯಿಂದ ಭರತನಾಟ್ಯದ ಇತಿಹಾಸ ಸಂಕಥನಗಳ ಕುರಿತಾದ ಮರು ವ್ಯಾಖ್ಯಾನ ಇದರ ಬಗ್ಗೆ ‘ಮಾತುಕತೆ ಮತ್ತು ಪ್ರಾತ್ಯಕ್ಷಿಕೆ’ ಕಾರ್ಯಕ್ರಮವು ನೃತ್ಯಗಾರ್ತಿ, ನೃತ್ಯ ಸಂಯೋಜಕಿ, ಗಾಯಕಿ, ಬರಹಗಾರ್ತಿ, ಸಾಮಾಜಿಕ ಹೋರಾಟಗಾರ್ತಿ ಚೆನ್ನೈಯ ನೃತ್ಯ ಪಿಳ್ಳೆ ಇವರಿಂದ ದಿನಾಂಕ 25-05-2024ರಂದು ಆರ್.ಆರ್. ನಗರದ ಜಂಗಮ ಕಲೆಕ್ಟಿವ್ ಇಲ್ಲಿ ನಡೆಯಲಿದೆ. ಇಂಗ್ಲೀಷ್ ಭಾಷೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮವು ಸಂಜೆ ಗಂಟೆ 6.45ಕ್ಕೆ ಪ್ರಾರಂಭವಾಗಲಿದೆ. ಹೆಚ್ಚಿನ ಮಾಹಿತಿಗಾಗಿ 9743289572 ಮತ್ತು 9731280160 ಸಂಪರ್ಕಿಸಿರಿ.
ಮಂಗಳೂರು : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಇದರ ಮಂಗಳೂರು ನಗರ ಘಟಕದ ‘ಪಂಚಮ ವಾರ್ಷಿಕ ಸಂಭ್ರಮ’ವು ದಿನಾಂಕ 23-05-2024ರಂದು ಸಂಜೆ ಗಂಟೆ 3-00ರಿಂದ ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ. ಸಂಜೆ ಗಂಟೆ 3-00ರಿಂದ ‘ಯಕ್ಷ ಹಾಸ್ಯ ವೈಭವ’ದಲ್ಲಿ ಭಾಗವತರಾಗಿ ಡಾ. ಪ್ರಖ್ಯಾತ್ ಶೆಟ್ಟಿ ಅಳಿಕೆ, ಮದ್ದಳೆ – ಶ್ರೀ ಗುರುಪ್ರಸಾದ್ ಬೊಳಿಂಜಡ್ಕ, ಚಂಡೆ – ಶ್ರೀ ಪ್ರಶಾಂತ್ ವಗೆನಾಡು, ಚಕ್ರತಾಳ – ಪೂರ್ಣೇಶ್ ಆಚಾರ್ಯ ಮತ್ತು ಮುಮ್ಮೇಳದಲ್ಲಿ ದಿನೇಶ್ ಶೆಟ್ಟಿಗಾರ್ ಕೋಡಪದವು, ದಿನೇಶ್ ರೈ ಕಡಬ, ಪ್ರಜ್ವಲ್ ಕುಮಾರ್ ಗುರುವಾಯನಕೆರೆ, ಸುಂದರ್ ಬಂಗಾಡಿ ಇವರುಗಳು ಸಹಕರಿಸಲಿದ್ದಾರೆ. ಸಭಾ ಕಾರ್ಯಕ್ರಮದಲ್ಲಿ ಜೆಪ್ಪು ಅರೆಕೆರೆಬೈಲ್ ಇಲ್ಲಿನ ಅಂಬಾ ಮಹೇಶ್ವರಿ ಭಜನಾ ಮಂಡಳಿಯ ಅಧ್ಯಕ್ಷರಾದ ಶ್ರೀ ಸೀತಾರಾಮ್ ಎ. ಇವರು ಜ್ಯೋತಿ ಪ್ರಜ್ವಲನೆ ಮಾಡಲಿದ್ದು, ಬಂಟರ ಸಂಘ ಜೆಪ್ಪು ಇದರ ಅಧ್ಯಕ್ಷರಾದ ಲಯನ್ ವಸಂತ್ ಶೆಟ್ಟಿ ಇವರು ಅಧ್ಯಕ್ಷತೆ ವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ವಿಶು ಶೆಟ್ಟಿ ಅಂಬಲಪಾಡಿ ಇವರಿಗೆ ‘ಸಾಧನಾ ಪ್ರಶಸ್ತಿ’ ಪ್ರದಾನ ಮಾಡಲಾಗುವುದು.…
ಪಾಂಬೂರು : ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಚಟುವಟಿಕೆಗಳನ್ನು ಆಯೋಜಿಸುವ ಪಾಂಬೂರಿನ ಪರಿಚಯ ಪ್ರತಿಷ್ಠಾನವು ‘ಬಹುಮುಖಿ 2024’ ಸಾಂಸ್ಕೃತಿಕ ಉತ್ಸವವನ್ನು ದಿನಾಂಕ 19-05-2024 ಮತ್ತು 20-05-2024ರಂದು ಪಾಂಬೂರು ರಂಗಪರಿಚಯದಲ್ಲಿ ಆಯೋಜಿಸಿದೆ. ದಿನಾಂಕ 19-05-2024ರಂದು ಕೊಂಕಣಿಯ ಖ್ಯಾತ ನಾಟಕಕಾರ ಡೊ. ಫಾದರ್ ಆಲ್ವಿನ್ ಸೆರಾವೊರವರೊಂದಿಗೆ ಮುಖಾಮುಖಿ, ಸಂವಾದ ಹಾಗೂ ಗೌರವಾರ್ಪಣೆಯ ರಂಗ್ತರoಗ್ ಕಾರ್ಯಕ್ರಮ ಜರಗಲಿದೆ. ಸಂವಾದದ ಬಳಿಕ ಅಸ್ತಿತ್ವ (ರಿ), ಮಂಗಳೂರು ತಂಡದಿಂದ ಕ್ರಿಸ್ಟೋಫರ್ ನೀನಾಸಮ್ ನಿರ್ದೇಶನದ ಪ್ರಸಿದ್ದ ಕೊಂಕಣಿ ನಾಟಕ ‘ಸಳ್ಗಿ’ ಪ್ರದರ್ಶನಗೊಳ್ಳಲಿದೆ. ದಿನಾಂಕ 20-05-2024ರಂದು ದೇಶವಿದೇಶಗಳಲ್ಲಿ ಖ್ಯಾತಿ ಗಳಿಸಿರುವ ಯುವಸಂಗೀತಗಾರ ಈಶಾನ್ ಫೆರ್ನಾಂಡಿಸ್ ಮತ್ತು ತಂಡದಿಂದ “Transcending Boundaries-II” ಜಾಗತಿಕ ವಿವಿಧ ಭಾಷೆಗಳ ಸಂಗೀತ ರಸಮಂಜರಿ ಕಾರ್ಯಕ್ರಮ ಪ್ರಸ್ತುತಗೊಳ್ಳಲಿದೆ. ಅಂತರಾಷ್ಟ್ರೀಯ ಖ್ಯಾತಿಯ ಕುಂಚ ಕಲಾವಿದ ವಿಲ್ಸನ್ ಕಯ್ಯಾರ್ರವರು ಎಲ್ಲಾ ಹಾಡುಗಳನ್ನು ತನ್ನ ಕುಂಚ ಕೈಚಳಕದಿಂದ ವಿವಿಧ ವರ್ಣಗಳಲ್ಲಿ ಚಿತ್ರಿಸಲಿದ್ದಾರೆ. ಕಾರ್ಯಕ್ರಮಗಳಿಗೆ ಉಚಿತ ಪ್ರವೇಶವಿದ್ದು, ಕಲಾಸಕ್ತರಿಗೆ ಹಾರ್ದಿಕ ಸ್ವಾಗತ. ಎಲ್ಲಾ ಕಾರ್ಯಕ್ರಮಗಳು ಸಾಯಂಕಾಲ ಗಂಟೆ 6.30ಕ್ಕೆ ಸರಿಯಾಗಿ ಆರಂಭಗೊಳ್ಳಲಿವೆ.
ಇತ್ತೀಚಿನ ಕಾವ್ಯದಲ್ಲಿ ಕಂಡುಬರುತ್ತಿರುವ ಆತ್ಮ ಮರುಕ, ಅನಾಥ ಪ್ರಜ್ಞೆ ಮತ್ತು ಅಂತರ್ಮುಖಿ ಭಾವಗಳನ್ನು ಕಡೆಗಣಿಸಿ, ಕವಿತೆಯ ಬಂಧವನ್ನು ಆದಷ್ಟು ಬಿಗಿಗೊಳಿಸಿ, ಲಯ ಗತಿ ಪ್ರಾಸಗಳನ್ನು ಉಳಿಸಿ, ಹಲವು ಬಗೆಯ ರೂಪಕ-ಶ್ಲೇಷೆಗಳನ್ನು ಬಳಸಿ ಬರೆಯುತ್ತಿರುವ ಮುದ್ದುಕಂದ (ಗೋಪಾಲಕೃಷ್ಣ ಭಟ್ ಶೇಂತಾರು ಬಯಲು) ತಮ್ಮ ಕಾವ್ಯದ ನಿರೂಪಣೆ ಮತ್ತು ಪರಿಣಾಮಗಳ ಮೂಲಕ ಭಿನ್ನರೆನಿಸಿಕೊಂಡಿದ್ದಾರೆ. ‘ನವಜೀವನ’ ಸಂಕಲನದ ಮೂಲಕ ಕನ್ನಡ ಕಾವ್ಯಲೋಕವನ್ನು ಪ್ರವೇಶಿಸಿದ ಕವಿಯು ಛಂದಸ್ಸಿನ ಲೀಲಾಜಾಲ ಬಳಕೆಗಳ ಮೂಲಕ ವಿವಿಧ ಭಾವಾನುಭಾವಗಳನ್ನು ಅಭಿವ್ಯಕ್ತಿಸಿರುವುದರಿಂದ ಅವರು ನವೋದಯ ಮಾರ್ಗವನ್ನು ನೆಚ್ಚಿಕೊಂಡಿದ್ದಾರೆ ಎಂದು ತಿಳಿಯುತ್ತದೆ. ಸಮಾಜವು ರೂಢಿಸಿಕೊಂಡು ಬಂದ ಶಿಷ್ಟಾಚಾರ, ಪುರಾಣಾದಿ ಸಾಹಿತ್ಯಗಳು ಮೂಡಿಸಿದ ವಿಶಿಷ್ಟ ಸಂಸ್ಕೃತಿಯ ಪ್ರಭಾವ, ಪ್ರಕೃತಿ ಮತ್ತು ಜೀವನದ ಚೆಲುವನ್ನು ಕಂಡು ಹಿಗ್ಗುವ ಪ್ರಸನ್ನ ಭಾವಗಳು ಕವಿಯ ಚೇತನವನ್ನು ಮುನ್ನಡೆಸಿವೆ. ಹಕ್ಕಿಗಳ ಇಂಚರಕ್ಕೆ ದನಿಯಾದ ಕವಿತೆಗಳು, ನದಿಯ ಮಂಜುಳ ನಾದಕ್ಕೆ ಮರುಳಾದ ಕವಿತೆಗಳು, ಮುದ್ದುಕಂದನ ನಗುವಿನಂಥ ಕವಿತೆಗಳು, ದನಿಯೆತ್ತಿ ಹಾಡಬಲ್ಲ ಕವಿತೆಗಳು, ಭಾವಬದ್ಧವಾಗಿ ಓದಬಲ್ಲ ಕವಿತೆಗಳು, ದುರಂತ ಜೀವನವವನ್ನು ಅಭಿವ್ಯಕ್ತಿಸುವ ಕವಿತೆಗಳು, ಸಮಾಜದಲ್ಲಿನ…
ಕೊಪ್ಪಳ : ಕೊಪ್ಪಳದಲ್ಲಿ ಮೇ 25 ಮತ್ತು 26 ರಂದು ಎರಡು ದಿನಗಳ ಕಾಲ ನಡೆಯಲಿರುವ 10ನೇ ಮೇ ಸಾಹಿತ್ಯ ಮೇಳದ ಕರಪತ್ರ ಹಾಗೂ ಆಮಂತ್ರಣ ಪತ್ರಿಕೆಯ ಬಿಡುಗಡೆ ಸಮಾರಂಭವು ದಿನಾಂಕ 16-05-2024ರಂದು ಕೊಪ್ಪಳದ ಅಶೋಕ ವೃತ್ತದ ಬಳಿ ಇರುವ ಸಾಹಿತ್ಯ ಭವನದ ಹೊರ ಆವಣದಲ್ಲಿ ನಡೆಯಿತು. ಸರಳವಾಗಿ ನಡೆದ ಈ ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿಗಳಾದ ಅಲ್ಲಮಪ್ರಭು ಬೆಟ್ಟದೂರು ಹಾಗೂ ಡಾ. ವಿ. ಬಿ. ರಡ್ಡೇರ್ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು. ಬಳಿಕ ಮಾತನಾಡಿದ ಅಲ್ಲಮಪ್ರಭು ಬೆಟ್ಟದೂರು “ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಆಶಯಗಳ ರಕ್ಷಣೆಯ ನಿಟ್ಟಿನಲ್ಲಿ ಇಡೀ ನಾಡಿನ ಪ್ರಗತಿಪರರೆಲ್ಲರೂ ಸೇರುತ್ತಿರುವ ಮೇ ಸಾಹಿತ್ಯ ಮೇಳ ಕಾರ್ಯಕ್ರಮಕ್ಕೆ ಎಲ್ಲರೂ ಬನ್ನಿ ಭಾಗವಹಿಸಿ.” ಎಂದು ಕರೆ ನೀಡಿದರು. ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದ ಇನ್ನೋರ್ವ ಸಾಹಿತಿ ಡಾ. ವಿ. ಬಿ. ರಡ್ಡೇರ್ ಮಾತನಾಡಿ “ಸರ್ವಾಧಿಕಾರದ ವಿರುದ್ದ ಎಲ್ಲರೂ ಹೋರಾಡಬೇಕಾಗಿದೆ. ಸಂವಿಧಾನವನ್ನು ರಕ್ಷಣೆ ಮಾಡಬೇಕಿದೆ . ಈ ನಿಟ್ಟಿನಲ್ಲಿ ಕೊಪ್ಪಳದಲ್ಲಿ ನಡೆಯುತ್ತಿರುವ ಮೇ ಸಾಹಿತ್ಯ ಮೇಳ…
ಮಂಗಳೂರು : ‘ನಾದ ನೃತ್ಯ’ ಸ್ಕೂಲ್ ಆಫ್ ಆರ್ಟ್ಸ್ ಎಂಡ್ ಕಲ್ಚರಲ್ ಟ್ರಸ್ಟ್ (ರಿ.) ಮಂಗಳೂರು ಆಯೋಜಿಸಿದ ‘ನೃತ್ಯಾಂಜಲಿ’ ನೃತ್ಯ ಬಂಧಗಳ ಕಲಿಕಾ ಕಾರ್ಯಾಗಾರದ ಉದ್ಘಾಟನಾ ಸಮಾರಂಭವು ದಿನಾಂಕ 14-05-2024ರಂದು ಮಂಗಳೂರಿನ ಹಿಂದಿ ಪ್ರಚಾರ ಸಮಿತಿಯಲ್ಲಿ ನಡೆಯಿತು. ಕಾರ್ಯಗಾರವನ್ನು ದೀಪ ಪ್ರಜ್ವಲಿಸಿ ಉದ್ಘಾಟಿಸಿದ ಶಾಂತಲಾ ಪ್ರಶಸ್ತಿ ಪುರಸ್ಕೃತ ನಾಟ್ಯಗುರು ವಿದ್ವಾನ್ ಶ್ರೀ ಉಳ್ಳಾಲ ಮೋಹನ್ ಕುಮಾರ್ ಮಾತನಾಡಿ “ಭರತನಾಟ್ಯ ಎಲ್ಲಾ ಶಾಸ್ತ್ರೀಯ ನೃತ್ಯಗಳಿಗೆ ತಾಯಿ ಸಮಾನವಾದ ನೃತ್ಯ ಪ್ರಕಾರ. ಗುರುಗಳ ಸೂಕ್ತ ಮಾರ್ಗದರ್ಶನದಿಂದ ಈ ಕಲೆಯಲ್ಲಿ ದೈವತ್ವವನ್ನು ಕಾಣಬಹುದು. ಇತ್ತೀಚಿನ ದಿನಗಳಲ್ಲಿ ಒಂದೆರಡು ಹಾಡುಗಳಿಗೆ ನೃತ್ಯ ಕಲಿತು ಪ್ರದರ್ಶನ ನೀಡುವ ಪದ್ದತಿ ಆರಂಭವಾಗಿದ್ದು, ಅದರ ಬದಲಿಗೆ ಗುರುಗಳ ಮಾರ್ಗದರ್ಶನದಲ್ಲಿ ಉತ್ತಮ ಕಲಾವಿದೆಯಾಗಿ ರೂಪುಗೊಳ್ಳಿ.” ಎಂದು ಕಿವಿಮಾತು ಹೇಳಿದರು. ಕಾರ್ಯಾಗಾರದ ಅವಲೋಕನಕಾರರಾಗಿ ಭಾಗವಹಿಸಿದ ವಿದ್ವಾನ್ ಚಂದ್ರಶೇಖರ್ ನಾವಡ ಮಾತನಾಡಿ “ಇಂದು ವಿದ್ಯಾರ್ಥಿಗಳಿಗೆ ಕಲಿಯುವ ಅವಕಾಶ ವಿಫುಲವಾಗಿದೆ. ತಮ್ಮ ಗುರುಗಳಾದ ಭ್ರಮರಿ ಶಿವಪ್ರಕಾಶ್ ಅವರ ಗುರುಗಳಾದ ವಿದುಷಿ ವಸುಂದರಾ ದೊರೆಸ್ವಾಮಿ ಅವರಿಂದ ಭರತನಾಟ್ಯದ ಚೌಕಟ್ಟಿನ…
ಕುಶಾಲನಗರ : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕುಶಾಲನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು. ಮತ್ತು ಸರಕಾರಿ ಪ್ರಥಮ ದರ್ಜೆ ಕಾಲೇಜು ಕನ್ನಡ ವಿಭಾಗ ಕುಶಾಲನಗರ ಇವರ ಸಂಯುಕ್ತ ಆಶ್ರಯದಲ್ಲಿ 2023-2024ನೇ ಸಾಲಿನ 21ನೇ ‘ಗೌರಮ್ಮ ದತ್ತಿ ಪ್ರಶಸ್ತಿ ಪುರಸ್ಕಾರ’ ಸಮಾರಂಭವು ದಿನಾಂಕ 21-05-2024ನೇ ಮಂಗಳವಾರ ಬೆಳಿಗ್ಗೆ ಘಂಟೆ 11.00 ರಿಂದ ಕುಶಾಲನಗರದ ಹಾರಂಗಿ ರಸ್ತೆಯಲ್ಲಿರುವ ಕುಶಾಲನಗರ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀ ಎಂ.ಪಿ. ಕೇಶವಕಾಮತ್ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮವನ್ನು ಸರಕಾರಿ ಪ್ರಥಮ ದರ್ಜೆ ಕಾಲೇಜು ಕುಶಾಲನಗರ ಇಲ್ಲಿನ ಪ್ರಾಚಾರ್ಯರಾದ ಪ್ರೋ ಬಿ. ಎಂ. ಪ್ರವೀಣ್ ಕುಮಾರ್ ಉದ್ಘಾಟಿಸಲಿದ್ದಾರೆ. 2023-2024ನೇ ಸಾಲಿನ 21ನೇ ಗೌರಮ್ಮ ದತ್ತಿ ಪ್ರಶಸ್ತಿ ಪುರಸ್ಕಾರವನ್ನು ಮೂರ್ನಾಡು ಇಲ್ಲಿನ ಕವಯತ್ರಿ ಹಾಗೂ ಶಿಕ್ಷಕಿಯಾದ ಶ್ರೀಮತಿ ಕೆ. ಜಿ. ರಮ್ಯ ಇವರಿಗೆ ನೀಡಿ ಗೌರವಿಸಲಿದ್ದು, ಗಾಳಿಬೀಡುವಿನ ಜವಹರ್ ನವೋದಯ ವಿದ್ಯಾಲಯದ ಅದ್ಯಾಪಕರು ಹಾಗೂ ಸಾಹಿತಿಗಳಾದ…
ಕಲಬುರಗಿ : ಇಲ್ಲಿನ ರಂಗಸಂಗಮ ಕಲಾವೇದಿಕೆ ನೀಡುವ ಎಸ್. ಬಿ. ಜಂಗಮಶೆಟ್ಟಿ ಮತ್ತು ಸುಭದ್ರಾದೇವಿ ಜಂಗಮಶೆಟ್ಟಿ ರಂಗ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಾಧನೆಗೈದ ರಂಗಕರ್ಮಿಗಳ ಹೆಸರನ್ನು ರಂಗಾಸಕ್ತರು ಪ್ರಶಸ್ತಿಗೆ ನಾಮನಿರ್ದೇಶನ ಮಾಡಬಹುದು ಎಂದು ರಂಗಸಂಗಮ ಕಲಾವೇದಿಕೆ ಕಾರ್ಯದರ್ಶಿ ಡಾ. ಸುಜಾತಾ ಜಂಗಮಶೆಟ್ಟಿ ತಿಳಿಸಿದ್ದಾರೆ. ಪ್ರಶಸ್ತಿಯು ತಲಾ 10,000 ರೂ. ನಗದು, ಪ್ರಶಸ್ತಿ ಪತ್ರ ಹಾಗೂ ಸನ್ಮಾನ ಒಳಗೊಂಡಿದ್ದು, 18-07-2024ರಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಸಕ್ತ ಸಾಲಿನ ಪ್ರಶಸ್ತಿಗೆ ಅರ್ಜಿ ಅಥವಾ ನಾಮನಿರ್ದೇಶನಗಳನ್ನು 06-06-2024ರೊಳಗೆ ಕಳುಹಿಸಬಹುದು. ವಿಳಾಸ: ಡಾ.ಸುಜಾತಾ ಜಂಗಮ ಶೆಟ್ಟಿ, ಓಂ ರೆಸಿಡೆನ್ಸಿ, ಎರಡನೇ ಮಹಡಿ, ಶ್ರೀನಿವಾಸ ಕಣ್ಣಿನ ಆಸ್ಪತ್ರೆ ಪಕ್ಕ, ಸಿದ್ದೇಶ್ವರ ಕಲ್ಯಾಣ ಮಂಟಪದ ಹತ್ತಿರ, ಹಳೆಯ ಜೇವರ್ಗಿ ರಸ್ತೆ. ಕಲಬುರಗಿ- 585102