Author: roovari

28 ಫೆಬ್ರವರಿ 2023, ಕಾಂತಾವರ: “ಕವಿಯಾದವನಿಗೆ ಸಮಾಜದ ಸಂಕಟಗಳಿಗೆ ಪರಿಹಾರ ಹುಡುಕುವ ಮತ್ತು ಸಾಮಾಜಿಕ ಸ್ವಾಸ್ಥ್ಯ ಕಾಪಾಡುವ ಜವಾಬ್ದಾರಿ ಇದೆ ಎಂದು ರಾಯಚೂರಿನ ಕವಿ ಡಾ. ಚಿದಾನಂದ ಸಾಲಿ ಹೇಳಿದರು. ಕಾಂತಾವರ ಕನ್ನಡ ಸಂಘದ ಆಶ್ರಯದಲ್ಲಿ ಕಾಂತಾವರ ಕನ್ನಡ ಭವನದಲ್ಲಿ 26-02-2023ರಂದು ನಡೆದ ಮುದ್ದಣ ಸಾಹಿತ್ಯೋತ್ಸವ- 43ನೇ ಮುದ್ದಣ ಕಾವ್ಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುದ್ದಣ ಕಾವ್ಯ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು. ಧರ್ಮದರ್ಶಿ ಹರಿಕೃಷ್ಣ ಪುನರೂರು ಅಧ್ಯಕ್ಷತೆ ವಹಿಸಿದ್ದು, ಈ ಕಾರ್ಯಕ್ರಮವನ್ನು ವಿಶ್ರಾಂತ ಪ್ರಾಂಶುಪಾಲರಾದ ಕಲಾವಿದ ಪ್ರೊ. ಎಂ.ಎಲ್. ಸಾಮಗ ಉದ್ಘಾಟಿಸಿದರು. ಕವಿ ರಾಯಚೂರಿನ ಡಾ. ಚಿದಾನಂದ ಸಾಲಿ ಅವರಿಗೆ “ಮುದ್ದಣ ಕಾವ್ಯ ಪ್ರಶಸ್ತಿ” ಪ್ರದಾನ ಮಾಡಲಾಯಿತು. ಸಂಘದಲ್ಲಿ ಹೊಸತಾಗಿ ಸ್ಥಾಪನೆಯಾದ “ಗಮಕ ಕಲಾ ಪ್ರವಚನ ಪ್ರಶಸ್ತಿ”ಯನ್ನು ಡಾ. ರಾಘವೇಂದ್ರ ರಾವ್ ಪಡುಬಿದ್ರಿ ಅವರಿಗೆ, “ಗಮಕ ವಾಚನ ಪ್ರಶಸ್ತಿ” ಮಂಜುಳಾ ಸುಬ್ರಮಣ್ಯ ಮಂಚಿ ಅವರಿಗೆ ಹಾಗೂ “ಕಾರ್ಕಳದ ಶಿಲ್ಪಿ ಶಾಮರಾಯ ಆಚಾರ್ಯ ಸ್ಮಾರಕ ಶಿಲ್ಪಕಲಾ ಪ್ರಶಸ್ತಿ”ಯನ್ನು ಬಿ.ಎಸ್. ಭಾಸ್ಕರ ಆಚಾರ್ಯ ಕಾರ್ಕಳ…

Read More

27 ಫೆಬ್ರವರಿ 2023, ಕಾಸರಗೋಡು: ಗುರುಗಳನ್ನು ಸ್ಮರಿಸಿಕೊಂಡು ಗೌರವ ಸಲ್ಲಿಸುವುದು ನಮ್ಮ ನಾಡಿನ ಸಂಸ್ಕೃತಿ  – ನಾಡೋಜ ಡಾ.ಮಹೇಶ್ ಜೋಶಿ ಅಶಾಶ್ವತವಾದ ದೇಹಕ್ಕೆ ಶಾಶ್ವತವಾದ ಅರಿವನ್ನು ನೀಡಿ ಜಗತ್ತನ್ನೇ ಗೆಲ್ಲುವ ಶಕ್ತಿಯನ್ನು ನೀಡುವವರು ಗುರುಗಳು. ಅಂತಹ ಗುರುಗಳನ್ನು ಸ್ಮರಿಸಿ ಗೌರವವನ್ನು ಸಲ್ಲಿಸುವುದು ನಮ್ಮ ಧರ್ಮ ಮತ್ತು ಸಂಸೃತಿ ಎಂದು ಕನ್ನಡ ಸಾಹಿತ್ಯ ಪರಿಷತ್ ನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ್ ಜೋಶಿ ಹೇಳಿದರು. 26.2.2023ರಂದು ಕಾಸರಗೋಡು ಸರಕಾರಿ ಕಾಲೇಜಿನಲ್ಲಿ ಹಮ್ಮಿ ಕೊಳ್ಳಲಾದ ದಿ.ಪ್ರೊ. ಪಿ.ಸುಬ್ರಾಯ ಭಟ್ ಜನ್ಮ ಶತಮಾನೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕನ್ನಡದ ಮೇಲೆ ಅಪಾರ ಪ್ರೀತಿ ಅಭಿಮಾನ ಹೊಂದಿದ ಭಟ್ಟರು ಕನ್ನಡ ಕಲಿಕೆಯಲ್ಲಿ ವಿದ್ಯಾರ್ಥಿಗಳಿಗೆ ವಿಶೇಷವಾದ ಪ್ರೋತ್ಸಾಹ ನೀಡುತ್ತಿದ್ದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಹಂಪಿ ಕನ್ನಡ ವಿಶ್ವವಿದ್ಯಾಲಯದ ನಿವೃತ್ತ ಕುಲಪತಿ ಡಾ. ವಿವೇಕ ರೈ ಮಾತನಾಡಿ ಪ್ರೊ.ಸಬ್ರಾಯ ಭಟ್ಟರು ಕಾಸರಗೋಡು ಸರಕಾರಿ ಕಾಲೇಜಿನಲ್ಲಿ ಹಂತ ಹಂತವಾಗಿ ಕನ್ನಡ ಅಧ್ಯಯನಕ್ಕೆ ಅವಕಾಶವನ್ನು ಕಲ್ಪಿಸಿ ಸದಾ ಕಾಲ ಕನ್ನಡ ಹೋರಾಟವನ್ನು ನಡೆಸಿದವರು…

Read More

27 ಫೆಬ್ರವರಿ 2023, ಮಂಗಳೂರು: ಸ್ವರೂಪ ಅಧ್ಯಯನ ಕೇಂದ್ರದ ಮೂಲಕ ಖ್ಯಾತ ಬರಹಗಾರ ಹಾಗೂ ಚಿಂತಕ ಗುರುರಾಜ ಮಾರ್ಪಳ್ಳಿಯವರ ‘ಅವ್ವ ನನ್ನವ್ವ’ ಪುಸ್ತಕ ಬಿಡುಗಡೆ ಕಾರ್ಯಕ್ರಮವು ಫೆಬ್ರವರಿ 25ರಂದು ನಡೆಯಿತು. ಮಂಗಳೂರಿನ ಕೊಡಿಯಾಲಬೈಲಿನ ವಾತ್ಸಲ್ಯಧಾಮದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ  ಲೇಖಕ  ಮಾರ್ಪಳ್ಳಿಯವರ ಕೃತಿಯನ್ನು ಅವರ ಜೋಳಿಗೆಯಿಂದ ಖರೀದಿಸುವ ಮೂಲಕ ಬೆಂಗಳೂರಿನ ಚಿಂತಕ ಹಾಗೂ ಕ್ರಿಯಾಶೀಲ ಹೋರಾಟಗಾರ ವಿವೇಕಾನಂದ ಎಚ್ಕೆ ಯವರು ಕೃತಿ ಬಿಡುಗಡೆಗೊಳಿಸಿದರು.‌ ಖ್ಯಾತ ಬರಹಗಾರ್ತಿ ಹಾಗೂ ಪ್ರಾಧ್ಯಾಪಕಿ ಕಾತ್ಯಾಯಿನಿ ಕುಂಜಿಬೆಟ್ಟು ಕೃತಿಯ ಪರಿಚಯವನ್ನು ಮಾಡಿಕೊಡುತ್ತಾ ಈ ಕೃತಿ ತಾಯಿಯ ಮಹತ್ವವನ್ನು ಹೇಳುವುದರೊಂದಿಗೆ ಭೂತಾಯಿಯ ಮಹತ್ವವನ್ನು ಓದುಗರಿಗೆ ತಲಪಿಸುವ ಮಹತ್ವದ ಹಾಗೂ ಮೌಲ್ಯಯುತ ಕೃತಿಯಾಗಿದೆ ಎಂದರು. ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಪರಿಸರ ತಜ್ಞ ದಿನೇಶ್ ಹೊಳ್ಳ ಮಣ್ಣು ಮತ್ತು ಪರಿಸರ ನಮ್ಮ ತಾಯಿ. ಅವಳನ್ನು ಅವಗಣಿಸದೆ ಉಳಿಸುವ ಅಗತ್ಯ ಬಹಳಷ್ಟಿದೆ ಎಂದು ಹೇಳಿದರು. ಲೇಖಕ ಗುರುರಾಜ ಮಾರ್ಪಳ್ಳಿಯವರು ‘ಅವ್ವ ನನ್ನವ್ವ’ ಕೃತಿ ರಚನೆಗೆ ತಮಗೆ ಪ್ರೇರಕರಾದ ತಮ್ಮ ತಾಯಿಯನ್ನೂ ಚಿಂತಕರಾದ ಲಕ್ಷ್ಮೀಶ…

Read More

27 ಫೆಬ್ರವರಿ 2023, ಕಾಸರಗೋಡು: ಕನ್ನಡ ಸಾಹಿತ್ಯ ಪರಿಷತ್ ಕೇಂದ್ರಾಧ್ಯಕ್ಷ ನಾಡೋಜ ಡಾ.ಮಹೇಶ್ ಜೋಷಿ ಅವರು ಪ್ರಥಮಬಾರಿ ಕಾಸರಗೋಡಿಗೆ ಆಗಮಿಸಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದರು.ಕ ಸಾ ಪ ಕೇರಳ ಗಡಿನಾಡ ಘಟಕದ ಕಛೇರಿಗೆ ಆಗಮಿಸಿದ ಅವರನ್ನು ಹಾರ್ದಿಕವಾಗಿ ಸ್ವಾಗತಿಸಲಾಯಿತು. ಘಟಕದ ಕಾರ್ಯಕ್ರಮಗಳ ವಿವರಗಳನ್ನು ಪರಿಶೀಲಿಸಿದ ಅವರು ಸಂತಸ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಹಿರಿಯ ಸದಸ್ಯರೂ ನಿಕಟ ಪೂರ್ವ ಅಧ್ಯಕ್ಷ ರಾದ ನ್ಯಾಯವಾದಿ ಐ ವಿ ಭಟ್ ಮತ್ತು ನಿಕಟ ಪೂರ್ವ ಗೌರವ ಕೋಶಾಧ್ಯಕ್ಷ ಸುಕುಮಾರ್ ಆಲಂಪಾಡಿ ಅವರನ್ನು ಶಾಲು ಹೊದಿಸಿ ಗೌರವಿಸಿದರು .ಕ ಸಾ ಪ ಮಂಗಳೂರು ತಾಲೂಕು ಘಟಕದ ಗೌರವ ಕಾರ್ಯದರ್ಶಿ ಡಾ ಮುರಳೀ ಮೋಹನ್ ಚೂಂತಾರು,ಡಾ ಜಯಪ್ರಕಾಶ ತೊಟ್ಟೆತ್ತೋಡಿ,ಡಾ ರಾಜಗೋಪಾಲ್ ಕಾಸರಗೋಡು,ಡಾ ಪ್ರಸನ್ನ ರೈ, ಗಣೇಶ್ ಪಾಣೂರು, ಪಿ ರಾಮಚಂದ್ರ ಭಟ್ ಧರ್ಮತ್ತಡ್ಕ,ಮುಂತಾದವರು ಉಪಸ್ಥಿತರಿದ್ದರು. ತದನಂತರ ಡಾ ಜೋಷಿ ಅವರು ಅಸೌಖ್ಯದಿಂದಿರುವ ಕ ಸಾ ಪ ಕೇರಳ ಗಡಿನಾಡ ಘಟಕದ ಅಧ್ಯಕ್ಷರಾದ ಎಸ್ ವಿ ಭಟ್ ಅವರ ಮನೆಗೆ ತೆರಳಿ…

Read More

27 ಫೆಬ್ರವರಿ 2023, ಮಂಗಳೂರು: “ಸಾಧಕರ ಸಮ್ಮಾನದಿಂದ ಯುವ ಪ್ರತಿಭೆಗಳಿಗೆ ಪ್ರೇರಣೆ” ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಸಾಧಕರನ್ನು ಗುರುತಿಸುವುದು ಒಂದು ಅತ್ಯುತ್ತಮ ಕಾರ್ಯ. ಇದರಿಂದ ಪ್ರೇರಣೆ ಪಡೆದ ಯುವ ಪ್ರತಿಭೆಗಳು ಮುಂದೆ ಭವಿಷ್ಯದಲ್ಲಿ ಹೆಚ್ಚು ಸಾಧನೆ ಮಾಡಲು ಸಹಾಯವಾಗುತ್ತದೆ ಎಂದು ಕರಾವಳಿ ಶಿಕ್ಷಣ ಸಮೂಹ ಸಂಸ್ಥೆಗಳ ಅಧ್ಯಕ್ಷ ಎಸ್. ಗಣೇಶ್ ರಾವ್ ಹೇಳಿದರು. ವಿವಿಧ ಕ್ಷೇತ್ರಗಳ ಸಾಧಕರಿಗೆ ಸಾಧನಾ ರಾಷ್ಟ್ರೀಯ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಉರ್ವಸ್ಟೋರ್ ನ ಅಂಬೇಡ್ಕರ್ ಭವನದಲ್ಲಿ ಫೆಬ್ರವರಿ 26ರಂದು ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕೇಂದ್ರ ಸರಕಾರ ಅರ್ಹರಿಗೆ ಪ್ರಶಸ್ತಿ ನೀಡುವ ಮೂಲಕ ಪದ್ಮಶ್ರೀಗೆ ಗೌರವ ಬಂದಿದೆ. ಸಾಧಕರಿಗೆ ಯಾವತ್ತೂ ನಿವೃತ್ತಿ ಎಂಬುವುದಿಲ್ಲ. ಬದುಕಿನುದ್ದಕ್ಕೂ ಅವರಿಂದ ಸಮಾಜಕ್ಕೆ ಸ್ಪೂರ್ತಿ ನೀಡುವ ಕಾರ್ಯ ನಡೆಯುತ್ತಲೇ ಇರಬೇಕು ಎಂದವರು ಹೇಳಿದರು. ಸಾಧಕರಿಗೆ ಪ್ರಶಸ್ತಿ ಪ್ರದಾನ : ಎಸ್. ದೊಡ್ಡಣ್ಣ (ಚಲನಚಿತ್ರ), ಎಂ.ಜಿ.ಆರ್. ಅರಸ್ (ಸಾಹಿತ್ಯ, ಪ್ರಕಾಶನ), ಎಂ.ಎಸ್. ಮಹಾಬಲೇಶ್ವರ (ಬ್ಯಾಂಕಿಂಗ್), ಸೀತಾರಾಮ ಕುಮಾರ್…

Read More

27, ಫೆಬ್ರವರಿ 2023 ಉಡುಪಿ: “ಪ್ರಭುತ್ವಕ್ಕೆ ಜೈಕಾರ ಹಾಕಿದರೆ ಕಲೆ ನಶಿಸುತ್ತದೆ” ಸುಮನಸಾದ ರಂಗಹಬ್ಬ ಉದ್ಘಾಟಿಸಿದ ಸಿ. ಬಸವಲಿಂಗಯ್ಯರಂಗಭೂಮಿಯಲ್ಲಿ ರಾಜಕೀಯವನ್ನು ವಸ್ತುವಾಗಿ ಇಟ್ಟುಕೊಂಡು ನಾಟಕ ಮಾಡಬೇಕು. ಆದರೆ ರಾಜಕೀಯ ಮಾಡಬಾರದು. ರಂಗಾಯಣವೂ ಸೇರಿದಂತೆ ರಂಗಭೂಮಿಯಲ್ಲಿ ಕೆಲಸ ಮಾಡುವವರು ಪ್ರಭುತ್ವಕ್ಕೆ ಜೈಕಾರ ಹಾಕಿದರೆ ಕಲೆ ನಶಿಸುತ್ತದೆ ಎಂದು ಹಿರಿಯ ರಂಗಕರ್ಮಿ ಸಿ. ಬಸವಲಿಂಗಯ್ಯ ಹೇಳಿದರು. ಸಾಂಸ್ಕೃತಿಕ ಸಂಘಟನೆ ಸುಮನಸಾ ಅಜ್ಜರಕಾಡು ಬಯಲು ರಂಗಭೂಮಿಯಲ್ಲಿ ಹಮ್ಮಿಕೊಂಡಿರುವ ರಂಗಹಬ್ಬವನ್ನು ಭಾನುವಾರ 26-2-2023ರಂದು ಉದ್ಘಾಟಿಸಿ ಅವರು ಮಾತನಾಡಿದರು. ರಂಗಭೂಮಿ ವ್ಯವಸ್ಥೆಯ ಪ್ರತಿರೋಧ. ಅದನ್ನು ಬಿಟ್ಟು ಯಾರ ಬಗ್ಗೆಯೋ ಭಜನೆ ಮಾಡಲು ಹೊರಟರೆ ರಂಗಭೂಮಿ ಉಳಿಯುವುದಿಲ್ಲ. ನೀತಿ ಬೋಧನೆ, ಧರ್ಮಬೋಧನೆ ರಂಗಭೂಮಿಯ ಕೆಲಸವಲ್ಲ. ಆ ಕೆಲಸ ಮಾಡಲು ಬೇರೆಯವರು ಇದ್ದಾರೆ. ಮನಸ್ಸುಗಳನ್ನು ಅರಳಿಸುವ ಕೆಲಸವನ್ನು ರಂಗಭೂಮಿ ಮಾಡಬೇಕು. ಮನಸ್ಸನ್ನು ಕೆಡಿಸುವ ಕೆಲಸವನ್ನು ಮಾಡಬಾರದು ಎಂದು ಸಲಹೆ ನೀಡಿದರು. ಅದ್ಭುತ ನಾಟಕಗಳು ಹುಟ್ಟುವುದೇ ದುರಿತ ಕಾಲದಲ್ಲಿ. ಸಮಾಜವು ಸಂಕಷ್ಟದಲ್ಲಿ ಇದ್ದಾಗ ಉತ್ತಮ ನಾಟಕಗಳು ಹೊರಹೊಮ್ಮುತ್ತದೆ. ಸದ್ಯದ ಕಾಲ ನೋಡಿದಾಗ ಅಂಥ…

Read More

27 ಫೆಬ್ರವರಿ 2023, ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಸಹಯೋಗದಲ್ಲಿ ನೀಡುವ ಪ್ರತಿಷ್ಟಿತ “ನೃಪತುಂಗ ಸಾಹಿತ್ಯ ಪ್ರಶಸ್ತಿ”ಗೆ ಲೇಖಕಿ ವೈದೇಹಿ ಅವರನ್ನು ಆಯ್ಕೆ ಮಾಡಲಾಗಿದೆ. ರೂ.7 ಲಕ್ಷ ನಗದು ಮತ್ತು ಪ್ರಮಾಣಪತ್ರವನ್ನು ಈ ಪ್ರಶಸ್ತಿ ಒಳಗೊಂಡಿದೆ. ವೈದೇಹಿ ಎಂಬ ಕಾವ್ಯನಾಮದಿಂದ ಖ್ಯಾತರಾಗಿರುವ ಜಾನಕಿ ಶ್ರೀನಿವಾಸಮೂರ್ತಿ, ಕನ್ನಡದ ಪ್ರಮುಖ ಲೇಖಕಿಯವರಲ್ಲಿ ಒಬ್ಬರು. ಸಣ್ಣಕತೆ, ಕಾದಂಬರಿ, ನಾಟಕ, ಮಕ್ಕಳ ಸಾಹಿತ್ಯ, ಅನುವಾದ ಸಾಹಿತ್ಯ, ಪ್ರಬಂಧ – ಹೀಗೆ ಸಾಹಿತ್ಯದ ಎಲ್ಲಾ ಪ್ರಕಾರಗಳಲ್ಲಿಯೂ ಅವರು ಬರೆದಿದ್ದಾರೆ. ಇವರ ಜೀವಮಾನದ ಸಾಧನೆ ಪರಿಗಣಿಸಿ ಪ್ರಶಸ್ತಿ ನೀಡಲಾಗುತ್ತಿದೆ ಎಂದು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಶಿ ತಿಳಿಸಿದ್ದಾರೆ. ಕರ್ನಾಟಕದಲ್ಲೇ ಅತೀ ಹೆಚ್ಚು ನಗದು ಮೊತ್ತ ಒಳಗೊಂಡ ಪ್ರಶಸ್ತಿ ಇದಾಗಿದೆ. ಈ ಪ್ರಶಸ್ತಿಗೆ ಆಯ್ಕೆಯಾದ ಎರಡನೇ ಲೇಖಕಿ ಇವರು. 2012ರಲ್ಲಿ ಲೇಖಕಿ ಸಾರಾ ಅಬೂಬಕರ್ ಆಯ್ಕೆಯಾಗಿದ್ದರು . ಮಯೂರ ವರ್ಮ ಪ್ರಶಸ್ತಿ : ಮಯೂರ ವರ್ಮ ಸಾಹಿತ್ಯ ಪ್ರಶಸ್ತಿಗೆ ಗದಗ ಜಿಲ್ಲೆಯ ಗಜೇಂದ್ರಗಡದ…

Read More

27 ಫೆಬ್ರವರಿ 2023, ಮಂಗಳೂರು: “ಸಾನಿಧ್ಯ ವಸತಿಯುತ ಶಾಲೆ ರಾಜ್ಯಕ್ಕೆ ಮಾದರಿ” “ಮಂಗಳೂರಿನ ಸಾನಿಧ್ಯ ವಸತಿಯುತ ಶಾಲೆ ರಾಜ್ಯಕ್ಕೆ ಮಾದರಿ ಎನಿಸುವ ರೀತಿಯಲ್ಲಿ ಕಾರ್ಯಕ್ರಮ ನಿರ್ವಹಿಸುತ್ತಿದೆ. ಇಲ್ಲಿನ ವಿಶೇಷ ಮಕ್ಕಳು ಸಾಮಾನ್ಯ ಮಕ್ಕಳಿಗಿಂತಲೂ ಶ್ರೇಷ್ಠವಾದ ಸಾಂಸ್ಕೃತಿಕ ಪ್ರತಿಭೆಯನ್ನು ಪ್ರದರ್ಶಿಸಿರುವುದು ಅಭಿನಂದನೀಯ. ಇದೇ ರೀತಿಯಲ್ಲಿ ರಾಜ್ಯದ ಎಲ್ಲಾ ವಿಶೇಷ ಶಾಲೆಗಳು ಕಾರ್ಯ ನಿರ್ವಹಿಸಬೇಕು” ಎಂದು ಖ್ಯಾತ ವೈದ್ಯರು ಹಾಗೂ ದಕ್ಷಿಣ ಕನ್ನಡ ಗ್ರಹರಕ್ಷಕ ದಳದ ಕಮಾಂಡೆಂಟ್‌ ಆಗಿರುವ ಡಾ. ಮುರಳಿ  ಮೋಹನ್‌ ಚುಂತಾರು ಹೇಳಿದರು. ಮಂಗಳೂರಿನ ಕದ್ರಿ ಉದ್ಯಾನದಲ್ಲಿ ಫೆಬ್ರವರಿ 25-26ರಂದು ಜರುಗಿದ “ಸಾನಿಧ್ಯಉತ್ಸವ” ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆಯನ್ನು ಡಾ. ಮುರಳಿ ಮೋಹನ್‌ ಚುಂತಾರು ವಿಶೇಷ ಮಕ್ಕಳ ಜೊತೆ ಬಲೂನು ಹಾರಿಸುವ ಮೂಲಕ ನಡೆಸಿಕೊಟ್ಟರು. QEDHR ಕನ್ಸಲ್ಟಿಂಗ್‌ ಕಂಪೆನಿಯ ಸಂಸ್ಥಾಪಕರು ಹಾಗೂ ಮುಖ್ಯಕಾರ್ಯ ನಿರ್ವಾಹಣಾಧಿಕಾರಿಯಾಗಿರುವ ಶ್ರೀಮತಿ ಸುಚಿತ್ರ ರಾಜೇಂದ್ರರವರು ಗೌರವಾನ್ವಿತ ಅತಿಥಿಯಾಗಿ ಭಾಗವಹಿಸಿದ್ದರು. ಟೆಥೆರ್ಫಿ ಸಂಸ್ಥೆಯ ಶ್ರೀಮತಿ ಜ್ಯೋತಿಕಾ ಆಳ್ವ, ಲಕ್ಷ್ಮಣ್ ಶೆಣೈ ಹಾಗೂ ಶ್ರೀಮತಿ ಶ್ರೀಜಾ ಇವರು ಸಾನಿಧ್ಯಕ್ಕಾಗಿ ನಿರ್ಮಿಸಿದ “ರೇ…

Read More

27 ಫೆಬ್ರವರಿ 2023, ಮಂಗಳೂರು: ಕರ್ನಾಟಕ ರಾಜ್ಯ ಕನ್ನಡ ಸಾಹಿತ್ಯ ಪರಿಷತ್ ರಾಜ್ಯ ಅಧ್ಯಕ್ಷ ನಾಡೋಜ ಶ್ರೀ ಡಾ ಮಹೇಶ್ ಜೋಷಿ ಅವರು ದ ಕ ಜಿಲ್ಲಾ ಗೃಹರಕ್ಷಕ ದಳದ ಕಮಾಂಡೆಟ್ ಮತ್ತು ವೈದ್ಯಸಾಹಿತಿ ಡಾ.ಮುರಳಲೀ ಮೋಹನ ಚೂಂತಾರ್ ಅವರ ಜತೆ ನಾಡೋಜ ಕಿಞ್ಞಣ್ಣ ರೈ ಸಾಂಸ್ಕೃತಿಕ ಕನ್ನಡ ಅಧ್ಯಯನ ಭವನದ ಉದ್ದೇಶಿತ ನಿವೇಶನವನ್ನು ವೀಕ್ಷಿಸಿದರು ಮತ್ತು ಕಯ್ಯಾರ ಕಿಞ್ಞಣ್ಣ ರೈ ಅವರ ನಿವಾಸಕ್ಕೆ ಫೆಬ್ರವರಿ 26ರಂದು ಭೇಟಿ ನೀಡಿದರು. ಕಯ್ಯಾರ ಕಿಞ್ಞಣ್ಣ ರೈ ಅವರ ಮಕ್ಕಳು ಡಾ.ಪ್ರಸನ್ನ ರೈ , ಶ್ರೀ ಕೃಷ್ಣ ಪ್ರದೀಪ ಮತ್ತು ಕುಟುಂಬದವರು ಅತಿಥಿಗಳನ್ನು ಸ್ವಾಗತಿಸಿ ಸತ್ಕರಿಸಿದರು. ಸ್ಮಾರಕ ಭವನ ನಿರ್ಮಾಣ, ಭವಿಷ್ಯದಲ್ಲಿ ಅಲ್ಲಿ ಇರಲೇ ಬೇಕಾದ ಪುಸ್ತಕ ಸಂಗ್ರಹಾಲಯ ಮತ್ತು ನಡೆಯಬೇಕಾಗಿರುವ ಸಾಹಿತ್ಯಿಕ ಕಾರ್ಯಕ್ರಮ – ಗಡಿನಾಡಿನಲ್ಲಿ ತನ್ಮೂಲಕ ಕನ್ನಡದ ಚಲನಶೀಲತೆಯ ಅಗತ್ಯಗಳ ಕುರಿತು ತಿಳಿಸಿ ಬೆಂಬಲ ಸೂಚಿಸಿದರು.

Read More

27 ಫೆಬ್ರವರಿ 2023, ಮಂಗಳೂರು: ಸಂಸ್ಕೃತ ಸಾರ್ವತ್ರಿಕ ಭಾಷೆ – ವಿಶ್ವ ಸಂಸ್ಕೃತ ಸಮ್ಮೇಳನದ ಸಮಾರೋಪದಲ್ಲಿ ಭಕ್ತಿ ರಾಘವ ಸ್ವಾಮಿ ಮಹಾರಾಜ್ ಅಭಿಪ್ರಾಯ ಸಂಸ್ಕೃತವು ಯಾವುದೇ ಧರ್ಮಕ್ಕೆ ಸಂಬಂಧಿಸಿದ ಭಾಷೆಯಲ್ಲ, ಇದು ಸಾರ್ವತ್ರಿಕ ಭಾಷೆ. ನಾವು ಆಯ್ಕೆಯಿಂದ ಭರತವರ್ಷದಲ್ಲಿ ಹುಟ್ಟಿಲ್ಲ ಆದರೆ ವೈವಿಧ್ಯಮಯ ಸಂಸ್ಕೃತಿಯೊಂದಿಗೆ ಇಲ್ಲಿ ಹುಟ್ಟಿದ ನಾವು  ಅದೃಷ್ಟವಂತರು ಎಂದು ಕೆನಡಾ ದೇಶದ ಇಸ್ಕಾನ್ ನ ಭಕ್ತಿ ರಾಘವ ಸ್ವಾಮಿ ಮಹಾರಾಜ್ ಹೇಳಿದರು. ಫೆ.26ರಂದು  ಶ್ರೀನಿವಾಸ ವಿಶ್ವವಿದ್ಯಾಲಯದ ಮುಕ್ಕ ಕ್ಯಾಂಪಸ್‌ನಲ್ಲಿ ವಿಶ್ವ ಸಂಸ್ಕೃತ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಹೈದರಾಬಾದ್ ನ ತಂತ್ರಜ್ಞ ಹಾಗೂ ಶಿಕ್ಷಣ ತಜ್ಞ ಡಾ.ವಿಠಲ ಜೋಶಿ ಮಾತನಾಡಿ, ಸಂಸ್ಕೃತ ದ ಅರಿವಿಲ್ಲದೇ ಯಾರೂ ಕೂಡ ವಿದ್ವಾಂಸನಾಗಲು‌ ಸಾಧ್ಯವಿಲ್ಲ. ಸಂಸ್ಕೃತ ಆಚರಣೆಗಳ ಭಾಷೆಯಲ್ಲ ಸನಾತನ ಭಾಷೆ ಎಂಬುದನ್ನು ನಾವು ತಿಳಿಯಬೇಕಿದೆ. ಸಂಸ್ಕೃತ ಗೊತ್ತಿದ್ದರೆ ಬೇರೆ ಭಾಷೆಗಳನ್ನು ಕಲಿಯುವುದು ಬಲು ಸುಲಭ ಎಂದರು. ಆಧ್ಯಕ್ಷತೆ ವಹಿಸಿದ್ದ ಶ್ರೀನಿವಾಸ ವಿಶ್ವವಿದ್ಯಾಲಯದ ಕುಲಾಧಿಪತಿ ಸಿಎ.ಎ‌  ರಾಘವೇಂದ್ರ ರಾವ್ ಮಾತನಾಡಿ,…

Read More