Author: roovari

ಕನ್ನಡ ಚಿತ್ರರಂಗದಲ್ಲಿ ಕಿರುವಯಸಿನಲ್ಲೇ ಸೂಪರ್ ಸ್ಟಾರ್ ಎನಿಸಿದ ಪಂಚಭಾಷಾತಾರೆ ಪದ್ಮಭೂಷಣ ಬಿರುದು ಹೊತ್ತ ಬಿ. ಸರೋಜಾದೇವಿಯವರದ್ದು ಒಂದು ದೊಡ್ಡ ಹೆಸರಾದರೆ ನಾಟಕ ರಂಗದಲ್ಲಿ ಹೈಸ್ಕೂಲು ಮೆಟ್ಟಿಲೇರುವಷ್ಟರಲ್ಲೇ ರಂಗ ಭೂಮಿಯ ಅನೇಕ ಹಿರಿಯ ಸಂಸ್ಥೆಗಳ ಪೈಕಿ ಲೆಕ್ಕವಿಲ್ಲದಷ್ಟು ನಾಟಕಗಳಲ್ಲಿ ಮತ್ತು ವಿವಿಧ ಸಾಂಸ್ಕೃತಿಕ ರಂಗಗಳಲ್ಲಿ ಮಿಂಚಿದ ನಮ್ಮೂರಿನ ಅಭಿನಯ ಸರಸ್ವತಿ… ಪ್ರಿಯಾ ಸರೋಜಾ ದೇವಿ. ಇವರೀರ್ವರ ಮೈಕಟ್ಟು ಮತ್ತು ಮುಖಚರ್ಯೆಯಲ್ಲೂ ಒಂದಷ್ಟು ಹೋಲಿಕೆ ಇದೆ. ಸರೋವರದ ಜಲದಲ್ಲಿ ಉದಿಸುವ ಹೂ ಕಮಲವೇ ಸರೋಜಾ..ಆಸಕ್ತಿ ಅಭಿವ್ಯಕ್ತಿ ಉತ್ಸಾಹ ಹುಮ್ಮಸ್ಸು ಸೃಜನಶೀಲತೆಗಳ ಅನ್ವರ್ಥನಾಮವೇ ಸರೋಜಾ…. ಸರೋಜಾ ದೇವಿ ಎಂದರೆ ಕಮಲವನ್ನು ಹಿಡಿದ ಕಮಲಿನೀ ಎಂದರ್ಥೈಸಬಹುದಲ್ಲವೇ. ಹೌದು ಕಮಲ ಎಲ್ಲಿದ್ದರೂ ಕಮಲ… ಅದರ ತುಂಬೆಲ್ಲವೂ ತುಮುಲ. ಇದು ನಮ್ಮ ಉಡುಪಿಯ ಸಮೀಪ ಕೊಳಂಬೆ ಗ್ರಾಮದ ಶಾಂತಿನಗರದಲ್ಲಿ ನೆಲೆಸಿದ್ದ ಸಂಸಾರ ಸರೋವರದಲ್ಲಿ ಅರಳಿದ ಚೆಲು ಕಮಲ. ತಂದೆ ಕೃಷ್ಣ ಹಾಗೂ ತಾಯಿ ಪದ್ಮಾವತಿಯ ನಾಭಿಯಲ್ಲರಳಿದ ಕಮಲ. ಇವರ ಓದು ಶುರುವಾಗಿದ್ದು ಒಳಕಾಡು ಹೈಸ್ಕೂಲಿನಲ್ಲಿ. ಕಲಿಯುವುದರಲ್ಲಿ ಚಿಕ್ಕಂದಿನಿಂದಲೂ ನಂಬರ್ ವನ್.…

Read More

ಮಂಗಳೂರು : ರಂಗಭೂಮಿ ಕಲಾವಿದ, ರಂಗಕರ್ಮಿಗಳಿಗೆ ನೀಡುವ, ಅರೆಹೊಳೆ ಪ್ರತಿಷ್ಠಾನದ ‘ಅರೆಹೊಳೆ ರಂಗ ಭೂಮಿ ಪುರಸ್ಕಾರ’ದ 2024ನೇ ಸಾಲಿನ ಪ್ರಶಸ್ತಿಗೆ ಹಿರಿಯ ರಂಗಭೂಮಿ ಹಾಗೂ ಚಲನಚಿತ್ರ ಕಲಾವಿದ, ನಿರ್ದೇಶಕ ಆಸಿಫ್ ಕ್ಷತ್ರಿಯ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಆಸಿಫ್ ಕ್ಷತ್ರಿಯ ಈಗಾಗಲೇ ಅನೇಕ ನಾಟಕಗಳನ್ನು ನಿರ್ದೇಶಿಸಿದ್ದು, ನಾನಾ ದಿಗ್ಗಜ ಸಿನಿಮಾ ಕಲಾವಿದರೊಂದಿಗೆ ಅನೇಕ ಸಿನಿಮಾಗಳಲ್ಲೂ ನಟಿಸಿದ್ದಾರೆ. ಕನ್ನಡ ಮಾತ್ರವಲ್ಲದೆ ಹಲವು ಭಾಷೆಗಳಲ್ಲೂ ನಾಟಕ ನಿರ್ದೇಶಿಸಿರುವ ಇವರು, ಕನ್ನಡದ ಅನೇಕ ರಂಗ ಕೃತಿಗಳಿಗೆ ತಮ್ಮದೇ ಸ್ಪರ್ಶ ಮೂಲಕ, ವಿಭಿನ್ನ ಆಯಾಮದ ನಾಟಕಗಳನ್ನು ಕಟ್ಟಿಕೊಟ್ಟಿದ್ದಾರೆ. ಬೆಂಗಳೂರಿನಲ್ಲಿ ‘ರಂಗರಥ ಟ್ರಸ್ಟ್’ ಎಂಬ ಭಾರತೀಯ ಕಲೆಗಳ ಪ್ರದರ್ಶನ ತಂಡದ ಮೂಲಕ, ರಂಗ ಶಿಬಿರ, ಪ್ರದರ್ಶನಗಳನ್ನು ನೀಡುತ್ತಾ, ಅನೇಕ ಯುವ ಕಲಾವಿದರನ್ನು ರಂಗಭೂಮಿಗೆ ಪರಿಚಯಿಸುತ್ತಿದ್ದಾರೆ. ಇವರ ರಂಗಭೂಮಿಯ ಒಟ್ಟು ಸಾಧನೆಗಳನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಪ್ರಶಸ್ತಿಯು ರೂಪಾಯಿ 10 ಸಾವಿರ ನಗದು ಹಾಗೂ ಫಲಕಗಳನ್ನೊಳಗೊಂಡಿದೆ. ದಿನಾಂಕ 27 ಮಾರ್ಚ್ 2025 ರಂದು ಮಂಗಳೂರಿನ ಬೋಂದೆಲ್‌ನಲ್ಲಿ ಅರೆಹೊಳೆ ಪ್ರತಿಷ್ಠಾನ ಆಯೋಜಿಸುವ 10ನೇ…

Read More

ಮುಂಬೈ: ಹಿರಿಯ ಶಿಲ್ಪಿ,ಶತಾಯುಷಿ ರಾಮ ಸುತಾರ್ ಅವರು ಮಹಾರಾಷ್ಟ್ರ ಸರಕಾರದ ಅತ್ಯುನ್ನತ ನಾಗರಿಕ ಗೌರವವಾಗಿರುವ ಪ್ರತಿಷ್ಠಿತ ’ಮಹಾರಾಷ್ಟ್ರ ಭೂಷಣ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಭಾರತದ ರಾಜಕೀಯ ಏಕೀಕರಣದಲ್ಲಿ ಪ್ರಮುಖ ಪಾತ್ರವನ್ನು ವಹಿಸಿದ್ದ ದೇಶದ ಮೊದಲ ಉಪಪ್ರಧಾನಿ ಹಾಗೂ ಗೃಹಸಚಿವ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಗೌರವಾರ್ಥ ವಿಶ್ವದಲ್ಲಿಯೇ ಅತ್ಯಂತ ಎತ್ತರದ ಗುಜರಾತಿನ ಏಕತಾ ವಿಗ್ರಹವನ್ನು ವಿನ್ಯಾಸಗೊಳಿಸಿದವರು ಸುತಾರ್. ಸಂಸತ್ತಿನಲ್ಲಿ ಕುಳಿತಿರುವ ಭಂಗಿಯಲ್ಲಿರುವ ಮಹಾತ್ಮಾ ಗಾಂಧಿಯವರ ಪ್ರತಿಮೆಯೂ ಸುತಾರ್ ಸೃಷ್ಟಿಯಾಗಿದ್ದು, ಬೆಂಗಳೂರಿನ ವಿಧಾನ ಸೌಧದಲ್ಲಿ ಅದರ ಬೃಹತ್ ಪ್ರತಿಕೃತಿಯನ್ನೂ ಅವರೇ ನಿರ್ಮಿಸಿದ್ದಾರೆ. ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ 108 ಅಡಿ ಎತ್ತರದ ಕೆಂಪೇಗೌಡರ ಪ್ರತಿಮೆ ಇವರ ಕೈಗಳಿಂದಲೇ ಮೂಡಿದ್ದು, ಭಾರತೀಯ ಸಂವಿಧಾನದ ಶಿಲ್ಪಿಯ ಗೌರವಾರ್ಥ ಮುಂಬೈನ ಇಂದು ಮಿಲ್ಸ್‌ನಲ್ಲಿಯ ಬೃಹತ್ ಸ್ಮಾರಕದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಯನ್ನೂ ಸುತಾರ್ ವಿನ್ಯಾಸಗೊಳಿಸುತ್ತಿದ್ದಾರೆ. ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರಕ್ಕಾಗಿ ಶ್ರೀರಾಮನ ಪ್ರತಿಮೆಯನ್ನೂ ಧುಲೆ ಸಂಜಾತ ಸುತಾರ್ ನಿರ್ಮಿಸುತ್ತಿದ್ದಾರೆ.

Read More

ಮೈಸೂರು : ಪರಿವರ್ತನ ರಂಗ ಸಮಾಜ (ರಿ.) ಇದರ 25ನೇ ವರ್ಷದ ಸಂಭ್ರಮ ಪ್ರಯುಕ್ತ ಹೊಸ ರಂಗ ಪ್ರಯೋಗ ಪ್ರೊ. ಎಸ್.ಆರ್. ರಮೇಶ್ ಇವರ ರಂಗಪಠ್ಯ ವಿನ್ಯಾಸ ಮತ್ತು ನಿರ್ದೇಶನದಲ್ಲಿ ‘ವಿಕಾಸವಾದ’ ವಿಚಾರಣೆಯ ಸುಳಿಯಲ್ಲಿ ನಾಟಕ ಪ್ರದರ್ಶನವನ್ನು ದಿನಾಂಕ 22 ಮತ್ತು 23 ಮಾರ್ಚ್ 2025ರಂದು ಸಂಜೆ 7-00 ಗಂಟೆಗೆ ಮೈಸೂರು ಕಿರುರಂಗಮಂದಿರದಲ್ಲಿ ಆಯೋಜಿಸಲಾಗಿದೆ.

Read More

ಮಂಗಳೂರು : ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ‘ಆಜಂದಿ ಎಣ್ಣೆ ಮಾಜಂದಿ ನಿನೇ ತೆಕ್ಕಂದಿ ತುಡರ್’ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ. ವಾಮನ ನಂದಾವರ ಇವರಿಗೆ ನುಡಿನಮನ ಸಲ್ಲಿಕೆ ಕಾರ್ಯಕ್ರಮವು ದಿನಾಂಕ 19 ಮಾರ್ಚ್ 2025ರಂದು ಉರ್ವಸ್ಟೋರ್‌ನ ತುಳು ಭವನದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಹಿರಿಯ ವಿದ್ವಾಂಸ ಪ್ರೊ. ವಿವೇಕ್ ರೈ ಮಾತನಾಡಿ “ಡಾ. ವಾಮನ ನಂದಾವರ ಅವರು ತುಳು ಸಾಹಿತ್ಯ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅವಿಸ್ಮರಣೀಯ. ತುಳು ಸಾಹಿತ್ಯ ಬೆಳೆಯಲು ನಿರಂತರವಾಗಿ ಶ್ರಮಿಸಿದ್ದಾರೆ. ತನ್ನ ಕೃತಿಗಳ ಮೂಲಕ ನಿರಂತರ ತುಳು ಸೇವೆ ಮಾಡುತ್ತಲೇ ಇದ್ದರು. ನಂದಾವರ ಓರ್ವ ಉತ್ತಮ ಪ್ರಕಾಶಕ, ಸಂಘಟಕ, ಸಾಹಿತಿ, ಕಥೆಗಾರ ಆಗಿದ್ದರು. ಜತೆಗೆ ಊರವರೊಂದಿಗೆ ಅತ್ಯುತ್ತಮ ಬಾಂಧವ್ಯ ಹೊಂದಿದ ವ್ಯಕ್ತಿಯಾಗಿದ್ದರು. ಆರಂಭದ ದಿನಗಳಲ್ಲೇ ತುಳುವಿನ ಬಗ್ಗೆ ಕೆಲಸ ಮಾಡಬೇಕೆನ್ನುವ ಉತ್ಸಾಹ ಅವರಲ್ಲಿತ್ತು. ಗಣಿತ ಶಿಕ್ಷಕರಾಗಿದ್ದು ವಿದ್ಯಾರ್ಥಿಗಳಿಗಾಗಿ ಬರೆದ ಪದ್ಯಗಳು ಪ್ರಸಿದ್ಧಿ ಗಳಿಸಿವೆ.…

Read More

ಧಾರವಾಡ : ಸಾಹಿತ್ಯ ಗಂಗಾ ಧಾರವಾಡ ಸಂಸ್ಥೆಯು 45 ವರ್ಷದೊಳಗಿನ ಉದಯೋನ್ಮುಖ ಲೇಖಕ/ ಲೇಖಕಿಯರನ್ನು ಪ್ರೋತ್ಸಾಹಿಸಲು ಕಥೆ ಮತ್ತು ಪ್ರಬಂಧಗಳ ಸಂಪುಟವೊಂದನ್ನು ಯುವ ವಿಮರ್ಶಕರಾದ ವಿಕಾಸ ಹೊಸಮನಿ ಮತ್ತು ಸುಭಾಷ್ ಪಟ್ಟಾಜೆಯವರ ಸಂಪಾದಕತ್ವದಲ್ಲಿ ಪ್ರಕಟಿಸಲಿದೆ. ಈ ಸಂಪುಟದಲ್ಲಿ 20 ಕಥೆಗಳು ಮತ್ತು 20 ಪ್ರಬಂಧಗಳಿಗೆ ಮಾತ್ರ ಅವಕಾಶ ನೀಡಲಾಗುವುದು. ಆಸಕ್ತರು ನಿಯಮಾನುಸಾರವಾಗಿ ಬರಹಗಳನ್ನು ಕಳುಹಿಸಬೇಕು. ನಿಯಮಗಳು : # ಈ ಸಂಪುಟಕ್ಕೆ ಸ್ವತಂತ್ರ ಮತ್ತು ಅಪ್ರಕಟಿತ ಕಥೆ-ಪ್ರಬಂಧಗಳನ್ನು ಮಾತ್ರ ಕಳುಹಿಸಬೇಕು. # ಅನುವಾದ, ಅನುಸೃಷ್ಟಿ, ರೂಪಾಂತರ ಮಾಡಿದ ಕಥೆ-ಪ್ರಬಂಧಗಳಿಗೆ ಅವಕಾಶವಿಲ್ಲ. # ಒಬ್ಬರು ಒಂದು ಕಥೆ ಅಥವಾ ಪ್ರಬಂಧವನ್ನು ಮಾತ್ರ ಕಳುಹಿಸಬೇಕು. # ಕಥೆ-ಪ್ರಬಂಧಗಳು ಕನಿಷ್ಠ 700 ಪದಗಳ ಮೇಲೆ ಮತ್ತು ಗರಿಷ್ಠ 1500 ಪದಗಳೊಳಗಿರಬೇಕು. # ಕಥೆ-ಪ್ರಬಂಧಗಳನ್ನು ಕಡ್ಡಾಯವಾಗಿ docx & pdf ಎರಡೂ ರೂಪದಲ್ಲಿ ಕಳಿಸಬೇಕು. ಬರಹಗಾರರ ಸಂಕ್ಷಿಪ್ತ ಪರಿಚಯ, ವಯೋಮಿತಿ ದೃಢೀಕರಣದ ದಾಖಲೆ, ಪೂರ್ಣ ವಿಳಾಸ ಮತ್ತು ಒಂದು ಫೋಟೋ ಪ್ರತ್ಯೇಕವಾಗಿ ಕಳುಹಿಸಬೇಕು. # ಗುಣಮಟ್ಟವೊಂದೇ ಆಯ್ಕೆಯ…

Read More

ಹೆಗ್ಗೋಡು : ಕಿನ್ನರ ಮೇಳ ತುಮರಿ ಇವರ ವತಿಯಿಂದ ಕೆ.ಎಸ್. ರಾಜೇಂದ್ರನ್ ನೆನಪಿನ ಕಾರ್ಯಕ್ರಮವನ್ನು ದಿನಾಂಕ 22 ಮತ್ತು 23 ಮಾರ್ಚ್ 2025ರಂದು ಹೆಗ್ಗೋಡು ಭೀಮನಕೋಣೆ ಕಿನ್ನರ ಮೇಳ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ದಿನಾಂಕ 22 ಮಾರ್ಚ್ 2025ರಂದು ಸಂಜೆ 5-30 ಗಂಟೆಗೆ ರಾಜೇಂದ್ರನ್ ಸ್ಮರಣೆ ಮತ್ತು 7-00 ಗಂಟೆಗೆ ಕೆ.ಜಿ. ಕೃಷ್ಣಮೂರ್ತಿ ಇವರ ನಿರ್ದೇಶನದಲ್ಲಿ ‘ಸುದ್ದಿಯ ಮಾಯಾಜಾಲ’ ಕಿನ್ನರ ಮೇಳ ನಾಟಕ ಪ್ರದರ್ಶನಗೊಳ್ಳಲಿದೆ. ದಿನಾಂಕ 23 ಮಾರ್ಚ್ 2025ರಂದು ಬೆಳಗ್ಗೆ 10-00 ಗಂಟೆಗೆ ನಟ ಮತ್ತು ನಿರ್ದೇಶಕ ಸುಧನ್ವ ದೇಶಪಾಂಡೆ ಇವರಿಂದ ‘ವಿಕೃತ ಜಗತ್ತಿನೊಳಗೆ ರಂಗಭೂಮಿ’ ಒಂದು ಸಚಿತ್ರ ಉಪನ್ಯಾಸ ನಡೆಯಲಿದೆ. ಮಧ್ಯಾಹ್ನ 4-30 ಗಂಟೆಗೆ ಕೇರಳದ ನಿಧಿ ಎಸ್. ಶಾಸ್ತ್ರಿ ಇವರ ನಿರ್ದೇಶನದಲ್ಲಿ ‘ಇರುವೆ ಪುರಾಣ’ ಮಕ್ಕಳ ನಾಟಕ ಮತ್ತು ಸಂಜೆ 7-00 ಗಂಟೆಗೆ ದಾದಾನಟ್ಟಿ ಶ್ರೀ ಮಂಜುನಾಥ ಶ್ರೀಕೃಷ್ಣ ಪಾರಿಜಾತ ತಂಡದವರಿಂದ ‘ಶ್ರೀ ಕೃಷ್ಣ ಪಾರಿಜಾತ’ ಪ್ರಸ್ತುತಗೊಳ್ಳಲಿದೆ.

Read More

ಕಾಸರಗೋಡು : ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.) ಕನ್ನಡ ಗ್ರಾಮ ಕಾಸರಗೋಡು ಹಾಗೂ ವಿ.ಕೆ.ಎಂ. ಕಲಾವಿದರು (ರಿ.) ಬೆಂಗಳೂರು ಇದರ ನೇತೃತ್ವದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಸರಕಾರ ಬೆಂಗಳೂರು ಇದರ ಸಹಯೋಗದಲ್ಲಿ ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್, ಚುಟುಕು ಸಾಹಿತ್ಯ ಪರಿಷತ್ ಕೇಂದ್ರ ಸಮಿತಿ ಮೈಸೂರು, ದಕ್ಷಿಣ ಕನ್ನಡ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಮಂಗಳೂರು, ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕ ಕೇರಳ ರಾಜ್ಯ, ದಾಸ ಸಾಹಿತ್ಯ ಪರಿಷತ್ತು ಮತ್ತು ವಿವಿಧ ಸಂಘ, ಸಂಸ್ಥೆಗಳ ಸಹಕಾರದಲ್ಲಿ ದಿನಾಂಕ 27 ಮಾರ್ಚ್ 2025ರಂದು ಬೆಳಿಗ್ಗೆ ಗಂಟೆ 9-00ರಿಂದ ರಾತ್ರಿ 9-00ರವರೆಗೆ ಕಾಸರಗೋಡು ಕನ್ನಡ ಗ್ರಾಮದಲ್ಲಿ ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಇದರ 25ನೇ ಬೆಳ್ಳಿ ಹಬ್ಬ ವರ್ಷಾಚರಣೆಯ ಸಂಭ್ರಮ, ಕಾಸರಗೋಡು ಜಿಲ್ಲಾ 7ನೇ ಚುಟುಕು ಸಾಹಿತ್ಯ ಸಮ್ಮೇಳನ – 2025 ಮತ್ತು ಕರ್ನಾಟಕ ಗಡಿನಾಡ ಉತ್ಸವ, ವಿ.ಕೆ.ಎಂ. ಕಲಾವಿದರು (ರಿ.) ಬೆಂಗಳೂರು…

Read More

ಉಡುಪಿ : ಯಕ್ಷಗಾನ ಕಲಾರಂಗ (ರಿ.) ಇದರ ವತಿಯಿಂದ ಭೀಮ ಗೋಲ್ಡ್ ಪ್ರೈ.ಲಿ. ಬೆಂಗಳೂರು ಇದರ ಪ್ರಾಯೋಜಕತ್ವದಲ್ಲಿ ಭೀಮ ‘ಯಕ್ಷಶಿಕ್ಷಣ ಸನಿವಾಸ ಶಿಬಿರ -2025’ವನ್ನು ದಿನಾಂಕ 22 ಮಾರ್ಚ್ 2025ರಿಂದ 28 ಮಾರ್ಚ್ 2025ರವರೆಗೆ ಉಡುಪಿಯ ಕಲಾರಂಗ ಐ.ವೈ.ಸಿ. ಸಭಾಂಗಣದಲ್ಲಿ ಆಯೋಜಿಸಲಾಗಿದೆ. ದಿನಾಂಕ 22 ಮಾರ್ಚ್ 2025ರಂದು ಪೂರ್ವಾಹ್ನ 10-30 ಗಂಟೆಗೆ ಮಾನ್ಯ ಶಾಸಕರಾದ ಯಶ್ ಪಾಲ್ ಎ. ಸುವರ್ಣ ಇವರು ಈ ಶಿಬಿರದ ಉದ್ಘಾಟನೆ ಮಾಡಲಿದ್ದು, ಬೆಂಗಳೂರು ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾದ ಡಾ. ತಲ್ಲೂರು ಶಿವರಾಮ ಶೆಟ್ಟಿ ಇವರು ಅಧ್ಯಕ್ಷತೆ ವಹಿಸಲಿದ್ದಾರೆ. ಶ್ರೀ ಗುರು ಬನ್ನಂಜೆ ಸಂಜೀವ ಸುವರ್ಣ ಇವರು ನಿರ್ದೇಶಕರಾಗಿದ್ದು, ಗುರುಗಳಾಗಿ ನರಸಿಂಹ ತುಂಗ ಮತ್ತು ಕುಮಾರಿ ಆದ್ಯತಾ ಭಟ್ ಹಾಗೂ ನಿರಂಜನ ಭಟ್ ಇವರು ಸಂಯೋಜಕರಾಗಿ ಈ ಶಿಬಿರ ನಡೆಸಿಕೊಡಲಿದ್ದಾರೆ. ಸಂಜೆ 6-00 ಗಂಟೆಗೆ ಉಡುಪಿಯ ‘ಯಕ್ಷಸಂಜೀವ ಯಕ್ಷಗಾನ ಕೇಂದ್ರ’ ಇಲ್ಲಿನ ವಿದ್ಯಾರ್ಥಿಗಳಿಂದ ಬನ್ನಂಜೆ ಸಂಜೀವ ಸುವರ್ಣ ಇವರ ನಿರ್ದೇಶನದಲ್ಲಿ ‘ಜಟಾಯು ಮೋಕ್ಷ’ ಯಕ್ಷಗಾನ ಪ್ರದರ್ಶನಗೊಳ್ಳಲಿದೆ.

Read More

ಸುಳ್ಯ : ಸಂಧ್ಯಾರಶ್ಮಿ ಸಾಹಿತ್ಯ ಸಂಘ ಸುಳ್ಯ ಮತ್ತು ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಸುಳ್ಯ ಹೋಬಳಿ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಸಾಹಿತಿ ಡಾ. ರಮಾನಂದ ಬನಾರಿಯವರ ಬಗ್ಗೆ ‘ತಿಂಗಳ ಸಾಹಿತ್ಯ ಸಂವಾದ ಮಾಲಿಕೆ’ ಕಾರ್ಯಕ್ರಮವನ್ನು ದಿನಾಂಕ 22 ಮಾರ್ಚ್ 2025ರಂದು ಪೂರ್ವಾಹ್ನ 10-30 ಗಂಟೆಗೆ ಕುರಂಜಿ ಬಾಗ್ ಸಂಧ್ಯಾರಶ್ಮಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಸಂಧ್ಯಾರಶ್ಮಿ ಸಾಹಿತ್ಯ ಸಂಘ ಇದರ ಅಧ್ಯಕ್ಷರಾದ ಶ್ರೀಮತಿ ಲೀಲಾ ದಾಮೋದರ ಅಧ್ಯಕ್ಷತೆ ವಹಿಸಲಿದ್ದು, ಸುಳ್ಯದ ಪ್ರತಿಭಾ ವಿದ್ಯಾಲಯ ಪ್ರಾಚಾರ್ಯರಾದ ವೆಂಕಟ್ರಾಮ್ ಭಟ್ ‘ವ್ಯಕ್ತಿತ್ವ ಪರಿಚಯ’, ಸಾಹಿತಿ ಹಾಗೂ ಪತ್ರಕರ್ತರಾದ ವಿರಾಜ್ ಅಡೂರು ‘ಮತ್ತೆ ಮತ್ತೆ ಶ್ರೀಕೃಷ್ಣ’, ಸಾಹಿತಿ ಕುಮಾರಸ್ವಾಮಿ ತೆಕ್ಕುಂಜ ‘ಕಾವ್ಯದಲ್ಲಿ ವ್ಯಕ್ತಿ ಚಿತ್ರಣ’, ವೈದ್ಯರಾದ ಡಾ. ವೀಣಾ ಇವರಿಂದ ‘ಆರೋಗ್ಯ ಗೀತೆಗಳು’ ಮತ್ತು ಕೆ.ಆರ್. ಗೋಪಾಲಕೃಷ್ಣ ಇವರಿಂದ ಗೀತ ಗಾಯನ ನಡೆಯಲಿದೆ.

Read More