Author: roovari

ಕೋಲಾರ : ಬೆಂಗಳೂರು ಉತ್ತರ ವಿಶ್ವವಿದ್ಯಾಲಯದಿಂದ ಮಾನ್ಯತೆ ಪಡೆದಿರುವ ‘ಆದಿಮ ರಂಗಭೂಮಿ ಶಿಕ್ಷಣ ಕೇಂದ್ರ’ ಇದರ ವತಿಯಿಂದ ಡ್ರಾಮಾ ಡಿಪ್ಲೊಮಾ 2024-25 ಒಂದು ವರ್ಷದ ಅಭಿನಯ ಮತ್ತು ರಂಗ ತರಬೇತಿ (ಯುಜಿ ಡಿಪ್ಲೊಮಾ) ಸನಿವಾಸ ತರಗತಿಗಳು ಪ್ರಾರಂಭವಾಗಲಿದೆ. ಆದಿಮ ಸಾಂಸ್ಕೃತಿಕ ಕೇಂದ್ರವು ನೆಲ ಸಂಸ್ಕೃತಿ ನಡೆಯ ಭಾಗವಾಗಿ 18 ವರ್ಷಗಳಿಂದ ನಡಿಸಿದ ಪ್ರಯೋಗಗಳ ಹಿನ್ನೆಲೆಯಲ್ಲಿ ಒಂದು ವರ್ಷದ ಡ್ರಾಮಾ ಡಿಪ್ಲೊಮಾ ಕಾಲೇಜು ತೆರೆಯಲಾಗಿದೆ. ಪಿ.ಯು.ಸಿ. / ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣಗಾಗಿರುವ 18ರಿಂದ 30 ವರ್ಷ ವಯೋಮಿತಿಯ ಅರ್ಹ ಅಭ್ಯರ್ಥಿಗಳು ಆದಿಮ ರಂಗಭೂಮಿ ಶಿಕ್ಷಣ ಕೇಂದ್ರ, ಶಿವಗಂಗೆ, ತೇರಹಳ್ಳಿ ಬೆಟ್ಟ, ಮಡೇರಹಳ್ಳಿ ಅಂಚೆ, ಕೋಲಾರ-563101, ಇಲ್ಲಿ ನಿಗದಿತ ಅರ್ಜಿಯನ್ನು ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ನಿಗದಿತ ಸಮಯದೊಳಗೆ ನೇರವಾಗಿ ಅಥವಾ ಅಂಚೆಯ ಮುಖಾಂತರ ಇಲ್ಲಿಗೆ ತಲಪಿಸತಕ್ಕದ್ದು. ಆಯ್ಕೆ ಪ್ರಕ್ರಿಯೆ ನೇರ ಸಂದರ್ಶನದ ಮೂಲಕ ನಡೆಯಲಿದ್ದು, ಅಭ್ಯರ್ಥಿಗಳು ಸಂದರ್ಶನದಲ್ಲಿ ಕಡ್ಡಾಯವಾಗಿ ಭಾಗವಹಿಸತಕ್ಕದ್ದು. ರಂಗಭೂಮಿ / ಕಲೆಗಳಲ್ಲಿ ಆಸಕ್ತಿ ಇರುವವರಿಗೆ ಮೊದಲ ಆದ್ಯತೆ. ಪ್ರವೇಶ ಪ್ರಕ್ರಿಯೆ…

Read More

ಮಂಗಳೂರು : ಜರ್ನಿ ಥೇಟರ್ ಗ್ರೂಪ್ (ರಿ.) ಮಂಗಳೂರು ಹವ್ಯಾಸಿ ನಾಟಕ ತಂಡವಾಗಿದ್ದು, ಸಮಾನ ಮನಸ್ಕರು ಒಟ್ಟು ಸೇರಿ ಕಟ್ಟಿದ ಸಂಸ್ಥೆ. ಕಳೆದ ಹತ್ತು ವರ್ಷಗಳಿಂದ ತನ್ನ ಇತಿಮಿತಿಯ ಒಳಗಡೆ ಅತಿಯೆನಿಸದೆ ಸಾಂಸ್ಕೃತಿಕ ಮತ್ತು ಸಾಮಾಜಿಕ ನೆಲೆಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬಂದಿದೆ. ಪ್ರಸ್ತುತ ನಮ್ಮ ತಂಡವು ಆಧುನಿಕ ತುಳು ನಾಟಕ ರಂಗಭೂಮಿಯ ಬೆಳವಣಿಗೆಯ ದೃಷ್ಟಿಯಿಂದ ಮತ್ತು ತುಳು ನಾಟಕ ಪಠ್ಯಗಳ ಕೊರತೆಯನ್ನು ನೀಗಿಸುವ ನೆಲೆಯಿಂದ ಪ್ರೊಫೆಸರ್ ಅಮೃತ ಸೋಮೇಶ್ವರವರ ಸವಿ ನೆನಪಿನಲ್ಲಿ ‘ತುಳು ನಾಟಕ ರಚನಾ ಕಾರ್ಯಾಗಾರ’ವನ್ನು ಹಮ್ಮಿಕೊಳ್ಳುತ್ತಿದ್ದೇವೆ. ಈ ಕಾರ್ಯಾಗಾರಕ್ಕೆ ಹಿರಿಯ ಅನುಭವಿಗಳನ್ನೊಳಗೊಂಡ ಸಲಹಾ ಮಂಡಳಿ ಮತ್ತು ಮಾರ್ಗದರ್ಶನ ಮಂಡಳಿ ಇರುತ್ತದೆ. ಈ ಕಾರ್ಯಾಗಾರವು ನಾಲ್ಕು ಹಂತಗಳಲ್ಲಿ ನಡೆಯಲಿದ್ದು, ಮೊದಲನೆಯ ಹಂತದಲ್ಲಿ ಆಯ್ಕೆಯಾಗುವ 10 ಜನ ಅಭ್ಯರ್ಥಿಗಳಿಗೆ ತುಳು ನಾಟಕ ರಂಗಭೂಮಿಯ ವಸ್ತುಸ್ಥಿತಿಯ ಪರಿಚಯ, ಹಲವಾರು ನಾಟಕ ಪಠ್ಯ-ಪ್ರಯೋಗಗಳ ಪರಿಚಯ ಮತ್ತು ವಿಶ್ಲೇಷಣೆ ಮೊದಲಾದವುಗಳ ಕುರಿತು ಚರ್ಚಿಸಲಾಗುತ್ತದೆ. ಎರಡನೆಯ ಹಂತದಲ್ಲಿ ಅಭ್ಯರ್ಥಿಗಳು ತಮ್ಮದೇ ಆದ ಸ್ವಂತ ಕತೆಯ ಎಳೆಯನ್ನು ಸಿದ್ಧಪಡಿಸಿಕೊಂಡು…

Read More

ಮಂಗಳೂರು : ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಳ್ಳಾಲ ಮತ್ತು ಕರಾವಳಿ ಸಂಗೀತ ಕಲಾವಿದರ ಒಕ್ಕೂಟ ದ.ಕ., ಉಡುಪಿ ಜಿಲ್ಲೆ ಮತ್ತು ಶಾರದಾ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್, ದೇವಿನಗರ, ತಲಪಾಡಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಕನ್ನಡ ಗೀತ ಸಂಗೀತ ಕಾರ್ಯಾಗಾರ ‘ಭಾವಯಾನ’ವು ದಿನಾಂಕ 13-06-2024ರಂದು ಶಾರದಾ ವಿದ್ಯಾನಿಕೇತನ ಡೇ-ಬೋರ್ಡಿಂಗ್ ವಿಭಾಗದ ಸರಸ್ವತಿ ಮಂದಿರದಲ್ಲಿ ಜರಗಿತು. ಈ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಶಾರದಾ ಸಮೂಹ ವಿದ್ಯಾಸಂಸ್ಥೆಗಳ ಅಧ್ಯಕ್ಷರಾದ ಪ್ರೊ. ಎಂ.ಬಿ. ಪುರಾಣಿಕ್ “ಮನುಷ್ಯನ ಎಲ್ಲಾ ಸಮಸ್ಯೆಗಳ ಮೂಲ ಅತಿಯಾದ ಆಸೆ ಮತ್ತು ಅಹಂಕಾರವೇ ಆಗಿದೆ. ಸಾಹಿತ್ಯ ಸಂಗೀತಾದಿ ಕಲೆಗಳು ಮನಸ್ಸನ್ನು ಸುಸಂಸ್ಕೃತಗೊಳಿಸಿ ಅಹಂಕಾರ ನಿರಸನಕ್ಕೆ ದಾರಿ ಮಾಡಿಕೊಡುತ್ತದೆ. ಶಿಕ್ಷಣದಲ್ಲಿ ಕಲೆ, ಸಾಹಿತ್ಯವೂ ಒಳಗೊಂಡಾಗ ಮಾತ್ರ ಪರಿಪೂರ್ಣ ಶಿಕ್ಷಣ ಸಾಧ್ಯವಾಗುತ್ತದೆ” ಎಂದು ಹೇಳಿದರು. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದ ಕರ್ನಾಟಕ ಅರಣ್ಯ ಇಲಾಖೆಯ ನಿವೃತ್ತ ಅಧಿಕಾರಿ ಕೆರೆಮನೆ ನರಸಿಂಹ ಹೆಗಡೆ “ಮನಸು ಮತ್ತು ಬುದ್ಧಿಗಳ ನಡುವೆ ಹೊಂದಾಣಿಕೆ ಬೇಕು. ಸಂಗೀತದಿಂದ ಮನಸ್ಸು ಸಂಸ್ಕಾರಗೊಳ್ಳುತ್ತದೆ”…

Read More

ಪ್ರತಿಯೊಬ್ಬ ಭಾರತೀಯನಿಗೆ ‘ರಾಮಾಯಣ’ದ ಬಗೆಗಿನ ಒಲವು ರಕ್ತಗತವಾದದ್ದು. ಇಡೀ ಒಂದು ಆದರ್ಶ ಜೀವನಕ್ರಮಕ್ಕೇ ಅಡಿಗಲ್ಲು ಹಾಕುವಂಥ ಈ ಕಥನವು ಆತನ ಬದುಕಿನ ವಿವಿಧ ಸಂದರ್ಭಗಳಲ್ಲಿ ಬೇರೆ ಬೇರೆ ಉದ್ದೇಶಗಳಿಗೋಸ್ಕರ ಉಲ್ಲೇಖಿತವಾಗುತ್ತಲೇ ಇರುತ್ತದೆ. ಅನಂತ ಸಾಧ್ಯತೆಗಳಿರುವ ರಾಮಾಯಣದ ಸುಮಾರು ಮುನ್ನೂರರಷ್ಟು ರೂಪಗಳು ನೂರಾರು ಭಾಷೆಗಳಲ್ಲಿ ಜಗತ್ತಿನಾದ್ಯಂತ ಇವೆ ಎಂದು ಸಂಶೋಧಕರು ಹೇಳಿದ್ದಾರೆ. ಕನ್ನಡದಲ್ಲಿ ಪಂಪನಿಂದ ಮೊದಲ್ಗೊಂಡು ಕುವೆಂಪು ಅವರ ತನಕ ರಾಮಾಯಣಗಳು ರಚಿತವಾದದ್ದನ್ನು ನಾವು ನೋಡಿದ್ದೇವೆ. ತಮಿಳಿನ ಕಂಬರಾಮಾಯಣ, ಮಲೆಯಾಳದ ಅಧ್ಯಾತ್ಮ ರಾಮಾಯಣ, ಹಿಂದಿಯ ತುಳಸಿ ದಾಸ ವಿರಚಿತ ರಾಮಚರಿತಮಾನಸ ಮೊದಲಾದ ಕೃತಿಗಳು ಬಹಳ ಪ್ರಸಿದ್ಧವಾಗಿವೆ. ಗದ್ಯರೂಪದ ರಾಮಾಯಣಗಳಂತೂ ಸಾವಿರಾರು ಸಂಖ್ಯೆಯಲ್ಲಿ ಬಂದಿವೆ. ವಾಲ್ಮೀಕಿ ರಾಮಾಯಣವನ್ನು ನೆಲೆಯಾಗಿಟ್ಟುಕೊಂಡು ತಮ್ಮ ಸಾಮಾಜಿಕ ಸಂದರ್ಭಗಳಿಗೆ ತಕ್ಕುದಾದ ವ್ಯತ್ಯಾಸಗಳನ್ನು ಮಾಡಿಕೊಂಡು ಭಿನ್ನ ದೃಷ್ಟಿಕೋನಗಳಿಂದ ಭಿನ್ನ ಛಂದಸ್ಸುಗಳಲ್ಲಿ ಬರೆದ ಮಹಾಕಾವ್ಯಗಳು ಅವು. ಇತ್ತೀಚೆಗೆ ಲೇಖಕಿ ಇಂದಿರಾ ಜಾನಕಿಯವರು (ದೇರಾಜೆ ಸೀತಾರಾಮಯ್ಯನವರ ಮಗಳು) ವಾಲ್ಮೀಕಿ ರಾಮಾಯಣದ ಮೂಲ ಕಥೆಯಿಂದ ಭಿನ್ನವಲ್ಲದ ರೀತಿಯಲ್ಲಿ ‘ರಾಮ ಸಾಂಗತ್ಯ’ ಎಂಬ ಮಹಾಕಾವ್ಯವನ್ನು ರಚಿಸಿ ರಾಮಾಯಣ…

Read More

ಮೂಡುಬಿದಿರೆ : ಆಧ್ಯ ಶ್ರೀ ಚಾರುಕೀರ್ತಿ ಯಕ್ಷಗಾನ ಕಲಾಬಳಗದ 2024ರ ಸರಣಿ ತಾಳಮದ್ದಲೆ ಕಾರ್ಯಕ್ರಮವು ದಿನಾಂಕ 10-06-2024ರ ಸೋಮವಾರದಂದು ಮೂಡಬಿದಿರೆಯ ಜೈನಮಠದ ಭಟ್ಟಾರಕ ಭವನದಲ್ಲಿ ಪ್ರಾರಂಭಗೊಂಡಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದ ಮೂಡುಬಿದಿರೆ ಶ್ರೀ ಜೈನಮಠದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾ ಚಾರ್ಯವರ್ಯ ಸ್ವಾಮೀಜಿ “ತಾಳಮದ್ದಲೆಯಲ್ಲಿ ರಾಮಾಯಣ, ಮಹಾಭಾರತ, ಜೈನ ಪುರಾಣಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಯಕ್ಷಗಾನದ ಹಿಮ್ಮೇಳ, ಮುಮ್ಮೇಳ ಕಲಾವಿದರು ಸಂಪದ್ಭರಿತ ಮನಸ್ಸು ಕಟ್ಟುವವರು.” ಎಂದು ನುಡಿದರು. ಇದೇ ಸಂದರ್ಭದಲ್ಲಿ ತಾಳಮದ್ದಲೆಯ ಪ್ರಾಯೋಜಕರಾದ ಭುಜಬಲಿ ಧರ್ಮಸ್ಥಳ ಹಾಗೂ ಯಕ್ಷ ಗಾನ ಪೋಷಕ ಶೈಲೇಂದ್ರ ಕುಮಾ‌ರ್ ಇವರನ್ನು ಸ್ವಾಮೀಜಿ ಗೌರವಿಸಿದರು. ಕಾರ್ಯಕ್ರಮದಲ್ಲಿ ಬಸದಿಗಳ ಮೊತ್ತೇಸರ ಪಟ್ಟಶೆಟ್ಟಿ ಸುಧೇಶ್ ಕುಮಾರ್, ಮೂಡುಬಿದಿರೆ ಸರ್ವೀಸ್ ಕೋ- ಆಪರೇಟಿವ್‌ನ ಅಧ್ಯಕ್ಷ ಎಂ. ಬಾಹುಬಲಿ ಪ್ರಸಾದ್, ಕಾರ್ಯಕ್ರಮದ ಸಂಯೋಜಕ ಶಾಂತರಾಮ ಕುಡ್ವ, ಮಠದ ವ್ಯವಸ್ಥಾಪಕ ಸಂಜಯಂತ್ ಕುಮಾರ್, ಕೃಷ್ಣಯ್ಯ ಮತ್ತಿತರರು ಉಪಸ್ಥಿತರಿದ್ದರು. ಡಾ. ಪ್ರಭಾತ್ ಕುಮಾ‌ರ್ ಬಲ್ನಾಡು ಕಾರ್ಯಕ್ರಮ ನಿರೂಪಿಸಿದರು. ಶಾಂತಾರಾಂ ಕುಡ್ವ ಇವರ ಸಂಯೋಜನೆಯಲ್ಲಿ ಸರಣಿಯ…

Read More

ಸುಳ್ಯ : ಸಂಧ್ಯಾ ರಶ್ಮಿ ಸಾಹಿತ್ಯ ಸಂಘ ಸುಳ್ಯ ಮತ್ತು ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ಹೋಬಳಿ ಘಟಕ ಇವರ ಜಂಟಿ ಆಶ್ರಯದಲ್ಲಿ ಸಾಹಿತಿ ಶ್ರೀ ಸುಬ್ರಾಯ ಚೊಕ್ಕಾಡಿಯವರ ಬಗ್ಗೆ ‘ಸಾಹಿತ್ಯ ಸಂವಾದ ಮಾಲಿಕೆ’ ಕಾರ್ಯಕ್ರಮವು ದಿನಾಂಕ 17-06-2024ರಂದು ಪೂರ್ವಾಹ್ನ 10-30 ಗಂಟೆಗೆ ಕುರಂಜಿಬಾಗ್ ಸಂಧ್ಯಾ ರಶ್ಮಿ ಸಭಾಂಗಣದಲ್ಲಿ ನಡೆಯಲಿದೆ. ಸಂಧ್ಯಾ ರಶ್ಮಿ ಸಾಹಿತ್ಯ ಸಂಘ ಇದರ ಅಧ್ಯಕ್ಷರಾದ ಶ್ರೀಮತಿ ಲೀಲಾ ದಾಮೋದರ ಅಧ್ಯಕ್ಷತೆ ವಹಿಸಲಿದ್ದು, ಸುಳ್ಯದ ಎನ್.ಎಂ.ಪಿ.ಯ ನಿವೃತ್ತ ಪ್ರಾಚಾರ್ಯರಾದ ಡಾ. ಪ್ರಭಾಕರ ಶಿಶಿಲ ವ್ಯಕ್ತಿತ್ವ ಪರಿಚಯ, ಸುಳ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಹಿರಿಯ ಪದವೀಧರ ಸಹ ಶಿಕ್ಷಕಿ ಶ್ರೀಮತಿ ಚಂದ್ರಮತಿ ಕೆ. ಸಾಹಿತ್ಯ ಪರಿಚಯ ಮತ್ತು ಶ್ರೀ ಕೆ.ಆರ್. ಗೋಪಾಲಕೃಷ್ಣ, ಶ್ರೀಮತಿ ಗಿರಿಜಾ ಎಂ.ವಿ. ಶ್ರೀಮತಿ ಸತ್ಯವತಿ ಎಸ್. ಇವರು ಗೀತ ಗಾಯನ ನಡೆಸಿಕೊಡಲಿದ್ದಾರೆ.

Read More

ಬೆಂಗಳೂರು : ಕರ್ನಾಟಕ ಲೇಖಕಿಯರ ಸಂಘದ 2023ನೇ ಸಾಲಿನ ವಿವಿಧ ದತ್ತಿನಿಧಿ ಪ್ರಶಸ್ತಿಗಳನ್ನು ಪ್ರಕಟ ಮಾಡಿದ್ದು, ವಿವಿಧ ಕೃತಿಗಳಿಗೆ ಹಾಗೂ ಇಬ್ಬರಿಗೆ ಸಮಗ್ರ ಸಾಧನೆಗಾಗಿ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ. ಈ ಪುಸ್ತಕ ಬಹುಮಾನಗಳಿಗೆ ನಾಡಿನ ವಿವಿಧ ಲೇಖಕಿಯರ ಕೃತಿಗಳು ಆಯ್ಕೆಯಾಗಿದ್ದು ಅವುಗಳ ವಿವರ ಈ ಕೆಳಗಿನಂತಿವೆ. ದತ್ತಿನಿಧಿಗೆ ಆಯ್ಕೆ ಯಾಗಿರುವ ಲೇಖಕಿಯರ ಕೃತಿಗಳು : 1. ಕಾಕೋಳು ಸರೋಜಮ್ಮ ಕಾದಂಬರಿ ಪ್ರಶಸ್ತಿ – ಡಾ. ಚಂದ್ರಮತಿ ಸೋಂದಾ – ‘ದುಪಡಿ’ 2. ಭಾಗ್ಯ ನಂಜಪ್ಪ ವಿಜ್ಞಾನ ಸಾಹಿತ್ಯ ಪ್ರಶಸ್ತಿ – ಡಾ. ಬಿ. ರೇವತಿ ನಂದನ್ – ‘ತೋಟದ ಲೋಕದ ಪಾಠಗಳು’ 3. ನಾಗರತ್ನ ಚಂದ್ರಶೇಖರ್ (ಲಲಿತ ಪ್ರಬಂಧ) – ಸರಸ್ವತಿ ಭೋಸಲೆ – ‘ಕಾಡತಾವ ನೆನಪ’ 4. ಜಿ.ವಿ. ನಿರ್ಮಲ (ಭಾರತದ ಯಾವುದೇ ಭಾಷೆಯ ಅನುವಾದಿತ ಕಾದಂಬರಿ, ಕಥಾ ಸಂಕಲನ, ಜೀವನ ಚರಿತ್ರೆ) – ವಿಜಯಾ ಶಂಕರ – ‘ತಲ್ಲಣಗಳ ನಡುವೆ’ 5. ತ್ರಿವೇಣಿ ಸಾಹಿತ್ಯ ಪುರಸ್ಕಾರ – ಮಾಧವಿ ಭಂಡಾರಿ…

Read More

ಮಂಗಳೂರು : ಗೌರವಾನ್ವಿತ, ನಾಟ್ಯ ಕಲಾ ತಪಸ್ವಿ ನಾಟ್ಯಾಚಾರ್ಯ ಗುರು ಶ್ರೀ ಉಳ್ಳಾಲ ಮೋಹನ್ ಕುಮಾರ್ ಇವರು 90ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಭರತಾಂಜಲಿ ಪ್ರಸ್ತುತ ಪಡಿಸುವ ‘ಪುರುಷ ನಾಟ್ಯ ವಿಲಾಸ’ ಏಕವ್ಯಕ್ತಿ ನೃತ್ಯ ಪ್ರದರ್ಶನವನ್ನು ದಿನಾಂಕ 16-06-2024ರಂದು ಸಂಜೆ ಗಂಟೆ 5-15ಕ್ಕೆ ಡಾನ್ ಬೋಸ್ಕೋ ಹಾಲ್ ನಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮವನ್ನು ಗುರು ಶ್ರೀ ಉಳ್ಳಾಲ ಮೋಹನ್ ಕುಮಾರ್ ಮತ್ತು ಗುರು ವಿದುಷಿ ಕಮಲಾ ಭಟ್ ಇವರು ದೀಪ ಪ್ರಜ್ವಲನೆ ಮಾಡಿ ಉದ್ಘಾಟಿಸಲಿದ್ದು, ಹಾಸನದ ಗುರು ಉನ್ನತ ಎಚ್.ಆರ್. ಇವರ ಶಿಷ್ಯ ಸುಮಂತ್ ಎಸ್., ಬೆಂಗಳೂರಿನ ಗುರು ಪಾರ್ಶ್ವನಾಥ್ ಉಪಾಧ್ಯೆ ಇವರ ಶಿಷ್ಯ ಶೋಭಿತ್ ರಮೇಶ್ ಮತ್ತು ಹುಬ್ಬಳ್ಳಿಯ ವಿದ್ವಾನ್ ಸುಜಯ್ ಶಾನ್ ಬೋಗ್ ಇವರುಗಳು ನೃತ್ಯ ಪ್ರದರ್ಶನ ನೀಡಲಿದ್ದಾರೆ.

Read More

ಉಪ್ಪಳ : ‘ಕಾಸರಗೋಡು ಕನ್ನಡ ಹಬ್ಬ’ದ ಅಂಗವಾಗಿ ರಂಗ ಚಿನ್ನಾರಿ ಕಾಸರಗೋಡು ಇದರ ಸಂಗೀತ ಘಟಕವಾದ ಸ್ವರ ಚಿನ್ನಾರಿ ನೇತೃತ್ವದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇದರ ಸಹಯೋಗದಲ್ಲಿ ತರುಣ ಕಲಾವೃಂದ ಐಲ ಉಪ್ಪಳ ಏರ್ಪಡಿಸಿದ ಸುಮಧುರ ಗೀತೆಗಳ ಗಾಯನ ಕಾರ್ಯಕ್ರಮವಾದ ‘ಕನ್ನಡ ಉಸಿರು’ ಕಾರ್ಯಕ್ರಮವು ದಿನಾಂಕ 25-05-2024ರಂದು ಐಲ ಶ್ರೀ ದುರ್ಗಾಪರಮೇಶ್ವರಿ ಕಲಾ ಭವನದಲ್ಲಿ ಜರಗಿತು. ಸಮಾರಂಭವನ್ನು ಉದ್ಘಾಟಿಸಿದ ನಟ ಹಾಗೂ ಸಾಹಿತಿಯಾದ ಶಶಿರಾಜ್ ರಾವ್ ಕಾವೂರು ಮಾತನಾಡಿ “ಕಲಾಪ್ರೇಮಿಗಳಿಗೆ ಸ್ವರ ಚಿನ್ನಾರಿಯು ರಸ ನಿಮಿಷಗಳನ್ನು ನೀಡಿದೆ.” ಎಂದು ತಿಳಿಸಿದರು. ಐಲ ಕ್ಷೇತ್ರದ ಆಡಳಿತ ಮೊಕೇಸರ ಕೋಡಿಬೈಲು ನಾರಾಯಣ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಕನ್ನಡ ಉಸಿರು ಸಂಚಾಲಕ ಹಾಗೂ ರಂಗ ಚಿನ್ನಾರಿ ನಿರ್ದೇಶಕ ಕಾಸರಗೋಡು ಚಿನ್ನಾ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿ “ಕಾಸರಗೋಡಿನ ಕಲಾಪ್ರತಿಭೆಗಳಿಗೆ ಒಂದು ವೇದಿಕೆಯನ್ನು ನೀಡುವುದು, ಆ ಮೂಲಕ ಅವರ ಪ್ರತಿಭೆಯನ್ನು ಪ್ರಕಾಶಿಸಲು ಅವಕಾಶ ಕೊಡುವುದು ಸ್ವರ ಚಿನ್ನಾರಿಯ ಉದ್ದೇಶವಾಗಿದೆ.” ಎಂದು ತಿಳಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ…

Read More

ಅಂಕೋಲಾ : ಕರ್ನಾಟಕ ಸಂಘ (ರಿ.) ಅಂಕೋಲಾ ಮತ್ತು ದೀನಬಂಧು ಸ.ಪ. ಗಾಂವಕರ ದತ್ತಿನಿಧಿ ಸಮಿತಿ ಅಂಕೋಲಾ ಇದರ ವತಿಯಿಂದ ‘ದತ್ತಿನಿಧಿ ಉದ್ಘಾಟನೆ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ’ವು ದಿನಾಂಕ 16-06-2024ರಂದು ಬೆಳಗ್ಗೆ ಗಂಟೆ 10-30ಕ್ಕೆ ಅಂಕೋಲಾದ ನಾಡವರ ಸಮುದಾಯ ಭವನದಲ್ಲಿ ನಡೆಯಲಿದೆ. ಬೆಂಗಳೂರು ವಿಧಾನ ಪರಿಷತ್ತಿನ ಮಾನ್ಯ ಸಭಾಪತಿಗಳಾದ ಸನ್ಮಾನ್ಯ ಶ್ರೀ ಬಸವರಾಜ ಹೊರಟ್ಟಿ ಇವರು ಸಮಾರಂಭವನ್ನು ಉದ್ಘಾಟಿಸಲಿದ್ದು, ದೀನಬಂಧು ಸ.ಪ. ಗಾಂವಕರ ದತ್ತಿನಿಧಿ ಸಮಿತಿ ಗೌರವಾಧ್ಯಕ್ಷರಾದ ಶ್ರೀ ಶಾಂತಾರಾಮ ನಾಯಕ ಇವರು ಅಧ್ಯಕ್ಷತೆ ವಹಿಸಲಿರುವರು. ಖ್ಯಾತ ನ್ಯಾಯವಾದಿಗಳಾದ ಶ್ರೀ ಪ್ರದೀಪ ಕೃಷ್ಣದೇವ ಗಾಂವಕರ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಹೊನ್ನಾವರದ ಜಾನಪದ ವಿದ್ವಾಂಸರು ಮತ್ತು ಹಿರಿಯ ಸಾಹಿತಿಗಳಾದ ಡಾ. ಎನ್.ಆರ್. ನಾಯಕ ಇವರಿಗೆ ‘ದೀನಬಂಧು ಸ.ಪ. ಗಾಂವಕರ ದತ್ತಿನಿಧಿ ಪ್ರಶಸ್ತಿ’ ಪ್ರದಾನ ಮಾಡಲಾಗುವುದು. ಜನಪದ ಕಣಜ ಡಾ. ಎನ್.ಆರ್. ನಾಯಕ ಅಂಕೋಲಾ ತಾಲೂಕಿನ ಭಾವಿಕೇರಿಯಲ್ಲಿ ಜನಿಸಿದ ಡಾ. ಎನ್.ಆರ್. ನಾಯಕ ಇವರು ಹೊನ್ನಾವರದ ಎಸ್‌.ಡಿ.ಎಂ. ಕಾಲೇಜಿನಲ್ಲಿ…

Read More