Author: roovari

ಕೊಪ್ಪಳ : ಕನ್ನಡ ಸಾಹಿತ್ಯ ಸಂಸ್ಕೃತಿ ಅಭಿವೃದ್ಧಿ ಟ್ರಸ್ಟ್ (ರಿ.) ಕುಕನೂರು ಕೊಪ್ಪಳ ಜಿಲ್ಲೆ ಇದರ ವತಿಯಿಂದ ‘ಪುಸ್ತಕ-ಪತ್ರಿಕೆ ಸಂಸ್ಕೃತಿ ಅಭಿಯಾನ ಹಾಗೂ 8ನೆಯ ಮಕ್ಕಳ ಸಾಂಸ್ಕೃತಿಕ ಪ್ರತಿಭೋತ್ಸವ’ವು ದಿನಾಂಕ 6 ಆಗಸ್ಟ್ 2024ರಂದು ಮಧ್ಯಾಹ್ನ 2-00 ಗಂಟೆಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಟಗಿ ಇಲ್ಲಿ ನಡೆಯಲಿದೆ. ಎಸ್.ಡಿ.ಎಂ.ಸಿ. ಇಟಗಿ ಇದರ ಅಧ್ಯಕ್ಷರಾದ ಶ್ರೀ ಲಿಂಗರಾಜ್ ಹೊಸಭಾವಿ ಇವರು ಅಧ್ಯಕ್ಷತೆ ವಹಿಸಲಿದ್ದು, ಆರ್.ಡಿ.ಟಿ.ಇ. ಸೊಸೈಟಿ ಇಟಗಿ ಇದರ ಆಡಳಿತಾಧಿಕಾರಿಯಾದ ಶ್ರೀ ನವೀನ ಕುಮಾರ್ ಗುಳಗಣ್ಣವರ್ ಇವರು ಉದ್ಘಾಟನೆ ಮಾಡಲಿರುವರು. ಹಿರಿಯ ಪತ್ರಕರ್ತರು ಹಾಗೂ ಚಲನಚಿತ್ರ ನಿರ್ದೇಶಕರಾದ ಶ್ರೀಯುತ ರಮೇಶ್ ಸುರ್ವೆ ಇವರು ‘ವಿದ್ಯಾರ್ಥಿಗಳ ಗುರಿ ಸಾಧನೆಗೆ ಪತ್ರಿಕೆ – ಪುಸ್ತಕ ಸಂಸ್ಕೃತಿ ಮಹತ್ವ’ ಎಂಬ ವಿಷಯದ ಬಗ್ಗೆ ಉಪನ್ಯಾಸ ನೀಡಲಿದ್ದಾರೆ. ಇದೇ ಸಂದರ್ಭದಲ್ಲಿ ಶ್ರೀ ಮೇಘರಾಜ ಎಸ್. ಜಿಡಗಿ ಹಾಗೂ ಸ್ಥಳೀಯ ವಿವಿಧ ಶಾಲಾ ಮಕ್ಕಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

Read More

ಸುರತ್ಕಲ್: ಉಡುಪಿ, ಕಾಸರಗೋಡು, ದ. ಕ. ಜಿಲ್ಲಾ ಮಟ್ಟದ ಮಕ್ಕಳ ಸಾಹಿತ್ಯ ಸಂಗಮದ ವತಿಯಿಂದ ಈ ಸಾಲಿನ ಮಕ್ಕಳ ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಹಬ್ಬವಾದ ‘ಮಕ್ಕಳ ಧ್ವನಿ’ ಕಾರ್ಯಕ್ರಮವು ಸೆಪ್ಟೆಂಬರ್ 2ನೇ ವಾರದಲ್ಲಿ ಸುರತ್ಕಲ್ ವಿದ್ಯಾದಾಯಿನಿ ಪ್ರೌಢಶಾಲೆಯಲ್ಲಿ ನಡೆಯಲಿದೆ. ಇದರ ಅಂಗವಾಗಿ ಕಾರ್ಡ್ ಕಥೆ, ಕವನ ಗೋಷ್ಠಿಯಲ್ಲಿ ಭಾಗವಹಿಸಲು ಪ್ರಾಥಮಿಕದಿಂದ ಪದವಿ ಪೂರ್ವ ಕಾಲೇಜುವರೆಗಿನ ವಿದ್ಯಾರ್ಥಿಗಳಿಗೆ ಅವಕಾಶವಿದೆ. ಆಸಕ್ತ ವಿದ್ಯಾರ್ಥಿಗಳು ಅಂಚೆ ಕಾರ್ಡ್‌ನಲ್ಲಿ ಬರೆದ ಕಥೆ, ಕವನಗಳನ್ನು 20 ಆಗಸ್ಟ್ 2024ರ ಮೊದಲು ರಮೇಶ್ ಭಟ್ ಎಸ್‌. ಜಿ., ಕಾರ್ಯದರ್ಶಿ ಮಕ್ಕಳ ಸಾಹಿತ್ಯ ಸಂಗಮ, ಶ್ರೀನಿಕೇತನ 1-19/1(1) ಎನ್‌. ಎಂ. ಪಿ. ಟಿ. ಕಾಲೊನಿ ಹಿಂಬದಿ ಕಡಂಬೋಡಿ, ಹೊಸಬೆಟ್ಟು ಕುಳಾಯಿ ಅಂಚೆ ಸುರತ್ಕಲ್ ಈ ವಿಳಾಸಕ್ಕೆ ಕಳುಹಿಸಲು ಕೋರಲಾಗಿದೆ.

Read More

ಬಂಟ್ವಾಳ : ದ.ಕ. ಜಿಲ್ಲೆಯ ಹಿರಿಯ ಚುಟುಕುಕವಿ ಮೊಗರ್ನಾಡು ವೇದಮೂರ್ತಿ ಜನಾರ್ದನ ವಾಸುದೇವ ಭಟ್ ಇವರಿಗೆ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ ಹುಬ್ಬಳ್ಳಿ ಕೇಂದ್ರ ಸಮಿತಿ ವತಿಯಿಂದ ಕರ್ನಾಟಕ ಚುಟುಕು ರತ್ನ ಗೌರವ ಪ್ರಶಸ್ತಿಯನ್ನು ರಾಜ್ಯ ಸಂಚಾಲಕ ಕೃಷ್ಣಮೂರ್ತಿ ಕುಲಕರ್ಣಿ ಪ್ರಕಟಿಸಿದ್ದಾರೆ. ಕಾಶಿ ಮಠಾಧೀಶರ ಸ್ವಾಮ್ಯಕ್ಕೆ ಒಳಪಟ್ಟ ಮಂಗಳೂರಿನ ಶ್ರೀನಿವಾಸ ನಿಗಮಾಗಮ ಪಾಠಶಾಲೆಯಲ್ಲಿ ವೇದಾಧ್ಯಯನ, ಆಗಮಪಾಠ, ಜ್ಯೋತಿಷ್ಯ ಶಿಕ್ಷಣದ ಬಳಿಕ ಶಿಕ್ಷಣ ಪಡೆದ ಶಿಕ್ಷಣ ಸಂಸ್ಥೆಯಲ್ಲಿಯೇ ಉಪಾಧ್ಯಾಯರಾಗಿ ಸೇವೆ ಸಲ್ಲಿಸಿದ್ದರು. ಚುಟುಕು ಕವಿಯಾಗಿ ಸಾವಿರಾರು ಚುಟುಕು ರಚನೆ ಮಾಡಿದ್ದು, ಕಂಠಪಾಠವಾಗಿ ಹೇಳುವ ಮೂಲಕ ಕುಶಾಗ್ರಮತಿ ಚುಟುಕು ಸಾಹಿತಿಯಾಗಿ ಗುರುತಿಸಲ್ಪಟ್ಟಿದ್ದಾರೆ. ದೆಹಲಿ ಕರ್ನಾಟಕ ಸಂಘದಿಂದ ಏರ್ಪಡಿಸಲಾದ‌ ದೆಹಲಿಯಲ್ಲಿ ರಾಷ್ಟ್ರಮಟ್ಟದ ಚುಟುಕು ಸಮ್ಮೇಳನದ ಅಧ್ಯಕ್ಷರಾಗಿದ್ದರು. ಉಡುಪಿ ಕೃಷ್ಣಮಠದ ರಾಜಾಂಗಣದಲ್ಲಿ ನಡೆದ ಸಾಹಿತ್ಯ ಸಮ್ಮೇಳನದಲ್ಲಿ ಪೇಜಾವರ ಮಠದ ಉಭಯ ಶ್ರೀಗಳಿಂದ ಸೌರಭ ರತ್ನ ಪ್ರಶಸ್ತಿ ಪುರಸ್ಕಾರ ನೀಡಿ ಗೌರವಿಸಲಾಗಿತ್ತು. ಪಾಣೆಮಂಗಳೂರು ಶಾರದಾ ಪ್ರೌಢ ಶಾಲೆಯ ಸ್ಥಾಪನಾ ವರ್ಷದ ವಿದ್ಯಾರ್ಥಿಯಾಗಿದ್ದು 2015ರಿಂದ‌ ಶಾಲಾ‌ ಸಂಚಾಲಕರಾಗಿ ಸೇವೆ ಸಲ್ಲಿಸಿದ್ದಾರೆ.…

Read More

ತೆಕ್ಕಟ್ಟೆ : ಯಶಸ್ವೀ ಕಲಾವೃಂದ (ರಿ.) ಕೊಮೆಯ 25ರ ಸಂಭ್ರಮದ ಯಾನದಲ್ಲಿ ಸಿನ್ಸ್ 1999 ಶ್ವೇತ ಯಾನ- 49ರಲ್ಲಿ ‘ಯಕ್ಷ-ಗಾನ-ವೈಭವ’ ಕಾರ್ಯಕ್ರಮವನ್ನು ದಿನಾಂಕ 7 ಆಗಸ್ಟ್ 2024ರಂದು ಸಂಜೆ 6-00 ಗಂಟೆಗೆ ಗೋಪಾಡಿಯ ಶಿಶು ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಪ್ರಸಾದ್ ಕುಮಾರ್ ಮೊಗೆಬೆಟ್ಟು, ಲಂಬೋದರ ಹೆಗಡೆ ನಿಟ್ಟೂರು, ಪೂಜಾ ಆಚಾರ್ ತೆಕ್ಕಟ್ಟೆ, ಪಂಚಮಿ ವೈದ್ಯ ತೆಕ್ಕಟ್ಟೆ, ಭರತ್ ಚಂದನ್ ಕೋಟೇಶ್ವರ, ರಾಹುಲ್ ಕುಂದರ್ ಕೋಡಿ ಇವರುಗಳು ಭಾಗವಹಿಸಲಿರುವರು.

Read More

ಮಂಗಳೂರು : ಉತ್ಥಾನ ಮಾಸಪತ್ರಿಕೆಯು ಕಳೆದ ಹಲವು ದಶಕಗಳಿಂದ ರಾಜ್ಯಮಟ್ಟದ ವಾರ್ಷಿಕ ಕಥಾ ಸ್ಪರ್ಧೆಯನ್ನು ಆಯೋಜಿಸುತ್ತಾ ಬಂದಿದ್ದು, ಈ ಬಾರಿಯ 2024ನೇ ಸಾಲಿನ ಉತ್ಥಾನ ವಾರ್ಷಿಕ ಕಥಾ ಸ್ಪರ್ಧೆಗೆ ಕಥೆಯನ್ನು ಆಹ್ವಾನಿಸಲಾಗಿದೆ. ಕಥಾ ಸ್ಪರ್ಧೆಯಲ್ಲಿ ವಿಜೇತರಿಗೆ ಮೊದಲನೇ ಬಹುಮಾನ ರೂ.ಹದಿನೈದು ಸಾವಿರ, 2ನೇ ಬಹುಮಾನ ರೂ.ಹನ್ನೆರಡು ಸಾವಿರ, ಮೂರನೇ ಬಹುಮಾನ ರೂ.ಹತ್ತು ಸಾವಿರ ಮತ್ತು ತಲಾ ರೂ.ಎರಡು ಸಾವಿರ ನಗದು ಬಹುಮಾನವನ್ನು ಐವರಿಗೆ ನೀಡಲಿದ್ದಾರೆ. ಕಥೆ ಬರೆಯುವವರು ಭಾಷಾಂತರವಾಗಲಿ ಅನುಕರಣೆಯಾಗಲಿ ಮಾಡಿರಬಾರದು. ಒಬ್ಬರಿಗೆ ಒಂದು ಕಥೆ ಬರೆಯಲು ಮಾತ್ರ ಅವಕಾಶ. ಬರೆಯುವ ಕಥೆಗಳು ಈವರೆಗೂ ಬೇರೆಲ್ಲೂ ಪ್ರಸಾರವಾಗಿರಬಾರದು ಹಾಗೂ ಕಥೆಯು ಮೂರು ಸಾವಿರ ಪದಗಳ ಮಿತಿಯಲ್ಲಿರಬೇಕು. ಇ-ಮೇಲ್ ಮೂಲಕ ಕಳುಹಿಸುವವರು ಕಥೆಯನ್ನು ನುಡಿ, ಬರಹ ಅಥವಾ ಯೂನಿಕೋಡ್ ತಂತ್ರಾಂಶದಲ್ಲಿ ಸಿದ್ದಪಡಿಸಿ, ಇ-ಮೇಲ್ ವಿಳಾಸ [email protected]ಕ್ಕೆ ಕಳುಹಿಸಬಹುದು ಹಾಗೂ ಕಥೆಗಳು 10 ಆಗಸ್ಟ್ 2024ರೊಳಗಾಗಿ ತಲುಪಲು ಕೊನೆಯ ದಿನಾಂಕವಾಗಿದೆ. ಪೋಸ್ಟ್ ಮೂಲಕ ಕಳುಹಿಸುವವರು ಉತ್ಥಾನ ವಾರ್ಷಿಕ ಕಥಾಸ್ಪರ್ಧೆ- 2024, ಕೇಶವ ಶಿಲ್ಪ, ಕೆಂಪೇಗೌಡ…

Read More

ಬೆಂಗಳೂರು : ರಂಗರಥ ತಂಡ ಪ್ರಸ್ತುತ ಪಡಿಸುವ ‘ಧರ್ಮನಟಿ’ ನಾಟಕ ಪ್ರದರ್ಶನವು ದಿನಾಂಕ 07-08-2024ರಂದು ಸಂಜೆ 7-30ಕ್ಕೆ ಬೆಂಗಳೂರಿನ ಜೆ.ಪಿ. ನಗರದ ರಂಗಶಂಕರದಲ್ಲಿ ಪ್ರಸ್ತುತಗೊಳ್ಳಲಿದೆ. ಇದು ಸಂಗೀತಮಯ ಐತಿಹಾಸಿಕ ಕನ್ನಡ ನಾಟಕವಾಗಿದ್ದು, ಆಸಿಫ್ ಕ್ಷತ್ರಿಯ ಮತ್ತು ಶ್ವೇತಾ ಶ್ರೀನಿವಾಸ್ ಇವರು ನಿರ್ದೇಶನ ಮಾಡಿದ್ದು, ಭಿನ್ನಷಡ್ಜ ಸಂಗೀತದಲ್ಲಿ ಸಹಕರಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 8050157443 (ಶ್ವೇತಾ ಶ್ರೀನಿವಾಸ್) ಅಥವಾ 9448286776 ಆಸಿಫ್ ಕ್ಷತ್ರಿಯ ಇವರನ್ನು ಸಂಪರ್ಕಿಸಿ. ರಂಗರಥ ಸಂಸ್ಥೆಯ ಬಗ್ಗೆ : ಭಾರತೀಯ ಪ್ರದರ್ಶನ ಕಲಾ ಸಂಸ್ಥೆಯಾದ ‘ರಂಗರಥ’ ಎಂಬುದು ರಂಗಪ್ರೇಕ್ಷಕರ ಮನಸೂರೆಗೊಂಡ ಬೆಂಗಳೂರಿನ ಕೆಲವು ರಂಗತಂಡಗಳಲ್ಲಿ ಒಂದು. ಹಲವು ವರ್ಷಗಳ ರಂಗಾನುಭವದ ಆಧಾರದ ಮೇಲೆ ರಂಗರಥದ ಪಯಣ ಸಾಗಿದೆ. ಅನುಭವೀ ರಂಗಕರ್ಮಿಗಳು, ನಾಟಕಕಾರರು, ಸಾಹಿತಿಗಳು, ಸಂಗೀತ ಸಂಯೋಜಕರು ಒಂದಾಗಿ, ರಂಗಪ್ರಯೋಗಗಳಲ್ಲಿ ಹೊಸ ಆಯಾಮ ಮತ್ತು ಸಾಧ್ಯತೆಗಳನ್ನು ಅಳವಡಿಸಿಕೊಂಡು, ಒಳ್ಳೆ ಅಭಿರುಚಿಯ ನಾಟಕ, ಯಕ್ಷಗಾನ, ನೃತ್ಯನಾಟಕಗಳನ್ನು ತಯಾರಿಸಿ ದೇಶಾದ್ಯಂತ ಪ್ರದರ್ಶಿಸುತ್ತಿದೆ. ವಿವಿಧ ತಂತ್ರಜ್ಞರು ಮತ್ತು ಹಲವು ವಿಭಾಗಗಳ ಪರಿಣಿತರ ಸಹಯೋಗದೊಂದಿಗೆ, ಪುರಾಣ, ಇತಿಹಾಸ, ಸಾಹಿತ್ಯ,…

Read More

ಕಿನ್ನಿಗೋಳಿ: ಕಿನ್ನಿಗೋಳಿಯ ಪ್ರತಿಷ್ಠಿತ ಯಕ್ಷ ಲಹರಿ(ರಿ) ಸಂಸ್ಥೆಯ ಮೂವತ್ತನಾಲ್ಕನೇ ವರ್ಷದ ತಾಳಮದ್ದಳೆ ಸಪ್ತಾಹ ‘ಧರ್ಮ ಸಂಸ್ಥಾಪನಾರ್ಥಾಯ ಸಂಭವಾಮಿ ಯುಗೇ ಯುಗೇ’ ಎಂಬ ಸರಣಿಯಲ್ಲಿ ರಜತ ವರ್ಷದ ಸಂಭ್ರಮದಲ್ಲಿರುವ ದ. ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಕ್ಕಳ ಮೇಳವಾದ ಸರಯೂ ಯಕ್ಷವೃಂದ ತಂಡದಿಂದ ‘ವರಾಹ ಅವತಾರ’ ಎಂಬ ಆಖ್ಯಾನದ ತಾಳಮದ್ದಳೆ 31 ಜುಲೈ 2024 ರಂದು ನಡೆಯಿತು. ಈ ಸಂದರ್ಭದಲ್ಲಿ ಸರಯೂ ಸಂಸ್ಥೆಯ ಗೌರವ ಸಂಚಾಲಕರಾದ ಡಾ. ಹರಿಕೃಷ್ಣ ಪುನರೂರು ಉಪಸ್ಥಿತರಿದ್ದರು. ಕಾರ್ಯಕ್ರಮದ ಹಿಮ್ಮೆಳದಲ್ಲಿ ಲಕ್ಷ್ಮೀನಾರಾಯಣ ಹೊಳ್ಳ, ಸ್ಕಂದ ಕೊನ್ನಾರ್, ಮಧುಸೂದನ ಅಲೆವೂರಾಯ ಹಾಗೂ ಗೌರೀಶ್ ರಾವ್ ಹಾಗೂ ಮುಮ್ಮೇಳದಲ್ಲಿ ನಾಗರಾಜ್ ಖಾರ್ವಿ, ಸಂತೋಷ್ ಪಿಂಟೋ, ವಿಜಯಲಕ್ಷೀ ಎಲ್. ನಿಡ್ವಣ್ಣಾಯ, ಅಕ್ಷಯ್ ಸುವರ್ಣ, ನಿಹಾಲ್ ಪೂಜಾರಿ, ಸಂಚಿತ್ ಖಾರ್ವಿ, ದೃಶಾಲ್ ಪೂಜಾರಿ, ನಿತ್ಯ ಶ್ರೀ ಪೂಜಾರಿ, ಕೃತಿ ದೇವಾಡಿಗ ಪಾತ್ರಧಾರಿಗಳಾ ಭಾಗವಹಿಸಿದ್ದರು.

Read More

ಪುತ್ತೂರು : ಸಂಸ್ಕಾರ ಭಾರತೀ ದ.ಕ. ಜಿಲ್ಲೆ, ಪುತ್ತೂರು ತಾಲೂಕು ವಿಭಾಗದ ವತಿಯಿಂದ ದಿನಾಂಕ 29 ಜುಲೈ 2024ರಂದು ಇಡ್ಕಿದು ಗ್ರಾಮದ ಅಳಕೆಮಜಲಿನಲ್ಲಿ ವಾಸಿಸುವ ಹಿರಿಯ ದೈವ ನರ್ತಕ ಶ್ರೀಯುತ ಕರಿಯ ಅಜಿಲ ಕಡ್ಯ ಇವರಿಗೆ ಗುರುಪೂರ್ಣಿಮೆಯ ಅಂಗವಾಗಿ ಅವರ ಸ್ವಗೃಹದಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು. ಹಲವಾರು ವರ್ಷಗಳಿಂದ ತಮ್ಮ ಕಾಯಕವನ್ನು ಶ್ರದ್ಧೆಯಿಂದ ಪಾಲಿಸುತ್ತಾ ಬಂದ ಇವರು; ತಮ್ಮನ್ನು ಗುರುತಿಸಿ, ದಂಪತಿಗೆ ನೀಡಿದ ಅಭಿನಂದನೆಗೆ ಕೃತಜ್ಞತೆಯನ್ನು ಸಲ್ಲಿಸಿ ಮಾತನಾಡುತ್ತಾ “ನಂಬಿದ ದೇವ ದೈವರುಗಳ ದಯೆಯಿಂದ ಅನಕ್ಷರಸ್ಥನಾದ ತನಗೆ ದೈವ ಸೇವೆ ಮಾಡುವ ಭಾಗ್ಯ ಒದಗಿ ಬಂದಿದೆ. ಈ ಮೊದಲೇ ಹಲವಾರು ಪುರಸ್ಕಾರಗಳು ಲಭಿಸಿದ್ದರೂ, ತಮ್ಮ ಮನೆಯಲ್ಲಿಯೇ ಪಡೆದ ಈ ಪುರಸ್ಕಾರವು ಜೀವಮಾನದಲ್ಲಿ ಪ್ರಥಮವಾಗಿದ್ದು, ಅತೀವ ತೃಪ್ತಿ, ಆನಂದವನ್ನು ನೀಡಿದೆ” ಎಂದು ತಮ್ಮ ಸಂತಸವನ್ನು ವ್ಯಕ್ತಪಡಿಸಿದರು. ಸನ್ಮಾನಿತರ ಪತ್ನಿ ಶ್ರೀಮತಿ ಗಂಗು ಹಾಗೂ ಕುಟುಂಬದ ಸದಸ್ಯರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ಸನ್ಮಾನಿತ ದಂಪತಿಗಳು ವಿವಿಧ ರೀತಿಯ ಪಾಡ್ದನಗಳನ್ನು ಹಾಡಿ ತುಳುನಾಡಿನ ವಿಶೇಷ ಪರಂಪರೆಯ ಸೊಬಗನ್ನು…

Read More

ಬೆಂಗಳೂರು : ನಾಡಿನ ಸಾಂಸ್ಕೃತಿಕ ಚಳುವಳಿಯ ಸಂದರ್ಭದಲ್ಲಿ ಪ್ರಮುಖ ಸಂಸ್ಥೆಯಾದ ಹಂಸಜ್ಯೋತಿ ಟ್ರಸ್ಟಿನ 49ನೇ ವರ್ಷಾಚರಣೆ ಪ್ರಯುಕ್ತ ‘ಹಂಸ ಸಾಂಸ್ಕೃತಿಕ ಸೌರಭ’ ಹಾಗೂ ‘ಹಂಸ ಸನ್ಮಾನ ಪ್ರಶಸ್ತಿ’ ಪ್ರದಾನವನ್ನು 31 ಜುಲೈ 2024ರಂದು ಸಂಜೆ ಬೆಂಗಳೂರು ಮಲ್ಲತ್ತಹಳ್ಳಿ ಕಲಾಗ್ರಾಮದ ಸಾಂಸ್ಕೃತಿಕ ಸಮುಚ್ಚಯ ಭವನದಲ್ಲಿ ಆಯೋಜಿಸಲಾಗಿತ್ತು. ಹಿರಿಯ ರಂಗ ಸಂಘಟಕ, ಕರ್ನಾಟಕ ನಾಟಕ ಅಕಾಡೆಮಿ ಮಾಜಿ ಅಧ್ಯಕ್ಷ ಶ್ರೀನಿವಾಸ ಜಿ. ಕಪ್ಪಣ್ಣ ಸಮಾರಂಭ ಉದ್ಘಾಟಿಸಿ ಮಾತನಾಡುತ್ತ ಪಾರಂಪರಿಕ ಶ್ರೀಮಂತಿಕೆಯ ಹಿನ್ನೆಲೆಯ ಸಾಂಸ್ಕೃತಿಕ ಲೋಕದಲ್ಲಿ ನೈತಿಕತೆ ಕಡಿಮೆಯಾಗುತ್ತಿರುವ ಕಾಲಘಟ್ಟದಲ್ಲಿ ಭರವಸೆಯ ಆಶಾಕಿರಣವಾಗಿ ಯಾವುದೇ ಸದ್ದುಗದ್ದಲವಿಲ್ಲದೆ ತನ್ನ ಸಾಮಾಜಿಕ- ಕಲಾತ್ಮಕ ಕೈಂಕರ್ಯದಿಂದ ಹಂಸಜ್ಯೋತಿ ಸುವರ್ಣ ಸಂಭ್ರಮದ ಹೊಸ್ತಿಲಲ್ಲಿ ನಿಂತಿರುವುದು ಒಂದು ಮೈಲಿಗಲ್ಲೇ ಸರಿ. ಸಮಾಜದಲ್ಲಿ ನಿಸ್ವಾರ್ಥವಾಗಿ ಸೇವೆ ಸಲ್ಲಿಸುತ್ತಿರುವ ಸಾಧಕೋತ್ತಮರನ್ನು ಗೌರವಿಸುತ್ತಿರುವುದು ಅಭಿನಂದನೀಯ ಎಂದು ಅಭಿಪ್ರಾಯಪಟ್ಟರು. ಹಂಸ ಜ್ಯೋತಿ ಟ್ರಸ್ಟಿನ ಸಂಸ್ಥಾಪಕ, ವ್ಯವಸ್ಥಾಪಕ ಹಾಗೂ ಟ್ರಸ್ಟಿ ಎಂ. ಮುರುಳೀಧರ ಪ್ರಾಸ್ತಾವಿಕ ನುಡಿಗಳನಾಡುತ್ತಾ “ಕಳೆದ ಐದು ದಶಕದಿಂದ ಕಲಾಪೋಷಕರ ಸಹಕಾರದೊಡನೆ ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೇ ನಿರಂತರವಾಗಿ ನಾಡು-ನುಡಿಯ ಸೇವೆ…

Read More

ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಲು ಹಾಗೂ ಜನ ಸಾಮಾನ್ಯರಿಗೆ ಕನ್ನಡ ಸಾಹಿತ್ಯ ಪರಿಷತ್ತನ್ನು ತಲುಪಿಸಲು ನಾಡೋಜ ಡಾ. ಮಹೇಶ ಜೋಶಿಯವರು ಅಧ್ಯಕ್ಷರಾದ ನಂತರ ಅನೇಕ ವಿಶಿಷ್ಟ ಯೋಜನೆಗಳನ್ನು ಹಮ್ಮಿಕೊಳ್ಳುತ್ತಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತು ಇದವರೆಗೂ ಎರಡು ಸಾವಿರಕ್ಕೂ ಹೆಚ್ಚು ಮಹತ್ವದ ಪ್ರಕಟಣೆಗಳನ್ನು ಪ್ರಕಟಿಸಿದ್ದು, ಅದನ್ನು ಜನ ಸಾಮಾನ್ಯರಿಗೆ ಮುಟ್ಟಿಸುವ ದೃಷ್ಟಿಯಿಂದ ವರ್ಷದಲ್ಲಿ ನಾಲ್ಕು ಸಂದರ್ಭದಲ್ಲಿ ರಿಯಾಯತಿ ದರದಲ್ಲಿ ಪುಸ್ತಕ ಮಾರಾಟ ಮಾಡುವ ಯೋಜನೆಯನ್ನು ರೂಪಿಸಿದ್ದಾರೆ. ಅದರಂತೆ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ ಆಗಸ್ಟ್ ತಿಂಗಳಿಡೀ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಕಟಣೆಗಳ ಮೇಲೆ ಶೇ 10ರಿಂದ ಶೇ 75ರವರೆಗೆ ರಿಯಾಯತಿ ನೀಡಲು ನಿರ್ಧರಿಸಲಾಗಿದೆ. ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪುಸ್ತಕ ಮಾರಾಟ ವಿಭಾಗವು ಶನಿವಾರ, ಭಾನುವಾರಗಳೂ ಸೇರಿದಂತೆ ಬೆಳಿಗ್ಗೆ 10-00 ಗಂಟೆಯಿಂದ ಸಂಜೆ 7-00 ಗಂಟೆಯವರೆಗೂ ತೆರೆದಿರುತ್ತದೆ. ಈ ಸೌಲಭ್ಯದ ಉಪಯೋಗವನ್ನು ಪಡೆದುಕೊಳ್ಳಬೇಕೆಂದು ನಾಡೋಜ ಡಾ. ಮಹೇಶ ಜೋಶಿಯವರು ಸಮಸ್ತ ಕನ್ನಡಿಗರನ್ನೂ ವಿನಂತಿಸಿಕೊಂಡಿದ್ದಾರೆ.

Read More