Subscribe to Updates
Get the latest creative news from FooBar about art, design and business.
Author: roovari
ಧಾರವಾಡ : ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾಡ ಇದರ ವತಿಯಿಂದ ನಾಡೋಜ ಡಾ. ಏಣಗಿ ಬಾಳಪ್ಪ ಸ್ಮರಣಾರ್ಥ ದತ್ತಿ ವಿಶ್ವರಂಗಭೂಮಿ ದಿನಾಚರಣೆ ಪ್ರಯುಕ್ತ ದತ್ತಿ ಉಪನ್ಯಾಸ ಹಾಗೂ ರಂಗ ಗೌರವ ಸಮಾರಂಭವನ್ನು ದಿನಾಂಕ 27 ಮಾರ್ಚ್ 2025ರಂದು ಸಂಜೆ 6-00 ಗಂಟೆಗೆ ಧಾರವಾಡದ ಕ.ವಿ.ವ. ಸಂಘ ಶ್ರೀ ರಾ.ಹ. ದೇಶಪಾಂಡೆ ಸಭಾಭವನದಲ್ಲಿ ಆಯೋಜಿಸಲಾಗಿದೆ. ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘ ಇದರ ಅಧ್ಯಕ್ಷರಾದ ಚಂದ್ರಕಾಂತ ಬೆಲ್ಲದ ಇವರ ಅಧ್ಯಕ್ಷತೆಯಲ್ಲಿ ಧಾರವಾಡ ರಂಗಾಯಣದ ಅಧ್ಯಕ್ಷರಾದ ರಾಜು ತಾಳಿಕೋಟಿ ಇವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಲಕ್ಮೇ ಕಶ್ವರ ಸ್ತ್ರೀ ಸಂಗೀತ ನಾಟಕ ಮಂಡಳಿ ಇದರ ಪರವಾಗಿ ಶ್ರೀಮತಿ ಶಾರದಮ್ಮಾ ಹೊಂಬಳ ಗದಗ ಮತ್ತು ಚಿತ್ತರಗಿ ಶ್ರೀ ಕುಮಾರ ವಿಜಯ ನಾಟ್ಯ ಸಂಘ ಇದರ ಪರವಾಗಿ ಶ್ರೀಮತಿ ವಿಜಯಲಕ್ಷ್ಮಿ ಹಿರೇಮಠ ಬಾಗಲಕೋಟ ಇವರಿಗೆ ರಂಗ ಗೌರವ ನೀಡಲಾಗುವುದು. ಬೆಂಗಳೂರು ವಿಶ್ವವಿದ್ಯಾಲಯ ಸಂಶೋಧನಾ ವಿದ್ಯಾರ್ಥಿ ಮಹ್ಮದಲಿ ಆರ್. ಹೊಸೂರ ಮತ್ತು ಮೈಸೂರು ಪತ್ರಕರ್ತರು ರಂಗ ವಿಮರ್ಶಕರಾದ ಗಣೇಶ ಅಮೀನಗಡ…
ಮಂಜೇಶ್ವರ: ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ಸ್ಮಾರಕ ಸಮಿತಿಯು ಗೋವಿಂದ ಪೈ ಹೆಸರಿನಲ್ಲಿ ನೀಡುವ ಪ್ರಶಸ್ತಿಗೆ ಖ್ಯಾತ ಅನುವಾದಕ ಮತ್ತು ಬರಹಗಾರ ಕೆ. ವಿ. ಕುಮಾರನ್ ಮಾಸ್ತರ್ ಆಯ್ಕೆಯಾಗಿದ್ದಾರೆ. ಸಾಹಿತ್ಯ ಕ್ಷೇತ್ರಕ್ಕೆ ಅವರು ನೀಡಿದ ಸಮಗ್ರ ಕೊಡುಗೆಗಳನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಕುಮಾರನ್ ಮಾಸ್ತರ್ ಅವರಿಗೆ ಕೇಂದ್ರ, ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳು ಇತ್ತೀಚೆಗೆ ಲಭಿಸಿದ್ದವು. 23 ಮಾರ್ಚ್ 2025ರಂದು ಬೆಳಗ್ಗೆ 10 ಗಂಟೆಗೆ ಗಿಳಿವಿಂಡುವಿನಲ್ಲಿ ನಡೆಯುವ ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಇವರು ಪ್ರಶಸ್ತಿ ಪ್ರದಾನ ಮಾಡುವರು. ಈ ಪ್ರಶಸ್ತಿಯು ರೂಪಾಯಿ 5,000 ನಗದು, ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆಗಳನ್ನು ಒಳಗೊಂಡಿದೆ ಎಂದು ಸ್ಮಾರಕ ಸಮಿತಿ ಕಾರ್ಯದರ್ಶಿ ಉಮೇಶ್ ಎಂ .ಸಾಲಿಯಾನ್ ತಿಳಿಸಿದ್ದಾರೆ. ಸಮಾರಂಭವನ್ನು ಮಂಜೇಶ್ವರ ಶಾಸಕ ಎ.ಕೆ.ಎಂ.ಅಶ್ರಫ್ ಉದ್ಘಾಟಿಸಲಿದ್ದು, ಸಮಿತಿಯ ಅಧ್ಯಕ್ಷರಾದ ಜಿಲ್ಲಾಧಿಕಾರಿ ಕೆ.ಇನ್ಬಶೇಖರ್ ಅಧ್ಯಕ್ಷತೆ ವಹಿಸಲಿರುವರು. ಕಾಸರಗೋಡು ಶಾಸಕ ಎನ್.…
ಮಂಗಳೂರು : ಮಂಗಳೂರಿನ ಕಲ್ಕೂರ ಪ್ರತಿಷ್ಠಾನದ ವತಿಯಿಂದ ಇತ್ತೀಚೆಗೆ ನಿಧನ ಹೊಂದಿದ ಹಿರಿಯ ಸಾಹಿತಿ ವಾಮನ ನಂದಾವರ ಇವರಿಗೆ ನುಡಿ ನಮನ ಹಾಗೂ ಸಾರ್ವಜನಿಕ ಶ್ರದ್ಧಾಂಜಲಿ ಕಾರ್ಯಕ್ರಮವು ದಿನಾಂಕ 20 ಮಾರ್ಚ್ 2025 ರಂದು ಕಲ್ಕೂರ ಪ್ರತಿಷ್ಠಾನದ ಕಛೇರಿಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ವಾಮನ ನಂದಾವರ ಇವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಹಾಗೂ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಇದರ ನಿಕಟಪೂರ್ವ ಅಧ್ಯಕ್ಷರಾದ ಎಸ್. ಪ್ರದೀಪ ಕುಮಾರ ಕಲ್ಕೂರ ಮಾತನಾಡಿ “ತುಳು ಜನಪದ ಸಾಹಿತ್ಯದಲ್ಲಿ ಹಾಗೂ ಕನ್ನಡ ಸಾಹಿತ್ಯದಲ್ಲಿ ದಿ. ವಾಮನ ನಂದಾವರ ಅವರ ಕೊಡುಗೆ ಅನನ್ಯವಾದುದು, ತುಳುವರ ರಸಿಕತೆ, ಅರ್ಥವತ್ತಾದ ತುಳು ಗಾದೆ, ತುಳುವಿನ ಸಮಗ್ರ ಸಂಸ್ಕೃತಿಯ ಬಗ್ಗೆ ಅಪಾರ ಜ್ಞಾನವನ್ನು ಹೊಂದಿದ್ದ ನಂದಾವರರು ಹೇಮಾಂಶು ಪ್ರಕಾಶನದ ಮೂಲಕ ತಾವು ಹಾಗೂ ತುಳು ಭಾಷಾ ವಿದ್ವಾಂಸರಿಂದ ಪ್ರಕಟಿಸಿದ ತುಳು ಸಾಹಿತ್ಯ ಕೃತಿಗಳ ಮೂಲಕ ತುಳು ಭಾಷೆಯನ್ನು ಬಹು ಎತ್ತರಕ್ಕೆ ಬೆಳೆಸಿದ್ದಾರೆ ಎಂದರೆ ತಪ್ಪಾಗಲಾರದು. ಪತ್ನಿ ಚಂದ್ರಕಲಾ…
ಮಂಡ್ಯ: ಕೆ.ಎಸ್. ನರಸಿಂಹಸ್ವಾಮಿ ಟ್ರಸ್ಟ್ ನೀಡುವ 5ನೇ ವರ್ಷದ ‘ಕೆ.ಎಸ್. ನ ಸಾಹಿತ್ಯ ಪ್ರಶಸ್ತಿ’ಗೆ ಮಂಡ್ಯದ ಕರ್ನಾಟಕ ಸಂಘದ ಅಧ್ಯಕ್ಷರಾದ ಪ್ರೊ. ಜಯಪ್ರಕಾಶ ಗೌಡ, ದಕ್ಷಿಣ ಕನ್ನಡ ಜಿಲ್ಲೆಯ ಲೇಖಕ ನಾ. ದಾಮೋದರ ಶೆಟ್ಟಿ ಭಾಜನ ರಾಗಿದ್ದಾರೆ. ‘ಕೆ. ಎಸ್. ನ ಕಾವ್ಯ ಗಾಯನ ಪ್ರಶಸ್ತಿ’ಗೆ ಗಾಯಕರಾದ ಧಾರವಾಡದ ಸಂಗೀತಾ ಕಟ್ಟಿ ಮತ್ತು ಕಾಸರಗೋಡಿನ ರಮೇಶ್ ಚಂದ್ರ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು ತಲಾ ರೂಪಾಯಿ 25 ಸಾವಿರ ನಗದು ಮತ್ತು ಫಲಕವನ್ನು ಒಳಗೊಂಡಿದೆ. ಮಂಡ್ಯದ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ 23 ಮಾರ್ಚ್ 2025ರಂದು ಬೆಳಿಗ್ಗೆ 10.30ಕ್ಕೆ ನಡೆಯಲಿರುವ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು. ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದು ಟ್ರಸ್ಟ್ ಅಧ್ಯಕ್ಷರಾದ ಕಿಕ್ಕೇರಿ ಕೃಷ್ಣಮೂರ್ತಿ ಮಾಹಿತಿ ನೀಡಿದ್ದಾರೆ. ಪ್ರೊ. ಜಯಪ್ರಕಾಶ ಗೌಡ ನಾ. ದಾಮೋದರ ಶೆಟ್ಟಿ ಸಂಗೀತಾ ಕಟ್ಟಿ ರಮೇಶ್ ಚಂದ್ರ
ಉಡುಪಿ : ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಹಾಗೂ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಉಡುಪಿ ಇದರ ವತಿಯಿಂದ ವಿಶ್ವ ರಂಗಭೂಮಿ ದಿನಾಚರಣೆ ಪ್ರಯುಕ್ತ ‘ಮಲಬಾರ್ ವಿಶ್ವರಂಗ ಪುರಸ್ಕಾರ 2025’ ಕಾರ್ಯಕ್ರಮವನ್ನು ದಿನಾಂಕ 26 ಮಾರ್ಚ್ 2025ರಂದು ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಇದರ ಉಡುಪಿ ಶಾಖೆಯಲ್ಲಿ ಹಮ್ಮಿಕೊಳ್ಳಲಾಗಿದೆ. ರಂಗ ನಟ, ಸಂಘಟಕ ಹಾಗೂ ನಿರ್ದೇಶಕ ಅರವಿಂದ ಕುಲಕರ್ಣಿ ಧಾರವಾಡ, ರಂಗ ಸಂಘಟಕ ಹಾಗೂ ನಿರ್ದೇಶಕ ಗಣೇಶ್ ಕಾರಂತ್ ಬೈಂದೂರು, ರಂಗನಟಿ ಹಾಗೂ ಕಂಠದಾನ ಕಲಾವಿದೆ ಪ್ರಿಯಾಸರೋಜಾದೇವಿ ಮುಂಬೈ, ರಂಗನಟ ಹಾಗೂ ಸಂಘಟಕ ಪ್ರಕಾಶ್ ಜಿ. ಕೊಡವೂರು, ರಂಗನಟಿ ವಿದುಷಿ ಮಂಜುಳಾ ಜನಾರ್ದನ್ ಮಂಗಳೂರು ಇವರುಗಳಿಗೆ ಗೌರವ ಪುರಸ್ಕಾರ ಪ್ರದಾನ ಮಾಡಲಾಗುವುದು. ಸಭಾ ಕಾರ್ಯಕ್ರಮದ ಬಳಿಕ ಕುಮಾರಿ ಸ್ವಸ್ತಿಶ್ರೀಯವರಿಂದ ಭರತನಾಟ್ಯ ಕಾರ್ಯಕ್ರಮ ನಡೆಯಲಿದೆ.
ಬೆಂಗಳೂರು : ಸಂಸ್ಕಾರ ಭಾರತೀ ಕರ್ನಾಟಕ (ನೋಂ) ಕಲೆ ಮತ್ತು ಸಾಹಿತ್ಯಕ್ಕೆ ಸಮರ್ಪಿತವಾದ ರಾಷ್ಟ್ರೀಯ ಸಂಸ್ಥೆ, ಕರ್ನಾಟಕ ದಕ್ಷಿಣ ಪ್ರಾಂತ ಸಾಹಿತ್ಯ ವಿಭಾಗ ಸಹಯೋಗದಲ್ಲಿ ಇಂದಿರಾಗಾಂಧಿ ರಾಷ್ಟ್ರೀಯ ಕಲಾ ಕೇಂದ್ರ ಬೆಂಗಳೂರು ಅರ್ಪಿಸುವ ಲೋಕಮಾತೆ ಅಹಲ್ಯಾದೇವಿ ಹೋಳ್ಕರ್ ಜೀವನ ಮತ್ತು ಸಾಧನೆ ಕುರಿತು ಉಪನ್ಯಾಸವನ್ನು ದಿನಾಂಕ 22 ಮಾರ್ಚ್ 2025ರಂದು ಮಧ್ಯಾಹ್ನ 3-30 ಗಂಟೆಗೆ ಬೆಂಗಳೂರಿನ ಇಂದಿರಾಗಾಂಧಿ ರಾಷ್ಟ್ರೀಯ ಕಲಾ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ. ಇಂದಿರಾಗಾಂಧಿ ರಾಷ್ಟ್ರೀಯ ಕಲಾ ಕೇಂದ್ರದ ನಿರ್ದೇಶಕರಾದ ಮಹೇಂದ್ರ ಡಿ. ಇವರು ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಅಖಿಲ ಭಾರತ ಕಾರ್ಯದರ್ಶಿ ಅಶುತೋಷ್ ಆದೋನಿ ಇವರು ಉಪನ್ಯಾಸ ನೀಡಲಿದ್ದಾರೆ.
ಬೆಂಗಳೂರು : ರಂಗಮಂಡಲ ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆ ಕವಿ ಬಳಗ ಆಯೋಜಿಸಿರುವ ‘ಕಾವ್ಯ ಸಂಸ್ಕೃತಿ ಯಾನ’ ಮನುಕುಲದ ನೋವಿಗೆ ಮದ್ದಾಗಲಿ ಕವಿತೆಗಳು ಜನಸಾಮಾನ್ಯರ ದನಿಯಾಗಲಿ ಕಾವ್ಯ ಈ ಕಾರ್ಯಕ್ರಮದ ಒಂಭತ್ತನೇ ಕವಿಗೋಷ್ಠಿಯನ್ನು ದಿನಾಂಕ 23 ಮಾರ್ಚ್ 2025ರಂದು ಬೆಳಿಗ್ಗೆ 10-30 ಗಂಟೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕು, ಒಳ ಆವರಣ ವಿಜಯ ನಗರ ಪ್ರೌಢ ಶಾಲಾ ವಿಭಾಗ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ. ಡಾ. ಎಲ್. ಹನುಮಂತಯ್ಯ ಇವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕಾವ್ಯ ಸಂಸ್ಕೃತಿ ಯಾನದ ಸರ್ವಾಧ್ಯಕ್ಷರಾಗಿದ್ದು, ಹಿರಿಯ ಕವಯತ್ರಿ ಹಾಗೂ ಬರಹಗಾರರಾದ ಸ್ಮಿತಾ ಅಮೃತರಾಜ್ ಇವರು ಈ ಕಾರ್ಯಕ್ರಮವನ್ನು ಉದ್ಘಾಟಿಸಲಿರುವರು. ಬೆಳಿಗ್ಗೆ 12-00 ಗಂಟೆಗೆ ಕವಿಗೋಷ್ಠಿ – 01 ಚಂದ್ರಶೇಖರ ಬಾ ಹಡಪದ ಹಾಗೂ ಮಧ್ಯಾಹ್ನ ಗಂಟೆ 2-30ಕ್ಕೆ ಕವಿಗೋಷ್ಠಿ – 02 ಡಾ. ಬಾಲಗುರುಮೂರ್ತಿ ಇವರುಗಳ ಅಧ್ಯಕ್ಷತೆಯಲ್ಲಿ ಪ್ರಸ್ತುತಗೊಳ್ಳಲಿದೆ. ಮಧ್ಯಾಹ್ನ ಗಂಟೆ 1-45ಕ್ಕೆ ಸರ್ವಾಧ್ಯಕ್ಷರೊಂದಿಗೆ ಸಂವಾದ ನಡೆಯಲಿದ್ದು, ಕುಂಟನಕುಂಟೆ ಅಶ್ವಥ್ ನಾರಾಯಣ,…
ಕಾರ್ಕಳ : ಎರಡುವರೆ ದಶಕ ಕಾಂತಾವರ, ಪುತ್ತೂರು, ಬಪ್ಪನಾಡು, ಸುಂಕದಕಟ್ಟೆ, ಸುರತ್ಕಲ್ ಮೇಳಗಳಲ್ಲಿ ಹಾಗೂ ದೀರ್ಘಕಾಲ ಹಲವು ಸಂಘಗಳಲ್ಲಿ ಕಲಾ ಸೇವೆಗೖದ ತೆಂಕುತಿಟ್ಟಿನ ಹಿರಿಯ ಭಾಗವತ ಕೆ. ಸುರೇಂದ್ರ ಶೆಣೈ ದಂಪತಿಗಳನ್ನು ಪುರಸ್ಕರಿಸುವ ಒಂದು ಆತ್ಮೀಯ ಕಾರ್ಯಕ್ರಮ ಕೆರ್ವಾಶೆ ಮಹಾಲಿಂಗೇಶ್ವರ ದೇವಳದ ಆವರಣದಲ್ಲಿ ದಿನಾಂಕ 19 ಮಾರ್ಚ್ 2025ರಂದು ಜರಗಿತು. ಯು. ವಿಶ್ವನಾಥ ಶೆಣೈ, ಪ್ರಭಾವತಿ ವಿ. ಶೆಣೈ ದಂಪತಿಗಳ ಪ್ರಾಯೋಜಕತ್ವದಲ್ಲಿ ಉಡುಪಿಯ ಯಕ್ಷಗಾನ ಕಲಾರಂಗ ಆಯೋಜಿಸಿದ್ದ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ದೇವಳದ ಮೊಕ್ತೇಸರರಾದ ರಮೇಶ ಕಾರ್ಣಿಕ್ “ತಂತ್ರಜ್ಞಾನದ ರಭಸಕ್ಕೆ ಕೊಚ್ಚಿಕೊಂಡು ಹೋಗುತ್ತಿರುವ ನಮ್ಮ ಕಲೆ, ಸಂಸ್ಕೃತಿಯನ್ನು ರಕ್ಷಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಈ ನಿಟ್ಟಿನಲ್ಲಿ ಉಡುಪಿ ಕಲಾರಂಗದ ಕಾರ್ಯ ಪ್ರಶಂಸಾರ್ಹ” ಎಂದು ಹೇಳಿದರು. ಮಹಾವೀರ ಪಾಂಡಿ ಸಮ್ಮಾನಿತರನ್ನು ಪರಿಚಯಿಸಿದರು. ನಿರಂಜನ ಭಟ್ ಅವರೊಂದಿಗಿನ ಒಡನಾಟವನ್ನು ಸ್ಮರಿಸಿಕೊಂಡರು. ನಾರಾಯಣ ಎಂ. ಹೆಗಡೆ ಪ್ರಶಸ್ತಿ ಪತ್ರ ವಾಚಿಸಿದರು. ಪ್ರಶಸ್ತಿಯು ರೂ.20,000/- ನಗದು ಪುರಸ್ಕಾರ, ಪ್ರಶಸ್ತಿ ಪರಿಕರ ಒಳಗೊಂಡಿತ್ತು. ಈ ಸಂದರ್ಭದಲ್ಲಿ ಸಂಸ್ಥೆಯ ಕೋಶಾಧಿಕಾರಿ…
ಮೂಡುಬಿದಿರೆ: ಇಲ್ಲಿನ ಶಿವರಾಮ ಕಾರಂತ ಪ್ರತಿಷ್ಠಾನ ನೀಡುವ ‘ಶಿವರಾಮ ಕಾರಂತ ಪುರಸ್ಕಾರ’ಕ್ಕೆ ಕೃತಿಗಳನ್ನು ಆಹ್ವಾನಿಸಲಾಗಿದ್ದು, ನಾಲ್ವರು ಲೇಖಕರಿಗೆ ಪುರಸ್ಕಾರ ನೀಡಲಾಗುವುದು. ಪುರಸ್ಕಾರವು ಪ್ರಶಸ್ತಿ ಪತ್ರ ಮತ್ತು ರೂಪಾಯಿ 10 ಸಾವಿರ ನಗದು ಬಹುಮಾನ ಒಳಗೊಂಡಿದೆ. 2020ರಿಂದ 2024ರೊಳಗಿನ ಅವಧಿಯಲ್ಲಿ ಪ್ರಥಮ ಮುದ್ರಿತ ಕೃತಿಗಳನ್ನು ಪರಿಗಣಿಸಲಾಗುವುದು. ಆಸಕ್ತರು ಕೃತಿಯ ಮೂರು ಪ್ರತಿಗಳನ್ನು 20 ಏಪ್ರಿಲ್ 2025ರ ಒಳಗಾಗಿ ಶಿವರಾಮ ಕಾರಂತ ಪ್ರತಿಷ್ಠಾನ, ಕನ್ನಡ ಭವನ, ಮೂಡಬಿದಿರೆ -574227 ಈ ವಿಳಾಸಕ್ಕೆ ತಲುಪುವಂತೆ ಕಳುಹಿಸಬೇಕು. ಹೆಚ್ಚಿನ ವಿವರಗಳಿಗೆ :9743533105 ಸಂಪರ್ಕಿಸಬಹುದು ಎಂದು ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಜಯಪ್ರಕಾಶ ಮಾವಿನಕುಳಿ ತಿಳಿಸಿದ್ದಾರೆ.
ಮಣಿಪಾಲ : ಪಿಂಗಾರ ಸಾಹಿತ್ಯ ಬಳಗ ಮಂಗಳೂರು ಇದರ ವತಿಯಿಂದ 24ನೇ ‘ಸಾಹಿತ್ಯ ಸಂಭ್ರಮ ಮತ್ತು ಕವಿಗೋಷ್ಠಿ’ಯು ದಿನಾಂಕ 15 ಮಾರ್ಚ್ 2025ರಂದು ಮಣಿಪಾಲದ ದಶರಥನಗರ ಬಡಾವಣೆಯ ಮೂರನೇ ಅಡ್ಡ ರಸ್ತೆಯಲ್ಲಿರುವ ಆಂಟನಿ ಲೂಯಿಸ್ ಇವರ ಅಂಗಳದಲ್ಲಿ ನಡೆಯಿತು. ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಣಿಪಾಲ ಟಿ.ಎಂ.ಎ. ಪೈ ಫೌಂಡೇಶನ್ ಇದರ ಪನ್ವಾರ್ ಕೊಂಕಣಿ ಮಾಸ ಪತ್ರಿಕೆಯ ಸಂಪಾದಕ ಜ್ಞಾನದೇವ ಮಲ್ಯ “ಯಾರು ಬರೆದರೂ ಅವರ ಕಿಂಚಿತ್ತಾದರೂ ಅನುಭವ ಅದರಲ್ಲಿ ಇದ್ದರೆ ಜನರು ಸುಲಭವಾಗಿ ಮೆಚ್ಚಿಕೊಳ್ಳುವ ಸಾಹಿತ್ಯ ಅದಾಗುತ್ತದೆ” ಎಂದು ನುಡಿದರು. ಗಝಲ್ ಓದಿ ಚಾಲನೆ ನೀಡಿದ ಬಂಟ್ವಾಳ ಕನ್ನಡ ಸಾಹಿತ್ಯ ಸಮ್ಮೇಳನದ ಮಾಜಿ ಅಧ್ಯಕ್ಷ ಸಾಹಿತಿ ವೈದ್ಯ ಸುರೇಶ ನೆಗಳಗುಳಿ ಮಾತನಾಡಿ “ಮನೆಯಲ್ಲಿ ಸಾಹಿತ್ಯ ಅಂದರೆ ಮನದಲ್ಲಿ ಉಳಿಯುವಂತಹದು. ದೊಡ್ಡದಾದ ಸಮ್ಮೇಳನದ ವಹಿವಾಟು ನಿಭಾಯಿಸಲು ಅದಕ್ಕೆ ವ್ಯಾಪಾರೀಕರಣದ ಒಂದಂಶ ಲೇಪಿತವಾಗುತ್ತದೆ. ಇದು ಅನಿವಾರ್ಯ ಕೂಡಾ ಆಗುತ್ತದೆ” ಎಂದರು. ಈ ಸಮಯದಲ್ಲಿ ಸಾಹಿತಿಗಳು ಗೂಗಲ್ ಬ್ಲಾಗ್, ಗೂಗಲ್ ಟೈಪ್, ಸಾಹಿತ್ಯ ಉಳಿಸಿಕೊಳ್ಳಲು…