Author: roovari

ಕಾರ್ಕಳ : ಕಾರ್ಕಳದ ಗಣಿತ ನಗರ ಜ್ಞಾನಸುಧಾ ಕಾಲೇಜು ಸಭಾಂಗಣದಲ್ಲಿ 19ನೇ ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ದಿನಾಂಕ 03-12-2023ರಂದು ನಡೆಯಿತು. ಈ ಸಮ್ಮೇಳನದಲ್ಲಿ ಸಾಂಸ್ಕೃತಿಕ ಸಮ್ಮೇಳನವನ್ನು ಮಾಜಿ ಸಚಿವ ವಿ.ಸುನಿಲ್ ಕುಮಾರ್ ಉದ್ಘಾಟಿಸಿ ಮಾತನಾಡಿ “ಸಾಹಿತ್ಯ ಸಮ್ಮೇಳನಗಳು ಮಕ್ಕಳಿಗೆ ಪ್ರೇರಣೆ ನೀಡುವ ಕ್ಷೇತ್ರವಾಗಿದೆ. ಕನ್ನಡ ಸಾಹಿತ್ಯ ಲೋಕದಲ್ಲಿ ಪ್ರೇರಣೆ, ಜಾಗೃತಿ ಹಾಗೂ ಸಾಂಸ್ಕೃತಿಕ ವೈಭವವನ್ನು ಸಾರುವ ಕೆಲಸವಾಗಿದೆ, ಹೊಸ ಪೀಳಿಗೆಯ ಯುವ ಬರಹಗಾರರಿಗೆ ತಾಲೂಕು ಬರಹಗಾರರ ಸಮ್ಮೇಳನ ನಡೆಸುವ ಕಾರ್ಯವಾಗಲಿ ಮತ್ತು ಕಳೆದ ಬಾರಿ ನಡೆದ ರಾಜ್ಯ ಮಟ್ಟದ ಯಕ್ಷಗಾನ ಸಮ್ಮೇಳನವನ್ನು ಸರಕಾರವು ಮುಂದುವರೆಸಲಿ” ಎಂದು ಹೇಳಿದರು. ಸಮ್ಮೇಳನ ಅಧ್ಯಕ್ಷ ಸೂಡ ಸದಾನಂದ ಶೆಣೈ ಮಾತನಾಡಿ, “ಭಾಷೆ ಹಾಗೂ ಸಾಹಿತ್ಯಗಳು ನಮ್ಮೆಲ್ಲರನ್ನೂ ಒಂದುಗೂಡಿಸುವ ಸಾಧನಗಳು, ಮುಖ್ಯವಾಗಿ ಇಲ್ಲಿ ತುಳು, ಕೊಂಕಣಿ, ಬ್ಯಾರಿ ಇತ್ಯಾದಿ ಭಾಷೆಗಳನ್ನು ಆಡುವವರ ಆಶ್ರಯದಲ್ಲಿ ಕನ್ನಡ ಸಾಹಿತ್ಯಕ್ಕೆ ಬಹಳ ಪ್ರೋತ್ಸಾಹವಿದೆ. ತುಳುನಾಡಿನಲ್ಲಿ ವಿವಿಧ ಭಾಷಿಗರ ನಡುವಿನ ಸಂಪರ್ಕ ಭಾಷೆಯೇ ಕನ್ನಡ, ಮುಂದಿನ ದಿನಗಳಲ್ಲಿ ಕನ್ನಡದ ಸ್ಥಾನವನ್ನು…

Read More

ಧಾರವಾಡ : ಸಿತಾರ್ ನವಾಜ್ ಉಸ್ತಾದ್ ಬಾಲೇಖಾನ್ ಸ್ಮಾರಕ ಪ್ರತಿಷ್ಠಾನ ಟ್ರಸ್ಟ್ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಲೂರು ವೆಂಕಟರಾವ್ ಸಭಾ ಭವನದಲ್ಲಿ ದಿನಾಂಕ 02-12-2023ರಂದು ‘ಸಿತಾರ್ ನವಾಜ್ ಉಸ್ತಾದ್ ಬಾಲೇಖಾನ್ ಸ್ಮೃತಿ ಪ್ರಶಸ್ತಿ’ ಪ್ರದಾನ ಸಮಾರಂಭ ನಡೆಯಿತು. ಈ ಸಮಾರಂಭದಲ್ಲಿ ಮನೋವೈದ್ಯ ಆನಂದ ಪಾಂಡುರಂಗಿ ಮಾತನಾಡಿ “ಮನೋವಿಜ್ಞಾನದಲ್ಲಿ ಚಿಕಿತ್ಸಾ ವಿಧಾನಗಳ ಜೊತೆಗೆ ಪೂರಕ ಚಿಕಿತ್ಸಾ ವಿಧಾನ ಸಂಗೀತ. ಆತಂಕ ಮೊದಲಾದ ಮನೋಸಮಸ್ಯೆಗಳನ್ನು ಸಂಗೀತ ಚಿಕಿತ್ಸೆಯಿಂದ ಗುಣಪಡಿಸಬಹುದು. ಮಕ್ಕಳಲ್ಲಿ ಏಕಾಗ್ರತೆ ಕೊರತೆ, ಮೊದಲಾದ ಸಮಸ್ಯೆಗಳು ಇದ್ದರೆ ಸಂಗೀತ, ಗಾಯನ ಅಭ್ಯಾಸದಲ್ಲಿ ತೊಡಗಿಸಿದರೆ ಅವುಗಳನ್ನು ಪರಿಹರಿಸಬಹುದು. ಸಂಗೀತವು ಶೈಕ್ಷಣಿಕ, ವ್ಯಕ್ತಿತ್ವ ವಿಕಸನಕ್ಕೂ ಸಹಕಾರಿ. ಪೋಷಕರು ಮಕ್ಕಳಲ್ಲಿ ಸಂಗೀತದ ಹವ್ಯಾಸವನ್ನು ರೂಢಿಸಬೇಕು. ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಅದು ಸಹಕಾರಿ. ಸಂಗೀತ ಆಲಾಪನೆ ಉಲ್ಲಾಸ, ನೆಮ್ಮದಿ ನೀಡುತ್ತದೆ” ಎಂದು ಹೇಳಿದರು. ವಯೋಲಿನ್ ವಾದಕರಾದ ಬಿ.ಎಸ್. ಮಠ ಮತ್ತು ಅಕ್ಕಮಹಾದೇವಿ ಹಿರೇಮಠ ದಂಪತಿಗೆ ‘ಸಿತಾರ್ ನವಾಜ್ ಉಸ್ತಾದ್ ಬಾಲೇಖಾನ್ ಸ್ಮೃತಿ ಪ್ರಶಸ್ತಿ’ ಹಾಗೂ ತಬಲಾ…

Read More

ಪುತ್ತೂರು : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು, ಪುತ್ತೂರು ಇವರ ವತಿಯಿಂದ 2023-24ನೇ ಸಾಲಿನ ಪಾಕ್ಷಿಕ ತಾಳಮದ್ದಳೆಯ ಕೂಟವು ಪಾರ್ತಿಸುಬ್ಬ ವಿರಚಿತ ‘ಯಜ್ಞ ಸಂರಕ್ಷಣೆ’ ಎಂಬ ಆಖ್ಯಾನದೊಂದಿಗೆ ಶ್ರೀ ಶಕ್ತಿ ಆಂಜನೇಯ ಮಂತ್ರಾಲಯದಲ್ಲಿ ದಿನಾಂಕ 28-11-2023ರಂದು ನಡೆಯಿತು. ಹಿಮ್ಮೇಳದಲ್ಲಿ ಭಾಗವತರಾಗಿ ಲಕ್ಷ್ಮೀ ನಾರಾಯಣ ಭಟ್ ಬಟ್ಯಮೂಲೆ, ಆನಂದ ಸವಣೂರು ಹಾಗೂ ಚೆಂಡೆ ಮದ್ದಳೆಗಳಲ್ಲಿ ಮುರಳೀಧರ ಕಲ್ಲೂರಾಯ, ತಾರಾನಾಥ ಸವಣೂರು ಮತ್ತು ಮಾ.ಪರೀಕ್ಷಿತ್ ಸಹಕರಿಸಿದರು. ಮುಮ್ಮೇಳದಲ್ಲಿ ಭಾಸ್ಕರ ಬಾರ್ಯ (ದಶರಥ), ದುಗ್ಗಪ್ಪ ನಡುಗಲ್ಲು (ವಸಿಷ್ಠ ), ಗುಡ್ಡಪ್ಪ ಬಲ್ಯ (ವಿಶ್ವಾಮಿತ್ರ), ಕಿಶೋರಿ ದುಗ್ಗಪ್ಪ ನಡುಗಲ್ಲು ಮತ್ತು ಅಚ್ಯುತ ಪಾಂಗಣ್ಣಾಯ (ಶ್ರೀ ರಾಮ), ಚಂದ್ರಶೇಖರ ಭಟ್ ಬಡೆಕ್ಕಿಲ (ತಾಟಕಿ), ಹರಿಣಾಕ್ಷಿ ಜೆ. ಶೆಟ್ಟಿ (ಮಾರೀಚ) ಮಾತು ಶಾರದಾ ಅರಸ್ (ಸುಬಾಹು) ಸಹಕರಿಸಿದರು. ಸಂಘದ ನಿರ್ದೇಶಕ ಭಾಸ್ಕರ ಬಾರ್ಯ ಸ್ವಾಗತಿಸಿ, ವಂದಿಸಿದರು. ಕಾರ್ಯಕ್ರಮದ ಪ್ರಾರಂಭದಲ್ಲಿ “ಶ್ರೀ ಆಂಜನೇಯ-೫೫”ರ ಆಮಂತ್ರಣ ಪತ್ರಿಕೆಯನ್ನು ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ಮತ್ತು ಶ್ರೀ ಆಂಜನೇಯ ಮಂತ್ರಾಲಯದಲ್ಲಿ ಸಮರ್ಪಿಸಿ ಬಿಡುಗಡೆಗೊಳಿಸಲಾಯಿತು.…

Read More

ಪುತ್ತೂರು : ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇಲ್ಲಿನ ಕನ್ನಡ ಸಂಘ, ಸಂಸ್ಕೃತ ಸಂಘ, ಲಲಿತ ಕಲಾ ಸಂಘ ಮತ್ತು ಐ.ಕ್ಯೂ.ಎ.ಸಿ. ಹಾಗೂ ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಪುತ್ತೂರು ಇದರ ಸಹಯೋಗದಲ್ಲಿ ಕನಕ ದಾಸ ಜಯಂತಿ ದಾಸ ಸಾಹಿತ್ಯ- ಒಳ ನೋಟಗಳು ಎನ್ನುವ ವಿಚಾರ ಸಂಕಿರಣ ದಿನಾಂಕ 30-11-2023ರಂದು ನಡೆಯಿತು. ಈ ಕಾರ್ಯಕ್ರಮದ ಅಧ್ಯಕ್ಷರಾಗಿ ಅಖಿಲ ಭಾರತೀಯ ಸಾಹಿತ್ಯ ಪರಿಷತ್ತು ಪುತ್ತೂರು ಸಮಿತಿಯ ಅಧ್ಯಕ್ಷ ಗಣರಾಜ ಕುಂಬ್ಳೆ ಮಾತನಾಡಿ “ಭಾರತೀಯರು ಎಂದರೆ ಜ್ಞಾನದ ಬೆಳಕನ್ನು ಹೆಚ್ಚು ಆನಂದಿಸುವವರು. ನಮ್ಮ ರಾಷ್ಟ್ರದ ಸುದೀರ್ಘ ಇತಿಹಾಸ ಗಮನಿಸಿದರೆ ನಮಗೆ ಬೇಕಾದ ಬೆಳಕು ನಮ್ಮಲ್ಲಿದೆ. ನಾವು ಇಡೀ ಜಗತ್ತಿಗೆ ಬೆಳಕು ಕೊಡುವಷ್ಟು ಅರಿತವರು ಆದರೆ ಇದನ್ನು ಈಗ ಪ್ರತಿಯೊಬ್ಬರು ಮರೆತಿದ್ದಾರೆ. ಸಾಹಿತ್ಯ ಬೇರೆ ಬೇರೆ ಭಾಷೆಗಳಲ್ಲಿ ಹಂಚಿ ಹೋಗಿರಬಹುದು ಆದರೆ ಅದರ ಮೂಲ ಭಾರತವೆ” ಎಂದು ತಿಳಿಸಿದರು. ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಮುರಳಿ ಕೃಷ್ಣ ಕೆ.ಎನ್. ಕಾರ್ಯಕ್ರಮವನ್ನು…

Read More

ತೀರ್ಥಹಳ್ಳಿ: ತೀರ್ಥಹಳ್ಳಿ 10ನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನವು ದಿನಾಂಕ 29-11-2023ರಂದು ಶಾಂತವೇರಿ ಗೋಪಾಲಗೌಡ ರಂಗಮಂದಿರದಲ್ಲಿ ನಡೆಯಿತು. ಸಮ್ಮೇಳನವನ್ನು ಉದ್ಘಾಟಿಸಿದ ಖ್ಯಾತ ಸಾಹಿತಿ ಹಾಗೂ ಚಿಂತಕ ಡಾ.ರಾಜೇಂದ್ರ ಚೆನ್ನಿ ಮಾತನಾಡಿ “ಕನ್ನಡದ ಕಂಪನ್ನು ಜಗತ್ತಿಗೆ ಸಾರಿದ ಜಗದ ಕವಿ ಕುವೆಂಪು ಇವರು ಸಾಹಿತ್ಯ ಲೋಕಕ್ಕೆ ಆದರ್ಶವಾಗಿದ್ದಾರೆ. ಪ್ರಾದೇಶಿಕ ಸಂಸ್ಕೃತಿ ಅತಿ ಮುಖ್ಯವಾಗಿದೆ. ಅಂತಹ ಸಂಸ್ಕೃತಿಯನ್ನು ಸಾರಿದ್ದು ತೀರ್ಥಹಳ್ಳಿ ಹಾಗೂ ಕುವೆಂಪು ಎನ್ನುವುದನ್ನು ಮರೆಯಬಾರದು. ವೈಜ್ಞಾನಿಕ ಹಾಗೂ ವೈಚಾರಿಕ ಚಿಂತನೆಗಳನ್ನು ವಿಶ್ವದಗಲ ಸಾರಿದ್ದು ಕನ್ನಡ ಸಾಹಿತ್ಯ. ಆನೇಕ ಚಳುವಳಿಗಳು ಹುಟ್ಟಿಕೊಂಡದ್ದು ಕನ್ನಡದ ನೆಲದಲ್ಲಿ. ದೇಶಕ್ಕೆ ಹಾಗೂ ಜಗತ್ತಿಗೆ ಆನೇಕ ಮಾದರಿಗಳನ್ನು ನೋಡ ನೀಡಿದ ಕನ್ನಡ ಜಗತ್ತು ವಿಶಿಷ್ಟ ಹಾಗೂ ವಿಭಿನ್ನ. ಸಮಾಜವಾದಿ ಚಿಂತನೆಗಳನ್ನು ಬಿಂಬಿಸಿದ ನೆಲ ಇದಾಗಿದೆ. ಪ್ರಸ್ತುತವಾಗಿ ಕಂಡುಬರುತ್ತಿರುವುದು ಸಾಂಸ್ಕೃತಿಕ ಮರೆವು ಎನ್ನುವ ಬಿಕ್ಕಟ್ಟು ನಮ್ಮನ್ನೆಲ್ಲ ಕಾಡುತ್ತಿದೆ. ಆಧುನಿಕತೆಯ ನೆಪದಲ್ಲಿ ಪರಿಸರವನ್ನು ನಾಶ ಮಾಡಲಾಗುತ್ತಿದೆ. ಅಭಿವೃದ್ಧಿಯ ಶಾಪದಿಂದ ಜೀವ ಸಂಕುಲ ನಾಶದ ಹಂತಕ್ಕೆ ಬರುತ್ತಿದೆ. ನಮ್ಮ ಉಳಿವಿಗೆ ನಾವೇ ಮುಂದಾಗಬೇಕು” ಎಂದರು.…

Read More

ಕೋಟ : ಕೋಟ ವಿವೇಕ ವಿದ್ಯಾಸಂಸ್ಥೆಯ ಅಮೃತಮಹೋತ್ಸವ ಹಾಗೂ ಸಂಸ್ಥೆಯ ವಾರ್ಷಿಕೋತ್ಸವ ಕಾರ್ಯಕ್ರಮವು ದಿನಾಂಕ 02-12-2023 ರಿಂದ 04-12-2023ರಂದು ನಡೆಯಿತು. ದಿನಾಂಕ 02-12-2023 ರಂದು ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಆಳ್ವಾಸ್ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಡಾ. ಎಂ. ಮೋಹನ್‌ ಆಳ್ವ ಮಾತನಾಡಿ “ಖಾಸಗಿ ಚಿಂತನೆ ಮೂಲಕ ಶಿಕ್ಷಣ ಅಭಿವೃದ್ಧಿ ಕಾಣಬೇಕು. ಕನ್ನಡ ಮಾಧ್ಯಮದ ಶಿಕ್ಷಣ ಮಟ್ಟ ಕುಸಿತಕ್ಕೆ ಸರಕಾರವೇ ನೇರ ಕಾರಣವಾಗಿದೆ. ಶಿಕ್ಷಣದ ವ್ಯವಸ್ಥೆಯಲ್ಲಿ ಕಾಲಕ್ಕನುಗುಣವಾಗಿ ಬದಲಾವಣೆ ಅಗತ್ಯ.” ಎಂದು ಕೇಳಿದರು. ಈ ಸಂದರ್ಭ ಅಮೃತ ಮಹೋತ್ಸವದ ಸ್ಮರಣ ಸಂಚಿಕೆಯನ್ನು ವಿಶ್ರಾಂತ ಪ್ರೊಫೆಸರ್ ಡಾ. ರಾಧಾಕೃಷ್ಣ ರಾವ್ ಬಿಡುಗಡೆ ಗೊಳಿಸಿದರು. ಮುಂಬಯಿ ಒ.ಎನ್‌.ಜಿ.ಸಿ.ಯ ನಿವೃತ್ತ ಚೀಫ್ ಜನರಲ್ ಮ್ಯಾನೇಜರ್ ಬನ್ನಾಡಿ ನಾರಾಯಣ ಆಚಾರ್ ಅಧ್ಯಕ್ಷತೆ ವಹಿಸಿದ್ದರು. ವಿಶೇಷ ಆಹ್ವಾನಿತರಾಗಿ ಚಿತ್ರ ನಟಿ ವಿನಯ ಪ್ರಸಾದ್ ಭಾಗವಹಿಸಿದರು. ದಿನಾಂಕ 03-12-2023 ರಂದು ಕೋಟ ವಿದ್ಯಾ ಸಂಘ (ರಿ.) ಇದರ ಅಧ್ಯಕ್ಷರಾದ ಸಿ. ಎ. ಆಗಿರುವ ಪಿ ಪ್ರಭಾಕರ ಮಯ್ಯ ಇವರ ಅಧ್ಯಕ್ಷತೆಯೆಲ್ಲಿ ನಡೆದ…

Read More

ಉಪ್ಪಿನಂಗಡಿ : ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕದ ನೇತೃತ್ವದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು, ಗ್ರಾಮ ಪಂಚಾಯತ್ ಬಜತ್ತೂರು ಇವರ ಸಹಕಾರದೊಂದಿಗೆ ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ಇವರ ಸಂಯೋಜನೆಯಲ್ಲಿ ಹೊರನಾಡ ಕನ್ನಡಿಗ ಮಿತ್ರಂಪಾಡಿ ಜಯರಾಮ ರೈ ಅಬುಧಾಬಿಯವರ ಮಹಾಪೋಷಕತ್ವದಲ್ಲಿ ಬಜತ್ತೂರು ಗ್ರಾಮ ಪಂಚಾಯಿತ್ ಸಭಾಭವನದಲ್ಲಿ ಸಾಹಿತ್ಯದ ನಡೆ ಗ್ರಾಮದ ಕಡೆ ಅಭಿಯಾನದಂಗವಾಗಿ ‘ಗ್ರಾಮ ಸಾಹಿತ್ಯ ಸಂಭ್ರಮ’ ಕಾರ್ಯಕ್ರಮ ದಿನಾಂಕ 25-11-2023ರಂದು ನಡೆಯಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ಬಜತ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಗಂಗಾಧರ ಗೌಡ ನೆಕ್ಕರಾಜೆ ಮಾತನಾಡಿ “ಕನ್ನಡ ಸಾಹಿತ್ಯವನ್ನು ಓದುವವರ ಸಂಖ್ಯೆ ಕಡಿಮೆಯಾಗುತ್ತಿದ್ದು, ಗ್ರಾಮಗಳಲ್ಲಿ ಮಕ್ಕಳು ಸಾಹಿತ್ಯದ ಊರುಗೋಲುಗಳಾಗಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಈ ಮಧ್ಯೆ ಪೇಟೆ, ಪಟ್ಟಣಗಳಲ್ಲಿ ಕೆಲವರು ಕನ್ನಡ ಹೋರಾಟ ಎಂಬ ದಂಧೆಯನ್ನು ನಡೆಸುತ್ತಿದ್ದು, ಅವರ ವಿರುದ್ಧ ಜಾಗೃತರಾಗಬೇಕಿದೆ. ಗ್ರಾಮಗಳಲ್ಲಿ ಕನ್ನಡ ಸಾಹಿತ್ಯದ ಸಂಭ್ರಮ ನಡೆಸುವ ಮೂಲಕ ಮಕ್ಕಳಲ್ಲಿ ಸಾಹಿತ್ಯದ ಒಲವು-ಅರಿವು ಮೂಡಿಸುವ ಕೆಲಸ ಶ್ಲಾಘನೀಯ. ಇಂದಿನ ಯುವಜನತೆ ಕನ್ನಡ ಸಂಸ್ಕೃತಿ, ಸಾಹಿತ್ಯದತ್ತ ಹೆಚ್ಚಿನ…

Read More

ವಿರಾಜಪೇಟೆ : ಸೈಂಟ್ ಆನ್ಸ್ ಪದವಿ ಪೂರ್ವ ಮತ್ತು ಪದವಿ ಪೂರ್ವ ಕಾಲೇಜು ಕನ್ನಡ ಭಾಷಾ ವಿಭಾಗ ಮತ್ತು ಕನ್ನಡ ವಿದ್ಯಾರ್ಥಿ ಬಳಗದ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ಸಂಭ್ರಮ 50 ಪ್ರಯುಕ್ತ ಆಯೋಜಿತ ‘ನುಡಿ ನೃತ್ಯ ಸಂಭ್ರಮ-2023’ ಕಾರ್ಯಕ್ರಮ ದಿನಾಂಕ 25-11-2023ರಂದು ಕಾಲೇಜಿನ ಆವರಣದಲ್ಲಿ ನಡೆಯಿತು. ಈ ಕಾರ್ಯಕ್ರಮಕ್ಕೆ ಗೋಣಿಕೊಪ್ಪಲು ಕಾವೇರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ಎಂ.ಜಿ. ಕಾವೇರಿಯಪ್ಪ ಇವರು ಚಾಲನೆ ನೀಡಿ ಮಾತನಾಡಿ “ಪ್ರಾಚೀನ ಭಾಷೆಯಾಗಿರುವ ಕನ್ನಡವನ್ನು ಹಲವಾರು ಸಾಹಿತಿಗಳು, ಸಂತರು ಬೆಳೆಸಿದ್ದಾರೆ. ಧೀಮಂತ ಭಾಷೆಯಾಗಿರುವ ಕನ್ನಡವನ್ನು ಉಳಿಸಿ ಬೆಳೆಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿ, ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆಯನ್ನು ಸ್ವಾಭಿಮಾನ ಮತ್ತು ಅಭಿಮಾನದಿಂದ ಬೆಳೆಸುವಂತಾಗಬೇಕು. ಆದರೆ, ಇಂದು ನಾವು ಪರಭಾಷೆಯ ವ್ಯಾಮೋಹವನ್ನು ಬೆಳೆಸಿಕೊಂಡು ತಾಯಿನೆಲದ ಭಾಷೆಯನ್ನು ಮರೆಯಲಾರಂಭಿಸಿದ್ದೇವೆ. ಕನ್ನಡ ನುಡಿ, ನೆಲ, ಜಲವನ್ನು ಎಂದಿಗೂ ಮರೆಯದೆ ಸ್ವಾಭಿಮಾನ, ಅಭಿಮಾನದಿಂದ ಕನ್ನಡವನ್ನು ಬೆಳೆಸಿ ಉಳಿಸಬೇಕು” ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಎಂ.ಬಿ. ಕಾವೇರಿಯಪ್ಪ ಮತ್ತು…

Read More

ನಾಪೋಕ್ಲು : ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಬಲಮುರಿಯ ನೆಬ್ಬೂರು ಗೌಡ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಕಟ್ರತನ ಮೊಟ್ಟೆಕೊಡಿ ಬಾಣೆಯಲ್ಲಿ ‘ಜಾನಪದ ಸಿರಿ’ ಕಾರ್ಯಕ್ರಮವು ದಿನಾಂಕ 28-11-2023ರಂದು ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಕಡ್ಲೇರ ತುಳಸಿ ಮೋಹನ್ ಇವರ ಅಧ್ಯಕ್ಷತೆಯಲ್ಲಿ ಅರ್ಥಪೂರ್ಣವಾಗಿ ನಡೆಯಿತು. ಈ ಕಾರ್ಯಕ್ರಮವನ್ನು ನೆಬ್ಬೂರು ಗೌಡ ಸಂಘದ ಅಧ್ಯಕ್ಷರಾದ ಕಟ್ರತನ ಬಿ. ಲೋಕನಾಥ ಅವರು ಪರೆಗೆ ಭತ್ತ ತುಂಬಿಸುವ ಮೂಲಕ ಉದ್ಘಾಟಿಸಿ ಶುಭ ಹಾರೈಸಿದರು. ವಕೀಲರಾದ ಕೊಟ್ಟಕೇರಿಯನ ಶ್ರೀ ಡಿ. ದಯಾನಂದ ಅವರು ತಮ್ಮ ಪ್ರಾಸ್ತಾವಿಕ ನುಡಿಯಲ್ಲಿ “ನೆಬ್ಬೂರು ಗೌಡ ಸಂಘ ನಾಲ್ಕು ತಲೆಮಾರಿನಿಂದ ನಡೆದುಕೊಂಡು ಬಂದಿದ್ದು, ಕೇವಲ ಮೂರು ಕುಟುಂಬಗಳು ಮಾತ್ರ ಸೇರಿ ಕಟ್ಟಿದ ಸಂಘವಾಗಿದೆ. ಯಾವುದೇ ಕಟ್ಟಡವಿಲ್ಲ ಕಚೇರಿ ಇಲ್ಲದೆ ವರ್ಷಕ್ಕೊಮ್ಮೆ ಗ್ರಾಮೀಣ ಕ್ರೀಡಾಕೂಟ ನಡೆಸಿಕೊಂಡು ಹಬ್ಬ ಹರಿದಿನಗಳನ್ನು ಒಂದಾಗಿ ಸೇರಿ ಆಚರಿಸಿಕೊಂಡು ಬರುತ್ತಿದ್ದೇವೆ, ಹಾಗೆಯೇ ಹಲವಾರು ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ ಗೌರವಿಸುವ ಕೆಲಸವನ್ನು ಮಾಡುತ್ತಾ…

Read More

ಮಂಗಳೂರು : ಪುರಭವನದ ಮಿನಿ ಹಾಲಿನಲ್ಲಿ ದಿನಾಂಕ 03-12-2023ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಕರಾವಳಿ ಸಂಗೀತ ಕಲಾವಿದರ ಒಕ್ಕೂಟದ 16ನೇ ಮಹಾಸಭೆ ನಡೆಯಿತು. ಚುನಾವಣಾ ಅಧಿಕಾರಿಯಾದ ಅಡ್ವಕೇಟ್ ಸತೀಶ್ ಭಟ್ ಅವರು “ಕರಾವಳಿ ಸಂಗೀತ ಕಲಾವಿದರ ಒಕ್ಕೂಟ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಒಂದು ಸಕ್ರಿಯ ನಡೆಯ ಸಂಘಟನೆ” ಎಂದು ಅಭಿಪ್ರಾಯ ಪಟ್ಟರು. ವರ್ಷದಲ್ಲಿ ಅನೇಕ ಉಪಯುಕ್ತ ಕಾರ್ಯಕ್ರಮಗಳನ್ನು ಸಂಘಟಿಸುತ್ತ ಕಲಾವಿದರ ಕಷ್ಟಗಳಿಗೆ ಸ್ಪಂದಿಸುವ ಈ ಸಂಸ್ಥೆಯ ತ್ಯಾಗ ಪೂರ್ಣ ಮತ್ತು ಪಾರದರ್ಶಕ ಕೆಲಸವನ್ನು ಅವರು ಶ್ಲಾಘಿಸಿದರು. 2023-24ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಒಕ್ಕೂಟದ ಅಧ್ಯಕ್ಷ ಮೋಹನ್ ಪ್ರಸಾದ್ ನಂತೂರು ಅಧ್ಯಕ್ಷತೆ ವಹಿಸಿದ್ದರು. ಗೌರವ ಸಲಹೆಗಾರ ತೋನ್ಸೆ ಪುಷ್ಕಳಕುಮಾರ್ ಪ್ರಸ್ತಾವಿಸಿ ಸ್ವಾಗತಿಸಿದರು. ಕಾರ್ಯದರ್ಶಿ ದೀಪಕ್ ರಾಜ್ ಉಳ್ಳಾಲ್ ವರದಿ ವಾಚಿಸಿದರು. ನಿಕಟ ಪೂರ್ವ ಅಧ್ಯಕ್ಷ ರಮೇಶ್ ಸಾಲ್ಯಾನ್ ಲೆಕ್ಕಪತ್ರ ಮಂಡಿಸಿದರು. ವೇದಿಕೆಯಲ್ಲಿ ಒಕ್ಕೂಟದ ಮಾಜಿ ಅಧ್ಯಕ್ಷರುಗಳಾದ ಮುರಳಿಧರ ಕಾಮತ್, ಜಗದೀಶ್ ಶೆಟ್ಟಿ, ರವೀಂದ್ರ…

Read More