Author: roovari

ಥಾಯ್ ಲ್ಯಾಂಡಿನ ಬ್ಯಾಂಕಾಕ್ ನಲ್ಲಿ ಇತ್ತೀಚೆಗೆ ನಡೆದ ವಿಶ್ವ ಜಾದೂ ಸಮ್ಮೇಳನದಲ್ಲಿ ಜಾದೂಗಾರ ಕುದ್ರೋಳಿ ಗಣೇಶ್ ಅವರು ಪ್ರಸುತ ಪಡಿಸಿದ ” ತುಳುನಾಡು ತುಡರ್ ಚೆಂಡು” ಜಾದೂವಿಗೆ ಎರಡು ಅಂತರ್ ರಾಷ್ಟ್ರೀಯ ಮಟ್ಟದ ಪುರಸ್ಕಾರಗಳು ಲಭಿಸಿದೆ. ಜಗತ್ತಿನ ಅತ್ಯಂತ ಪುರಾತನ ಜಾದೂ ಆಗಿರುವ ಕಪ್ಸ್ ಆಂಡ್ ಬಾಲ್ಸ್ ಮ್ಯಾಜಿಕ್ ಅನ್ನು ಕುದ್ರೋಳಿ ಗಣೇಶ್ ರವರು ನೂತನ ತಂತ್ರಗಾರಿಕೆಯ ಮೂಲಕ ತುಳು ಭಾಷೆ ಹಾಗೂ ಪಾಡ್ದನದ ಮೂಲಕ ಪ್ರಸ್ತುತ ಪಡಿಸಿದ ಸೃಜನಶೀಲತೆಯನ್ನು ಪರಿಗಣಿಸಿ ಅತ್ಯಂತ ಹೆಚ್ಚು ಸದಸ್ಯರನ್ನು ಹೊಂದಿರುವ ಜಗತ್ತಿನ ಬ್ರಹತ್ ಜಾದೂ ಸಂಸ್ಥೆ ಅನ್ನುವ ಹೆಗ್ಗಳಿಕೆ ಹೊಂದಿದ ಅಮೆರಿಕಾದ ಇಂಟರ್ ನ್ಯಾಶನಲ್ ಸೊಸೈಟಿ ಆಫ್ ಮ್ಯಾಜಿಕ್ ಸಂಸ್ಥೆಯು ಪ್ರತಿಷ್ಟಿತ “ಮರ್ಲಿನ್ ಮೆಡಲ್ ” ನೀಡಿ ಗೌರವಿಸಿದೆ. ತುಳುನಾಡು ತುಡರ್ ಚೆಂಡು ಜಾದೂವಿನ ಹೊಸತನವನ್ನು ಗಮನಿಸಿ ವಿಶ್ವ ಜಾದೂ ಸಮ್ಮೇಳನ ಸಂಘಟಿಸಿದ ಥಾಯ್ ಲ್ಯಾಂಡ್ ಇಂಟರ್ ನ್ಯಾಶನಲ್ ಅಕಾಡೆಮಿ ಆಫ್ ಮ್ಯಾಜಿಕ್ ಸಂಸ್ಥೆ ” ಮೋಸ್ಟ್ ಓರಿಜಿನಲ್ ಆಕ್ಟ್ ” ಪ್ರಶಸ್ತಿ ನೀಡಿ…

Read More

ಮಂಗಳೂರು: ಜೀವನದಲ್ಲಿಸಂಸ್ಕಾರ ಇದ್ದರೆ ಮಾತ್ರ ನಾವು ಪರಿಪೂರ್ಣವಾಗಿ ಬದುಕಲು ಸಾಧ್ಯ. ಭಾರತದಲ್ಲಿ ಕಲಾ‌ ಪ್ರಕಾರಗಳು ಜೀವನಕ್ಕೆ ಅಗತ್ಯ ಸಂಸ್ಕಾರಗಳನ್ನು ಕೊಡಬಲ್ಲವು ಎಂದು ನಾಟ್ಯಾಚಾರ್ಯ ಉಳ್ಳಾಲ ಮೋಹನ್ ಕುಮಾರ್ ಹೇಳಿದರು. ಅವರು ಶನಿವಾರ ನಗರದ ಕುದ್ಮುಲ್ ಪುರಭವನದಲ್ಲಿ ಸನಾತನ ನಾಟ್ಯಾಲಯದ ನಲ್ವತ್ತನೆ ವರ್ಷಾಚರಣೆಯ ಮೊದಲ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಶೇಣಿ ಮುರಳಿ ಅವರಿಂದ ಶ್ರೀಹರಿದರ್ಶನ ಎಂಬ ಹರಿಕತೆ, ಸನಾತನ ನಾಟ್ಯಾಲಯದ ವಿದ್ಯಾರ್ಥಿಗಳಿಂದ ಭರತನಾಟ್ಯ ಪ್ರದರ್ಶನ ನಡೆಯಿತು. ಕಾರ್ಯಕ್ರಮದಲ್ಲಿ ಸನಾತನ ನಾಟ್ಯಾಲಯದ ನೃತ್ಯಗುರು ವಿದುಷಿ ಶಾರದಾಮಣಿಶೇಖರ್, ವಿದುಷಿ ಶ್ರೀಲತಾ ನಾಗರಾಜ್, ನಿರ್ದೇಶಕರಾದ ಚಂದ್ರಶೇಖರ ಶೆಟ್ಟಿ, ನಾಗರಾಜ್ ಶೆಟ್ಟಿ, ವಿದುಷಿ ಉಮಾ ಹೆಬ್ಬಾರ್, ವಿದುಷಿ ವಾಣಿಶ್ರೀ, ವಿದುಷಿ ಛಾಯಾಶ್ರೀ,ವಿದುಷಿ ಕೃಪಾ, ವಿದುಷಿ ನೇಹಾ , ವಿಜಿತಾ ಶೆಟ್ಟಿ, ಸಿಂಚನ ಕುಲಾಲ್ ಉಪಸ್ಥಿತರಿದ್ದರು.

Read More