Author: roovari

ಮಡಿಕೇರಿ : ಕೊಡವ ಮಕ್ಕಡ ಕೂಟದ ವತಿಯಿಂದ ಲೇಖಕಿ ಅಮ್ಮಾಟಂಡ ವಿಂದ್ಯಾ ದೇವಯ್ಯ ಅವರು ಬರೆದಿರುವ ‘ಕೊಯ್ತ ಮುತ್ತ್’ ಕೊಡವ ಪುಸ್ತಕ ಲೋಕಾರ್ಪಣಾ ಸಮಾರಂಭವು ದಿನಾಂಕ 06-06-2024ರಂದು ನಡೆಯಿತು. ಮಡಿಕೇರಿಯ ಪತ್ರಿಕಾಭವನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಕೊಡವ ಮಕ್ಕಡ ಕೂಟದ 92ನೇ ಪುಸ್ತಕವಾಗಿ ಸಮಾಜ ಸೇವಕಿ ಬೈರೆಟ್ಟಿರ ಗಿರಿಜಾ ಅಯ್ಯಪ್ಪ ಪುಸ್ತಕ ಲೋಕಾರ್ಪಣೆಗೊಳಿಸಿ ಶುಭಹಾರೈಸಿದರು. ಪುಸ್ತಕದ ಲೇಖಕಿ ಅಮ್ಮಾಟಂಡ ವಿಂದ್ಯಾ ದೇವಯ್ಯ ಮಾತನಾಡಿ “ ‘ಕೊಯ್ತ ಮುತ್ತ್’ ಪುಸ್ತಕದಲ್ಲಿ, ಸಮಾಜದಲ್ಲಿ ನಡೆಯುವಂತಹ ದೈನಂದಿನ ಹಲವು ವಿಷಯಗಳ ಕುರಿತು ತಮ್ಮ ಚಿಂತನೆಗಳನ್ನು ಕವನಗಳ ಮೂಲಕ ರಚಿಸಲಾಗಿದ್ದು, ಇದನ್ನು ಪುಸ್ತಕ ರೂಪದಲ್ಲಿ ಹೊರತರಲಾಗಿದೆ. ತಾನು ಸಾಹಿತ್ಯ ಕ್ಷೇತ್ರದಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದು, ಆಡು ಭಾಷೆಯಲ್ಲಿ ಪುಸ್ತಕ ಬರೆಯಬೇಕು ಎಂಬ ಕನಸು ಹೊಂದಿದ್ದೆ. ಈ ನಿಟ್ಟಿನಲ್ಲಿ ಕೊಡವ ಭಾಷೆಯಲ್ಲೆ ಕಥೆ, ಕವನ, ಚುಟುಕು ಬರೆಯಲಾರಂಭಿಸಿ, ಸ್ನೇಹಿತರು ಹಾಗೂ ಕುಟುಂಬಸ್ಥರ ಸಹಕಾರದಿಂದ ಪುಸ್ತಕ ಬಿಡುಗಡೆಗೊಳಿಸಲಾಗಿದೆ. ಇದನ್ನು ಓದಿದವರು ತಮ್ಮ ಜೀವನದಲ್ಲಿ ಸ್ವಲ್ಪವಾದರೂ ಬದಲಾವಣೆ ಕಾಣುವರು ಎಂಬ ನಿರೀಕ್ಷೆ…

Read More

ಮಂಗಳೂರು : ಕಳೆದ ನಲ್ವತ್ತಮೂರು ವರ್ಷಗಳಿಂದ ಮಂಗಳೂರಿನಲ್ಲಿ ಕಾರ್ಯಾಚರಿಸುತ್ತಿರುವ ಕೊಂಕಣಿ ಸಾಂಸ್ಕೃತಿಕ ಸಂಘದ ವತಿಯಿಂದ ‘ಸೀತಾ ಕಲ್ಯಾಣ’ ಕೊಂಕಣಿ ಕಾಲಮಿತಿ ಯಕ್ಷಗಾನ ಪ್ರದರ್ಶನವು ದಿನಾಂಕ 31-05-2024ರಂದು ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಿತು. ಇದೇ ಸಂದರ್ಭದಲ್ಲಿ ಯಕ್ಷಗಾನದ ಸಾಧನೆಗಾಗಿ ಕಟೀಲು ಮೇಳದ ಕಲಾವಿದ ಗಣೇಶ್ ಪಾಲೆಚ್ಚಾರ್ ಇವರಿಗೆ ‘ಕೊಂಕಣಿ ಸಾಂಸ್ಕೃತಿಕ ರಾಯಭಾರಿ’ ಎಂಬ ಬಿರುದು ನೀಡಿ ಸಮ್ಮಾನಿಸಲಾಯಿತು. ಸಭಾ ಕಾರ್ಯಕ್ರಮ ಉದ್ಘಾಟಿಸಿದ ಟಾಟಾ ಗ್ರೂಪ್‌ನ ನಿವೃತ್ತ ನಿರ್ದೇಶಕ ಸಿ.ಡಿ. ಕಾಮತ್ ಮಾತನಾಡಿ, “ಕೊಂಕಣಿ ಸಾಂಸ್ಕೃತಿಕ ರಂಗದ ಪ್ರಗತಿಗೆ ಕೊಂಕಣಿ ಸಾಂಸ್ಕೃತಿಕ ಸಂಘದ ಕೊಡುಗೆ ಅಪಾರವಾಗಿದೆ. 43 ವರ್ಷಗಳಿಂದ ವಿವಿಧ ಕಾರ್ಯಕ್ರಮಗಳ ಮೂಲಕ ಕೊಂಕಣಿ ಕ್ಷೇತ್ರಕ್ಕೆ ನಿರಂತರ ಕೊಡುಗೆ ನೀಡುತ್ತಿರುವುದು ಶ್ಲಾಘನೀಯ” ಎಂದರು. ವಿಶ್ವ ಕೊಂಕಣಿ ಕೇಂದ್ರ ಮಂಗಳೂರು ಆಡಳಿತಾಧಿಕಾರಿ ಬಾಚೋಡಿ ದೇವದಾಸ ಪೈ, ಮಂಗಳೂರು ಸಾಧನಾ ಬಳಗದ ಗೌರವಾಧ್ಯಕ್ಷ ನರಸಿಂಹ ಭಂಡಾರ್ಕಾರ್ ಶುಭಹಾರೈಸಿದರು. ಸಂಘದ ಕಾರ್ಯದರ್ಶಿ ಕೃಷ್ಣ ಕಾಮತ್, ಯಕ್ಷಗಾನ ಕಲಾವಿದ ಎಂ. ಶಾಂತರಾಮ ಕುಡ್ವ, ಯಕ್ಷ ಕಲಾವಿದ ಗಣೇಶಪುರ ಗಿರೀಶ್ ನಾವಡ…

Read More

ಯಕ್ಷಗಾನ – ಇದೊಂದು ಗಂಡು ಕಲೆ. ಕರ್ನಾಟಕದ ಅತ್ಯಂತ ವಿಶಿಷ್ಠ ಕಲೆ. ದಕ್ಷಿಣ ಭಾರತದ ಅತ್ಯಂತ ಜನಪ್ರಿಯ ಕಲೆಗಳಲ್ಲಿ ಯಕ್ಷಗಾನ ಅತೀ ಪ್ರಮುಖವಾದದ್ದು. ನಮ್ಮ ಸಂಸ್ಕೃತಿ, ಆಚರಣೆ ಮತ್ತು ಸಂಪ್ರದಾಯವನ್ನು ಮೈವೆತ್ತಿರುವ ಯಕ್ಷಗಾನ ಕಲೆಯಲ್ಲಿ ಪ್ರಜ್ವಲಿಸುತ್ತಿರುವ ಪ್ರತಿಭೆ ದಿವ್ಯಶ್ರೀ ಮನೋಜ್ ಪೂಜಾರಿ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಕ್ಕೆಪದವಿನ ಡೊಂಬಯ ಪೂಜಾರಿ ಹಾಗೂ ಇಂದಿರಾ ಇವರ ಮಗಳಾಗಿ 17.08.1994ರಂದು ಜನನ. M.Com, NET, K.SET ಇವರ ವಿದ್ಯಾಭ್ಯಾಸ. ತಂದೆ, ತಾಯಿ ಹಾಗೂ ಬಾಲ್ಯದಲ್ಲಿ ನೋಡುತ್ತಿದ್ದ ಟೆಂಟ್ ಆಟಗಳು ಇವರು ಯಕ್ಷಗಾನ ಕಲಿಯಲು ಪ್ರೇರಣೆ. ಭಾಸ್ಕರ ರೈ (ಹವ್ಯಾಸಿ ಕಲಾವಿದರು), ಡಾ.ಕೋಳ್ಯೂರು ರಾಮಚಂದ್ರ ರಾವ್, ಅರುಣ್ ಕುಮಾರ್ ಧರ್ಮಸ್ಥಳ ಇವರ ಯಕ್ಷಗಾನ ಗುರುಗಳು. ಗುರುಗಳು ಹಾಗೂ ಹಿರಿಯ ಕಲಾವಿದರಲ್ಲಿ ಚರ್ಚಿಸಿ, ಇಂದಿನ ದಿನಗಳಲ್ಲಿ ತಂತ್ರಜ್ಞಾನ ಮುಂದುವರೆದ ಕಾರಣದಿಂದಾಗಿ Google ಹಾಗೂ YouTube ನಲ್ಲಿ ಕೆಲವು ಮಾಹಿತಿಯನ್ನು ಪಡೆದುಕೊಂಡು ಹಾಗೂ ಕೆಲವು ಯಕ್ಷಗಾನ ಪ್ರಸಂಗಗಳ ಪುಸ್ತಕಗಳನ್ನು ಖರೀದಿಸಿ ಮಾಹಿತಿಯನ್ನು ಪಡೆದು ರಂಗಕ್ಕೆ ಹೋಗುವ…

Read More

ಬದಿಯಡ್ಕ : ಸಮತಾ ಸಾಹಿತ್ಯವೇದಿಕೆ ಬದಿಯಡ್ಕ ಇದರ ಆಶ್ರಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಸಹಯೋಗದೊಂದಿಗೆ ಖ್ಯಾತ ಕವಿ ಹಾಗೂ ಕನ್ನಡ ಹೋರಾಟಗಾರರಾದ ನಾಡೋಜ ಡಾ. ಕಯ್ಯಾರ ಕಿಞ್ಞಣ್ಣ ರೈ ಇವರ ಜನ್ಮದಿನೋತ್ಸವ ಕಾರ್ಯಕ್ರಮವು ದಿನಾಂಕ 08-06-2024ರ ಶನಿವಾರದಂದು ಬದಿಯಡ್ಕದ ಬೋಳುಕಟ್ಟೆ ಇಲ್ಲಿರುವ ಹಿರಿಯ ನಾಗರಿಕರ ವಿಶ್ರಾಂತಿ ಗೃಹ ‘ಹಗಲು ಮನೆ’ಯಲ್ಲಿ ಅಪರಾಹ್ನ ಘಂಟೆ 2.30ರಿಂದ ನಡೆಯಲಿದೆ. ನಿವೃತ್ತ ಮುಖ್ಯೋಪಾಧ್ಯಾಯರಾದ ಶ್ರೀ ಪಿಲಿಂಗಲ್ಲು ಕೃಷ್ಣ ಭಟ್ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ‘ಕಯ್ಯಾರರ ಬದುಕು ಹಾಗೂ ಬರಹ’ದ ಕುರಿತು ನಿವೃತ್ತ ಪ್ರಾಂಶುಪಾಲರಾದ ಡಾ. ಬೇ. ಸಿ. ಗೋಪಾಲಕೃಷ್ಣ ಉಪನ್ಯಾಸ ನೀಡಲಿದ್ದಾರೆ. ಈ ಸಮಾರಂಭದಲ್ಲಿದಲ್ಲಿ ಅತಿಥಿಗಳಾಗಿ ಹಿರಿಯ ನಾಗರಿಕರ ವೇದಿಕೆ ಬದಿಯಡ್ಕ ಘಟಕದ ಅಧ್ಯಕ್ಷರಾದ ಶ್ರೀ ಈಶ್ವರ ಭಟ್ ಪೆರ್ಮುಖ, ಕ. ಸಾ. ಪ. ಕೇರಳ ಗಡಿನಾಡ ಘಟಕದ ಸಂಘಟನಾ ಕಾರ್ಯದರ್ಶಿಗಳಾದ ಶ್ರೀ ವಿಶಾಲಾಕ್ಷ ಮತ್ರಕಳ ಹಾಗೂ ರಂಗಸಿರಿ ಸಾಂಸ್ಕೃತಿಕ ವೇದಿಕೆ ಬದಿಯಡ್ಕ ಇದರ ಕಾರ್ಯದರ್ಶಿಯಾದ ಡಾ. ಶ್ರೀಶ…

Read More

ಮೂಲ್ಕಿ : ಕೆರೆಕಾಡು ಶ್ರೀ ವಿನಾಯಕ ಯಕ್ಷಕಲಾ ಫೌಂಡೇಶನ್ ಇದರ ಸಂಯೋಜನೆಯಲ್ಲಿ ‘ಒಡ್ಡೋಲಗ’ ಯಕ್ಷಗಾನ ವಿಶೇಷ ಸ್ಪರ್ಧಾ ಕಾರ್ಯಕ್ರಮವು ದಿನಾಂಕ 02-06-2024 ರಂದು ಮೂಲ್ಕಿ ಕೆರೆಕಾಡುವಿನ ತನು ಎಲೆಕ್ಟ್ರಿಕಲ್ಸ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಉದ್ಯಮಿ ಅಜಿತ್ ಕೆರೆಕಾಡು ಮಾತನಾಡಿ “ಯಕ್ಷಗಾನದಂತಹ ಸಮಷ್ಟಿಯ ಕಲೆಯಿಂದ ಇಂದು ಸಾಂಸ್ಕೃತಿಕ ಪರಂಪರೆ ಉಳಿದಿದ್ದು, ಈ ಕಲೆಯಲ್ಲಿ ಇನ್ನೂ ಹೆಚ್ಚು ಮಕ್ಕಳನ್ನು ತೊಡಗಿಸಿಕೊಂಡು, ಕಲಾ ಪ್ರಕಾರಗಳಲ್ಲಿ ಯಕ್ಷಗಾನದ ಮಹತ್ವವನ್ನು ತಿಳಿಹೇಳಬೇಕು.” ಎಂದು ಹೇಳಿದರು. ಶ್ರೀ ಕ್ಷೇತ್ರ ದೇಂದಡ್ಕ ಇಲ್ಲಿನ ಪ್ರಧಾನ ಅರ್ಚಕರಾದ ಸುಬ್ರಹ್ಮಣ್ಯ ಭಟ್ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಕೆರೆಕಾಡು ಯಕ್ಷಕಲಾ ಫೌಂಡೇಶನ್ ಇದರ ಅಧ್ಯಕ್ಷರಾದ ಜಯಂತ್ ಅಮೀನ್ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕರ್ಯಕ್ರಮದಲ್ಲಿ ಕೆರೆಕಾಡು ಶ್ರೀಗಣೇಶೋತ್ಸವ ಸಮಿತಿಯ ಅಧ್ಯಕ್ಷ ಪ್ರಶಾಂತ್ ಕೆರೆಕಾಡು, ಯಕ್ಷಗಾನ ಕಲಾವಿದರಾದ ಜಿತೇಶ್ ಕುಲಾಲ್ ಸೂರಿಂಜೆ, ಶ್ರೀಪಾದ್ ಭಟ್, ಫೌಂಡೇಶನ್‌ನ ದುರ್ಗಾಪ್ರಸಾದ್, ರೇಷ್ಮಾ ಗಣೇಶ್, ಪ್ರೇಮಲತಾ, ಅಭಿಜಿತ್, ಅಜಿತ್, ಅನ್ವಿತಾ, ವಾಣಿ, ವಿಜೇತಾ ಶೆಟ್ಟಿ, ಉಷಾ ಪರಮೇಶ್ವರ, ಶ್ರೇಯಸ್, ನೀಲೇಶ್ ಆಚಾರ್ಯ,…

Read More

ಕನ್ನಡದ ಮಹತ್ವದ ಲೇಖಕರಲ್ಲಿ ಒಬ್ಬರಾದ ಡಾ. ನಾ. ಮೊಗಸಾಲೆ ಅವರ ‘ಭಾರತ ಕಥಾ’ ಎಂಬ ಕಾದಂಬರಿಯು ರಾಜಕೀಯದ ಮುಷ್ಠಿಯೊಳಗೆ ಸಿಲುಕುವ ಊರಿನ ವಿದ್ಯಮಾನಗಳನ್ನು ವಾಸ್ತವದ ನೆಲೆಯಲ್ಲಿ ಬಿಚ್ಚಿಡುತ್ತದೆ. ಬೇಡವೆಂದರೂ ನಮ್ಮ ಬದುಕಿನೊಳಗೆ ನುಸುಳುವ, ಇಷ್ಟವಿಲ್ಲದಿದ್ದರೂ ನಮ್ಮನ್ನು ಕರಾಳ ಕೈಗಳಲ್ಲಿ ಅಪ್ಪಿಕೊಳ್ಳುವ, ದೂರವಾಗಲು ಹೊರಟವರನ್ನು ಬೆಂಬತ್ತಿ ಒಳಗೆ ಎಳೆದುಕೊಳ್ಳುವ ಕ್ರೌರ್ಯವು ಈ ಕಾದಂಬರಿಯನ್ನು ಮುನ್ನಡೆಸುತ್ತದೆ. ಇದು ದಕ್ಷಿಣ ಕನ್ನಡ ಜಿಲ್ಲೆಯ ಸೀತಾಪುರ ಎಂಬ ಕಾಲ್ಪನಿಕ ಊರಿನಲ್ಲಿ ನಡೆಯುವುದಾದರೂ ಅದನ್ನು ಭಾರತದ ಯಾವುದೇ ಹಳ್ಳಿಗೂ ಅನ್ವಯಿಸಬಹುದಾಗಿದೆ. ಒಂದರ್ಥದಲ್ಲಿ ಮೊಗಸಾಲೆಯವರ ಕಾಳಜಿಯೇ ಗ್ರಾಮ ಭಾರತ. ಹಳ್ಳಿಯಲ್ಲಿ ನಿಂತು ಸಾಮಾಜಿಕ ವಿದ್ಯಮಾನಗಳ ಬದಲಾವಣೆಗಳನ್ನು ವೀಕ್ಷಿಸುವ ಅವರಿಗೆ ಗ್ರಾಮ ಭಾರತವು ರಾಜಕೀಯದ ಬಲೆಯೊಳಗೆ ಬಿದ್ದು ನರಳುವಂತೆ ಕಾಣಿಸುತ್ತದೆ. ರಾಜಕೀಯ ಸ್ಥಿತ್ಯಂತರವು ಮನುಷ್ಯನ ಬದುಕು ಭಾವಗಳನ್ನು ಪ್ರಭಾವಿಸುವ ವಿವರಗಳಿರುವುದರಿಂದ ಈ ಕಾದಂಬರಿಗೆ ರಾಜಕೀಯ ಅರ್ಥವ್ಯಾಪ್ತಿಯು ಒದಗಿದೆ. ಈ ಪರಿಸ್ಥಿತಿಯು ರಾಜಕೀಯ ದೃಷ್ಟಿಕೋನವಿಲ್ಲದವರ ಬದುಕನ್ನೂ ಸೆರೆಹಿಡಿಯುತ್ತದೆ. ಕಣ್ಣಿಗೆ ಕಾಣದ ಕೆಟ್ಟ ವ್ಯವಸ್ಥೆಯು ನಮ್ಮ ಕತ್ತು ಹಿಸುಕುತ್ತಾ ಇದೆ ಎಂಬ ಭಾವವನ್ನು ಉಂಟು…

Read More

ಬೆಂಗಳೂರು : ತೇಜು ಪಬ್ಲಿಕೇಷನ್ಸ್ ವತಿಯಿಂದ ಎ. ಭಾನು ಇವರ ರಚಿಸಿರುವ ‘ಭಾನು ಗೀತ’ ಮತ್ತು ‘ಭಾವ ಸೌರಭ’ ಎಂಬ ಪುಸ್ತಕಗಳ ಲೋಕಾರ್ಪಣೆ ಕಾರ್ಯಕ್ರಮವು ದಿನಾಂಕ 09-06-2024ರಂದು ಬೆಳಿಗ್ಗೆ 10-00 ಗಂಟೆಗೆ ಬೆಂಗಳೂರಿನ ನ.ರಾ. ಕಾಲೋನಿಯ ಡಾ. ಸಿ. ಅಶ್ವತ್ಥ್ ಕಲಾ ಭವನದಲ್ಲಿ ನಡೆಯಲಿದೆ. ಈ ಕಾರ್ಯಕ್ರಮವನ್ನು ಎಚ್. ದುಂಡಿರಾಜ್ ಇವರ ಅಧ್ಯಕ್ಷತೆಯಲ್ಲಿ ಡಾ. ನಾ. ದಾಮೋದರ ಶೆಟ್ಟಿ ಇವರು ಉದ್ಘಾಟನೆ ಮಾಡಲಿದ್ದಾರೆ. ವೈ.ವಿ. ಗುಂಡೂರಾವ್ ಇವರ ಪುಸ್ತಕ ಲೋಕಾರ್ಪಣೆ ಮಾಡಲಿದ್ದು, ಕೊರ್ಗಿ ಶಂಕರ ನಾರಾಯಣ ಉಪಾಧ್ಯಾಯ ಇವರು ‘ಭಾನು ಗೀತ’ ಕೃತಿಯ ಬಗ್ಗೆ ಮತ್ತು ದಿವ್ಯ ಹೆಗಡೆ ಕಬ್ಬಿನಗದ್ದೆ ಇವರು ‘ಭಾವ ಸೌರಭ’ ಕೃತಿ ಪರಿಚಯ ಮಾಡಲಿರುವರು.

Read More

ಮಡಿಕೇರಿ : ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜಿಲ್ಲೆಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆ ಕುರಿತು ಚಿತ್ರಕಲೆ ಹಾಗೂ ಪ್ರಬಂಧ ಸ್ಪರ್ಧೆಗಳನ್ನು ನಗರದ ಎ.ಎಲ್.ಜಿ. ಕ್ರೆಸೆಂಟ್ ಶಾಲೆಯಲ್ಲಿ ದಿನಾಂಕ 01-06-2024ರಂದು ಆಯೋಜಿಸಲಾಯಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಕಾರ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕೊಡಗು ಪ್ರಾದೇಶಿಕ ಕಚೇರಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ವತಿಯಿಂದ ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿಯ ಸಂಯುಕ್ತಾಶ್ರಯದಲ್ಲಿ ನಡೆದ ಪರಿಸರ ಸ್ಪರ್ಧಾ ಕಾರ್ಯಕ್ರಮಕ್ಕೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ. ಬೇಬಿ ಮ್ಯಾಥ್ಯು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತಮಾಡಿದ ಅವರು, “ನಾವು ನೆಲ-ಜಲ, ಅರಣ್ಯ, ಪರಿಸರ ಸಂರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಪರಿಸರ ಮಾಲಿನ್ಯ ಉಂಟಾಗದ ರೀತಿಯಲ್ಲಿ ಎಚ್ಚರಿಕೆ ವಹಿಸುವುದು ಅಗತ್ಯ. ಪ್ರಾಕೃತಿಕ ಸಂಪನ್ಮೂಲ ಸಂರಕ್ಷಣೆಗೆ ಎಲ್ಲರೂ ಪಣ…

Read More

ಮಂಡ್ಯ : ಬೆಂಗಳೂರಿನ ಡಾ. ಬೆಸಗರಹಳ್ಳಿ ರಾಮಣ್ಣ ಪ್ರತಿಷ್ಠಾನ (ರಿ.) ಇದರ ವತಿಯಿಂದ ನೀಡುವ 2023ನೇ ಸಾಲಿನ ‘ಡಾ. ಬೆಸಗರಹಳ್ಳಿ ರಾಮಣ್ಣ ಕಥಾಸಂಕಲನ ಪ್ರಶಸ್ತಿ’ ಪ್ರದಾನ ಸಮಾರಂಭವನ್ನು ದಿನಾಂಕ 09-06-2024ರಂದು ಬೆಳಗ್ಗೆ 10-00 ಗಂಟೆಗೆ ಮಂಡ್ಯದ ಸುಭಾಷ್ ನಗರ, ಶಿವ ನಂಜಪ್ಪ ಪಾರ್ಕ್ ಎದುರಿರುವ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ. ಈ ಪ್ರಶಸ್ತಿಯನ್ನು ಚಾಮರಾಜ ನಗರದ ಸ್ವಾಮಿ ಪೊನ್ನಾಚಿಯವರ ‘ದಾರಿ ತಪ್ಪಿಸುವ ಗಿಡ’ ಕೃತಿಗೆ ಖ್ಯಾತ ಲೇಖಕರಾದ ಪ್ರೊ. ಕಾಳೇಗೌಡ ನಾಗವಾರ ಇವರು ಪ್ರದಾನ ಮಾಡಲಿರುವರು. ಪ್ರಶಸ್ತಿಯು ರೂ.25,000/- ನಗದು, ಫಲಕ ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ. ವಿಮರ್ಶಕರಾದ ಶ್ರೀಮತಿ ಆರ್. ಸುನಂದಮ್ಮ ಪ್ರಶಸ್ತಿ ವಿಜೇತ ಕೃತಿಯ ಕುರಿತು ಮಾತನಾಡಲಿದ್ದು, ಡಾ. ಬೆಸಗರಹಳ್ಳಿ ರಾಮಣ್ಣ ಪ್ರತಿಷ್ಠಾನದ ಅಧ್ಯಕ್ಷರಾದ ಶ್ರೀಮತಿ ಎಚ್.ಆರ್. ಸುಜಾತಾ ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿರುವರು. ಇದೇ ಸಂದರ್ಭದಲ್ಲಿ ಖ್ಯಾತ ಗಾಯಕಿ ಶ್ರೀಮತಿ ಎಂ.ಡಿ. ಪಲ್ಲವಿ ಮತ್ತು ಸಂಗಡಿಗರು ಭಾವಗಾಯನ ಕಾರ್ಯಕ್ರಮ ನೀಡಲಿದ್ದು, ಡಾ. ಬೆಸಗರಹಳ್ಳಿ ರಾಮಣ್ಣ ಅವರ…

Read More

ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತು ಏರ್ಪಡಿಸಿದ್ದ ಯುವರಾಜ ಕಂಠೀರವ ನರಸಿಂಹ ರಾಜ ಒಡೆಯರ್ ಅವರ 136ನೆಯ ಜಯಂತಿ ಕಾರ್ಯಕ್ರಮವು ದಿನಾಂಕ 05-06-2024ರಂದು ನಡೆಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿಯವರು ಮಾತನಾಡಿ “ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರೆಲ್ಲರ ಮಾತೃಸಂಸ್ಥೆಯಾಗಿ ಈ ವಿಸ್ತಾರವನ್ನು ಪಡೆದು ಬೆಳೆಯುವುದಕ್ಕೆ ಯುವರಾಜ ಕಂಠೀರವ ನರಸಿಂಹ ರಾಜ ಒಡೆಯರ್ ಅವರ ಕೊಡುಗೆ ಬಹಳ ಮಹತ್ವದ್ದು. ಸಂಸ್ಥೆಯ ನಿಬಂಧನೆ ಎಂಬುದು ಸಂಸ್ಥೆಗೆ ದಿಕ್ಸೂಚಿ–ಅಂಕುಶವಿದ್ದಂತೆ. ಅದು ಸಕಾಲಿಕವಾಗಿರಬೇಕು, ಸಮರ್ಪಕವಾಗಿರಬೇಕು ಮತ್ತು ಸಮಗ್ರವಾಗಿರಬೇಕು ಎಂದು ಅದುವರೆಗೆ ಹಲವಾರು ವಾರ್ಷಿಕಾಧಿವೇಶನಗಳಲ್ಲಿ ಆಗಿದ್ದ ನಿಬಂಧನೆಯ ತಿದ್ದುಪಡಿಗಳನ್ನೆಲ್ಲ ಸೇರ್ಪಡೆ ಮಾಡಿ ಒಂದೂಗೂಡಿಸಿ ನಿಬಂಧನಾವಳಿಯನ್ನು ಪ್ರಕಟಿಸಿದ್ದು ಅವರ ಮಹತ್ವದ ಸಾಧನೆ. ಪರಿಷತ್ತಿನ ಕಾರ್ಯಾಲಯವನ್ನು ಪುನರ್ಘಟಿಸಿ ವ್ಯವಸ್ಥಿತಗೊಳಿಸಿ ಸಮಯ ಪಾಲನೆ, ವೇಷಭೂಷಣಗಳಲ್ಲಿ ಶಿಸ್ತನ್ನು ತಂದರು. ಪ್ರತಿವಾರವೂ ಸಾರ್ವಜನಿಕ ಕಾರ್ಯಕ್ರಮವಾಗಿ ಉಪನ್ಯಾಸ, ಕಾವ್ಯವಾಚನಗಳ ಕಾರ್ಯಕ್ರಮಗಳನ್ನು ಇಟ್ಟುಕೊಂಡಿದ್ದಕ್ಕೆ ಪರಿಷತ್ತಿಗೆ ಬರುವ ಜನರು ಹೆಚ್ಚಾದರು. ಇವರ ಕಾಲದಲ್ಲಿ ವಸಂತೋತ್ಸವ ಕಾರ್ಯಕ್ರಮವನ್ನು ಬೇಸಿಗೆ ಕಾಲದಲ್ಲಿ ನಡೆಸುವ…

Read More