Author: roovari

ಬೆಂಗಳೂರು : ಸಂಪತ್ ಮರಾಠೆ ಮತ್ತು ಮಮತಾ ಮರಾಠೆ ಅವರ ಪುತ್ರಿ ಮಾಹಿ ಮರಾಠೆ ಅವರ ಭರತನಾಟ್ಯ ರಂಗ ಪ್ರವೇಶ ಬೆಂಗಳೂರಿನ ಜಯನಗರದ ವಿವೇಕ ಆಡಿಟೋರಿಯಂನಲ್ಲಿ ದಿನಾಂಕ 06-01-2024ರಂದು ನಡೆಯಿತು. ಸಾಂಪ್ರದಾಯಿಕ ಪುಷ್ಪಾಂಜಲಿಯೊಂದಿಗೆ ನೃತ್ಯ ಆರಂಭವಾಯಿತು. ನಂತರ ರುದ್ರ ಶ್ಲೋಕ ಪ್ರಸ್ತುತಪಡಿಸಲಾಯಿತು. ಶಿವನ ಗುಣ ಮತ್ತು ಶಕ್ತಿಯನ್ನು ಕಲಾವಿದೆ ಪರಿಪೂರ್ಣವಾಗಿ ಅಭಿವ್ಯಕ್ತಪಡಿಸಿದರು. ಪುರಂದರದಾಸರ ಕೃತಿ ಜಗದೋದ್ಧಾರನ ಆಡಿಸಿದಳೆಶೋದೆ ಮೂಲಕ ವಿಸ್ಮಯ, ಭಕ್ತಿ ಮುಂತಾದ ಹಲವು ಭಾವಗಳನ್ನು ನಿರ್ವಹಿಸಿ ಪ್ರೇಕ್ಷಕರನ್ನು ಮೂಕವಿಸ್ಮಿತಗೊಳಿಸಿದರು. ವಿಠಲನನ್ನು ಸ್ತುತಿಸುವ ಬೃಂದಾವನಿ ವೇಣು ಅಭಂಗ್ ಪ್ರಸ್ತುತ ಪಡಿಸಿದ್ದು ವಿಶೇಷವಾಗಿತ್ತು. ಭರತನಾಟ್ಯದ ಕೊನೆಯ ಭಾಗ ತಿಲ್ಲಾನ ಮತ್ತು ಮಂಗಳದೊಂದಿಗೆ ಕಾರ್ಯಕ್ರಮ ಮುಕ್ತಾಯವಾಯಿತು. ಉದಯ ಕುಮಾರ್ (ನಟುವಾಂಗ), ವಿದ್ವಾನ್ ಶ್ರೀವತ್ಸ (ಹಾಡುಗಾರಿಕೆ), ವಿದ್ವಾನ್ ಗುರುಮೂರ್ತಿ (ಮೃದಂಗ), ವಿದ್ವಾನ್ ಶಂಕರ್ ರಾಮನ್ (ವೀಣೆ), ವಿದ್ವಾನ್ ಭಾರ್ಗವ ಹಾಲಂಬಿ (ರಿದಮ್ ಪ್ಯಾಡ್), ವಿದ್ವಾನ್ ಕಾರ್ತಿಕ್ (ಕೊಳಲು) ಉತ್ತಮ ಸಹಕಾರ ನೀಡಿದರು.

Read More

ಮಂಗಳೂರು : ಮಂಗಳೂರಿನ ಕುದ್ಮುಲ್ ರಂಗರಾವ್ ಸಭಾಂಗಣ ಪುರಭವನದಲ್ಲಿ ದಿನಾಂಕ 23-03-2024 ಮತ್ತು 24-03-2024ರಂದು ನಡೆಯಲಿರುವ 26ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಹೊಸ ಪುಸ್ತಕಗಳ ಬಿಡುಗಡೆಗೆ ಅವಕಾಶವಿದೆ. ಪುಸ್ತಕ ಬಿಡುಗಡೆ ಮಾಡಲಿಚ್ಛಿಸುವವರು ದಿನಾಂಕ 31-01-2024ರ ಒಳಗೆ ಕೃತಿಯ ವಿವರಗಳೊಂದಿಗೆ ದೂರವಾಣಿ ಮೂಲಕ ಹೆಸರನ್ನು ವಿನಯ ಆಚಾರ್ಯ ಎಚ್. ಗೌರವ ಕಾರ್ಯದರ್ಶಿ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು 9008851030 ಇವರಲ್ಲಿ ನೋಂದಣಿ ಮಾಡಬಹುದು ಎಂದು ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಎಂ.ಪಿ. ಶ್ರೀನಾಥ ತಿಳಿಸಿದ್ದಾರೆ.

Read More

ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ದಿನಾಂಕ 25-01-2024ರಂದು ನಡದ ಕುಮಾರ ವ್ಯಾಸ ಜಯಂತಿ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿಯವರು ಮಾತನಾಡುತ್ತಾ “ಕನ್ನಡದ ಅತ್ಯುನ್ನತ ಕವಿಗಳಲ್ಲಿ ಒಬ್ಬರಾದ ಕುಮಾರವ್ಯಾಸನ ಮೂಲ ಹೆಸರು ನಾರಣಪ್ಪ. ‘ಗದುಗಿನ ನಾರಣಪ್ಪ’ ಎಂದು ಸಾಮಾನ್ಯವಾಗಿ ಕುಮಾರವ್ಯಾಸನನ್ನು ಗುರುತಿಸಲಾಗುತ್ತದೆ. ಈತನ ಕಾವ್ಯನಾಮ ಕುಮಾರವ್ಯಾಸ. ವ್ಯಾಸ ಮಹಾಕವಿಯ ಸಂಸ್ಕೃತ ಮಹಾಭಾರತದ ಅತ್ಯದ್ಭುತ ಕನ್ನಡ ರೂಪವನ್ನು ರಚಿಸಿದ್ದರಿಂದ, ವ್ಯಾಸ ಮಹಾಕವಿಯ ಮಾನಸಪುತ್ರ ತಾನೆನ್ನುವ ವಿನೀತ ಭಾವದಿಂದ ನಾರಣಪ್ಪ ಕುಮಾರ ವ್ಯಾಸನಾಗಿದ್ದಾನೆ. ಕುವೆಂಪು ‘ಕುಮಾರ ವ್ಯಾಸ ಯುಗ’ವೆಂದು ಕರೆದಿದ್ದು ಅದು ರೂಪಿಸಿದ ಪರಂಪರೆಯ ಹಿನ್ನೆಲೆಯಲ್ಲಿ ಎಂದು ಅಭಿಪ್ರಾಯಪಟ್ಟರು. “ಸಂಪೂರ್ಣ ಕಾವ್ಯ ಭಾಮಿನೀ ಷಟ್ಪದಿ ಛಂದಸ್ಸಿನಲ್ಲಿ ರಚಿತವಾಗಿದ್ದು ಕುಮಾರವ್ಯಾಸನ ಕಾವ್ಯ ಪ್ರತಿಭೆ ಓದುಗರನ್ನು ದಂಗುಬಡಿಸುತ್ತದೆ. ಅವನ ಕಾವ್ಯಪ್ರತಿಭೆ ಪೂರ್ಣಶಕ್ತಿಯಲ್ಲಿ ಹೊರಹೊಮ್ಮುವುದು ಅವನ ರೂಪಕಗಳಲ್ಲಿ. ಕುಮಾರವ್ಯಾಸನ ರೂಪಕಗಳ ವೈವಿಧ್ಯತೆ ಮತ್ತು ಆಳ ಅಪಾರವಾದದ್ದು. ಇದೇ ಕಾರಣಕ್ಕಾಗಿ ಕುಮಾರವ್ಯಾಸ ರೂಪಕ ಸಾಮ್ರಾಜ್ಯದ ಚಕ್ರವರ್ತಿ ಎಂದೇ ಖ್ಯಾತಿ ಪಡೆದಿದ್ದಾರೆ. ರೂಪಕಗಳೊಂದಿಗೆ ಕುಮಾರವ್ಯಾಸನ…

Read More

ಸಾಲಿಗ್ರಾಮ : ಬೆಂಗಳೂರಿನ ಸಮಸ್ತರು ರಾಗ ಸಂಶೋಧನಾ ಕೇಂದ್ರ ಪ್ರಸ್ತುತ ಪಡಿಸುವ ದೇಶಿ ಖ್ಯಾತಿಯ ರಂಗ ನಿರ್ದೇಶಕ, ಸಾಂಸ್ಕೃತಿಕ ಸಂಘಟಕ ಗೋಪಾಲಕೃಷ್ಣ ನಾಯರಿಯವರ ಪ್ರಥಮ ವರ್ಷದ ‘ಸಂಸ್ಮರಣೆ ಕಾರ್ಯಕ್ರಮ’ವು ದಿನಾಂಕ 28-01-2024 ಸಂಜೆ ಗಂಟೆ 5-00ಕ್ಕೆ ಸಾಲಿಗ್ರಾಮದ ಗುಂಡ್ಮಿಯ ಸದಾನಂದ ರಂಗಮಂಟಪದಲ್ಲಿ ನಡೆಯಲಿದೆ. ಐರೊಡಿ ಹಂಗಾರಕಟ್ಟೆಯ ಯಕ್ಷಗಾನ ಕಲಾಕೇಂದ್ರದ ಅಧ್ಯಕ್ಷರಾದ ಶ್ರೀ ಆನಂದ್ ಸಿ. ಕುಂದರ್ ಅಧ್ಯಕ್ಷತೆ ವಹಿಸಲಿದ್ದು, ಉಡುಪಿಯ ರಂಗಕರ್ಮಿ, ರಂಗ ನಿರ್ದೇಶಕರಾದ ಶ್ರೀ ಉದ್ಯಾವರ ನಾಗೇಶ್ ಕುಮಾರ್ ಇವರು ಸಂಸ್ಮರಣಾ ಮಾತುಗಳನ್ನಾಡಲಿದ್ದಾರೆ. ಇದೇ ಸಂದರ್ಭದಲ್ಲಿ ಹಿರಿಯ ರಂಗಭೂಮಿ ಕಲಾವಿದರು ಹಾಗೂ ನಿರ್ದೇಶಕರಾದ ಶ್ರೀ ಜಯರಾಮ್ ನೀಲಾವರ ಇವರಿಗೆ 2024ರ ಗೌರವ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಬೇಬಿ ಸಾನಿಧ್ಯ ನಾಯರಿ, ಕುಮಾರ ನೂತನ ಎಂ. ನಾಯರಿ, ಕುಮಾರಿ ಸಮೀಕ್ಷಾ, ಕುಮಾರಿ ಉನ್ನತಿ ಎಮ್. ನಾಯರಿ ಮತ್ತು ಕುಮಾರಿ ವೈಷ್ಣವಿ ಎನ್. ಇವರಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಬೆಂಗಳೂರಿನ ಯಕ್ಷ ಕಲಾ ಅಕಾಡೆಮಿಯವರಿಂದ ಪ್ರೊ. ಎಂ.ಎ. ಹೆಗಡೆ ರಚಿತ ಯಕ್ಷಗಾನ ‘ಲವ…

Read More

ಮಂಗಳೂರು : ದೇಶದ ನಾನಾ ಪ್ರತಿಷ್ಠಿತ ವೇದಿಕೆಗಳಲ್ಲಿ ಯಶಸ್ವಿಯಾಗಿ ನಡೆದ ‘ಉತ್ತರ್- ದಕ್ಷಿಣ್’ ಸರಣಿ ಸಂಗೀತ ಕಾರ್ಯಕ್ರಮವನ್ನು ದಿನಾಂಕ 28-01-2024ರಂದು ಸಂಜೆ 5.30ಕ್ಕೆ ಹಂಪನಕಟ್ಟೆಯಲ್ಲಿರುವ ಮಂಗಳೂರು ವಿಶ್ವವಿದ್ಯಾನಿಲಯದ ರವೀಂದ್ರ ಕಲಾ ಭವನದಲ್ಲಿ ಆಯೋಜಿಸಲಾಗಿದೆ. ನಗರದ ಪ್ರತಿಷ್ಠಿತ ಸಂಗೀತ ಭಾರತಿ ಪ್ರತಿಷ್ಠಾನದ ಸಹಯೋಗದೊಂದಿಗೆ ನಡೆಯುವ ಈ ಕಾರ್ಯಕ್ರಮವನ್ನು ಮುಂಬೈನ ವಿವಿದ್ ಆರ್ಟ್ಸ್ ಆ್ಯಂಡ್ ಎಂಟರ್‌ಟೈನ್‌ಮೆಂಟ್ ಪ್ರಸ್ತುತ ಪಡಿಸುತ್ತಿದ್ದು, 12 ವರ್ಷಗಳಿಂದ ನಡೆಯುತ್ತಿರುವ ಈ ಶಾಸ್ತ್ರೀಯ ಸಂಗೀತ ಕಾರ್ಯಕ್ರಮವು ಸಂಗೀತ ಪ್ರಿಯರಿಗೆ ಅಚ್ಚುಮೆಚ್ಚಿನ ಕಚೇರಿಗಳಲ್ಲಿ ಒಂದಾಗಿದೆ. ಇದು ಉತ್ತರಾದಿ ಮತ್ತು ದಕ್ಷಿಣಾದಿ ಹೀಗೆ ಎರಡು ರೀತಿಯ ಸಂಗೀತದೊಂದಿಗೆ ಪ್ರಾದೇಶಿಕ ಸಾಮರಸ್ಯಕ್ಕೆ ಕೊಡುಗೆ ನೀಡುತ್ತದೆ. ಮುಂಬೈ, ದೆಹಲಿ, ಹೈದರಾಬಾದ್, ಬೆಂಗಳೂರು, ರಾಂಚಿ ಮತ್ತು ಈಗ ಮಂಗಳೂರಿನಲ್ಲಿ 13ನೇ ಆವೃತ್ತಿಯ ಸಂಗೀತ ಕಚೇರಿಯನ್ನು ಆಯೋಜಿಸಲಾಗಿದೆ. ಉತ್ಕೃಷ್ಟ ಮಟ್ಟದ ಈ ಕಾರ್ಯಕ್ರಮಕ್ಕೆ ಉಚಿತ ಪ್ರವೇಶ ಇದ್ದು, ಉತ್ತರಾದಿ ಹಾಗೂ ದಕ್ಷಿಣಾದಿ ವಿಭಾಗದ ಸಂಗೀತಪ್ರಿಯರಿಗೆ ಇದೊಂದು ರಸದೌತಣವಾಗಲಿದೆ. ವರ್ಣರಂಜಿತ ಹಿನ್ನಲೆ, ಕಲಾವಿದರ ಕೌಶಲ್ಯ, ಬೆಳಕು, ಧ್ವನಿ ಮತ್ತು ಸಂಗೀತ ಸಭಾಂಗಣದಲ್ಲಿ…

Read More

ಮೈಸೂರು : ರಂಗಾಂತರಂಗ ಮೈಸೂರು (ರಿ) ಮತ್ತು ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆ ಗಾಂಧಿನಗರ ಮೈಸೂರು ಇವರ ವತಿಯಿಂದ ‘ಮಕ್ಕಳ ರಂಗ ತರಬೇತಿ’ ಉದ್ಘಾಟನಾ ಸಮಾರಂಭವು ದಿನಾಂಕ 28-01-2024ರಂದು ಸಂಜೆ 4.30ಕ್ಕೆ ಗಾಂಧಿನಗರದ ಹರಳಯ್ಯ ರಂಗಮಂದಿರದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಬೆಂಗಳೂರು ಸಮಾಜ ಕಲ್ಯಾಣ ಇಲಾಖೆ ಅಂಬೇಡ್ಕರ್ ಸಂಶೋಧನಾ ಸಂಸ್ಥೆಯ ಸಲಹೆಗಾರರಾದ ಬಸವರಾಜ್ ದೇವನೂರು, ಮೈಸೂರಿನ ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿಗಳಾದ ಎನ್. ಮುನಿರಾಜು, ಮೈಸೂರಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ಎಮ್.ಡಿ. ಸುದರ್ಶನ್, ಬೆಂಗಳೂರು ಸಮಾಜ ಕಲ್ಯಾಣ ಇಲಾಖೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಸಲಹೆಗಾರರಾದ ಡಾ. ಎಸ್. ತುಕರಾಮ್, ಮೈಸೂರು ತಾಲೂಕು ಮತ್ತು ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರಾದ ಸಿದ್ದಲಿಂಗು ಕೆ. ಮತ್ತು ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ ಮುಖ್ಯೋಪಾಧ್ಯಾಯರಾದ ಪ್ರದೀಪ್ ಎಮ್. ನಮ್ಮೊಂದಿಗೆ ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ…

Read More

ಬಂಟ್ವಾಳ : ತೆಂಕುತಿಟ್ಟಿನ ಪರಂಪರೆಯ ಪ್ರಾತಿನಿಧಿಕ ಯಕ್ಷಗಾನ ಕಲಾವಿದ ಪೆರುವಾಯಿ ನಾರಾಯಣ ಶೆಟ್ಟಿ (82) ದಿನಾಂಕ 24-01-2024ರಂದು ಬಂಟ್ವಾಳ ತಾಲೂಕಿನ ಪೆರುವಾಯಿಯಲ್ಲಿ ನಿಧನರಾದರು. ಅಳಿಕೆ ರಾಮಯ್ಯ ರೈಯವರಲ್ಲಿ ಯಕ್ಷಗಾನ ಅಭ್ಯಾಸ ಮಾಡಿ 12ರ ಹರೆಯದಲ್ಲಿ ಯಕ್ಷಗಾನ ರಂಗ ಪ್ರವೇಶಿಸಿದ ಇವರು ಇರಾ, ಧರ್ಮಸ್ಥಳ, ಕಟೀಲು, ಬಪ್ಪನಾಡು, ಕದ್ರಿ, ಪುತ್ತೂರು ಮೇಳಗಳಲ್ಲಿ ಸುಮಾರು ಆರು ದಶಕಗಳ ಕಲಾಸೇವೆಗೈದಿರುತ್ತಾರೆ. ರಕ್ತಬೀಜ, ಹಿರಣ್ಯಕಶಿಪು, ಕಂಸ, ಋತುಪರ್ಣ, ಹನುಮಂತ ಮೊದಲಾದ ಪೌರಾಣಿಕ ಪಾತ್ರಗಳಲ್ಲಿ ಪ್ರಸಿದ್ಧಿ ಪಡೆದಿದ್ದರು. ತುಳು ಪ್ರಸಂಗದಲ್ಲಿಯೂ ತಮ್ಮದೇ ಆದ ಛಾಪನ್ನು ಮೂಡಿಸುವುದರೊಂದಿಗೆ ತಾಳ ಮದ್ದಲೆ, ಅರ್ಥಧಾರಿಯಾಗಿಯೂ ಭಾಗವಹಿಸುತ್ತಿದ್ದರು. ಇವರು ಪತ್ನಿ, ಮೂವರು ಪುತ್ರರು, ಇಬ್ಬರು ಪುತ್ರಿಯರನ್ನು ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ. 2009ರಲ್ಲಿ ಯಕ್ಷಗಾನ ಕಲಾರಂಗವು ಇವರಿಗೆ ಪ್ರಶಸ್ತಿ ನೀಡಿ ಗೌರವಿಸಿತ್ತು.

Read More

ಮಂಗಳೂರು : ಕರ್ನಾಟಕ ಕೊಂಕಣಿ ಭಾಷಾ ಮಂಡಳ್ ಇದರ ಸುವರ್ಣ ಮಹೋತ್ಸವದ ಸಮಾರೋಪ ಹಾಗೂ ಕೊಂಕಣಿ ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭ ‘ಭಾಂಗಾರೋತ್ಸವ್’ವು ಕುದ್ಮುಲ್ ರಂಗರಾವ್ ಪುರಭವನದಲ್ಲಿ ದಿನಾಂಕ 09-01-2024ರಂದು ನಡೆಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬೆಂಗಳೂರಿನ ಕರ್ನಾಟಕ ಲೋಕ ಸೇವಾ ಆಯೋಗದ ಸದಸ್ಯ ರೊನಾಲ್ಡ್ ಫೆರ್ನಾಂಡಿಸ್‌ ಇವರು “ಕೊಂಕಣಿ ಭಾಷೆಗೆ ಅದರದ್ದೇ ಆದ ಸ್ಥಾನಮಾನವಿದೆ. ತನ್ನದೇ ವ್ಯಾಪ್ತಿಯನ್ನು ಒಳಗೊಂಡಿದೆ. ಕೊಂಕಣಿ ಉಳಿವಿಗೆ ಅನೇಕರು ಶ್ರಮಿಸಿದ್ದಾರೆ. ಕರಾವಳಿಯ ಕೊಂಕಣಿ ಭಾಷಿಗರು ದೇಶಕ್ಕಾಗಿ ಸೇವೆ ಸಲ್ಲಿಸಿರುವುದು ಅವಿಸ್ಮರಣೀಯ. ಕೊಂಕಣಿ ಭಾಷೆ ಎಲ್ಲಿಯೂ ಬಂಧಿಯಾಗಿಲ್ಲ. ಕೊಂಕಣಿ ಮಾತನಾಡುವ ಜನರಿಂದ ಭಾಷೆ ಬೆಳೆಯುತ್ತಿದೆ. ಸಾಹಿತಿಗಳೊಂದಿಗೆ ಓದುಗರ ಪಾತ್ರವೂ ಕೊಂಕಣಿಗೆ ಮಹತ್ವದ್ದಾಗಿದೆ. ಸಂಘಟನೆ, ಸರಕಾರದ ಪ್ರೋತ್ಸಾಹವು ಸಾಹಿತ್ಯ ಭಾಷೆಯ ಬೆಳವಣಿಗೆ ಪೂರಕವಾಗಿವೆ. ಮುಂದೆಯೂ ಭಾಷೆಯ ಬೆಳವಣಿಗೆಗೆ ಎಲ್ಲರೂ ಕೈಜೋಡಿಸಬೇಕು” ಎಂದು ಹೇಳಿದರು. ಕೊಂಕಣಿ ಭಾಷಾ ಮಂಡಳ್‌ನ ಸ್ಥಾಪಕ ಖಜಾಂಚಿ ವಂದನೀಯ ಮಾರ್ಕ್ ವಾಲ್ಟರ್ ಮಾತನಾಡಿ ಭಾಷಾ ಮಂಡಳ್ ಇದರ ಆರಂಭದ ದಿನಗಳನ್ನು ನೆನಪಿಸಿಕೊಂಡರು. “ಕೊಂಕಣಿ ಭಾಷೆ ಉಳಿವಿಗಾಗಿ…

Read More

ಕಾಸರಗೋಡು: ರಂಗಚಿನ್ನಾರಿಯ ಸಂಗೀತ ಘಟಕ ‘ಸ್ವರ ಚಿನ್ನಾರಿ’ಯ ಐದನೇ ಸರಣಿ ಕಾರ್ಯಕ್ರಮ ‘ಕನ್ನಡ ಧ್ವನಿ’ ಕನ್ನಡ ನಾಡಗೀತೆ ಭಾವಗೀತೆಗಳ ಕಲಿಕಾ ಶಿಬಿರವು ದಿನಾಂಕ 23-01-2024ನೇ ಮಂಗಳವಾರ ಮಹಾಜನ ಸಂಸ್ಕೃತ ಕಾಲೇಜು ನೀರ್ಚಾಲು ಇಲ್ಲಿ ಪ್ರೌಢ ಶಾಲಾ ಮಕ್ಕಳಿಗಾಗಿ ಏರ್ಪಡಿಸಲಾಗಿತ್ತು. ಕಾರ್ಯಕ್ರಮವನ್ನು ದೀಪ ಬೆಳಗಿ ಉದ್ಘಾಟಿಸಿದ ಶಾಲಾ ಮ್ಯಾನೇಜರ್ ಶ್ರೀ ಜಯದೇವ ಖಂಡಿಗೆ ಮಾತನಾಡಿ “ರಂಗಚಿನ್ನಾರಿ ಸಂಸ್ಥೆಯ ಕನ್ನಡದ ಕಾರ್ಯಗಳು ಪ್ರಶಂಸನೀಯ. ಹಾಡನ್ನು ಕಲಿಯುವ ಮಕ್ಕಳು ಮುಂದೆ ಉತ್ತಮ ಕಲಾವಿದರಾಗಲಿ.” ಎಂದು ಹಾರೈಸಿದರು. ಪ್ರಾಸ್ತವಿಕವಾಗಿ ಮಾತನಾಡಿದ ರಂಗಚಿನ್ನಾರಿಯ ನಿರ್ದೇಶಕರಲ್ಲಿ ಒಬ್ಬರಾದ ಶ್ರೀ ಸತೀಶ್ಚಂದ್ರ ಭಂಡಾರಿ “ಪಾಠ ಪುಸ್ತಕಗಳಿಂದ ಕಲಿಯುವ ವಿದ್ಯೆಗೆ ಎಷ್ಟು ಉತ್ತೇಜನ ಕೊಡುತ್ತೇವೋ ಅದರ ಜೊತೆ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಹಾಡು, ನೃತ್ಯ, ಚಿತ್ರಕಲೆ ಹಾಗೂ ಯೋಗ ಮುಂತಾದವುಗಳಿಗೂ ಪ್ರಾಶಸ್ತ್ಯ ಕೊಡುವುದರಿಂದ ಮುಂದೆ ಸಮಾಜದಲ್ಲಿ ಉನ್ನತ ಸ್ಥಾನದಲ್ಲಿ ತಮ್ಮನ್ನು ತಾವು ನೋಡಿಕೊಳ್ಳಬಹುದು. ಕನ್ನಡ ನಮ್ಮೆಲ್ಲರ ಮಾತೃಭಾಷೆ ಆದ್ದರಿಂದ ಅದನ್ನು ಉಳಿಸಿ ಬೆಳೆಸಲು ಕಾಸರಗೋಡಿನ ಕನ್ನಡ ವಿದ್ಯಾರ್ಥಿಗಳಿಗೆ ಇಂತಹ ಕಲಿಕಾ ಶಿಬಿರಗಳು ಅನಿವಾರ್ಯವಾಗಿವೆ.”…

Read More

ಮುಡಿಪು : ಅಮ್ಮೆಂಬಳ ಶಂಕರನಾರಾಯಣ ನಾವಡ ಸಾಹಿತ್ಯ ಪ್ರತಿಷ್ಠಾನ ಇದರ ವತಿಯಿಂದ ಮಂಗಳೂರು ವಿವಿಯ ಎಸ್.ವಿ.ಪಿ. ಕನ್ನಡ ಅಧ್ಯಯನ ಸಂಸ್ಥೆಯ ಸಹಯೋಗದೊಂದಿಗೆ ದಿನಾಂಕ 24-01-2024ರಂದು ಹಿರಿಯ ಸಾಹಿತಿಗಳಾದ ಡಾ. ಹಿ.ಚಿ. ಬೋರಲಿಂಗಯ್ಯ, ಡಾ. ಬಸವರಾಜ ಕಲ್ಗುಡಿ, ಡಾ. ಪಾದೆಕಲ್ಲು ವಿಷ್ಣುಭಟ್, ಡಾ. ಬಿ. ಜನಾರ್ದನ ಭಟ್ ಅವರಿಗೆ ‘ಅಮ್ಮೆಂಬಳ ಸಾಹಿತ್ಯ ಪ್ರಶಸ್ತಿ’ ಪ್ರದಾನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಿದ ಕರ್ಣಾಟಕ ಬ್ಯಾಂಕಿನ ಮಾಜಿ ನಿರ್ದೇಶಕರು, ಕಾರ್ಯನಿರ್ವಹಣಾಧಿಕಾರಿ ಡಾ. ಮಹಾಬಲೇಶ್ವರ ಎಂ.ಎಸ್. ಮಾತನಾಡುತ್ತಾ “ಕನ್ನಡ ಪರ, ಕನ್ನಡ‌ ಸಾಹಿತ್ಯದ ಕೆಲಸ ಮಾಡುವವರಿಗೆ ಆತ್ಮಸ್ಥೈರ್ಯವನ್ನು ತುಂಬಿ ಹುರುಪು ನೀಡುವ ಕಾರ್ಯ ನಿರಂತರವಾಗಿ ನಡೆಯಬೇಕು. ಕನ್ನಡ ಭಾಷೆ‌ ಎಂಟು ಜ್ಞಾನ ಪೀಠ ಪ್ರಶಸ್ತಿಗಳನ್ನು ತಂದುಕೊಟ್ಟಿರುವುದು ಕನ್ನಡದ ಶಕ್ತಿಯಾಗಿದೆ. ಅಮ್ಮೆಂಬಳ ಶಂಕರನಾರಾಯಣ ನಾವಡ ಸಾಹಿತ್ಯ ಪ್ರತಿಷ್ಠಾನವು ಕನ್ನಡದ ವಿದ್ವಾಂಸರನ್ನು, ಸಾಹಿತಿಗಳನ್ನು ಗುರುತಿಸಿ ಈ ಪ್ರಶಸ್ತಿ ನೀಡಿ ಗೌರವಿಸಿರುವುದು ಪ್ರಶಸ್ತಿಯ ಹಿರಿಮೆ ಗರಿಮೆಯನ್ನು ಹೆಚ್ಚಿಸಿದೆ. ಕನ್ನಡ ನೆಲ ಜಲ ಸೇರಿದಂತೆ ಕನ್ನಡ‌ ಭಾಷೆಯ ಸಂರಕ್ಷಣೆಗಾಗಿ…

Read More