Subscribe to Updates
Get the latest creative news from FooBar about art, design and business.
Author: roovari
ಕೊಡಿಯಾಲಬೈಲ್ : ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ಮತ್ತು ಸಂತ ಅಲೋಶಿಯಸ್ ರಂಗ ಅಧ್ಯಯನ ಕೇಂದ್ರ ಕನ್ನಡ ವಿಭಾಗ ಸಹಯೋಗದಲ್ಲಿ ಶಶಿರಾಜ್ ರಾವ್ ಕಾವೂರು ಬರೆದ ‘ಪರಶುರಾಮ’ ಮತ್ತು ‘ಛತ್ರಪತಿ ಶಿವಾಜಿ’ ನಾಟಕ ಕೃತಿಗಳು ಸಂತ ಅಲೋಶಿಯಸ್ ಕಾಲೇಜಿನ ಎಲ್.ಎಫ್. ರಸ್ಕಿನ್ಹಾ ಸಭಾಂಗಣದಲ್ಲಿ ದಿನಾಂಕ 14-02-2024ರಂದು ಲೋಕಾರ್ಪಣೆಗೊಂಡವು. ಕೃತಿಗಳನ್ನು ಲೋಕಾರ್ಪಣೆಗೊಳಿಸಿದ ನಿಡಸೋಸಿಯ ಶ್ರೀ ಜಗದ್ಗುರು ದುರದುಂಡೇಶ್ವರ ಮಠದ ಶ್ರೀ ನಿಜಲಿಂಗೇಶ್ವರ ಸ್ವಾಮೀಜಿ “ಪುಸ್ತಕಗಳಿಗಿಂತಲೂ ನಾಟಕ ಸಮಾಜದ ಮೇಲೆ ವಿಶೇಷ ಪ್ರಭಾವ ಬೀರುತ್ತದೆ ಮತ್ತು ಆತಂಕ ದೂರ ಮಾಡಿ ಸಮಾಜ ಜಾಗೃತಗೊಳಿಸುತ್ತದೆ. ಪರಶುರಾಮ ಹಾಗೂ ಶಿವಾಜಿ ವೀರ ಪುರುಷರಾಗಿದ್ದು, ಅಂತಹವರ ಜೀವನದ ಕುರಿತ ನಾಟಕಗಳು ಇಂದಿಗೆ ಪ್ರಸ್ತುತ” ಎಂದು ಹೇಳಿದರು. ಹಂಪಿ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಡಾ. ಬಿ.ಎ. ವಿವೇಕ ರೈ ಮಾತನಾಡಿ, “ಕರಾವಳಿ ಸಾಹಿತ್ಯಕ್ಕೆ ವಿಶೇಷ ಕೊಡುಗೆ ನೀಡಿದೆ. ಅನೇಕ ಕೃತಿಗಳನ್ನು ಕರಾವಳಿಯಲ್ಲಿ ಪ್ರಕಟಗೊಳಿಸಲಾಗಿದೆ. ಇಂದಿನ ದಿನದಲ್ಲಿ ಪುಸ್ತಕ ಪ್ರಕಟಿಸುವುದು ಕ್ಲಿಷ್ಟಕರವಾಗಿದ್ದು, ಓದುಗರು, ಕೃತಿಕಾರರು ಹಾಗೂ ಪ್ರಕಟಕರು ಜತೆಯಾಗಿ ಕಾರ್ಯ ನಿರ್ವಹಿಸಿದ್ದಲ್ಲಿ ಇದನ್ನು…
ಬಂಟ್ವಾಳ : ಶ್ರೀ ಒಡಿಯೂರು ರಥೋತ್ಸವದಲ್ಲಿ ‘ಶ್ರೀರಾಮ ತುಳು ಸಾಹಿತ್ಯ ಸಮ್ಮೇಳನ’ವು ದಿನಾಂಕ 18-02-2024 ಮತ್ತು 19-02-2024ರಂದು ಶ್ರೀ ಒಡಿಯೂರು ಕ್ಷೇತ್ರದಲ್ಲಿ ನಡೆಯಲಿದೆ. ದಿನಾಂಕ 18-02-2024ರಂದು ಸಾಹಿತಿ ಯಕ್ಷಗಾನ ಕಲಾವಿದರಾದ ಡಾ. ಭಾಸ್ಕರಾನಂದ ಕುಮಾರ್ ಕಟೀಲು ಇವರ ಅಧ್ಯಕ್ಷತೆಯಲ್ಲಿ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಯವರು 24ನೇ ತುಳು ಸಾಹಿತ್ಯ ಸಮ್ಮೇಳನದ ಉದ್ಘಾಟನೆ ಮಾಡಲಿರುವರು. ಇದೇ ಸಂದರ್ಭದಲ್ಲಿ ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿಯವರು ತುಳು ಲಿಪಿಯಲ್ಲಿ ಬರೆದ ಅಧ್ಯಾತ್ಮ ರಾಮಾಯಣದ ‘ಸುಂದರಕಾಂಡ’ ಮತ್ತು ಡಾ. ವಸಂತಕುಮಾರ ಪೆರ್ಲ ಅವರು ಬರೆದ ಸಾಹಿತ್ಯ ಮತ್ತು ಸಂಸ್ಕೃತಿ ಕುರಿತ ತುಳು ಲೇಖನಗಳ ಸಂಕಲನ ‘ತೂಪರಿಕೆ’ ಬಿಡುಗಡೆಯಾಗಲಿವೆ. ಕಲಬುರ್ಗಿಯ ಕೇಂದ್ರೀಯ ವಿಶ್ವವಿದ್ಯನಿಲಯದ ಸಹಾಯಕ ಉಪನ್ಯಾಸಕರಾದ ಡಾ. ರಾಜಶ್ರೀ ಶೆಟ್ಟಿ, ಪುತ್ತೂರಿನ ವಿವೇಕಾನಂದ ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥರಾದ ಡಾ. ಶ್ರೀಶಕುಮಾರ ಎಂ.ಕೆ. ಹಾಗೂ ದೈವನರ್ತಕರಾದ ಡಾ. ರವೀಶ್ ಪಡುಮಲೆ ಇವರಿಂದ ರಾಮಾಯಣದ ಬಗ್ಗೆ ವಿಮರ್ಶೆ, ಮಧ್ಯಾಹ್ನ 1-00 ಗಂಟೆಗೆ ಚುಟುಕು ಕವಿಗೋಷ್ಠಿ ಮತ್ತು ಕವಿಗೋಷ್ಠಿ ನಡೆಯಲಿದೆ.…
ಉಡುಪಿ : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಸಹಯೋಗದಲ್ಲಿ ಉಡುಪಿ ಜಿಲ್ಲೆಯ ಯುವ ಸಾಹಿತಿಗಳಿಗಾಗಿ ಸಾಹಿತಿ, ಕವಿ ದಿವಂಗತ ಮೇಟಿ ಮುದಿಯಪ್ಪ ನೆನಪಿನ ಜಿಲ್ಲಾಮಟ್ಟದ ‘ಯುವ ಕಥಾ ಸ್ಪರ್ಧೆ-2024’ಯನ್ನು ಆಯೋಜಿಸಲಾಗಿದೆ. ಸ್ಪರ್ಧಾಳು ಕೇವಲ ಒಂದು ಕಥೆಯನ್ನು ಮಾತ್ರ ಕಳುಹಿಸಬಹುದು. ಕಥೆಯು ಕನಿಷ್ಟ ಒಂದು ಸಾವಿರದಿಂದ ಗರಿಷ್ಟ ಒಂದು ಸಾವಿರದ ಐನೂರು ಪದಗಳಿಗೆ ಮೀರಿರಬಾರದು. 18 ರಿಂದ 35 ವಯೋಮಿತಿಯ ಉಡುಪಿ ಜಿಲ್ಲೆಯ ಯುವಕ ಯುವತಿಯರು ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಯಾವುದೇ ಪ್ರಕಾರದ ಕಥೆಗಳಿಗೆ ಅವಕಾಶವಿದೆ. ಸ್ಪರ್ಧಿಯು ಕಳುಹಿಸುವ ಕಥೆಯು ಯಾವುದೇ ಸ್ಪರ್ಧೆಯಲ್ಲಿ ಸ್ಪರ್ಧಿಸಿರಬಾರದು ಹಾಗೂ ಪ್ರಕಟಣೆಗೊಂಡಿರಬಾರದು. ಕಥೆ ಕಳುಹಿಸಲು ಕೊನೆಯ ದಿನಾಂಕ 30-03-2024. ಸ್ಪರ್ಧೆಯ ಪ್ರಥಮ ಮತ್ತು ದ್ವಿತೀಯ ಸ್ಥಾನಿಗಳಿಗೆ ನಗದು ಬಹುಮಾನ ತಲಾ ರೂ.5000/- ಹಾಗೂ 3000/- ದ ಜೊತೆಗೆ ಪ್ರಶಸ್ತಿ ಪತ್ರ ಹಾಗೂ ಪುಸ್ತಕ ಬಹುಮಾನ ನೀಡಲಾಗುವುದು. ಮೂರು ಮೆಚ್ಚುಗೆ ಪಡೆದ ಕಥೆಗಳಿಗೆ ಪ್ರಶಸ್ತಿ ಪತ್ರದ ಜೊತೆ ಮೇಟಿ ಮುದಿಯಪ್ಪರ ಕೃತಿ ಸೇರಿ…
ಬೆಂಗಳೂರು : 2023ರ ಕನ್ನಡ ಸಾಹಿತ್ಯ ಪರಿಷತ್ತಿನ ‘ಸತ್ಯವತಿ ವಿಜಯರಾಘವ ಚಾರಿಟಬಲ್ ಟ್ರಸ್ಟ್’ ದತ್ತಿ ಪ್ರಶಸ್ತಿಗೆ ಕೊಡಗು ಜಿಲ್ಲೆಯ ಕುಶಾಲ ನಗರದ ಬರಹಗಾರರಾದ ಹಂಚೆಟ್ಟರ ಫ್ರಾನ್ಸಿ ಮುತ್ತಣ್ಣ ಮತ್ತು ಕೋಲಾರ ಜಿಲ್ಲೆಯ ಡಾ. ಅಮರೇಂದ್ರ ಹೊಲ್ಲಂಬಳ್ಳಿಯವರು ಆಯ್ಕೆಯಾಗಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿಯವರ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಮಿತಿಯು ದತ್ತಿಯ ನಿಯಮಗಳನ್ನು ಪರಿಶೀಲಿಸಿ ಈ ಆಯ್ಕೆಯನ್ನು ಮಾಡಿದೆ. ಕನ್ನಡಿಗರೆಲ್ಲರ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತಿನ ಮೇಲಿನ ಅಪಾರವಾದ ಗೌರವದಿಂದ ಡಾ. ಎ. ಪುಷ್ಪಾ ಅಯ್ಯಂಗಾರ್, ಮೈಸೂರು ಅವರು ಈ ದತ್ತಿಯನ್ನು ಸ್ಥಾಪಿಸಿದ್ದು ಕನ್ನಡ ನಾಡು-ನುಡಿ, ನೆಲ, ಜಲ ಕುರಿತ ಚಿಂತಕರು, ಕೃತಿ ರಚನೆಕಾರರು, ಕನ್ನಡ ಪರ ಹೋರಾಟಗಾರರು ಅಥವಾ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಅನುಪಮ ಸೇವೆ ಸಲ್ಲಿಸಿದವರಿಗೆ ಈ ಪುರಸ್ಕಾರವನ್ನು ನೀಡಲಾಗುವುದು. 2023ರ ದತ್ತಿ ಪ್ರಶಸ್ತಿಗೆ ಆಯ್ಕೆಯಾಗಿರುವ ಶ್ರೀಮತಿ ಹಂಚೆಟ್ಟಿರ ಫಾನ್ಸಿ ಮುತ್ತಣ್ಣನವರು ಕನ್ನಡ ಮತ್ತು ಕೊಡವ ಭಾಷೆಯಲ್ಲಿ ಸಾಕಷ್ಟು ಸಾಧನೆಯನ್ನು ಮಾಡಿದ್ದಾರೆ. ಕೊಡಗು ಜಿಲ್ಲೆಯ…
ಮೈಸೂರು : ನಟನ ಪಯಣ ರೆಪರ್ಟರಿ ತಂಡದ ನಾಟಕ ‘ಅಡುಗೆ ಮನೆಯಲ್ಲೊಂದು ಹುಲಿ’ ದಿನಾಂಕ 18-02-2024ರ ಭಾನುವಾರದಂದು ಸಂಜೆ 6.30ಕ್ಕೆ ಮೈಸೂರಿನ ರಾಮಕೃಷ್ಣ ನಗರದಲ್ಲಿರುವ ನಟನ ರಂಗಶಾಲೆಯಲ್ಲಿ ಪ್ರದರ್ಶನಗೊಳ್ಳಲಿದೆ. ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ, ನಿರ್ಮಾಪಕ ಹಾಗೂ ನಟರಾಗಿರುವ ಬಿ. ಸುರೇಶ ರಚಿಸಿರುವ ಈ ನಾಟಕದ ವಿನ್ಯಾಸ ಮತ್ತು ನಿರ್ದೇಶನವನ್ನು ನಟನ ರಂಗಶಾಲೆಯ ಪ್ರಾಂಶುಪಾಲರು ಹಾಗೂ ಯುವ ರಂಗ ನಿರ್ದೇಶಕರಾದ ಮೇಘ ಸಮೀರ ನಿರ್ವಹಿಸಿದ್ದು, ಬೆಳಕಿನ ಸಂಯೋಜನೆಯಲ್ಲಿ ದಿಶಾ ರಮೇಶ್ ಹಾಗೂ ಸಂಗೀತದಲ್ಲಿ ಚೇತನ್ ಸಿಂಗಾನಲ್ಲೂರು ಸಹಕರಿಸಲಿದ್ದಾರೆ. ನಟನ ರಂಗಶಾಲೆ : ಮಂಡ್ಯ ರಮೇಶ್ ಅವರ ನಟನ ರಂಗಶಾಲೆಯು ಕಳೆದ ಅನೇಕ ವರ್ಷಗಳಿಂದ ಕಲಾಮಾಧ್ಯಮದಲ್ಲಿ ಕ್ರಿಯಾಶೀಲವಾಗಿದ್ದು ರಂಗಭೂಮಿಯಲ್ಲಿ ತನ್ನದೇ ಆದ ವಿಶಿಷ್ಟ ಛಾಪನ್ನು ಮೂಡಿಸಿದೆ. ರಂಗಭೂಮಿಯ ಅಧ್ಯಯನ, ಪ್ರಾತ್ಯಕ್ಷಿಕೆ, ಪ್ರಯೋಗ ಹಾಗೂ ಪ್ರದರ್ಶನಗಳ ಮೂಲಕ ಶ್ರೇಷ್ಠತೆಯನ್ನು ಸಾಧಿಸುವುದರತ್ತ ನಟನ ಸತತವಾಗಿ ಪ್ರಯತ್ನ ನಡೆಸುತ್ತಾ ಬಂದಿದ್ದು. ಮೈಸೂರಿನಲ್ಲಿ ನೆಲೆಗೊಂಡಿದ್ದರೂ ಭಾರತದಾದ್ಯಂತ ರಂಗಯಾತ್ರೆಗಳನ್ನು, ರಂಗ ತರಬೇತಿ ಶಿಬಿರಗಳನ್ನು ನಡೆಸುವುದರ ಮೂಲಕ ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಂಡಿದೆ.…
ಕೋಟ : ಕೋಟದ ವಿಶ್ವ ವಿಖ್ಯಾತ ಸಾಲಿಗ್ರಾಮ ಮಕ್ಕಳ ಮೇಳ ಮತ್ತು ಮಂಗಳೂರಿನ ಕರ್ಣಾಟಕ ಯಕ್ಷಧಾಮ ಜಂಟಿಯಾಗಿ ಆಯೋಜಿಸಿದ ‘ಕಲೋತ್ಸವ – 2024’ರ ಎರಡನೇ ದಿನ ಕಲಾವಿದಾಭಿನಂದನ ಹಾಗೂ ಬಯಲಾಟ ಕಾರ್ಯಕ್ರಮ ದಿನಾಂಕ 12-02-2024ರ ಸೋಮವಾರ ಸಂಜೆ ಕೋಟದ ಪಟೇಲರ ಮನೆಯ ಆವರಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದ ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ ಕುಮಾರ ಕಲ್ಕೂರ “ಜಾತಿ ಮತ ಕುಲ ಧರ್ಮಗಳ ಭೇದವಿಲ್ಲದೆ ಜನಸಾಮಾನ್ಯರನ್ನು ಆಕರ್ಷಿಸಿದ ಕಲೆ ಯಕ್ಷಗಾನ. ಚೌಕಿಯ ಪೂಜೆಯ ಮೊದಲ ಪ್ರಸಾದ ದಕ್ಕುವುದು ಭಾಗವತನಿಗೆ. ಭಾಗವತನ ಸ್ಥಾನಕ್ಕೆ ಬೆಲೆ ಹೊರತು ಅವನ ಜಾತಿಗಲ್ಲ. ರಂಜನೆಯೊಂದಿಗೆ ಮೌಲ್ಯ ಶಿಕ್ಷಣವನ್ನು ನೀಡಿದ ಶ್ರೀಮಂತ ಕಲೆ ಯಕ್ಷಗಾನ. ಈ ಕಲೆಯ ಮೂಲಕ ಸಂಸ್ಕೃತಿಯ ಉಳಿವು ಸಾಧ್ಯವಾಗಿದೆ.” ಎಂದು ಹೇಳಿದರು. ಯುನಿಯನ್ ಬ್ಯಾಂಕ್ ಆಫ್ ಇಂಡಿಯಾದ ಉಪ ಮಹಾ ಪ್ರಬಂಧಕರಾದ ಮಹೇಶ್ ಜೆ., ಪೆರ್ಡೂರು ಮೇಳದ ಯಜಮಾನ ವೈ. ಕರುಣಾಕರ ಶೆಟ್ಟಿ, ಗೆಳೆಯರ ಬಳಗ ಸಾಲಿಗ್ರಾಮದ ತಾರಾನಾಥ ಹೊಳ್ಳ, ಕಲಾ ಸಾಹಿತಿ ಜನಾರ್ದನ…
ಸುರತ್ಕಲ್ : ತಡಂಬೈಲ್ ಶ್ರೀ ದುರ್ಗಾಂಬಾ ಮಹಿಳಾ ಯಕ್ಷಗಾನ ಮಂಡಳಿಯ 9ನೇ ವಾರ್ಷಿಕೋತ್ಸವವು ಇಡ್ಯಾ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಂಗಮಂದಿರದಲ್ಲಿ ದಿನಾಂಕ 29-01-2024 ರಂದು ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಇಡ್ಯ ಶ್ರೀ ಮಹಾಲಿಂಗೇಶ್ವರ ಕ್ಷೇತ್ರದ ಆನುವಂಶಿಕ ಆಡಳಿತ ಮೊಕ್ತೇಸರರಾದ ಶ್ರೀ ರಮಾನಂದ ಭಟ್ ಮಾತನಾಡಿ “ಶ್ರೀ ದುರ್ಗಾಂಬಾ ಮಹಿಳಾ ಯಕ್ಷಗಾನ ಮಂಡಳಿಯು ಒಳ್ಳೆಯ ಕೆಲಸಗಳನ್ನು ಮಾಡುತಿದ್ದು, ಅದಕ್ಕೆ ನಮ್ಮ ಶ್ರೀ ಕ್ಷೇತ್ರದಿಂದ ಸಂಪೂರ್ಣ ಸಹಕಾರವನ್ನು ಸಂತೋಷದಿಂದ ಕೊಡುತ್ತೇವೆ.”ಎಂದು ಹೇಳಿದರು. ಅತಿಥಿಗಳಾಗಿ ಆಗಮಿಸಿದ ಸುರತ್ಕಲ್ ಬಂಟರ ಮಹಿಳಾ ಸಂಘದ ಅಧ್ಯಕ್ಷೆ ಭವ್ಯಾ ಶೆಟ್ಟಿ ಅವರು ಮಂಡಳಿಯ ಯಕ್ಷಗಾನ ಕಲಾ ಸೇವೆಯನ್ನು ಶ್ಲಾಘಿಸಿ, ಮೆಚ್ಚುಗೆ ವ್ಯಕ್ತಪಡಿಸಿದರು. ಅಧ್ಯಕ್ಷತೆ ವಹಿಸಿದ ಬಂಟರ ಸಂಘ ಸುರತ್ಕಲ್ ಇದರ ಅಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು ಮಾತನಾಡಿ “ ತಡಂಬೈಲ್ ಶ್ರೀ ದುರ್ಗಾಂಬಾ ಮಹಿಳಾ ಯಕ್ಷಗಾನ ಮಂಡಳಿ ಸಮರ್ಥವಾಗಿ ತಾಳಮದ್ದಳೆ ಕಾರ್ಯಕ್ರಮವನ್ನು ನೀಡಲು ಮಂಡಳಿಯ ನಿರ್ದೇಶಕ ಹಾಗೂ ಗುರುಗಳಾದ ವಾಸುದೇವರಾಯರ ಪರಿಶ್ರಮ ಅಭಿನಂದಾನರ್ಹ”. ಎಂದು ಹೇಳಿದರು. ಇದೇ ಸಂದರ್ಭದಲ್ಲಿ ತೆಂಕುತಿಟ್ಟು…
ಹೊಸಕೋಟೆ : ಹೊಸಕೋಟೆಯ ‘ಜನಪದರು ಸಾಂಸ್ಕೃತಿಕ ವೇದಿಕೆ (ರಿ)’ ಆಯೋಜಿಸುವ ಪ್ರತಿ ತಿಂಗಳ ಎರಡನೇ ಶನಿವಾರದ ರಂಗಮಾಲೆ -79ರ ನಾಟಕ ಸರಣಿಯ ಅಂಗವಾಗಿ ದಿನಾಂಕ 10-02-2024ರ ಶನಿವಾರ ರಂಗರಥ ಬೆಂಗಳೂರು ಪ್ರಸ್ತುತಪಡಿಸಿದ ಆಫ್ರಿಕನ್ ಖ್ಯಾತ ನಾಟಕಕಾರ ವಾರಿಯೋ ಪೋ ರಚನೆಯ ಕೆ.ವಿ. ಅಕ್ಷರ ಅನುವಾದಿಸಿ, ಆಸಿಫ್ ಕ್ಷತ್ರಿಯ ಮತ್ತು ಶ್ವೇತಾ ಶ್ರೀನಿವಾಸ್ ಇವರು ನಿರ್ದೇಶನ ಮಾಡಿದ ವೈನೋದಿಕ ನಾಟಕ ‘ಇದ್ದಾಗ ನಿಮ್ದು ಕದ್ದಾಗ ನಮ್ದು’ ಏರ್ಪಡಿಸಲಾಗಿತ್ತು. ನಾಟಕ ಪ್ರದರ್ಶನವನ್ನು ವೇದಿಕೆ ಅಧ್ಯಕ್ಷ ಕೆ.ವಿ. ವೆಂಕಟರಮಣಪ್ಪ @ ಪಾಪಣ್ಣ ಕಾಟಂನಲ್ಲೂರು ಉದ್ಘಾಟಿಸಿ ಮಾತನಾಡಿದ ಅವರು ಜಗತ್ತಿನ ಶ್ರೇಷ್ಠ ಲೇಖಕ ನೋಬಲ್ ವಿಜೇತ ಆಫ್ರಿಕಾದ ಹಾಗೂ ತೃತೀಯ ಜಗತ್ತಿನ ರಾಷ್ಟ್ರಗಳ ಆಧುನಿಕ ಮಧ್ಯಮ ವರ್ಗದ ಜನಸಮುದಾಯದ ಶ್ರೇಷ್ಠ ನಾಟಕಕಾರ. ದಾರಿಯೊ ಪೋ ಇಂದಿನ ಭವಣೆಯ ಬದುಕು ಎಷ್ಟು ಅಪನಂಬಿಕೆ, ಗೊಂದಲ, ತಲ್ಲಣಗಳಿಂದ ಕೂಡಿದೆ. ನೆಮ್ಮದಿಯ ಬಾಳು ಹೇಗೆ ಹಾಳು ಮಾಡಿದೆ ಎಂಬ ವಾಸ್ತವ ಕಾಲ ದೇಶ ಮೀರಿದೆ ಎಂಬದನ್ನು ತೆರೆದಿಟ್ಟ ಅಪರೂಪದ ನಾಟಕ ಇದು…
ಮಂಗಳೂರು : ವಿಶ್ವ ಕೊಂಕಣಿ ಕೇಂದ್ರದಲ್ಲಿ ಕೊಂಕಣಿ ಭಾಷೆ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಎರಡು ದಿನಗಳ ‘ವಿಶ್ವ ಕೊಂಕಣಿ ಸಮಾರೋಹ, ಪ್ರಶಸ್ತಿ ಪ್ರದಾನ 2023, ಕಾರ್ಯಕ್ರಮವು ದಿನಾಂಕ 10-02-2024ರ ಶನಿವಾರದಂದು ಅರಂಭಗೊಂಡಿತು. ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದ ಎಂ. ಆರ್. ಪಿ. ಎಲ್. ಇದರ ಹಣಕಾಸು ವಿಭಾಗದ ಚೀಫ್ ಜನರಲ್ ಮ್ಯಾನೇಜರ್ ಸುರೇಂದ್ರ ನಾಯಕ್ “ಭಾಷೆ ತಾಯಿಗೆ ಸಮಾನ. ಹೃದಯದಲ್ಲಿ ಭಾಷಾ ಪ್ರೀತಿಯಿದ್ದಾಗ ಅದು ನಾಲಿಗೆ ಮತ್ತು ಮನೆಯೊಳಗೆ ನೆಲೆಸಲು ಸಾಧ್ಯ. ಬದಲಾವಣೆಯ ಕಾಲಘಟ್ಟದಿಂದಾಗಿ ಭಾಷೆಗೆ ಎದುರಾಗಿರುವ ಸವಾಲನ್ನು ಮಕ್ಕಳು ಮತ್ತು ಯುವಜನತೆಯಲ್ಲಿ ಭಾಷಾಭಿಮಾನ ಗಟ್ಟಿಗೊಳಿಸುವ ಮೂಲಕ ಉತ್ತಮ ಭವಿಷ್ಯ ನಿರೀಕ್ಷಿಸಲು ಸಾಧ್ಯ. ಕೊಂಕಣಿ ಭಾಷೆ ಕಲಬೆರಕೆ ಮತ್ತು ಬಳಕೆಯಲ್ಲಿ ಇಳಿಮುಖವಾಗುವ ಎರಡು ಪ್ರಮುಖ ಸವಾಲುಗಳನ್ನು ಎದುರಿಸುತ್ತಿದೆ. ಸಾಹಿತ್ಯ ಸಂಶೋಧನೆಯಿಂದ ಕೊಂಕಣಿಯ ತಳಪಾಯ ಗಟ್ಟಿಗೊಳಿಸಬಹುದು. ಆದರೆ ಬಳಕೆಯಿಂದ ಮಾತ್ರ ಅಲ್ಲಿ ಉನ್ನತ ಭವಿಷ್ಯದ ಸೌಧ ನಿರ್ಮಾಣವಾಗಲು ಸಾಧ್ಯ. ಈ ನಿಟ್ಟಿನಲ್ಲಿ ಸೋಶಿಯಲ್ ಮೀಡಿಯಾದ ಈ ದಿನಗಳಲ್ಲಿ ಭಾಷೆ ಸಂಸ್ಕೃತಿಯನ್ನು…
ಬೆಂಗಳೂರು : ಪದ ಪ್ರಸ್ತುತ ಪಡಿಸುವ ‘ಕರ್ನಾಟಕ ಜಾನಪದ ಉತ್ಸವ’ ಜಾನಪದ ನಾಟಕ, ನೃತ್ಯ, ಗಾಯನ ಮತ್ತು ರಂಗ ಗೌರವ ಕಾರ್ಯಕ್ರಮಗಳು ದಿನಾಂಕ 19-02-2024ರಿಂದ 21-02-2024ರವರೆಗೆ ಬೆಂಗಳೂರಿನ ಮಲತ್ತಹಳ್ಳಿಯ ಕಲಾ ಗ್ರಾಮ ಸಮುಚ್ಚಯ ಭವನದಲ್ಲಿ ನಡೆಯಲಿದೆ. ದಿನಾಂಕ 19-02-2024ರಂದು ಸಂಜೆ 6.30ಕ್ಕೆ ರಂಗ ತಜ್ಞರಾದ ನರೇಂದ್ರ ಬಾಬು ಇವರ ಅಧ್ಯಕ್ಷತೆಯಲ್ಲಿ ಜಾನಪದ ವಿದ್ವಾಂಸರಾದ ಡಾ. ಹಿ.ಚಿ. ಬೋರಲಿಂಗಯ್ಯ ಇವರು ಈ ಸಮಾರಂಭವನ್ನು ಉದ್ಘಾಟಿಸಲಿದ್ದಾರೆ. ಸಭಾ ಕಾರ್ಯಕ್ರಮದ ನಂತರ ಗೊ.ರು. ಚನ್ನಬಸಪ್ಪ ರಚನೆಯ ರಾಮಮೂರ್ತಿಯವರ ಸಂಗೀತ ಮತ್ತು ನಿರ್ದೇಶನದಲ್ಲಿ ಕರ್ನಾಟಕ ಜಾನಪದ ನಾಟಕ ‘ಸಾಕ್ಷಿ ಕಲ್ಲು’ ಪ್ರದರ್ಶನಗೊಳ್ಳಲಿದೆ. ದಿನಾಂಕ 20-02-2024ರಂದು ಸುಮಾ ಆರ್. ಕಂಠಿ ಇವರ ನೃತ್ಯ ನಿರ್ದೇಶನದಲ್ಲಿ ‘ಕರ್ನಾಟಕ ಜಾನಪದ ನೃತ್ಯ ವೈಭವ’ ಪ್ರಸ್ತುತಿಗೊಳ್ಳಲಿದೆ. ಈ ಸಂದರ್ಭದಲ್ಲಿ ಖ್ಯಾತ ಆಯುರ್ವೇದ ತಜ್ಞರಾದ ಡಾ. ಅಬ್ದುಲ್ ಖಾದರ್, ಹಿರಿಯ ರಂಗತಜ್ಞರು ಹಾಗೂ ಕವಿಗಳಾದ ಮಲ್ಲಿಕಾರ್ಜುನ ಸ್ವಾಮಿ ಮಹಾಮನೆ, ಹಿರಿಯ ಸಾಹಿತಿ ಮತ್ತು ಪ್ರಕಾಶಕರಾದ ಅವಿರತ ಹರೀಶ್ ಮತ್ತು ಅಂತರಾಷ್ಟ್ರೀಯ ಚಿತ್ರ ಕಲಾವಿದರಾದ ಓ.…