Author: roovari

ಅರಸೀಕೆರೆ : ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಅರಸೀಕೆರೆ ತಾಲೂಕು ಘಟಕದ ವತಿಯಿಂದ ಅರಸೀಕೆರೆ ಶ್ರೀ ಪ್ರಸನ್ನ ಗಣಪತಿ ಆಸ್ಥಾನ ಮಂಟಪದಲ್ಲಿ ಹಮ್ಮಿಕೊಂಡಿದ್ದ ದಸರಾ ಉತ್ಸವ ಕಾರ್ಯಕ್ರಮವು ದಿನಾಂಕ 22 ಸೆಪ್ಟೆಂಬರ್ 2025ರಂದು ನಡೆಯಿತು. ಈ ಕಾರ್ಯಕ್ರಮವನ್ನು ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿ ಮಾತನಾಡಿದ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಕೊಟ್ರೇಶ್ ಎಸ್. ಉಪ್ಪಾರ್ “ಇಡೀ ಜಗತ್ತು ಧರ್ಮಾಧತೆಯ ತೊಳಲಾಟದಲ್ಲಿ ಮನುಷ್ಯ ಪ್ರೀತಿಯನ್ನು ಮರೆತು ಧ್ವೇಷಾಸೂಯೆಯ ದಳ್ಳುರಿಯಲ್ಲಿ ಬೇಯುತ್ತಿದೆ. ವರ್ತಮಾನದ ಜಗತ್ತಿಗೆ ಬಸವಣ್ಣ ಹಾಗೂ ಕುವೆಂಪುರವರ ವಿಶ್ವಮಾನವ ತತ್ವ ಸಾರುವಂತಹ ಸಾಮರಸ್ಯದ ಸಾಹಿತ್ಯ ಅಗತ್ಯವಿದೆ. ಸಾಹಿತ್ಯ ಸಾಮಾಜಿಕ ತಲ್ಲಣಗಳಿಗೆ ಧ್ವನಿಯಾಗಬೇಕು. ಪ್ರತಿ ಬರಹಗಾರನೂ ನಮ್ಮ ಸಾಹಿತ್ಯ ಪರಂಪರೆಯನ್ನು ಅರಿಯಬೇಕು. ನಾವು ಸೃಜಿಸುವ ಸಾಹಿತ್ಯ ಜಾತ್ಯಾತೀತವಾಗಿ, ಧರ್ಮಾತೀತವಾಗಿ ಮೌಲ್ಯಗಳನ್ನು ಕಟ್ಟಿಕೊಡಬೇಕು. ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಹುಟ್ಟಿರುವುದೇ ಎಲೆಮರೆ ಕಾಯಿಯಂತಹ ಪ್ರತಿಭೆಗಳನ್ನು ಸಮಾಜದ ಮುಖ್ಯ ವಾಹಿನಿಗೆ ತರುವ ಹಾಗೂ ಯುವ ಜನತೆಯಲ್ಲಿ ನಾಡು-ನುಡಿ ಸಾಧಕರನ್ನು ಪ್ರೋತ್ಸಾಹಿಸುವ ಹಿನ್ನೆಲೆಯಲ್ಲಿ ಎಂಟು ವರ್ಷಗಳ…

Read More

ಉಡುಪಿ : ರಾಗ ಧನ ಉಡುಪಿ (ರಿ.) ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಆಯೋಜಿಸುತ್ತಿರುವ ‘ರಾಗರತ್ನಮಾಲಿಕೆ – 41’ನೇ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿಯಲ್ಲಿ ವಿದುಷಿ ರಂಜನಿ ಹೆಬ್ಬಾರ್ ಇವರ ಸಂಸ್ಮರಣೆ ದಿನಾಂಕ 28 ಸೆಪ್ಟೆಂಬರ್ 2025ರಂದು ಸಂಜೆ 5-00 ಗಂಟೆಗೆ ಉಡುಪಿಯ ಎಂ.ಜಿ.ಎಂ. ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ. ಮೈಸೂರಿನ ವಿದ್ವಾನ್ ಜಿ.ಕೆ. ಮನಮೋಹನ್ ಇವರ ಹಾಡುಗಾರಿಕೆಗೆ ವಯೊಲಿನ್ ನಲ್ಲಿ ಕೇಶವ ಮೋಹನ್ ಕುಮಾರ್ ಬೆಂಗಳೂರು ಹಾಗೂ ಮೃದಂಗದಲ್ಲಿ ಸುನಾದ ಕೃಷ್ಣ ಅಮೈ ಸಹಕರಿಸಲಿದ್ದಾರೆ ಎಂದು ಸಂಸ್ಥೆಯ ಕಾರ್ಯದರ್ಶಿ ಉಮಾಶಂಕರಿ ತಿಳಿಸಿರುತ್ತಾರೆ.

Read More

ಕಮತಗಿ : ಮೇಘಮೈತ್ರಿ ಕನ್ನಡ ಸಾಹಿತ್ಯ ಸಂಘ (ರಿ.) ಕಮತಗಿ ಹಾಗೂ ದಸರಾ ಉತ್ಸವ ಸಮಿತಿ ವತಿಯಿಂದ ‘ದಸರಾ ಉತ್ಸವ-2025’ ದಿನಾಂಕ 30 ಸೆಪ್ಟೆಂಬರ್ 2025ರಂದು ಬಾಗಲಕೋಟೆ ಜಿಲ್ಲೆಯ ಕಮತಗಿಯ ಕಿಲ್ಲಾ ಓಣಿ ಶ್ರೀ ರೇಣುಕಾ ಯಲ್ಲಮ್ಮದೇವಿ ದೇವಸ್ಥಾನದ ಹತ್ತಿರ ನಡೆಯಲಿದೆ. ಕವಿಗೋಷ್ಠಿ, ವಿಚಾರಗೋಷ್ಠಿ, ಪುಸ್ತಕ ಬಿಡುಗಡೆ, ಪುಸ್ತಕ ಪ್ರಶಸ್ತಿ ಪ್ರದಾನ, ಜಾನಪದ ಕಲಾ ಪ್ರದರ್ಶನ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯ ಜಾನಪದ ಕಲಾವಿದೆ ಮಾತಾ ಮಂಜಮ್ಮ ಜೋಗುತಿ ಇವರು ವಹಿಸಲಿದ್ದು, ಚಂದ್ರಶೇಖರ ದೇಸಾಯಿ ಇವರು ದಸರಾ ಉತ್ಸವದ ಉದ್ಘಾಟನೆ ಮಾಡಲಿದ್ದಾರೆ. ಹಿರಿಯ ಜಾನಪದ ಕಲಾವಿದ ವೆಂಕಪ್ಪ ಸುಗತೇಕರ ಇವರು ಪ್ರಶಸ್ತಿ ಪ್ರದಾನ ಮಾಡಲಿದ್ದು, ಹಿರಿಯ ಸಾಹಿತಿ ಡಾ. ಶಿವಾನಂದ ಕುಬಸದ ಇವರು ವೆಂಕಟೇಶ ಗುಡ್ಡೆಪ್ಪನವರ ಇವರ ‘ದಮನಿತರ ಧ್ವನಿ’ ಕೃತಿಯನ್ನು ಬಿಡುಗಡೆಗೊಳಿಸಲಿದ್ದಾರೆ. ಹಿರಿಯ ಸಾಹಿತಿ ಡಾ. ಅಶೋಕ ನರೋಡೆ ಇವರ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ ಮತ್ತು ಸಾಹಿತಿ ಕಿರಣ…

Read More

ಕಾಸರಗೋಡು : ಪಾಂಗೋಡು ಶ್ರೀ ದುರ್ಗಾಪರಮೇಶ್ವರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಸಾಂಸ್ಕೃತಿಕ ಘಟಕ, ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯ ಹಾಗೂ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಕಾಸರಗೋಡು ಇದರ ಸಂಯುಕ್ತ ಆಶ್ರಯದಲ್ಲಿ ಕಾಸರಗೋಡು ದಸರಾ ಸಾಂಸ್ಕೃತಿಕೋತ್ಸವ 2025 ಕಾರ್ಯಕ್ರಮದ ಅಂಗವಾಗಿ ಪಾಂಗೋಡು ಶ್ರೀ ದುರ್ಗಾಪರಮೇಶ್ವರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಂಕೀರ್ತನಾ ಪ್ರತಿಷ್ಠಾನ ಮುಜುಂಗಾವು ಇದರ ಆಶ್ರಯದಲ್ಲಿ ಹರಿದಾಸ ಜಯಾನಂದ ಕುಮಾರ್ ಹೊಸದುರ್ಗ ಅವರ ಬಗ್ಗೆ ಗಾನಗಂಗೆ ಕೃತಿ ರಚಿಸಿದ ಖ್ಯಾತ ಪತ್ರಕರ್ತ, ಲೇಖಕ, ಸಂಘಟಕ, ನಿರೂಪಕ ರವಿ ನಾಯ್ಕಾಪು ಇವರಿಗೆ ಹೃದ್ಯ ಗೌರವಾರ್ಪಣೆ ಕಾರ್ಯಕ್ರಮ ಜರಗಿತು. ಕಾರ್ಯಕ್ರಮವನ್ನು ಪಾಂಗೋಡು ಶ್ರೀ ದುರ್ಗಾಪರಮೇಶ್ವರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಸಾಂಸ್ಕೃತಿಕ ಘಟಕದ ಅಧ್ಯಕ್ಷರಾದ ಪಾಂಗೋಡು ಪ್ರವೀಣ ನಾಯಕ ಇವರ ಗೌರವ ಉಪಸ್ಥಿತಿಯಲ್ಲಿ ಕನ್ನಡ ಜಾನಪದ ಪರಿಷತ್ತು ದಕ್ಷಿಣ ಕನ್ನಡ ಜಿಲ್ಲೆ ಇದರ ಅಧ್ಯಕ್ಷರಾದ ಪ್ರವೀಣ್ ಕುಮಾರ್ ಕೊಡಿಯಾಲ್ ಬೈಲ್ ಜಾಗಟೆ ಬಾರಿಸುವ ಮೂಲಕ ಉದ್ಘಾಟಿಸಿದರು. ಕನ್ನಡ…

Read More

ಎಳೆ ಚಿಗುರಿನಂಥ ಸಪೂರ ದೇಹ, ಚಿಗರೆಯಂತೆ ಲವಲವಿಕೆಯಿಂದ ಆಂಗಿಕಾಭಿನಯವನ್ನು ಸಲೀಸಾಗಿ ಅಭಿವ್ಯಕ್ತಿಸಬಲ್ಲ ಚೈತನ್ಯಭರಿತ ಉತ್ಸಾಹ, ಲವಲವಿಕೆ ಈ ಉದಯೋನ್ಮುಖ ನೃತ್ಯ ಕಲಾವಿದೆ ಗುಣಶ್ರೀಯ ಧನಾತ್ಮಕ ಅಂಶಗಳು. ಪ್ರಸಿದ್ಧ ‘ಸಾಧನ ಸಂಗಮ ಡಾನ್ಸ್ ಸೆಂಟರ್’ನ ನೃತ್ಯಗುರುದ್ವಯರಾದ ವಿದುಷಿ ಜ್ಯೋತಿ ಪಟ್ಟಾಭಿರಾಮ್ ಮತ್ತು ಡಾ. ಸಾಧನಶ್ರೀ ಅವರ ಕಾಳಜಿಪೂರ್ಣ ಭರತನಾಟ್ಯ ಮಾರ್ಗದರ್ಶನದಲ್ಲಿ ರೂಪುಗೊಂಡ ನೃತ್ಯಪ್ರತಿಭೆ ಕುಮಾರಿ ಪಿ. ಗುಣಶ್ರೀ ಬಹುಮುಖ ಪ್ರತಿಭೆ. ಸಂಗೀತ -ನಾಟ್ಯಗಳಲ್ಲಿ ಭರವಸೆಯ ಅಡಿಗಳನ್ನಿಡುತ್ತಿರುವ ಗುಣಶ್ರೀ ಇತ್ತೀಚೆಗೆ ವಿಜಯನಗರದ ‘ಕಾಸಿಯಾ’ ಸಭಾಂಗಣದಲ್ಲಿ ‘ನೃತ್ಯ ಸುಗುಣ’ ಎಂಬ ಶೀರ್ಷಿಕೆಯಲ್ಲಿ ವಿದ್ಯುಕ್ತವಾಗಿ ರಂಗಪ್ರವೇಶ ಮಾಡಿ ಕಲಾರಸಿಕರ ಮೆಚ್ಚುಗೆ ಗಳಿಸಿದಳು. ಕಲಾವಿದೆ ಗುಣಶ್ರೀ ಪಾರಂಪರಿಕ ‘ಅಲರಿಪು’ (ಸಂಕೀರ್ಣ ಏಕತಾಳ)ವಿನಿಂದ ತನ್ನ ಪ್ರಸ್ತುತಿಯನ್ನು ಶುಭಾರಂಭಿಸಿದಳು. ಅಂಗಶುದ್ಧ ನೃತ್ತಗಳಿಂದ ನಿರೂಪಿಸಿದ ಕಲಾವಿದೆಯ ಖಚಿತ ನಡೆಯ, ಸುಂದರ ಆಂಗಿಕಾಭಿನಯ ಕಣ್ಮನ ಸೂರೆಗೊಂಡಿತು. ಗುರು ಸಾಧನಶ್ರೀ ಅವರ ಸುಸ್ಪಷ್ಟ ನಿಖರ, ಕಂಚಿನ ಕಂಠದ ನಟುವಾಂಗದ ಧ್ವನಿ ಗುಣಶ್ರೀಯ ಪಾದರಸದ ಮಿಂಚಿನ ಸಂಚಾರದ ವಿವಿಧ ವಿನ್ಯಾಸದ ನೃತ್ತಗಳಿಗೆ ಶಕ್ತಿಯ ಪ್ರೇರಣೆ ನೀಡಿತು. ಅರೆಮಂಡಿ-…

Read More

ಕಟೀಲು : ಮೂಲ್ಕಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಘಟಕದ ವತಿಯಿಂದ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳ ಪ್ರೌಢ ಶಾಲೆಯಲ್ಲಿ ದಿನಾಂಕ 20 ಸೆಪ್ಟೆಂಬರ್ 2025ರಂದು ಆಯೋಜಿಸಿದ ಕಾರ್ಯಕ್ರಮದಲ್ಲಿ ಡಾ. ವಿ.ಕೆ. ಯಾದವ ಸಸಿಹಿತ್ಲು ಇವರು ತುಳು ಜಾನಪದದ ಅಜ್ಜಿ ಕತೆಗಳನ್ನು ಕನ್ನಡಕ್ಕೆ ಅನುವಾದಿಸಿದ ‘ಐನ್ ಕೈ ಅಜ್ಜಿ ಕತೆ’ ಪುಸ್ತಕ ಬಿಡುಗಡೆಗೊಂಡಿತು. ಪ್ರೌಢಶಾಲೆಯಲ್ಲಿ ತೃತೀಯ ಭಾಷೆಯಾಗಿ ತುಳುವನ್ನು ಕಲಿಯುತ್ತಿರುವ ವಿದ್ಯಾರ್ಥಿಗಳಾದ ಕಾರ್ತಿಕ್ ಶೆಟ್ಟಿಗಾರ್, ಕೀರ್ತನ್ ಶೆಟ್ಟಿಗಾರ್, ರಿಷಿತ್, ಚಿನ್ಮಯ್ ಎಚ್. ಕೋಟ್ಯಾನ್, ರಕ್ಷಾ ಕೆ. ಶೆಟ್ಟಿಗಾರ್, ಚಿನ್ಮಯ್ ಎಂ.ಕೆ., ಅನುಶ್ರೀ, ಧನ್ವಿ ಇವರು ತಮ್ಮ ತಮ್ಮ ಶಾಲಾ ಚೀಲದಿಂದ ಅಜ್ಜಿಕತೆ ಅನುವಾದ ಪುಸ್ತಕಗಳನ್ನು ತೆಗೆದು ಬಿಡುಗಡೆಗೊಳಿಸಿದರು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ತುಳು ಕನ್ನಡ ಸಾಹಿತಿ ಡಾ. ಪದ್ಮನಾಭ ಭಟ್ ಎಕ್ಕಾರು “ಪ್ರಾಣಿ, ಪಕ್ಷಿ, ಪ್ರಕೃತಿ, ನೀತಿ, ಸಮುದ್ರ ರಾಜ ರಾಣಿ ಹೀಗೆ ನಮ್ಮ ಹಳ್ಳಿಗಾಡಿನ ಸೊಗಡಿನ ಕಲ್ಪನೆಗಳಿಂದ ಕನಸುಗಳನ್ನು ಕಟ್ಟಿಸುವ ನೀತಿಬೋಧಕ ರಂಜನೀಯ ಕತೆಗಳನ್ನು ಹೇಳುತ್ತಿದ್ದ ಅಜ್ಜಿಯರು ಮನೆಗಳಲ್ಲಿ ಇಲ್ಲ.…

Read More

ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಸಿಂಗಾರ ಸುರತ್ಕಲ್ ಮತ್ತು ಸರಕಾರಿ ಪದವಿ ಪೂರ್ವ ಕಾಲೇಜು ಚೇಳ್ಯಾರು ಸಹಭಾಗಿತ್ವದಲ್ಲಿ ನಡೆಯುವ ‘ನಲ್ಮೆ ಬಲ್ಮೆ’ ವಿದ್ಯಾರ್ಥಿಗಳಿಗೆ ಮೂರು ದಿನಗಳ ರಂಗ ಕಾರ್ಯಾಗಾರವು ದಿನಾಂಕ 24 ಸೆಪ್ಟೆಂಬರ್ 2025ರಂದು ಚೇಳ್ಯಾರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಉದ್ಘಾಟನೆಗೊಂಡಿತು. ಈ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಇವರು ಮಾತನಾಡಿ “ತುಳುನಾಡಿನ ಸಾಹಿತ್ಯ ಸಂಸ್ಕೃತಿಗಳನ್ನು ವಿದ್ಯಾರ್ಥಿ ಸಮುದಾಯಕ್ಕೆ ತಲುಪಿಸುವ ಕಾರ್ಯ ಇಂದು ನಡೆಯುವ ಅವಶ್ಯಕತೆ ಇದೆ. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಈ ನಿಟ್ಟಿನಲ್ಲಿ ವಿವಿಧ ಯೋಜನೆಗಳನ್ನು ರೂಪಿಸಿ ಯಶ್ವಸಿಯಾಗಿ ಅನುಷ್ಠಾನಗೊಳಿಸುತ್ತಿದೆ. ವಿದ್ಯಾರ್ಥಿಗಳಿಗೆ ತುಳುಭಾಷೆಯ ಅರಿವು ಮೂಡಿಸುವ ಕಾರ್ಯ ಹೆಚ್ಚು ಪ್ರಸ್ತುತವಾಗಿದೆ. ತುಳು ಭಾಷೆಯನ್ನು ರಾಜ್ಯದ ದ್ವಿತೀಯ ಅಧಿಕೃತ ಭಾಷೆಯನ್ನಾಗಿಸುವ ಪ್ರಕ್ರಿಯೆ ನಡೆಯುತ್ತಿದ್ದು ಶೀಘ್ರವೇ ಅನುಷ್ಠಾನಗೊಳ್ಳುವ ಸಾಧ್ಯತೆಗಳಿವೆ. ಯುವ ತಲೆಮಾರು ಇಂದು ತುಳು ಸಾಹಿತ್ಯ, ಇತಿಹಾಸ ಮತ್ತು ಜಾನಪದದ ಕುರಿತು ಆಕರ್ಷಿತರಾಗುತ್ತಿದ್ದಾರೆ. ಕಾಲೇಜು ಮತ್ತು ಶಾಲಾ…

Read More

ಕಾಸರಗೋಡು : ಹರಿಕಥೆ ಉಳಿಸಿ ಅಭಿಯಾನ ಸಮಿತಿ ಇದರ ವತಿಯಿಂದ ಗುಡ್ಡೆ ಕ್ಷೇತ್ರ ಶ್ರೀ ಪಾರ್ವತಿ ಅಮ್ಮ ದೇವಸ್ಥಾನದಲ್ಲಿ ನವರಾತ್ರಿಗೆ ಆಯೋಜಿಸಿದ ಸಂಪೂರ್ಣ ಶ್ರೀಮದ್ ದೇವಿ ಭಾಗವತ 11 ದಿನಗಳ ಹರಿಕಥೋತ್ಸವವು ದಿನಾಂಕ 22 ಸೆಪ್ಟೆಂಬರ್ 2025ರಂದು ಉದ್ಘಾಟನೆಗೊಂಡಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಆಶೀರ್ವಚನವಿತ್ತ ಎಡನೀರು ಮಠಾಧೀಶರಾದ ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿ “ವರ್ತಮಾನ ಕಾಲಘಟ್ಟದಲ್ಲಿ ಆಧುನಿಕ ತಂತ್ರಜ್ಞಾನಗಳ ಬಹುವಿಧ ಪ್ರದರ್ಶನಗಳ ಮಧ್ಯೆ ನಮ್ಮ ಧಾರ್ಮಿಕ ಕಲೆಗಳ ಉಳಿವಿಗೆ ಪ್ರಯತ್ನ ಅಗತ್ಯವಿದೆ. ಹರಿಕಥೆ ಅಂತಹ ಪುರಾಣ, ಸಂಸ್ಕೃತಿ ಪ್ರಧಾನ ಕಲೆಗಳ ಪ್ರಯೋಗ ಆಕರ್ಷಣೆಯ ಸಹಿತ ಅದರ ಗುಣಮಟ್ಟ ಕಾಯ್ದುಕೊಂಡು ಹೆಚ್ಚಿನ ಪ್ರೋತ್ಸಾಹ ಸಿಗುವ ಚಿಂತನೆ ನಡೆಸಬೇಕು” ಎಂದು ನುಡಿದರು. ಗುಡ್ಡೆ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಡಾ. ಅನಂತ ಕಾಮತ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅಭ್ಯಾಗತರಾಗಿ ಭಾಗವಹಿಸಿದ ಚಿತ್ರನಟ ಕಾಸರಗೋಡು ಚಿನ್ನಾ ಇವರು ಮಾತನಾಡಿ “ಹಿರಿಯ ಕಲಾವಿದರೆಲ್ಲ ಶಿಷ್ಟ ಕಲೆಗಳನ್ನು ಜನಸಾಮಾನ್ಯರಿಗೆ ಮುಟ್ಟಿಸುವ ಜವಾಬ್ದಾರಿಯನ್ನು ಯುವ ಸಂಘಟಕರಿಗೆ ದಾಟಿಸುವ ಕೆಲಸ…

Read More

ಬೆಂಗಳೂರು : ಕನ್ನಡದ ಖ್ಯಾತ ಕಾದಂಬರಿಕಾರ, ಚಿಂತಕ, ಹಿರಿಯ ಸಾಹಿತಿ ಎಸ್‌.ಎಲ್‌. ಭೈರಪ್ಪ (94) ಇವರು ವಯೋ ಸಹಜ ಖಾಯಿಲೆಯಿಂದ ಬೆಂಗಳೂರಿನಲ್ಲಿ ದಿನಾಂಕ 24 ಸೆಪ್ಟೆಂಬರ್ 2025ರಂದು ನಿಧನ ಹೊಂದಿದ್ದಾರೆ. 1934ರ ಜುಲೈ 26ರಂದು ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಸಂತೇಶಿವರ ಗ್ರಾಮದಲ್ಲಿ ಜನಿಸಿದರು. ಎಸ್‌.ಎಲ್‌. ಭೈರಪ್ಪರವರು ಕನ್ನಡದ ಸಾಹಿತ್ಯ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅಪಾರ ಮತ್ತು ಅಮರವಾದುದು. ಇವರ ಪ್ರಮುಖ ಕೃತಿಗಳು : ‘ವಂಶವೃಕ್ಷ’, ‘ದಾಟು’, ‘ತಂತು’, ‘ಅಂಚು’, ‘ಪರ್ವ’, ‘ಗೃಹಭಂಗ’, ‘ಸಾರ್ಥ’, ‘ಮಂದ್ರ’ ಇತ್ಯಾದಿ ಕೃತಿಗಳನ್ನು ರಚಿಸಿದ್ದಾರೆ. ಎಸ್‌ ಎಲ್‌ ಭೈರಪ್ಪ ಅವರ ಕಾದಂಬರಿಗಳು: ‘ಧರ್ಮಶ್ರೀ’, ‘ದೂರ ಸರಿದರು’, ‘ಮತದಾನ’, ‘ವಂಶವೃಕ್ಷ’, ‘ಜಲಪಾತ’, ‘ನಾಯಿ ನೆರಳು’, ‘ತಬ್ಬಲಿಯು ನೀನಾದೆ ಮಗನೆ’, ‘ಗೃಹಭಂಗ’ ಸೇರಿದಂತೆ ಹಲವಾರು ಕಾದಂಬರಿಗಳು ಪ್ರಖ್ಯಾತಿಯನ್ನು ಹೊಂದಿದೆ. ಎಸ್‌.ಎಲ್‌. ಭೈರಪ್ಪರವರಿಗೆ ಸಂದ ಪ್ರಶಸ್ತಿಗಳು : ಭಾರತ ಸರ್ಕಾರದಿಂದ ನೀಡಲಾದ ದೊಡ್ಡ ಗೌರವ ‘ಪದ್ಮ ಭೂಷಣ’-2023, ಕೇಂದ್ರ ಸರಕಾರದ ‘ಪದ್ಮಶ್ರೀ’- 2016, ಮಮೋನಿ ರೈಸೊಂ ಗೋಸ್ವಾಮಿ ರಾಷ್ಟ್ರೀಯ ಸಾಹಿತ್ಯ…

Read More

ಮಂಗಳೂರು : ಕಲ್ಕೂರ ಪ್ರತಿಷ್ಠಾನ (ರಿ.) ಮಂಗಳೂರು ಇದರ ಆಶ್ರಯದಲ್ಲಿ ದಿನಾಂಕ 10 ಅಕ್ಟೋಬರ್ 2025ರಂದು ಹಿರಿಯ ಸಾಹಿತಿ ಡಾ. ಕೋಟ ಶಿವರಾಮ ಕಾರಂತರ ಜನ್ಮ ದಿನೋತ್ಸವ ಸಮಾರಂಭವು ಜರಗಲಿದ್ದು, ಇದರ ಸಲುವಾಗಿ ಅಂಚೆ ಕಾರ್ಡಿನಲ್ಲಿ ಕಾರಂತರ ಚಿತ್ರ ರಚನಾ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ. ಎಸ್.ಎಸ್.ಎಲ್.ಸಿ.ವರೆಗಿನ ವಿಭಾಗ ಮತ್ತು ಮುಕ್ತ ವಿಭಾಗ ಎಂಬ ಎರಡು ವಿಭಾಗಗಳಲ್ಲಿ ಈ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು, ಪೆನ್ಸಿಲ್ ನಿಂದ ‘ಕಪ್ಪು-ಬಿಳುವು’ ಚಿತ್ರಗಳನ್ನು ಮಾತ್ರ ರಚಿಸಬೇಕು. ಇದು ರಾಜ್ಯ ಮಟ್ಟದ ಸ್ಪರ್ಧೆಯಾಗಿದ್ದು, ವಿಜೇತರಿಗೆ ಬಹುಮಾನವನ್ನು ಮಂಗಳೂರಿನಲ್ಲಿ ಜರಗಲಿರುವ ಸಮಾರಂಭದಲ್ಲಿ ವಿತರಿಸಲಾಗುವುದು. ಅಂಚೆ ಕಾರ್ಡ್ ಗಳನ್ನು ಸ್ವ-ವಿಳಾಸ ಮತ್ತು ಸಂಪರ್ಕ ದೂರವಾಣಿ ಸಂಖ್ಯೆಯೊಂದಿಗೆ ದಿನಾಂಕ 06 ಅಕ್ಟೋಬರ್ 2025ರೊಳಗಾಗಿ ಜಾನ್ ಚಂದ್ರನ್ (ಸಂಚಾಲಕರು), ಅಂಚೆ ಕಾರ್ಡ್ ನಲ್ಲಿ ಚಿತ್ರ ರಚನಾ ಸ್ಪರ್ಧಾ ವಿಭಾಗ, ಕಲ್ಕೂರ ಪ್ರತಿಷ್ಠಾನ, ಶ್ರೀ ಕೃಷ್ಣ ಸಂಕೀರ್ಣ, ಮಹಾತ್ಮ ಗಾಂಧಿ ರಸ್ತೆ, ಕೊಡಿಯಾಲ್ ಬೈಲ್, ಮಂಗಳೂರು ಈ ವಿಳಾಸಕ್ಕೆ ತಲಪುವಂತೆ ಕಳುಹಿಸಬೇಕೆಂದು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷರಾದ ಎಸ್. ಪ್ರದೀಪ…

Read More