Author: roovari

ಉಡುಪಿ : ಮಹತೋಭಾರ ಶ್ರೀ ಶಂಕರನಾರಾಯಣ ದೇವಸ್ಥಾನ ಕೊಡವೂರು ಮತ್ತು ನೃತ್ಯನಿಕೇತನ ಕೊಡವೂರು ಇವರ ಜಂಟಿ ಆಶ್ರಯದಲ್ಲಿ ಆರಂಭಗೊಂಡಿದ್ದ ಏಕವ್ಯಕ್ತಿ ನೃತ್ಯ ಪ್ರದರ್ಶನಕ್ಕೊಂದು ವೇದಿಕೆ ‘ನೃತ್ಯ ಶಂಕರ’ ಆಗಸ್ಟ್ ತಿಂಗಳ ಸಾಪ್ತಾಹಿಕ ಸರಣಿ ನೃತ್ಯ ಕಾರ್ಯಕ್ರಮವು ದಿನಾಂಕ 05-08-2024, 12-08-2024, 19-08-2024 ಮತ್ತು 26-07-2024ರಂದು ಪ್ರತೀ ಸಂಜೆ ಗಂಟೆ 6.25ಕ್ಕೆ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದ ವಸಂತ ಮಂಟಪದಲ್ಲಿ ನಡೆಯಲಿದೆ. ದಿನಾಂಕ 05-08-2024ರಂದು ನಡೆಯಲಿರುವು ಸರಣಿ 57ರಲ್ಲಿ ಸಿಂಚನ ಬಾಯರಿ, ದಿನಾಂಕ 12-08-2024ರಂದು ನಡೆಯಲಿರುವು ಸರಣಿ 58ರಲ್ಲಿ ನೃತ್ಯನಿಕೇತನ ಕೊಡವೂರಿನ 85 ಕಾಲವಿದೆಯರು, ದಿನಾಂಕ 19-08-2024ರಂದು ನಡೆಯಲಿರುವು ಸರಣಿ 59ರಲ್ಲಿ ವಿದುಷಿ ಸುಪ್ರಭ ಕಲ್ಕೂರ್ ಮತ್ತು ದಿನಾಂಕ 26-08-2024ರಂದು ನಡೆಯಲಿರುವು ಸರಣಿ 60ರಲ್ಲಿ ಮಹತಿ ಎಚ್. ಪಾವನನ್ಕರ್ ಇವರುಗಳು ನೃತ್ಯ ಕಾರ್ಯಕ್ರಮ ನೀಡಲಿದ್ದಾರೆ.

Read More

ಧರ್ಮಸ್ಥಳ : ಯಕ್ಷಗಾನ ಕಲಾರಂಗದ ಒಂದು ವರ್ಷದ ಸಮಗ್ರ ಚಟುವಟಿಕೆಯ ವಿವರಗಳನ್ನು ಒಳಗೊಂಡ ಮುನ್ನೂರು ಪುಟಗಳ ಸಚಿತ್ರ “ಕಲಾಂತರಂಗ 2023-24″ವನ್ನು ದಿನಾಂಕ 31 ಜುಲೈ 2024ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿಗಳಾದ ಪೂಜ್ಯ ಡಾ. ಡಿ. ವೀರೇಂದ್ರ ಹೆಗಡೆಯವರು ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಯಕ್ಷಗಾನ ಕಲಾರಂಗದ ಅಧ್ಯಕ್ಷರಾದ ಎಂ. ಗಂಗಾಧರ್ ರಾವ್ ಮತ್ತು ಕಾರ್ಯದರ್ಶಿ ಮುರಲಿ ಕಡೆಕಾರ್ ಸಂಸ್ಥೆ ನಡೆಸುತ್ತಿರುವ ಕಾರ್ಯಾಚರಣೆಗಳ ಬಗ್ಗೆ ವಿಶೇಷವಾಗಿ ಸುವರ್ಣ ವರ್ಷದ ವಿಶಿಷ್ಟ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು. ಉಡುಪಿಗೆ ಬಂದಾಗ ಸಂಸ್ಥೆಯ ನೂತನ ಕಟ್ಟಡ ಐ.ವೈ.ಸಿ.ಗೆ ಭೇಟಿ ನೀಡುವುದಾಗಿ ಹೆಗಡೆಯವರು ತಿಳಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಉಪಾಧ್ಯಕ್ಷರುಗಳಾದ ಪಿ. ಕಿಶನ್ ಹೆಗ್ಡೆ, ವಿ.ಜಿ. ಶೆಟ್ಟಿ, ಸದಸ್ಯರಾದ ಬಿ. ಭುವನಪ್ರಸಾದ್ ಹೆಗ್ಡೆ ಹಾಗೂ ವಿನೋದಾ ಉಪಸ್ಥಿತರಿದ್ದರು. ಸಂಚಿಕೆಯು ಸಂಸ್ಥೆಯ ಸದಸ್ಯರಾದ ಪೃಥ್ವಿರಾಜ್ ಕವತ್ತಾರ್ ಇವರ ಸಂಪಾದಕತ್ವದಲ್ಲಿ ಪ್ರಕಟಗೊಂಡಿದೆ.

Read More

ಎಡನೀರು : ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನ ಶ್ರೀ ಎಡನೀರು ಮಠ ಪರಮಪೂಜ್ಯ ಶ್ರೀ ಶ್ರೀ ಸಚ್ಚಿದಾನಂದಭಾರತೀ ಶ್ರೀ ಪಾದಂಗಳವರ ಚತುರ್ಥ ಚಾತುರ್ಮಾಸ್ಯ ವೃತಾಚರಣೆ ಪ್ರಯುಕ್ತ ದಿನಾಂಕ 3 ಆಗಸ್ಟ್ 2024ರಿಂದ 11 ಆಗಸ್ಟ್ 2024ರವರೆಗೆ ಶ್ರೀಮದ್ ದೇವೀ ಭಾಗವತ ನವಾಹ ಮತ್ತು ಯಕ್ಷಗಾನ ತಾಳಮದ್ದಳೆ ನವಾಹ’ ಕಾರ್ಯಕ್ರಮವನ್ನು ಪ್ರತಿ ದಿನ ಸಂಜೆ 6-00 ಗಂಟೆಗೆ ಶ್ರೀ ಎಡನೀರು ಮಠದಲ್ಲಿ ಹಮ್ಮಿಕೊಳ್ಳಲಾಗಿದೆ. ದಿನಾಂಕ 3 ಆಗಸ್ಟ್ 2024ರಂದು ‘ಕಾರ್ತವೀರ್ಯಾರ್ಜುನ’, ದಿನಾಂಕ 4 ಆಗಸ್ಟ್ 2024ರಂದು ‘ಸೀತಾಪಹಾರ’, ದಿನಾಂಕ 5 ಆಗಸ್ಟ್ 2024ರಂದು ‘ಇಂದ್ರಜಿತು ಕಾಳಗ’, ದಿನಾಂಕ 6 ಆಗಸ್ಟ್ 2024ರಂದು ‘ರಾವಣ ವಧೆ’, ದಿನಾಂಕ 7 ಆಗಸ್ಟ್ 2024ರಂದು ‘ವೀರಮಣಿ ಕಾಳಗ’, ದಿನಾಂಕ 8 ಆಗಸ್ಟ್ 2024ರಂದು ‘ಕೌಶಿಕ ಚರಿತ್ರೆ’, ದಿನಾಂಕ 9 ಆಗಸ್ಟ್ 2024ರಂದು ‘ಪಾದುಕಾ ಪ್ರದಾನ’, ದಿನಾಂಕ 10 ಆಗಸ್ಟ್ 2024ರಂದು ‘ಸುಧನ್ವ ಕಾಳಗ’, ದಿನಾಂಕ 11 ಆಗಸ್ಟ್ 2024ರಂದು ‘ಶಾಂಭವೀ ವಿಜಯ’ ಎಂಬ ಪ್ರಸಂಗಗಳ ಯಕ್ಷಗಾನ ತಾಳಮದ್ದಳೆ…

Read More

ಬೆಂಗಳೂರು : ಕರ್ನಾಟಕ ನಾಟಕ ಅಕಾಡೆಮಿ ವತಿಯಿಂದ ರಂಗ ಗೆಳೆಯರು ಬೆಂಗಳೂರು ಇವರ ಸಹಕಾರದೊಂದಿಗೆ ರಂಗ ಚಾವಡಿ ಉದ್ಘಾಟನೆ ಹಾಗೂ ರಂಗ ಸಂವಾದ 01 ಕಾರ್ಯಕ್ರಮವನ್ನು ದಿನಾಂಕ 2 ಆಗಸ್ಟ್ 2024 ರಂದು ಸಂಜೆ 5-00 ಗಂಟೆಗೆ ಬೆಂಗಳೂರಿನ ಜೆ.ಸಿ. ರಸ್ತೆ, ಕನ್ನಡ ಭವನ, ಕರ್ನಾಟಕ ನಾಟಕ ಅಕಾಡೆಮಿ ಆವರಣದಲ್ಲಿರುವ ರಂಗ ಚಾವಡಿಯಲ್ಲಿ ಆಯೋಜಿಸಲಾಗಿದೆ. ಪ್ರಸಿದ್ಧ ರಂಗ ನಿರ್ದೇಶಕರು ಮತ್ತು ನಾಟಕಕಾರರಾದ ಶ್ರೀ ಪ್ರಸನ್ನ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಕರ್ನಾಟಕ ನಾಟಕ ಅಕಾಡೆಮಿಯ ಅಧ್ಯಕ್ಷರಾದ ಶ್ರೀ ಕೆ.ವಿ. ನಾಗರಾಜಮೂರ್ತಿ ಇವರು ಅಧ್ಯಕ್ಷತೆ ವಹಿಸಲಿರುವರು. ‘ಸಮಕಾಲೀನ ರಂಗ ನಟರಿಗೆ ಭಾರತೀಯ ಪರಂಪರೆ ಎಂಬುದೊಂದು ಇದೆಯೇ ?” ಎಂಬ ವಿಷಯದ ಬಗ್ಗೆ ಸಂವಾದ ನಡೆಯಲಿದೆ.

Read More

ಮಂಗಳೂರು : ಮಾಂಡ್ ಸೊಭಾಣ್ ಸಂಘಟನೆಯು ತಿಂಗಳ ವೇದಿಕೆಯ 272ನೇ ಸರಣಿ ಕಾರ್ಯಕ್ರಮವು 04 ಆಗಸ್ಟ್ 2024 ರಂದು ಮಂಗಳೂರಿನ ಶಕ್ತಿನಗರದ ಕಲಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಗೋವಾದ ಖ್ಯಾತ ‘ತಿಯಾತ್ರ್’ ತಂಡದಿಂದ ‘ತುಂ ನಾಸ್ಲೊ ತರ್’ (ನೀನಿಲ್ಲದಿರೆ) ಎಂಬ ತಿಯಾತ್ರ್ ಪ್ರದರ್ಶನಗೊಳ್ಳಲಿದೆ. ಫಾ. ಮಿಲ್ಟನ್ ರೊಡ್ರಿಗಸ್ ಇದನ್ನು ರಚಿಸಿದ್ದು, ಶಾಂತಾರಾಮ್ ಪವಾರ್ ನಿರ್ದೇಶನ ಮಾಡಿದ್ದಾರೆ. ನಿರ್ಮಾಣ ಜವಾಬ್ದಾರಿ ಗೋವನ್ ಡಾಟ್ ಕಾಮ್ ಇವರದ್ದು. ಈ ತಿಯಾತ್ರ್ ಗೋವಾದ ಕಲಾ ಅಕಾಡೆಮಿ ನಡೆಸಿದ ಸ್ಪರ್ಧೆಯ ವಿವಿಧ ವಿಭಾಗಗಳಲ್ಲಿ ಬಹುಮಾನಗಳನ್ನು ಪಡೆದಿದ್ದು, ಅಲ್ಲಿ ಹಲವಾರು ಪ್ರದರ್ಶನಗಳನ್ನು ಕಂಡಿದೆ. ಇದನ್ನು ಪತ್ರಕರ್ತ ಮತ್ತು ಕೊಂಕಣಿ ಮುಖಂಡ ದಿ. ಜೊಯ್ ಫೆರ್ನಾಂಡಿಸ್ ಗೋವಾ ಇವರ ಸ್ಮರಣಾರ್ಥ ಆಯೋಜಿಸಲಾಗಿದೆ. ಸುಮಾರು 25 ಜನರ ತಂಡ ಪ್ರದರ್ಶನ ನೀಡಲಿದೆ. ಕೊಂಕಣಿ ರಂಗಭೂಮಿಯಲ್ಲಿ ‘ತಿಯಾತ್ರ್’ ಎಂದರೆ ಒಪೆರಾ ಹಾಗೂ ನಾಟಕ ಪ್ರಕಾರದ ಸಮ್ಮಿಲನವಾಗಿದ್ದು, ಗೋವಾ ಹಾಗೂ ಉತ್ತರ ಕನ್ನಡದ ಕೊಂಕಣಿ ಜನರಲ್ಲಿ ಪ್ರಸಿದ್ದಿ ಪಡೆದಿದೆ. ಈ ಕಾರ್ಯಕ್ರಮಕ್ಕೆ ಸರ್ವರಿಗೂ ಪ್ರವೇಶ ಉಚಿತವಾಗಿದೆ.

Read More

ಕುಪ್ಪಳ್ಳಿ : ಶ್ರೀ ಬಿ. ನಾಗೇಶ್ ನೇತೃತ್ವದ ಜಾಗೃತಿ ಟ್ರಸ್ಟ್ ಬೆಂಗಳೂರು ಸಂಸ್ಥೆ ಹಾಗೂ ರೋಟರಿ ಕ್ಲಬ್ ರಿಚ್ಮಂಡ್ ಟೌನ್ ಬೆಂಗಳೂರು ಜಂಟಿಯಾಗಿ ದಿನಾಂಕ 28 ಜುಲೈ 2024 ಆದಿತ್ಯವಾರದಂದು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ರಾಷ್ಟ್ರಕವಿ ಕುವೆಂಪು ಅವರ ಜನ್ಮಸ್ಥಳವಾದ ಕುಪ್ಪಳ್ಳಿಯ ಪುಣ್ಯ ಮಣ್ಣಿನಲ್ಲಿನ ಕುವೆಂಪು ಶತಮಾನೋತ್ಸವ ಭವನದಲ್ಲಿ ಗುರುವಂದನಾ, ಪುಸ್ತಕ ಬಿಡುಗಡೆ, ಕವಿಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಪ್ರಶಸ್ತಿ ಪ್ರದಾನ ಸಮಾರಂಭವು ಬಹಳ ಅದ್ದೂರಿಯಾಗಿ ನಡೆಯಿತು. ಸಮಾಜ ಸೇವಕಿ ಶ್ರೀಮತಿ ಲಕ್ಷ್ಮೀದೇವಿ ಅವರು ದೀಪ ಬೆಳಗುವುದರ ಮೂಲಕ ಸಭಾಕಾರ್ಯಕ್ರಮವನ್ನು ಉದ್ಘಾಟಿಸಿದರು. ಶ್ರೀಯುತ ಸದಾಶಿವಯ್ಯ ಅವರು ಈ ಕಾರ್ಯಕ್ರಮದ ಘನ ಅಧ್ಯಕ್ಷತೆಯನ್ನು ವಹಿಸಿದರು. ಶ್ರೀಯುತರಾದ ಸುರೇಶ ಕುಮಾರ್ ಮತ್ತು ಶ್ರೀಕಾಂತ್ ಮಂಗಳಂ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಈ ವೇದಿಕೆಯಲ್ಲಿ ಡಾ. ಬಿ.ಎಸ್. ಮಂಜುನಾಥ್ ಅವರ ‘ಭಾವಜೀವಿಯ ಅನುಭಾವ ಲಹರಿ’ ಕವನ ಸಂಕಲನವನ್ನು ಕಾಸರಗೋಡಿನ ಆಯುರ್ವೇದ ವೈದ್ಯೆ, ಕವಯತ್ರಿ ಮತ್ತು ಸಂಘಟಕಿಯಾದ ಡಾ. ವಾಣಿಶ್ರೀ ಕಾಸರಗೋಡು ಇವರು ಲೋಕಾರ್ಪಣೆ ಮಾಡಿದರು. ಜಾಗೃತಿ ಟ್ರಸ್ಟಿನ…

Read More

ಎಡನೀರು : ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನ ಶ್ರೀ ಎಡನೀರು ಮಠ ಪರಮಪೂಜ್ಯ ಶ್ರೀ ಶ್ರೀ ಸಚ್ಚಿದಾನಂದಭಾರತೀ ಶ್ರೀ ಪಾದಂಗಳವರ ಚತುರ್ಥ ಚಾತುರ್ಮಾಸ್ಯ ವೃತಾಚರಣೆ ಪ್ರಯುಕ್ತ ದಿನಾಂಕ 2 ಆಗಸ್ಟ್ 2024ರಂದು ಸಾಂಸ್ಕೃತಿಕ ಕಾರ್ಯಕ್ರಮ ಸಂಜೆ 6-00 ಗಂಟೆಗೆ ಶ್ರೀ ಎಡನೀರು ಮಠದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಮಂಗಳೂರಿನ ಶ್ರೀ ರವಿ ಅಲೆವೂರಾಯ ನೇತೃತ್ವದ ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಕ್ಕಳ ಮೇಳ ಸರಯೂ ಬಾಲ ಯಕ್ಷ ವೃಂದ (ರಿ.) ಕೋಡಿಕಲ್ ಇವರಿಂದ ‘ವೀರ ಶತಕಂಠ’ (ಶೂರ್ಪನಖ ವಧಾ) ಪ್ರಸಂಗದ ಯಕ್ಷಗಾನ ಬಯಲಾಟ ಪ್ರದರ್ಶನಗೊಳ್ಳಲಿದೆ.

Read More

ಬಂಟಕಲ್ಲು : ನಾಗರಿಕ ಸಮಿತಿ ಬಂಟಕಲ್ಲು, ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹಾಗೂ ಕಾಪು ತಾಲೂಕು ಘಟಕದ ವತಿಯಿಂದ ಆಯೋಜಿಸಿರುವ ಮನೆಯೇ ಗ್ರಂಥಾಲಯ ಅಭಿಯಾನದ ಅಂಗವಾಗಿ ಬಂಟಕಲ್ಲಿನ ಬಸ್ ನಿಲ್ದಾಣದಲ್ಲಿ ನಿರ್ಮಾಣಗೊಂಡ ಗ್ರಂಥಾಲಯಕ್ಕೆ ಕನ್ನಡ ಪುಸ್ತಕಗಳನ್ನು ಬಂಟಕಲ್ಲು ನಾಗರಿಕ ಸೇವಾ ಸಮಿತಿ ಅಧ್ಯಕ್ಷರಾದ ಕೆ.ಆರ್. ಪಾಟ್ಕರ್ ಇವರಿಗೆ ಉಡುಪಿ ತಾಲೂಕು ಕ.ಸಾ.ಪ. ಅಧ್ಯಕ್ಷರಾದ ಶ್ರೀ ರವಿರಾಜ್ ಎಚ್.ಪಿ. ಇವರು ದಿನಾಂಕ 31 ಜುಲೈ 2024ರಂದು ಹಸ್ತಾಂತರಿಸಿದರು. ಈ ಕಾರ್ಯಕ್ರಮದಲ್ಲಿ ಶ್ರೀ ರವಿರಾಜ್ ಎಚ್.ಪಿ. ಮಾತನಾಡುತ್ತಾ “ಉಡುಪಿ ತಾಲೂಕಿನಲ್ಲಿ ಈಗಾಗಲೇ 65 ಗ್ರಂಥಾಲಯಗಳು ಮನೆ, ಅಂಗಡಿ, ಆಸ್ಪತ್ರೆ ಇನ್ನಿತರ ಸಾರ್ವಜನಿಕ ಸ್ಥಳಗಳಲ್ಲಿ ನಿರ್ಮಾಣಗೊಂಡಿದೆ. 100 ದಿನಗಳಲ್ಲಿ ನೂರು ಗ್ರಂಥಾಲಯ ನಿರ್ಮಾಣಗೊಳ್ಳುವ ಆಶಯವನ್ನು ಹೊಂದಿದ್ದು, ಕ.ಸಾ.ಪ. ಕಾಪು ತಾಲೂಕು ಘಟಕ ಈ ಅಭಿಯಾನದಲ್ಲಿ ನಮ್ಮೊಂದಿಗೆ ಸಹಕರಿಸುತ್ತಿದೆ” ಎಂದರು. ಈ ಸಂದರ್ಭದಲ್ಲಿ ಕ.ಸಾ.ಪ. ಕಾಪು ತಾಲೂಕು ಘಟಕದ ಅಧ್ಯಕ್ಷ ಪುಂಡಲೀಕ ಮರಾಠೆ, ಮಾಧವ ಕಾಮತ್, ಕಾರ್ಯದರ್ಶಿ ದಿನೇಶ್ ದೇವಾಡಿಗ, ಕೊಶಾಧಿಕಾರಿ ಜಗದೀಶ ಆಚಾರ್ಯ, ಸದಸ್ಯರಾದ…

Read More

ಮಂಗಳೂರು : ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.) ಮತ್ತು ಬೈಕಾಡಿ ಪ್ರತಿಷ್ಠಾನ (ರಿ.) ಮಂಗಳೂರು ಇವರ ವತಿಯಿಂದ ಕೆನರಾ ಕಲ್ಚರಲ್ ಅಕಾಡೆಮಿಯ ಸಹಯೋಗದೊಂದಿಗೆ ಬೈಕಾಡಿ ಜನಾರ್ದನ ಆಚಾರ್ ಸ್ಮರಣಾರ್ಥ ಮಕ್ಕಳ ನಾಟಕೋತ್ಸವವನ್ನು ದಿನಾಂಕ 3 ಆಗಸ್ಟ್ 2024ರಂದು ಸಂಜೆ ಗಂಟೆ 6-00ಕ್ಕೆ ಮಂಗಳೂರು ಡೊಂಗರಗೇರಿ ಕೆನರಾ ಹೆಮ್ಮಕ್ಕಳ ಪ್ರೌಢ ಶಾಲೆಯ ಸುಧೀಂದ್ರ ಸಭಾಂಗಣದಲ್ಲಿ ಹಮ್ಮಿಕೊಂಡಿದೆ. ಈ ಕಾರ್ಯಕ್ರಮದಲ್ಲಿ ಶ್ರೀಮತಿ ವೈದೇಹಿ ರಚನೆಯ ಹಾಗೂ ಡಾ. ಜೀವನ್ ರಾಂ ಸುಳ್ಯ ಇವರ ನಿರ್ದೇಶನ ಮತ್ತು ರಂಗವಿನ್ಯಾಸದಲ್ಲಿ ಆಳ್ವಾಸ್ ರಂಗ ಅಧ್ಯಯನ ಕೇಂದ್ರ ಅಭಿನಯಿಸುವ ‘ನಾಯಿ ಮರಿ’ ನಾಟಕ ಪ್ರದರ್ಶನ ನಡೆಯಲಿದೆ. ಆಸಕ್ತರಿಗೆ ಉಚಿತ ಪ್ರವೇಶವಿದೆ. ಓರ್ವ ಶಿಕ್ಷಕರಾಗಿ, ಕಲಾರಾಧಕರಾಗಿ, ಸಂಪನ್ಮೂಲ ವ್ಯಕ್ತಿಯಾಗಿ, ಬಹುಮುಖ ವ್ಯಕ್ತಿತ್ವದ ಶ್ರೀ ಬೈಕಾಡಿ ಜನಾರ್ದನ ಆಚಾರ್ ಇವರು ಸಮಾಜಕ್ಕೆ ಸಲ್ಲಿಸಿದ ಸೇವೆ ಅಪಾರ. ಪ್ರಬುದ್ಧ ಶಿಕ್ಷಕರಾಗಿದ್ದ ಶ್ರೀಯುತರು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ವಿಶೇಷ ಆದ್ಯತೆ ನೀಡಿ, ಕೇವಲ ಪಠ್ಯ ಮಾತ್ರವಲ್ಲದೆ ಪಠ್ಯೇತರ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಲ್ಲಿ ಪ್ರೇರಣೆ…

Read More

ಉಡುಪಿ : ಮಂದಾರ್ತಿ,ಮಡಾಮಕ್ಕಿ, ಅಮೃತೇಶ್ವರಿ,ಸಾಲಿಗ್ರಾಮ ಹಾಗೂ ಮಾರಣಕಟ್ಟೆ ಮೇಳಗಳಲ್ಲಿ ಸುಮಾರು 12 ವರ್ಷ ಸ್ತ್ರೀವೇಷಧಾರಿಯಾಗಿ ಕಲಾಸೇವೆಗೈದ ಗುರುಪ್ರಸಾದ್ ನೀರ್ಜೆಡ್ಡು 30 ಜುಲೈ 2024 ರಂದು ನಿಧನ ಹೊಂದಿದರು. ಅವರಿಗೆ 26 ವರ್ಷ ವಯಸ್ಸಾಗಿತ್ತು. ಮಂದಾರ್ತಿ ಯಕ್ಷಗಾನ ತರಬೇತಿ ಕೇಂದ್ರದಲ್ಲಿ ಹಾರಾಡಿ ರಮೇಶ ಗಾಣಿಗರಿಂದ ಯಕ್ಷಗಾನ ನೃತ್ಯಾಭ್ಯಾಸ ಮಾಡಿ ಭರವಸೆಯ ಕಲಾವಿದರಾಗಿದ್ದ ಇವರು ಮುಂದಿನ ತಿರುಗಾಟಕ್ಕೆ ಹಾಲಾಡಿ ಮೇಳಕ್ಕೆ ನೇಮಕಗೊಂಡಿದ್ದರು. ಶ್ರೀಯುತರು ತಾಯಿ, ತಮ್ಮ ಹಾಗೂ ಅಭಿಮಾನಿ ಬಳಗವನ್ನು ಅಗಲಿದ್ದಾರೆ.

Read More