Subscribe to Updates
Get the latest creative news from FooBar about art, design and business.
Author: roovari
ಮಡಿಕೇರಿ: ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯು ‘ಕೊಡವ ಕಥೆ ಜೊಪ್ಪೆ’ಯನ್ನು ಹೊರತರಲು ಸೂಕ್ತ ಕತೆಗಳನ್ನು ಆಹ್ವಾನಿಸಿದೆ. ಸುಮಾರು 25ರಿಂದ 30ರಷ್ಟು ಕತೆಗಳನ್ನು ಒಂದೇ ಪುಸ್ತಕದಲ್ಲಿ ಪ್ರಕಟಿಸಲಾಗುವುದು. ಕತೆಗಳು ಎ4 ಅಳತೆಯ ಕಾಗದದಲ್ಲಿ ಸ್ಪುಟವಾಗಿ, 5-6 ಪುಟಗಳನ್ನು ಮೀರದಂತಿರಬೇಕು. ಕಥಾವಸ್ತು ಕತೆಗಾರರ ಕಲ್ಪನೆಗೆ ಬಿಟ್ಟಿದ್ದು. ಕತೆಗಳು ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ‘ಯಾರದ್ದು ತೇಜೋವಧೆಯಾಗಲಿ ಅಥವಾ ಜಾತಿ-ಧರ್ಮಗಳ ಭಾವನೆಗಳಿಗೆ ಘಾಸಿ ಉಂಟು ಮಾಡುವಂತಿರಬಾರದು. ಸಾಧಕ-ಭಾದಕಗಳಿಗೆ ಕತೆಗಾರರೇ ಜವಾಬ್ದಾರರು. ಕತೆಗಳು ಸಾಧ್ಯವಾದಷ್ಟು ಕೊಡವ ಸಂಸ್ಕೃತಿ-ಪದ್ಧತಿ, ಮೂಲತನಕ್ಕೆ ಒತ್ತುಕೊಡುವಂತಿದ್ದು ಸಾರ್ವಕಾಲಿಕವಾಗಿರಲಿ. ಪ್ರಕಟಿತ ಕಥೆಗಳಿಗೆ ಅಕಾಡೆಮಿ ಗೊತ್ತು ಪಡಿಸಿರುವಂತೆ ಸಂಭಾವನೆ ನೀಡಲಾಗುವುದು. ಕಥೆಗಾರರು ತಮ್ಮ ಸ್ವಪರಿಚಯವನ್ನು 4-5 ವಾಕ್ಯಗಳಿಗೆ ವೀರದಂತೆ ಬರೆದು ಕಳುಹಿಸಬೇಕು. ಪ್ರತಿಯೊಬ್ಬ ಕಥೆಗಾರರು ತಮ್ಮ ಇತ್ತೀಚಿನ ಭಾವಚಿತ್ರದೊಂದಿಗೆ ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ ಲಗತ್ತಿಸಬೇಕು. ಕತೆಗಳನ್ನು ಕಳುಹಿಸಿಕೊಡಲು 20 ಸೆಪ್ಟೆಂಬರ್ 2024ಕೊನೆ ದಿನವಾಗಿದ್ದು, ಒಂದಕ್ಕಿಂತ ಹೆಚ್ಚಿನ ಕತೆಗಳನ್ನು ಕಳುಹಿಸುವಂತಿಲ್ಲ. ‘ಕೊಡವ ಕಥೆ ಜೊಪ್ಪೆಗೆ’ ನಿಮ್ಮ ಕಥೆಗಳನ್ನು ಅಧ್ಯಕ್ಷರು/ ರಿಜಿಸ್ಟ್ರಾರ್, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ, ಜೂನಿಯರ್…
ಮೂಲ್ಕಿ: ಸಾಹಿತ್ಯ, ಲಲಿತಕಲೆ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಮಹತ್ತರ ಸೇವೆ ಸಲ್ಲಿಸಿದ ಗಣ್ಯರಿಗೆ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ ವತಿಯಿದ ನೀಡಲಾಗುವ ಪ್ರತಿಷ್ಠಿತ ‘ದಾಸೋಹಿ’ ಪ್ರಶಸ್ತಿಗೆ ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯ ಕೊಡುಗೈ ದಾನಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಇದರ ಮಾಜಿ ರಾಜ್ಯಾಧ್ಯಕ್ಷ ಡಾ.ಹರಿಕೃಷ್ಣ ಪುನರೂರ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕ. ಚು. ಸಾ. ಪ. ಇದರ ಸಂಚಾಲಕರಾದ ಕೃಷ್ಣಮೂರ್ತಿ ಕುಲಕರ್ಣಿ ತಿಳಿಸಿದ್ದಾರೆ. 5 ಸೆಪ್ಟೆಂಬರ್ 2024ರಂದು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ಜರುಗಲಿರುವ ಕ. ಚು. ಸಾ. ಪ. ರಾಜ್ಯ ಶಿಕ್ಷಕ ಸಾಹಿತಿಗಳ ಏಳನೆಯ ಸಮ್ಮೇಳನದಲ್ಲಿ ಈ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಎಂದು ಪ್ರಸಾರಾಂಗ ನಿರ್ದೇಶಕ ಚನ್ನಬಸಪ್ಪ ಧಾರವಾಡ ಶೆಟ್ರು ತಿಳಿಸಿದ್ದಾರೆ.
ಗ್ರಾಮೀಣ ಪ್ರತಿಭೆಯಾಗಿ ಉತ್ತಮ ಹೆಸರು ಗಳಿಸಿರುವ ಅಂತರರಾಷ್ಟ್ರೀಯ ನೃತ್ಯಪಟು-ಗುರು ವಿದ್ವಾನ್ ಕೋಲಾರ ರಮೇಶ್, ದೇಶ-ವಿದೇಶಗಳ ಪ್ರತಿಷ್ಟಿತ ವೇದಿಕೆಗಳಲ್ಲಿ, ಅಸಂಖ್ಯಾತ ನೃತ್ಯಪ್ರದರ್ಶನಗಳನ್ನು ಮತ್ತು ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸಮ್ಮುಖ ಶಿಷ್ಯರ ನೃತ್ಯಪ್ರದರ್ಶನ ಪ್ರಸ್ತುತಪಡಿಸಿ ಪ್ರಶಂಸೆ ಪಡೆದವರು ಎಂಬುದು ವಿಶೇಷ ಸಂಗತಿ. ಹೊಸಕೋಟೆಯಲ್ಲಿ ನೃತ್ಯಶಾಲೆಯನ್ನು ಯಶಸ್ವಿಯಾಗಿ ಮುನ್ನಡೆಸುತ್ತಿರುವ ರಮೇಶ ಅವರ ಸಮರ್ಥ ಮಾರ್ಗದರ್ಶನದಲ್ಲಿ ತಯಾರಾದ ನೃತ್ಯಕುಸುಮಗಳು ಅಸಂಖ್ಯಾತ ಮತ್ತು ನೃತ್ಯನೈಪುಣ್ಯ ಪಡೆದು ರಂಗಪ್ರವೇಶ ಮಾಡಿದ ಪ್ರತಿಭೆಗಳು ಅನೇಕಾನೇಕ. ಇದು ಇವರ ನೇತೃತ್ವದ ‘ಶ್ರೀ ನವಚೇತನ ನೃತ್ಯಕಲಾ ಅಕಾಡೆಮಿ’ಯ 48 ನೇ ರಂಗಪ್ರವೇಶವಾಗಿದೆ. ಇವರ ನುರಿತ ಗರಡಿಯಲ್ಲಿ ರೂಹುತಳೆದ ನೃತ್ಯಶಿಲ್ಪ ಕು. ಖುಷಿ ದೇವರಾಜ್ ಶ್ರೀಮತಿ ಸುಜಾತ ಮತ್ತು ದೇವರಾಜ್ ಅವರ ಪುತ್ರಿಯಾಗಿದ್ದು, ಈಗಾಗಲೇ ದೆಹಲಿಯೂ ಸೇರಿದಂತೆ ನಾಡಿನಾದ್ಯಂತ ನೃತ್ಯಪ್ರದರ್ಶನಗಳನ್ನು ನೀಡಿದ್ದಾರೆ. ಈ ಭರವಸೆಯ ಪ್ರತಿಭೆ- ತನ್ನ ನೃತ್ಯದ ವಿವಿಧ ಆಯಾಮಗಳನ್ನು ಪ್ರದರ್ಶಿಸಲು ಆಗಸ್ಟ್ 23 ಶುಕ್ರವಾರ ಮಧ್ಯಾಹ್ನ 2-00 ಗಂಟೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ ವಿಧ್ಯುಕ್ತವಾಗಿ ತನ್ನ ‘ರಂಗಪ್ರವೇಶ’ ನೆರವೇರಿಸಿಕೊಳ್ಳಲಿದ್ದಾರೆ. ಈಕೆಯ ನೃತ್ಯ ಕಲಾಸೊಬಗನ್ನು…
ಮಂಗಳೂರು : ಯಕ್ಷಗಾನ ಕಲಾವಿದ ಕೌಶಿಕ್ ಕರ್ಕೆರ ಇವರ ತಂಡದ ಯಕ್ಷಗಾನ ಪ್ರದರ್ಶನವು 14 ಆಗಸ್ಟ್ 2024ರಂದು ಕುತ್ತರ್ ಪದವು ಶ್ರೀ ರಾಜ ರಾಜೇಶ್ವರಿ ದೇವಸ್ಥಾನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ ಕ್ಷೇತ್ರದ ಆಡಳಿತ ಮಂಡಳಿಯ ಅಧ್ಯಕ್ಷ ಶ್ರೀ ರಾಜೇಶ್ ಅತ್ತಾವರ್ ಮಾತನಾಡಿ “ಯಕ್ಷಗಾನವು ಆರ್ಥಿಕ ಬೆಂಬಲದಿಂದ ಬೆಳಗುವ ರಾಜಕಲೆ. ಅದಕ್ಕೆ ಬೆಂಬಲ ಹಾಗೂ ಪ್ರೋತ್ಸಾಹ ಸದಾ ದೊರೆತ ಕಾರಣದಿಂದ ಅದು ಇಂದು ವಿಶ್ವಮಾನ್ಯ ಕಲೆಯಾಗಿ ಮೆರೆಯುತ್ತಿದೆ. ಎಲ್ಲಾ ದೇವಾಲಯಗಳೂ ಇದಕ್ಕೆ ಸಹಕರಿಸಬೇಕು. ಅಂತೆಯೇ ಸರಕಾರವೂ ತಕ್ಕ ಪ್ರೋತ್ಸಾಹ ನೀಡುತ್ತಾ ಬರುತ್ತಿರುವುದು ಶ್ಲಾಘನೀಯ. ನಮ್ಮ ರಾಜರಾಜೇಶ್ವರಿ ಅಮ್ಮನವರ ಸನ್ನಿಧಿಯಲ್ಲೂ ಅದು ಬೆಳಗುತ್ತಿದೆ. ಧಾರ್ಮಿಕ ಕಲೆಗಳಿಗೆ ಧಾರ್ಮಿಕ ನೆಲೆಗಟ್ಟು ದೊರೆಯಲಿ.” ಎಂದು ಶುಭಹಾರೈಸಿದರು. ವೇ. ಮೂ. ರಾಘವೇಂದ್ರ ಹೊಳ್ಳರು ಮಾತನಾಡಿ “ಲಲಿತ ಕಲೆಗಳ ಸಂವರ್ಧನೆಗಾಗಿ ಕಲೆ ಬೆಳೆಯಬೇಕು. ಅದರಲ್ಲೂ ನಮ್ಮ ಮಣ್ಣಿನ ಕಲೆ ಯಕ್ಷಗಾನಕ್ಕೆ ಸಂಘಟನೆಗಳು ಒತ್ತಾಸೆಯಾಗಿ ನಿಂತರೆ ಅವು ಚಿರಕಾಲ ಉಳಿಯಲು ಸಾಧ್ಯ.” ಎಂದು ಹೇಳಿದರು. ಕ್ಷೇತ್ರದ ಪದಾಧಿಕಾರಿಗಳಾದ ಜಗನ್ನಾಥ ಸಾಲಿಯಾನ್,…
ಹಾಲಾಡಿ : ಮೆಕ್ಕೆಕಟ್ಟು ಮೇಳದ ಆಯ್ದ ಕಲಾವಿದರು ಹಾಗೂ ಅತಿಥಿ ಕಲಾವಿದರಿಂದ ‘ಗಾಂವ್ಕರ್ ಯಕ್ಷ ಶ್ರಾವಣ ಸಂಜೆ’ ಕಾರ್ಯಕ್ರಮವನ್ನು ದಿನಾಂಕ 20 ಆಗಸ್ಟ್ 2024ರಂದು ರಾತ್ರಿ 9-00 ಗಂಟೆಗೆ ಮುದೂರಿ (ಹಾಲಾಡಿ) ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದ ಭಾಗವತ ನಾರಾಯಣಪ್ಪ ಉಪ್ಪುರು ವೇದಿಕೆಯಲ್ಲಿ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ‘ಪಾಪಣ್ಣ ವಿಜಯ ಗುಣ ಸುಂದರಿ’ ಎಂಬ ಪ್ರಸಂಗದ ಕಾಲಮಿತಿ ಯಕ್ಷಗಾನ ಪ್ರದರ್ಶನಗೊಳ್ಳಲಿದ್ದು, ಗೌರವ ಸನ್ಮಾನ ಮತ್ತು ಗೌರವ ಪುರಸ್ಕಾರಗಳು ನಡೆಯಲಿದೆ.
ಮಂಗಳೂರು : ಕರ್ನಾಟಕ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಇದರ ವತಿಯಿಂದ ಆಯೋಜಿಸಿದ್ದ ‘ಶ್ರಾವಣ ಸಂಭ್ರಮ’ದಲ್ಲಿ ಕವಿಗೋಷ್ಠಿ, ಸಾಧಕರಿಗೆ ಸನ್ಮಾನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ದಿನಾಂಕ 16 ಆಗಸ್ಟ್ 2024ರಂದು ಮಂಗಳೂರು ಪುರಭವನದಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶ್ರೀ ಭುವನೇಂದ್ರ ಕಾಲೇಜಿನ ಉಪನ್ಯಾಸಕಿ ಶ್ರೀಮತಿ ಸುಲೋಚನ ಪಚಿನಡ್ಕ “ಆಷಾಡದ ಬಿರುಸಿನ ಮಳೆಯ ಸಂಕಷ್ಟಗಳನ್ನು ಮನೆಯ ಒಳಗೆ ಅನುಭವಿಸಿ ಪರಿಸರದ ಬದುಕಿಗೆ ತೆರೆದುಕೊಳ್ಳುವ ಮೂಲಕ ಹಬ್ಬ ಹರಿದಿನಗಳಲ್ಲಿ ಸಂತೋಷ ಕಂಡುಕೊಳ್ಳುವುದಕ್ಕೇ ಶ್ರಾವಣ ಬಂದಿದೆ. ಹೆಂಗಸರೆಲ್ಲ ವರಮಹಾಲಕ್ಷ್ಮಿಯನ್ನು ಪೂಜಿಸಿ, ಮನೆ ಮತ್ತು ಮನಸಿನ ಸಂಕಟಗಳನ್ನು ಕಳೆಯಲು ಉಪವಾಸ ವೃತಗಳನ್ನು ಕೈಗೊಳ್ಳುವ ಈ ತಿಂಗಳ ದಿನಗಳು ಎಲ್ಲರ ಸಂಭ್ರಮದ ದಿನಗಳಾಗಿರುತ್ತವೆ. ಇಂತಹ ಕಾರ್ಯಕ್ರಮಗಳಿಗೆ ಪ್ರೇಕ್ಷಕರ ಸಂಖ್ಯೆ ಕಡಿಮೆಯಾದರೂ ಕಲೆ ಮತ್ತು ಸಾಹಿತ್ಯದ ಬಗ್ಗೆ ಆಸಕ್ತಿ ಇರುವವರ ಸಂಖ್ಯೆ ಕಡಿಮೆಯಾಗದು. ಯಾವುದೇ ಕಾರ್ಯಕ್ರಮವಾದರೂ ಅದನ್ನು ವಿಶಿಷ್ಟ ರೀತಿಯಲ್ಲಿ ಆಯೋಜನೆ ಮಾಡುವ ಕರ್ನಾಟಕ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನದ ಈ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ನನಗೆ…
ಮಂಗಳೂರು : ‘ಸುರ್ ಸೊಭಾಣ್’ ಮಕ್ಕಳ ಗಾಯನ ತರಬೇತಿಯ ಉದ್ಘಾಟನಾ ಸಮಾರಂಭವು 18 ಆಗಸ್ಟ್ 2024ರಂದು ಮಂಗಳೂರಿನ ಶಕ್ತಿನಗರದಲ್ಲಿರುವ ಕಲಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ‘ಸೋದ್ 4’ ಗಾಯನ ಸ್ಪರ್ಧೆಯ ವಿಜೇತೆ ಜ್ಯಾಕ್ಲಿನ್ ಫೆರ್ನಾಂಡಿಸ್ ಯು. ಎಸ್ ಮಾತನಾಡಿ “‘ಮಾಂಡ್ ಸೊಭಾಣ್’ ಪ್ರತಿಭೆಗಳಿಗೆ ಪ್ರೋತ್ಸಾಹ ಹಾಗೂ ವೇದಿಕೆ ನೀಡುತ್ತದೆ. ನಾನು ಕೂಡಾ ಗಾಯನ ಕ್ಷೇತ್ರದಲ್ಲಿ ಏನಾದರೂ ಹೆಸರು ಮಾಡಿದ್ದರೆ ಅದರಲ್ಲಿ ಈ ಸಂಸ್ಥೆಯ ತರಬೇತಿಯ ಕೊಡುಗೆ ಬಹಳಷ್ಟಿದೆ. ನಾವು ದಿನಂಪ್ರತಿ ಕಲಿಯಬೇಕು. ಲಭ್ಯ ಅವಕಾಶಗಳನ್ನು ಬಳಸಿಕೊಳ್ಳಬೇಕು. ಇಲ್ಲಿಂದ ಚೆನ್ನಾಗಿ ಕಲಿತು ಹೋದರೆ, ಗೆದ್ದು ಬಂದರೆ ಇಡೀ ಪ್ರಪಂಚ ನಿಮ್ಮನ್ನು ಗಮನಿಸುತ್ತದೆ. ‘ಸುರ್ ಸೊಭಾಣ್’ ಕಲಿಕೆಯ ನಂತರ ಸಿಡಿ, ಸಿನೆಮಾ ಹಾಗೂ ವೇದಿಕೆಗಳಲ್ಲಿ ಅವಕಾಶ ದೊರೆಯುವಾಗ ಈ ಅಭ್ಯಾಸದ ಮಹತ್ವ ನಿಮ್ಮರಿವಿಗೆ ಬರುತ್ತದೆ.” ಎಂದರು. ವಿದ್ಯಾರ್ಥಿಗಳಾದ ಎಲ್ಡನ್ ಪಿರೇರಾ, ಲೆನ್ವಿನ್ ಪಿರೇರಾ, ಪ್ರೇರಣ್ ಕ್ರಾಸ್ತಾ, ಸಿಮೊನಾ ಸಲ್ಡಾನ್ಹಾ, ಸಂಜನಾ ಮತಾಯಸ್, ಆನ್ವಿಯಾ ಲೋಬೊ ಹಾಗೂ ಆಲ್ವಿನಾ ಮೊಂತೇರೊ ಈ ಏಳು ಮಕ್ಕಳಿಗೆ ಸಪ್ತ…
ಮಂಗಳೂರು : ಆಕೃತಿ ಆಶಯ ಪಬ್ಲಿಕೇಷನ್ಸ್ ಹಾಗೂ ಕನ್ನಡ ವಿಭಾಗ ಸಂತ ಆಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯ ಮಂಗಳೂರು ಇದರ ವತಿಯಿಂದ ಮತ್ತು ಕನ್ನಡ ಸಂಘ ಮತ್ತು ಸ್ಕೂಲ್ ಆಫ್ ಲ್ಯಾಂಗ್ವೇಜಸ್ ಮತ್ತು ಕಲ್ಚರಲ್ ಸ್ಟಡೀಸ್ ಇದರ ಸಹಕಾರದೊಂದಿಗೆ ಸುಲೋಚನಾ ಪಚ್ಚಿನಡ್ಕ ಇವರ ನಾಲ್ಕು ಕೃತಿಗಳ ಲೋಕಾರ್ಪಣೆ ಸಮಾರಂಭವು ದಿನಾಂಕ 24 ಆಗಸ್ಟ್ 2024ರಂದು ಅಪರಾಹ್ನ 3-00 ಗಂಟೆಗೆ ಸಂತ ಆಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಸಹೋದಯ ಸಭಾಂಗಣದಲ್ಲಿ ನಡೆಯಲಿದೆ. ತುಳು-ಕನ್ನಡ ವಿದ್ವಾಂಸರು ಮತ್ತು ವಿಶ್ರಾಂತ ಕುಲಪತಿಗಳಾದ ಡಾ. ಕೆ. ಚಿನ್ನಪ್ಪ ಗೌಡ ಇವರು ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು ಕೃತಿಗಳನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕರಾದ ಡಾ. ನಾಗಪ್ಪ ಗೌಡ ಆರ್. ಮತ್ತು ಮೂಡುಬಿದಿರೆ ಆಳ್ವಾಸ್ ಪದವಿ ಕಾಲೇಜಿನ ಪ್ರಾಧ್ಯಾಪಕರಾದ ಡಾ. ಯೋಗೀಶ್ ಕೈರೋಡಿ ಇವರುಗಳು ಕೃತಿ ಪರಿಚಯ ಮಾಡಲಿದ್ದಾರೆ.
ಬೆಂಗಳೂರು : ನವಕರ್ನಾಟಕ ಪ್ರಕಾಶನ ಸಂಸ್ಥೆಯ ಮೂಲಕ ಅಕ್ಷರ ಕ್ರಾಂತಿಯನ್ನು ಮಾಡಿದ ಆರ್.ಎಸ್. ರಾಜಾರಾಮ್ 17 ಆಗಸ್ಟ್ 2024ರಂದು ಬೆಂಗಳೂರಿನಲ್ಲಿ ನಿಧನರಾದರು . ನವಕರ್ನಾಟಕ ಪ್ರಕಾಶನ ಈವರೆಗೂ ಸುಮಾರು 6000 ಕನ್ನಡದ ವಿಶಿಷ್ಟ ಕೃತಿಗಳನ್ನು ನೀಡಿದೆ. ಈ ಬೃಹತ್ ಸಾಧನೆಯ ಹಿಂದೆ ಸುಮಾರು ಐದು ದಶಕಗಳಿಗೂ ಹೆಚ್ಚಿನ ಕಾಲದ ಪ್ರೇರಣಾತ್ಮಕ ಶ್ರಮ ವಹಿಸಿದವರು ಆರ್. ಎಸ್. ರಾಜಾರಾಮ್. ‘ಪುಸ್ತಕಗಳ ಮೂಲಕ ಮನುಕುಲದ ಸೇವೆ’ ಎಂಬ ನವಕರ್ನಾಟಕದ ಘೋಷವಾಕ್ಯದ ಮೂಲಕ ಕನ್ನಡಿಗರಿಗೆ ಉತ್ತಮ ಪುಸ್ತಕಗಳು ದೊರಕುವಂತೆ ಮಾಡಿದ್ದರು. ನವಕರ್ನಾಟಕ ಸಂಸ್ಥೆಯನ್ನು ಸ್ವತಂತ್ರ ಪ್ರಕಾಶನ ಸಂಸ್ಥೆಯಾಗಿ ಬೆಳೆಸಲೇಬೇಕೆಂಬ ಆಕಾಂಕ್ಷೆಯಿಂದ ರಾಜಾರಾಮ್ ರೂಪಿಸಿದ ‘ವಿಶ್ವ ಕಥಾಕೋಶ’ 87 ದೇಶಗಳ 317 ಕಥೆಗಳ ಸಂಗ್ರಹ. ಅವುಗಳನ್ನು ಅನುವಾದ ಮಾಡಲು ಲೇಖಕರ ಪಡೆಯೇ ಮೂಡಿತು. ಅನೇಕ ರಾಯಭಾರ ಕಛೇರಿಗಳಿಗೆ ಪತ್ರ ಬರೆದು ಒಪ್ಪಿಗೆ ಪಡೆದರು. ನಿರಂಜನ ಅವರನ್ನು ಸಂಪಾದಕರಾಗಲು ಒಪ್ಪಿಸಿದರು. ಇದು ಕನ್ನಡ ಸಾರಸ್ವತ ಲೋಕದಲ್ಲಿ ಮೈಲುಗಲ್ಲಾಗಿದೆ. ‘ನೆಮ್ಮದಿಯ ನಾಳೆ ನಮ್ಮದು’ ಎಂದು ಅವರ ನೀಡಿದ ಘೋಷವಾಕ್ಯ ಅಕ್ಷರ…
ಅಗ್ರಾಳ ಪುರಂದರ ರೈಯವರ ಪುತ್ರನಾಗಿ ಅವರ ಒಡನಾಡಿಯಾಗಿದ್ದ ಸಾಹಿತ್ಯಲೋಕದ ದಿಗ್ಗಜ ಶಿವರಾಮ ಕಾರಂತರು ಸೂಚಿಸಿದ ‘ವಿವೇಕ’ ಎಂಬ ನಾಮಧೇಯವನ್ನು ಪಡೆದ, ಡಾ. ಬಿ.ಎ. ವಿವೇಕ ರೈಯವರು ಮಂಗಳೂರು ವಿಶ್ವವಿದ್ಯಾಲಯದ ಕನ್ನಡ ವಿಭಾಗವನ್ನು ಮುನ್ನಡೆಸಿ, ಹಂಪಿ ವಿಶ್ವವಿದ್ಯಾಲಯದ ಉಪಕುಲಪತಿಗಳಾಗಿ ಮುಕ್ತವಿಶ್ವವಿದ್ಯಾಲಯದಲ್ಲೂ ಸೇವೆ ಸಲ್ಲಿಸಿದ್ದು ಮಾತ್ರವಲ್ಲ ವಿದೇಶದ ವಿದ್ಯಾಸಂಸ್ಥೆಗಳಲ್ಲೂ ಬೋಧಕರಾಗಿ ತಮ್ಮ ಛಾಪನ್ನು ಊರಿ ಕನ್ನಡದ ಬೋಧನೆಗೆ ವಿಶೇಷ ಗೌರವವನ್ನು ಹುಟ್ಟುಹಾಕಿ ಪ್ರಸ್ತುತ ನಿವೃತ್ತರಾಗಿದ್ದಾರೆ. ಈ ಸುದೀರ್ಘ ಮತ್ತು ಸಾರ್ಥಕ ಪಯಣದಲ್ಲಿ ಒಡನಾಡಿದ ವ್ಯಕ್ತಿಗಳು, ಮರೆಯಲಾಗದ, ಮರೆಯಬಾರದ ಸಾಂಸ್ಕೃತಿಕ ಮಹತ್ವದ ಸಂಗತಿಗಳು, ನೆನಪಿನ ಸಂಸ್ಕೃತಿಯ ಬರಹಗಳ ಸಂಪುಟವಾಗಿ ‘ಬದುಕು ಕಟ್ಟಿದ ಬಗೆಗಳು’ ಎಂಬ ಅರ್ಥಪೂರ್ಣ ಶೀರ್ಷಿಕೆಯೊಂದಿಗೆ ಇತ್ತೀಚೆಗೆ ಲೋಕಾರ್ಪಣೆಗೊಂಡಿದೆ. ಈ ಸಂಪುಟದ ಬರಹಗಳನ್ನೋದುತ್ತಿದ್ದಂತೆ ಒಂದು ಕಾಲಘಟ್ಟದ ವಿಶೇಷವಾಗಿ ದ.ಕ. ಜಿಲ್ಲೆಯ ಸಾಂಸ್ಕೃತಿಕ ಚರಿತ್ರೆಯ ಅನೇಕ ಪುಟಗಳು ನಮ್ಮ ಕಣ್ಣ ಮುಂದೆ ತೆರೆದುಕೊಳ್ಳುತ್ತವೆ. ವಿಸ್ಮೃತಿಗೆ ಸಂದುಹೋಗುವ ಸಾಧಕರ ಬದುಕಿನ ಹೆಜ್ಜೆಗಳನ್ನು ಮತ್ತು ಬದುಕನ್ನು ಸುಂದರವಾಗಿಸಿದ ಅವರ ಕೊಡುಗೆಗಳನ್ನು ಹೀಗೆ ದಾಖಲಿಸುವುದು ಕಾಲದ ಅಗತ್ಯವೂ ಹೌದು. ಈ…