Author: roovari

ಮಂಗಳೂರು : ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ಣಾಟಕ ಇದರ ಮಹಾಸಭೆಯು ದಿನಾಂಕ 17 ಆಗಸ್ಟ್ 2025ರಂದು ಮೂಡಬಿದರೆ ಸಮಾಜ ಮಂದಿರದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಆಮಂತ್ರಣ ಪರಿವಾರದ ಜಿಲ್ಲಾಧ್ಯಕ್ಷರಾದ ನಿರೀಕ್ಷಿತಾ ಮಂಗಳೂರು ಇವರು ವಹಿಸಿದ್ದರು. ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ಮಾತಾನಾಡಿ ಒಂದು ವರ್ಷದ ಕಾರ್ಯಕ್ರಮ ಪ್ರಗತಿ ಮತ್ತು ಎಲ್ಲಾ ಪದಾಧಿಕಾರಿಗಳ ಸರ್ವ ರೀತಿಯ ಸಹಕಾರವನ್ನು ನೆನೆದು ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಪದಾಧಿಕಾರಿಗಳ ನೂತನ ಸಮಿತಿ ರಚಿಸುವ ಬಗ್ಗೆ ಮಾತಾನಾಡಿ ಅಭಿಪ್ರಾಯ ಪಡೆಯಲಾಯಿತು. ಜಿಲ್ಲಾಧ್ಯಕ್ಷರಾದ ನಿರೀಕ್ಷಿತಾ ಮಂಗಳೂರು ಮುಂದಿನ ಬದಲಾವಣೆ ಕುರಿತು ಒಪ್ಪಿಗೆ ಸೂಚಿಸಿ ಈವರೆಗೆ ಎಲ್ಲರೂ ತಮ್ಮ ಮನೆಯವರಂತೆ ಪ್ರೀತಿಯ ಸಹಕಾರವನ್ನು ಸ್ಮರಿಸಿ ಮುಂದೆಯ ಉತ್ತಮ ಸಹಕಾರ ನೀಡುವುದಾಗಿ ತಿಳಿಸಿದರು. ದಕ್ಷಿಣ ಕನ್ನಡ ಜಿಲ್ಲೆ ಅಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕ ಇದರ ನೂತನ ಅಧ್ಯಕ್ಷರಾಗಿ ಅನುಭವಿ ಸಾಹಿತಿಗಳು ಮತ್ತು ಸಂಪನ್ಮೂಲ ವ್ಯಕ್ತಿಗಳಾಗಿರುವ ವಿಂಧ್ಯಾ ಎಸ್. ರೈ ಕಡೇಶಿವಾಲಯ ಮತ್ತು ನೂತನ ಉಪಾಧ್ಯಕ್ಷರಾಗಿ ಉಪನ್ಯಾಸಕಿ ಹಾಗೂ…

Read More

ತೀರ್ಥಹಳ್ಳಿ : ನಟಮಿತ್ರರು ಹವ್ಯಾಸಿ ಕಲಾ ತಂಡದ ಆಶ್ರಯದಲ್ಲಿ ನಟಮಿತ್ರರು ತಂಡದ ಹಿರಿಯ ಕಿರಿಯ ಕಲಾವಿದರ ಸಮ್ಮಿಲನದಲ್ಲಿ ತೀರ್ಥಹಳ್ಳಿಯ ಶ್ರೀ ಶಾಂತವೇರಿ ಗೋಪಾಲಗೌಡ ರಂಗಮಂದಿರದಲ್ಲಿ ದಿನಾಂಕ 24 ಮತ್ತು 25 ಆಗಸ್ಟ್ 2025ರಂದು ಸಂಜೆ 6-30 ಗಂಟೆಗೆ ‘ಆ ಊರು ಈ ಊರು’ ಎನ್ನುವ ವಿಭಿನ್ನ ಶೈಲಿಯ ಕನ್ನಡ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ನಟಮಿತ್ರರು ತಂಡದ ಅಧ್ಯಕ್ಷ ಸಂದೇಶ್ ಜವಳಿಯವರು ತಿಳಿಸಿದ್ದಾರೆ. ದಿನಾಂಕ 20 ಆಗಸ್ಟ್ 2025ರಂದು ಗೋಪಾಲಗೌಡ ರಂಗ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಈ ನಾಟಕದ ಪೋಸ್ಟರ್ ಗಳನ್ನು ಸಹ ಕಲಾವಿದರುಗಳ ಜೊತೆಗೂಡಿ ಬಿಡುಗಡೆಗೊಳಿಸಿ ಮಾತನಾಡಿದ ಸಂದೇಶ್ ಜವಳಿ “ಈ ನಾಟಕದ ರಚನೆಯನ್ನು ಡಾ. ಜಿ.ಬಿ. ಜೋಷಿ (ಜಡಭರತ)ಯವರು ಮಾಡಿದ್ದು, ನಾಡಿನ ಖ್ಯಾತ ರಂಗಕರ್ಮಿಗಳಲ್ಲಿ ಒಬ್ಬರಾಗಿರುವ ಹುಲಗಪ್ಪ ಕಟ್ಟೀಮನಿಯವರು ವಿನ್ಯಾಸ ಮತ್ತು ನಿರ್ದೇಶನ ಮಾಡಲಿದ್ದಾರೆ. ಶಿವಕುಮಾರ್ ಟಿ‌.ಆರ್. ಇವರ ಸಹ ನಿರ್ದೇಶನ, ಅರವಿಂದ ಟಿ.ಆರ್. ಇವರ ರಂಗ ಸಜ್ಜಿಕೆ, ಗುರುರಾಜ್ ಪಿ.ವಿ. ಇವರ ಪ್ರಸಾಧನ ಮತ್ತು ಹರಿವಿನಾಯಕ ಇವರ ಸಂಗೀತ…

Read More

ಬಂಟ್ವಾಳ : ಇಂಟಾಕ್ ಮಂಗಳೂರು ಅಧ್ಯಾಯ, ಎಚ್.ಇ.ಸಿ.ಎಸ್. ಇಂಟಾಕ್ ಮತ್ತು ಇಂಟಾಕ್ ಹೆರಿಟೇಜ್ ಕ್ಲಬ್, ಸರಕಾರಿ ಪ್ರೌಢಶಾಲೆ, ಮಂಚಿ ಇವರ ಸಹಯೋಗದಲ್ಲಿ ಶಂಕರ ಕೊರಗ ಗುತ್ತಕಾಡು ಮತ್ತು ಸುಪ್ರಿಯಾ ಇವರಿಂದ ಶಾಲಾ ಮಕ್ಕಳಿಗಾಗಿ ಒಂದು ದಿನದ “ಸಾಂಪ್ರದಾಯಿಕ ಬುಟ್ಟಿ ತಯಾರಿಕಾ ಕಾರ್ಯಾಗಾರ”ವನ್ನು ದಿನಾಂಕ 23 ಆಗಸ್ಟ್ 2025ರಂದು ಬೆಳಿಗ್ಗೆ 09-30ರಿಂದ ಸಂಜೆ 4-00ರವರೆಗೆ ಬಂಟ್ವಾಳ ತಾಲೂಕು ಮಂಚಿ ಕೊಳ್ಳಾಡು ಸರಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ರೇಶ್ಮಾ ಶೆಟ್ಟಿ – 78992 31166 ಮತ್ತು ತಾರಾನಾಥ ಕೈರಂಗಳ – 98448 20979 ಸಂಖ್ಯೆಯನ್ನು ಸಂಪರ್ಕಿಸಿರಿ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರಾದ ಶಂಕರವರು ಕಿನ್ನಿಗೋಳಿ ಸಮೀಪದ ಗುತ್ತಕಾಡು ಎಂಬ ಊರಿನಲ್ಲಿ, ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದಿರುವ ಕೊರಗ ಸಮುದಾಯದವರಾಗಿದ್ದು, ಸುಮಾರು 20 ವರುಷಗಳ ಹಿಂದೆ ಕಿನ್ನಿಗೋಳಿ ಪರಿಸರದಲ್ಲಿನ ಕೊರಗ ಮಹಿಳಾ ವಿವಿಧೋದ್ದೇಶ ಸಹಕಾರಿ ಸೊಸೈಟಿಯಲ್ಲಿ ಬುಟ್ಟಿ ತಯಾರಿಕೆಯಲ್ಲಿ ತರಬೇತುದಾರರಾಗಿ ಹಾಗೂ ವ್ಯಾಪಾರಿಯಾಗಿ ಕೆಲಸ ಮಾಡಿದ ಅನುಭವವನ್ನು ಹೊಂದಿರುತ್ತಾರೆ. ಸಿಬ್ಲ, ಹೂವಿನ ಬುಟ್ಟಿ, ಹೂದಾನಿ ಹಾಗೂ…

Read More

ನೃತ್ಯ ಕಲಾವಿದ/ ಕಲಾವಿದೆಯಾಗಿ ಕಲಾಮಾತೆಯ ಸೇವಾ ಕೈಂಕರ್ಯದಲ್ಲಿ ನಿರಂತರವಾಗಿ ಮುಂದುವರೆದು, ನಟರಾಜನ ದಯೆಗೆ ಪಾತ್ರರಾಗಿ, ಕಲಾ ರಸಿಕರ ಮನದಲ್ಲಿ ಸದಾ ನೆಲೆಗೊಂಡು ಅತ್ಯುತ್ತಮ ಸ್ಥಾನ ಗಳಿಸಿಕೊಳ್ಳುವುದು ಒಂದು ದೊಡ್ಡ ಸಾಧನೆ. ಈ ಸಾಧನೆಗೆ ಪರಿಪಕ್ವ ಮನಸ್ಸು ಮತ್ತು ಶಾಂತಚಿತ್ತದಿಂದ ಎಲ್ಲವನ್ನೂ ಒಂದೇ ರೀತಿಯಲ್ಲಿ ಒಪ್ಪಿಕೊಳ್ಳುವ – ಅಪ್ಪಿಕೊಳ್ಳುವ ಗುಣವು ಬೇಕೇ ಬೇಕು. ಧನಾತ್ಮಕ ಮತ್ತು ಮುಖ್ಯವಾಗಿ ಋಣಾತ್ಮಕ ಅಂಶಗಳನ್ನೂ ಪಡೆದುಕೊಂಡು, ಅದನ್ನು ಮನದಲ್ಲಿ ಅಳೆದು ತೂಗಿ, ತಪ್ಪುಗಳಿದ್ದರೆ ತಿದ್ದಿಕೊಂಡು ಮುಂದಿನ ದಿನಗಳಲ್ಲಿ ಹೊಸ ಬದಲಾವಣೆಯನ್ನು ಸೃಷ್ಟಿಸಿ ಎಲ್ಲರಿಂದ ಸೈ ಅನ್ನಿಸಿಕೊಳ್ಳಲು ಬಹಳ ಕಾಲ ಹಿಡಿಯುತ್ತದೆ. ಈ ಮಧ್ಯೆ ಅದೆಷ್ಟೋ ಅಡಚಣೆಗಳು, ಕಠೋರ ಮಾತುಗಳು, ಮೂಕ ರೋದನೆ ಮತ್ತು ಕೆಲವೊಮ್ಮೆ ಪ್ರತಿಭಟನೆ ಹೀಗೆ ಹಲವಾರು ಆಪತ್ತನ್ನು ಎದುರಿಸುತ್ತಾ, ಒಳ್ಳೆಯದನ್ನು ಸ್ವೀಕರಿಸಿ, ಖುಷಿ ಪಟ್ಟುಕೊಳ್ಳುತ್ತಾ ಸಾಗುತ್ತದೆ ಕಲಾ ಬದುಕು. ನಾವು ಮಾಡುವ ಕೆಲಸಗಳು ಎಲ್ಲರನ್ನೂ ತಲುಪುವುದಿಲ್ಲ, ತಲುಪಿದರೂ ಸಹಜವಾದ ಬದಲಾವಣೆಯನ್ನು ಅವರವರ ದೃಷ್ಟಿಕೋನದಲ್ಲಿ ಉಂಟುಮಾಡಿ ನಮ್ಮನ್ನು ಕ್ರಿಯಾತ್ಮವಾಗಿ ಬೆಳೆಸುತ್ತದೆ. ಇಂತಹ ಕ್ರಿಯಾತ್ಮಕ ಕಲಾವಿದ/ಕಲಾವಿದೆಯರು ನಮ್ಮ…

Read More

ಮಂಗಳೂರು : ಅಮೃತ ಪ್ರಕಾಶ ಪತ್ರಿಕೆ ಮಂಗಳೂರು ಹಾಗೂ ಸಂತ ಫಾನ್ಸಿಸ್ ಹಿರಿಯ ಪ್ರಾಥಮಿಕ ಶಾಲೆ ಬಿಜೈ ಇವರ ಜಂಟಿ ಆಶ್ರಯದಲ್ಲಿ 113ನೇ ‘ಸಾಹಿತ್ಯ ಅಭಿರುಚಿ ಕಾರ್ಯಕ್ರಮ’ವನ್ನು ದಿನಾಂಕ 23 ಆಗಸ್ಟ್ 2025ರಂದು ಪೂರ್ವಾಹ್ನ 10-30 ಗಂಟೆಗೆ ಮಂಗಳೂರಿನ ಬಿಜೈ ಸಂತ ಫಾನ್ಸಿಸ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಬಿಜೈ ಸಂತ ಫಾನ್ಸಿಸ್ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ನಿರ್ಮಲ ಸಿಲ್ವಿಯ ಡಿ’ಸೋಜ ಇವರು ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ನಿವೃತ್ತ ಶಿಕ್ಷಕಿ ಶ್ರೀಮತಿ ಗೀತಾ ಬಿ. ರೈ, ಹಿರಿಯ ಬರಹಗಾರರಾದ ಎನ್. ಸುಬ್ರಾಯ ಭಟ್ ಮತ್ತು ವಿಜಯ ಕರ್ಣಾಟಕದ ಚೀಫ್ ಕಾಪಿ ಎಡಿಟರ್ ಆರ್.ಸಿ. ಭಟ್ ಇವರುಗಳು ಮುಖ್ಯ ಸಂಪನ್ಮೂಲ ಅತಿಥಿಗಳಾಗಿ ಭಾಗವಹಿಸಲಿರುವರು.

Read More

ಉಡುಪಿ : ಅಮೇರಿಕದ ಇಮೇಜ್ ಕಾಲಿಂಗ್ ಸೊಸೈಟಿ ಇಂಟರ್ನ್ಯಾಷನಲ್ ಇದರ ವತಿಯಿಂದ ಗೌರವ ಫೆಲೋಶಿಪ್ ಪ್ರಶಸ್ತಿಗೆ ಪಾತ್ರರಾದ ಹಿರಿಯ ಛಾಯಾಚಿತ್ರ ಪತ್ರಕರ್ತ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಮಾಧ್ಯಮ ಪ್ರತಿನಿಧಿ ಆಸ್ಟ್ರೋ ಮೋಹನ್ ಇವರನ್ನು ದಿನಾಂಕ 20 ಆಗಸ್ಟ್ 2025ರಂದು ಅದಿತಿ ಗ್ಯಾಲರಿಯಲ್ಲಿ ಕ.ಸಾ.ಪ. ಉಡುಪಿ ತಾಲೂಕು ಘಟಕದ ವತಿಯಿಂದ ಗೌರವಿಸಿ ಅಭಿನಂದಿಸಲಾಯಿತು. ಪೂರ್ಣಪ್ರಜ್ಞ ಕಾಲೇಜಿನ ವಿಶ್ರಾಂತ ಪ್ರಾಂಶುಪಾಲ ಪ್ರೊ. ಸದಾಶಿವ ರಾವ್ ಸನ್ಮಾನ ನೆರೆವೇರಿಸಿ ಮಾತನಾಡಿ “ಆಸ್ಟ್ರೋ ಮೋಹನ್ ರವರು ಕಳೆದ ಹಲವಾರು ವರ್ಷಗಳಿಂದ ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಶಸ್ತಿಯನ್ನು ಗಳಿಸಿ ನಮ್ಮ ಉಡುಪಿ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಇದು ನಾವೆಲ್ಲರೂ ಹೆಮ್ಮೆಪಡುವ ವಿಚಾರ” ಎಂದರು. ಕೆ.ಎಂ.ಸಿ. ಮಣಿಪಾಲದ ಮೂಳೆ ರೋಗ ತಜ್ಞ ಡಾ. ಕಿರಣ ಆಚಾರ್ಯ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕ.ಸಾ.ಪ. ಉಡುಪಿ ತಾಲೂಕು ಘಟಕದ ಅಧ್ಯಕ್ಷ ರವಿರಾಜ ಎಚ್.ಪಿ., ಕ.ಸಾ.ಪ. ಉಡುಪಿ ಜಿಲ್ಲಾ ಮಹಿಳಾ ಪ್ರತಿನಿಧಿ ಪೂರ್ಣಿಮಾ ಜನಾರ್ದನ್, ಗೌರವ…

Read More

ಉಡುಪಿ : ದ್ಯುತಿ ಪರ್ವ ಯಕ್ಷ ಟ್ರಸ್ಟ್ ಕುಂದಾಪುರ ಹಾಗೂ ನಮ್ಮ ಕಲಾಕೇಂದ್ರ ಕೋಟೇಶ್ವರ ಇವರ ಜಂಟಿ ಆಶ್ರಯದಲ್ಲಿ ಶ್ರೀ ಹಟ್ಟಿಯಂಗಡಿ ಮೇಳದ ತಿರುಗಾಟದ ದಶಮಾನೋತ್ಸವದ ಅಂಗವಾಗಿ ಕೋಟೇಶ್ವರದ ಶ್ರೀ ಕೋಟಿಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ದಿನಾಂಕ 16 ಆಗಸ್ಟ್ 2025ರಂದು ‘ಧ್ವಜಪುರ ಯಕ್ಷೋತ್ಸವ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ “ಯಕ್ಷಗಾನವನ್ನು ನಾವು ಕೂತು ಚೆನ್ನಾಗಿ ಆಸ್ವಾದಿಸಬಹುದು, ಬೇಕಾಬಿಟ್ಟಿ ಟೀಕೆ ಕೂಡಾ ಮಾಡಬಹುದು. ಆದರೆ ಮೇಳಗಳನ್ನು ನಡೆಸುವುದು ಅಷ್ಟು ಸುಲಭದ ಕೆಲಸವಲ್ಲ. ಇದೊಂದು ಸವಾಲಿನ ಕೆಲಸ. ಈ ನಿಟ್ಟಿನಲ್ಲಿ ಶ್ರೀ ಹಟ್ಟಿಯಂಗಡಿ ಮೇಳ ತಿರುಗಾಟದ ದಶಮಾನೋತ್ಸವ ಆಚರಿಸುತ್ತಿರುವುದು ಮಹಾನ್ ಸಾಧನೆ. ಕಲೆ ಉಳಿಯಬೇಕಾದರೆ ಪ್ರೇಕ್ಷಕರು ಬೇಕು. ಪ್ರೇಕ್ಷಕರು ಯಕ್ಷಗಾನಕ್ಕೆ ಬರಬೇಕಾದರೆ ಅಂತಹ ಗುಣಮಟ್ಟದ ಕಾರ್ಯಕ್ರಮಗಳು, ಕಲಾವಿದರು ಇರಬೇಕು. ಹಾಸನ, ಮಂಡ್ಯ ಮೊದಲಾದ ಭಾಗದ ಮೂಡಲಪಾಯ ಯಕ್ಷಗಾನದ ಪರಿಸ್ಥಿತಿಯನ್ನು ನೋಡಿದಾಗ ನಮ್ಮ ಪಡುವಲಪಾಯ ಯಕ್ಷಗಾನ ಎಷ್ಟೋ ಮುಂದಿದೆ. ಅಂದರೆ ಇಲ್ಲಿ…

Read More

ಬೆಂಗಳೂರು : ಡಾ. ವಿರೂಪಾಕ್ಷ ದೇವರಮನೆ ಇವರು ರಚಿಸಿರುವ ಸಾವಣ್ಣ ಪ್ರಕಾಶನದ ‘ಓ ಮನಸೇ ತುಸು ನಿಧಾನಿಸು’ ಎಂಬ ಕೃತಿ ದಿನಾಂಕ 24 ಆಗಸ್ಟ್ 2025ರಂದು ಬೆಳಗ್ಗೆ 10-00 ಗಂಟೆಗೆ ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್ ಇದರ ಬಿ.ಪಿ. ವಾಡಿಯಾ ಸಭಾಂಗಣದಲ್ಲಿ ಲೋಕಾರ್ಪಣೆಗೊಳ್ಳಲಿದೆ.

Read More

ಉಡುಪಿ : ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ (ಮಾಹೆ), ಕನಕದಾಸ ಅಧ್ಯಯನ ಸಂಶೋಧನ ಪೀಠ ಉಡುಪಿ ಹಾಗೂ ಕುಂದಾಪುರದ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಇವುಗಳ ಸಂಯುಕ್ತ ಆಶ್ರಯದಲ್ಲಿ ‘ವಿಸ್ತರಣಾ ಉಪನ್ಯಾಸ ಮಾಲಿಕೆ 2025’ ಕಾರ್ಯಕ್ರಮವು ದಿನಾಂಕ 25 ಆಗಸ್ಟ್ 2025 ಶನಿವಾರದಂದು ಮಧ್ಯಾಹ್ನ ಗಂಟೆ 2-45ಕ್ಕೆ ಕುಂದಾಪುರದ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿದೆ. ಕುಂದಾಪುರದ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ‘ಕನಕದಾಸರು – ವರ್ತಮಾನದ ಮುಖಾಮುಖಿ’ ಎಂಬ ವಿಷಯದ ಬಗ್ಗೆ ಕೋಟೇಶ್ವರ ಸರಕಾರಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕರಾದ ಡಾ. ಸುಧಾಕರ ದೇವಾಡಿಗ ಬಿ. ಇವರು ಉಪನ್ಯಾಸ ನೀಡಲಿದ್ದಾರೆ.

Read More

ಶಿವಮೊಗ್ಗ : ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು ಜಿಲ್ಲಾ ಸಮಿತಿ ಶಿವಮೊಗ್ಗ, ಸಹ್ಯಾದ್ರಿ ಕಲಾ ಕಾಲೇಜು ಶಿವಮೊಗ್ಗ ಇವರ ಸಹಯೋಗದಲ್ಲಿ ವಿಶ್ವ ಜಾನಪದ ದಿನಾಚರಣೆ ಅಂಗವಾಗಿ ‘ಜಾನಪದ ಕಲೆಗಳ ಕಲಾ ಪ್ರದರ್ಶನ’ವನ್ನು ದಿನಾಂಕ 22 ಆಗಸ್ಟ್ 2025ರಂದು ಬೆಳಿಗ್ಗೆ 10-30 ಗಂಟೆಗೆ ಶಿವಮೊಗ್ಗದ ಸಹ್ಯಾದ್ರಿ ಕಲಾ ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಕನ್ನಡ ಸಾಹಿತ್ಯ ಪರಿಷತ್ತು ಇದರ ಅಧ್ಯಕ್ಷರಾದ ಡಿ. ಮಂಜುನಾಥ ಇವರು ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಸಹ್ಯಾದ್ರಿ ಕಲಾ ಕಾಲೇಜಿನ ಪ್ರಿನ್ಸಿಪಾಲರಾದ ಪ್ರೊ. ಎಸ್. ಸಿರಾಜ್ ಅಹಮದ್ ಇವರು ಉದ್ಘಾಟನೆ ಮಾಡಲಿದ್ದಾರೆ. ಖ್ಯಾತ ಜನಪದ ವಿದ್ವಾಂಸರಾದ ಡಾ. ಅಪ್ಪಗೆರೆ ತಿಮ್ಮರಾಜು ಇವರು ಕಲಾ ಪ್ರದರ್ಶನಕ್ಕೆ ಚಾಲನೆ ನೀಡಲಿದ್ದಾರೆ.

Read More